Connect with us

ರಾಜಕೀಯ

ಕೋವಿಡ್ ಸಂದರ್ಭದಲ್ಲಿ ಸತ್ತ ಹೆಣಗಳ ಲೆಕ್ಕದಲ್ಲೂ ಲಂಚ ಪಡೆದು ದಾಖಲೆ ಮಾಡಿದವರು ಬೊಮ್ಮಾಯಿ: ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಕೊರೋನಾ ಸಾವಿನಲ್ಲೂ ಮಾನವೀಯತೆ ಮರೆತು ಲೂಟಿ ಮಾಡಿದ ಬಸವರಾಜ ಬೊಮ್ಮಾಯಿ ಅವರ ಮಗ ಗೆಲ್ಲಬೇಕಾ? ಎಂದು ಮತದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಪ್ರಶ್ನಿಸಿದರು.

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಹಾವನೂರು ಗ್ರಾಮದಲ್ಲಿ ಸೋಮವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಂದರೆ ಭ್ರಷ್ಟಾಚಾರ ಜನತಾ ಪಾರ್ಟಿ. ಕೋವಿಡ್ ವೇಳೆ ಹೆಣಗಳಿಂದಲೂ ಹಣ ಲೂಟಿ ಮಾಡಿದ್ದಾರೆ. ಕರ್ನಾಟಕ ಇತಿಹಾಸದಲ್ಲಿ ಇದೆ ಮೊದಲು. ಹೆಣಗಳ ಮೇಲೆ ಹಣ ಮಾಡಿರುವ ಸಿಎಂ ಇದ್ದರೆ ಅದು ಬಸವರಾಜ ಬೊಮ್ಮಾಯಿ ಎಂದು ವಾಗ್ದಾಳಿ ನಡೆಸಿದರು.

ಹೆಣಗಳ ಮೇಲೂ ಹಣ ಮಾಡಿದವರ ಮಗ ಗೆಲ್ಲಬೇಕಾ? ಕೊರೋನಾ ಸಂದರ್ಭದಲ್ಲಿ ಸತ್ತ ಹೆಣಗಳ ಲೆಕ್ಕದಲ್ಲೂ ಲಂಚ ಪಡೆದು ದಾಖಲೆ ಮಾಡಿದವರು ಬೊಮ್ಮಾಯಿ. ಸತ್ತ ಹೆಣಗಳ‌ ಲೆಕ್ಕದಲ್ಲೂ ಲಂಚ ಪಡೆದ ಏಕೈಕ ಸರ್ಕಾರ ಬೊಮ್ಮಾಯಿ ಅವರದ್ದಾಗಿತ್ತು. ಕೋವಿಡ್ ಸಂದರ್ಭದಲ್ಲೂ, ಸಂಕಷ್ಟದಲ್ಲಿ ನರಳುವಾಗಲೂ ಲಂಚ ಪಡೆದವರ ಪುತ್ರನನ್ನು ಸೋಲಿಸಿ ಎಂದು ಹೇಳಿದರು.

ಬೊಮ್ಮಾಯಿ ಪುತ್ರ ಗೆಲ್ಲಬೇಕಾ? ಯಾಸಿರ್ ಪಠಾಣ್ ಗೆಲ್ಲಬೇಕಾ? ನೀವೇ ನಿರ್ಧಾರ ಮಾಡಿ. 160 ಭರವಸೆಗಳ ಪೈಕಿ 158 ಭರವಸೆ ಈಡೇರಿಸಿದ್ದೇವೆ. 5 ಗ್ಯಾರಂಟಿ ಯೋಜನೆಗಳನ್ನು ಸಹ ಜಾರಿ ಮಾಡಿದ್ದೇವೆ. ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನ ಮಂತ್ರಿಗಳು ಹೇಳಿದ್ದರು. ಗ್ಯಾರಂಟಿ ಜಾರಿಯಾದರೆ ರಾಜ್ಯ ದಿವಾಳಿ ಆಗುತ್ತೆ ಎಂದು ಹೇಳಿದ್ದರು. ಅಧಿಕಾರ ವಹಿಸಿಕೊಂಡ ಕೂಡಲೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ.

ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಮೊಮ್ಮಗ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ವಿರುದ್ಧ ಸಾಮಾನ್ಯ ಕುಟುಂಬದ ಪಠಾಣ್ ಅವರನ್ನು ಗೆಲ್ಲಿಸಿ ಎಂದರು. ಅಜ್ಜಂಪೀರ್ ಖಾದ್ರಿ ನನಗೆ ತುಂಬಾ ಬೇಕಾದವರು. ನನಗಾಗಿ ಖಾದ್ರಿ ಶಾಸಕ ಸ್ಥಾನ ತ್ಯಜಿಸಲು ಸಿದ್ದರಾಗಿದ್ದರು. ನಾನು ಸೋತು, ಖಾದ್ರಿ ಗೆದ್ದಿದ್ದಾಗ ಸ್ವತಃ ಖಾದ್ರಿಯವರೇ ಬಂದು ಅವರು ಶಾಸಕ ಸ್ಥಾನವನ್ನು ನನಗಾಗಿ ಬಿಟ್ಟು ಕೊಡಲು ಸಿದ್ದರಾಗಿದ್ದರು. ನಮ್ಮಿಬ್ಬರ ನಡುವೆ ಅಷ್ಟು ಆತ್ಮೀಯತೆ. ಹೀಗಾಗಿ ನಮ್ಮ ಮಾತಿಗೆ ಬೆಲೆ ನೀಡಿ ನಾಮಪತ್ರ ವಾಪಾಸ್ ಪಡೆದು ಪಠಾಣ್ ಅವರನ್ನು ಗೆಲ್ಲಿಸಲು ಟೊಂಕ ಕಟ್ಟಿ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ರೈತರ ಸಾಲ ಮನ್ನಾ ಮಾಡಿ ಎಂದರೆ, ರೈತರ ಸಾಲ ಮನ್ನಾ ಮಾಡಲು ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇಲ್ಲ ಎಂದು ಯಡಿಯೂರಪ್ಪ ಹೇಳಿದ್ದರು‌. ಹೋಗಲಿ ಬಸವರಾಜ ಬೊಮ್ಮಾಯಿ ಅವರೂ ಮುಖ್ಯಮಂತ್ರಿಯಾಗಿ ರೈತರ ಸಾಲ ಮನ್ನಾ ಮಾಡಲಿಲ್ಲ. ಇವರು ಯಾವ ಮುಖ ಇಟ್ಟುಕೊಂಡು ರೈತರ ಮತ ಕೇಳುತ್ತಿದ್ದಾರೆಂದು ಹೇಳಿದರು.

ವಕ್ಫ್ ಆಸ್ತಿ ಈಗ ಆಗಿರೋದಾ? ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ನೋಟಿಸ್ ಕೊಟ್ಟಿದಾರೆ. ಸದಾನಂದಗೌಡ, ಶೆಟ್ಟರ್, ಬೊಮ್ಮಾಯಿ ಇದ್ದಾಗಲೂ ನೋಟಿಸ್ ಕೊಟ್ಟಿದ್ದಾರೆ. ಉಪ ಚುನಾವಣೆಗೋಸ್ಕರ ರಾಜಕೀಯ ಮಾಡುತ್ತಿದ್ದಾರೆ. ಯಾವ‌ ಕಾರಣಕ್ಕೂ ಕೂಡಾ ರೈತರನ್ನು ಒಕ್ಕಲೆಬ್ಬಿಸಲ್ಲ. ವಕ್ಫ್ ಬೋರ್ಡ್​ನವರು ಯಾವ ಕಾರಣಕ್ಕೂ ಖಾಲಿ ಮಾಡಿಸಂಗಿಲ್ಲ. ಕಂದಾಯ ದಾಖಲೆಗಳಲ್ಲಿ ವಕ್ಫ್ ಅಂತ ಇದ್ದರೂ ರದ್ದು ಮಾಡಲು ಹೇಳಿದಿನಿ. ಆದರೂ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ ಎಂದು ದೂರಿದರು.

