Connect with us

ಕ್ರೀಡೆ

ಈ ಸಲ ಕಪ್​ ನಮ್ದೆನಾ?: ಹೀಗಿದೆ ನೋಡಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ

Full List of RCB Players: 2025ರಲ್ಲಿ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)​ ಟೂರ್ನಿಗೆ ಆರ್​ಸಿಬಿ ತನ್ನ ತಂಡವನ್ನು ಪ್ರಕಟಿಸಿದೆ. ಈ ಬಾರಿ ಉಳಿಸಿಕೊಂಡಿರುವ ಮತ್ತು ಕೈಬಿಟ್ಟಿರುವ ಆಟಗಾರರು ಇದರಲ್ಲಿದ್ದಾರೆ. ಪ್ರಸಕ್ತ ಸಾಲಿನ ಹರಾಜಿಗೆ 83 ಕೋಟಿ ರೂಪಾಯಿಗಳ ಬಜೆಟ್‌ನೊಂದಿಗೆ ಆಗಮಿಸಿದ್ದ, ಆರ್‌ಸಿಬಿ ಅನೇಕ ಉತ್ತಮ ಆಟಗಾರರನ್ನು ಪಡೆದಿದೆ.

ಐಪಿಎಲ್ ಹರಾಜು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನ.24 ಮತ್ತು 25ರ ಎರಡು ದಿನಗಳ ಕಾಲ ನಡೆಯಿತು. ಮೆಗಾ ಹರಾಜು ಪ್ರತೀ ನಾಲ್ಕು ವರ್ಷಗಳಿಗೊಮ್ಮೆ ನಡೆಯುತ್ತದೆ. ಈ ಹರಾಜಿನಲ್ಲಿ ಹಿರಿಯ ಮತ್ತು ಪ್ರತಿಭಾವಂತ ಆಟಗಾರರ ಖರೀದಿ ಪ್ರಕ್ರಿಯೆ ನಡೆಯುತ್ತದೆ. ಈ ಬಾರಿ ಮೆಗಾ ಹರಾಜಿನಲ್ಲಿ ಎಲ್ಲರ ಕಣ್ಣುಗಳು ಜನಪ್ರಿಯ ಐಪಿಎಲ್ ತಂಡ ಆರ್‌ಸಿಬಿ ಮೇಲಿತ್ತು.

ಹರಾಜಿಗೆ ಮೊದಲು ಆರ್‌ಸಿಬಿ ಕೇವಲ ಮೂವರು ಆಟಗಾರರನ್ನು ಉಳಿಸಿಕೊಂಡಿತ್ತು. ಇದರಲ್ಲಿ ವಿರಾಟ್ ಕೊಹ್ಲಿ ಸೇರಿದ್ದು ಅವರನ್ನು 21 ಕೋಟಿ ರೂಪಾಯಿಗೆ ಉಳಿಸಿಕೊಂಡಿತ್ತು. ಐಪಿಎಲ್ ಇತಿಹಾಸದಲ್ಲಿ 20 ಕೋಟಿ ರೂ.ಗಿಂತ ಹೆಚ್ಚು ಗಳಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಿದ್ದರು. ಮುಂದಿನ ಸೀಸನ್‌ನಿಂದ ಕೊಹ್ಲಿ ಮತ್ತೆ ತಂಡದ ಕ್ಯಾಪ್ಟನ್‌ ಆಗಬಹುದು ಎಂಬ ವರದಿಗಳಿವೆ. ಇನ್ನುಳಿದಂತೆ, ರಜತ್ ಪಾಟಿದಾರ್ ಅವರನ್ನು 11 ಕೋಟಿ ರೂ. ಮತ್ತು ಯಶ್ ದಯಾಳ್ ಅವರನ್ನು 4 ಕೋಟಿ ರೂ.ಗೆ ಆರ್‌ಸಿಬಿ ಉಳಿಸಿಕೊಂಡಿದೆ.

