Connect with us

ಬೆಂಗಳೂರು

ಬಸನಗೌಡ ಪಾಟೀಲ್ ಯತ್ನಾಳರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು: ಸಿಎಂ ಇಬ್ರಾಹಿಂ ವಾಗ್ದಾಳಿ

Published

on

ಹುಬ್ಬಳ್ಳಿ: “ರಾಜ್ಯ ರಾಜಕಾರಣ ಹೊಲಸೆದ್ದು ಹೋಗಿದೆ. ಬಿಜೆಪಿಯವರು ಇಷ್ಟು ದಿನ ರಾಮನ ಹೆಸರಿನಲ್ಲಿ ವೋಟ್ ಕೇಳಿದ್ರು. ಇದೀಗ ಸಾಬರ ಹೆಸರಲ್ಲಿ ವೋಟ್ ಕೇಳುತ್ತಿದ್ದಾರೆ. ಅವರಿಗೆ ಎಷ್ಟು ಗತಿಗೇಡು ಬಂದಿದೆ” ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದರು.

ನಗರದಲ್ಲಿಂದು ಮಾತನಾಡಿದ ಅವರು,‌ “ಯತ್ನಾಳ್​ ಹಿಂದೂ ಸಮಾವೇಶ ಅಂತಾರೆ. ವಿಜಯೇಂದ್ರ, ಯಡಿಯೂರಪ್ಪ ಹಿಂದೂ ಅಲ್ವಾ? ವಕ್ಫ್​ ವಿಚಾರವಾಗಿ ನಾನು ರಾಜ್ಯ ಸರ್ಕಾರಕ್ಕೆ ಒಂದು ಪೇಪರ್ ಅಲ್ಲಿ ಜಾಹೀರಾತು ಕೊಡಲು ಹೇಳುತ್ತೇನೆ. ಯಾರ ಹೆಸರಲ್ಲಿ ಪಹಣಿ ಇದೆಯೋ, ಅವನೇ ಭೂ ಒಡೆಯ. ಇದಕ್ಕೆ ಯಾಕೆ ಚಳವಳಿ ಬೇಕು? ಇವರಿಗೆ ವಿಷಯ ಇಲ್ಲ, ಹೀಗಾಗಿ ಇದನ್ನು ಹಿಡಿದುಕೊಂಡು ಹೋಗುತ್ತಿದ್ದಾರೆ. ಹಿಂದುತ್ವದ ಮೇಲೆ ವೋಟ್ ಬರಲ್ಲ. ಹಾಗಾಗಿ ಹಿಂದುತ್ವ ಸಾಕಾಗಿ ಹೋಗಿದೆ” ಎಂದರು.

ಮೆಂಟಲ್​ ಆಸ್ಪತ್ರೆಗೆ ಸೇರಿಸಬೇಕು: “ಬಸನಗೌಡ ಪಾಟೀಲ್ ಯತ್ನಾಳ್​ ಅವರನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು. ಬಸವಣ್ಣನ ಬಗ್ಗೆ ಮಾತಾಡುತ್ತಾರೆ. ಎಲ್ಲಿ ಅವರೂ ಕೂಡಲಸಂಗಮ ನದಿಗೆ ಹಾರ್ತಾರೋ ಏನೋ” ಎಂದು ಯತ್ನಾಳ್​ ವಿರುದ್ಧ ವ್ಯಂಗ್ಯವಾಡಿದರು.

