ಕ್ರೀಡೆ
ಕೇವಲ ಕ್ರಿಕೆಟರ್ ಅಲ್ಲ, ಅವರೊಂದು ಭಾವನೆ’-ಕಿಂಗ್ ಕೊಹ್ಲಿಗೆ ನೇಪಾಳ ಆಟಗಾರ
ಇಲ್ಲಿನ ಪಲ್ಲೆಕೆಲೆ ಇಂಟರ್ ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೋಮವಾರ ನಡೆದಿದ್ದ ಏಷ್ಯಾ ಪಂದ್ಯದಲ್ಲಿ ನೇಪಾಳ ವಿರುದ್ಧ ಭಾರತ ತಂಡ 10 ವಿಕೆಟ್ಗಳಿಂದ ಗೆಲುವು ಪಡೆದಿತ್ತು. ಆ ಮೂಲಕ ಟೂರ್ನಿಯ ಸೂಪರ್-4ರ ಹಂತಕ್ಕೆ ಅಧಿಕೃತವಾಗಿ ಪ್ರವೇಶ ಪಡೆದಿತ್ತು. ಈ ಪಂದ್ಯದ ಬಳಿಕ ನೇಪಾಳ ಆಟಗಾರರು ಟೀಮ್ ಇಂಡಿಯಾ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಜೊತೆ ಸಂಭಾಷಣೆ ನಡೆಸಿದ್ದರು.
ವಿರಾಟ್ ಕೊಹ್ಲಿಯಿಂದ ಸಹಿ ಹಾಕಿ ಶೂ ಅನ್ನು ಉಡುಗೊರೆಯಾಗಿ ಪಡೆದಿರುವುದಾಗಿ ನೇಪಾಳ ತಂಡದ ಆಟಗಾರ ಸೋಮ್ಪಾಲ್ ಕಾಮಿ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ನಲ್ಲಿ ಹೇಳಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ಅವರು ಸಹಿ ಹಾಕಿದ ಶೂ ಅನ್ನು ಪ್ರದರ್ಶನ ಮಾಡುತ್ತಿರುವ ಫೋಟೋವನ್ನು 27ರ ಪ್ರಾಯದ ಸೋಮ್ಪಾಲ್ ಕಾಮಿ ಹಂಚಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ ಕೇವಲ ಕ್ರಿಕೆಟಿಗ ಮಾತ್ರವಲ್ಲ, ಅವರೊಂದು ಭಾವನೆ,” ಎಂದು ತಾವು ಹಂಚಿಕೊಂಡಿರುವ ವಿರಾಟ್ ಕೊಹ್ಲಿ ಜೊತೆಗಿನ ಫೋಟೋಗೆ ಸೋಮ್ಪಾಲ್ ಕಾಮಿ ಈ ರೀತಿಯ ಶೀರ್ಷಿಕೆ ನೀಡಿದ್ದಾರೆ.
ಅಂದ ಹಾಗೆ ವಿರಾಟ್ ಕೊಹ್ಲಿ ನೇಪಾಳ ವಿರುದ್ಧ ಬ್ಯಾಟ್ ಮಾಡಲು ಅವಕಾಶ ಪಡೆದುಕೊಳ್ಳಲಿಲ್ಲ. ನೇಪಾಳ ತಂಡ 231 ರನ್ಗಳ ಗುರಿ ನೀಡಿದ್ದರ ಹೊರತಾಗಿಯೂ ಮಳೆ ಬಂದ ಕಾರಣ, ಡಿಎಲ್ಎಸ್ ನಿಯಮದ ಪ್ರಕಾರ 23 ಓವರ್ಗಳಿಗೆ ಭಾರತ ತಂಡಕ್ಕೆ 145 ರನ್ಗಳ ಗುರಿಯನ್ನು ನೀಡಲಾಯಿತು. ರೋಹಿತ್ ಶರ್ಮಾ ಹಾಗೂ ಶುಭಮನ್ ಗಿಲ್ ಜೋಡಿ ಮೊದಲನೇ ವಿಕೆಟ್ಗೆ 147 ರನ್ ಗಳಿಸಿ ತಂಡವನ್ನು ಗೆಲ್ಲಿಸಿತು.
