ಕ್ರೀಡೆ
ಕೇವಲ ಕ್ರಿಕೆಟರ್ ಅಲ್ಲ, ಅವರೊಂದು ಭಾವನೆ’-ಕಿಂಗ್ ಕೊಹ್ಲಿಗೆ ನೇಪಾಳ ಆಟಗಾರ

ಇಲ್ಲಿನ ಪಲ್ಲೆಕೆಲೆ ಇಂಟರ್ ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೋಮವಾರ ನಡೆದಿದ್ದ ಏಷ್ಯಾ ಪಂದ್ಯದಲ್ಲಿ ನೇಪಾಳ ವಿರುದ್ಧ ಭಾರತ ತಂಡ 10 ವಿಕೆಟ್ಗಳಿಂದ ಗೆಲುವು ಪಡೆದಿತ್ತು. ಆ ಮೂಲಕ ಟೂರ್ನಿಯ ಸೂಪರ್-4ರ ಹಂತಕ್ಕೆ ಅಧಿಕೃತವಾಗಿ ಪ್ರವೇಶ ಪಡೆದಿತ್ತು. ಈ ಪಂದ್ಯದ ಬಳಿಕ ನೇಪಾಳ ಆಟಗಾರರು ಟೀಮ್ ಇಂಡಿಯಾ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಜೊತೆ ಸಂಭಾಷಣೆ ನಡೆಸಿದ್ದರು.
ವಿರಾಟ್ ಕೊಹ್ಲಿಯಿಂದ ಸಹಿ ಹಾಕಿ ಶೂ ಅನ್ನು ಉಡುಗೊರೆಯಾಗಿ ಪಡೆದಿರುವುದಾಗಿ ನೇಪಾಳ ತಂಡದ ಆಟಗಾರ ಸೋಮ್ಪಾಲ್ ಕಾಮಿ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ನಲ್ಲಿ ಹೇಳಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ಅವರು ಸಹಿ ಹಾಕಿದ ಶೂ ಅನ್ನು ಪ್ರದರ್ಶನ ಮಾಡುತ್ತಿರುವ ಫೋಟೋವನ್ನು 27ರ ಪ್ರಾಯದ ಸೋಮ್ಪಾಲ್ ಕಾಮಿ ಹಂಚಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ ಕೇವಲ ಕ್ರಿಕೆಟಿಗ ಮಾತ್ರವಲ್ಲ, ಅವರೊಂದು ಭಾವನೆ,” ಎಂದು ತಾವು ಹಂಚಿಕೊಂಡಿರುವ ವಿರಾಟ್ ಕೊಹ್ಲಿ ಜೊತೆಗಿನ ಫೋಟೋಗೆ ಸೋಮ್ಪಾಲ್ ಕಾಮಿ ಈ ರೀತಿಯ ಶೀರ್ಷಿಕೆ ನೀಡಿದ್ದಾರೆ.
ಅಂದ ಹಾಗೆ ವಿರಾಟ್ ಕೊಹ್ಲಿ ನೇಪಾಳ ವಿರುದ್ಧ ಬ್ಯಾಟ್ ಮಾಡಲು ಅವಕಾಶ ಪಡೆದುಕೊಳ್ಳಲಿಲ್ಲ. ನೇಪಾಳ ತಂಡ 231 ರನ್ಗಳ ಗುರಿ ನೀಡಿದ್ದರ ಹೊರತಾಗಿಯೂ ಮಳೆ ಬಂದ ಕಾರಣ, ಡಿಎಲ್ಎಸ್ ನಿಯಮದ ಪ್ರಕಾರ 23 ಓವರ್ಗಳಿಗೆ ಭಾರತ ತಂಡಕ್ಕೆ 145 ರನ್ಗಳ ಗುರಿಯನ್ನು ನೀಡಲಾಯಿತು. ರೋಹಿತ್ ಶರ್ಮಾ ಹಾಗೂ ಶುಭಮನ್ ಗಿಲ್ ಜೋಡಿ ಮೊದಲನೇ ವಿಕೆಟ್ಗೆ 147 ರನ್ ಗಳಿಸಿ ತಂಡವನ್ನು ಗೆಲ್ಲಿಸಿತು.
