ಆರೋಗ್ಯ
ಎಲ್ಲಾ ಮಂತ್ರಗಳ ರಾಜ: ಓಂಕಾರ

ಭಾರತೀಯ ಸಂಸ್ಕೃತಿಯಲ್ಲಿ ಓಂಕಾರಕ್ಕೆ ಅತೀ ಹೆಚ್ಚು ಮಹತ್ವವನ್ನು ನೀಡಲಾಗುತ್ತದೆ. ಓಂಕಾರವನ್ನು ಎಲ್ಲಾ ಮಂತ್ರಗಳ ರಾಜ ಎಂದು ಕರೆಯಲಾಗುತ್ತದೆ ಯಾಕೆಂದರೆ ಎಲ್ಲಾ ಮಂತ್ರಗಳ ಮೂಲವೇ ಓಂ. ಓಂಕಾರವು ಪರಬ್ರಹ್ಮನನ್ನು ಪ್ರತಿನಿಧಿಸುತ್ತದೆ, ವಾಸ್ತವಿಕವಾಗಿ ಓಂ ಪವಿತ್ರವಾದ ಪದವಾಗಿದ್ದು ಅನಂತವಾದ ಶಕ್ತಿಯನ್ನುಪ್ರತಿನಿಧಿಸುತ್ತದೆ.ಓಂ ಎನ್ನುವುದು ಒಂದು ಅಕ್ಷರವಲ್ಲ. ಅದು ಅ ಉ ಮ ಎಂಬ ಮೂರು ಅಕ್ಷರಗಳ ಸಂಗಮ. ಅ ಎಂದರೆ ಸೃಷ್ಟಿ, ಉ ಎಂದರೆ ವಿಕಸನ, ಮ ಎಂದರೆ ಮೌನ ಹಾಗೂ ವಿನಾಶ. ಹಾಗಾಗಿ ಈ ಒಂದೇ ಪದವು ಸೃಷ್ಟಿಯ ಆದಿ ಮತ್ತು ಅಂತ್ಯವನ್ನು ಪ್ರತಿಬಿಂಬಿಸುತ್ತದೆ.ಓಂಕಾರವನ್ನು ಪ್ರತಿದಿನ ಪಠಿಸಿದರೆ ನಿಮ್ಮ ಒತ್ತಡಗಳೆಲ್ಲಾ ನಿವಾರಣೆಯಾಗಿ ಮನಸ್ಸು ಆಹ್ಲಾದಕರವಾಗಿರುತ್ತದೆ.ಓಂಕಾರ ಪದವನ್ನು ಉಚ್ಚರಿಸುವಾಗ ನಿಮ್ಮ ದೇಹದಲ್ಲಿ ಉಂಟಾಗುವ ಕಂಪನವನ್ನು ಗಮನಿಸಬಹುದು, ಈ ಕಂಪನವು ಬೆನ್ನು ಮೂಳೆಗೆ ಒಳ್ಳೆಯದು. ಇದರಿಂದಾಗಿ ಬೆನ್ನುಮೂಳೆಯ ಕರ್ಯಕ್ಷಮತೆ ಹೆಚ್ಚಾಗುವುದು.
