ಬೆಂಗಳೂರು
ಬಸನಗೌಡ ಪಾಟೀಲ್ ಯತ್ನಾಳರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು: ಸಿಎಂ ಇಬ್ರಾಹಿಂ ವಾಗ್ದಾಳಿ
ಹುಬ್ಬಳ್ಳಿ: “ರಾಜ್ಯ ರಾಜಕಾರಣ ಹೊಲಸೆದ್ದು ಹೋಗಿದೆ. ಬಿಜೆಪಿಯವರು ಇಷ್ಟು ದಿನ ರಾಮನ ಹೆಸರಿನಲ್ಲಿ ವೋಟ್ ಕೇಳಿದ್ರು. ಇದೀಗ ಸಾಬರ ಹೆಸರಲ್ಲಿ ವೋಟ್ ಕೇಳುತ್ತಿದ್ದಾರೆ. ಅವರಿಗೆ ಎಷ್ಟು ಗತಿಗೇಡು ಬಂದಿದೆ” ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದರು.
ನಗರದಲ್ಲಿಂದು ಮಾತನಾಡಿದ ಅವರು, “ಯತ್ನಾಳ್ ಹಿಂದೂ ಸಮಾವೇಶ ಅಂತಾರೆ. ವಿಜಯೇಂದ್ರ, ಯಡಿಯೂರಪ್ಪ ಹಿಂದೂ ಅಲ್ವಾ? ವಕ್ಫ್ ವಿಚಾರವಾಗಿ ನಾನು ರಾಜ್ಯ ಸರ್ಕಾರಕ್ಕೆ ಒಂದು ಪೇಪರ್ ಅಲ್ಲಿ ಜಾಹೀರಾತು ಕೊಡಲು ಹೇಳುತ್ತೇನೆ. ಯಾರ ಹೆಸರಲ್ಲಿ ಪಹಣಿ ಇದೆಯೋ, ಅವನೇ ಭೂ ಒಡೆಯ. ಇದಕ್ಕೆ ಯಾಕೆ ಚಳವಳಿ ಬೇಕು? ಇವರಿಗೆ ವಿಷಯ ಇಲ್ಲ, ಹೀಗಾಗಿ ಇದನ್ನು ಹಿಡಿದುಕೊಂಡು ಹೋಗುತ್ತಿದ್ದಾರೆ. ಹಿಂದುತ್ವದ ಮೇಲೆ ವೋಟ್ ಬರಲ್ಲ. ಹಾಗಾಗಿ ಹಿಂದುತ್ವ ಸಾಕಾಗಿ ಹೋಗಿದೆ” ಎಂದರು.
ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು: “ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು. ಬಸವಣ್ಣನ ಬಗ್ಗೆ ಮಾತಾಡುತ್ತಾರೆ. ಎಲ್ಲಿ ಅವರೂ ಕೂಡಲಸಂಗಮ ನದಿಗೆ ಹಾರ್ತಾರೋ ಏನೋ” ಎಂದು ಯತ್ನಾಳ್ ವಿರುದ್ಧ ವ್ಯಂಗ್ಯವಾಡಿದರು.
“ಯತ್ನಾಳ್ ಮೊದಲು ಸಾಣೇಹಳ್ಳಿಗೆ ಹೋಗಿ ರಾಗಿ ಮುದ್ದೆ ತಿಂದು ಬಸವ ತತ್ವ ಕಲಿಯಲಿ. ವಕ್ಫ್ ಎಂದರೇನು? ವಕ್ಫ್ ಕಾಯ್ದೆ ಮಾಡಿದ್ದು ಕಾಂಗ್ರೆಸ್ ಅಲ್ಲ. ಅದನ್ನು ಮಾಡಿದ್ದು ಬ್ರಿಟಿಷರು. ಯಾವ ಆಸ್ತಿಯನ್ನು ವಕ್ಫ್ ಎಂದು ಹೇಳಲು ಆಗಲ್ಲ. ಅದಕ್ಕೆ ಅದರದೇ ಆದ ನಿಯಮ ಇದೆ. ಆ ಹುಚ್ಚ ಮಂತ್ರಿ ಅದಾಲತ್ ಮಾಡಿ, ರಸ್ತೆಯಲ್ಲಿರೋ ಕಸವನ್ನು ಮೈಮೇಲೆ ಹಾಕಿಕೊಂಡ” ಎಂದು ಪರೋಕ್ಷವಾಗಿ ಜಮೀರ್ ಅಹಮ್ಮದ್ಗೆ ಕುಟುಕಿದರು.