ಮೆಗಾ ಹರಾಜಿನಲ್ಲಿ ಲಿಯಾಮ್ ಲಿವಿಂಗ್‌ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್, ರಸಿಖ್ ದಾರ್ ಮತ್ತು ಸುಯ್ಯಾಶ್ ಶರ್ಮಾ ಅವರನ್ನು ಆರ್‌ಸಿಬಿ ಖರೀದಿಸಿದೆ. 8 ವಿದೇಶಿ ಆಟಗಾರರು ಸೇರಿದಂತೆ ಒಟ್ಟು 19 ಆಟಗಾರರು ಇದರಲ್ಲಿದ್ದಾರೆ. ಈಗ ತಂಡದಲ್ಲಿ ಒಟ್ಟು 25 ಆಟಗಾರರಿದ್ದು, 22 ಆಟಗಾರರ ಪಟ್ಟಿ ಇಂತಿದೆ.

ಕ್ರಮ ಸಂಖ್ಯೆಆಟಗಾರರುಖರೀದಿಸಿದ ಮೌಲ್ಯ(ರೂಪಾಯಿಗಳಲ್ಲಿ)
1ವಿರಾಟ್ ಕೊಹ್ಲಿ21 ಕೋಟಿ
2ರಜತ್ ಪಾಟಿದಾರ್11 ಕೋಟಿ
3ಯಶ್ ದಯಾಳ್5 ಕೋಟಿ
4ಲಿಯಾಮ್ ಲಿವಿಂಗ್ಸ್ಟೋನ್8.75 ಕೋಟಿ
5ಫಿಲ್ ಸಾಲ್ಟ್11.50 ಕೋಟಿ
6ಜಿತೇಶ್ ಶರ್ಮಾ11.00 ಕೋಟಿ
7ಜೋಶ್ ಹ್ಯಾಜಲ್‌ವುಡ್12.50 ಕೋಟಿ
8ರಸಿಖ್ ದಾರ್6 ಕೋಟಿ
9ಸುಯ್ಯಾಶ್ ಶರ್ಮಾ2.60 ಕೋಟಿ
10ಕೃನಾಲ್ ಪಾಂಡ್ಯ6.75 ಕೋಟಿ
11ಭುವನೇಶ್ವರ್ ಕುಮಾರ್10.75 ಕೋಟಿ
12ಸ್ವಪ್ನಿಲ್ ಸಿಂಗ್50 ಲಕ್ಷ
13ಟಿಮ್ ಡೇವಿಡ್3 ಕೋಟಿ
14ರೊಮಾರಿಯೋ ಶೆಫರ್ಡ್1.5 ಕೋಟಿ
15ನುವಾನ್ ತುಷಾರ್​1.4 ಕೋಟಿ
16ಜೇಕಬ್ ಬೆತೆಲ್​2.6 ಕೋಟಿ
17ಮನೋಜ್ ಭಾಂಡಗೆ30 ಲಕ್ಷ
18ದೇವದತ್ ಪಡಿಕ್ಕಲ್2 ಕೋಟಿ
19ಸ್ವಸ್ತಿಕ್ ಚಿಕಾರ30 ಲಕ್ಷ
20ಲುಂಗಿ ಎನ್​ಗಿಡಿ1 ಕೋಟಿ
21ಅಭಿನಂದನ್ ಸಿಂಗ್30 ಲಕ್ಷ
22ಮೋಹಿತ್ ರಾಠಿ30 ಲಕ್ಷ

ಆರ್‌ಸಿಬಿ ಕೈಬಿಟ್ಟ ಆಟಗಾರರು: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ರಾಜನ್ ಕುಮಾರ್ ಶರ್ಮಾ, ಹಿಮಾನ್ಸ್ ಶರ್ಮಾ ಗ್ರೀನ್, ಅಲ್ಜಾರಿ ಜೋಸೆಫ್, ಲಾಕಿ ಫರ್ಗುಸನ್ ಮತ್ತು ಸ್ವಪ್ನಿಲ್ ಸಿಂಗ್.

