Connect with us

ಅಪರಾಧ

ಮೈಕ್ರೋ ಫೈನಾನ್ಸ್​​​ ಕಿರುಕುಳ: ಸಿಎಂಗೆ ಮಾಂಗಲ್ಯ ಸರ ಕಳುಹಿಸಿ ನೊಂದ ಮಹಿಳೆಯರಿಂದ ಅಭಿಯಾನ! – MICRO FINANCE TORTURE

Published

on

ಹಾವೇರಿ/ಬೆಂಗಳೂರು: ರಾಜ್ಯದ ವಿವಿಧೆಡೆ ಮೈಕ್ರೋ ಫೈನಾನ್ಸ್​ಗಳ ಸಾಲ ವಸೂಲಾತಿ ಕಾಟಕ್ಕೆ ಜನರು ಬೇಸತ್ತಿದ್ದು, ಕೆಲವು ಕಡೆ ಗ್ರಾಮವನ್ನೇ ತೊರೆದು ಬೇರೆಡೆ ದುಡಿಯಲು ಹೋಗಿದ್ದಾರೆ. ರಾಣೆಬೆನ್ನೂರಿನ ಮಹಿಳೆಯರು ಮೈಕ್ರೋ ಫೈನಾನ್ಸ್​​​ ವಿರುದ್ಧ ವಿಭಿನ್ನ ರೀತಿಯ ಅಭಿಯಾನಕ್ಕೆ ಮುಂದಾಗಿದ್ದಾರೆ.

ಹೌದು.. ಮೈಕ್ರೋ ಫೈನಾನ್ಸ್​​ನಿಂದ ತಮ್ಮ ಮಾಂಗಲ್ಯಕ್ಕೆ ಕುತ್ತು ಬಂದಿದ್ದು, ಮಾಂಗಲ್ಯ ಸರವನ್ನು ಉಳಿಸಿ ಎಂದು ಮಹಿಳೆಯರು ಮನವಿ ಮಾಡಿಕೊಳ್ಳುತ್ತಿದ್ದಾರೆ. ಹಾವೇರಿ ಪ್ರಧಾನ ಅಂಚೆ ಕಚೇರಿಗೆ ಆಗಮಿಸಿದ ನೂರಾರು ಮಹಿಳೆಯರು, ಅಂಚೆ ಮೂಲಕ ಮಾಂಗಲ್ಯ ಮತ್ತು ಪತ್ರವನ್ನು ಸಿಎಂ ಸಿದ್ದರಾಮಯ್ಯರಿಗೆ ಪೋಸ್ಟ್ ಮಾಡಿ, ನಮ್ಮ ಮಾಂಗಲ್ಯವನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ.

ಬಳಿಕ ಜಿಲ್ಲಾಡಳಿತ ಮತ್ತು ಎಸ್ಪಿ ಕಚೇರಿಗೂ ಸಹ ಮಾಂಗಲ್ಯ ಪತ್ರವನ್ನು ನೀಡಿದ್ದಾರೆ. ವಿನಾಕಾರಣ ನಿತ್ಯ ಮನೆಗೆ ಬಂದು ಕಿರಕುಳ ನೀಡುವ ಮೈಕ್ರೋ ಫೈನಾನ್ಸ್​ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಮಹಿಳೆಯರು ಒತ್ತಾಯಿಸಿ, ಅವರ ಕಾಟದಿಂದ ಮುಕ್ತಿ ಕೊಡುವಂತೆ ವಿನಂತಿಸಿದ್ದಾರೆ.

ಈ ಸಂದರ್ಭದಲ್ಲಿ‌ ಮನವಿ ಸ್ವೀಕರಿಸಿರುವ ಜಿಲ್ಲಾಡಳಿತ, ಮೈಕ್ರೋ ಫೈನಾನ್ಸ್​ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದೆ.

ಮೈಕ್ರೋ ಫೈನಾನ್ಸ್​ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು-ಹೆಚ್​ಡಿಕೆ:

ರಾಜ್ಯದಲ್ಲಿ ಹೆಚ್ಚಿದ ಮೈಕ್ರೋ ಫೈನಾನ್ಸ್​ಗಳ ಕಿರುಕುಳಕ್ಕೆ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ಅವರು ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರ ಮತ್ತು ಗೃಹ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹಿಂಡುತ್ತಿರುವ ಮೈಕ್ರೋ ಫೈನಾನ್ಸ್​ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು” ಎಂದು ರಾಜ್ಯ ಸರ್ಕಾರವನ್ನು ಹೆಚ್​ಡಿಕೆ ಆಗ್ರಹಿಸಿದ್ದಾರೆ.

“ಇದನ್ನು ಅಧಿಕಾರಿಗಳು ಅಥವಾ ಜಿಲ್ಲಾಧಿಕಾರಿ ಮಾಡಲು ಸಾಧ್ಯವಿಲ್ಲ. ಸರ್ಕಾರವೇ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ನಾಗರಿಕ ಸರ್ಕಾರ, ಗೃಹ ಸಚಿವರು ಎನ್ನುವವರು ಇದ್ದಾರೆಯೇ?. 2018ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಕಿಡಿಗೇಡಿ ಫೈನಾನ್ಸ್​ಗಳಿಂದ ಜನರನ್ನು ರಕ್ಷಣೆ ಮಾಡಬೇಕು ಎಂದು ‘ಋಣಮುಕ್ತ ಕಾಯ್ದೆ’ ಜಾರಿಗೆ ತಂದೆ. ನನ್ನ ಸರ್ಕಾರ ಹೋಯಿತು, ಆ ಕಾಯ್ದೆಯನ್ನು ಕಸದ ಬುಟ್ಟಿಗೆ ಹಾಕಿದರು” ಎಂದು ಅವರು ಬೇಸರ ವ್ಯಕ್ತಪಡಿಸಿದರು.

“ಅಷ್ಟೇ ಅಲ್ಲ, ಜನರು ಪಡೆದ ಸಾಲವನ್ನು ತೀರಿಸಲಾಗದ ಪರಿಸ್ಥಿತಿ ಸೃಷ್ಟಿಯಾದರೆ ಅದಕ್ಕೆ ಪರಿಹಾರೋಪಾಯ ಏನು? ಎಂಬ ಬಗ್ಗೆ ನಾನು ಆಗ ಆಲೋಚನೆ ಮಾಡಿದ್ದೆ. ಆ ಸಂದರ್ಭದಲ್ಲಿ ಕೇರಳ ಸರ್ಕಾರ ಈ ಸಮಸ್ಯೆ ಬಗೆಹರಿಸಲು ಒಂದು ಆಯೋಗವನ್ನು ರಚನೆ ಮಾಡಿತ್ತು. ಆ ಮಾಹಿತಿ ನನಗಿತ್ತು. ಕೇರಳಕ್ಕೆ ತೆರಳಿ ಖುದ್ದು ಆ ಬಗ್ಗೆ ಅಧ್ಯಯನ ಮಾಡುವ ಉದ್ದೇಶದಿಂದ ನಾನು ಅಂದಿನ ನನ್ನ ಸಂಪುಟದಲ್ಲಿ ಸಹಕಾರ ಸಚಿವರಾಗಿದ್ದ ಬಂಡೆಪ್ಪ ಕಾಶೆಂಪೂರ್ ನೇತೃತ್ವದ ನಿಯೋಗವನ್ನು ಕೇರಳಕ್ಕೆ ಕಳಿಸಿದ್ದೆ. ಅದನ್ನು ಆಧಾರವಾಗಿ ಇಟ್ಟುಕೊಂಡು ನಾನು ಇಲ್ಲಿ ಋಣಮುಕ್ತ ಕಾಯ್ದೆಯನ್ನು ಜಾರಿಗೆ ತಂದೆ. ಆಮೇಲೆ ಅದು ಏನಾಯಿತು?” ಎಂದು ಅವರು ಪ್ರಶ್ನಿಸಿದರು.

