ಕ್ರೀಡೆ
ಮೂಲೆಯಲ್ಲಿ ಕುಳಿತಿದ್ದ ಕಾಂಬ್ಳಿ ಭೇಟಿಯಾಗಿ ಗೆಳೆಯನ ಮನವಿ ತಿರಸ್ಕರಿಸಿದ್ರಾ ತೆಂಡೂಲ್ಕರ್?
ಮುಂಬೈ(ಡಿ.03) ಸಚಿನ್ ತೆಂಡೂಲ್ಕರ್ ಹಾಗೂ ವಿನೋದ್ ಕಾಂಬ್ಳಿ ಅತ್ಯಾಪ್ತರಾಗಿ ಬಳಿಕ ವಿರುದ್ಧ ದಿಕ್ಕನಲ್ಲಿ ಸಾಗಿದ್ದರು. ಇದೀಗ ಒಂದಾದರೂ ಮಾತುಕತೆ, ಸಂಪರ್ಕ ಅಷ್ಟಕಷ್ಟೆ. ಕಾರ್ಯಕ್ರಮ ಸೇರಿದಂತೆ ವಿಶೇಷ ಸಂದರ್ಭದಲ್ಲಿ ಭೇಟಿಯಾದರೆ ಮಾತುಕತೆ. ಇದೀಗ ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿನ್ ತೆಂಡೂಲ್ಕರ್ ಹಾಗೂ ವಿನೋದ್ ಕಾಂಬ್ಳಿ ಭೇಟಿಯಾಗಿದ್ದಾರೆ. ವೇದಿಕೆಯಲ್ಲಿ ಮೂಲೆಯಲ್ಲಿ ಕುಳಿತಿದ್ದ ವಿನೋದ್ ಕಾಂಬ್ಳಿಯನ್ನು ಸಚಿನ್ ತೆಂಡೂಲ್ಕರ್ ಭೇಟಿಯಾಗಿ ಮಾತನಾಡಿದ್ದಾರೆ. ಆದರೆ ಇದೇ ವೇಳೆ ವಿನೋದ್ ಕಾಂಬ್ಳಿ ಮಾಡಿದ ಮನವಿಯನ್ನು ಸಚಿನ್ ತಿರಸ್ಕರಿಸಿದ್ರಾ ಅನ್ನೋ ಚರ್ಚೆಗಳು ಶುರುವಾಗಿದೆ.
ಸಚಿನ್ ತೆಂಡೂಲ್ಕರ್ ಬಾಲ್ಯದ ಕೋಚ್ ರಮಾಕಾಂತ್ ಅಚ್ರೇಕರ್ ಮೆಮೋರಿಯಲ್ ಅನಾವರಣ ಕಾರ್ಯಕ್ರಮದಲ್ಲಿ ಈ ಭೇಟಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ಸಚಿನ್ ತೆಂಡೂಲ್ಕರ್ ಮುಖ್ಯ ಅತಿಥಿಯಾಗಿದ್ದರು. ವಿನೋದ್ ಕಾಂಬ್ಳಿಯನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ಇನ್ನು ರಾಜ್ ಠಾಕ್ರೆ ಸೇರಿದಂತೆ ಹಲವು ದಿಗ್ಗಜರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮುಖ್ಯ ಅತಿಥಿ ಸಚಿನ್ ತೆಂಡೂಲ್ಕರ್ ವೇದಿಕೆ ಮಧ್ಯಭಾಗದಲ್ಲಿ ಕುಳಿತಿದ್ದರು. ಆಹ್ವಾನಿತ ಗಣ್ಯರ ಪೈಕಿ ವಿನೋದ್ ಕಾಂಬ್ಳಿ ವೇದಿಕೆಯ ಬದಿಯಲ್ಲಿ ಕುಳಿತಿದ್ದರು.
