Connect with us

ರಾಜಕೀಯ

ಚನ್ನಪಟ್ಟಣದಲ್ಲಿ ಗೆದ್ದ ಸೈನಿಕ, ಸೋತ ಅಭಿಮನ್ಯು

ರಾಮನಗರ: ಚನ್ನಪಟ್ಟಣದಲ್ಲಿ (Channapatna By Election) ಸಿಪಿ ಯೋಗೇಶ್ವರ್‌ (CP yogeshwar) ಗೆದ್ದು ಬೀಗಿದ್ದಾರೆ. ಕೊನೆ ಕ್ಷಣದಲ್ಲಿ ಬಿಜೆಪಿಯಿಂದ (BJP) ಕಾಂಗ್ರೆಸ್‌ಗೆ (Congress) ಜಂಪ್‌ ಆದರೂ ಜನತೆ ಯೋಗೇಶ್ವರ್‌ ಕೈಹಿಡಿದಿದ್ದಾರೆ.

ಮೊದಲ 6 ಸುತ್ತಿನಲ್ಲಿ ನಿಖಿಲ್‌ ಮುನ್ನಡೆಯಲ್ಲಿದ್ದರು. ಆದರೆ ಚನ್ನಪಟ್ಟಣ ನಗರದ ಇವಿಎಂ (EVM) ಓಪನ್‌ ಆಗುತ್ತಿದ್ದಂತೆ ಯೋಗೇಶ್ವರ್‌ ಅವರಿಗೆ ಭರ್ಜರಿ ಮುನ್ನಡೆ ಸಿಕ್ಕಿತ್ತು. ಈ ಮುನ್ನಡೆಯನ್ನು ಯೋಗೇಶ್ವರ್‌ ಕೊನೆಯವರೆಗೂ ಉಳಿಸಿಕೊಂಡು ಬಂದಿದ್ದರು.

ಗೆಲ್ಲಲು ಕಾರಣ ಏನು?
ಯೋಗೇಶ್ವರ್‌ಗೆ 2 ಬಾರಿ ಸೋಲಿನ ಅನುಕಂಪ ಕೈ ಹಿಡಿದಿದೆ. ಎರಡು ಬಾರಿ ಶಾಸಕರಾಗಿ ಕುಮಾರಸ್ವಾಮಿ ಕ್ಷೇತ್ರಕ್ಕೆ ಬರಲಿಲ್ಲ ಎಂಬ ಬೇಸರ ಇತ್ತು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸೋಲಿನ ನಂತರ ಡಿಕೆ ಬ್ರದರ್ಸ್ ಚನ್ನಪಟ್ಟಣವನ್ನು ಪ್ರತಿಷ್ಟೆಯಾಗಿ ತಗೆದುಕೊಂಡಿದ್ದರು.

ಚುನಾವಣೆಗೆ 4 ತಿಂಗಳು ಮೊದಲೇ ಡಿಸಿಎಂ ಡಿಕೆ ಶಿವಕುಮಾರ್‌ ಜನತಾ ದರ್ಶನ ಆರಂಭಿಸಿದ್ದರು. ಕಳೆದ ಬಾರಿ ಯೋಗೇಶ್ವರ್‌ಗೆ ಮಿಸ್ ಆಗಿದ್ದ ಅಲ್ಪ ಸಂಖ್ಯಾತ ಮತಗಳು ಈ ಬಾರಿ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್ ಕೈ ಹಿಡಿದಿದೆ.

ಸಚಿವ ಜಮೀರ್ ಹೇಳಿಕೆ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್‌ಗೆ ಡ್ಯಾಮೇಜ್ ಆಗಿಲ್ಲ. ಆಧುನಿಕ ಭಗೀರಥ ಫೈಟ್‌ನಲ್ಲಿ ಚನ್ನಪಟ್ಟಣ ಕೆರೆಗೆ ನೀರು ತುಂಬಿಸಿದ ಇಮೇಜ್‌ನಲ್ಲಿ ಜನರು ಯೋಗೇಶ್ವರ್‌ ಕೈ ಹಿಡಿದಿದ್ದಾರೆ.

ಬೆಂಗಳೂರು

ಪತ್ನಿ ಬಳಿಯೂ ರಾಜಕೀಯ ಮಾತಾಡಲ್ಲ, ಪರಂ ಗರಂ!