ನಿಮ್ಮಿಬ್ಬರ ಜಗಳದಲ್ಲಿ ಸಾಬರನ್ನು ಏಕೆ ಎಳೆದು ತರುತ್ತೀರಿ – ಇಬ್ರಾಹಿಂ: “ಇವರು ಎಲ್ಲೆಲ್ಲಿ ದಾರಿ ತಪ್ಪಿಸಿದ್ದಾರೋ, ನಾವು ಅದನ್ನು ಅರಿವು ಮೂಡಿಸುವ ಕೆಲಸ ಮಾಡುತ್ತೇವೆ. ಯತ್ನಾಳ್ ಅವರೇ ನಿಮ್ಮ ವಿಜಯೇಂದ್ರ ಜಗಳದಲ್ಲಿ ಸಾಬರನ್ನು ಯಾಕೆ ತರ್ತೀರಿ. ವಿಜಯೇಂದ್ರ ಹಾಗೂ ಯತ್ನಾಳ್ ಗಲಾಟೆಯನ್ನು ಕಂಟ್ರೋಲ್ ಮಾಡಲು ಹೈಕಮಾಂಡ್ಗೆ ಆಗುತ್ತಿಲ್ಲ. ನೋಟಿಸ್ ಕೊಟ್ಟರೂ ಏನೂ ಆಗಲ್ಲ. ಯತ್ನಾಳ್ ಅವರನ್ನು ಪಕ್ಷದಿಂದ ಬಿಟ್ಟರೆ ಏನು ನಷ್ಟ ಆಗುತ್ತೆ ಗೊತ್ತಿಲ್ಲ. ಯಡಿಯೂರಪ್ಪ ಅವರನ್ನು ಬಿಟ್ಟರೆ ನಷ್ಟ ಆಗುತ್ತೆ ಎನ್ನುವುದನ್ನು ಈಗಾಗಲೇ ತೋರಿಸಿದ್ದಾರೆ” ಎಂದರು.
“ವಕ್ಫ್ ಕಾಯ್ದೆಯ ವಿಚಾರದಲ್ಲಿ ಜಿಲ್ಲಾಧಿಕಾರಿಗೆ ಅಧಿಕಾರ ಕೊಡಬೇಕು ಅಂತಾರೆ. ಜಿಲ್ಲಾಧಿಕಾರಿಗೆ ಅಲ್ಲ, ಹೈಕೋರ್ಟ್ ನ್ಯಾಯಾಧೀಶರಿಗೆ ಅಧಿಕಾರ ಕೊಡಿ. ಹಿಂದೂ ಸಮಾವೇಶ ಯಾಕೆ, ಮಹಾದಾಯಿ ವಿಚಾರವಾಗಿ ಸಭೆ ಮಾಡಿ” ಎಂದರು.