“ನನ್ನ ಸರ್ಕಾರ ಹೋದ ನಂತರ ಬಂದ ಸರ್ಕಾರಗಳು ಈ ಕಾಯ್ದೆಯ ಮಹತ್ವವನ್ನೇ ಅರಿತುಕೊಳ್ಳಲಿಲ್ಲ. ಅದರ ಪರಿಣಾಮವೇ ಮೈಕ್ರೋ ಫೈನಾನ್ಸ್​ಗಳ ಉಪಟಳ ಜಾಸ್ತಿ ಆಗಿರುವುದು. ಖಾಸಗಿ ಹಣಕಾಸು ಸಂಸ್ಥೆಗಳು ಯಾವುದೇ ಪರವಾನಗಿ ಅಥವಾ ಅನುಮತಿಯನ್ನೇ ಪಡೆಯದೇ ಕಾನೂನುಬಾಹಿರವಾಗಿ ಈ ರೀತಿ ಹೆಚ್ಚಿನ ಬಡ್ಡಿಗೆ ಸಾಲ ನೀಡಿ ಜನರಿಗೆ ಕಿರುಕುಳ ನೀಡುತ್ತಿವೆ. ಇದನ್ನು ತಾಳಲಾರದೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ, ಊರನ್ನೇ ಖಾಲಿ ಮಾಡಿ ಹೋಗುವ ದುಸ್ಥಿತಿ ಸೃಷ್ಟಿಯಾಗಿದೆ” ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.

“ಚಾಮರಾಜನಗರ ಜಿಲ್ಲೆಯಲ್ಲಿ ಜನರು ಹಳ್ಳಿಗಳನ್ನು ಬಿಟ್ಟಿದ್ದರು. ಮನೆಗಳಿಗೆ ಬೀಗ ಹಾಕಿ ಸಾಲಗಾರರಿಂದ ತಪ್ಪಿಸಿಕೊಂಡರೆ ಸಾಕು ಎನ್ನುವ ಭೀತಿಗೆ ಸಿಲುಕಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದೇಪದೆ ಹೇಳುತ್ತಾರೆ, ನಾನು ಇಪ್ಪತ್ತು ಸಲವೋ ಮೂವತ್ತು ಸಲವೋ ಚಾಮರಾಜನಗರಕ್ಕೆ ಭೇಟಿ ನೀಡಿದ್ದೇನೆ. ನನ್ನ ಅಧಿಕಾರ ಹೋಗಿಲ್ಲ, ಗಟ್ಟಿಯಾಗಿದ್ದೇನೆ ಎಂದು ಹೇಳುತ್ತಾರೆ. ಅವರೇನೋ ಗಟ್ಟಿಯಾಗಿದ್ದಾರೆ. ಆದರೆ, ನಿಮ್ಮನ್ನು ಮುಖ್ಯಮಂತ್ರಿ ಜಾಗದಲ್ಲಿ ಕೂರಿಸಿರುವ ಆ ಜನ ಏನಾಗಿದ್ದಾರೆ? ಅವರನ್ನು ಗಟ್ಟಿ ಮಾಡಲಿಕ್ಕೆ ಏನು ಮಾಡಿದ್ದೀರಿ?” ಎಂದು ಹೆಚ್​ಡಿಕೆ ಪ್ರಶ್ನಿಸಿದರು.

ಅಪರಾಧ

ಐಪಿಎಲ್ ಟಿಕೆಟ್ ಕ್ರೇಜ್ ನಡುವೆ ದೊಡ್ಡ ಮೋಸ: ಟೆಕ್ಕಿಗೆ ₹1.46 ಲಕ್ಷ ನಷ್ಟ!