ಕಾರ್ಯಕ್ರಮ ಆರಂಭಕ್ಕೂ ಮೊದಲು ಸಚಿನ್ ತೆಂಡೂಲ್ಕರ್ ವೇದಿಕೆಗೆ ಆಗಮಿಸಿದ್ದರೆ. ಬಳಿಕ ತಮ್ಮ ಮಧ್ಯದ ಆಸನದಲ್ಲಿ ಕುಳಿತುಕೊಂಡಿದ್ದಾರೆ. ರಾಜ್ ಠಾಕ್ರೆ ಸೇರಿದಂತೆ ಕೆಲ ಗಣ್ಯರ ನಡುವೆ ಸಚಿನ್ ಕುಳಿತಿದ್ದಾರೆ. ಇದೇ ವೇಳೆ ಬದಿಯಲ್ಲಿ ಕುಳಿತಿದ್ದ ವಿನೋದ್ ಕಾಂಬ್ಳಿಯನ್ನು ನೋಡಿದ ಸಚಿನ್ ತೆಂಡೂಲ್ಕರ್ ಕುರ್ಚಿಯಿಂದ ಎದ್ದು ಕಾಂಬ್ಳಿ ಬಳಿ ತೆರಳಿದ್ದಾರೆ. ಈ ವೇಳೆ ವಿನೋದ್ ಕಾಂಬ್ಳಿ ಪಕ್ಕದಲ್ಲಿದವರ ಜೊತೆ ಮಾತಿನಲ್ಲಿ ತಲ್ಲೀನರಾಗಿದ್ದರು
ವಿನೋದ್ ಕಾಂಬ್ಳಿ ಬಳಿ ತೆರಳಿದ ಸಚಿನ್ ತೆಂಡೂಲ್ಕರ್, ಕೈಹಿಡಿದು ಮಾತನಾಡಿಸಿದ್ದಾರೆ. ಆದರೆ ವಿನೋದ್ ಕಾಂಬ್ಳಿ ಕೆಲ ಸೆಕೆಂಡ್ಗಳ ವರೆಗೆ ಸಚಿನ್ ತೆಂಡೂಲ್ಕರ್ ಗುರಿತಿಸಲು ಸಾಧ್ಯವಾಗಲಿಲ್ಲ. ಸಚಿನ್ ಎಂದು ತಿಳಿಯುತ್ತಿದ್ದಂತೆ ಕಾಂಬ್ಳಿ ಪುಳಕಿತಗೊಂಡಿದ್ದಾರೆ. ಸಚಿನ್ ಕೈಗಳನ್ನು ಗಟ್ಟಿಯಾಗಿ ಹಿಡಿದು ಮಾತು ಆರಂಭಿಸಿದ್ದಾರೆ. ಕಾಂಬ್ಳಿ ಅತೀವ ಸಂತಸಗೊಂಡಿದ್ದಾರೆ. ಹೀಗಾಗಿ ಪಕ್ಕದಲ್ಲಿ ಕುಳಿತುಕೊಳ್ಳುವಂತೆ ಸಚಿನ್ ಒತ್ತಾಯಿಸಿದ್ದಾರೆ.
ಸಚಿನ್ ಕಾರ್ಯಕ್ರಮ ಹಾಗೂ ತನ್ನ ಜವಾಬ್ದಾರಿ ಕುರಿತು ವಿವರಿಸಲು ಪ್ರಯತ್ನಿಸಿದ್ದಾರೆ. ಇದೇ ವೇಳೆ ವಿನೋದ್ ಕಾಂಬ್ಳಿ ಮಕ್ಕಳಂತೆ ಹಠ ಮಾಡುತ್ತಿರುವುದನ್ನು ಕಂಡ ಕಾರ್ಯಕ್ರಮ ಆಯೋಜಕರು ಸಚಿನ್ ಹಾಗೂ ಕಾಂಬ್ಳಿ ಪಕ್ಕ ಆಗಮಿಸಿದ್ದಾರೆ. ಬಳಿಕ ಕಾಂಬ್ಳಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ. ಕಾಂಬ್ಳಿಗೆ ಕಾರ್ಯಕ್ರಮದ ಕುರಿತು ಹೇಳಿ ಸಚಿನ್ ತಮ್ಮ ಆಸನದತ್ತ ತೆರಳಿದ್ದಾರೆ. ಇತ್ತ ಕಾರ್ಯಕ್ರಮ ಆಯೋಜಕರು ವಿನೋದ್ ಕಾಂಬ್ಳಿಗೆ ವಿವರಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಸಚಿನ್ ತೆರಳುತ್ತಿದ್ದಂತೆ ಕಾಂಬ್ಳಿ ನಿರಾಸೆಗೊಂಡಿದ್ದಾರೆ.
