ರಾಜ್ಯ
ಉಡುಪಿ: ಶಿರೂರು ಮಠದ ಶ್ರೀ ವೇದವರ್ಧನ ತೀರ್ಥರ ಪ್ರಥಮ ಪರ್ಯಾಯ, 6ರಂದು ಬಾಳೆ ಮುಹೂರ್ತ
ಉಡುಪಿ: ನಾಡಿನ ಪ್ರಸಿದ್ಧ ಧಾರ್ಮಿಕ ಆಚರಣೆಗಳೊಂದಾದ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸುಮಾರು 800ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಪ್ರತಿ 2 ವರ್ಷಕ್ಕೊಮ್ಮೆ ನಡೆಯುವ ಈ ಪರ್ಯಾಯೋತ್ಸವದ ಸಂದರ್ಭದಲ್ಲಿ ಶ್ರೀ ಕೃಷ್ಣಮಠದ ಆಡಳಿತ ಮತ್ತು ಕೃಷ್ಣನ ಪೂಜೆಯ ಅಧಿಕಾರ ಒಂದು ಮಠದಿಂದ ಇನ್ನೊಂದು ಮಠಕ್ಕೆ ಸರದಿಪ್ರಕಾರ ಹಸ್ತಾಂತರವಾಗುತ್ತದೆ. ಅದರಂತೆ ಮುಂದಿನ 2026 ಜನವರಿ 18ರಂದು ಶಿರೂರು ಮಠದ ಪೀಠಾಧಿಪತಿಗಳಾದ ಶ್ರೀ ವೇದವರ್ಧನ ತೀರ್ಥರು, ಈಗಿನ ಪರ್ಯಾಯ ಪೀಠಾಧೀಶರಾಗಿರುವ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಪೂಜಾಧಿಕಾರ ಪಡೆಯಲಿದ್ದಾರೆ. ಅದಕ್ಕೆ ಪೂರ್ವಭಾವಿಯಾಗಿ 4 ಮುಹೂರ್ತಗಳು ನಡೆಯಲಿವೆ.
4 ಮುಹೂರ್ತಗಳು ಯಾವುದು? ಆಚರಣೆ ಹೇಗೆ?: ಸಂಪ್ರದಾಯದಂತೆ ಮೊದಲನೆಯದಾಗಿ ಬಾಳೆ ಮುಹೂರ್ತ, ನಂತರ ಕ್ರಮವಾಗಿ ಕಟ್ಟಿಗೆ ಮುಹೂರ್ತ, ಧಾನ್ಯ ಮುಹೂರ್ತ, ಅಕ್ಕಿ ಮುಹೂರ್ತಗಳು ನಡೆಯುತ್ತವೆ. ಅದರಂತೆ ಮೊದಲ ಮುಹೂರ್ತ ಬಾಳೆ ಮುಹೂರ್ತ ಡಿಸೆಂಬರ್ 6 ರಂದು ಸಂಪನ್ನಗೊಳ್ಳಲಿದೆ.
ಈ ಸಂದರ್ಭದಲ್ಲಿ ಮಠದ ರಥಬೀದಿಯಲ್ಲಿ ಬಾಳೆಗಿಡ, ತುಳಸಿಗಿಡ ಹಾಗೂ ಕಬ್ಬಿನ ಗಿಡಗಳನ್ನು ಮೆರವಣಿಗೆಯ ಮೂಲಕ ತಂದು ಶಿರೂರು ಮಠದ ಜಮೀನಿನಲ್ಲಿ ನೆಡುವ ಧಾರ್ಮಿಕ ವಿಧಿ ವಿಧಾನಗಳು ನಡೆಯುತ್ತದೆ. ಕಟ್ಟಿಗೆ ಮುಹೂರ್ತದಲ್ಲಿ ಮನೆಗಳಿಂದ ಭಕ್ತರು ನೀಡುವ ಕಟ್ಟಿಗೆಗಳನ್ನು ರಥಬೀದಿಯಲ್ಲಿ ಭವ್ಯ ಮೆರವಣಿಗೆ ಮಾಡಿ, ಮಧ್ವಸರೋವರದ ಸಮೀಪ ರಥದ ರೂಪದಲ್ಲಿ ಅವುಗಳನ್ನು ಸಂಗ್ರಹಿಸಲಾಗುತ್ತದೆ. ಪರ್ಯಾಯೋತ್ಸವಕ್ಕೆ ಕೆಲವು ದಿನಗಳ ಮೊದಲು ಧಾನ್ಯ ಹಾಗೂ ಅಕ್ಕಿ ಮುಹೂರ್ತ ನಡೆಸಲಾಗುತ್ತದೆ. ಇದರಲ್ಲಿ ಧಾನ್ಯ ಮತ್ತು ಅಕ್ಕಿ ಮುಡಿಗಳನ್ನು ಭವ್ಯ ಮೆರವಣಿಗೆ ಶ್ರೀ ಕೃಷ್ಣನ ಮಠದಲ್ಲಿ ತಂದಿರಿಸಿ ಬಳಿಕ ಪೂಜೆ ಸಲ್ಲಿಕೆಯಾಗುತ್ತದೆ.
