Connect with us

ರಾಜಕೀಯ

ಬಿಜೆಪಿಯಿಂದ ಕಾಂಗ್ರೆಸ್​ನ 50 ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಆಫರ್: ಸಿಎಂ ಸಿದ್ದರಾಮಯ್ಯ

ಮೈಸೂರು: ಈವರೆಗೆ ಬಿಜೆಪಿ, ರಾಜ್ಯದಲ್ಲಿ ಸ್ವಂತ ಶಕ್ತಿಯಿಂದ ಒಂದು ಬಾರಿಯೂ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಮಾತ್ರ ಅವರು ಅಧಿಕಾರಕ್ಕೆ ಬಂದಿದ್ದಾರೆ. ಈ ಸಲವೂ ಕಾಂಗ್ರೆಸ್​​ನ 50 ಮಂದಿ ಶಾಸಕರಿಗೆ ತಲಾ 50 ಕೋಟಿ ರೂ ಆಫರ್ ನೀಡಿ ಖರೀದಿಸಲು ಯತ್ನಿಸಿದ್ದರು. ಆದರೆ ನಮ್ಮ ಶಾಸಕರು ಆಮಿಷಕ್ಕೆ ಒಳಗಾಗಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಬುಧವಾರ ಆಯೋಜಿಸಿದ್ದ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿನ 470 ಕೋಟಿ ರೂಪಾಯಿ ಮೌಲ್ಯದ ಕಾಮಗಾರಿಗಳ ಉದ್ಘಾಟನೆ ಮತ್ತು ಕಟ್ಟಡಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಫಲಾನುಭವಿಗಳಿಗೆ ನೇರವಾಗಿ ಸವಲತ್ತುಗಳನ್ನು ವಿತರಿಸಿ ಅವರು ಮಾತನಾಡಿದರು.

ಈ ಬಾರಿ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 50 ಕೋಟಿ ಹಣ ಆಫರ್ ಮಾಡಿತ್ತು. ಈ ಹಣ ಎಲ್ಲಿಂದ ಬರುತ್ತೆ? ಯಡಿಯೂರಪ್ಪ, ಬೊಮ್ಮಾಯಿ, ಅಶೋಕ್ ಹಣ ಪ್ರಿಂಟ್ ಹಾಕಿದ್ದಾರಾ? ರಾಜ್ಯವನ್ನು ಲೂಟಿ ಹೊಡೆದ ಹಣ ತಾನೇ ಎಂದು ಸಿಎಂ ಪ್ರಶ್ನಿಸಿದರು.

ಸಿಬಿಐ, ಇ.ಡಿ., ಐಟಿ ಹಾಗೂ ರಾಜ್ಯಪಾಲರನ್ನು ದುರುಪಯೋಗಪಡಿಸಿಕೊಂಡು ಆಟ ಆಡ್ತೀರಾ? ಅರವಿಂದ್ ಕೇಜ್ರಿವಾಲ್ ಆಯ್ತು. ಈಗ ನನ್ನ ಮತ್ತು ನನ್ನ ಪತ್ನಿಯನ್ನು ಟಾರ್ಗೆಟ್ ಮಾಡಿದ್ದಾರೆ. ನಾನು ನಿನ್ನೆ ಮೊನ್ನೆ ಮಂತ್ರಿಯಾದವನಲ್ಲ. 40 ವರ್ಷದಿಂದ ಮಂತ್ರಿಯಾಗಿದ್ದೀನಿ. ಸುಳ್ಳು ಕೇಸಲ್ಲಿ ನನ್ನನ್ನು, ನನ್ನ ಧರ್ಮಪತ್ನಿಯನ್ನು ಎಳೀತೀರಾ? ರಾಜ್ಯದ ಜನರೇನು ಮೂರ್ಖರಾ?. ರಾಜ್ಯದ ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನಾನು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಷಡ್ಯಂತ್ರಗಳಿಗೆ ಜಗ್ಗಲ್ಲ, ಬಗ್ಗಲ್ಲ. ನೀವೂ ಕೂಡ ಸುಖಾಸುಮ್ಮನೆ ತಂಟೆಗೆ ಬಂದರೆ ಸುಮ್ಮನಿರಲ್ಲ ಎನ್ನುವ ಎಚ್ಚರಿಕೆ ಕೊಡಬೇಕಿದೆ ಎಂದು ಜನರಿಗೆ ಕರೆ ನೀಡಿದರು.

