ರಾಜಕೀಯ
ಚನ್ನಪಟ್ಟಣದಲ್ಲಿ ಗೆದ್ದ ಸೈನಿಕ, ಸೋತ ಅಭಿಮನ್ಯು

ರಾಮನಗರ: ಚನ್ನಪಟ್ಟಣದಲ್ಲಿ (Channapatna By Election) ಸಿಪಿ ಯೋಗೇಶ್ವರ್ (CP yogeshwar) ಗೆದ್ದು ಬೀಗಿದ್ದಾರೆ. ಕೊನೆ ಕ್ಷಣದಲ್ಲಿ ಬಿಜೆಪಿಯಿಂದ (BJP) ಕಾಂಗ್ರೆಸ್ಗೆ (Congress) ಜಂಪ್ ಆದರೂ ಜನತೆ ಯೋಗೇಶ್ವರ್ ಕೈಹಿಡಿದಿದ್ದಾರೆ.
ಮೊದಲ 6 ಸುತ್ತಿನಲ್ಲಿ ನಿಖಿಲ್ ಮುನ್ನಡೆಯಲ್ಲಿದ್ದರು. ಆದರೆ ಚನ್ನಪಟ್ಟಣ ನಗರದ ಇವಿಎಂ (EVM) ಓಪನ್ ಆಗುತ್ತಿದ್ದಂತೆ ಯೋಗೇಶ್ವರ್ ಅವರಿಗೆ ಭರ್ಜರಿ ಮುನ್ನಡೆ ಸಿಕ್ಕಿತ್ತು. ಈ ಮುನ್ನಡೆಯನ್ನು ಯೋಗೇಶ್ವರ್ ಕೊನೆಯವರೆಗೂ ಉಳಿಸಿಕೊಂಡು ಬಂದಿದ್ದರು.
ಗೆಲ್ಲಲು ಕಾರಣ ಏನು?
ಯೋಗೇಶ್ವರ್ಗೆ 2 ಬಾರಿ ಸೋಲಿನ ಅನುಕಂಪ ಕೈ ಹಿಡಿದಿದೆ. ಎರಡು ಬಾರಿ ಶಾಸಕರಾಗಿ ಕುಮಾರಸ್ವಾಮಿ ಕ್ಷೇತ್ರಕ್ಕೆ ಬರಲಿಲ್ಲ ಎಂಬ ಬೇಸರ ಇತ್ತು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸೋಲಿನ ನಂತರ ಡಿಕೆ ಬ್ರದರ್ಸ್ ಚನ್ನಪಟ್ಟಣವನ್ನು ಪ್ರತಿಷ್ಟೆಯಾಗಿ ತಗೆದುಕೊಂಡಿದ್ದರು.
ಚುನಾವಣೆಗೆ 4 ತಿಂಗಳು ಮೊದಲೇ ಡಿಸಿಎಂ ಡಿಕೆ ಶಿವಕುಮಾರ್ ಜನತಾ ದರ್ಶನ ಆರಂಭಿಸಿದ್ದರು. ಕಳೆದ ಬಾರಿ ಯೋಗೇಶ್ವರ್ಗೆ ಮಿಸ್ ಆಗಿದ್ದ ಅಲ್ಪ ಸಂಖ್ಯಾತ ಮತಗಳು ಈ ಬಾರಿ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್ ಕೈ ಹಿಡಿದಿದೆ.
ಸಚಿವ ಜಮೀರ್ ಹೇಳಿಕೆ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್ಗೆ ಡ್ಯಾಮೇಜ್ ಆಗಿಲ್ಲ. ಆಧುನಿಕ ಭಗೀರಥ ಫೈಟ್ನಲ್ಲಿ ಚನ್ನಪಟ್ಟಣ ಕೆರೆಗೆ ನೀರು ತುಂಬಿಸಿದ ಇಮೇಜ್ನಲ್ಲಿ ಜನರು ಯೋಗೇಶ್ವರ್ ಕೈ ಹಿಡಿದಿದ್ದಾರೆ.
