ಬೆಂಗಳೂರು
ಸುಳ್ಳು ಹೇಳಬೇಡಿ… ಬಹಿರಂಗ ಚರ್ಚೆಗೆ ಬನ್ನಿ, ಆರ್ ಅಶೋಕ್ ಗೆ ರಾಮಲಿಂಗರೆಡ್ಡಿ ಸವಾಲ್!

ಬೆಂಗಳೂರು: ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ನಷ್ಟವಾಗಿದೆ, ಹೀಗಾಗಿ ಟಿಕೆಟ್ ದರ ಹೆಚ್ಚಳಕ್ಕೆ ಸಾರಿಗೆ ಇಳಾಖೆ ಮುಂದಾಗಿದೆ ಎಂದು ಸುಳ್ಳು ಆರೋಪ ಮಾಡಬೇಡಿ, ಇಂದೇ ಸ್ಧಳ ಮತ್ತು ಸಮಯ ನಿಗದಿ ಮಾಡಿ ನಾನು ಬಹಿರಂಗ ಚರ್ಚೆಗೆ ಸಿದ್ಧ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ವಿಪಕ್ಷ ನಾಯಕ ಆರ್ ಅಶೋಕ್ ಸವಾಲ್ ಹಾಕಿದ್ದಾರೆ,
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಅವರ ಬರೆದುಕೊಂಡಿದ್ದು, ಸುಳ್ಳು ಹೇಳುವುದು ಜನರ ದಾರಿ ತಪ್ಪಿಸುವುದು ತಮಗೆ ಮತ್ತು ತಮ್ಮ ಪಕ್ಷಕ್ಕೆ ಸಿದ್ದಿಸಿರುವ ಕಲೆಯಾಗಿದೆ, ನಮಗೆ ಅದರ ಅವಶ್ಯಕತೆಯಿಲ್ಲ ಬಹಿರಂಗ ಚರ್ಚೆಗೆ ಬನ್ನಿ, ಅಂಕಿಅಂಶಗಳೇ ನಮ್ಮ ಅಭಿವೃದ್ಧಿಗೆ ಹಾಗೂ ಸಾಧನೆಗೆ ಮಾನದಂಡ ಎಂಬುದನ್ನು ಹತ್ತು ಹಲವು ಬಾರಿ ನಾನು ತಿಳಿಸಿದ್ದೇನೆ ಎಂದು ಟಾಂಗ್ ನೀಡಿದ್ದಾರೆ,
ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಧೆಗಳ ಆದಾಯದಲ್ಲಿ ಗಣನೀಯ ವೃದ್ಧಿಯಾದರೂ ಸಾರಿಗೆ ಸಂಸ್ಧೆಗಳಿಗೆ ಶಕ್ತಿ ತುಂಬಲು ಸಾಧ್ಯವಾಗಿಲ್ಲದಿರುವುದು ತಮ್ಮ ಸರ್ಕಾರದ ಕೊಡುಗೆ ಶಕ್ತಿ ಯೋಜನೆಯಿಂದ ದಿನನಿತ್ಯ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ 84 ಲಕ್ಷದಿಂದ 1.08 ಕೋಟಿಗೆ ಏರಿಕೆ ಆಗಿದೆ, ಆದಾಯದಲ್ಲಿ ಗಣನೀಯ ವೃದ್ಧಿ ಆಗಿದೆ ಎಂದು ರೆಡ್ಡಿ ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ,
ಶಕ್ತೀ ಯೋಜನೆಯಿಂದ ಸಾರಿಗೆ ನಿಗಮಗಳಿಗೆ 3,930 ಕೋಟಿ ರೂಪಾಯಿ ದಾಖಲೆ ಆದಾಯ ಬರುತ್ತದೆ ಎಂದು ಬೂಗಳ ಬಿಟ್ಟು, ತನ್ನ ಬೆನ್ನು ತಾನೇ ತಟ್ಟಿಕೊಂಡಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಕಳೆದ ತ್ರೈಮಾಸಿಕದಲ್ಲಿ 295 ಕೋಟಿ ರೂಪಾಯಿ ನಷ್ಟವಾಗಿದೆ ಎಂಬ ನೆಪವೊಡ್ಡಿದೆ, ಆ ಮೂಲಕ ಟಿಕೆಟ್ ದರವನ್ನು ಶೇ.25 ರಷ್ಟು ಹೆಚ್ಚಿಸಲು ಮುಂದಾಗಿದೆ ಎಂದು ಅಶೋಕ್ ಅವರು ಆರೋಪಿಸಿದ್ದರು..