Connect with us

ಬೆಂಗಳೂರು

ಅಪ್ಪು ಪೋಸ್ಟರ್, ಅಪ್ಪು ರಂಗೋಲಿ, ಅಪ್ಪು ಶಿಲ್ಪ-ಎಲ್ಲೆಲ್ಲೇ ನೋಡಲಿ ನಿನ್ನನ್ನೇ ಕಾಣುವೆ!

Published

on

ಬೆಂಗಳೂರು: ನಟ ಪುನೀತ್ ರಜ್ ಕುಮಾರ್ 50 ನೇ ವರ್ಷದ ಬರ್ತ್ ಡೇ ಯನ್ನು ಕರ್ನಾಟಕದೆಲ್ಲೆಡೆ ಅಭಿಮಾನಿಗಳು ಋಷಿಯಿಂದ ಆಚರಿಸುತ್ತಿದ್ದಾರೆ, ಅಪ್ಪು ನೆನೆದು ಅನೇಕ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ,
ಪುನೀತ್ ಅಪ್ಪಟ ಅಭಿಮಾನಿ ಹೇಮಂತ್ ಹೊಸ ಪೋಸ್ಟರ್ ರಿಲೀಸ್ ಮಾಡಿದ್ದು, ಅವರ ಮೇಲಿನ ಅಭಿಮಾನದಿಂದ ಬೇರೆ ಬೇರೆ ರೀತಿಯ ಪೋಸ್ಟರ್ ಗಳನ್ನು ಡಿಸೈನ್ ಮಾಡಿದ್ದಾರೆ, ಇದು ಪುನೀತ್ ಅಭಿಮಾನಿಗಳಿಂದ ಹಿಡಿದು ರಾಘವೇಂದ್ರ ರಾಜ್ ಕುಮಾರ್, ಶಿವರಾಜಕುಮಾರ್ ಅವರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ, ಪುನೀತ್ ರಾಜಕುಮಾರ್ ಅವರ ವ್ಯಕ್ತಿತ್ವ ಅವರು ಬೆಳೆದು ಬಂದ ಹಾದಿಯನ್ನಿಟ್ಟು ಕೊಂಡು ಒಂದೊಳ್ಳೆಯ ಕಾನ್ಸೆಪ್ಟ್ ಮೂಲಕ ಈ ಪೋಸ್ಟರ್‍ಗಳು ಮೂಡಿಬಂದಿದೆ,
ಮತ್ತೊಂದೆಡೆ ಅಪ್ಪು ಅಭಿಮಾನಿ ದಿಲೀಪ್ ಅಪ್ಪು ಟ್ಯಾಕ್ಸಿ ಎಂಬ ಸಿನಿಮಾವನ್ನು ಆರಂಭಿಸಿದ್ದಾರೆ, ನೈಜ ಘಟನೆ ಆಧಾರಿತ ಚಿತ್ರ ಇದಾಗಿದ್ದು, ಪುನೀತ್ ರಾಜ್ ಕುಮಾರ್ ಅವರ ಆದರ್ಶ ಜೀವನ ಮೌಲ್ಯದ ಸಾಂಕೇತಿಕವಾಗಿ, ಒಬ್ಬ ಟ್ಯಾಕ್ಸಿ ಡ್ರೈವರ್ ಜೀವನದ ನಿಜ ಕಥೆಯೀಗ ತೆರೆಮೇಲೆ ಬರುತ್ತಿದೆ, ಅಪ್ಪು ಮಾಡಿದ ಸಹಾಯದಿಂದ ತನ್ನ ಜೀವನ ರೂಪಿಸಿಕೊಂಡು ಸತ್ಯ ಘಟನೆಯನ್ನು ಆಧರಿಸಿದ ಸಿನಿಮಾವನ್ನು ದಿಲೀಪ್ ಕುಮಾರ್ ಹೊತ್ತು ತರುತ್ತಿದ್ದಾರೆ,
ಇನ್ನೊಂದೆಡೆ ಮೈಸೂರಿನಲ್ಲಿ ಅಪ್ಪು ಅಭಿಮಾನಿಗಳು ಬೃಹತ್ ರಂಗೋಲಿ ಚಿತ್ರಿಸಿ ಅಗಲಿದ ಮಹಾನ್ ಚೇತನಕ್ಕೆ ಗೌರವ ಸಲ್ಲಿಸಿದ್ದಾರೆ..