ಪಾಕಿಸ್ತಾನ ವಿರುದ್ಧ ಭಾರತ ತಂಡದ ಆರಂಭಿಕ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು. ತಮ್ಮ ನೆಚ್ಚಿನ ಕವರ್ ಡ್ರೈವ್ ಬೌಂಡರಿ ಮೂಲಕ ಖಾತೆ ತೆರೆದಿದ್ದರು. ಆದರೆ, ಶಾಹೀನ್ ಶಾ ಅಫ್ರಿದಿ ಎಸೆತದಲ್ಲಿ ಬೌಲ್ಡ್ ಆಗಿದ್ದರು. ಆ ಮೂಲಕ ಏಷ್ಯಾ ಕಪ್ ಆರಂಭಿಕ ಪಂದ್ಯದಲ್ಲಿಯೇ ವಿರಾಟ್ ಕೊಹ್ಲಿ ನಿರಾಶೆ ಮೂಡಿಸಿದ್ದರು.
ನೇಪಾಳ ವಿರುದ್ಧ 10 ವಿಕೆಟ್ಗಳ ಭರ್ಜರಿ ಗೆಲುವು ಪಡೆಯುವ ಮೂಲಕ ಭಾರತ ತಂಡ ಏಷ್ಯಾ ಕಪ್ ಟೂರ್ನಿಯ ಸೂಪರ್-4ರ ಹಂತಕ್ಕೆ ಅಧಿಕೃತವಾಗಿ ಅರ್ಹತೆ ಪಡೆಯಿತು. ಪಾಕ್ ವಿರುದ್ಧದ ಪಂದ್ಯ ಮಳೆಯಿಂದ ಫಲಿತಾಂಶ ಮೂಡಿಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಎರಡೂ ತಂಡಗಳಿಗೆ ತಲಾ ಒಂದೊಂದು ಅಂಕ ನೀಡಲಾಗಿತ್ತು. ಇದೀಗ ಒಟ್ಟು 3 ಅಂಕಗಳಿಂದ ಭಾರತ ಸೂಪರ್-4ರ ಹಂತಕ್ಕೆ ಪ್ರವೇಶ ಮಾಡಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ದ ಮತ್ತೊಂದು ಪಂದ್ಯ ಆಡಲು ಸಜ್ಜಾಗುತ್ತಿದೆ
ಕ್ರೀಡೆ
ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.
ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.
ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.
ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.
ಕ್ರೀಡೆ
ಭಾರತೀಯ ತಂಡದ ಕೋಚ್ ಗೌತಮ್ ಗಂಭೀರ್ ವಿರುದ್ಧ ಟೀಕೆ, ಬಿಸಿಸಿಐ ಸಹಾಯಕ ಕೋಚ್ ಮಾರ್ನೆ ಮಾರ್ಕೆಲ್-ಟೆನ್ ಡೊಶ್ಕಾಟೆ ಬದಲಾವಣೆ ಸಾಧ್ಯತೆ

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ್ ಅವರ ಕೋಚಿಂಗ್ ಶೈಲಿಯನ್ನು ಮಾಜಿ ಕ್ರಿಕೆಟಿಗರು ಸೇರಿದಂತೆ ಸುನಿಲ್ ಗವಾಸ್ಕರ್, ರಿಕಿ ಪಾಂಟಿಂಗ್ ಸೇರಿದಂತೆ ಹಲವು ಹಿರಿಯರು ಭಾರೀ ಟೀಕೆ ಮಾಡಿದ್ದಾರೆ. ಈ ಟೀಕೆಗಳಿಗೆ ಸಂಬಂಧಿಸಿ, ಗಂಭೀರ್ ಮನವಿ ಮಾಡಿಕೊಂಡ ಸಹಾಯಕ ಕೋಚ್ಗಳಾದ ಮಾರ್ನೆ ಮಾರ್ಕೆಲ್ (ಬೌಲಿಂಗ್ ಕೋಚ್) ಮತ್ತು ರ್ಯಾನ್ ಟೆನ್ ಡೊಶ್ಕಾಟೆ ಶೀಘ್ರದಲ್ಲೇ ತಮ್ಮ ಹುದ್ದೆಯಿಂದ ವಜಾಗೊಳ್ಳುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಗಳು ಸೂಚಿಸುತ್ತಿವೆ.