ಈ ಮುಹೂರ್ತಗಳ ಉದ್ದೇಶ: ಉಡುಪಿಯ ಕೃಷ್ಣನನ್ನು ಅನ್ನಬ್ರಹ್ಮ ಎಂದು ಕರೆಯುತ್ತಾರೆ. ಇಲ್ಲಿ ದಿನವೂ ನಡೆಯುವ ಅನ್ನ ದಾಸೋಹಕ್ಕೆ ವಿಶೇಷ ಮಹತ್ವವಿದೆ. ಅನ್ನ ದಾಸೋಹಕ್ಕೆ ಅಗತ್ಯವಾದ ಪರಿಕರಗಳನ್ನು ಸಂಗ್ರಹಿಸುವುದೇ ಈ ಮುಹೂರ್ತಗಳ ಉದ್ದೇಶ. ಪರ್ಯಾಯ ಮಠದ ಮುಂದಿನ 2 ವರ್ಷಗಳ ಕಾಲ ಕೃಷ್ಣ ಭಕ್ತರಿಗೆ ಕೃಷ್ಣನ ಪ್ರಸಾದದ ರೂಪದಲ್ಲಿ ಬಡಿಸುವ ಊಟಕ್ಕೆ ಅಗತ್ಯವಾದ ಬಾಳೆಎಲೆಗಾಗಿ ಬಾಳೆಯ ಗಿಡಗಳನ್ನು ನೆಡಲಾಗುತ್ತದೆ. ಅದೇ ರೀತಿ ಅನ್ನಪ್ರಸಾದ ತಯಾರಿಕೆಗೆ ಕಟ್ಟಿಗೆ, ದಾನ್ಯ ಮತ್ತು ಅಕ್ಕಿಯನ್ನು ಸಂಗ್ರಹಿಸಲಾಗುತ್ತದೆ.
ಡಿ.6ರಂದು ಬೆಳಗ್ಗೆ 7 ಗಂಟೆಗೆ ಬಾಳೆ ಮುಹೂರ್ತ ನಡೆಯಲಿದೆ. ಮುಂದೆ ಪರ್ಯಾಯ ಪೀಠಾರೋಹಣ ಮಾಡಲಿರುವ ಶಿರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥರು ಬಾಳೆ ಮುಹೂರ್ತದಲ್ಲಿ ಭಾಗವಹಿಸಲಿದ್ದಾರೆ. ಶಿರೂರು ಮಠದ ಕೀರ್ತಿಶೇಷ ಶ್ರೀ ಲಕ್ಷ್ಮೀವರ ತೀರ್ಥರ ನಂತರ ಅವರ ಉತ್ತರಾಧಿಕಾರಿಯಾಗಿ ಶ್ರೀ ವೇದವರ್ಧನ ತೀರ್ಥರು ಶಿರೂರು ಪೀಠವನ್ನೇರಿದ್ದು, ತಮ್ಮ ಮೊದಲ ಪರ್ಯಾಯ ಮಹೋತ್ಸವವನ್ನು 2026 ಜನವರಿ 18 ರಂದು ನಡೆಸಲಿದ್ದಾರೆ. ಮುಂದೆ 2028ರ ಜ.18ರವರೆಗೆ ಅವರು ಕೃಷ್ಣಮಠದ ಆಡಳಿತ, ಕೃಷ್ಣನ ಪೂಜೆ, ಅನ್ನದಾಸೋಹ ಮತ್ತು ವೈವಿಧ್ಯಮಯ ಧಾರ್ಮಿಕ – ಸಾಂಸ್ಕೃತಿಕ – ಸಾಮಾಜಿಕ ಕಾರ್ಯಗಳನ್ನು ನಡೆಸಲಿದ್ದಾರೆ.