ದೇಶ
ಅಧ್ಯಕ್ಷರನ್ನು ಬದಲಿಸಲ್ಲ, ಸಂಪುಟ ವಿಸ್ತರಣೆ ಮಾಡಲ್ಲ: ಖರ್ಗೆ

ಕಲಬುರಗಿ: ರಾಜ್ಯದಲ್ಲಿ ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಎಐಸಿಸಿ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ,
ಕಲಬುರಗಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವಾಗ ಎಲ್ಲರಿಗೂ ತಿಳಿಸುತ್ತೇವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆಶಿ ನವದೆಹಲಿಯಲ್ಲಿ ತಮ್ಮನ್ನು ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾದಾಗ, ಕರ್ನಾಟಕದಲ್ಲಿನ ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಧಾನ ಬದಲಾವಣೆ ಕುರಿತು ಯಾವುದೇ ಮಾತುಕತೆ ನಡೆಸಿಲ್ಲ ಎಂದು ಖರ್ಗೆ ಸ್ಪಷ್ಟಪಡಿಸಿದರು,
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಹಾಗೂ ಜಾತಿ ಸಮೀಕ್ಷೆ ಕುರಿತು ಸಭೆಯಲ್ಲಿ ಚರ್ಚಿಸಿದೆವು, ಕಾಲ್ತುಳಿತದ ಘಟನೆ ಕಾಂಗ್ರೆಸ್ ಸೇರಿದಂತೆ ಎಲ್ಲರನ್ನು ಆಘಾತಕ್ಕೀಡುಮಾಡಿದೆ, ಹೀಗಾಗಬಾರದಿತ್ತು, ಇಂತಹ ಘಟನೆಗಳು ನಡೆಯದಂತೆ ಮುಂದಿನ ದಿನಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಸೂಚಿಸಿದ್ದೇವೆ ಎಂದರು,
ಬೆಂಗಳೂರು
ಇನ್ನು ಮುಂದೆ ತುಮಕೂರು ಬೆಂಗಳೂರು ಉತ್ತರ – ಗೃಹಸಚಿವ ಜಿ.ಪರಮೇಶ್ವರ್

ತುಮಕೂರು: ತುಮಕೂರು ಜಿಲ್ಲೆಯನ್ನು ಮುಂದಿನ ದಿನಗಳಲ್ಲಿ ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮಾರ್ಪಡಿಸುವ ಸಿದ್ಧತೆಗಳು ನಡೆದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ, ಈ ಸಂಬಂಧ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಅವರು ಖಚಿತಪಡಿಸಿದರು,
ತುಮಕೂರು ಜಿಲ್ಲೆ ಎಂದರೆ ಎಲ್ಲೋ ಇದೆ ಎಂಬ ಭಾವನೆ ಮೂಡುತ್ತದೆ, ಬೆಂಗಳೂರು ನಗರ ಈಗಾಗಲೇ ನೆಲಮಂಗಲದಿಂದ ಹೊರಕ್ಕೆ ಬೆಳವಣಿಗೆ ಕಂಡಿದೆ, ಅಲ್ಲಿಂದ 30 ಕಿಲೋ ಮೀಟರ್ ಬಂದರೆ ತುಮಕೂರು ತಲಪಬಹುದು, ಹಾಗಾಗಿ ನಗರ ವ್ಯಾಪ್ತಿ ವಿಸ್ತಾರ ಮಾಡಿದರೆ ಅನುಕೂಲವಾಗುತ್ತದೆ ಎಂದು ನುಡಿದರು, ಈಗಾಗಲೇ 14 ಗ್ರಾಮ ಪಂಚಾಯಿತಿಗಳನ್ನು ಮಹಾನಗರ ಪಾಲಿಕೆ ವ್ಯಾಪ್ತಿಕಗೆ ಸೇರಿಸಲು ಪ್ರಸ್ತಾವ ಸಿದ್ಧಪಡಿಸಲಾಗಿದೆ ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ,
ಮುಂದಿನ ದಿನಗಳಲ್ಲಿ ತುಮಕೂರು ನಗರವೂ ತನ್ನ ವ್ಯಾಪ್ತಿಯನ್ನು ನಿಸ್ತರಿಸಿಕೊಳ್ಳಲಿದೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಒಳ್ಳೆಯ ಯೋಜನೆ ರೂಪಿಸಿದ್ದಾರೆ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮಾಡಿದ್ದಾರೆ, ಈ ಯೋಜನೆಗೆ ಸರ್ಕಾರ ಒಪ್ಪಿಗೆ ನೀಡಿ ಆದೇಶ ಹೊರಡಿಸಿದೆ, ಬೆಂಗಳೂರು ದಕ್ಷಿಣ ಎಂದ ತಕ್ಷಣ ಅದರ ಸ್ವರೂಪ ಬದಲಾಗುತ್ತದೆ, ಅದೇರೀತಿ ತುಮಕೂರು ಜಿಲ್ಲೆಯನ್ನು ಯಾವ ರೀತಿ ಮಾಡಬೇಕು ಎಂಬ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಜಿ.ಪರಮೇಶ್ವರ್ ನುಡಿದಿದ್ದಾರೆ,
ಬೆಂಗಳೂರು
ಪತ್ನಿ ಬಳಿಯೂ ರಾಜಕೀಯ ಮಾತಾಡಲ್ಲ, ಪರಂ ಗರಂ!