ರಾಜ್ಯದಲ್ಲಿ ನಮ್ಮ ಐದೂ ಗ್ಯಾರಂಟಿಗಳು ಯಶಸ್ವಿಯಾಗಿ ಜಾರಿಯಾದ ಬಳಿಕ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಭಯಾನಕ ಸುಳ್ಳುಗಳನ್ನು ಹೊಸೆಯುತ್ತಿದ್ದಾರೆ. ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಹಸಿ ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂಪಾಯಿ ಕೊಟ್ಟರೆ, ಅಭಿವೃದ್ಧಿ ಕಾರ್ಯಗಳಿಗೆ 1 ಲಕ್ಷದ 20 ಸಾವಿರ ಕೋಟಿ ರೂಪಾಯಿ ನೀಡಿದೆ. ಈಗ ನರಸೀಪುರದಲ್ಲಿ 470 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ದೊರೆತಿದೆ. ಬಿಜೆಪಿಯ ಸುಳ್ಳುಗಳಿಗೆ ಇವತ್ತಿನ ಅಭಿವೃದ್ಧಿ ಕಾರ್ಯಕ್ರಮ ಕನ್ನಡಿ ಹಿಡಿದಿದೆ ಎಂದರು.

ಬಿಜೆಪಿಯವರು ಗ್ಯಾರಂಟಿಯ ಹಣ ತೆಗೆದುಕೊಳ್ತಿಲ್ವಾ?, ಬಿಜೆಪಿಯವರು ಉಚಿತವಾಗಿ ಬಸ್ಸಿನಲ್ಲಿ ಓಡಾಡುತ್ತಿಲ್ವಾ?, ಉಚಿತ ವಿದ್ಯುತ್ ಪಡೆಯುತ್ತಿಲ್ವಾ?, ಗೃಹಲಕ್ಷ್ಮಿ ಹಣ ಪಡೆಯುತ್ತಿಲ್ವಾ?, ನಾವು ತೆಗೆದುಕೊಳ್ತಿಲ್ಲ ಅಂತ ಬಿಜೆಪಿಯವರು ಎದೆ ಮುಟ್ಟಿಕೊಂಡು ಹೇಳಲಿ ನೋಡೋಣ ಎಂದು ಸವಾಲೆಸೆದ ಸಿಎಂ, ರಾಜ್ಯ ಸರ್ಕಾರದ ಗ್ಯಾರಂಟಿ ಫಲಾನುಭವಿಗಳನ್ನು ಅವಮಾನಿಸಿ, ಅಪಪ್ರಚಾರ ಮಾಡುವುದನ್ನು ನಿಲ್ಲಿಸದಿದ್ದರೆ ಜನರು ನಿಮಗೆ ಸರಿಯಾದ ಪಾಠ ಕಲಿಸ್ತಾರೆ ಎಂದು ಎಚ್ಚರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ, ಸಂಸದ ಸುನಿಲ್ ಬೋಸ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ, ಡಾ.ತಿಮ್ಮಯ್ಯ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಹಲವು ಪ್ರಮುಖರು ಉಪಸ್ಥಿತರಿದ್ದರು.