Published

on

ಬೆಂಗಳೂರು, ಏಪ್ರಿಲ್ 04: ನಗರದಲ್ಲಿ IPL 2026 ಟಿಕೆಟ್ ಕ್ರೇಜ್ ಜೋರಾಗಿರುವ ನಡುವೆ ಆನ್‌ಲೈನ್ ಮೋಸದ ಪ್ರಕರಣವೂ ಬೆಳಕಿಗೆ ಬಂದಿದೆ. ಅನಧಿಕೃತ ಪ್ಲಾಟ್‌ಫಾರ್ಮ್ ಮೂಲಕ ಟಿಕೆಟ್ ಖರೀದಿಸಲು ಯತ್ನಿಸಿದ ಟೆಕ್ಕಿ ಒಬ್ಬರು ₹1.46 ಲಕ್ಷ ಕಳೆದುಕೊಂಡಿರುವ ಘಟನೆ ಕ್ರಿಕೆಟ್ ಅಭಿಮಾನಿಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ.

Bengaluruನ ಬಿ. ನಾರಾಯಣಪುರ ನಿವಾಸಿಯಾದ 25 ವರ್ಷದ ಟೆಕ್ಕಿ, Instagramನಲ್ಲಿ ಪರಿಚಯವಾದ ವ್ಯಕ್ತಿಯಿಂದ ಮೋಸಕ್ಕೆ ಒಳಗಾಗಿದ್ದಾರೆ. ಆತ ತನ್ನನ್ನು M. Chinnaswamy Stadium ಟಿಕೆಟ್ ಕೌಂಟರ್ ಹಿರಿಯ ಮೇಲ್ವಿಚಾರಕ ಸುಮಿತ್ ಬಿಸ್ವಾಲ್ ಎಂದು ಪರಿಚಯಿಸಿಕೊಂಡು ನಂಬಿಕೆ ಮೂಡಿಸಿದ್ದಾನೆ.

ಮೊದಲಿಗೆ ಎರಡು ಟಿಕೆಟ್‌ಗಳಿಗೆ ₹3,700 ಕೇಳಿದ ಆರೋಪಿಯು, ಬಳಿಕ ಭದ್ರತಾ ಠೇವಣಿ, ಐಡಿ ಕಾರ್ಡ್ ಮತ್ತು ಫುಡ್ ಕೂಪನ್ ಹೆಸರಿನಲ್ಲಿ ಹಂತ ಹಂತವಾಗಿ ಹಣ ಪಡೆದುಕೊಂಡಿದ್ದಾನೆ. ಪಂದ್ಯದ ದಿನ ಗೇಟ್ ನಂ.10 ಬಳಿ ಬರಲು ಹೇಳಿ ನಕಲಿ ಇಮೇಲ್ ದೃಢೀಕರಣವನ್ನೂ ಕಳುಹಿಸಿದ್ದಾನೆ.

ಆತನ ಮಾತು ನಂಬಿದ ಟೆಕ್ಕಿ, ತನ್ನ ಹಾಗೂ ತಾಯಿಯ ಖಾತೆಯಿಂದ ಯುಪಿಐ ಮೂಲಕ ಒಟ್ಟು ₹1.46 ಲಕ್ಷ ವರ್ಗಾವಣೆ ಮಾಡಿದ್ದಾರೆ. ಆದರೆ ಹಣ ಪಡೆದ ಬಳಿಕ ಆರೋಪಿಯು ಟಿಕೆಟ್ ನೀಡದೆ ಸಂಪರ್ಕ ಕಡಿತಗೊಳಿಸಿದ್ದಾನೆ.

ಈ ಕುರಿತು ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಐಪಿಎಲ್ ಟಿಕೆಟ್ ಖರೀದಿಸುವಾಗ ಅಧಿಕೃತ ವೆಬ್‌ಸೈಟ್ ಅಥವಾ ಮಾನ್ಯ ಮಾರಾಟಗಾರರ ಮೂಲಕವೇ ಖರೀದಿಸಲು ಸಲಹೆ ನೀಡಿದ್ದಾರೆ. ಅನಧಿಕೃತ ಲಿಂಕ್‌ಗಳು ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವ್ಯವಹಾರ ಮಾಡುವುದರಿಂದ ಇಂತಹ ಮೋಸಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದ್ದಾರೆ.