“ಯತ್ನಾಳ್​​ ಮೊದಲು ಸಾಣೇಹಳ್ಳಿಗೆ ಹೋಗಿ ರಾಗಿ ಮುದ್ದೆ ತಿಂದು ಬಸವ ತತ್ವ ಕಲಿಯಲಿ. ವಕ್ಫ್​ ಎಂದರೇನು? ವಕ್ಫ್​ ಕಾಯ್ದೆ ಮಾಡಿದ್ದು ಕಾಂಗ್ರೆಸ್ ಅಲ್ಲ. ಅದನ್ನು ಮಾಡಿದ್ದು ಬ್ರಿಟಿಷರು. ಯಾವ ಆಸ್ತಿಯನ್ನು ವಕ್ಫ್​ ಎಂದು ಹೇಳಲು ಆಗಲ್ಲ. ಅದಕ್ಕೆ ಅದರದೇ ಆದ ನಿಯಮ ಇದೆ. ಆ ಹುಚ್ಚ ಮಂತ್ರಿ ಅದಾಲತ್ ಮಾಡಿ, ರಸ್ತೆಯಲ್ಲಿರೋ ಕಸವನ್ನು ಮೈಮೇಲೆ ಹಾಕಿಕೊಂಡ” ಎಂದು ಪರೋಕ್ಷವಾಗಿ ಜಮೀರ್ ಅಹಮ್ಮದ್​ಗೆ ಕುಟುಕಿದರು.

ನಿಮ್ಮಿಬ್ಬರ ಜಗಳದಲ್ಲಿ ಸಾಬರನ್ನು ಏಕೆ ಎಳೆದು ತರುತ್ತೀರಿ – ಇಬ್ರಾಹಿಂ: “ಇವರು ಎಲ್ಲೆಲ್ಲಿ ದಾರಿ ತಪ್ಪಿಸಿದ್ದಾರೋ, ನಾವು ಅದನ್ನು ಅರಿವು ಮೂಡಿಸುವ ಕೆಲಸ ಮಾಡುತ್ತೇವೆ. ಯತ್ನಾಳ್​ ಅವರೇ ನಿಮ್ಮ ವಿಜಯೇಂದ್ರ ಜಗಳದಲ್ಲಿ ಸಾಬರನ್ನು ಯಾಕೆ ತರ್ತೀರಿ. ವಿಜಯೇಂದ್ರ ಹಾಗೂ ಯತ್ನಾಳ್​ ಗಲಾಟೆಯನ್ನು ಕಂಟ್ರೋಲ್ ಮಾಡಲು ಹೈಕಮಾಂಡ್​ಗೆ ಆಗುತ್ತಿಲ್ಲ. ನೋಟಿಸ್ ಕೊಟ್ಟರೂ ಏನೂ ಆಗಲ್ಲ. ಯತ್ನಾಳ್​ ಅವರನ್ನು ಪಕ್ಷದಿಂದ ಬಿಟ್ಟರೆ ಏನು ನಷ್ಟ ಆಗುತ್ತೆ ಗೊತ್ತಿಲ್ಲ. ಯಡಿಯೂರಪ್ಪ ಅವರನ್ನು ಬಿಟ್ಟರೆ ನಷ್ಟ ಆಗುತ್ತೆ ಎನ್ನುವುದನ್ನು ಈಗಾಗಲೇ ತೋರಿಸಿದ್ದಾರೆ” ಎಂದರು.

“ವಕ್ಫ್​ ಕಾಯ್ದೆಯ ವಿಚಾರದಲ್ಲಿ ಜಿಲ್ಲಾಧಿಕಾರಿಗೆ ಅಧಿಕಾರ ಕೊಡಬೇಕು ಅಂತಾರೆ. ಜಿಲ್ಲಾಧಿಕಾರಿಗೆ ಅಲ್ಲ, ಹೈಕೋರ್ಟ್​ ನ್ಯಾಯಾಧೀಶರಿಗೆ ಅಧಿಕಾರ ಕೊಡಿ. ಹಿಂದೂ ಸಮಾವೇಶ ಯಾಕೆ, ಮಹಾದಾಯಿ ವಿಚಾರವಾಗಿ ಸಭೆ ಮಾಡಿ” ಎಂದರು.

