ಬೆಂಗಳೂರು
ಬಿಜೆಪಿ ಅವಧಿಯಲ್ಲಿ 2,900 ಎಕ್ರೆಗೆ ವಕ್ಫ್ ನೋಟಿಸ್; ಬಿಎಸ್ವೈಗೆ ಮುಖಭಂಗ ಮಾಡಲು ಯತ್ನಾಳ್ ಹೋರಾಟ: ಪರಮೇಶ್ವರ್
ಬೆಂಗಳೂರು: ಬಿಜೆಪಿ ಅಧಿಕಾರ ಅವಧಿಯಲ್ಲಿ 2,900 ಎಕರೆಗೆ ವಕ್ಫ್ ನೋಟಿಸ್ (Waqf Notice) ಜಾರಿಯಾಗಿದೆ. ಇದು ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ಆಗಿತ್ತು. ಅದಕ್ಕಾಗಿ ಶಾಸಕ ಯತ್ನಾಳ್ ಅವರು ಬಿಜೆಪಿ ಹಾಗೂ ಯಡಿಯೂರಪ್ಪ, ಬೊಮ್ಮಾಯಿಗೆ ಮುಜುಗರ ಉಂಟುಮಾಡಲು ಹೋರಾಟಕ್ಕೆ ಹೊರಟಿದ್ದಾರೆ ಎಂದು ಗೃಹಸಚಿವ ಜಿ. ಪರಮೇಶ್ವರ್ (G Parameshwar) ಕುಟುಕಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಹೆಚ್ಚು ವಕ್ಫ್ ನೊಟೀಸ್ ಕೊಟ್ಟಿರುವ ವಿಚಾರ ಹಾಗೂ ವಕ್ಫ್ ವಿರೋಧಿಸಿ ಬಿಜೆಪಿ ರೆಬಲ್ಸ್ ಟೀಂ ಹೋರಾಟಕ್ಕೆ ಪ್ರತಿಕ್ರಿಯಿಸಿದರು. ಜಾಸ್ತಿ ದಿನ ಸತ್ಯ ಮುಚ್ಚಿಡಲು ಆಗಲ್ಲ. ಬಿಜೆಪಿಯವರು ನಮ್ಮ ಮೇಲೆ ನೊಟೀಸ್ ಕೊಟ್ಟಿರೋ ಬಗ್ಗೆ ಆರೋಪ ಮಾಡ್ತಿದ್ರು. ಇವರು ಅಧಿಕಾರದಲ್ಲಿ ಇದ್ದಾಗ ಏನು ಮಾಡಿದ್ರು? ಕುಮಾರ್ ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಸಮಿತಿ ಮಾಡಿ ವಕ್ಫ್ ನೊಟೀಸ್ ಜಾರಿ ಮಾಡಿದ್ದಾರೆ. ಈ ಸಮಿತಿ 2,900 ಎಕರೆಗೆ ನೊಟೀಸ್ ಜಾರಿ ಮಾಡಿದೆ. ಸಿದ್ದರಾಮಯ್ಯ (Siddaramaiah) ಅವಧಿಯಲ್ಲಿ 300 ಎಕರೆಗೆ ನೊಟೀಸ್ ಜಾರಿ ಆಗಿದೆ. ಯಾರ ಅವಧಿಯಲ್ಲಿ ನೊಟೀಸ್ ಜಾಸ್ತಿ ಜಾರಿ ಮಾಡಿದ್ದಾರೆ ಅಂತ ಗೊತ್ತಾಯ್ತಲ್ಲ. ನಾವು ಯಾರ ಮೇಲೆ ಆರೋಪ ಮಾಡಬೇಕು? ಈಗ ಬಿಜೆಪಿಯವರು ವಕ್ಫ್ ವಿಚಾರದಲ್ಲಿ ರಾಜ್ಯ ಪ್ರವಾಸ ಮಾಡಲು ಹೊರಟಿದ್ದಾರಲ್ಲ, ಇದು ಮೊದಲು ಅವರಿಗೆ ಅರ್ಥ ಆಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಬಹುಶಃ ಯತ್ನಾಳ್ ಟೀಮ್ ಹೊರಟಿರೋದು ಬಿಜೆಪಿಯವರಿಗೆ ಮುಖಭಂಗ ಮಾಡೋದಕ್ಕೆ. ಬಿಜೆಪಿಯವರು ಹೆಚ್ಚು ನೊಟೀಸ್ ಕೊಟ್ಟಿದ್ದಾರೆ ಎಂದು ಗೊತ್ತಾದ ಮೇಲೂ ಇವರು ಪ್ರವಾಸ ಹೊರಟಿದ್ದಾರೆ ಅಂದ್ರೆ, ಬಿಜೆಪಿಯವರಿಗೆ ಮುಜುಗರ ಮಾಡಲು ಹೊರಟಿದ್ದಾರೆ ಅಂತ ನನಗನ್ನಿಸುತ್ತೆ. ಇಲ್ಲ ಅಂದ್ರೆ ಯಾಕ್ ಹೋಗ್ತಾರೆ ಅವರು? ಬಿಜೆಪಿ ಕಾಲದಲ್ಲೇ ಹೆಚ್ಚು ವಕ್ಫ್ ನೊಟೀಸ್ ಕೊಟ್ಟಿದ್ದಾರಲ್ಲ, ಅದನ್ನೆಲ್ಲ ಎಕ್ಸ್ಪೋಸ್ ಮಾಡಲು ಯತ್ನಾಳ್ ಹೋಗ್ತಿದ್ದಾರೆ ಅಂತ ಅರ್ಥ. ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ಆಗಿತ್ತು ಅಂತ ಇದೆಯಲ್ಲ, ಆದ್ದರಿಂದ ಅವರಿಬ್ಬರನ್ನೂ ಎಕ್ಸ್ಪೋಸ್ ಮಾಡಲು ಹೊರಟಿದ್ದಾರೆ ಅನಿಸುತ್ತೆ. ಹಿಂದೆ ಬಿಜೆಪಿ ವಕ್ಫ್ ನೊಟೀಸ್ ಕೊಟ್ಟಿದ್ದು ನಮ್ಮ ಗಮನಕ್ಕೆ ಬಂದಿರಲಿಲ್ಲ ಆ ಸಂಧರ್ಭದಲ್ಲಿ. ಅದನ್ನ ನಾವು ಇಶ್ಯೂ ಆಗಿ ತೆಗೆದುಕೊಂಡಿರಲಿಲ್ಲ. ಈಗ ಎಚ್ಚರಿಕೆ ವಹಿಸಿಕೊಂಡು ಕೆಲಸ ಮಾಡ್ತೀವಿ ಎಂದು ಹೇಳಿದ್ದಾರೆ.
ಇವಿಎಂ ಹ್ಯಾಕ್ ಸಮರ್ಥಿಸಿಕೊಂಡ ಸಚಿವರು:
ಇದೇ ವೇಳೆ ಮಹಾರಾಷ್ಟ್ರದಲ್ಲಿ ಇವಿಎಂ ಹ್ಯಾಕ್ ಟ್ಯಾಂಪರ್ ಮಾಡಿರುವ ಆರೋಪವನ್ನು ಗೃಹ ಸಚಿವರು ಸಮರ್ಥಿಸಿಕೊಂಡಿದ್ದಾರೆ. ನಾವು ಮೊದಲಿಂದಲೂ ಇದನ್ನು ಹೇಳಿಕೊಂಡೇ ಬರುತ್ತಿದ್ದೇವೆ. ಸೆಲೆಕ್ಟಿವ್ ಆಗಿ ರಾಜ್ಯ, ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡು ಇವಿಎಂ ಹ್ಯಾಕ್ ಮಾಡ್ತಾರೆ. 2014 ರಿಂದಲೂ ಇದು ನಡೆದುಕೊಂಡು ಬರ್ತಿದೆ. ಮಹಾರಾಷ್ಟ್ರದಲ್ಲೂ ಆರೀತಿ ಆಗಿದೆ ಅಂತ ಚರ್ಚೆ ಆಗ್ತಿದೆ, ಅದನ್ನೇ ನಾನು ಹೇಳಿದ್ದು. ಬಿಜೆಪಿಯವರಿಗೆ ನನ್ನ ಹೇಳಿಕೆ ಸರಿಯಾಗಿ ಅರ್ಥ ಮಾಡಿಕೊಳ್ಳಲು ಹೇಳಿ ಎಂದು ಕುಟುಕಿದ್ದಾರೆ.
