Connect with us

ರಾಜಕೀಯ

ಮುಂದಿನ ಸಲ ಯತ್ನಾಳ್‌ಗೆ ಸೋಲು ಖಚಿತ – ಸೋಲದಿದ್ರೆ ಮಠ ತ್ಯಾಗ: ಹುಲಸೂರು ಶ್ರೀ ಬಹಿರಂಗ ಸವಾಲ್

Published

on

ಬೀದರ್: ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ವಾಪಸ್ ಪಡೆಯದೇ ಇದ್ರೆ ಮುಂದಿನ ಸಲ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ (Basanagouda Patil Yatnal) ಸೋಲು ಖಚಿತ, ಒಂದು ವೇಳೆ ಅವರು ಸೋಲದೆ ಇದ್ರೆ ನಾನು ನನ್ನ ಮಠ ತ್ಯಾಗ ಮಾಡುತ್ತೇನೆ ಎಂದು ಬಸವಕಲ್ಯಾಣದಲ್ಲಿ ಹುಲಸೂರು ಮಠದ ಪೀಠಾಧಿಪತಿ ಶ್ರೀ ಶಿವಾನಂದ ಸ್ವಾಮೀಜಿ (Sri Sivananda Swamiji )ಅವರು ಬಹಿರಂಗ ಸವಾಲ್ ಹಾಕಿದ್ದಾರೆ.

ಬಸವಕಲ್ಯಾಣದಲ್ಲಿ (Basavakalyana) ನಡೆದ ಶರಣ ಸಂಸ್ಕ್ರತಿ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯತ್ನಾಳ್‌ಗೆ ಮಾನ ಮರ್ಯಾದೆ ಇದ್ರೆ ಲಿಂಗಾಯತರಲ್ಲಿ ಕ್ಷೆಮೆ ಕೇಳಬೇಕು. ಇಲ್ಲಾವಾದ್ರೆ ರಾಜ್ಯದ ಲಿಂಗಾಯತರು (Lingayats) ಇಲ್ಲಿಂದ ಯತ್ನಾಳ್‌ರನ್ನು ಓಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ ಎಂದು ಕಿಡಿ ಕಾರಿದ್ದಾರೆ.

ಬಸವಣ್ಣನವರ ಬಗ್ಗೆ ಹಗುರವಾಗಿ ಮಾತನಾಡೋರು ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು. ಹೆಸರು ಮಾತ್ರ ಬಸವರಾಜ ಆದ್ರೆ ನೀನು ಬೆಂಕಿ ಹಚ್ಚುವ ಬಸವರಾಜ. ಬಸವಣ್ಣನವರು ಸೇರಿದಂತೆ ಎಲ್ಲರ ಬಗ್ಗೆ ಹಗುರವಾಗಿ ಮತಾನಾಡುತ್ತಿದ್ದು, ಯತ್ನಾಳ್‌ ತಾನೊಬ್ಬನೇ ತೀಸ್ಮರ್ಕಾ ಎಂದು ತಿಳಿದುಕೊಂಡಿದ್ದಾನೆ ಎಂದು ಲೇವಡಿ ಮಾಡಿದ್ದಾರೆ.

ನಾನು ಶ್ರೀಮಂತ, ನಾನು ಎಂಎಲ್‌ಎ ದೊಡ್ಡವ ಎಂದು ತಿಳಿದುಕೊಂಡಿದ್ದು, ಜನಗಳಿಗೆ ಗೌರವ ಕೊಡಲಿಲ್ಲಾ ಅಂದ್ರೆ ನೀನ್ಯಾವ ಸೀಮೆಯ ಶಾಸಕ? ಬಸವಣ್ಣನವರ ವಿರುದ್ಧ ಅವಹೇಳನ ಹೇಳಿಕೆ ವಾಪಸ್ ಪಡೆಯಬೇಕು, ಇಲ್ಲವಾದ್ರೆ ಮುಂದಿನ ಸಲ‌‌‌‌ ನಿಮಗೆ ಸೋಲು ಗ್ಯಾರಂಟಿ ಎಂದು ಭವಿಷ್ಯ ನುಡಿದಿದ್ದಾರೆ.