’ಆ ಪ್ರತಾಪ್ ಸಿಂಹಗೆ ಕಾಯ್ದೆಯೇ ಗೊತ್ತಿಲ್ಲ‘: “ಆ ಪ್ರತಾಪ್ ಸಿಂಹಗೆ ಕಾಯ್ದೆಯೇ ಗೊತ್ತಿಲ್ಲ. ಹೈಕಮಾಂಡ್ ಹಾಗೂ ಮೋದಿ, ಅಮಿತ್ ಶಾ ಅವರನ್ನು ಒಲಿಸಲು ವಕ್ಫ್​ ಹೋರಾಟ ಮಾಡುತ್ತಿದ್ದಾರೆ. ವಿಜಯಪುರದಲ್ಲಿ ಹೋಗಿ ದಾಂಧಲೆ ಮಾಡಿದ್ರು. ಬಿಜೆಪಿಯವರನ್ನು ಎಲ್ಲ ಸಮಾಜದ ಜ‌ನ ತಿರಸ್ಕಾರ ‌ಮಾಡಿದ್ದಾರೆ. ಕುಮಾರಸ್ವಾಮಿ ಅವರನ್ನು ಅಡ್ರೆಸ್ ಇಲ್ಲದಂತೆ ಕಳುಹಿಸಿದ್ದಾರೆ. ನಾನು ಇದ್ದ ಕಾರಣಕ್ಕೆ ಕುಮಾರಸ್ವಾಮಿ ಗೆದ್ದಿದ್ದರು. ಮುಸ್ಲಿಂ ವೋಟ್​ನಿಂದ ನಾವು 19 ಸೀಟ್ ಗೆದ್ದಿದ್ದು. ಬಿಜೆಪಿ ಜೊತೆ ಹೋಗಿರೋದಕ್ಕೆ ನಾವು ಬೇರೆಯಾಗಿದ್ದು. ಇದೀಗ ಬಿಜೆಪಿಯವರ ಜೊತೆ ಲವ್ ಮ್ಯಾರೇಜ್ ಆಗಿದ್ದಾರೆ. ನೊಡೋಣ ಎಷ್ಟು ದಿನ‌ ಇರುತ್ತೆ ಅಂತ. ನಾವು ತೃತೀಯ ರಂಗ ಹುಟ್ಟುಹಾಕುತ್ತೇವೆ. ಒಂದು ಸಂಘ ಕಟ್ಟಲು ತೀರ್ಮಾನ ಮಾಡಿದ್ದೇವೆ” ಎಂದರು.

“ಸಿದ್ದರಾಮಯ್ಯ ಅವರ ಸ್ವಾಭಿಮಾನದ ಸಮಾವೇಶದ ಬಗ್ಗೆ ನಾನು ಮಾತಾಡಲ್ಲ. ಸಿದ್ದರಾಮಯ್ಯ ಶಕ್ತಿ ಸಿದ್ದರಾಮಯ್ಯಗೆ ಇದೆ. ಡಿ.ಕೆ.ಶಿವಕುಮಾರ್ ಶಕ್ತಿ ಅವರಿಗೆ ಇದೆ.‌ ಸಿಎಂ ಅವರನ್ನು ಇಳಿಸುವ ಪ್ರಯತ್ನದ ಬಗ್ಗೆ ಗೊತ್ತಿಲ್ಲ. ಬಸನಗೌಡ ಪಾಟೀಲ್ ಯತ್ನಾಳ್​ ಫ್ರಸ್ಟ್ರೇಟ್ ಆಗಿದ್ದಾರೆ. ಹಾಗೆ ಆಗಬೇಡಿ. ಅವರೇ ಎಲ್ಲಿ ನದಿಗೆ ಹಾರ್ತಾರೋ ಎನ್ನುವ ಅನುಮಾನ ಇದೆ. ಹೀಗಾಗಿ ಬಸವ ತತ್ವ ಓದಿ ನಿಮಗೆ ಜ್ಞಾನೋದಯ ಆಗತ್ತದೆ. ಮೋಹನ್ ಭಾಗವತ್ ಮೊದಲು ಮದುವೆಯಾಗಲಿ” ಎಂದು ಹೇಳಿದರು.

