isro
ಡಾಕಿಂಗ್ ಸಾಹಸಕ್ಕೆ ಇಸ್ರೋ ರೆಡಿ – ಏನಿದು ಪ್ರಯೋಗ? ಇಷ್ಟೊಂದು ಮಹತ್ವ ಯಾಕೆ?
ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ (ISRO) ಇಂದು (ಡಿ.30) ಮಹತ್ವದ ದಿನ. ಸೋಮವಾರ ರಾತ್ರಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ‘ಸ್ಪೇಸ್ ಡಾಕಿಂಗ್ ಎಕ್ಸ್ಪರಿಮೆಂಟ್’ (SpaDEx) ಯೋಜನೆ ಭಾಗವಾಗಿ 2 ಉಪಗ್ರಹಗಳು ಉಡಾವಣೆಯಾಗಲಿದೆ.
ಬಾಹ್ಯಾಕಾಶ ಉಪಗ್ರಹಗಳ ಡಾಕಿಂಗ್ (Docking) ಮತ್ತು ಅನ್ಡಾಕಿಂಗ್ (Undocking) ಪ್ರಯೋಗ ಯಶಸ್ವಿಯಾದಲ್ಲಿ ಸ್ಪೇಡೆಕ್ಸ್ನಲ್ಲಿ ಯಶ ಕಂಡ ವಿಶ್ವದ 4ನೇ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಎರಡು ಉಪಗ್ರಹಗಳನ್ನು ಜೋಡಿಸುವ ಹಾಗೂ ಬೇರ್ಪಡಿಸುವ ಪ್ರಯೋಗದಲ್ಲಿ ಇಲ್ಲಿಯವರೆಗೆ ಅಮೆರಿಕ, ರಷ್ಯಾ ಮತ್ತು ಚೀನಾ ಯಶಸ್ಸು ಕಂಡಿದೆ.
ಈ ಪ್ರಯೋಗದ ಭಾಗವಾಗಿ ಎಸ್ಡಿಎಕ್ಸ್01 ಮತ್ತು ಎಸ್ಡಿಎಕ್ಸ್02 ಹೆಸರಿನ ಎರಡು ಉಪಗ್ರಹಗಳನ್ನು ಹೊತ್ತ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (PSLV) ರಾಕೆಟ್ ಇಂದು ರಾತ್ರಿ 9:58ಕ್ಕೆ ಉಡಾವಣೆಯಾಗಲಿದೆ. ಭೂಮಿಯಿಂದ 476 ಕಿ.ಮೀ ದೂರದ ಕಕ್ಷೆಗೆ ಉಪಗ್ರಹಗಳನ್ನು ರಾಕೆಟ್ ಯಶಸ್ವಿಯಾಗಿ ಸೇರಿಸಿದ ಬಳಿಕ ಜನವರಿ ಮೊದಲ ವಾರದಲ್ಲಿ ಇಸ್ರೋ ಡಾಕಿಂಗ್ ಪ್ರಯೋಗ ನಡೆಯಲಿದೆ.
ಏನಿದು ಪ್ರಯೋಗ?
ಈ ಎರಡೂ ಉಪಗ್ರಹಗಳು ತನ್ನಲ್ಲಿರುವ ಸೆನ್ಸರ್, ವ್ಯವಸ್ಥೆಯನ್ನು ಬಳಸಿ ಒಂದಕ್ಕೊಂದು ಜೋಡಣೆ ಆಗುವಂತೆ ಮಾಡುವುದು. ನಂತರ ಪರಸ್ಪರ ಬೇರೆಯಾಗುವಂತೆ ಮಾಡಲು ಇಸ್ರೋ ಈ ಪ್ರಯೋಗ ನಡೆಸಲಿದೆ. ಈ ಕಾರಣಕ್ಕೆ ಸ್ಪೇಸ್ ಡಾಕಿಂಗ್ ಎಕ್ಸ್ಪರಿಮೆಂಟ್’ (ಸ್ಪೇಡೆಕ್ಸ್) ಎಂಬ ಹೆಸರನ್ನು ಇಡಲಾಗಿದೆ.
ಯಾಕೆ ಇಷ್ಟೊಂದು ಮಹತ್ವ?
ಮಾನವಸಹಿತ ಅಂತರಿಕ್ಷಯಾನ, ಚಂದ್ರನ ಅಂಗಳಕ್ಕೆ ಮನುಷ್ಯರನ್ನು ಕಳುಹಿಸಿ, ವಾಪಸ್ ಕರೆತರಲು ಇಸ್ರೋ ಈಗಾಗಲೇ ಯೋಜನೆ ರೂಪಿಸಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಂತೆ ಇಸ್ರೋ ತನ್ನದೇ ಆದ ಸ್ವದೇಶಿ ‘ಭಾರತೀಯ ಅಂತರಿಕ್ಷ ನಿಲ್ದಾಣ’ ಸ್ಥಾಪಿಸಲು ಸಿದ್ಧತೆ ಆರಂಭಿಸಿದೆ. ಆ ನಿಲ್ದಾಣಕ್ಕೆ ಗಗನಯಾತ್ರಿಗಳು, ಉಪಕರಣಗಳನ್ನು ಕಳುಹಿಸಲು ಡಾಕಿಂಗ್, ಅನ್ಡಾಕಿಂಗ್ ತಂತ್ರಜ್ಞಾನ ತಿಳಿದಿರಬೇಕು.