ಕ್ರೀಡೆ

ಬ್ಯಾಡ್ಮಿಂಟನ್ ಆಡುತ್ತಾ ಬೆಳೆದವಳಾಗಿ ಜೀವನವನ್ನು ದೈಹಿಕವಾಗಿ, ಮಾನಸಿಕವಾಗಿ ಹೇಗೆ ರೂಪಿಸುತ್ತದೆ ನಾನು ನೇರವಾಗಿ ಅನುಭವಿಸಿದ್ದೇನೆ ದೀಪಿಕಾ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಮ್ಮ ತಂದೆ, ಬ್ಯಾಡ್ಮಿಂಟನ್ ಲೆಜೆಂಡ್​​ ಪ್ರಕಾಶ್ ಪಡುಕೋಣೆ ಅವರ 70ನೇ ಹುಟ್ಟುಹಬ್ಬವನ್ನಿಂದು ಬಹಳ ವಿಶೇಷವಾಗಿ ಆಚರಿಸಿದರು.

‘ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್’ (ಪಿಎಸ್​ಬಿ) ಬೆಂಗಳೂರು, ಎನ್​​ಸಿಆರ್, ಮುಂಬೈ, ಚೆನ್ನೈ, ಜೈಪುರ, ಪುಣೆ, ನಾಸಿಕ್, ಮೈಸೂರು, ಪಾಣಿಪತ್, ಡೆಹ್ರಾಡೂನ್, ಉದಯಪುರ, ಕೊಯಮತ್ತೂರು, ಸಾಂಗ್ಲಿ ಮತ್ತು ಸೂರತ್ ಸೇರಿದಂತೆ 18 ನಗರಗಳಲ್ಲಿ 75ಕ್ಕೂ ಹೆಚ್ಚು ತರಬೇತಿ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ ಎಂದು ಇನ್​​​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾದ ಮಾಧ್ಯಮ ಪ್ರಕಟಣೆ ಮೂಲಕ ಹೇಳಿದ್ದಾರೆ.

“ಬ್ಯಾಡ್ಮಿಂಟನ್‌ನ ಸಂತೋಷ ಮತ್ತು ಶಿಸ್ತನ್ನು ಎಲ್ಲಾ ವರ್ಗದ ಜನರಿಗೆ ತಲುಪಿಸುವುದು ನಮ್ಮ ಆಶಯ” ಎಂದೂ ಸಹ ದೀಪಿಕಾ ತಿಳಿಸಿದ್ದಾರೆ. ಈ ಮೂಲಕ ಕೇಂದ್ರಗಳ ಸಂಖ್ಯೆ ವಿಸ್ತರಿಸುವ ಬಗ್ಗೆ ಮಾಹಿತಿ ಒದಗಿಸಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್​​ನಲ್ಲಿ, “ಬ್ಯಾಡ್ಮಿಂಟನ್ ಆಡುತ್ತಾ ಬೆಳೆದವಳಾಗಿ, ಈ ಕ್ರೀಡೆಯು ಒಬ್ಬರ ಜೀವನವನ್ನು ದೈಹಿಕವಾಗಿ, ಮಾನಸಿಕವಾಗಿ ಮತ್ತು ಭಾವನಾತ್ಮಕವಾಗಿ ಹೇಗೆ ರೂಪಿಸುತ್ತದೆ ಎಂಬುದನ್ನು ನಾನು ನೇರವಾಗಿ ಅನುಭವಿಸಿದ್ದೇನೆ. ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ (PSB) ಮೂಲಕ, ಬ್ಯಾಡ್ಮಿಂಟನ್‌ನ ಸಂತೋಷ ಮತ್ತು ಶಿಸ್ತನ್ನು ಎಲ್ಲಾ ಹಂತದ ಜನರಿಗೆ ತಲುಪಿಸಲು ಮತ್ತು ಆರೋಗ್ಯಕರ, ಫೋಕಸ್ಡ್​​ ಮತ್ತು ಕ್ರೀಡೆಯಿಂದ ಪ್ರೇರಿತವಾದ ಪೀಳಿಗೆಯನ್ನು ನಿರ್ಮಿಸಲು ನಾವು ಆಶಿಸುತ್ತೇವೆ. ಅಪ್ಪಾ, ನಿಮ್ಮನ್ನು ಚೆನ್ನಾಗಿ ತಿಳಿದಿರುವವರಿಗೆ ಈ ಕ್ರೀಡೆಯ ಬಗ್ಗೆ ನಿಮ್ಮ ಉತ್ಸಾಹವೂ ತಿಳಿದಿದೆ. 70ನೇ ವಯಸ್ಸಿನಲ್ಲಿಯೂ ನೀವು ಬ್ಯಾಡ್ಮಿಂಟನ್​ಗೆ ನಿಮ್ಮನ್ನು ಸಮರ್ಪಿಸಿದ್ದೀರಿ. ನಿಮ್ಮ ಉತ್ಸಾಹವನ್ನು ನಿಜವಾಗಿಸಲು ನಾವು ಬದ್ಧರಾಗಿದ್ದೇವೆ. ಎಲ್ಲರಿಗಾಗಿ ಬ್ಯಾಡ್ಮಿಂಟನ್! 70ನೇ ಹುಟ್ಟುಹಬ್ಬದ ಶುಭಾಶಯಗಳು ಪಪ್ಪಾ!” ಎಂದು ಬರೆದುಕೊಂಡಿದ್ದಾರೆ.