ಮುಸ್ಲಿಂರಿಗೆ ಮತದಾನದ ಹಕ್ಕು ಇಲ್ಲ ಎಂದ ಸ್ವಾಮೀಜಿ ಮೇಲೆ ಕೇಸ್ ದಾಖಲಿಸಿರುವ ಕುರಿತು ಪ್ರತಿಕ್ರಿಯಿಸಿ, “ಅವರ ಮೇಲೆ ಎಫ್​ಐಆರ್ ಹಾಕಬೇಡಿ. ಅವರು ವಿಷಾಧ ವ್ಯಕ್ತಪಡಿಸಿದ್ದಾರೆ. ಹಿರಿಯರಿದ್ದಾರೆ. ಕೂಡಲೇ ಅವರ ಮೇಲೆ ಹಾಕಿರುವ ಕೇಸ್ ವಾಪಸ್ ತೆಗೆದುಕೊಳ್ಳಿ, ಇದು ನನ್ನ ಪ್ರಾರ್ಥನೆ” ಎಂದರು.

ದೇಶ

ಜಿ. ಪರಮೇಶ್ವರ್‌ಗೆ ‘ಗೊತ್ತಿಲ್ಲ ಸಚಿವ’ ಬಿರುದು; ಬಿಜೆಪಿ ನಾಯಕಿಯ ತೀವ್ರ ಟೀಕೆ

Published

on

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು “ಆರ್‌ಎಸ್‌ಎಸ್ ಸಚಿವ” ಎಂದು ಹಾಗೂ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರನ್ನು “ಗೊತ್ತಿಲ್ಲ ಸಚಿವ” ಎಂದು ವ್ಯಂಗ್ಯವಾಡುವ ಮೂಲಕ ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಪ್ರಿಯಾಂಕ್ ಖರ್ಗೆ ತಮ್ಮ ಇಲಾಖೆಯ ಜವಾಬ್ದಾರಿಗಳಿಗಿಂತ ಆರ್‌ಎಸ್‌ಎಸ್ ಸಂಘಟನೆಯನ್ನು ಟೀಕಿಸುವುದರಲ್ಲೇ ಹೆಚ್ಚು ಸಮಯ ಕಳೆಯುತ್ತಿದ್ದಾರೆ ಎಂದು ಆರೋಪಿಸಿದರು. ಅವರಿಗೆ ವಹಿಸಿರುವ ಸಚಿವ ಖಾತೆಯ ಕೆಲಸಗಳನ್ನು ಬದಿಗೊತ್ತಿ ಪ್ರತಿದಿನ ಆರ್‌ಎಸ್‌ಎಸ್ ಕುರಿತು ಮಾತನಾಡುತ್ತಿರುವ ಕಾರಣ, ಅವರು ಕಾಂಗ್ರೆಸ್ ಸರ್ಕಾರದ **”ಆರ್‌ಎಸ್‌ಎಸ್ ಸಚಿವ”**ರಂತೆ ವರ್ತಿಸುತ್ತಿದ್ದಾರೆ ಎಂದು ಹೇಳಿದರು.

ಇದೇ ವೇಳೆ, ಉಪ ಮುಖ್ಯಮಂತ್ರಿ ಹಾಗೂ ಗೃಹ ಇಲಾಖೆಯ ಜವಾಬ್ದಾರಿ ನಿರ್ವಹಿಸುತ್ತಿರುವ ಜಿ. ಪರಮೇಶ್ವರ್ ಅವರ ಮೇಲೂ ಶೋಭಾ ಕರಂದ್ಲಾಜೆ ಟೀಕಾ ಪ್ರಹಾರ ನಡೆಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅಥವಾ ಗಂಭೀರ ಘಟನೆಗಳ ಕುರಿತು ಮಾಧ್ಯಮಗಳು ಪ್ರಶ್ನಿಸಿದಾಗಲೆಲ್ಲಾ “ಗೊತ್ತಿಲ್ಲ”, “ಮಾಹಿತಿ ಇಲ್ಲ” ಎಂಬ ಉತ್ತರ ನೀಡುತ್ತಾರೆ ಎಂದು ಆರೋಪಿಸಿದರು. ಇದೇ ಕಾರಣಕ್ಕೆ ಅವರನ್ನು “ಗೊತ್ತಿಲ್ಲ ಸಚಿವ” ಎಂದು ಕರೆಯಬೇಕಾಗಿದೆ ಎಂದು ವ್ಯಂಗ್ಯವಾಡಿದರು.

