ಬೆಂಗಳೂರು

ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇರಬಾರದು-ವಿವಾದ ಸೃಷ್ಟಿಸಿದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ!

ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಬೋರ್ಡ್ ವಿರುದ್ಧದ ಹೋರಾಟದ ಬಗ್ಗೆ ಮಾತನಾಡುವ ಭರದಲ್ಲಿ ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ, ವಕ್ಫ್ ಬೋರ್ಡ್ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ವಾಮೀಜಿ ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ಹೇಳಿಕೆ ನೀಡಿದ್ದಾರೆ,
ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾತನಾಡಿದ ಚಂದ್ರಶೇಖರನಾಥ ಸ್ವಾಮೀಜಿ ನಮ್ಮ ದೇಶದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ವಿವಾದ ಸೃಷ್ಟಿಸಿದ್ದಾರೆ,
ನಾವೆಲ್ಲರೂ ಸೇರಿ ನಮಾಮ್ ದೇಶದಲ್ಲಿ ವಕ್ಫ್ ಮಂಡಳಿ ಇಲ್ಲದಂತೆ ಮಾಡಬೇಕು, ಈಗಾಗಲೇ ಆತಂಕದಲ್ಲಿರುವ ರೈತರ ಪರವಾಗಿ ಹೋರಾಟವನ್ನು ಮಾಡೋಣ, ಸರ್ಕಾರ ಬಿದ್ದು ಹೋದರು ಪರವಾಗಿಲ್ಲ ನಾವೆಲ್ಲರೂ ಹೋರಾಡೋಣ ಎಂದು ಕರೆ ಕೊಟ್ಟಿದ್ದಾರೆ,

Leave a Reply

Your email address will not be published. Required fields are marked *

Trending

Exit mobile version