’ಆ ಪ್ರತಾಪ್ ಸಿಂಹಗೆ ಕಾಯ್ದೆಯೇ ಗೊತ್ತಿಲ್ಲ‘: “ಆ ಪ್ರತಾಪ್ ಸಿಂಹಗೆ ಕಾಯ್ದೆಯೇ ಗೊತ್ತಿಲ್ಲ. ಹೈಕಮಾಂಡ್ ಹಾಗೂ ಮೋದಿ, ಅಮಿತ್ ಶಾ ಅವರನ್ನು ಒಲಿಸಲು ವಕ್ಫ್ ಹೋರಾಟ ಮಾಡುತ್ತಿದ್ದಾರೆ. ವಿಜಯಪುರದಲ್ಲಿ ಹೋಗಿ ದಾಂಧಲೆ ಮಾಡಿದ್ರು. ಬಿಜೆಪಿಯವರನ್ನು ಎಲ್ಲ ಸಮಾಜದ ಜನ ತಿರಸ್ಕಾರ ಮಾಡಿದ್ದಾರೆ. ಕುಮಾರಸ್ವಾಮಿ ಅವರನ್ನು ಅಡ್ರೆಸ್ ಇಲ್ಲದಂತೆ ಕಳುಹಿಸಿದ್ದಾರೆ. ನಾನು ಇದ್ದ ಕಾರಣಕ್ಕೆ ಕುಮಾರಸ್ವಾಮಿ ಗೆದ್ದಿದ್ದರು. ಮುಸ್ಲಿಂ ವೋಟ್ನಿಂದ ನಾವು 19 ಸೀಟ್ ಗೆದ್ದಿದ್ದು. ಬಿಜೆಪಿ ಜೊತೆ ಹೋಗಿರೋದಕ್ಕೆ ನಾವು ಬೇರೆಯಾಗಿದ್ದು. ಇದೀಗ ಬಿಜೆಪಿಯವರ ಜೊತೆ ಲವ್ ಮ್ಯಾರೇಜ್ ಆಗಿದ್ದಾರೆ. ನೊಡೋಣ ಎಷ್ಟು ದಿನ ಇರುತ್ತೆ ಅಂತ. ನಾವು ತೃತೀಯ ರಂಗ ಹುಟ್ಟುಹಾಕುತ್ತೇವೆ. ಒಂದು ಸಂಘ ಕಟ್ಟಲು ತೀರ್ಮಾನ ಮಾಡಿದ್ದೇವೆ” ಎಂದರು.
“ಸಿದ್ದರಾಮಯ್ಯ ಅವರ ಸ್ವಾಭಿಮಾನದ ಸಮಾವೇಶದ ಬಗ್ಗೆ ನಾನು ಮಾತಾಡಲ್ಲ. ಸಿದ್ದರಾಮಯ್ಯ ಶಕ್ತಿ ಸಿದ್ದರಾಮಯ್ಯಗೆ ಇದೆ. ಡಿ.ಕೆ.ಶಿವಕುಮಾರ್ ಶಕ್ತಿ ಅವರಿಗೆ ಇದೆ. ಸಿಎಂ ಅವರನ್ನು ಇಳಿಸುವ ಪ್ರಯತ್ನದ ಬಗ್ಗೆ ಗೊತ್ತಿಲ್ಲ. ಬಸನಗೌಡ ಪಾಟೀಲ್ ಯತ್ನಾಳ್ ಫ್ರಸ್ಟ್ರೇಟ್ ಆಗಿದ್ದಾರೆ. ಹಾಗೆ ಆಗಬೇಡಿ. ಅವರೇ ಎಲ್ಲಿ ನದಿಗೆ ಹಾರ್ತಾರೋ ಎನ್ನುವ ಅನುಮಾನ ಇದೆ. ಹೀಗಾಗಿ ಬಸವ ತತ್ವ ಓದಿ ನಿಮಗೆ ಜ್ಞಾನೋದಯ ಆಗತ್ತದೆ. ಮೋಹನ್ ಭಾಗವತ್ ಮೊದಲು ಮದುವೆಯಾಗಲಿ” ಎಂದು ಹೇಳಿದರು.