ಪಾಕಿಸ್ತಾನ ವಿರುದ್ಧ ಭಾರತ ತಂಡದ ಆರಂಭಿಕ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು. ತಮ್ಮ ನೆಚ್ಚಿನ ಕವರ್ ಡ್ರೈವ್ ಬೌಂಡರಿ ಮೂಲಕ ಖಾತೆ ತೆರೆದಿದ್ದರು. ಆದರೆ, ಶಾಹೀನ್ ಶಾ ಅಫ್ರಿದಿ ಎಸೆತದಲ್ಲಿ ಬೌಲ್ಡ್ ಆಗಿದ್ದರು. ಆ ಮೂಲಕ ಏಷ್ಯಾ ಕಪ್ ಆರಂಭಿಕ ಪಂದ್ಯದಲ್ಲಿಯೇ ವಿರಾಟ್ ಕೊಹ್ಲಿ ನಿರಾಶೆ ಮೂಡಿಸಿದ್ದರು.
ನೇಪಾಳ ವಿರುದ್ಧ 10 ವಿಕೆಟ್ಗಳ ಭರ್ಜರಿ ಗೆಲುವು ಪಡೆಯುವ ಮೂಲಕ ಭಾರತ ತಂಡ ಏಷ್ಯಾ ಕಪ್ ಟೂರ್ನಿಯ ಸೂಪರ್-4ರ ಹಂತಕ್ಕೆ ಅಧಿಕೃತವಾಗಿ ಅರ್ಹತೆ ಪಡೆಯಿತು. ಪಾಕ್ ವಿರುದ್ಧದ ಪಂದ್ಯ ಮಳೆಯಿಂದ ಫಲಿತಾಂಶ ಮೂಡಿಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಎರಡೂ ತಂಡಗಳಿಗೆ ತಲಾ ಒಂದೊಂದು ಅಂಕ ನೀಡಲಾಗಿತ್ತು. ಇದೀಗ ಒಟ್ಟು 3 ಅಂಕಗಳಿಂದ ಭಾರತ ಸೂಪರ್-4ರ ಹಂತಕ್ಕೆ ಪ್ರವೇಶ ಮಾಡಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ದ ಮತ್ತೊಂದು ಪಂದ್ಯ ಆಡಲು ಸಜ್ಜಾಗುತ್ತಿದೆ
ಕ್ರೀಡೆ
‘We Did It Twice’ ಟೀ-ಶರ್ಟ್ ವೈರಲ್! ಆರ್ಸಿಬಿ ಗೆಲುವಿನ ಅಪರೂಪದ ಫೋಟೋ ಹಂಚಿಕೊಂಡ ಅನುಷ್ಕಾ ಶರ್ಮಾ
ಬೆಂಗಳೂರು: ಐಪಿಎಲ್ 2026ರ ಚಾಂಪಿಯನ್ ಆಗಿ ಹೊರಹೊಮ್ಮಿದ Royal Challengers Bengaluru ತಂಡದ ಸಂಭ್ರಮ ಇನ್ನೂ ಮುಂದುವರಿದಿದೆ. ಸತತ ಎರಡನೇ ಬಾರಿ ಟ್ರೋಫಿ ಗೆದ್ದಿರುವ ಆರ್ಸಿಬಿ ಆಟಗಾರರು ಹಾಗೂ ಅಭಿಮಾನಿಗಳು ಐತಿಹಾಸಿಕ ಗೆಲುವನ್ನು ವಿಶೇಷವಾಗಿ ಆಚರಿಸುತ್ತಿದ್ದು, ಇದೀಗ ನಟಿ Anushka Sharma ಹಂಚಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಅನುಷ್ಕಾ ಶರ್ಮಾ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಆರ್ಸಿಬಿ ತಂಡದ ಗೆಲುವಿನ ಸಂಭ್ರಮದ ಕೆಲವು ಅಪರೂಪದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಈ ಚಿತ್ರಗಳಲ್ಲಿ ಆರ್ಸಿಬಿಯ ಸ್ಟಾರ್ ಬ್ಯಾಟರ್ Virat Kohli ಹಾಗೂ ತಂಡದ ಬ್ಯಾಟಿಂಗ್ ಕೋಚ್ Dinesh Karthik ಕಾಣಿಸಿಕೊಂಡಿದ್ದಾರೆ.