ಸಚಿನ್ ತೆಂಡೂಲ್ಕರ್ ವಿನೋದ್ ಕಾಂಬ್ಳಿಯ ಮನವಿ ತರಿಸ್ಕರಿಸಿ ಮುಂದೆ ಸಾಗಿಲ್ಲ. ಆದರೆ ಕಾರ್ಯಕ್ರಮದಲ್ಲಿ ಸಚಿನ್ ಮುಖ್ಯ ಅತಿಥಿಯಾಗಿದ್ದರು. ಸಚಿನ್ಗಾಗಿ ಆಸನ ನಿಗದಿಪಡಿಸಲಾಗಿತ್ತು. ಸಚಿನ್ ಮಧ್ಯದ ಆಸನದಲ್ಲಿ ಕುಳಿತುಕೊಳ್ಳಬೇಕಿತ್ತು. ಹೀಗಾಗಿ ಕಾಂಬ್ಳಿ ಜೊತೆ ಕುಳಿತುಕೊಳ್ಳಲು ಸಾಧ್ಯವಾಗಿಲ್ಲ. ಆದರೆ ಕಾಂಬ್ಳಿಗ ಇದು ಬೇಸರ ತರಿಸಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿದೆ. ಕಾಂಬ್ಲಿ ಜೊತೆ ಸಚಿನ್ ಕುಳಿತಿಕೊಂಡಿಲ್ಲ ಅನ್ನೋ ಚರ್ಚೆಗಳು ಶುರುವಾಗಿದೆ. ಕಾಂಬ್ಳಿ ಮನವಿ ತಿರಸ್ಕರಿಸಿದ್ದಾರೆ ಅನ್ನೋದು ಚರ್ಚೆಯಾಗುತ್ತಿದೆ. ಆದರೆ ಅಸಲಿಗೆ ಸಚಿನ್ ಮನವಿ ತರಿಸ್ಕರಿಸಿ ಸಾಗಿಲ್ಲ ಅನ್ನೋದು ಸ್ಪಷ್ಟ.
ಇತ್ತ ವಿನೋದ್ ಕಾಂಬ್ಳಿ ಆರೋಗ್ಯ ಕೂಡ ಹದಗೆಟ್ಟಿರುವುದು ಈ ವಿಡಿಯೋದಲ್ಲಿ ಸ್ಪಷ್ಟವಾಗಿದೆ. ವಿನೋದ್ ಕಾಂಬ್ಳಿಗೆ ಸಹಾಯವಿಲ್ಲದೆ ನಡೆಯಲು ಸಾಧ್ಯವಾಗುತ್ತಿಲ್ಲ. ಕುಳಿತರೆ ಎದ್ದು ನಿಲ್ಲಲು ಸಾಧ್ಯವಾಗುತ್ತಿಲ್ಲ. ಯಾರದರೂ ನೆರವು ನೀಡಬೇಕಿದೆ.
ಕ್ರೀಡೆ
ಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!
ಬೆಂಗಳೂರುದ ಎಂ. ಚಿನ್ನಸ್ವಾಮಿ ಕ್ರೀಡಾಂಗಣನಲ್ಲಿ ನಡೆಯುತ್ತಿರುವ Indian Premier League ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ.
ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಆರ್ಸಿಬಿಗೆ ಬ್ಯಾಟಿಂಗ್ ಆಹ್ವಾನಿಸಿದರು. ಆರಂಭದಲ್ಲಿ ವಿರಾಟ್ ಕೊಹ್ಲಿ (28) ಬೇಗ ಔಟ್ ಆದರೂ, ಫಿಲ್ ಸಾಲ್ಟ್ (46) ತಂಡಕ್ಕೆ ವೇಗ ನೀಡಿದರು.