ಈ ಬಗ್ಗೆ ಈ ಟಿವಿ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಉಪನ್ಯಾಸಕ ಅಶ್ವಥ್ ಭಾರಧ್ವಾಜ್ “ಬಾಳೆ ದೇವರ ಪೂಜೆಯ ಆರಾಧನೆಗೆ ಮಹತ್ವವನ್ನು ಪಡೆದುಕೊಂಡಿದೆ. ಮುಂದೆ ಬರುವ ಪರ್ಯಾಯ ಮಹೋತ್ಸವದಲ್ಲಿ ಮುಂದಿನ 2 ವರ್ಷಗಳ ಕಾಲ ಕೃಷ್ಣಭಕ್ತರಿಗೆ ಕೃಷ್ಣನ ಪ್ರಸಾದದ ರೂಪದಲ್ಲಿ ಬಡಿಸುವ ಊಟಕ್ಕೆ ಅಗತ್ಯವಾದ ಬಾಳೆ ಎಲೆಗಾಗಿ ಬಾಳೆಯ ಗಿಡಗಳನ್ನು ನೆಡಲಾಗುತ್ತದೆ. ಬಾಳೆ ಗಿಡದಲ್ಲಿ ಆತ್ಯಂತ ಆಯುರ್ವೇದ ಗುಣಗಳು ಸಹ ಇದೆ” ಎಂದು ತಿಳಿಸಿದರು.
ದೇಶ
ಕಾಂಗ್ರೆಸ್ನಲ್ಲಿ ಭೂಕಂಪ: ನಜೀರ್ ಅಹ್ಮದ್ಗೆ ಸುರ್ಜೇವಾಲಾ ಅಲ್ಟಿಮೇಟಂ
ಬೆಂಗಳೂರು: ಕಾಂಗ್ರೆಸ್ನಲ್ಲಿ ಒಳಅಸಮಾಧಾನ ತೀವ್ರಗೊಂಡಿರುವ ನಡುವೆಯೇ, ರಾಜ್ಯ ಉಸ್ತುವಾರಿ Randeep Singh Surjewala ಅವರು ಸಿಎಂ ರಾಜಕೀಯ ಕಾರ್ಯದರ್ಶಿ Naseer Ahmed ಅವರಿಗೆ ಕಠಿಣ ಡೆಡ್ಲೈನ್ ನೀಡಿದ್ದಾರೆ.
ಇಂದು (ಏಪ್ರಿಲ್ 13) ಸಂಜೆಯೊಳಗೆ ರಾಜೀನಾಮೆ ಸಲ್ಲಿಸುವಂತೆ ಸೂಚಿಸಿರುವ ಸುರ್ಜೇವಾಲಾ, ಸಮಯಕ್ಕೆ ರಾಜೀನಾಮೆ ನೀಡದಿದ್ದರೆ ಅವರನ್ನು ಸ್ಥಾನದಿಂದ ವಜಾಗೊಳಿಸಲು ಮುಖ್ಯಮಂತ್ರಿ Siddaramaiah ಅವರಿಗೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ, “ನಸೀರ್ ಅಹ್ಮದ್ ಇನ್ನೂ ರಾಜೀನಾಮೆ ನೀಡಿಲ್ಲ. ಮುಂದಿನ ದಿನಗಳಲ್ಲಿ ಕೊಡಬಹುದು. ಕಾಂಗ್ರೆಸ್ ಸೋಲನ್ನು ಒಪ್ಪಿಕೊಂಡಿಲ್ಲ. ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.
ದಾವಣಗೆರೆ ದಕ್ಷಿಣ ಉಪಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಹೆಚ್ಚಾಗಿದ್ದು, ಕೆಲವು ನಾಯಕರ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿವೆ. ನಸೀರ್ ಅಹ್ಮದ್ ಅವರು ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರೆಂದು ಸಿಎಂ ಹೇಳಿದ್ದಾರೆ.