ಬೆಂಗಳೂರು: ಮಂಗಳೂರಲ್ಲಿ ನಡೆದ ಸರಣಿ ಕೊಲೆ ಪ್ರಕರಣಗಳ ಬಳಿಕ ಇತ್ತೀಚಿಗೆ ಆರ್‍ಸಿಬಿ ತಂಡ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಘಟನೆಯಲ್ಲಿ 11 ಜನ ಉಸಿರು ಚೆಲ್ಲಿದ್ದಾರೆ,
ನಿರಂತರವಾಗಿ ಕಾನೂನು ವ್ಯವಸ್ಧೆ ಹದಗೆಡುತ್ತಿದೆ, ಗೃಹ ಸಚಿವ ಜಿ.ಪರಮೇಶ್ವರ್ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳ ಆಗ್ರಹ ಬೆನ್ನಲ್ಲೇ ತಮಗಿರುವ ಗೃಹ ಇಲಾಖೆ ಖಾತೆ ಬದಲಾಯಿಸಿ ಎಂದು ಪರಮೇಶ್ವರ್ ಅವರು ಕೇಳಿಕೊಂಡಿದ್ದಾರೆ ಎಂಬ ವದಂತಿಗೆ ಅವರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ,
ಏನೇ ಇದ್ದರೂ ನನ್ನ ಬಳಿಯೇ ಸ್ಪಷ್ಟನೇ ಕೇಳಿ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ನಾನು ನನ್ನ ಪತ್ನಿ ಬಳಿಯೂ ಯಾವತ್ತೂ ರಾಜಕೀಯ ಮಾತನಾಡಲ್ಲ, ಹೀಗಿರವಾಗ ಈ ವದಂತಿ ಏಕೆ? ಖಾತೆ ಬದಲಾವಣೆ ಅಂತಾ ನಿಮಗೆ ಯಾರು ಹೇಳಿದ್ದಾರೆ? ಏನೇ ಇದ್ದರೂ ನನ್ನ ಬಳಿ ಮಾಹಿತಿ ಪಡೆಯಿರಿ ಎಂದಿದ್ದಾರೆ,
ನಾನು ಸಾಫ್ಟ್ ಆಗಿಯೇ ನಡೆದುಕೊಂಡಿದ್ದೇನೆ, ಏನೇ ಕೇಳಿ ನಾನೇ ಉತ್ತರ ಕೊಡುತ್ತೇನೆ, ಸುಮ್ಮನೇ ಒಬ್ಬರ ವ್ಯಕ್ತಿತ್ವದ ಕೊಲೆ ಮಾಡಬಾರದು, ಅದು ಯಾರಿಗೂ ಶೋಭೆ ತರಲ್ಲ, ಖಾತೆ ಬದಲಾಯಿಸಿ ಎಂದು ಸಿಎಂ ಹೇಳಿದ್ದಾರೆ ಎಂಬ ಸುದ್ದಿ ಸುಳ್ಳು, ಈ ರೀತಿ ಹೇಳಬೇಡಿ, ಇಂತಹ ವದಂತಿಯಿಂದ ನಮ್ಮ ಮತದಾರರು ಅಭಿಮಾನಿಗಳಿಗೆ ತಪ್ಪಾಗಿ ಸಂದೇಶ ಹೋಗುತ್ತದೆ, ಇದೇ ಖಾತೆಯನ್ನೇ ನೀಡಿ ಎಂದು ನಾನು ಯಾರಿಗೂ ಕೇಳಿಲ್ಲ, ಕಾಲ್ತುಳಿತ ದುರಂತದಿಂದ ಎಲ್ಲರಿಗೂ ನೋವಾಗಿದೆ, ಇದರ ಮಧ್ಯೆ ಖಾತೆ ಬದಲಾವಣೆ ಎಂಬ ಸಂಗತಿ ಸತ್ಯಕ್ಕೆ ದೂರವಾದದ್ದು ಎಂದು ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.

Continue Reading

ಬೆಂಗಳೂರು

ಆರೋಗ್ಯ ಇಲಾಖೆಯಿಂದ ಗಂಭೀರ ರೋಗಿಗಳಿಗೆ ಉಚಿತ ಒಪಿಡಿ ಸೇವೆ: ಇನ್ಮುಂದೆ ಮನೆ ಬಾಗಿಲಿಗೆ ಚಿಕಿತ್ಸೆ!