ಆದರೆ ಎಲ್ಲರ ಗಮನ ಸೆಳೆದಿರುವುದು ವಿರಾಟ್ ಕೊಹ್ಲಿ ಧರಿಸಿದ್ದ ವಿಶೇಷ ಟೀ-ಶರ್ಟ್. ಟೀ-ಶರ್ಟ್ನ ಹಿಂಭಾಗದಲ್ಲಿ “One Felt Nice… We Did It Twice” ಎಂಬ ಸಾಲು ಮುದ್ರಿತವಾಗಿದ್ದು, ಆರ್ಸಿಬಿಯ ಎರಡನೇ ಐಪಿಎಲ್ ಪ್ರಶಸ್ತಿಯ ಸಂಭ್ರಮವನ್ನು ಪ್ರತಿಬಿಂಬಿಸಿದೆ. ಈ ಸಂದೇಶ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
ಕಳೆದ ಸೀಸನ್ನಲ್ಲಿ ಪ್ರಶಸ್ತಿ ಗೆದ್ದು ದೀರ್ಘಕಾಲದ ಕನಸನ್ನು ನನಸು ಮಾಡಿಕೊಂಡಿದ್ದ ಆರ್ಸಿಬಿ, ಇದೀಗ 2026ರ ಫೈನಲ್ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ಮತ್ತೊಮ್ಮೆ ಕಪ್ ಎತ್ತಿಹಿಡಿದಿದೆ. ಹೀಗಾಗಿ ಈ ಬಾರಿ ಗೆಲುವಿನ ಸಂಭ್ರಮವೂ ವಿಶೇಷವಾಗಿದ್ದು, ಆಟಗಾರರು ತಮ್ಮ ಯಶಸ್ಸನ್ನು ವಿಭಿನ್ನ ರೀತಿಯಲ್ಲಿ ಆಚರಿಸುತ್ತಿದ್ದಾರೆ.
ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಅವರ ಫೋಟೋಗಳಿಗೆ ಅಭಿಮಾನಿಗಳಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದ್ದು, “ಈ ಸಲ ಮಾತ್ರವಲ್ಲ, ಎರಡು ಸಲ ಕಪ್ ನಮ್ದೇ” ಎಂಬ ಕಾಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಕ್ರೀಡೆ
ವಿರಾಟ್ ಕೊಹ್ಲಿ ಮಾಸ್ಟರ್ ಕ್ಲಾಸ್; ಆರ್ಸಿಬಿ ಐತಿಹಾಸಿಕ ಗೆಲುವಿಗೆ MLA S T Somashekhar ಮೆಚ್ಚುಗೆ
ಬೆಂಗಳೂರು: ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ಸತತ ಎರಡನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡಕ್ಕೆ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಸಂತಸ ವ್ಯಕ್ತಪಡಿಸಿದ ಅವರು, ಆರ್ಸಿಬಿ ತಂಡದ ಎಲ್ಲ ಆಟಗಾರರು, ತರಬೇತುದಾರರು ಹಾಗೂ ನಿರ್ವಹಣಾ ಮಂಡಳಿಗೆ ಶುಭಾಶಯ ಕೋರಿದರು. ಫೈನಲ್ ಪಂದ್ಯದಲ್ಲಿ ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ವೆಂಕಟೇಶ್ ಅಯ್ಯರ್ ಅವರೊಂದಿಗೆ ತಂಡಕ್ಕೆ ಭದ್ರ ಅಡಿಪಾಯ ಹಾಕಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
“ಗುರಿ ಬೆನ್ನತ್ತಿದ ಆರಂಭದಲ್ಲೇ ವಿರಾಟ್ ಕೊಹ್ಲಿ ಹಾಗೂ ವೆಂಕಟೇಶ್ ಅಯ್ಯರ್ ಅವರ ಆಕರ್ಷಕ ಆಟದಿಂದ ಆರ್ಸಿಬಿ ತಂಡ ಪವರ್ಪ್ಲೇನಲ್ಲೇ ಗೆಲುವಿನ ಹಾದಿಯನ್ನು ಸುಗಮಗೊಳಿಸಿತು. ವಿರಾಟ್ ಕೊಹ್ಲಿ ಮತ್ತೊಮ್ಮೆ ತಮ್ಮ ಅನುಭವ ಮತ್ತು ಕ್ಲಾಸ್ ತೋರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು,” ಎಂದು ಎಸ್.ಟಿ. ಸೋಮಶೇಖರ್ ಹೇಳಿದರು.