ಬೆಂಗಳೂರು: ಮಂಗಳೂರಲ್ಲಿ ನಡೆದ ಸರಣಿ ಕೊಲೆ ಪ್ರಕರಣಗಳ ಬಳಿಕ ಇತ್ತೀಚಿಗೆ ಆರ್ಸಿಬಿ ತಂಡ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಘಟನೆಯಲ್ಲಿ 11 ಜನ ಉಸಿರು ಚೆಲ್ಲಿದ್ದಾರೆ,
ನಿರಂತರವಾಗಿ ಕಾನೂನು ವ್ಯವಸ್ಧೆ ಹದಗೆಡುತ್ತಿದೆ, ಗೃಹ ಸಚಿವ ಜಿ.ಪರಮೇಶ್ವರ್ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳ ಆಗ್ರಹ ಬೆನ್ನಲ್ಲೇ ತಮಗಿರುವ ಗೃಹ ಇಲಾಖೆ ಖಾತೆ ಬದಲಾಯಿಸಿ ಎಂದು ಪರಮೇಶ್ವರ್ ಅವರು ಕೇಳಿಕೊಂಡಿದ್ದಾರೆ ಎಂಬ ವದಂತಿಗೆ ಅವರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ,
ಏನೇ ಇದ್ದರೂ ನನ್ನ ಬಳಿಯೇ ಸ್ಪಷ್ಟನೇ ಕೇಳಿ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ನಾನು ನನ್ನ ಪತ್ನಿ ಬಳಿಯೂ ಯಾವತ್ತೂ ರಾಜಕೀಯ ಮಾತನಾಡಲ್ಲ, ಹೀಗಿರವಾಗ ಈ ವದಂತಿ ಏಕೆ? ಖಾತೆ ಬದಲಾವಣೆ ಅಂತಾ ನಿಮಗೆ ಯಾರು ಹೇಳಿದ್ದಾರೆ? ಏನೇ ಇದ್ದರೂ ನನ್ನ ಬಳಿ ಮಾಹಿತಿ ಪಡೆಯಿರಿ ಎಂದಿದ್ದಾರೆ,
ನಾನು ಸಾಫ್ಟ್ ಆಗಿಯೇ ನಡೆದುಕೊಂಡಿದ್ದೇನೆ, ಏನೇ ಕೇಳಿ ನಾನೇ ಉತ್ತರ ಕೊಡುತ್ತೇನೆ, ಸುಮ್ಮನೇ ಒಬ್ಬರ ವ್ಯಕ್ತಿತ್ವದ ಕೊಲೆ ಮಾಡಬಾರದು, ಅದು ಯಾರಿಗೂ ಶೋಭೆ ತರಲ್ಲ, ಖಾತೆ ಬದಲಾಯಿಸಿ ಎಂದು ಸಿಎಂ ಹೇಳಿದ್ದಾರೆ ಎಂಬ ಸುದ್ದಿ ಸುಳ್ಳು, ಈ ರೀತಿ ಹೇಳಬೇಡಿ, ಇಂತಹ ವದಂತಿಯಿಂದ ನಮ್ಮ ಮತದಾರರು ಅಭಿಮಾನಿಗಳಿಗೆ ತಪ್ಪಾಗಿ ಸಂದೇಶ ಹೋಗುತ್ತದೆ, ಇದೇ ಖಾತೆಯನ್ನೇ ನೀಡಿ ಎಂದು ನಾನು ಯಾರಿಗೂ ಕೇಳಿಲ್ಲ, ಕಾಲ್ತುಳಿತ ದುರಂತದಿಂದ ಎಲ್ಲರಿಗೂ ನೋವಾಗಿದೆ, ಇದರ ಮಧ್ಯೆ ಖಾತೆ ಬದಲಾವಣೆ ಎಂಬ ಸಂಗತಿ ಸತ್ಯಕ್ಕೆ ದೂರವಾದದ್ದು ಎಂದು ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.
-
ಬಿಬಿಎಂಪಿ4 weeks ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