ದೇಶ
‘ಮಸೀದಿ, ಚೌಲ್ಟ್ರಿಗಳಲ್ಲಿ ಸಾಮೂಹಿಕ SIR’ – ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ-ಜೆಡಿಎಸ್
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳು ನಡೆದಿವೆ ಎಂದು ಆರೋಪಿಸಿರುವ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಎಚ್.ಡಿ. ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಿ.ಟಿ. ರವಿ, ಡಾ. ಅಶ್ವತ್ಥ ನಾರಾಯಣ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಸಂಸದ ಗೋವಿಂದ ಕಾರಜೋಳ ಸೇರಿದಂತೆ ಹಲವು ನಾಯಕರು ನಿಯೋಗದ ಭಾಗವಾಗಿದ್ದರು.
ನಿಯೋಗವು ಸಲ್ಲಿಸಿರುವ ದೂರಿನಲ್ಲಿ, ರಾಜ್ಯದ ವಿವಿಧ ಭಾಗಗಳಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಸಾಮೂಹಿಕ ಎಸ್ಐಆರ್ ನಡೆಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಮನೆ-ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಾದ ಬಿಎಲ್ಒಗಳು, ಕೆಲವು ಕಡೆ ಮಸೀದಿಗಳು, ಚೌಲ್ಟ್ರಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮತದಾರರನ್ನು ಒಟ್ಟುಗೂಡಿಸಿ ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದರ ಜೊತೆಗೆ, ಬಿಎಲ್ಒಗಳ ಮೇಲೆ ಸರ್ಕಾರದ ಒತ್ತಡ, ಅನರ್ಹ ಮತದಾರರನ್ನು ಸೇರಿಸಲು ಯತ್ನ, ನಕಲಿ ದಾಖಲೆಗಳ ಬಳಕೆ ಹಾಗೂ ಪ್ರತಿಪಕ್ಷಗಳ ಬೂತ್ ಲೆವೆಲ್ ಏಜೆಂಟ್ಗಳಿಗೆ (BLA) ಮಾಹಿತಿ ನೀಡದೇ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂಬ ಆರೋಪಗಳನ್ನೂ ಬಿಜೆಪಿ-ಜೆಡಿಎಸ್ ಮಾಡಿದೆ.
ರಾಮನಗರ, ಯಶವಂತಪುರ, ಜಯನಗರ, ಇಂಡಿ, ಕುಣಿಗಲ್ ಹಾಗೂ ಪಾವಗಡ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ನಡೆದಿರುವ ಸಾಮೂಹಿಕ ಎಸ್ಐಆರ್ ಅನ್ನು ರದ್ದುಪಡಿಸಿ, ಹೊಸದಾಗಿ ನಿಯಮಾನುಸಾರ ಮರುಪರಿಷ್ಕರಣೆ ನಡೆಸಬೇಕು ಎಂದು ನಿಯೋಗ ಆಗ್ರಹಿಸಿದೆ. ಅಗತ್ಯವಿದ್ದರೆ ಹೊರರಾಜ್ಯದ ಅಧಿಕಾರಿಗಳ ಮೂಲಕ ಎಸ್ಐಆರ್ ಪ್ರಕ್ರಿಯೆ ನಡೆಸುವಂತೆ ಚುನಾವಣಾ ಆಯೋಗವನ್ನು ಮನವಿ ಮಾಡಿದೆ.