chandrayan 3
ಇಸ್ರೋ ವಿಜ್ಞಾನಿ ತೌಜಮ್ ರಘು ಸಿಂಗ್ ಎಂಬುವರು ಕೆಲಸದೊತ್ತಡದಿಂದ ಸುಮಾರು ೨ ವರ್ಷ ತಮ್ಮ ಮನೆಗೇ ಭೇಟಿ ನೀಡಿಲ್ಲ : ಚಂದ್ರಯಾನ ೩
ಬೆಂಗಳೂರು: ಚಂದ್ರಯಾನ ೩ರ ಯಶಸ್ಸಿನ ಹಿಂದೆ ಹಲವರ ಪರಿಶ್ರಮವಿದೆ, ಚಂದ್ರಯಾನ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಇಸ್ರೋ ವಿಜ್ಞಾನಿ ತೌಜಮ್ ರಘು ಸಿಂಗ್ ಎಂಬುವರು ಕೆಲಸದೊತ್ತಡದಿಂದ ಸುಮಾರು ೨ ವರ್ಷ ತಮ್ಮ ಮನೆಗೇ ಭೇಟಿ ನೀಡಿಲ್ಲ, ಚಂದ್ರಯಾನ ೩ ಯಶಸ್ವಿಯಾಗಬೇಕೆಂದು ಮನೆಗೆ ಹೋಗದೇ ಕೆಲಸದಲ್ಲಿ ಮುಳುಗಿದ್ದರು ಎಂಬ ಸಂಗತಿ ಬೆಳಕಿಗೆ ಬಂದಿದೆ, ಚಂದ್ರಯಾನ ೩ ಯಶಸ್ವಿಯಾದ ಬಳಿಕ ಇವರು ಮಾತನಾಡಿ ನಾನು ಮನೆಯನ್ನು ಮಿಸ್ ಮಾಡಿಕೊಂಡೆ, ನನ್ನ ಪೋಷಕರೊಂದಿಗೆ ವಿಡಿಯೋ ಕಾಲ್ನಲ್ಲಿ ಮಾತನಾಡುತ್ತಿದ್ದೆ, ಕೆಲಸದ ಕಾರಣ ೨ ವರ್ಷ ಮನೆಗೆ ಹೋಗಿಲ್ಲ ಎಂದು ಅವರು ಹೇಳಿದ್ದಾರೆ, ನಾವು ಈಗ ಗಗನಯಾನ ಮೇಲೆ ಗಮನವನ್ನು ಇಟ್ಟಿದ್ದೇವೆ,
-
ಬೆಂಗಳೂರು24 ಗಂಟೆಗಳು agoBengaluru ನಲ್ಲಿ ಖಾಲಿ ಸೈಟ್ ಮಾಲೀಕರಿಗೆ ಬಿಗ್ ಶಾಕ್: ಕಸ ತೆರವು ಮಾಡದಿದ್ದರೆ ₹38,400 ದಂಡ, ದೊಡ್ಡ ಸೈಟ್ಗೆ ಲಕ್ಷಕ್ಕೂ ಹೆಚ್ಚು!
-
ಬೆಂಗಳೂರು21 ಗಂಟೆಗಳು agoLiver ಚಿಕಿತ್ಸೆಗೆ ಗುಡ್ ನ್ಯೂಸ್: ಹಲವು ತಜ್ಞರು ಒಂದೇ ಕಡೆ, ರೋಗಿಗಳಿಗೆ ಸುಲಭ ಚಿಕಿತ್ಸೆ
-
ಬೆಂಗಳೂರು3 ಗಂಟೆಗಳು agoMake My Propertyz ಟೈಟಲ್ ಸ್ಪಾನ್ಸರ್; ಮೋಹನ್, ಆಂಜನಪ್ಪ, ಹರೀಶ್, ಸಂತೋಷ್, ಗೌರೀಶ್, Hosa Suddi, ಶಿವಕುಮಾರ್ರಿಂದ ಕ್ರೀಡೆಗೆ ಬೆಂಬಲ!
-
ದೇಶ1 ಗಂಟೆ agoNepal Flood Horror: ಮಹಿಳೆಯ ಮೃತದೇಹದಿಂದ ಆಭರಣ ಕಳವು; ವೈರಲ್ ವಿಡಿಯೋ ಆಧರಿಸಿ ಇಬ್ಬರ ಬಂಧನ
-
ದೇಶ4 ಗಂಟೆಗಳು agoPM Narendra Modi Foreign Visit: ಮೋದಿ 4 ದಿನಗಳ ವಿದೇಶ ಪ್ರವಾಸ, ಎಸ್ಸಿಒ ಶೃಂಗಸಭೆಯಲ್ಲಿ ಭಾಗಿ
-
ದೇಶ4 ಗಂಟೆಗಳು agoNepal ಭೀಕರ ಪ್ರವಾಹ: ಸಾವಿನ ಸಂಖ್ಯೆ 469ಕ್ಕೆ ಏರಿಕೆ, ಸಾವಿರಕ್ಕೂ ಹೆಚ್ಚು ಮಂದಿ ನಾಪತ್ತೆ!
-
ಸಿನಿಮಾ3 ಗಂಟೆಗಳು ago‘Toxic’ ವಿರುದ್ಧ ಮಾತನಾಡಿದವರಿಗೆ ಕಾನೂನು ನೋಟಿಸ್? ಚಿತ್ರತಂಡದ ನಡೆಗೆ ಕಾರಣವೇನು?
-
ದೇಶ4 ಗಂಟೆಗಳು agoMantralaya ದಲ್ಲಿ ಭಕ್ತಿಯ ವೈಭವ: ರಾಯರ ಆರಾಧನೆಗೆ ಚಾಲನೆ, ಆಗಸ್ಟ್ 31ಕ್ಕೆ ಮಹಾರಥೋತ್ಸವ