ಕಳೆದ ವರ್ಷ ಜುಲೈನಲ್ಲಿ ಗಂಭೀರ್ ಭಾರತದ ಕೋಚ್ ಆಗಿ ನೇಮಕಗೊಂಡಿದ್ದರು. ಅವರ ಮನವಿ ಮೇರೆಗೆ ಐಪಿಎಲ್ ತಂಡಗಳಲ್ಲಿ ಕಾರ್ಯನಿರ್ವಹಿಸಿದ್ದ ಅಭಿಷೇಕ್ ನಾಯರ್, ಮಾರ್ಕೆಲ್ ಮತ್ತು ಡೊಶ್ಕಾಟೆ ಸಹಾಯಕ ಕೋಚ್ ಆಗಿ ನೇಮಕಗೊಂಡಿದ್ದರು. ಆದರೆ, ನ್ಯೂಜಿಲೆಂಡ್ ವಿರುದ್ಧ ವೈಟ್ ವಾಷ್ ಹಾಗೂ ಆಸ್ಟ್ರೇಲಿಯಾ ತಂಡದ ಸೋಲುಗಳು ಬಿಸಿಸಿಐನಲ್ಲಿ ಅಸಮಾಧಾನ ಮೂಡಿಸಿದ ಕಾರಣ, ಮೊದಲನೆಯದಾಗಿ ಸಹಾಯಕ ಕೋಚ್ ಅಭಿಷೇಕ್ ನಾಯರ್ ಹುದ್ದೆಯಿಂದ ವಜಾಗೊಂಡಿದ್ದರು.
ಇದೇ ಹಿನ್ನೆಲೆಯಲ್ಲಿ, ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್ ಮತ್ತು ರ್ಯಾನ್ ಟೆನ್ ಡೊಶ್ಕಾಟೆ ಸಹ ಇನ್ನೂ ಸಹ ಹುದ್ದೆಯಿಂದ ವಜಾಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ತಂಡದ ಆಯ್ಕೆ ಪ್ರಕ್ರಿಯೆ, ಆಟಗಾರರ ಕಾರ್ಯದೊತ್ತಡ, ಪಿಚ್ ಅನ್ವಯ 11 ಆಟಗಾರರ ಆಯ್ಕೆ ಮತ್ತು ಸಮತೋಲನ ಕಾಯ್ದುಕೊಳ್ಳುವ ವಿಚಾರದಲ್ಲಿ ಕೋಚ್ಗಳ ಕಾರ್ಯವೈಖರಿಗೆ ಬಿಸಿಸಿಐ ಅತೃಪ್ತಿ ವ್ಯಕ್ತಪಡಿಸಿದೆ.
ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸ್ಥಾನಕ್ಕೂ ಸವಾಲು ಎದುರಾಗಿದೆ. 2023ರ ಜುಲೈನಲ್ಲಿ ನೇಮಕಗೊಂಡ ಈ ಸಮಿತಿ ಮುಖ್ಯಸ್ಥರ ನೇತೃತ್ವದಲ್ಲಿ ಭಾರತ ತಂಡದ ಪ್ರದರ್ಶನ ಕಳೆದ ಒಂದು ವರ್ಷದಿಂದ ತೀರಾ ಕಳಪೆಯಾಗಿದ್ದು, ಸಮರ್ಥ ಆಟಗಾರರ ಆಯ್ಕೆಯಲ್ಲಿ ನಿರಂತರ ಎಡವಾಟಗಳು ನಡೆದಿವೆ ಎಂದು ವಿಶ್ಲೇಷಣೆಗಳು ತಿಳಿಸುತ್ತಿವೆ.