ನನ್ನ ಮೇಲೆ ಸುಳ್ಳು ಆರೋಪ ಮಾಡಿ ಕಳಂಕ‌ ತರುವ ಕೆಲಸ ಮಾಡ್ತಿದ್ದಾರಲ್ವಾ? ಈ‌ ಬಿಜೆಪಿಯವರನ್ನು ನಂಬುತ್ತೀರಾ? ಸಿದ್ದರಾಮಯ್ಯನನ್ನು ಕಂಡರೆ ಅವರಿಗೆ ಹೊಟ್ಟೆ ಉರಿ, ನನ್ನ ಜೀವನ ತೆರೆದಿಟ್ಟ ಪುಸ್ತಕ. ಪಠಾಣ್ ಅವರನ್ನು ಗೆಲ್ಲಿಸಿದರೆ ಬಿಜೆಪಿಯವರಿಗೆ ಉತ್ತರ ಕೊಟ್ಟ ಹಾಗೆ ಆಗುತ್ತೆ. ಪಠಾಣ್​ ಗೆದ್ದರೆ ನಾನು ಗೆದ್ದಂತೆ. ಶಿಗ್ಗಾಂವಿ, ಸವಣೂರು ಏತ ನೀರಾವರಿ ಯೋಜನೆಗಳಿಗೆ ಮತ್ತು ಬಾಡ ಕನಕ‌ ಅರಮನೆಗೆ ಅನುದಾನ ಬಿಡುಗಡೆ ಮಾಡಿದ್ದೇ ನಾನು ಎಂದು ಸಿಎಂ ತಿಳಿಸಿದರು.

Continue Reading
Click to comment

Leave a Reply

Your email address will not be published. Required fields are marked *

ಅಪರಾಧ

Breaking News ಚಾಲಕ ಆತ್ಮಹತ್ಯೆ – ಡೆತ್ ನೋಟ್‌ನಲ್ಲಿ ಸಂಸದ ಡಾ. ಸುಧಾಕರ್ ಹೆಸರು ಉಲ್ಲೇಖ!

ಚಿಕ್ಕಬಳ್ಳಾಪುರ, ಆಗಸ್ಟ್ 7 – ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದೈನಂದಿನ ಶಾಂತಿಯನ್ನು ಬೆಚ್ಚಿಬೀಳಿಸುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ 33 ವರ್ಷದ ಗುತ್ತಿಗೆ ಚಾಲಕ ಬಾಬು ಎಂ. ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೋಕಾಂತರವಾಗಿದೆ.

ಡೆತ್ ನೋಟ್‌ನಲ್ಲಿ ಸಂಸದ ಡಾ. ಕೆ. ಸುಧಾಕರ್ ಹೆಸರು:
8 ವರ್ಷಗಳಿಂದ ಲೆಕ್ಕಪರಿಶೋಧನೆ ವಿಭಾಗದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಬಾಬು, ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಹಾಗೂ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ವಿರುದ್ಧ ಗಂಭೀರ ಆರೋಪಗಳನ್ನು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಆತ್ಮಹತ್ಯೆಗೆ ಕಾರಣವೆನಿಸಿದ ಹಣಕಾಸು ವಂಚನೆ:
ಬಾಬು ಅವರು ಡೆತ್ ನೋಟ್‌ನಲ್ಲಿ, ಸರ್ಕಾರಿ ಕೆಲಸ ಕೊಡಿಸುತ್ತೇವೆಂದು ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಬಾಬು, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿಯ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು:
ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ತಕ್ಷಣವೇ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ FIR ದಾಖಲಾತಿ ನಡೆಯುವ ಸಾಧ್ಯತೆ ಇದ್ದು, ತನಿಖೆ ಮುಂದುವರಿದಿದೆ.

Continue Reading

ಬೆಂಗಳೂರು

ಬೆಂಗಳೂರಿನಲ್ಲಿ ವಸತಿ ಯೋಜನೆಗಳ ಅವ್ಯವಸ್ಥೆ: ಹೊಸ ಯೋಜನೆಗಳ ಬಗ್ಗೆ ಶಾಸಕ ಎಸ್.ಟಿ. ಸೋಮಶೇಖರ್ ಅಸಮಾಧಾನ

ಬೆಂಗಳೂರು, ಆಗಸ್ಟ್ 7 – ನಗರದಲ್ಲಿ ಈಗಿನ ವಸತಿ ಯೋಜನೆಗಳು ಪೂರ್ಣವಾಗಿಲ್ಲದಿರುವಾಗ ಹೊಸ ಭೂಸ್ವಾಧೀನ ಅಧಿಸೂಚನೆಗಳನ್ನು ನೀಡುವುದು ಅರ್ಥವಿಲ್ಲ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಕಿಡಿಕಾರಿದರು.

ಯಶವಂತಪುರ ಕ್ಷೇತ್ರದ ಚುಂಚನಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಬ್ಬರಾಯನಪಾಳ್ಯ ಎ ಹಾಗೂ ಬಿ ಗ್ರಾಮಗಳಲ್ಲಿ ಹೊಸ ಅಂಗನವಾಡಿ ಕಟ್ಟಡ ಮತ್ತು ಕಿರಿಯ ಪ್ರಾಥಮಿಕ ಶಾಲೆಯ ಲೋಕಾರ್ಪಣೆ ವೇಳೆ ಅವರು ಮಾತನಾಡಿದರು.

ಅವರು ಅಭಿಪ್ರಾಯಪಟ್ಟ ಪ್ರಮುಖ ವಿಷಯಗಳು:

  • ಬೆಂಗಳೂರಿನ ಜನಸಂಖ್ಯೆ ಈಗಾಗಲೇ 1.5 ಕೋಟಿಗೂ ಮೀರುತ್ತಿದೆ.
  • ವಸತಿ ಸಮುಚ್ಛಯಗಳಲ್ಲಿ ಇನ್ನೂ ಅನೇಕ ಅಭಿವೃದ್ಧಿ ಕೆಲಸಗಳು ಬಾಕಿಯಿವೆ.
  • ಕುಡಿಯುವ ನೀರಿನ ಕೊರತೆ, ಒಳಚರಂಡಿ ಸಮಸ್ಯೆ, ರಾಜಕಾಲುವೆಗಳ ಉಕ್ಕಿಹರಿವು ನಗರದ ಮುಖ್ಯ ಸಮಸ್ಯೆಗಳಾಗಿವೆ.
  • ಕೆಲ ಕಟ್ಟಡಗಳು ಕಳಪೆ ಗುಣಮಟ್ಟದಿಂದ ನಿರ್ಮಾಣವಾಗಿದ್ದು, ಸೋರಿಕೆ ಸಮಸ್ಯೆ ಜನರನ್ನು ಕಾಡುತ್ತಿದೆ.
  • “ಕಟ್ಟಡ ಕುಸಿದು ಅನಾಹುತವಾದರೆ ಹೊಣೆ ಯಾರು?” ಎಂದು ಅವರು ಪ್ರಶ್ನಿಸಿದರು.

ಬೇರೆ ಪ್ರಮುಖ ಅಂಶಗಳು:
ನಗರದ ವಾಹನ ಸಂಚಾರ ದಟ್ಟಣೆ, ನಿಯಂತ್ರಣ ತಪ್ಪಿದ ನಗರ ವಿಸ್ತರಣೆ, ಮೂಲಸೌಕರ್ಯದ ಕೊರತೆ ಇವುಗಳಿಂದ ನಾಗರಿಕರು ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬೆಂಗಳೂರಿನಿಂದ ಹೊರಗೆ ಹೊಸ ವಸತಿ ಯೋಜನೆಗಳನ್ನು ರೂಪಿಸಿ ಮೂಲಸೌಕರ್ಯ ಒದಗಿಸಿದರೆ ಜನಸಂದಣಿ ನಿಯಂತ್ರಣ ಸಾಧ್ಯವೆಂದು ಶಾಸಕ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಹಾಜರಿದ್ದವರು:
ಪಂಚಾಯತ್ ಅಧ್ಯಕ್ಷೆ ಹೇಮಾ ನಾರಾಯಣ್, ಸದಸ್ಯರು ಸದಾನಂದ.ಡಿ, ಎನ್.ಕುಮಾರ್, ರೇವಣಸಿದ್ದಯ್ಯ, ಅಶ್ವತ್, ವೆಂಕಟಾಚಲ, ಸುನಿಲ್, ಪುಟ್ಟಮಲ್ಲು, ತಾತಪ್ಪ, ಶಿವಣ್ಣ, ಹನುಮಂತ ಹಾಗೂ ಗ್ರಾಮಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading

ಬಿಬಿಎಂಪಿ

ಜಿಬಿಎ ಚುನಾವಣೆ ಪೂರ್ವಸಿದ್ಧತೆ: ನವೆಂಬರ್ 1ರೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ – ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದ ಪೂರ್ವಸಿದ್ಧತೆಗಳನ್ನು ನವೆಂಬರ್ 1ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಚುನಾವಣೆಗಾಗಿ ಮತದಾರರ ನೋಂದಣಿ ನಿಯಮಗಳನ್ನು ಹೇಗೆ ರೂಪಿಸಬೇಕು ಎಂಬ ಕುರಿತು ಚುನಾವಣಾ ಆಯೋಗದ ಅಭಿಪ್ರಾಯವನ್ನು ಕೇಳಲಾಗುವುದು,” ಎಂದು ಸ್ಪಷ್ಟಪಡಿಸಿದರು.

ಚುನಾವಣೆ ಹಕ್ಕು ಕಾಪಾಡುವ ಕುರಿತು ಮಾರ್ಗದರ್ಶನ:
ಪಕ್ಷದ ಕಾರ್ಯಕರ್ತರು ಮತ್ತು ಬ್ಲಾಕ್ ಅಧ್ಯಕ್ಷರಿಗೆ, ತಮ್ಮ ಮತದಾನದ ಹಕ್ಕನ್ನು ಕಾಪಾಡಿಕೊಳ್ಳುವ ಕುರಿತು ಮಾರ್ಗದರ್ಶನ ನೀಡಲಾಗಿದೆ. “ಶಾಸಕರನ್ನು ಹಾಗೂ ಬ್ಲಾಕ್ ಲೆವಲ್ ನಾಯಕರನ್ನು ಮತ್ತೊಮ್ಮೆ ಸಭೆಗೆ ಕರೆದು ಸಿದ್ಧತೆ ಕುರಿತ ಚರ್ಚೆ ನಡೆಯಲಿದೆ,” ಎಂದರು.

ಇಂಡಿಯಾ ಒಕ್ಕೂಟ ಮತ್ತು ಪ್ರತಿಭಟನೆ ಕುರಿತು ಸ್ಪಷ್ಟನೆ:
ಮುಖ್ಯಮಂತ್ರಿಗಳಿಗೆ ಇಂಡಿಯಾ ಒಕ್ಕೂಟದ ಸಭೆಗೆ ಆಹ್ವಾನ ಇದೆ. ನಾನು ಇಲ್ಲಿ ಪ್ರತಿಭಟನಾ ಸಭೆಗಾಗಿ ಸಿದ್ಧತೆಗಳನ್ನು ನೋಡಿಕೊಳ್ಳುತ್ತಿದ್ದೇನೆ,” ಎಂದು ಡಿಸಿಎಂ ಹೇಳಿದರು. “ಸ್ವಾತಂತ್ರ ಉದ್ಯಾನದಲ್ಲಿ ಮತಚೂರಿ ವಿರುದ್ಧsymbolic ಪ್ರತಿಭಟನೆ ನಡೆಯಲಿದ್ದು, ಇದು ನ್ಯಾಯಾಲಯದ ಆದೇಶದಂತೆ ಹಮ್ಮಿಕೊಳ್ಳಲಾಗಿದೆ,” ಎಂದು ಹೇಳಿದರು.

ರಾಜ್ಯಮಟ್ಟದ ಪ್ರತಿಭಟನೆ:
ಪ್ರತಿಯೊಬ್ಬ ಜಿಲ್ಲೆಯಿಂದ ಕನಿಷ್ಠ 50 ನಾಯಕರು, ಕಾರ್ಯಕರ್ತರು, ಪರಾಜಿತ ಅಭ್ಯರ್ಥಿಗಳು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಲಾಗಿದೆ. “ಬೆಂಗಳೂರು ಮಾತ್ರವಲ್ಲ, ಇಡೀ ಕರ್ನಾಟಕದಿಂದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ,” ಎಂದು ಅವರು ಹೇಳಿದ್ದಾರೆ.

Continue Reading

Trending