ದೇಶ

ಸಿಎಂ ಕುರ್ಚಿ ಉಳಿಸಿಕೊಳ್ಳಲು ಶಾಸಕರ ವಿದೇಶ ಪ್ರವಾಸ? ವಿಜಯೇಂದ್ರ ಗಂಭೀರ ಆರೋಪ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರ ಬಂದ ಬಳಿಕ ಅನುದಾನ ಬೇಡಿಕೆ ಇಟ್ಟಿದ್ದರೂ ಗಂಗಕಲ್ಯಾಣ ಯೋಜನೆ, ಮನೆ ನಿರ್ಮಾಣ ಸೇರಿದಂತೆ ಹಲವು ಕಾರ್ಯಗಳು ನಡೆಯದೆ ಜನರಲ್ಲಿ ಅಸಮಾಧಾನ ಮೂಡಿದೆ ಎಂದು ಆರೋಪಿಸಿದರು. ಶಾಸಕರು ತಮ್ಮ ಖರ್ಚಿನಲ್ಲಿ ವಿದೇಶಕ್ಕೆ ಹೋಗುತ್ತಿದ್ದಾರೆ ಎಂಬ ಸಿಎಂ ಹೇಳಿಕೆಯನ್ನು ಪ್ರಶ್ನಿಸಿ, “ತಮ್ಮ ಕುರ್ಚಿ ಉಳಿಸಿಕೊಳ್ಳಲು ತಾವೇ ಅವರನ್ನು ಕಳಿಸುತ್ತಿದ್ದಾರೆ” ಎಂದು ಟೀಕಿಸಿದರು.

ರೆಸಾರ್ಟ್ ರಾಜಕೀಯದ ಮೇಲೆ ಲೇವಡಿ

ಕಾಂಗ್ರೆಸ್ ಶಾಸಕರು ರೆಸಾರ್ಟ್ ಬುಕ್ ಮಾಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, “ಅವರಿಗೆ ಅನುಕೂಲವಾಗಲಿ ಎಂದು ಬಿಜೆಪಿಯಿಂದ ಬಡಿಗೆ ರೆಡಿ ಮಾಡಿಸಿದ್ದೇವೆ” ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಅಂತರದ ರಾಜಕೀಯ ನಡೆಯುತ್ತಿದೆ ಎಂದು ಹೇಳಿದರು.

₹5,000 ಕೋಟಿ ಎಲ್ಲಿಗೆ ಹೋಯ್ತು?

ಗೃಹ ಲಕ್ಷ್ಮೀ ಯೋಜನೆಯ ₹5,000 ಕೋಟಿ ಹಣದ ಬಗ್ಗೆ ಸ್ಪಷ್ಟ ಉತ್ತರ ಸಿಗಲಿಲ್ಲ ಎಂದು ಆರೋಪಿಸಿದ ಅವರು, “ಹಣ ಉಪಯೋಗ ಆಯ್ತಾ? ದುರಪಯೋಗ ಆಯ್ತಾ? ಸಿಎಂ ಉತ್ತರ ಕೊಡಬೇಕು” ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರಕ್ಕೆ ನಕಲಿ ದಾಖಲೆ ನೀಡಿರುವ ವಿಚಾರದಲ್ಲೂ ಮುಂದಿನ ದಿನಗಳಲ್ಲಿ ವಿವರವಾದ ಸುದ್ದಿಗೋಷ್ಠಿ ನಡೆಸುವುದಾಗಿ ತಿಳಿಸಿದರು.

ಪ್ರಾದೇಶಿಕ ಅಸಮಾನತೆ ಹೆಚ್ಚಳ

ಪ್ರಾದೇಶಿಕ ಅಸಮಾನತೆ ನಿವಾರಣೆ ಸಮಿತಿ ವರದಿ ಉಲ್ಲೇಖಿಸಿ, ರಾಜ್ಯದಲ್ಲಿ ಅಸಮಾನತೆ ಶೇಕಡಾ 60ರಿಂದ 72.08ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಹಿಂದುಳಿದಿದೆ ಎಂದು ಆರೋಪಿಸಿದರು.

ಕುರಿಗಾರರಿಗೆ ಪರಿಹಾರ ಬಾಕಿ

ಅನುಗ್ರಹ ಯೋಜನೆಯಡಿ 45 ಕೋಟಿ ರೂ. ಬಾಕಿ ಇಟ್ಟಿದ್ದು, 90 ಸಾವಿರ ಸಾವಿನ ಪೈಕಿ ಕೇವಲ 30 ಸಾವಿರ ಕುರಿಮರಿಗಳಿಗೆ ಮಾತ್ರ ಪರಿಹಾರ ನೀಡಲಾಗಿದೆ ಎಂದು ಆರೋಪಿಸಿದರು.