ಸೂಚನೆ: ಮೇಲಿನ ಆರೋಪಗಳು ಬಿಜೆಪಿ-ಜೆಡಿಎಸ್ ನಿಯೋಗವು ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿರುವ ದೂರಿನಲ್ಲಿರುವ ಅಂಶಗಳಾಗಿದ್ದು, ಈ ಕುರಿತು ಚುನಾವಣಾ ಆಯೋಗದ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಪ್ರಕಟವಾಗಬೇಕಿದೆ.
ದೇಶ
“ಇನ್ನೆಷ್ಟು ಜನ ಸತ್ತರೆ ಕ್ರಮ?” ಸರ್ಕಾರವನ್ನು ನೇರವಾಗಿ ಪ್ರಶ್ನಿಸಿದ ಎಸ್.ಟಿ. ಸೋಮಶೇಖರ್
ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಸಂಭವಿಸಿದ ಕಲ್ಲು ಗಣಿಗಾರಿಕೆ ದುರಂತದಲ್ಲಿ ಏಳು ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹಾಗೂ ಮಾಜಿ ಸಚಿವ ಎಸ್.ಟಿ. ಸೋಮಶೇಖರ್ ರಾಜ್ಯ ಸರ್ಕಾರಕ್ಕೆ ಬಹಿರಂಗ ಪತ್ರ ಬರೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಇನ್ನೂ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿರುವ ಅವರು, ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದಾರೆ.
ತಮ್ಮ ಪತ್ರದಲ್ಲಿ, ಈ ದುರಂತ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು, ಬೆಂಗಳೂರು ಉಸ್ತುವಾರಿ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದು ಹಾಗೂ ಮುಖ್ಯಮಂತ್ರಿಗಳು ಗಾಯಾಳುಗಳ ಆರೋಗ್ಯ ವಿಚಾರಿಸಿರುವುದನ್ನು ಉಲ್ಲೇಖಿಸಿದ್ದಾರೆ. ಆದರೆ, ಘಟನೆ ನಡೆದ ಬಳಿಕ ಅಕ್ರಮ ಗಣಿಗಾರಿಕೆ ನಡೆಸಿದವರ ವಿರುದ್ಧವಾಗಲಿ ಅಥವಾ ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ಧವಾಗಲಿ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.
“ಏಳು ಜನರ ಜೀವ ಹೋದರೂ ಕ್ರಮವಾಗದಿದ್ದರೆ ಇನ್ನೆಷ್ಟು ಜನ ಸಾಯಬೇಕು? ಮೃತಪಟ್ಟ ಕಾರ್ಮಿಕರ ಕುಟುಂಬಗಳ ಭವಿಷ್ಯವನ್ನು ಯಾರು ನೋಡಿಕೊಳ್ಳುತ್ತಾರೆ? ಅವರ ಮಕ್ಕಳ ಶಿಕ್ಷಣ ಹಾಗೂ ಬದುಕಿನ ಹೊಣೆ ಯಾರು ಹೊರುತ್ತಾರೆ?” ಎಂದು ಪತ್ರದಲ್ಲಿ ಪ್ರಶ್ನಿಸಿದ್ದಾರೆ.