ಮುಸ್ಲಿಂರಿಗೆ ಮತದಾನದ ಹಕ್ಕು ಇಲ್ಲ ಎಂದ ಸ್ವಾಮೀಜಿ ಮೇಲೆ ಕೇಸ್ ದಾಖಲಿಸಿರುವ ಕುರಿತು ಪ್ರತಿಕ್ರಿಯಿಸಿ, “ಅವರ ಮೇಲೆ ಎಫ್ಐಆರ್ ಹಾಕಬೇಡಿ. ಅವರು ವಿಷಾಧ ವ್ಯಕ್ತಪಡಿಸಿದ್ದಾರೆ. ಹಿರಿಯರಿದ್ದಾರೆ. ಕೂಡಲೇ ಅವರ ಮೇಲೆ ಹಾಕಿರುವ ಕೇಸ್ ವಾಪಸ್ ತೆಗೆದುಕೊಳ್ಳಿ, ಇದು ನನ್ನ ಪ್ರಾರ್ಥನೆ” ಎಂದರು.
ದೇಶ
ಕಾಂಗ್ರೆಸ್ನಲ್ಲಿ ಭಾರಿ ಶಿಸ್ತು ಕ್ರಮ: ನಟಿ ಭಾವನಾ ರಾಮಣ್ಣ ಸೇರಿ ಹಲವರಿಗೆ ಶಾಕ್
ಬೆಂಗಳೂರು: Karnataka Pradesh Congress Committee ಪ್ರಮುಖ ಸಭೆಗೆ ಗೈರಾಗಿದ್ದ ಪದಾಧಿಕಾರಿಗಳ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ D. K. Shivakumar ಭಾರೀ ಶಿಸ್ತು ಕ್ರಮ ಕೈಗೊಂಡಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SSR) ಕುರಿತ ಮಹತ್ವದ ಸಭೆಯನ್ನು ನಿರ್ಲಕ್ಷ್ಯ ಮಾಡಿದ ಆರೋಪದ ಮೇಲೆ ಹಲವು ಹಿರಿಯ ನಾಯಕರನ್ನು ಪಕ್ಷದ ಹುದ್ದೆಗಳಿಂದ ತಕ್ಷಣದಿಂದಲೇ ವಜಾಗೊಳಿಸಲಾಗಿದೆ.
ಈ ಕ್ರಮದಡಿ ಕೆಪಿಸಿಸಿ ವಕ್ತಾರರಾದ Niketh Raj Maurya, Bhavana Ramanna ಸೇರಿದಂತೆ ಶಿವಮೂರ್ತಿ ನಾಯಕ್, ಎಂ.ಸಿ. ವೇಣುಗೋಪಾಲ್, ಷಣ್ಮುಖ ಶಿವಳ್ಳಿ ಹಾಗೂ ಸಿ.ಆರ್. ಮನೋಹರ್ ಅವರಿಗೆ ಪಕ್ಷದಿಂದ “ಗೇಟ್ ಪಾಸ್” ನೀಡಲಾಗಿದೆ. ಇವರ ಜೊತೆಗೆ ಮೂವರು ಉಪಾಧ್ಯಕ್ಷರು ಮತ್ತು 29 ಪ್ರಧಾನ ಕಾರ್ಯದರ್ಶಿಗಳನ್ನೂ ಹುದ್ದೆಗಳಿಂದ ಕೈಬಿಡಲಾಗಿದೆ.
ಬೆಂಗಳೂರಿನಲ್ಲಿ ನಡೆದ ಈ ಮಹತ್ವದ ಸಭೆಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ Randeep Singh Surjewala ಕೂಡ ಭಾಗವಹಿಸಿದ್ದರು. ಪಕ್ಷದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದ್ದ ಸಭೆಗೆ ಇಷ್ಟೊಂದು ಪ್ರಮಾಣದಲ್ಲಿ ನಾಯಕರು ಗೈರಾಗಿರುವುದನ್ನು ಅವರು ಗಂಭೀರವಾಗಿ ಪರಿಗಣಿಸಿದ್ದರು ಎನ್ನಲಾಗಿದೆ.