ದೇಶ

ಕೊಲ್ಲೂರು ಮೂಕಾಂಬಿಕೆಯಲ್ಲಿ ವಿಜಯ್ ವಿಶೇಷ ಪೂಜೆ: ‘ಶತ್ರು ಸಂಹಾರ ಸಂಕಲ್ಪ’ ಭಾರೀ ಚರ್ಚೆ

Published

on

ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ಖ್ಯಾತ ನಟ ದಳಪತಿ ವಿಜಯ್ ಅವರು ಕರ್ನಾಟಕದ ಪ್ರಸಿದ್ಧ ಶಕ್ತಿಪೀಠವಾದ Kollur Sri Mookambika Templeಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿರುವುದು ರಾಜಕೀಯ ಮತ್ತು ಸಿನಿಮಾ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ದೇವಿಯ ಸನ್ನಿಧಿಯಲ್ಲಿ ಅವರು ‘ಶತ್ರು ಸಂಹಾರ ಸಂಕಲ್ಪ’ ಮಾಡಿರುವರೆಂಬ ಸುದ್ದಿಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಧ್ಯಾಹ್ನ Mangaluru International Airportಗೆ ಆಗಮಿಸಿದ ವಿಜಯ್, ಅಲ್ಲಿಂದ ಕೊಲ್ಲೂರು ಕಡೆ ಪ್ರಯಾಣ ಬೆಳೆಸಿದರು. ಮಾರ್ಗಮಧ್ಯೆ ಅತಿಥಿ ಗೃಹದಲ್ಲಿ ತಂಗಿ ಸಾಂಪ್ರದಾಯಿಕ ಉಡುಪಿಗೆ ಬದಲಾದ ಬಳಿಕ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಾಲಯದ ವತಿಯಿಂದ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಿ ಗೌರವಿಸಲಾಯಿತು.

ಗರ್ಭಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿಜಯ್, ದೇವಿಯ ಮುಂದೆ ಭಕ್ತಿಯಿಂದ ಪ್ರಾರ್ಥನೆ ನಡೆಸಿದರು. ಈ ವೇಳೆ ‘ಶತ್ರು ಸಂಹಾರ ಸಂಕಲ್ಪ’ ನೆರವೇರಿಸಿ ರಕ್ಷಾಸೂತ್ರ ಕಟ್ಟಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ರಾಜಕೀಯವಾಗಿ ಸಕ್ರಿಯರಾಗಿರುವ ಸಂದರ್ಭದಲ್ಲಿ ಈ ವಿಶೇಷ ಪೂಜೆ ನಡೆಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ದರ್ಶನದ ಬಳಿಕ ವಿಜಯ್ ತಮ್ಮೊಂದಿಗೆ ತಂದಿದ್ದ ವಿಶೇಷ ಬೆಳ್ಳಿಯ ಖಡ್ಗವನ್ನು ದೇವಿಗೆ ಸಮರ್ಪಿಸಿದ್ದಾರೆ ಎನ್ನಲಾಗಿದೆ. ಈ ಸಮರ್ಪಣೆ ಭಕ್ತಿಯ ಸಂಕೇತವಾಗಿ ಕಂಡುಬಂದರೂ, ‘ಶತ್ರು ಸಂಹಾರ ಸಂಕಲ್ಪ’ ಕುರಿತ ಚರ್ಚೆಯೇ ಹೆಚ್ಚು ಗಮನ ಸೆಳೆಯುತ್ತಿದೆ.

ರಾಜಕೀಯ ಕ್ಷೇತ್ರದಲ್ಲಿ ಹೊಸ ಸವಾಲುಗಳನ್ನು ಎದುರಿಸುತ್ತಿರುವ ವಿಜಯ್ ಅವರ ಈ ಭೇಟಿ ಕೇವಲ ಧಾರ್ಮಿಕ ಕಾರ್ಯಕ್ರಮವೇ ಅಥವಾ ಅದರ ಹಿಂದೆ ರಾಜಕೀಯ ಸಂದೇಶವೂ ಇದೆಯೇ ಎಂಬ ಪ್ರಶ್ನೆಗಳು ಮೂಡಿವೆ. ಆದರೆ ಈ ಕುರಿತು ವಿಜಯ್ ಅಥವಾ ಅವರ ಕಚೇರಿಯಿಂದ ಯಾವುದೇ ಅಧಿಕೃತ ಸ್ಪಷ್ಟನೆ ಹೊರಬಂದಿಲ್ಲ. ಇದರ ನಡುವೆಯೇ ಅಭಿಮಾನಿಗಳು ಹಾಗೂ ರಾಜಕೀಯ ವಲಯದಲ್ಲಿ ವಿವಿಧ ರೀತಿಯ ವ್ಯಾಖ್ಯಾನಗಳು ಕೇಳಿಬರುತ್ತಿವೆ.

Continue Reading

ದೇಶ

ಟಿಎಂಸಿಯಲ್ಲಿ ಬಂಡಾಯ ಸ್ಫೋಟ: ‘ಅಭಿಷೇಕ್ ಬೇಕೋ ನಾವು ಬೇಕೋ?’ ದೀದಿಗೆ ಕಲ್ಯಾಣ್ ಬ್ಯಾನರ್ಜಿ ಸವಾಲು

Published

on

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳು ಬಹಿರಂಗವಾಗಿ ಸ್ಫೋಟಗೊಂಡಿವೆ. ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, “ದೀದಿ, ಅಭಿಷೇಕ್ ಬೇಕೋ ಅಥವಾ ನಾವು ಬೇಕೋ ಆಯ್ಕೆ ಮಾಡಿ” ಎಂದು ನೇರ ಸವಾಲು ಹಾಕಿದ್ದಾರೆ.

ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ನಕಲಿ ಸಹಿ ಸಂಗ್ರಹ ಪ್ರಕರಣದಲ್ಲಿ ಅಭಿಷೇಕ್ ಬ್ಯಾನರ್ಜಿ ಪರ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದ ಕಲ್ಯಾಣ್ ಬ್ಯಾನರ್ಜಿ ಅವರನ್ನು ಏಕಾಏಕಿ ಬದಲಾಯಿಸಿರುವುದು ಈ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕ್ರಮವನ್ನು ಅವಮಾನಕರ ಎಂದು ಬಣ್ಣಿಸಿರುವ ಅವರು, ಪ್ರಕರಣದ ತುರ್ತು ವಿಚಾರಣೆಗೆ ರಾತ್ರಿಯಿಡೀ ಸಿದ್ಧತೆ ನಡೆಸಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರೂ, ನಂತರ ತಮ್ಮನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಅಭಿಷೇಕ್ ಬ್ಯಾನರ್ಜಿ ಅವರ ನಡೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಲ್ಯಾಣ್ ಬ್ಯಾನರ್ಜಿ, “ಅವರು ಇತರರಿಗೆ ಗೌರವ ನೀಡುವುದಿಲ್ಲ. ಎಲ್ಲರನ್ನೂ ತಮ್ಮಗಿಂತ ಕೀಳಾಗಿ ನೋಡುತ್ತಾರೆ. ಇದೇ ಕಾರಣದಿಂದ ಪಕ್ಷದ ಹಲವಾರು ನಾಯಕರು ದೂರವಾಗುತ್ತಿದ್ದಾರೆ” ಎಂದು ಹೇಳಿದ್ದಾರೆ. ಅಲ್ಲದೆ, ಈ ವಿಷಯವನ್ನು ಮಮತಾ ಬ್ಯಾನರ್ಜಿ ಅವರ ಗಮನಕ್ಕೂ ತಂದಿರುವುದಾಗಿ ತಿಳಿಸಿದ್ದಾರೆ.

ಇದಕ್ಕೂ ನಡುವೆ ಟಿಎಂಸಿಯಲ್ಲಿ ರಾಜೀನಾಮೆಗಳ ಸರಣಿ ಮುಂದುವರಿದಿದೆ. ಹಲವು ಸಂಸದರು ಹಾಗೂ ಶಾಸಕರು ಪಕ್ಷದ ನಾಯಕತ್ವದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಕೆಲವರು ಪಕ್ಷ ತೊರೆಯುವ ನಿರ್ಧಾರಕ್ಕೂ ಬಂದಿದ್ದಾರೆ ಎನ್ನಲಾಗಿದೆ. ಇತ್ತೀಚಿನ ಚುನಾವಣಾ ಸೋಲಿನ ಬಳಿಕ ಪಕ್ಷದೊಳಗಿನ ಭಿನ್ನಮತ ಮತ್ತಷ್ಟು ತೀವ್ರಗೊಂಡಿದ್ದು, ಬಂಡಾಯ ಚಟುವಟಿಕೆಗಳು ಹೆಚ್ಚಾಗಿವೆ.

ಈ ಬೆಳವಣಿಗೆಗಳು ಮಮತಾ ಬ್ಯಾನರ್ಜಿ ಅವರಿಗೆ ದೊಡ್ಡ ರಾಜಕೀಯ ಸವಾಲಾಗಿ ಪರಿಣಮಿಸಿದ್ದು, ಪಕ್ಷದ ಮೇಲಿನ ಹಿಡಿತ ದುರ್ಬಲವಾಗುತ್ತಿರುವ ಲಕ್ಷಣಗಳು ಗೋಚರಿಸುತ್ತಿವೆ. ಟಿಎಂಸಿಯ ಭವಿಷ್ಯದ ಬಗ್ಗೆ ಈಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ.