ಇದಕ್ಕೂ ಮೊದಲು ಸುರ್ಜೇವಾಲಾ ಅವರು ಸಚಿವ Zameer Ahmed Khan, Abdul Jabbar ಹಾಗೂ ನಸೀರ್ ಅಹ್ಮದ್ ವಿರುದ್ಧ ವರದಿ ಸಲ್ಲಿಸಿದ್ದರು. ಈಗಾಗಲೇ ಅಬ್ದುಲ್ ಜಬ್ಬಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಅದನ್ನು D. K. Shivakumar ಅಂಗೀಕರಿಸಿದ್ದಾರೆ.
ಈ ಬೆಳವಣಿಗೆ ಕಾಂಗ್ರೆಸ್ ಒಳರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದ್ದು, ಮುಂದಿನ ಕ್ರಮಗಳ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
ದೇಶ
ಸಚಿವ ಸ್ಥಾನ ಕೇಳೋದು ತಪ್ಪಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ
ಬೆಂಗಳೂರು: ಹಿರಿಯ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಗೃಹ ಸಚಿವ G. Parameshwara ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಅದೇನು ಗ್ಯಾಂಬ್ಲಿಂಗ್ ಅಲ್ಲ, ಶಾಸಕರು ತಮ್ಮ ಅರ್ಹತೆಯ ಆಧಾರದಲ್ಲಿ ಕೇಳುತ್ತಿದ್ದಾರೆ” ಎಂದು ಹೇಳಿದ್ದಾರೆ.
ಎರಡು ಮೂರು ಬಾರಿ ಗೆದ್ದಿರುವ ಶಾಸಕರು ಸಚಿವರಾಗಲು ಸಮರ್ಥರು. ಹೀಗಾಗಿ ಸಚಿವ ಸ್ಥಾನಕ್ಕಾಗಿ ಕೇಳುವುದು ಸಹಜ. ಆದರೆ ಅಂತಿಮ ನಿರ್ಧಾರ ಮುಖ್ಯಮಂತ್ರಿ ಮತ್ತು ಹೈಕಮಾಂಡ್ ಕೈಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.
ಪಕ್ಷ ಪುನಾರಚನೆ ಕುರಿತು ಮಾತನಾಡಿದ ಪರಮೇಶ್ವರ್, “ನಾಯಕತ್ವ ವಿಚಾರವಾಗಲಿ, ಸಚಿವ ಸಂಪುಟ ಪುನಾರಚನೆ ಆಗಲಿ, ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಹಿರಂಗವಾಗಿ ಕೇಳುವುದರಲ್ಲಿ ತಪ್ಪೇನಿಲ್ಲ” ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಈಗ ಪುನಾರಚನೆ ಚರ್ಚೆ ನಡೆಯುತ್ತಿದೆ. ಅಧ್ಯಕ್ಷ ಸ್ಥಾನ ವಿಚಾರವನ್ನು ಹೈಕಮಾಂಡ್ಗೆ ಬಿಟ್ಟಿದ್ದೇವೆ” ಎಂದು ಹೇಳಿದರು.
ಇನ್ನೂ ದಾವಣಗೆರೆ ಕ್ಷೇತ್ರದಲ್ಲಿ Abdul Jabbar ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ಅವರು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಉಲ್ಲೇಖಿಸಿದರು. D. K. Shivakumar ಹೊಸ ಸಮಿತಿ ರಚನೆ ಮಾಡಲಿದ್ದಾರೆ ಎಂದು ತಿಳಿಸಿದರು.
ಪುನಾರಚನೆ ನಡೆದರೆ ಹಿರಿಯರು ಸ್ಥಾನ ಬಿಟ್ಟುಕೊಡಬೇಕಾದರೆ ನಾವು ಒಪ್ಪಲೇಬೇಕು. ಹೈಕಮಾಂಡ್ ತೀರ್ಮಾನಕ್ಕೆ ಯಾರೂ ವಿರೋಧಿಸುವ ಪ್ರಶ್ನೆಯೇ ಇಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.