ಬಿಜೆಪಿ, ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಆರ್‌ಎಸ್‌ಎಸ್ ಕುರಿತು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಹೇಳಿಕೆಗಳನ್ನು ವಿರೋಧಿಸಿ ರಾಜ್ಯಾದ್ಯಂತ ರಾಜಕೀಯ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲೇ ಶೋಭಾ ಕರಂದ್ಲಾಜೆ ಈ ಹೇಳಿಕೆ ನೀಡಿದ್ದಾರೆ. ಅವರ ಈ ಟೀಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

ಸೂಚನೆ: ಈ ವರದಿಯಲ್ಲಿ ಉಲ್ಲೇಖಿಸಿರುವ ಆರೋಪಗಳು ಮತ್ತು ಹೇಳಿಕೆಗಳು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಾರ್ವಜನಿಕವಾಗಿ ವ್ಯಕ್ತಪಡಿಸಿದ ಅಭಿಪ್ರಾಯಗಳಾಗಿವೆ. ಸಂಬಂಧಪಟ್ಟ ಸಚಿವರ ಪ್ರತಿಕ್ರಿಯೆ ಈ ವರದಿಯಲ್ಲಿ ಲಭ್ಯವಿಲ್ಲ.

Continue Reading

ದೇಶ

ಸಾರ್ವಜನಿಕರಿಗೆ ಗುಡ್ ನ್ಯೂಸ್! ಭಾನುವಾರವೂ ಸಿಗಲಿವೆ ನೋಂದಣಿ ಸೇವೆಗಳು

Published

on

ಬೆಂಗಳೂರು: ರಾಜ್ಯದಾದ್ಯಂತ ಇರುವ ಎಲ್ಲಾ ಉಪ ನೋಂದಣಿ ಕಚೇರಿಗಳು ಜುಲೈ 12ರ ಭಾನುವಾರ ರಜಾ ದಿನವಾಗಿದ್ದರೂ ಸಾರ್ವಜನಿಕರ ಅನುಕೂಲಕ್ಕಾಗಿ ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ಮಹತ್ವದ ಪ್ರಕಟಣೆ ಹೊರಡಿಸಿದೆ.

ಸಾಮಾನ್ಯವಾಗಿ ಭಾನುವಾರ ಸರ್ಕಾರಿ ಕಚೇರಿಗಳಿಗೆ ರಜೆ ಇರುತ್ತದೆ. ಆದರೆ ಇಲಾಖೆಯಲ್ಲಿ ಹೆಚ್ಚುತ್ತಿರುವ ಕಾರ್ಯದೊತ್ತಡವನ್ನು ಕಡಿಮೆ ಮಾಡುವ ಜೊತೆಗೆ ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸುವ ಉದ್ದೇಶದಿಂದ ಈ ವಿಶೇಷ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಆಸ್ತಿ ನೋಂದಣಿ ಸೇರಿದಂತೆ ವಿವಿಧ ಸೇವೆಗಳನ್ನು ಪಡೆಯಲು ಕಾಯುತ್ತಿದ್ದವರಿಗೆ ಅನುಕೂಲವಾಗಲಿದೆ.