ಆದರೆ, ನಂತರದ ಹಂತದಲ್ಲಿ ಆರ್ಸಿಬಿ ಬ್ಯಾಟಿಂಗ್ ಭರ್ಜರಿಯಾಗಿ ಸಿಡಿಯಿತು. ದೇವದತ್ತ ಪಡಿಕಲ್ (50) ಅರ್ಧಶತಕ ಸಿಡಿಸಿ ತಂಡಕ್ಕೆ ಬಲ ನೀಡಿದರೆ, ನಾಯಕ ರಜತ್ ಪಾಟೀದಾರ್ (48*) ವೇಗದ ಇನ್ನಿಂಗ್ಸ್ ಆಡಿದರು. ಅಂತಿಮವಾಗಿ ಟಿಮ್ ಡೇವಿಡ್ (70*) ಬ್ಯಾಕ್ ಟು ಬ್ಯಾಕ್ ಸಿಕ್ಸರ್ಗಳಿಂದ ಚೆನ್ನೈ ಬೌಲರ್ಗಳನ್ನು ಕಂಗೆಡಿಸಿದರು.
ಪವರ್ಪ್ಲೇಯಲ್ಲೇ ವಿಕೆಟ್ ಪಡೆಯಲು ವಿಫಲವಾದ ಸಿಎಸ್ಕೆ ಬೌಲರ್ಗಳು ಮತ್ತೆ ಅದೇ ತಪ್ಪನ್ನು ಮುಂದುವರೆಸಿದರು. ಪರಿಣಾಮವಾಗಿ, ಆರ್ಸಿಬಿ 20 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭಾರೀ 250 ರನ್ ಗಳಿಸಿತು.
ಈ ಬೃಹತ್ ಗುರಿಯನ್ನು ಬೆನ್ನತ್ತುತ್ತಿರುವ ಸಿಎಸ್ಕೆ, ತನ್ನ ಮೊದಲ ಗೆಲುವು ದಾಖಲಿಸಬಹುದೇ ಎಂಬುದು ಈಗ ಕುತೂಹಲ ಮೂಡಿಸಿದೆ.
ಆರ್ಸಿಬಿ ಬ್ಯಾಟಿಂಗ್ ವಿವರ:
- ವಿರಾಟ್ ಕೊಹ್ಲಿ – 28 (18)
- ಫಿಲ್ ಸಾಲ್ಟ್ – 46 (30)
- ದೇವದತ್ತ ಪಡಿಕಲ್ – 50 (29)
- ರಜತ್ ಪಾಟೀದಾರ್ – 48* (19)
- ಟಿಮ್ ಡೇವಿಡ್ – 70* (25)
ಕ್ರೀಡೆ
ಐಪಿಎಲ್ ಟಿಕೆಟ್ ದುರ್ಬಳಕೆ: ಶಾಸಕರ ಪಾಸ್ ಸ್ನೇಹಿತರ ಕೈಗೆ!
ಬೆಂಗಳೂರುದಲ್ಲಿ ಐಪಿಎಲ್ ಕ್ರೇಜ್ ಗರಿಷ್ಠ ಮಟ್ಟಕ್ಕೆ ಏರಿರುವ ನಡುವೆಯೇ, ಶಾಸಕರಿಗೆ ನೀಡಲಾದ ಉಚಿತ ಟಿಕೆಟ್ ಪಾಸ್ಗಳ ದುರ್ಬಳಕೆಯ ಆರೋಪ ದೊಡ್ಡ ವಿವಾದಕ್ಕೆ ಕಾರಣವಾಗಿದೆ. Indian Premier League ಪಂದ್ಯಗಳಿಗೆ ಸಂಬಂಧಿಸಿದ ಈ ಘಟನೆ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.
ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ಕೆಲವು ಶಾಸಕರು ತಮ್ಮ ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ Karnataka State Cricket Association ವಿಶೇಷ ಅಕ್ರೆಡೆಷನ್ ಕಾರ್ಡ್ ಮಾದರಿಯ ಪಾಸ್ಗಳನ್ನು ವಿತರಿಸಿತ್ತು.