ಅಪರಾಧ

ಸಿಲಿಕಾನ್ ಸಿಟಿಯಲ್ಲಿ ಸೈಬರ್ ಅಟ್ಟಹಾಸ; ಪ್ಯಾರಾ ಅಥ್ಲೀಟ್ ಹಣ ಕಳವು ಪ್ರಕರಣ

Published

on

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಪದ್ಮಶ್ರೀ ಪುರಸ್ಕೃತ ಪ್ಯಾರಾ ಅಥ್ಲೀಟ್ K. Y. Venkatesh ಅವರೇ ಸೈಬರ್ ಕಳ್ಳರ ಜಾಲಕ್ಕೆ ಬಲಿಯಾಗಿದ್ದಾರೆ.

ಮಲ್ಲೇಶ್ವರಂ ನಿವಾಸಿಯಾಗಿರುವ ವೆಂಕಟೇಶ್ ಅವರ ಕರ್ನಾಟಕ ಬ್ಯಾಂಕ್ ಖಾತೆಯಿಂದ ಬರೋಬ್ಬರಿ ₹90 ಸಾವಿರ ಹಣ ನಿಗೂಢವಾಗಿ ಡ್ರಾ ಆಗಿರುವ ಘಟನೆ ಬೆಳಕಿಗೆ ಬಂದಿದೆ. ಮಧ್ಯರಾತ್ರಿ ಅವರ ಮೊಬೈಲ್‌ಗೆ ಸರಣಿ ಒಟಿಪಿ ಸಂದೇಶಗಳು ಬಂದಿದ್ದು, ಅನುಮಾನಗೊಂಡ ಅವರು ಮರುದಿನ ಬ್ಯಾಂಕ್‌ಗೆ ತೆರಳಿ ವಿಚಾರಣೆ ನಡೆಸಿದ್ದರು. ಈ ವೇಳೆ ಬ್ಯಾಂಕ್ ಅಧಿಕಾರಿಗಳು “ಖಾತೆ ಸುರಕ್ಷಿತವಾಗಿದೆ” ಎಂದು ತಿಳಿಸಿದ್ದರು ಎನ್ನಲಾಗಿದೆ.

ಆದರೆ ಮನೆಗೆ ಮರಳಿದ ಕೆಲವೇ ಗಂಟೆಗಳಲ್ಲಿ ಅವರ ಗಮನಕ್ಕೆ ಬಾರದೇ ಖಾತೆಯಿಂದ ₹90 ಸಾವಿರ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿದೆ. ಯಾವುದೇ ಒಟಿಪಿ ಅಥವಾ ಬ್ಯಾಂಕ್ ಮಾಹಿತಿ ಹಂಚಿಕೊಳ್ಳದೇ ಇದ್ದರೂ ಹಣ ಕಳವಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಈ ಘಟನೆಗೆ ಸಂಬಂಧಿಸಿದಂತೆ ಬ್ಯಾಂಕ್ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವೆಂಕಟೇಶ್, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸೈಬರ್ ವಂಚಕರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

ಹುಟ್ಟಿನಿಂದಲೇ ಅಕೊಂಡ್ರೊಪ್ಲಾಸಿಯಾ ಸಮಸ್ಯೆಯಿಂದ ಬಳಲುತ್ತಿದ್ದರೂ ಅದನ್ನೇ ಸವಾಲಾಗಿ ಸ್ವೀಕರಿಸಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ವೆಂಕಟೇಶ್, 50ಕ್ಕೂ ಹೆಚ್ಚು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಕೇಂದ್ರ ಸರ್ಕಾರ 2021ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

ಈ ಘಟನೆ ಬೆಂಗಳೂರಿನಲ್ಲಿ ಸೈಬರ್ ಭದ್ರತೆ ಕುರಿತ ಆತಂಕವನ್ನು ಮತ್ತೊಮ್ಮೆ ಹೆಚ್ಚಿಸಿದೆ.