ತಾವು ಆರ್ಸಿಬಿಯ ದೊಡ್ಡ ಅಭಿಮಾನಿಯಾಗಿದ್ದು, ತಂಡವು ಎರಡನೇ ಬಾರಿ ಐಪಿಎಲ್ ಟ್ರೋಫಿ ಗೆದ್ದಿರುವುದು ಅಪಾರ ಸಂತಸ ತಂದಿದೆ ಎಂದರು. “ನಿನ್ನೆ ಬೆಂಗಳೂರಿನಲ್ಲಿ ಮಾತ್ರವಲ್ಲ, ಇಡೀ ಕರ್ನಾಟಕ ರಾಜ್ಯದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಲಕ್ಷಾಂತರ ಆರ್ಸಿಬಿ ಅಭಿಮಾನಿಗಳು ತಂಡದ ಐತಿಹಾಸಿಕ ಗೆಲುವನ್ನು ಸಂಭ್ರಮದಿಂದ ಆಚರಿಸಿದರು. ಕರ್ನಾಟಕದ ಹೆಮ್ಮೆ ಎನಿಸಿರುವ ಆರ್ಸಿಬಿ ಮತ್ತೊಮ್ಮೆ ಚಾಂಪಿಯನ್ ಆಗಿರುವುದು ನಮಗೆಲ್ಲಾ ಹೆಮ್ಮೆಯ ವಿಚಾರ,” ಎಂದು ಹೇಳಿದರು.
ಆರ್ಸಿಬಿ ಅಭಿಮಾನಿಗಳ ಬಹುಕಾಲದ ಕನಸಾಗಿದ್ದ ‘ಈ ಸಲ ಕಪ್ ನಮ್ದೇ’ ಎಂಬ ಘೋಷಣೆ ಇದೀಗ ಮತ್ತೊಮ್ಮೆ ನಿಜವಾಗಿದೆ. ಸತತ ಎರಡನೇ ಬಾರಿಗೆ ಟ್ರೋಫಿ ಗೆದ್ದು ಆರ್ಸಿಬಿ ಐಪಿಎಲ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದೆ. ಈ ಗೆಲುವು ಕರ್ನಾಟಕದ ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳಿಗೆ ಮರೆಯಲಾಗದ ಕ್ಷಣಗಳನ್ನು ನೀಡಿದೆ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಸಂತಸ ವ್ಯಕ್ತಪಡಿಸಿದರು.