ತಮ್ಮ ಕ್ಷೇತ್ರದಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸ್ಫೋಟಕ ಬಳಕೆಯಿಂದ ಜನರು ನಿರಂತರವಾಗಿ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿರುವ ಎಸ್.ಟಿ. ಸೋಮಶೇಖರ್, ಈ ಕುರಿತು ಈ ಹಿಂದೆಯೂ ಹಲವು ಬಾರಿ ಸರ್ಕಾರದ ಗಮನ ಸೆಳೆದಿದ್ದೇನೆ ಎಂದು ತಿಳಿಸಿದ್ದಾರೆ. ಕಲ್ಲು ಸ್ಫೋಟದ ಶಬ್ದ ಮತ್ತು ಅಕ್ರಮ ಚಟುವಟಿಕೆಗಳನ್ನು ತಕ್ಷಣ ನಿಲ್ಲಿಸಿ, ಹೊಣೆಗಾರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕ್ಷೇತ್ರದ ಜನರ ಭಾವನೆಗಳಿಗೆ ಸ್ಪಂದಿಸಿ ಈ ಮನವಿ ಮಾಡುತ್ತಿರುವುದಾಗಿ ತಿಳಿಸಿರುವ ಅವರು, ದುರಂತದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ಘೋಷಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.
ದೇಶ
ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ! ಜುಲೈ 6ರ ಬೆಂಗಳೂರು ಗೋಲ್ಡ್ ರೇಟ್ ಇಲ್ಲಿದೆ
ಬೆಂಗಳೂರು: ಚಿನ್ನ ಖರೀದಿಸಲು ಯೋಜಿಸುತ್ತಿರುವವರಿಗೆ ಸಂತಸದ ಸುದ್ದಿ. ಕಳೆದ ವಾರ ಏರಿಕೆ ಕಂಡಿದ್ದ ಚಿನ್ನದ ಬೆಲೆ (Gold Price Today) ಇದೀಗ ಮತ್ತೆ ಇಳಿಕೆಯ ಹಾದಿಯಲ್ಲಿದ್ದು, ಜುಲೈ 6, 2026 (ಸೋಮವಾರ) ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಳಿಕೆ ದಾಖಲಾಗಿದೆ.
ಇಂದಿನ ದರದ ಪ್ರಕಾರ 24 ಕ್ಯಾರೆಟ್ ಶುದ್ಧ ಚಿನ್ನದ 1 ಗ್ರಾಂ ಬೆಲೆ ₹14,662 ಆಗಿದ್ದು, ನಿನ್ನೆಗೆ ಹೋಲಿಸಿದರೆ ₹11 ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ₹1,46,620 ಆಗಿದ್ದು, ₹110 ಇಳಿಕೆ ಕಂಡಿದೆ.
22 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ ₹13,440 ಆಗಿದ್ದು, ₹10 ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ₹1,34,400 ಆಗಿದ್ದು, ₹100 ಕಡಿಮೆಯಾಗಿದೆ. ಇದೇ ವೇಳೆ 18 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ ₹10,997 ಹಾಗೂ 10 ಗ್ರಾಂ ಬೆಲೆ ₹1,09,970 ಆಗಿದೆ.
ಬೆಂಗಳೂರು ಮಾರುಕಟ್ಟೆಯಲ್ಲಿ ಶುದ್ಧ ಚಿನ್ನದ ಬೆಲೆ ಇಳಿಕೆಯಾಗಿರುವುದರ ಜೊತೆಗೆ ಬೆಳ್ಳಿ ದರದಲ್ಲೂ ಗಮನಾರ್ಹ ಕುಸಿತ ದಾಖಲಾಗಿದೆ. ಒಂದು ಗ್ರಾಂ ಬೆಳ್ಳಿ ₹245ಕ್ಕೆ ಲಭ್ಯವಿದ್ದು, ಒಂದು ಕಿಲೋಗ್ರಾಂ ಬೆಳ್ಳಿ ಬೆಲೆ ₹2,45,000 ಆಗಿದೆ. ಬೆಳ್ಳಿ ದರದಲ್ಲಿ ಸುಮಾರು ₹5,000 ಇಳಿಕೆ ಕಂಡುಬಂದಿದೆ.