Continue Reading

ಅಪರಾಧ

ಶಿಡ್ಲಘಟ್ಟದಲ್ಲಿ ರೌಡಿ ಶೀಟರ್‌ಗಳಿಗೆ ಕಟ್ಟೆಚ್ಚರ: ಗೈರುಹಾಜರಾದರೆ ಕಠಿಣ ಕ್ರಮ

Published

on

ಶಿಡ್ಲಘಟ್ಟ: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ರೌಡಿ ಶೀಟರ್‌ಗಳ ಮೇಲೆ ನಿಗಾವಣೆಯನ್ನು ಮತ್ತಷ್ಟು ಬಲಪಡಿಸಲಾಗಿದೆ.

ರೌಡಿ ಶೀಟರ್‌ಗಳ ಪರೇಡ್

ನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ಮುರಳಿಧರ್ ನೇತೃತ್ವದಲ್ಲಿ ಶುಕ್ರವಾರ ರೌಡಿ ಶೀಟರ್‌ಗಳ ಪರೇಡ್ ನಡೆಯಿತು. ಠಾಣಾ ವ್ಯಾಪ್ತಿಯ ಎಲ್ಲಾ ರೌಡಿ ಶೀಟರ್‌ಗಳನ್ನು ಕಡ್ಡಾಯವಾಗಿ ಹಾಜರುಪಡಿಸಿ ಪರಿಶೀಲನೆ ನಡೆಸಲಾಯಿತು.

ಗೈರುಹಾಜರಾದರೆ ಕಾನೂನು ಕ್ರಮ

ಪರೇಡ್‌ಗೆ ಗೈರುಹಾಜರಾಗುವ ರೌಡಿ ಶೀಟರ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್ಪಿ ಮುರಳಿಧರ್ ಎಚ್ಚರಿಕೆ ನೀಡಿದ್ದಾರೆ.

ಅಪರಾಧ ನಿಯಂತ್ರಣಕ್ಕೆ ಕ್ರಮ

ಶಿಡ್ಲಘಟ್ಟ ನಗರ, ಗ್ರಾಮಾಂತರ ಹಾಗೂ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳನ್ನು ತಡೆಯುವುದು ಪ್ರಮುಖ ಗುರಿಯಾಗಿದೆ. ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕರಿಗೆ ಭದ್ರತೆ

ಇಂತಹ ನಿಯಮಿತ ಪರೇಡ್‌ಗಳ ಮೂಲಕ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವುದರ ಜೊತೆಗೆ ಸಾರ್ವಜನಿಕರಲ್ಲಿ ಭದ್ರತಾ ಭಾವನೆ ಮೂಡಿಸುವುದು ಪೊಲೀಸರ ಉದ್ದೇಶವಾಗಿದೆ.

ಅಧಿಕಾರಿಗಳ ಉಪಸ್ಥಿತಿ

ಈ ಸಂದರ್ಭದಲ್ಲಿ ಸಿಪಿಐ ಆನಂದ್, ಪಿಎಸ್‌ಐ ವೇಣುಗೋಪಾಲ್, ಸುನಿಲ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

Continue Reading

ಅಪರಾಧ

ಕಲಬುರಗಿಯಲ್ಲಿ ಭೀಕರ ಹತ್ಯೆ: ಮಾಜಿ ಸಚಿವರ ಸಂಬಂಧಿ ಫೈನಾನ್ಸ್ ಕಚೇರಿಯಲ್ಲೇ ಕೊಚ್ಚಿ ಕೊಲೆ

Published

on

ಕಲಬುರಗಿ: ನಗರದಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಬೆನ್ನಲ್ಲೇ ಮತ್ತೊಂದು ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಫೈನಾನ್ಸ್ ಕಚೇರಿಗೆ ನುಗ್ಗಿ ಮಾಜಿ ಸಚಿವರ ಸಂಬಂಧಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಫೈನಾನ್ಸ್ ಕಚೇರಿಯಲ್ಲೇ ಹತ್ಯೆ