ಸಭೆಯನ್ನು ಲಘುವಾಗಿ ತೆಗೆದುಕೊಂಡವರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಸುರ್ಜೇವಾಲಾ ಸೂಚನೆ ನೀಡಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಆಕ್ಷನ್ ಮೋಡ್ಗೆ ಇಳಿದಿದ್ದಾರೆ. ಈ ಮೂಲಕ ಪಕ್ಷದಲ್ಲಿ ಶಿಸ್ತು ಉಲ್ಲಂಘನೆ ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ.
ಇದೇ ವೇಳೆ ರಾಜ್ಯ ರಾಜಕೀಯದಲ್ಲಿ Siddaramaiah ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆಯ ಚರ್ಚೆಗಳು ಜೋರಾಗಿರುವ ಸಂದರ್ಭದಲ್ಲಿ ಈ ಕ್ರಮ ಕಾಂಗ್ರೆಸ್ ಪಾಳಯದಲ್ಲಿ ಮತ್ತಷ್ಟು ಸಂಚಲನ ಸೃಷ್ಟಿಸಿದೆ.
ಪಕ್ಷದಲ್ಲಿ ಹಿರಿಯರಾಗಿರಲಿ ಅಥವಾ ಪ್ರಮುಖ ಹುದ್ದೆಯಲ್ಲಿರಲಿ, ಜವಾಬ್ದಾರಿ ಮತ್ತು ಶಿಸ್ತು ಪಾಲನೆ ಕಡ್ಡಾಯ ಎಂಬುದನ್ನು ಡಿಕೆ ಶಿವಕುಮಾರ್ ಈ ನಿರ್ಧಾರದ ಮೂಲಕ ಸ್ಪಷ್ಟಪಡಿಸಿದ್ದಾರೆ.
ದೇಶ
“ಭಗವಂತ ನನ್ನ ಆಸೆ ಈಡೇರಿಸಿದ್ದಾನೆ”: ಇಕ್ಬಾಲ್ ಹುಸೇನ್ ಭಾವನಾತ್ಮಕ ಮಾತು
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆಯೇ Iqbal Hussain ನೀಡಿರುವ ಹೇಳಿಕೆ ಹೊಸ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಉಪಮುಖ್ಯಮಂತ್ರಿ D. K. Shivakumar ಅವರಿಗೆ ಮುಖ್ಯಮಂತ್ರಿ ಪಟ್ಟ ಸಿಗುವ ವಿಚಾರವಾಗಿ ಮಾತನಾಡಿದ ಅವರು, “ಭಗವಂತ ನನ್ನ ಆಸೆ ಈಡೇರಿಸಿದ್ದಾನೆ” ಎಂದು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, “ಭಗವಂತನ ದಯೆಯಿಂದ ಒಳ್ಳೆ ಕಾಲ ಬಂದಿದೆ. ನಮ್ಮ ನಾಯಕರಿಗೆ ರಾಜ್ಯದ ಜನರು ಬಯಸಿದ್ದನ್ನು ಭಗವಂತ ನೆರವೇರಿಸಿದ್ದಾನೆ. ಅವನಿಗೆ ಕೋಟಿ ಕೋಟಿ ನಮಸ್ಕಾರಗಳು” ಎಂದು ಹೇಳಿದ್ದಾರೆ.
“ಎಲ್ಲದಕ್ಕೂ ಒಂದು ಇತಿಮಿತಿ ಇರುತ್ತದೆ. ಪಕ್ಷದ ವರಿಷ್ಠರು ಶಿಸ್ತಿನಿಂದ ಇರಲು ಸೂಚಿಸಿದ್ದರು. ಕಾಲ ಬಂದಾಗ ಮಾತನಾಡಿ ಎಂದಿದ್ದರು. ಈಗ ಆ ಸಮಯ ಬಂದಿದೆ” ಎಂದು ಹೇಳುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ಸುಳಿವನ್ನೂ ನೀಡಿದ್ದಾರೆ.