ನಟಿ ಶೇರ್ ಮಾಡಿದ ಪ್ರಕಟಣೆಯಲ್ಲಿ, ಪಿಎಸ್‌ಬಿಯ ಮಾರ್ಗದರ್ಶಕ ಮತ್ತು ಸಲಹೆಗಾರ ಪ್ರಕಾಶ್ ಪಡುಕೋಣೆ ತಮ್ಮ ಮನದಾಳವನ್ನೂ ಹಂಚಿಕೊಂಡರು. “ಕ್ರೀಡೆಯು ಬೆಳವಣಿಗೆಯ ಅವಿಭಾಜ್ಯ ಅಂಗವಾಗಿದೆ. ಇದು ಶಿಸ್ತು, ಸ್ಥಿತಿಸ್ಥಾಪಕತ್ವ ಮತ್ತು ಗೆಲುವಿನ ಮನಸ್ಥಿತಿಯನ್ನು ಹುಟ್ಟಿಸುತ್ತದೆ. ಪಿಎಸ್‌ಬಿಯೊಂದಿಗೆ, ಗುಣಮಟ್ಟದ ತರಬೇತಿಯನ್ನು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವುದು, ತಳಮಟ್ಟದಿಂದ ಪ್ರತಿಭೆಯನ್ನು ಪೋಷಿಸುವುದು ಮತ್ತು ಭಾರತೀಯ ಬ್ಯಾಡ್ಮಿಂಟನ್‌ನ ಭವಿಷ್ಯಕ್ಕೆ ಬಲವಾದ ಅಡಿಪಾಯವನ್ನು ಹಾಕುವುದು ನಮ್ಮ ಗುರಿ” ಎಂದು ಹೇಳಿದರು.

ಭಾರತದ 18 ನಗರಗಳಲ್ಲಿ 75 ಕೇಂದ್ರಗಳು ಆರಂಭಗೊಂಡಿದ್ದು, ಈ ವರ್ಷದ ಕೊನೆಗೆ 100 ಕೇಂದ್ರಗಳು ಮತ್ತು 2027ರ ಹೊತ್ತಿಗೆ 250 ಕೇಂದ್ರಗಳಿಗೆ ವಿಸ್ತರಿಸುವ ಗುರಿಯನ್ನು ‘ಪಡುಕೋಣೆ ಸ್ಕೂಲ್​ ಆಫ್​​ ಬ್ಯಾಡ್ಮಿಂಟನ್’ ಹೊಂದಿದೆ. ದೀಪಿಕಾ ಪಡುಕೋಣೆ ಇದರ ಸಂಸ್ಥಾಪಕಿಯಾದರೆ, ಪ್ರಕಾಶ್​ ಪಡುಕೋಣೆ ಮಾರ್ಗದರ್ಶಕರಾಗಿ ಪಿಎಸ್​ಬಿಯ ಭಾಗವಾಗಿದ್ದಾರೆ

Continue Reading

ಕ್ರೀಡೆ

ಕುಮಾರಸ್ವಾಮಿ ಸಿಡಿಸಿದ ಬಾಂಬ್‌ಗೆ ಗೋವಿಂದರಾಜ್ ತಲೆದಂಡ!