ಬಿಜೆಪಿ ಕಾರ್ಯಕಾರಿಣಿ ಸಭೆ

ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸರ್ಕಾರದ ವೈಫಲ್ಯಗಳು ಮತ್ತು ಮುಂದಿನ ಚುನಾವಣಾ ತಂತ್ರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.

Continue Reading

ದೇಶ

LATEST : “ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ತೀವ್ರಗೊಂಡಿರುವ ನಡುವೆಯೇ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ ಡಿಕೆಶಿ, ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ ಎಂದು ತಿಳಿಸಿದ್ದರೂ, ಅವರ ಹೇಳಿಕೆಗಳು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿವೆ.

“ನಾನು ದೆಹಲಿಗೆ ಬಂದಿರೋದೇ ರಾಜಕಾರಣ ಮಾಡಲು. ಏನೂ ಮಾತನಾಡದೆ ಸುಮ್ಮನೆ ಹೋಗಲು ಸಾಧ್ಯವೇ?” ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ರೂಪೇಶ್ ಬಘೇಲ್ ಜೊತೆಗೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿದ ಅವರು, ಅಸ್ಸಾಂ ಸೇರಿದಂತೆ ಇತರೆ ರಾಜ್ಯಗಳ ಚುನಾವಣಾ ಸ್ಥಿತಿಗತಿಗಳ ಕುರಿತು ಚರ್ಚೆ ನಡೆದಿದೆ ಎಂದರು. “ಎಲ್ಲಾ ವಿಚಾರಗಳನ್ನು ಮಾತನಾಡಲೇಬೇಕು. ಕಾಲವೇ ಎಲ್ಲಕ್ಕೂ ಉತ್ತರ ಕೊಡಲಿದೆ” ಎಂಬ ಅವರ ಮಾತುಗಳಿಗೆ ಹಲವು ಅರ್ಥಗಳು ನೀಡಲಾಗುತ್ತಿದೆ.

ಇದೇ ವೇಳೆ ಬಜೆಟ್ ಪೂರ್ವಸಿದ್ಧತಾ ಸಭೆಗೆ ಗೈರಾಗಿದ್ದ ಡಿಕೆಶಿ ದೆಹಲಿಗೆ ತೆರಳಿರುವುದು ಗಮನಾರ್ಹ. ಸಿಎಂ ಸಿದ್ದರಾಮಯ್ಯ ಅವರ ಅನುಮತಿ ಪಡೆದುಕೊಂಡೇ ಅವರು ತೆರಳಿದ್ದಾರೆ ಎನ್ನಲಾಗಿದ್ದರೂ, ದೆಹಲಿಯ ರಾಜಕೀಯ ಚಟುವಟಿಕೆಗಳು ಕುತೂಹಲ ಹುಟ್ಟಿಸಿವೆ. ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರಾ? ಎಂಬ ಪ್ರಶ್ನೆಗೆ ಅವರು ಸ್ಪಷ್ಟ ಉತ್ತರ ನೀಡಿಲ್ಲ.

ರಾಜ್ಯ ನಾಯಕತ್ವ ವಿಚಾರದಲ್ಲಿ ರಾಹುಲ್ ಗಾಂಧಿಯ ನಿರ್ಧಾರವೇ ಅಂತಿಮ ಎಂಬುದು ಕಾಂಗ್ರೆಸ್ ವಲಯದ ನಿಲುವು. ಇದೀಗ ಡಿಕೆಶಿ ರಾಹುಲ್ ಗಾಂಧಿಯನ್ನು ಭೇಟಿ ಮಾಡುವ ಸಾಧ್ಯತೆಗಳೂ ಚರ್ಚೆಯಾಗುತ್ತಿವೆ. ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆ ಹೊಸ ತಿರುವು ಪಡೆಯುವ ಸೂಚನೆ ನೀಡಿದೆ.

Continue Reading

ಅಪರಾಧ

BAIRATHI BASAVARJU BREAKING NEWS : ಸಿಐಡಿ ಲುಕ್‌ಔಟ್ ನೋಟಿಸ್ ಜಾರಿ, ತನಿಖೆ ತೀವ್ರ

ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.

ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.

ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.

Continue Reading

Trending