ಕರ್ನಾಟಕ ಆರೋಗ್ಯ ಇಲಾಖೆಯು ಬಡವರಿಗೆ, ಕ್ಯಾನ್ಸರ್ ಪೀಡಿತರಿಗೆ, ವಯೋವೃದ್ಧರಿಗೆ ಮತ್ತು ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಮನೆ ಬಾಗಿಲಿಗೆ ಉಚಿತ ಒಪಿಡಿ (OPD) ಸೇವೆ ಒದಗಿಸಲು ಹೊಸ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿ, ಸಿವಿ ರಾಮನ್ ನಗರದ ಸಾರ್ವಜನಿಕ ಆಸ್ಪತ್ರೆಯಿಂದ ಮೊಬೈಲ್ ಆಸ್ಪತ್ರೆ ಮಾದರಿಯಲ್ಲಿ ಚಿಕಿತ್ಸೆ ಆರಂಭವಾಗಿದೆ. ಈ ಕಾರ್ಯಕ್ರಮವು ಆರೋಗ್ಯ ಕ್ಷೇತ್ರದಲ್ಲಿ ಸಮಾಜದ ದುರ್ಬಲ ವರ್ಗಕ್ಕೆ ಗುಣಮಟ್ಟದ ಚಿಕಿತ್ಸೆಯನ್ನು ತಲುಪಿಸುವ ಗುರಿಯನ್ನು ಹೊಂದಿದೆ.

ಯೋಜನೆಯ ವಿಶೇಷತೆಗಳೇನು?

ರಾಜ್ಯದಲ್ಲಿ ಮೊದಲ ಬಾರಿಗೆ, ಕ್ಯಾನ್ಸರ್, ಹೃದಯ ಸಮಸ್ಯೆ, ಬ್ರೇನ್ ಹೆಮರೇಜ್ ಮತ್ತು ಇತರ ಗಂಭೀರ ರೋಗಗಳಿಂದ ಬಳಲುತ್ತಿರುವ ರೋಗಿಗಳಿಗೆ ಆರೋಗ್ಯ ಇಲಾಖೆಯು ಮನೆಗೆ ತೆರಳಿ ಉಚಿತ ಒಪಿಡಿ ಸೇವೆ ಒದಗಿಸಲಿದೆ. ಸಿವಿ ರಾಮನ್ ನಗರದ ಸಾರ್ವಜನಿಕ ಆಸ್ಪತ್ರೆಯಿಂದ ಈ ಯೋಜನೆಯನ್ನು ಪೈಲಟ್ ಯೋಜನೆಯಾಗಿ ಆರಂಭಿಸಲಾಗಿದೆ. ಈ ಸೇವೆಯಿಂದ ರೋಗಿಗಳು ಆಸ್ಪತ್ರೆಗೆ ಭೇಟಿ ನೀಡದೆಯೇ ತಮ್ಮ ಮನೆಯ ಬಳಿಯೇ ಚಿಕಿತ್ಸೆ ಪಡೆಯಬಹುದು.

ಗಂಭೀರ ರೋಗಿಗಳಿಗೆ ಆಸ್ಪತ್ರೆಗೆ ತೆರಳುವುದು ಕಷ್ಟಕರವಾಗಿರುತ್ತದೆ. ಆಸ್ಪತ್ರೆಯಲ್ಲಿ ಕಾಯುವ ಸಾಲುಗಳು, ದೀರ್ಘ ಕಾಯುವಿಕೆ, ಮತ್ತು ಆರ್ಥಿಕ ಒತ್ತಡದಿಂದ ಬಳಲುವವರಿಗೆ ಈ ಯೋಜನೆಯು ತುರ್ತು ಚಿಕಿತ್ಸೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯಡಿ, ಮೊಬೈಲ್ ಆಸ್ಪತ್ರೆಗಳ ಮೂಲಕ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ನೇರವಾಗಿ ರೋಗಿಗಳ ಮನೆಗೆ ತೆರಳಿ ಚಿಕಿತ್ಸೆ ನೀಡಲಿದ್ದಾರೆ.

ಪ್ರಸ್ತುತ, ಸಿವಿ ರಾಮನ್ ನಗರದಿಂದ ಐದಕ್ಕೂ ಹೆಚ್ಚು ಪ್ರದೇಶಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ಬೆಂಗಳೂರಿನ ಇತರ ಪ್ರದೇಶಗಳಿಗೆ ಮತ್ತು ರಾಜ್ಯದ ಇತರ ಜಿಲ್ಲೆಗಳಿಗೆ ವಿಸ್ತರಿಸುವ ಯೋಜನೆಯಿದೆ ಎಂದು ಸಿವಿ ರಾಮನ್ ನಗರ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ್ ತಿಳಿಸಿದ್ದಾರೆ.