ಇನ್ನೂ ನಾಯಕರು ಬೆಂಗಳೂರಿಗೆ ಬಂದ ಬಳಿಕ ಅವರೊಂದಿಗೆ ಚರ್ಚೆ ನಡೆಸುವುದಾಗಿ ಹೇಳಿದ ಅವರು, ಕಾರ್ಯಕರ್ತರು ಹಾಗೂ ನಾಯಕರ ಜೊತೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದ ಇಕ್ಬಾಲ್ ಹುಸೇನ್, “ರಾತ್ರಿ ನನಗೆ ನಿದ್ದೆ ಬರಲಿಲ್ಲ. ದೆಹಲಿಯಲ್ಲಿ ಮಾತನಾಡಬೇಕಾದವರ ಜೊತೆ ಮಾತನಾಡುತ್ತಿದ್ದೆ. ಕ್ಷಣಕ್ಷಣದ ಮಾಹಿತಿಯನ್ನು ಪಡೆಯುತ್ತಿದ್ದೆ” ಎಂದು ಹೇಳಿದ್ದಾರೆ.
ಈ ಹೇಳಿಕೆ ಇದೀಗ ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ ನೀಡಿದೆ.
ಬೆಂಗಳೂರು
“ನಾಳೆ ಎಲ್ಲ ಹೇಳುತ್ತೇನೆ”: ರಾಜಕೀಯ ಪ್ರಶ್ನೆಗಳಿಗೆ ಸಿದ್ದರಾಮಯ್ಯ ಸಸ್ಪೆನ್ಸ್ ಉತ್ತರ!
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ತೀವ್ರವಾಗಿರುವ ನಡುವೆಯೇ Siddaramaiah ಅವರು “ನಾಳೆ ಮಾತನಾಡುತ್ತೇನೆ” ಎನ್ನುವ ಮೂಲಕ ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ.
ಮಾಜಿ ಪ್ರಧಾನಿ Jawaharlal Nehru ಅವರ 62ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ನೆಹರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬಳಿಕ ನೆಹರು ಅವರು ದೇಶಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು.
ಕಾರ್ಯಕ್ರಮದ ವೇಳೆ ಮಾಧ್ಯಮ ಪ್ರತಿನಿಧಿಗಳು ದೆಹಲಿ ಪ್ರವಾಸ, ಕಾಂಗ್ರೆಸ್ ಹೈಕಮಾಂಡ್ ಸಭೆ ಹಾಗೂ ಸಿಎಂ ಬದಲಾವಣೆ ಕುರಿತ ಪ್ರಶ್ನೆಗಳನ್ನು ಕೇಳಿದಾಗ ಸಿದ್ದರಾಮಯ್ಯ ಯಾವುದೇ ವಿವರವಾದ ಪ್ರತಿಕ್ರಿಯೆ ನೀಡಲಿಲ್ಲ. “ಏನೇ ಇದ್ದರೂ ನಾಳೆ ಮಾತನಾಡುತ್ತೇನೆ” ಎಂದು ಒಂದೇ ಸಾಲಿನಲ್ಲಿ ಉತ್ತರಿಸಿ ಅಲ್ಲಿಂದ ತೆರಳಿದರು.
ಸಾಮಾನ್ಯವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ಗಟ್ಟಿಯಾಗಿ ಪ್ರತಿಕ್ರಿಯಿಸುವ ಸಿದ್ದರಾಮಯ್ಯ, ಇಂದು ಮಾತ್ರ ಮೌನವಾಗಿದ್ದದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಅವರ ಮುಖಭಾವದಲ್ಲೂ ಬೇಸರ ಸ್ಪಷ್ಟವಾಗಿ ಕಾಣಿಸುತ್ತಿತ್ತು ಎಂದು ಕಾರ್ಯಕ್ರಮದಲ್ಲಿ ಭಾಗಿಯಾದವರು ಹೇಳುತ್ತಿದ್ದಾರೆ.