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಸಿಡಿಸಿದ ಬಾಂಬ್‌ಗೆ ಗೋವಿಂದರಾಜ್ (Govindraj) ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ (Chinnaswamy Stadium Stampede Case) ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ ಮಾಡಲಾಗಿದೆ.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ತಕ್ಷಣದಿಂದ ಬಿಡುಗಡೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಆದೇಶ ಹೊರಡಿಸಿದ್ದಾರೆ.

ಗೋವಿಂದರಾಜ್ ಅವರು ಜೂನ್‌ 1, 2023 ರಿಂದ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಆರ್‌ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಸನ್ಮಾನ ಮಾಡುವಂತೆ ಸಿದ್ದರಾಮಯ್ಯನವರಿಗೆ ಒತ್ತಡ ಹೇರಿದ್ದೇ ಗೋವಿಂದರಾಜ್‌ ಎಂಬ ಆರೋಪ ಈಗ ಕೇಳಿ ಬಂದಿದೆ.

ಕುಮಾರಸ್ವಾಮಿ ಹೇಳಿದ್ದೇನು?
ಜೂನ್‌ 4ರ ಬೆಳಗ್ಗೆ ಸಿಎಂ (CM Siddaramaiah) ಅವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌ ಅವರು ಪೊಲೀಸ್‌ ಆಯುಕ್ತರಿಗೆ ಕರೆ ಮಾಡಿ ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ನೀಡಬೇಕು ಎಂದು ಒತ್ತಡ ಹಾಕುತ್ತಾರೆ. ಇದಕ್ಕೆ ಆಯುಕ್ತರು, ಬೆಳಗ್ಗೆಯವರೆಗೆ ಪೊಲೀಸರು ನಿದ್ದೆಗೆಟ್ಟು ಕೆಲಸ ಮಾಡಿದ್ದಾರೆ. ಎರಡು ಮೂರು ಕಡೆ ಕಾರ್ಯಕ್ರಮ ಮಾಡಿದರೆ ಭದ್ರತೆ ನೀಡಲು ಕಷ್ಟವಾಗುತ್ತದೆ. ಒಂದು ಕಡೆ ಕಾರ್ಯಕ್ರಮ ಮಾಡಿದರೆ ಬಂದೋಬಸ್ತ್‌ ಕಲ್ಪಿಸಲು ಸಾಧ್ಯವಾಗುತ್ತದೆ. ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಹೇಳುತ್ತಾರೆ.

ಆಯುಕ್ತರ ಪ್ರತಿಕ್ರಿಯೆ ಬಳಿಕ ಗೋವಿಂದರಾಜ್‌ ಅವರು ಸಿಎಂ ಬಳಿಗೆ ಹೋಗುತ್ತಾರೆ. ಸಿಎಂ ಅವರು ಆಯುಕ್ತರನ್ನು ಕರೆಸಿ, ನಾನು ಈ ರಾಜ್ಯದ ಸಿಎಂ. ಆದೇಶ ಮಾಡುತ್ತಿದ್ದೇನೆ ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ಕೊಡಿ ಎಂದು ಸೂಚಿಸುತ್ತಾರೆ. ಅನಿವಾರ್ಯವಾಗಿ ಪೊಲೀಸ್ ಕಮಿಷನರ್ ವಿಧಾನಸೌಧಕ್ಕೆ ಬಿಗಿ ಭದ್ರತೆ ಹಾಕುತ್ತಾರೆ. ಆದರೆ ಯಾರಿಗೂ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸೂಚನೆ ಕೊಟ್ಟಿರುವುದಿಲ್ಲ. ಕಾಟಾಚಾರಕ್ಕೆ ಮೂರ್ನಾಲ್ಕು ತುಕಡಿ ಭದ್ರತೆ ಹಾಕಿರುತ್ತಾರೆ. ವಿಧಾನಸೌಧದಲ್ಲೇ ಕಾರ್ಯಕ್ರಮ ಮಾಡಬೇಕು, ನಾನು ಚಿನ್ನಸ್ವಾಮಿಗೆ ಹೋಗುವುದಿಲ್ಲ ಎಂದು ಸಿಎಂ ಹೇಳಿದ್ದರಿಂದ ಹೆಚ್ಚಿನ ಸಂಖ್ಯೆ ಪೊಲೀಸರನ್ನು ನಿಯೋಜಿಸಲಾಗುತ್ತದೆ ಎಂದು ಗಂಭೀರವಾದ ಆರೋಪ ಮಾಡಿದ್ದರು.