ಕ್ರೀಡೆ
15ರ ಹರೆಯದಲ್ಲೇ ಐಪಿಎಲ್ ಇತಿಹಾಸ ನಿರ್ಮಿಸಿದ ವೈಭವ್ ಸೂರ್ಯವಂಶಿ! 5 ಪ್ರಶಸ್ತಿಗಳೊಂದಿಗೆ ಭರ್ಜರಿ ದಾಖಲೆ
ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026 ಆವೃತ್ತಿಯಲ್ಲಿ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಹೊಸ ಇತಿಹಾಸ ಬರೆದಿದ್ದಾರೆ. ಕೇವಲ 15 ವರ್ಷದ ವಯಸ್ಸಿನಲ್ಲೇ ಟೂರ್ನಿಯಲ್ಲಿ ಅತಿ ಹೆಚ್ಚು ರನ್ಗಳನ್ನು ಕಲೆಹಾಕಿ ಆರೆಂಜ್ ಕ್ಯಾಪ್ ಗೆದ್ದ ಅತ್ಯಂತ ಕಿರಿಯ ಆಟಗಾರ ಎಂಬ ಅಪರೂಪದ ದಾಖಲೆಗೆ ಅವರು ಪಾತ್ರರಾಗಿದ್ದಾರೆ.
ಪ್ರಸಕ್ತ ಆವೃತ್ತಿಯಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ Vaibhav Suryavanshi, 16 ಪಂದ್ಯಗಳಲ್ಲಿ ಒಟ್ಟು 776 ರನ್ಗಳನ್ನು ಸಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಈ ಮೂಲಕ ಕಳೆದ ಆವೃತ್ತಿಯಲ್ಲಿ 15 ಪಂದ್ಯಗಳಿಂದ 759 ರನ್ ಗಳಿಸಿ ಆರೆಂಜ್ ಕ್ಯಾಪ್ ಪಡೆದಿದ್ದ Sai Sudharsan ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಸಾಯಿ ಸುದರ್ಶನ್ 23 ವರ್ಷ ವಯಸ್ಸಿನಲ್ಲಿ ಸಾಧಿಸಿದ್ದ ಈ ಮೈಲಿಗಲ್ಲನ್ನು ವೈಭವ್ ಕೇವಲ 15ನೇ ವಯಸ್ಸಿನಲ್ಲಿ ಮುಟ್ಟಿರುವುದು ವಿಶೇಷ.
ಆರೆಂಜ್ ಕ್ಯಾಪ್ ಗೆಲ್ಲುವುದರ ಜೊತೆಗೆ ವೈಭವ್ ಸೂರ್ಯವಂಶಿ ಟೂರ್ನಿಯ ವಿವಿಧ ವಿಭಾಗಗಳಲ್ಲಿ ಪ್ರಾಬಲ್ಯ ಮೆರೆದು ಒಟ್ಟು ಐದು ಪ್ರಮುಖ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಟೂರ್ನಿಯ ಅತ್ಯುತ್ತಮ ಆಟಗಾರ (Most Valuable Player) ಪ್ರಶಸ್ತಿಯನ್ನು 436.5 ಪಾಯಿಂಟ್ಸ್ಗಳೊಂದಿಗೆ ಗೆದ್ದ ಅವರು 15 ಲಕ್ಷ ರೂ. ಬಹುಮಾನ ಪಡೆದರು. 237.3 ಸ್ಟ್ರೈಕ್ರೇಟ್ನೊಂದಿಗೆ ರನ್ಗಳ ಸುರಿಮಳೆಗೈದು ಸೂಪರ್ ಸ್ಟ್ರೈಕರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದು, ಇದರೊಂದಿಗೆ Tata Sierra ಕಾರನ್ನೂ ಬಹುಮಾನವಾಗಿ ಪಡೆದಿದ್ದಾರೆ.
ಇದಲ್ಲದೆ, ಟೂರ್ನಿಯಲ್ಲಿ ಬರೋಬ್ಬರಿ 75 ಸಿಕ್ಸರ್ಗಳನ್ನು ಸಿಡಿಸಿ ಸೂಪರ್ ಸಿಕ್ಸರ್ ಪ್ರಶಸ್ತಿಯನ್ನೂ ಗೆದ್ದಿದ್ದಾರೆ. ಉದಯೋನ್ಮುಖ ಆಟಗಾರ (Emerging Player of the Season) ಗೌರವವೂ ಇವರ ಪಾಲಾಗಿದೆ. ಈ ಎಲ್ಲ ಸಾಧನೆಗಳ ಮೂಲಕ ಒಟ್ಟು 45 ಲಕ್ಷ ರೂ. ನಗದು ಬಹುಮಾನ ಹಾಗೂ ಟಾಟಾ ಸಿಯೆರಾ ಕಾರನ್ನು ತಮ್ಮದಾಗಿಸಿಕೊಂಡಿದ್ದಾರೆ.