ಇಂದು ಮುಖ್ಯಮಂತ್ರಿ ಅವರಿಗೆ ಯಾವುದೇ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಿರಲಿಲ್ಲ. ಹೀಗಾಗಿ ವಿಧಾನಸೌಧದಿಂದ ನೇರವಾಗಿ ತಮ್ಮ ಸರ್ಕಾರಿ ನಿವಾಸ ‘ಕಾವೇರಿ’ಗೆ ತೆರಳಿದ್ದಾರೆ.
ಇದೀಗ ನಾಳೆ ಬೆಳಗ್ಗೆ ತಮ್ಮ ಆಪ್ತ ಸಚಿವರು ಹಾಗೂ ಶಾಸಕರೊಂದಿಗೆ ಬ್ರೇಕ್ಫಾಸ್ಟ್ ಸಭೆ ನಡೆಸಲಿರುವ ಸಿದ್ದರಾಮಯ್ಯ, ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಎಲ್ಲಾ ರಾಜಕೀಯ ಬೆಳವಣಿಗೆಗಳ ಬಗ್ಗೆ ಸ್ಪಷ್ಟನೆ ನೀಡುವ ನಿರೀಕ್ಷೆಯಿದೆ.
-
ದೇಶ11 hours agoಕರ್ನಾಟಕಕ್ಕೆ ಹೊಸ ಸಿಎಂ? ಡಿಕೆ ಶಿವಕುಮಾರ್ ಪಾಲಿಗೆ ‘ಶುಭ ಶುಕ್ರವಾರ’ ಫಿಕ್ಸ್!
-
ದೇಶ14 hours agoಬಸ್ ಕಂಡಕ್ಟರ್ನಿಂದ ಸೂಪರ್ ಸ್ಟಾರ್ ತನಕ: ರಜನಿಕಾಂತ್ ಅಪರೂಪದ ಫೋಟೋ ವೈರಲ್
-
ಬೆಂಗಳೂರು11 hours ago“ನಾಳೆ ಎಲ್ಲ ಹೇಳುತ್ತೇನೆ”: ರಾಜಕೀಯ ಪ್ರಶ್ನೆಗಳಿಗೆ ಸಿದ್ದರಾಮಯ್ಯ ಸಸ್ಪೆನ್ಸ್ ಉತ್ತರ!
-
ಕ್ರೀಡೆ11 hours ago“That’s a silly question!”: ಆರ್ಸಿಬಿ ಸೋಲಿನ ಬಳಿಕ ಪತ್ರಕರ್ತರ ಮೇಲೆ ಫಿಲಿಪ್ಸ್ ಸಿಡಿತ
-
ದೇಶ13 hours agoಸಿಎಂ ಬದಲಾವಣೆಯ ಬೆನ್ನಲ್ಲೇ ಡಿಕೆಶಿಗೆ ಮತ್ತೊಂದು ಶಾಕ್?
-
ದೇಶ13 hours agoಅಯ್ಯನ ಕೆರೆ ಕಲುಷಿತಗೊಳಿಸಲು ಯತ್ನ: ಸಿಬ್ಬಂದಿಯ ದಿಟ್ಟ ಕ್ರಮಕ್ಕೆ ಭಾರಿ ಮೆಚ್ಚುಗೆ
-
ಅಪರಾಧ15 hours agoಪಿಣರಾಯಿ ವಿಜಯನ್ ನಿವಾಸದ ಮೇಲೆ ಇಡಿ ದಾಳಿ: ಕೇರಳ ರಾಜಕೀಯದಲ್ಲಿ ಭಾರೀ ಸಂಚಲನ!
-
ದೇಶ9 hours agoಕಾಂಗ್ರೆಸ್ನಲ್ಲಿ ಭಾರಿ ಶಿಸ್ತು ಕ್ರಮ: ನಟಿ ಭಾವನಾ ರಾಮಣ್ಣ ಸೇರಿ ಹಲವರಿಗೆ ಶಾಕ್