Continue Reading

ದೇಶ

“ಡಿಕೆಶಿ ಗುಂಪುಕಟ್ಟುವ ರಾಜಕಾರಣಿ ಅಲ್ಲ”; ಶಾಸಕ ಬಾಲಕೃಷ್ಣ

Published

on

ನವದೆಹಲಿ: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಮಾಗಡಿ ಶಾಸಕ H. C. Balakrishna ಡಿಸಿಎಂ D. K. Shivakumar ಪರವಾಗಿ ಮಹತ್ವದ ಹೇಳಿಕೆ ನೀಡಿದ್ದಾರೆ. “ಡಿಕೆ ಶಿವಕುಮಾರ್ ಅವರು ಗುಂಪುಕಟ್ಟಿಕೊಂಡು ರಾಜಕೀಯ ಮಾಡುವವರಲ್ಲ. ಅವರು ಹೈಕಮಾಂಡ್‌ಗೆ ನಿಷ್ಠೆಯಿಂದ ಇರುವ ನಾಯಕ” ಎಂದು ಹೇಳಿದ್ದಾರೆ.

ದೆಹಲಿಯಲ್ಲಿ https://hosasuddi.in/ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ Siddaramaiah ಹಾಗೂ ಡಿಕೆ ಶಿವಕುಮಾರ್ ಇಬ್ಬರನ್ನೂ ಚರ್ಚೆಗೆ ಕರೆದಿರುವುದರಿಂದ ಇಂದು ಏನಾದರೂ ಸ್ಪಷ್ಟ ತೀರ್ಮಾನ ಹೊರಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.

“ರಾಜ್ಯದಲ್ಲಿ ಉಂಟಾಗಿರುವ ಗೊಂದಲಕ್ಕೆ ಹೈಕಮಾಂಡ್ ತೆರೆ ಎಳೆಯಬೇಕು. ಎಲ್ಲವೂ ಸ್ಪಷ್ಟವಾಗಬೇಕು. ಮುಂದಿನ ಚುನಾವಣೆಯ ದೃಷ್ಟಿಯಿಂದ ಇದು ಅಗತ್ಯ” ಎಂದು ಬಾಲಕೃಷ್ಣ ಅಭಿಪ್ರಾಯಪಟ್ಟರು.

ಸಿಎಂ ಜೊತೆ ಕೆಲವು ಸಚಿವರು ದೆಹಲಿಗೆ ತೆರಳಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, “ಇದರಲ್ಲಿ ವಿಶೇಷ ಏನೂ ಇಲ್ಲ. ಈ ಹಿಂದೆಯೂ ಸಿಎಂ ದೆಹಲಿಗೆ ಹೋಗುವಾಗ ಸಚಿವರು ಜೊತೆಯಾಗುತ್ತಿದ್ದರು. ಕುತೂಹಲದಿಂದ 3-4 ಸಚಿವರು ಹೋಗಿರಬಹುದು” ಎಂದು ಹೇಳಿದರು.

ಇದಲ್ಲದೆ, “2028ರ ವಿಧಾನಸಭೆ ಚುನಾವಣೆ ಕಾಂಗ್ರೆಸ್‌ಗೆ ಬಹಳ ಮುಖ್ಯ. ಈಗಿನ ಗೊಂದಲ ಪರಿಹಾರವಾದರೆ ಮುಂದಿನ ಚುನಾವಣೆಗೆ ಅನುಕೂಲವಾಗಲಿದೆ. ಆದರೆ ನಾವು ಮಾತನಾಡಿದ ಕೂಡಲೇ ಏನೂ ಆಗುವುದಿಲ್ಲ. ಹೈಕಮಾಂಡ್‌ಗೆ ಎಲ್ಲವೂ ಗೊತ್ತಿದೆ. ಅವರ ತೀರ್ಮಾನವೇ ಅಂತಿಮ” ಎಂದು ಸ್ಪಷ್ಟಪಡಿಸಿದರು.