Continue Reading

ದೇಶ

‘ನನಗೆ ಡಬಲ್ ಸಮಾಧಾನ ಸಿಕ್ಕಿದೆ’: ಸಿಎಂ ಹುದ್ದೆ ಚರ್ಚೆಗೆ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ

Published

on

ಬೆಂಗಳೂರು: ತಮ್ಮ ಹಾಗೂ ಮಾಜಿ ಮುಖ್ಯಮಂತ್ರಿ Siddaramaiah ನಡುವೆ ಭಿನ್ನಾಭಿಪ್ರಾಯವಿದೆ ಎಂಬ ಸುದ್ದಿಗಳನ್ನು ಸಚಿವ Satish Jarkiholi ತಳ್ಳಿಹಾಕಿದ್ದು, ಕೆಲ ಐಟಿ ಸೆಲ್‌ಗಳು ಅನಗತ್ಯವಾಗಿ ಈ ವಿಚಾರವನ್ನು ದೊಡ್ಡದಾಗಿಸಿವೆ ಎಂದು ಹೇಳಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೂ ಸಿದ್ದರಾಮಯ್ಯ ಅವರಿಗೂ ಭಿನ್ನಾಭಿಪ್ರಾಯ ಇದೆ ಎಂದು ಯಾರು ಹೇಳಿದರು? ಈ ಬಗ್ಗೆ ನಾನು ಮೊದಲಿನಿಂದಲೂ ಸ್ಪಷ್ಟಪಡಿಸುತ್ತಿದ್ದೇನೆ. ನಮ್ಮ ನಡುವೆ ಯಾವುದೇ ಗೊಂದಲ ಇಲ್ಲ. ಕೆಲವರು ಹೆಚ್ಚಿನ ಪ್ರಚಾರ ನೀಡಿ ಅನಗತ್ಯ ಚರ್ಚೆಗೆ ಕಾರಣರಾಗಿದ್ದಾರೆ” ಎಂದು ಹೇಳಿದರು.

ಅಹಿಂದ ಸಂಘಟನೆ ಕುರಿತಂತೆ ಮಾತನಾಡಿದ ಜಾರಕಿಹೊಳಿ, ಅದು ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಿಗೆ ಸೀಮಿತವಾಗಿಲ್ಲ. ಪಕ್ಷದ ಹೊರತಾಗಿಯೂ ಸಾಮಾಜಿಕ ಸಂಘಟನೆಯಾಗಿ ತನ್ನ ಕೆಲಸವನ್ನು ಮುಂದುವರಿಸಲಿದೆ ಎಂದು ಸ್ಪಷ್ಟಪಡಿಸಿದರು. “ಅಹಿಂದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ನಿರಂತರವಾಗಿ ಕೆಲಸ ಮಾಡುತ್ತೇನೆ” ಎಂದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ಮುಖ್ಯಮಂತ್ರಿ ಹುದ್ದೆಯ ಬಗ್ಗೆ ನಡೆಯುತ್ತಿರುವ ಚರ್ಚೆಗಳಿಗೆ ಪ್ರತಿಕ್ರಿಯಿಸಿದ ಅವರು, “ಅಧ್ಯಕ್ಷರಾಗಿಯೇ ಪಕ್ಷದ ಕೆಲಸ ಮಾಡಬೇಕು ಎಂಬ ನಿಯಮವಿಲ್ಲ. ಪಕ್ಷಕ್ಕಾಗಿ ದುಡಿಯುವವರಿಗೆ ಅಧಿಕಾರ ಸಿಗಲೇಬೇಕು. ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕೆಲಸ ಮಾಡಿದವರಿಗೆ ಪಕ್ಷ ಸೂಕ್ತ ಜವಾಬ್ದಾರಿ ನೀಡಿದೆ” ಎಂದು ಹೇಳಿದರು.

2028ರ ನಾಯಕತ್ವದ ಪ್ರಶ್ನೆಗೆ ಉತ್ತರಿಸಿದ ಜಾರಕಿಹೊಳಿ, “ಇನ್ನೂ ಚುನಾವಣೆಗೆ ಸಾಕಷ್ಟು ಸಮಯವಿದೆ. ಮಗು ಹುಟ್ಟುವ ಮುನ್ನವೇ ಅದರ ಬಗ್ಗೆ ಚರ್ಚೆ ಮಾಡುವಂತಾಗಿದೆ. ನನಗೆ ಈಗಾಗಲೇ ಸಚಿವ ಸ್ಥಾನ ಸಿಕ್ಕಿದ್ದು, ಅದರಿಂದ ಸಮಾಧಾನವಾಗಿದೆ” ಎಂದರು.

ಇದೇ ವೇಳೆ ಕ್ರೀಡಾ ಖಾತೆಯ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ ಅವರು, “ಕ್ರೀಡಾ ಇಲಾಖೆ ನೀಡಿದ್ದರೆ ರಾಜ್ಯವನ್ನು ಕ್ರೀಡೆಯಲ್ಲಿ ದೇಶದಲ್ಲೇ ನಂಬರ್ ಒನ್ ಮಾಡಲು ಪ್ರಯತ್ನಿಸುತ್ತಿದ್ದೆವು. ಆ ಖಾತೆಗಾಗಿ ಬೇಡಿಕೆಯನ್ನೂ ಇಟ್ಟಿದ್ದೆ” ಎಂದು ತಿಳಿಸಿದರು.

Continue Reading

Trending