ಹದಿನೈದರ ಹರೆಯದಲ್ಲೇ ಅನುಭವಿ ಬೌಲರ್ಗಳನ್ನು ಧೂಳಿಪಟ ಮಾಡಿ ಐಪಿಎಲ್ನ ಒಂದೇ ಆವೃತ್ತಿಯಲ್ಲಿ ಐದು ಪ್ರಮುಖ ಪ್ರಶಸ್ತಿಗಳನ್ನು ಗೆದ್ದಿರುವ ವೈಭವ್ ಸೂರ್ಯವಂಶಿ, ಭಾರತೀಯ ಕ್ರಿಕೆಟ್ನ ಮುಂದಿನ ಸೂಪರ್ಸ್ಟಾರ್ ಎಂಬ ಭರವಸೆಯನ್ನು ಮೂಡಿಸಿದ್ದಾರೆ.
-
ಕ್ರೀಡೆ14 hours ago15ರ ಹರೆಯದಲ್ಲೇ ಐಪಿಎಲ್ ಇತಿಹಾಸ ನಿರ್ಮಿಸಿದ ವೈಭವ್ ಸೂರ್ಯವಂಶಿ! 5 ಪ್ರಶಸ್ತಿಗಳೊಂದಿಗೆ ಭರ್ಜರಿ ದಾಖಲೆ
-
ಕ್ರೀಡೆ14 hours agoಸತತ 2ನೇ ಕಿರೀಟ ಗೆದ್ದ ಆರ್ಸಿಬಿ; ಫೈನಲ್ ಬಳಿಕ ಗುಜರಾತ್ ಬಸ್ನಲ್ಲಿ ಬೆಂಕಿ
-
ದೇಶ12 hours ago3.2 ಕೋಟಿ ಸೊಳ್ಳೆಗಳನ್ನು ಬಿಡುಗಡೆ ಮಾಡಲು ಗೂಗಲ್ ಯೋಜನೆ! ಕಾರಣ ತಿಳಿದರೆ ಅಚ್ಚರಿ
-
ಕ್ರೀಡೆ13 hours agoವಿರಾಟ್ ಕೊಹ್ಲಿ ಮಾಸ್ಟರ್ ಕ್ಲಾಸ್; ಆರ್ಸಿಬಿ ಐತಿಹಾಸಿಕ ಗೆಲುವಿಗೆ MLA S T Somashekhar ಮೆಚ್ಚುಗೆ
-
ಕ್ರೀಡೆ11 hours ago‘We Did It Twice’ ಟೀ-ಶರ್ಟ್ ವೈರಲ್! ಆರ್ಸಿಬಿ ಗೆಲುವಿನ ಅಪರೂಪದ ಫೋಟೋ ಹಂಚಿಕೊಂಡ ಅನುಷ್ಕಾ ಶರ್ಮಾ
-
ದೇಶ12 hours agoಅಮಾನತು ಬಳಿಕ ಜಮೀರ್ ಸರದಿ? ಕಾಂಗ್ರೆಸ್ನಲ್ಲಿ ಶಿಸ್ತು ಕ್ರಮದ ಚರ್ಚೆ
-
ದೇಶ8 hours agoಬಿಜೆಪಿ ಹೈಕಮಾಂಡ್ನ ದೊಡ್ಡ ಪ್ಲಾನ್! ಕರ್ನಾಟಕದಲ್ಲಿ ಹೊಸ ನಾಯಕತ್ವಕ್ಕೆ ವೇದಿಕೆ?