ಇಲಾಖೆಯ ಪ್ರಕಟಣೆಯ ಪ್ರಕಾರ, ಜುಲೈ 12ರಂದು ಎಲ್ಲಾ ಉಪ ನೋಂದಣಿ ಕಚೇರಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ. ಸಾರ್ವಜನಿಕರು ಎಂದಿನಂತೆ ಆಸ್ತಿ ನೋಂದಣಿ, ಮುದ್ರಾಂಕ (Stamp) ಖರೀದಿ ಹಾಗೂ ಇಲಾಖೆಗೆ ಸಂಬಂಧಿಸಿದ ಇತರ ಸೇವೆಗಳನ್ನು ಯಾವುದೇ ಅಡಚಣೆಯಿಲ್ಲದೆ ಪಡೆಯಬಹುದಾಗಿದೆ.

ಈ ವಿಶೇಷ ವ್ಯವಸ್ಥೆಯಿಂದ ವಾರದ ಕೆಲಸದ ದಿನಗಳಲ್ಲಿ ಕಚೇರಿಗೆ ತೆರಳಲು ಸಾಧ್ಯವಾಗದ ಉದ್ಯೋಗಿಗಳು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈಗಾಗಲೇ ನೋಂದಣಿ ಪ್ರಕ್ರಿಯೆಗೆ ಸಮಯ ನಿಗದಿಪಡಿಸಿಕೊಂಡಿರುವವರು ಕೂಡ ಈ ಅವಕಾಶವನ್ನು ಬಳಸಿಕೊಳ್ಳಬಹುದು.

ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ಸಾರ್ವಜನಿಕರು ಈ ವಿಶೇಷ ಸೇವೆಯ ಸದುಪಯೋಗ ಪಡೆದು ತಮ್ಮ ನೋಂದಣಿ ಸಂಬಂಧಿತ ಕೆಲಸಗಳನ್ನು ಪೂರ್ಣಗೊಳಿಸಿಕೊಳ್ಳುವಂತೆ ಮನವಿ ಮಾಡಿದೆ. ಭಾನುವಾರವೂ ಸೇವೆ ಲಭ್ಯವಿರುವುದರಿಂದ ನೋಂದಣಿ ಪ್ರಕ್ರಿಯೆಯಲ್ಲಿ ಉಂಟಾಗುವ ವಿಳಂಬವೂ ಕಡಿಮೆಯಾಗುವ ನಿರೀಕ್ಷೆಯಿದೆ.

Continue Reading

ದೇಶ

14 ಗಂಟೆಯಲ್ಲಿ 265 ಕಿ.ಮೀ ಪಯಣ; MLA ಸುರೇಶ್ ಕುಮಾರ್ ಅವರ ಫಿಟ್ನೆಸ್‌ಗೆ ಜನ ಫಿದಾ

Published

on

ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ಮತ್ತೊಮ್ಮೆ ತಮ್ಮ ಫಿಟ್ನೆಸ್ ಮತ್ತು ಆರೋಗ್ಯದ ಬಗ್ಗೆ ಇರುವ ಬದ್ಧತೆಯನ್ನು ಸಾಬೀತುಪಡಿಸಿದ್ದಾರೆ. 70 ವರ್ಷದ ವಯಸ್ಸಿನಲ್ಲಿಯೂ ಯುವಕರಿಗೆ ಮಾದರಿಯಾಗುವಂತೆ ಅವರು ಬೆಂಗಳೂರುದಿಂದ ತಿರುಪತಿವರೆಗೆ 265 ಕಿಲೋಮೀಟರ್‌ಗಳನ್ನು ಸೈಕಲ್‌ನಲ್ಲಿ ಕ್ರಮಿಸಿ ಗಮನ ಸೆಳೆದಿದ್ದಾರೆ.