ಈ ಯೋಜನೆಯಿಂದ ಬಡವರಿಗೆ, ವಯೋವೃದ್ಧರಿಗೆ, ಮತ್ತು ಗಂಭೀರ ರೋಗಿಗಳಿಗೆ ಆರ್ಥಿಕ ಹೊರೆಯಿಲ್ಲದೆ ಗುಣಮಟ್ಟದ ಚಿಕಿತ್ಸೆ ಲಭ್ಯವಾಗಲಿದೆ. ಒಬ್ಬ ರೋಗಿಯ ತಾಯಿ ಆಶಾದೇವಿ, “ಈ ಸೇವೆಯಿಂದ ಬಡವರಿಗೆ ತುಂಬಾ ಉಪಯೋಗವಾಗಲಿದೆ. ಸರ್ಕಾರ ಈ ಯೋಜನೆಯನ್ನು ಎಲ್ಲೆಡೆ ವಿಸ್ತರಿಸಬೇಕು,” ಎಂದು ಒತ್ತಾಯಿಸಿದ್ದಾರೆ.

ಯೋಜನೆಯ ಪ್ರಯೋಜನಗಳು:
  • ಉಚಿತ ಚಿಕಿತ್ಸೆ: ಕ್ಯಾನ್ಸರ್, ಹೃದಯ ಸಮಸ್ಯೆ, ಬ್ರೇನ್ ಹೆಮರೇಜ್ ಇತ್ಯಾದಿ ಗಂಭೀರ ರೋಗಿಗಳಿಗೆ ಉಚಿತ ಒಪಿಡಿ ಸೇವೆ.
  • ಮನೆ ಬಾಗಿಲಿಗೆ ಸೇವೆ: ಆಸ್ಪತ್ರೆಗೆ ತೆರಳುವ ತೊಂದರೆ ತಪ್ಪಿಸಲು ಮೊಬೈಲ್ ಆಸ್ಪತ್ರೆ ಮಾದರಿ.
  • ದುರ್ಬಲ ವರ್ಗಕ್ಕೆ ಒತ್ತು: ಬಡವರು, ವಯೋವೃದ್ಧರು, ಮತ್ತು ಗಂಭೀರ ರೋಗಿಗಳಿಗೆ ಆದ್ಯತೆ.
  • ತುರ್ತು ಚಿಕಿತ್ಸೆ: ಆಸ್ಪತ್ರೆಯ ಕಾಯುವಿಕೆಯಿಂದ ರೋಗಿಗಳಿಗೆ ಮುಕ್ತಿ.
Continue Reading

ದೇಶ

ದೆಹಲಿ ತಲುಪಿದ DCM ಡಿಕೆ.ಶಿವಕುಮಾರ್: ಹೈಕಮಾಂಡ್ ಭೇಟಿ, ಊಹಾಪೋಹ ಶುರು..!

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಕಾಂಗ್ರೆಸ್‌ ವರಿಷ್ಠರನ್ನು ಭೇಟಿ ಮಾಡುವ ಸಾಧ್ಯತೆಯಿದ್ದು, ಭಾನುವಾರ ಸಂಜೆಯೇ ದೆಹಲಿ ತಲುಪಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ರಾಜಕೀಯ ವಲಯದಲ್ಲಿ ಊಹಾಪೋಹಗಳು ಶುರುವಾಗಿವೆ.

ಡಿಕೆ.ಶಿವಕುಮಾರ್ ಅವರ ದೆಹಲಿ ಭೇಟಿ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ ಜೂ.13ರಂದು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಲಿದ್ದಾರೆಂದು ತಿಳಿದುಬಂದಿದೆ.

ರಾಜ್ಯದ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಇಬ್ಬರೂ ನಾಯಕರ ವರಿಷ್ಠರ ಭೇಟಿ ಮಾಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.