ಜಾಗತಿಕ ಮಾರುಕಟ್ಟೆಯಲ್ಲಿನ ಬೆಲೆ ಬದಲಾವಣೆ, ಡಾಲರ್ ಮೌಲ್ಯ ಹಾಗೂ ಅಂತರರಾಷ್ಟ್ರೀಯ ಆರ್ಥಿಕ ಬೆಳವಣಿಗೆಗಳ ಪರಿಣಾಮವಾಗಿ ಚಿನ್ನ ಹಾಗೂ ಬೆಳ್ಳಿ ದರಗಳಲ್ಲಿ ಪ್ರತಿದಿನ ಏರಿಳಿತ ಕಂಡುಬರುತ್ತಿದೆ. ಆಭರಣ ಖರೀದಿಸುವವರು ಖರೀದಿಗೂ ಮುನ್ನ ಸ್ಥಳೀಯ ಜ್ಯುವೆಲ್ಲರಿ ಅಂಗಡಿಗಳಲ್ಲಿ ದರವನ್ನು ಮತ್ತೊಮ್ಮೆ ಪರಿಶೀಲಿಸುವುದು ಸೂಕ್ತ.
ಇಂದಿನ ಚಿನ್ನದ ದರ
| ಚಿನ್ನದ ಶುದ್ಧತೆ | 1 ಗ್ರಾಂ | 10 ಗ್ರಾಂ |
|---|---|---|
| 24 ಕ್ಯಾರೆಟ್ | ₹14,662 | ₹1,46,620 |
| 22 ಕ್ಯಾರೆಟ್ | ₹13,440 | ₹1,34,400 |
| 18 ಕ್ಯಾರೆಟ್ | ₹10,997 | ₹1,09,970 |
-
ದೇಶ18 hours agoಅಲಿ ಖಮೇನಿ ಅಂತಿಮಯಾತ್ರೆ ಆರಂಭ: ತೆಹ್ರಾನ್ ಬೀದಿಗಳಲ್ಲಿ ಲಕ್ಷಾಂತರ ಜನರ ಅಂತಿಮ ನಮನ
-
ದೇಶ19 hours ago‘ಮಸೀದಿ, ಚೌಲ್ಟ್ರಿಗಳಲ್ಲಿ ಸಾಮೂಹಿಕ SIR’ – ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ-ಜೆಡಿಎಸ್
-
ದೇಶ23 hours agoSakkath Santhe 2026: ಗೃಹ ಉತ್ಪನ್ನಗಳಿಗೆ ವೇದಿಕೆ, ಇಂದಿರಾನಗರದಲ್ಲಿ ಜನಸಾಗರ
-
ದೇಶ21 hours agoಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ! ಜುಲೈ 6ರ ಬೆಂಗಳೂರು ಗೋಲ್ಡ್ ರೇಟ್ ಇಲ್ಲಿದೆ
-
ದೇಶ21 hours agoರಾಜಾಜಿನಗರ ಶಾಸಕರ ಕಚೇರಿ ಮುಂದೆ ಹೈಡ್ರಾಮಾ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ವಾಗ್ವಾದ
-
ದೇಶ20 hours ago“ಇನ್ನೆಷ್ಟು ಜನ ಸತ್ತರೆ ಕ್ರಮ?” ಸರ್ಕಾರವನ್ನು ನೇರವಾಗಿ ಪ್ರಶ್ನಿಸಿದ ಎಸ್.ಟಿ. ಸೋಮಶೇಖರ್
-
ದೇಶ19 hours agoಚೀನಾ-ಪಾಕ್ ಜಲಾಂತರ್ಗಾಮಿಗಳಿಗೆ ಭಾರತದ ಹೈಟೆಕ್ ಬ್ರಹ್ಮಾಸ್ತ್ರ! ಸಮುದ್ರದಾಳದಲ್ಲಿ ‘ಸೀಕ್ರೆಟ್ ಸೆನ್ಸಾರ್ ನೆಟ್ವರ್ಕ್’
-
ದೇಶ21 hours agoPoK ಪ್ರತಿಭಟನೆ ತೀವ್ರ: ‘ಗಡಿ ತೆರೆಯಿರಿ, ಮಾನವೀಯ ನೆರವು ನೀಡಿ’ ಎಂದು ಭಾರತದತ್ತ ಮೊರೆ