ರಾಜಾಜಿನಗರ ಪೆಡಲ್ ಪವರ್-ಸೈಕ್ಲಿಂಗ್‘ ತಂಡದ ಸದಸ್ಯರೊಂದಿಗೆ ಅವರು ಜುಲೈ 10ರಂದು ಆರಂಭವಾದ ಈ ಸೈಕ್ಲಿಂಗ್ ಯಾತ್ರೆಯಲ್ಲಿ ಭಾಗವಹಿಸಿದ್ದರು. ಜುಲೈ 9ರಂದು ಬೆಳಗ್ಗೆ 4:30ಕ್ಕೆ ಬಸವೇಶ್ವರನಗರದಿಂದ ಹೊರಟ ತಂಡವು ಶುಕ್ರವಾರ ಮಧ್ಯಾಹ್ನ ಸುಮಾರು 2 ಗಂಟೆಗೆ ತಿರುಪತಿ ತಲುಪಿತು. ಮಧ್ಯದಲ್ಲಿ ಮದನಪಲ್ಲಿಯಲ್ಲಿ ರಾತ್ರಿ ವಾಸ್ತವ್ಯ ಮಾಡಿದ್ದ ತಂಡ ಒಟ್ಟು 265 ಕಿಲೋಮೀಟರ್‌ಗಳನ್ನು ಸುಮಾರು 14 ಗಂಟೆ 10 ನಿಮಿಷಗಳಲ್ಲಿ ಪೂರ್ಣಗೊಳಿಸಿದೆ.

ವಿಶೇಷವೆಂದರೆ, ಇದು ಸುರೇಶ್ ಕುಮಾರ್ ಅವರ ಮೊದಲ ತಿರುಪತಿ ಸೈಕಲ್ ಯಾತ್ರೆಯಲ್ಲ. 2024 ಮತ್ತು 2025ರಲ್ಲೂ ಇದೇ ರೀತಿಯಲ್ಲಿ ಸೈಕಲ್ ಮೂಲಕ ತಿರುಪತಿಗೆ ತೆರಳಿ ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ಸಾರಿದ್ದರು. ಈ ವರ್ಷವೂ ತಮ್ಮ ತಂಡದೊಂದಿಗೆ ಪೆಡಲ್ ಹೊಡೆದು ಯಶಸ್ವಿಯಾಗಿ ಗುರಿ ತಲುಪಿದ್ದಾರೆ.

ಪ್ರಯಾಣದ ಬಳಿಕ ಮಾತನಾಡಿದ ಶಾಸಕ ಎಸ್. ಸುರೇಶ್ ಕುಮಾರ್, “ಈ ಯಾತ್ರೆ ನಮ್ಮ ತಂಡಕ್ಕೆ ಹೊಸ ಉತ್ಸಾಹ ಮತ್ತು ಆತ್ಮವಿಶ್ವಾಸ ನೀಡಿದೆ. ಇಂತಹ ಸೈಕ್ಲಿಂಗ್ ಚಟುವಟಿಕೆಗಳು ಆರೋಗ್ಯ ಕಾಪಾಡಿಕೊಳ್ಳಲು ಅತ್ಯುತ್ತಮ ಮಾರ್ಗ” ಎಂದು ಹೇಳಿದರು.

ಸಾರ್ವಜನಿಕ ಜೀವನದ ಜೊತೆಗೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡಿರುವ ಸುರೇಶ್ ಕುಮಾರ್ ಅವರ ಈ ಸಾಧನೆ ಸಾಮಾಜಿಕ ಜಾಲತಾಣಗಳಲ್ಲೂ ಮೆಚ್ಚುಗೆಗೆ ಪಾತ್ರವಾಗಿದ್ದು, ಯುವಜನತೆಗೆ ಮಾತ್ರವಲ್ಲದೆ ಎಲ್ಲ ವಯೋಮಾನದವರಿಗೂ ಫಿಟ್ನೆಸ್ ಬಗ್ಗೆ ಜಾಗೃತಿ ಮೂಡಿಸುವ ಸಂದೇಶವಾಗಿದೆ.

Continue Reading

Trending