ಪಿ & ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್‌ನಲ್ಲಿ ನಡೆದ ಈ ಘಟನೆದಲ್ಲಿ 45 ವರ್ಷದ ಅನೀಲ್ ರಾಠೋಡ್ ಎಂಬವರು ಸಾವನ್ನಪ್ಪಿದ್ದಾರೆ. ಅವರು ಸಿದ್ದೇಶ್ವರ ಬಡಾವಣೆಯ ನಿವಾಸಿಯಾಗಿದ್ದು, ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದರು.

ಹಣಕಾಸು ವ್ಯವಹಾರವೇ ಕಾರಣ?

ಘಟನೆ ನಡೆದ ರಾತ್ರಿ, ಆಟೋದಲ್ಲಿ ಬಂದ ಮೂವರು ದುಷ್ಕರ್ಮಿಗಳು ಕಚೇರಿಗೆ ನುಗ್ಗಿ ಅನೀಲ್ ಜೊತೆ ವಾಗ್ವಾದಕ್ಕೆ ಇಳಿದಿದ್ದಾರೆ. ಹಣಕಾಸಿನ ವಿಚಾರಕ್ಕೆ ಜಗಳ ತೀವ್ರಗೊಂಡಿದ್ದು, ಬಳಿಕ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆಗೈದು ಪರಾರಿಯಾಗಿದ್ದಾರೆ. ಸಾಲ ನೀಡಿದ ಹಣ ವಾಪಸ್ ಕೇಳಿದ್ದಕ್ಕೆ ಈ ಕೃತ್ಯ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ತಪ್ಪಿಸಿಕೊಳ್ಳಲು ಯತ್ನಿಸಿದರೂ ಸಾವು

ಹಠಾತ್ ದಾಳಿ ನಡೆದಾಗ ಅನೀಲ್ ರಾಠೋಡ್ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆದರೆ ಕಚೇರಿ ಬಾಗಿಲು ಬಳಿ ಅವರನ್ನು ಬೆನ್ನಟ್ಟಿ ಕೊಚ್ಚಿ ಕೊಲೆ ಮಾಡಲಾಗಿದೆ.

ಪೊಲೀಸರ ತನಿಖೆ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಬಳಸಿಕೊಂಡು ಸಾಕ್ಷ್ಯ ಸಂಗ್ರಹಿಸಲಾಗಿದೆ. ಹಂತಕರ ಬಂಧನಕ್ಕಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ.

ಕುಟುಂಬದ ಆರೋಪ

ಮೃತನ ಕುಟುಂಬಸ್ಥರು, “ಹಣಕಾಸಿನ ವಿಚಾರಕ್ಕೆ ನಮ್ಮ ಮಗನನ್ನು ಕೊಲೆ ಮಾಡಿದ್ದಾರೆ. ಜೀವ ಬೆದರಿಕೆ ಇದೆ ಎಂದು ಮೊದಲು ಹೇಳಿಕೊಂಡಿದ್ದ” ಎಂದು ಆರೋಪಿಸಿದ್ದಾರೆ.

ಹೆಚ್ಚುತ್ತಿರುವ ಅಪರಾಧ

ನಗರದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಸರಣಿ ಹತ್ಯೆಗಳು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದೆ. ಈ ಪ್ರಕರಣದ ನಿಖರ ಕಾರಣ ತನಿಖೆಯ ಬಳಿಕವೇ ಬಹಿರಂಗವಾಗಲಿದೆ.

Continue Reading

Trending