Continue Reading

ಕ್ರೀಡೆ

2026 ರ ಫುಟ್ ಬಾಲ್ ವಿಶ್ವಕಪ್ ಗೆ ಅರ್ಹತೆ ಪಡೆದ 48 ತಂಡಗಳು, ಭಾರತದ ಕಥೆ ಏನು?

2026ರಲ್ಲಿ ನಡೆಯಲಿರುವ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಗೆ ಅಮೆರಿಕ, ಮೆಕ್ಸಿಕೊ ಮತ್ತು ಕೆನಡಾ ಜಂಟಿಯಾಗಿ ಆತಿಥ್ಯವಹಿಸಲಿವೆ, ಈ ಬಾರಿಯ ವಿಶ್ವಕಪ್ ನಲ್ಲಿ ಬರೋಬ್ಬರಿ 48 ತಂಡಗಳು ಭಾಗವಹಿಸಲಿವೆ,
2026 ಫುಟ್ಬಾಲ್ ವಿಶ್ವಕಪ್ ಅರ್ಹತಾ ಪಂದ್ಯಗಳು ಮುಗಿದ್ದು, ಉಜ್ಬಿಕಿಸ್ತಾನ್, ಜೋರ್ಡಾನ್, ಮತ್ತು ದಕ್ಷಿಣ ಕೊರಿಯಾ ಅರ್ಹತೆ ಪಡೆದಿದೆ, ಭಾರತ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ,
43 ದೇಶದ ತಂಡಗಳು ಅರ್ಹತಾ ಪ್ರಕ್ರಿಯೆಯ ತಮ್ಮ ಸ್ಧಾನಗಳನ್ನು ಪಡೆಯುತ್ತವೆ, ಆರು ತಂಡಗಳನ್ನು ಅಂತಾರಾಷ್ಟ್ರೀಯ ಫ್ಲೇಆಫ್ ಗಳಲ್ಲಿ ಇನ್ನೆರಡು ತಮ್ಮ ಸ್ಧಾನವನ್ನು ಭದ್ರಪಡಿಸಿಕೊಳ್ಳುತ್ತವೆ, ಅಮೆರಿಕ, ಮೆಕ್ಸಿಕೋ, ಕೆನಡಾ ದೇಶಗಳು ಆತಿಥೇಯ ತಂಡವಾರುವುದರಿಂದ ನೇರವಾಗಿ ಅರ್ಹತೆ ಪಡೆದಿವೆ,
ಏಷ್ಯಾದ ಎಂಟು, ಆಫ್ರಿಕಾ ಖಂಡದಿಂದ ಒಂಬತ್ತು ತಂಡಗಳು ನೇರವಾಗಿ ಸ್ಧಾನ ಪಡೆದಿವೆ, ಉತ್ತರ ಮತ್ತು ಮಧ್ಯ ಅಮೆರಿಕ ಮತ್ತು ಕೆರಿಬಿಯನ್ ಮೂರು ದೇಶಗಳು ಸ್ಧಾನ ಪಡೆದಿವೆ,
ದಕ್ಷಿಣ ಅಮೆರಿಕಾ ಆರು ತಂಡಗಳು ನೇರವಾಗಿ ಆರ್ಹತೆ ಪಡೆದಿದ್ದರೆ, ಇನ್ನೊಂದು ತಂಡವನ್ನು ಇಂಟರ್ ಕಾಂಟಿನೆಂಟಲ್ ಫ್ಲೇಆಫ್ ಗೆ ಕಳುಹಿಸುತ್ತದೆ, ನ್ಯೂಜಿಲ್ಯಾಂಡ್ ಜೊತೆಗೆ ಯುರೋಪ್ ನ 16 ತಂಡಗಳು ವಿಶ್ವಕಪ್ ಆಡಲಿವೆ

Continue Reading

Trending