ಇಂದು ಬೆಳಗ್ಗೆ 11ಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳೊದಿಗೆ ದೆಹಲಿ ಮಹಾನಗರ ಪಾಲಿಕೆ ಅಧಿಕಾರಿಗಳ ಜತೆ ಆಡಳಿತ ಹಾಗೂ ಘನ ತ್ಯಾಜ್ಯ ನಿರ್ವಹಣೆ ಕುರಿತು ಡಿ.ಕೆ.ಶಿವಕುಮಾರ್‌ ಸಭೆ ನಡೆಸಲಿದ್ದಾರೆ.ಬಳಿಕ ಜಲಶಕ್ತಿ ಸಚಿವರು, ಇಂಧನ ಸಚಿವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಇದರ ನಡುವೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸೇರಿ ಇತ್ತೀಚಿನ ರಾಜ್ಯದ ಬೆಳವಣಿಗೆಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇದರ ಬೆನ್ನಲ್ಲೇ ಜೂ.12ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಜೂ.13 ರಂದು ಹಣಕಾಸು ಆಯೋಗದ ಸಭೆಯಲ್ಲಿ ಭಾಗವಹಿಸಲಿದ್ದು, ಬಳಿಕ ಎಐಸಿಸಿ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ರಾಜ್ಯದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸ ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ದೆಹಲಿ ಭೇಟಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ದೆಹಲಿ ಭೇಟಿ ಸಂಪೂರ್ಣವಾಗಿ ತಾಂತ್ರಿಕವಾಗಿದೆ ಎಂದು ಹೇಳಿದರು.

ಹೈದರಾಬಾದ್, ಚೆನ್ನೈ ಮತ್ತು ಈಗ ದೆಹಲಿಯಲ್ಲಿ ಈಗಾಗಲೇ ಜಾರಿಯಲ್ಲಿರುವ ಘನತ್ಯಾಜ್ಯ ನಿರ್ವಹಣಾ ತಂತ್ರಜ್ಞಾನಗಳನ್ನು ಪರಿಶೀಲಿಸಲು ನಿರ್ಧರಿಸಿದ್ದೆ. ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಬಳಸಲಾಗುತ್ತಿರುವ ತಂತ್ರಜ್ಞಾನವನ್ನು ವೀಕ್ಷಿಸಲು ನಾನು ಹಾಗೂ ಬೆಂಗಳೂರು ಪಾಲಿಕೆಯಿಂದ ಸುಮಾರು 15 ಸದಸ್ಯರ ತಂಡ ದೆಹಲಿಗೆ ಆಗಮಿಸಿದ್ದೇವೆ. ಇಲ್ಲಿ ನಗರದ ಹೊರಭಾಗದಲ್ಲಿ ವಾಸನೆ ರಹಿತವಾಗಿ ತ್ಯಾಜ್ಯ ವಿಲೇವಾರಿ ಕೇಂದ್ರ ಮಾಡಿದ್ದಾರೆ ಎಂದು ಕೇಳಿದ್ದೇನೆ.

ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಂಬಂಧ ಟೆಂಡರ್ ಕರೆಯಲಾಗಿದ್ದು, ಕಸದಿಂದ ಇಂಧನ, ಅನಿಲ ಉತ್ಪಾದನೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಈಗಾಗಲೇ ಹೈದರಾಬಾದ್ ಹಾಗೂ ಚೆನ್ನೈಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದ್ದೇನೆ. ದೆಹಲಿಯಲ್ಲಿನ ತಂತ್ರಜ್ಞಾನ ಅಳವಡಿಕೆ ಬಗ್ಗೆ ನಮಗೆ ಪ್ರಸ್ತಾವನೆ ಬಂದಿದ್ದು, ಹೀಗಾಗಿ ಅದನ್ನು ವೀಕ್ಷಣೆ ಮಾಡುತ್ತೇವೆ. ದೆಹಲಿಯಲ್ಲಿ ನಗರ ಯೋಜನಾ ಪ್ರಾಧಿಕಾರದಲ್ಲಿ ರಸ್ತೆ ವಿಚಾರವಾಗಿ ಪ್ರತ್ಯೇಕ ನೀತಿ ಹೊಂದಿದ್ದು, ಇದನ್ನು ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು.

ಹೈಕಮಾಂಡ್ ನಾಯಕರ ಭೇಟಿ ಸಧ್ಯಕ್ಕೆ ಇಲ್ಲ. ಸಮಯ ಸಿಕ್ಕರೆ ಭೇಟಿ ಮಾಡುತ್ತೇನೆ. ಜೂನ್.10 ರಂದು ಎತ್ತಿನಹೊಳೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕರೆದಿದ್ದಾರೆ. ಹೀಗಾಗಿ ನಾಳೆ ಸಂಜೆ ಬೆಂಗಳೂರಿಗೆ ವಾಪಸ್ಸಾಗುತ್ತೇವೆ ಎಂದರು

Continue Reading

Trending