ದೇಶ
ಬೆಂಗಳೂರು ಬಿಸಿ ಏರಿಕೆ: 38 ಡಿಗ್ರಿ ತಲುಪುವ ಸಾಧ್ಯತೆ
ಬೆಂಗಳೂರು: ಬೇಸಿಗೆ ಆರಂಭವಾಗುತ್ತಿದ್ದಂತೆ Bengaluru ಸೇರಿದಂತೆ ರಾಜ್ಯದ ಹಲವೆಡೆ ತಾಪಮಾನ ಏರಿಕೆ ಕಂಡುಬರುತ್ತಿದ್ದು, ಮುಂದಿನ ನಾಲ್ಕೈದು ದಿನಗಳಲ್ಲಿ ಬಿಸಿಲಬ್ಬರ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು India Meteorological Department (IMD) ಎಚ್ಚರಿಕೆ ನೀಡಿದೆ.
ಈಗಾಗಲೇ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸನಿಹ ತಲುಪಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಸದ್ಯ ತಾಪಮಾನ 35 ಡಿಗ್ರಿ ಸುತ್ತಮುತ್ತ ದಾಖಲಾಗುತ್ತಿದ್ದು, ಮುಂದಿನ ಐದು ದಿನಗಳಲ್ಲಿ 37 ರಿಂದ 38 ಡಿಗ್ರಿ ಸೆಲ್ಸಿಯಸ್ವರೆಗೆ ಏರಿಕೆಯಾಗುವ ಸಾಧ್ಯತೆ ಇದೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ತೀವ್ರ ಬಿಸಿಲು ಇರುವುದರಿಂದ ಅನಗತ್ಯ ಹೊರಗಡೆ ಓಡಾಟವನ್ನು ತಪ್ಪಿಸಿ ಆರೋಗ್ಯದ ಕಡೆ ಹೆಚ್ಚು ಗಮನಹರಿಸಲು ಸೂಚಿಸಲಾಗಿದೆ.
ಇನ್ನೂ ಉತ್ತರ ಒಳನಾಡಿನ ಬೀದರ್, ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ, ವಿಜಯಪುರ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ತಾಪಮಾನ 42 ರಿಂದ 44 ಡಿಗ್ರಿವರೆಗೆ ಏರಿಕೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲೂ 2 ಡಿಗ್ರಿ ಏರಿಕೆ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲೂ 2 ರಿಂದ 3 ಡಿಗ್ರಿವರೆಗೆ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು IMD ತಿಳಿಸಿದೆ.
-
ದೇಶ22 hours agoಡಿಕೆ ಶಿವಕುಮಾರ್ ದೊಡ್ಡ ನಿರ್ಧಾರ: ಸಮಿತಿ ಡಿಸ್ಮಿಸ್!
-
ದೇಶ23 hours agoಸೌದಿ ರಕ್ಷಣೆಗೆ ಪಾಕ್ ಸೇನೆ: ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಹೆಚ್ಚಳ
-
ದೇಶ22 hours agoAmarnath Yatra 2026: ಬಾಬಾ ಬರ್ಫಾನಿ ದರ್ಶನಕ್ಕೆ ಸಜ್ಜಾಗಿ: ಅಮರನಾಥ ಯಾತ್ರೆ ಸಂಪೂರ್ಣ ಮಾಹಿತಿ
-
ಚುನಾವಣೆ22 hours agoದಾವಣಗೆರೆ ಟಿಕೆಟ್ ವಿವಾದ: ಮುಸ್ಲಿಂ ಸಮುದಾಯಕ್ಕೆ ಅನ್ಯಾಯವೇ?
-
ದೇಶ5 hours agoಅಲದಾಳ ಸಭೆ: ದಡ್ಡಿ ಗ್ರಾಮದ ಸಮಸ್ಯೆ ಫೋಕಸ್ನಲ್ಲಿ
-
ಚುನಾವಣೆ4 hours agoಸೈಕಲ್ ರೈಡ್ ವೇಳೆ ಶಾಕ್: ಬಾಂಬ್ ಅನ್ನಿಸಿ ಓಡಿದ ದಳಪತಿ ವಿಜಯ್
-
ದೇಶ23 hours ago8 ದಶಕಗಳ ಗಾನಯಾನ ಅಂತ್ಯ: ಆಶಾ ಭೋಸ್ಲೆ ಇನ್ನು ಇಲ್ಲ
-
ದೇಶ5 hours agoಬೆಂಗಳೂರು ಬಿಸಿ ಏರಿಕೆ: 38 ಡಿಗ್ರಿ ತಲುಪುವ ಸಾಧ್ಯತೆ