ಆದರೆ, ಈ ಪಾಸ್ಗಳು ಈಗ ಶಾಸಕರ ಕುಟುಂಬದವರಿಗಷ್ಟೇ ಸೀಮಿತವಾಗದೆ, ಅವರ ಮಕ್ಕಳ ಸ್ನೇಹಿತರ ಕೈಗೆ ಸೇರಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಪೊಲೀಸರು ತಪಾಸಣೆ ನಡೆಸಿದ ವೇಳೆ, ಶಾಸಕರ ಕುಟುಂಬದ ಹೆಸರಿನ ಪಾಸ್ ಹಿಡಿದು ಬಂದಿದ್ದ ಕೆಲ ಯುವಕರ ಮೇಲೆ ಅನುಮಾನ ಮೂಡಿದೆ.
ಪರಿಶೀಲನೆ ವೇಳೆ ಯುವಕರು ತಡಬಡಾಯಿಸಿದ್ದು, ಕೊನೆಯಲ್ಲಿ ತಾವು ಶಾಸಕರ ಮಗನ ಸ್ನೇಹಿತರು ಎಂದು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆ ಪೊಲೀಸರು ಅವರನ್ನು ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಈ ಘಟನೆ ಹಲವಾರು ಪ್ರಶ್ನೆಗಳನ್ನು ಎಬ್ಬಿಸಿದೆ. ಜನಪ್ರತಿನಿಧಿಗಳಿಗಾಗಿ ನೀಡಲಾದ ಸೌಲಭ್ಯವನ್ನು ಅನರ್ಹರು ಬಳಸುವುದು ಸರಿಯೇ? ಎಂಬ ಪ್ರಶ್ನೆ ಕೇಳಿಬರುತ್ತಿದೆ.
ಸಾಮಾನ್ಯ ಜನರು ಟಿಕೆಟ್ಗಾಗಿ ಪರದಾಡುತ್ತಿರುವಾಗ, ಉಚಿತ ಪಾಸ್ಗಳು ದುರ್ಬಳಕೆಯಾಗುತ್ತಿರುವುದು ಜನರಲ್ಲಿ ಆಕ್ರೋಶಕ್ಕೂ ಕಾರಣವಾಗಿದೆ. ಇದೀಗ KSCA ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಡ ಹೆಚ್ಚಾಗಿದೆ.
ಕ್ರೀಡೆ
ಗ್ಯಾಸ್ಗಾಗಿ ಜನ ಸಾಲು, ಟಿಕೆಟ್ಗಾಗಿ ಪಿಎ ಸಾಲು: ಶಾಸಕರಿಗೆ ಟೀಕೆ!
ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿರುವ ನಡುವೆ, ಜನಪ್ರತಿನಿಧಿಗಳ ವರ್ತನೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಒಂದು ಕಡೆ ಆಟೋ ಚಾಲಕರು ಗ್ಯಾಸ್ಗಾಗಿ ರಾತ್ರಿಯಿಡೀ ಸಾಲಿನಲ್ಲಿ ನಿಲ್ಲುತ್ತಿರುವಾಗ, ಇನ್ನೊಂದು ಕಡೆ ಶಾಸಕರು IPL 2026 ಟಿಕೆಟ್ ಪಡೆಯಲು ತಮ್ಮ ಪಿಎಗಳನ್ನು ಕ್ಯೂನಲ್ಲಿ ನಿಲ್ಲಿಸಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಮಾಹಿತಿಯ ಪ್ರಕಾರ, ಸರ್ಕಾರ ಮತ್ತು Karnataka State Cricket Association (KSCA) ನಡುವೆ ಪ್ರತಿ ಐಪಿಎಲ್ ಪಂದ್ಯಕ್ಕೆ ಶಾಸಕರಿಗೆ ಉಚಿತವಾಗಿ 3 ಟಿಕೆಟ್ ನೀಡುವ ಕುರಿತು ಒಪ್ಪಂದವಾಗಿದೆ. ಇದರ ಹಿನ್ನೆಲೆಯಲ್ಲಿ, Royal Challengers Bengaluru ಮತ್ತು Chennai Super Kings ನಡುವಿನ ಪಂದ್ಯಕ್ಕೆ ಟಿಕೆಟ್ ಪಡೆಯಲು ಶಾಸಕರ ಪಿಎಗಳು ಸ್ಪೀಕರ್ ಕಚೇರಿ ಮುಂದೆ ಸಾಲಿನಲ್ಲಿ ನಿಂತಿರುವ ದೃಶ್ಯಗಳು ಗಮನ ಸೆಳೆದಿವೆ.