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಪವರ್ ಶೇರಿಂಗ್ ಹಾಗೂ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಬಾಲಕೃಷ್ಣ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Continue Reading

ದೇಶ

ಡಿಕೆಶಿಗೆ ಹೊಸ ಸವಾಲಾ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜಾರಕಿಹೊಳಿ ಲಾಬಿ

Published

on

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಪವರ್‌ ಶೇರಿಂಗ್‌ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಲೋಕೋಪಯೋಗಿ ಸಚಿವ Satish Jarkiholi ದಿಢೀರ್‌ ದೆಹಲಿಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಮುಖ್ಯಮಂತ್ರಿ Siddaramaiah ಹಾಗೂ ಉಪ ಮುಖ್ಯಮಂತ್ರಿ D. K. Shivakumar ಅವರ ಇತ್ತೀಚಿನ ದೆಹಲಿ ಪ್ರವಾಸದ ಬೆನ್ನಲ್ಲೇ ಜಾರಕಿಹೊಳಿ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಲು ಮುಂದಾಗಿರುವುದು ಕಾಂಗ್ರೆಸ್‌ನಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತ ಚರ್ಚೆ ಮತ್ತೆ ವೇಗ ಪಡೆದುಕೊಂಡಿದ್ದು, ಪಕ್ಷದೊಳಗಿನ ಸಮೀಕರಣಗಳು ಬದಲಾಗುವ ಸಾಧ್ಯತೆಗಳ ಬಗ್ಗೆ ಮಾತುಕತೆ ಜೋರಾಗಿದೆ.

ಪ್ರಸ್ತುತ ಡಿ.ಕೆ. ಶಿವಕುಮಾರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿದಿದ್ದರೂ, ಮುಂಬರುವ ಚುನಾವಣಾ ರಾಜಕಾರಣದ ದೃಷ್ಟಿಯಿಂದ ಪೂರ್ಣಾವಧಿ ಅಧ್ಯಕ್ಷರನ್ನು ನೇಮಕ ಮಾಡುವ ಅಗತ್ಯವಿದೆ ಎಂಬ ಅಭಿಪ್ರಾಯ ಕಾಂಗ್ರೆಸ್‌ ವಲಯದಲ್ಲಿ ಕೇಳಿಬರುತ್ತಿದೆ. ಇದೇ ಹಿನ್ನೆಲೆ ಅಹಿಂದ ಹಾಗೂ ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಸತೀಶ್ ಜಾರಕಿಹೊಳಿ ತಮ್ಮ ಪರ ಲಾಬಿ ಆರಂಭಿಸಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಆಪ್ತ ವಲಯದ ಪ್ರಮುಖ ನಾಯಕರಲ್ಲಿ ಒಬ್ಬರಾಗಿರುವ ಜಾರಕಿಹೊಳಿ ಅವರ ದೆಹಲಿ ಭೇಟಿ, ಡಿಕೆಶಿ ಬಣಕ್ಕೆ ಹೊಸ ಸವಾಲು ತಂದೊಡ್ಡಿದೆ ಎಂಬ ರಾಜಕೀಯ ವಿಶ್ಲೇಷಣೆಗಳು ಕೇಳಿಬರುತ್ತಿವೆ. ಎಐಸಿಸಿ ಅಧ್ಯಕ್ಷ Mallikarjun Kharge ಸೇರಿದಂತೆ ಹಿರಿಯ ಕಾಂಗ್ರೆಸ್‌ ನಾಯಕರನ್ನು ಭೇಟಿಯಾಗಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಒಟ್ಟಿನಲ್ಲಿ ಜಾರಕಿಹೊಳಿ ಅವರ ದೆಹಲಿ ಪ್ರವಾಸ ಕಾಂಗ್ರೆಸ್‌ನೊಳಗಿನ ನಾಯಕತ್ವ ಚರ್ಚೆಗೆ ಮತ್ತಷ್ಟು ವೇಗ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಹೊಸ ತಿರುವು ಸಿಗುವ ಸಾಧ್ಯತೆಗಳಿವೆ.

Continue Reading

Trending