ಕ್ರೀಡೆ
ಕನ್ನಡಿಗ ಕ್ರಿಕೆಟಿಗ ದೇವದತ್ ಪಡಿಕ್ಕಲ್ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಅತಿ ಹೆಚ್ಚು ಬೆಲೆಗೆ ಮಾರಾಟ

ಕರ್ನಾಟಕದ ಪ್ರತಿಭಾವಂತ ಕ್ರಿಕೆಟಿಗ ದೇವದತ್ ಪಡಿಕ್ಕಲ್ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಅವರು ‘ಹುಬ್ಬಳ್ಳಿ ಟೈಗರ್ಸ್’ ತಂಡಕ್ಕೆ 13.20 ಲಕ್ಷ ರೂಪಾಯಿಗೆ ಮಾರಾಟ ಆಗಿದ್ದು, ಈ ಮೊತ್ತವು ಮಹಾರಾಜ ಟ್ರೋಫಿಯ ಇತಿಹಾಸದಲ್ಲಿ ಅತಿ ಹೆಚ್ಚು ಬೆಲೆಯಾಗಿದೆ. ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಪರ ಉತ್ತಮ ಪ್ರದರ್ಶನ ನೀಡಿ, ಅವರು ಈ ಯಶಸ್ಸಿಗೆ ಪಾತ್ರರಾಗಿದ್ದಾರೆ.
ಕಳೆದ ಐಪಿಎಲ್ ಪಂದ್ಯಾವಳಿಯಲ್ಲಿ ಗಾಯದಿಂದ ಕೆಲವು ಪಂದ್ಯಗಳಿಂದ ದೂರ ಉಳಿದರೂ, ದೇವದತ್ ಪಡಿಕ್ಕಲ್ ಅವರ ಸಾಮರ್ಥ್ಯ ಎಲ್ಲರ ಮನಸ್ಸಿಗೆ ತಲುಪಿತ್ತು. 2024ರ ಐಪಿಎಲ್ನಲ್ಲಿ ರಾಜಸ್ಥಾನ ರಾಯಲ್ಸ್ನಿಂದ ಹೊರಬಂದ ಬಳಿಕ ಆರ್ಸಿಬಿ ತಂಡವು ಅವರನ್ನು 3.20 ಕೋಟಿ ರೂಪಾಯಿಗೆ ಖರೀದಿಸಿದೆ. ಇದೀಗ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡವು 13.20 ಲಕ್ಷ ರೂಪಾಯಿಗೆ ದೇವದತ್ ಪಡಿಕ್ಕಲ್ ಅವರನ್ನು ಪಡೆದಿದ್ದು, ಇದು ಟೂರ್ನಿಯ ದಾಖಲೆಯ ಬೆಲೆಯಾಗಿದೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಜುಲೈ 15ರಂದು ಬೆಂಗಳೂರಿನಲ್ಲಿ ಆಯೋಜಿಸಿದ ಈ ಹರಾಜಿನಲ್ಲಿ ದೇವದತ್ ಪಡಿಕ್ಕಲ್ ಅತಿ ಹೆಚ್ಚು ಬೆಲೆಗೆ ಮಾರಾಟವಾದ ಕನ್ನಡಿಗ ಕ್ರಿಕೆಟಿಗರಾಗಿದ್ದಾರೆ. ಮಹಾರಾಜ ಟ್ರೋಫಿಯಲ್ಲಿ ಪ್ರತಿ ಫ್ರಾಂಚೈಸಿಯು ಕನಿಷ್ಠ ಇಬ್ಬರು ಸ್ಥಳೀಯ ಆಟಗಾರರನ್ನು ತಂಡದಲ್ಲಿ ಇರಿಸಬೇಕು ಎಂಬ ನಿಯಮವಿದ್ದು, ಇದರಿಂದ ಸ್ಥಳೀಯ ಪ್ರತಿಭೆಗಳ ಪ್ರೋತ್ಸಾಹಕ್ಕೆ ದೊಡ್ಡ ಅವಕಾಶ ಸಿಗುತ್ತದೆ.
ಈ ವರ್ಷದ ಪಂದ್ಯಗಳು ಮುಚ್ಚಿದ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅಭಿಮಾನಿಗಳಿಗೆ ಮೈದಾನದಲ್ಲಿ ವೀಕ್ಷಣೆಗೆ ಅವಕಾಶ ಇಲ್ಲ. ಆದರೂ ದೇವದತ್ ಪಡಿಕ್ಕಲ್ ಅವರ ಸಾಧನೆ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ ಮತ್ತು ಯುವ ಕ್ರಿಕೆಟಿಗರಿಗೆ ಪ್ರೇರಣೆಯಾಗಿದೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು9 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