ಸ್ಪೀಕರ್ ಕಚೇರಿಯಲ್ಲೇ ಟಿಕೆಟ್ ವಿತರಣೆ ನಡೆಯುತ್ತಿರುವುದರಿಂದ, ಶಾಸಕರ ಸೂಚನೆ ಮೇರೆಗೆ ಪಿಎಗಳು ಟಿಕೆಟ್ ಪಡೆಯಲು ಕ್ಯೂನಲ್ಲಿ ನಿಂತಿದ್ದಾರೆ ಎಂದು ತಿಳಿದುಬಂದಿದೆ.
ಇದರಿಂದ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ತಮ್ಮ ವೈಯಕ್ತಿಕ ಆಸಕ್ತಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ಎಂಬ ಟೀಕೆಗಳು ಕೇಳಿಬರುತ್ತಿವೆ. ಗ್ಯಾಸ್ ಕೊರತೆ, ದೈನಂದಿನ ಸಮಸ್ಯೆಗಳ ನಡುವೆ ಈ ರೀತಿಯ ಘಟನೆಗಳು ಸಾರ್ವಜನಿಕರ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿವೆ.
ರಾಜಕೀಯ ವಲಯದಲ್ಲಿಯೂ ಈ ಘಟನೆ ಚರ್ಚೆಗೆ ಕಾರಣವಾಗಿದ್ದು, ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಗಳನ್ನು ಮರೆಯಬಾರದು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
-
ದೇಶ11 hours agoಟೆಹ್ರಾನ್ ಬೀದಿಗಳಲ್ಲಿ ಸಂಭ್ರಮ: ಕದನ ವಿರಾಮಕ್ಕೆ ಜನರ ಹರ್ಷ
-
ಚುನಾವಣೆ9 hours agoಉಪಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ? ಆಂತರಿಕ ವರದಿ ಏನು ಹೇಳುತ್ತದೆ
-
ಚುನಾವಣೆ11 hours agoOpinion Poll : ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಫ್ ಫೈಟ್: ಟಿಎಂಸಿ–ಬಿಜೆಪಿ ನಡುವೆ ಕಣ ಕಾದಾಟ!
-
ದೇಶ11 hours agoceasefire ಬಳಿಕ ಅಮೆರಿಕ-ಇರಾನ್ ಪ್ರತಿಕ್ರಿಯೆ ಏನು? ಸಂಪೂರ್ಣ ಮಾಹಿತಿ ಇಲ್ಲಿ
-
ದೇಶ13 hours agoಖರ್ಗೆ ವಿರುದ್ಧ ಗಂಭೀರ ಆರೋಪ: ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಪ್ರಚೋದನೆ? ದೂರು ದಾಖಲು!
-
ದೇಶ10 hours agoಕದನ ವಿರಾಮ ಅಮೆರಿಕದ ಗೆಲುವು: ಶ್ವೇತಭವನ ಘೋಷಣೆ
-
ದೇಶ13 hours agoತಿಪಟೂರಲ್ಲಿ ಕೊಬ್ಬರಿ ಬೆಲೆ ಐತಿಹಾಸಿಕ ಏರಿಕೆ: ಕ್ವಿಂಟಾಲ್ಗೆ ₹32,218 ದಾಖಲೆಯ ಗರಿ!
-
ದೇಶ11 hours agoಯುದ್ಧ ವಿರಾಮ ಎಫೆಕ್ಟ್: ತೈಲ ಬೆಲೆ ಭಾರೀ ಕುಸಿತ, ಮಾರುಕಟ್ಟೆ ಜಿಗಿತ