ಮ್ಯಾಟ್ ಮೇಲೆ ಕುಳಿತುಕೊಂಡು, ನಿಮ್ಮ ಕಣ್ಣುಗಳನ್ನು ಮುಚ್ಚಿ, ನಿಮ್ಮ ಎರಡೂ ಹುಬ್ಬಿನ ಮಧ್ಯಭಾಗವನ್ನು ಕೇಂದ್ರೀಕರಿಸಿ, ಓಂಕಾರವನ್ನು ನಿಧಾನವಾಗಿ ಪಠಿಸಿ. 21 ಬಾರಿ ಪಠಿಸುವುದು ಒಳ್ಳೆಯದು, ನಿಮ್ಮ ಉಸಿರಾಟದ ಮೂಲಕ ಪಠಣವನ್ನು ಲೆಕ್ಕಹಾಕಬಹುದು. ಓಂಕಾರವನ್ನು ಗಟ್ಟಿಧ್ವನಿಯಲ್ಲಿ ಅಥವಾ ಮೆಲುಧ್ವನಿಯಲ್ಲೂ ಪಠಿಸಬಹುದು. ಇದರಿಂದಾಗಿ ಮಾನಸಿಕ ಒತ್ತಡವು ನಿಧಾನವಾಗಿ ಕಡಿಮೆಯಾತ್ತದೆ ಎಂದು ಹೇಳಲಾಗುತ್ತದೆ.ಇದು ಮನಸ್ಸಿನಲ್ಲಿರುವ ಭಯ, ಅಸಮಾಧಾನವನ್ನು ನಿವಾರಣೆಗೊಳಿಸುತ್ತದೆ. ಓಂಕಾರದ ಪಠಣವು ನಿಮ್ಮ ಸುತ್ತಲಿನ ವಾತಾವರಣವನ್ನು ಶುದ್ಧಗೊಳಿಸಿ,ಧನಾತ್ಮಕ ಕಂಪನವನ್ನು ಉಂಟುಮಾಡುತ್ತದೆಓಂಕಾರದ ಉಚ್ಛಾರಣೆಯು ದೇಹದಲ್ಲಿರುವ ಎಲ್ಲಾ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆಓಂಕಾರದ ಪಠಣದಿಂದ ನಿಮ್ಮ ಹೃದಯದ ಆರೋಗ್ಯ ವೃದ್ಧಿಯಾಗುವುದು ಹಾಗೂ ರಕ್ತಸಂಚಾರವೂ ಆರೋಗ್ಯಕರವಾಗುವುದು.ಜರ್ಣಾಂಗವ್ಯವಸ್ಥೆಯನ್ನು ಸುಧಾರಿಸುತ್ತದೆ,ಓಂಕಾರವು ನಿಮ್ಮಲ್ಲಿರುವ ಉದಾಸೀನತೆಯನ್ನು ಬದಿಗೆ ಸರಿಸಿ, ಉತ್ಸಾಹವನ್ನು ಹೆಚ್ಚಿಸುತ್ತದೆ.ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಲ್ಲಿ, ಮಲಗುವ ಮುನ್ನ 5ನಿಮಿಷ ಓಂಕಾರವನ್ನು ಪಠಿಸಿ,ಓಂಕಾರದ ಪಠಣದಿಂದ ಶ್ವಾಸಕೋಶದ ಸಾರ್ಥ್ಯ ಹೆಚ್ಚುವುದು.ಮನುಷ್ಯನ ಮಾನಸಿಕ ಹಾಗೂ ದೈಹಿಕ ಸ್ವಾಸ್ಥ್ಯವನ್ನು ಹೆಚ್ಚಿಸುವುದು,ಓಂಕಾರದ ಉಚ್ಚಾರಣೆಯು ಗಂಟಲಿನ ಆರೋಗ್ಯಕ್ಕೂ ಒಳ್ಳೆಯದು, ಇದು ಥೈರಾಯ್ಡ್ ಗ್ರಂಥಿಯನ್ನು ಆರೋಗ್ಯವಾಗಿಡುವುದು.ಓಂಕಾರ ಪದವು ನಿಮ್ಮ ದೇಹದಲ್ಲಿ ಹೊಸ ಶಕ್ತಿಯನ್ನು ಪ್ರವಹಿಸಿ, ಯಾವುದೇ ಕೆಲಸದಲ್ಲೂ ನಿಮ್ಮ ಆತ್ಮವಿಶ್ವಾಸ ವೃದ್ಧಿಯಾಗುವಂತೆ ಮಾಡುತ್ತದೆ.
ಏಕಾಗ್ರತೆಯು ವೃದ್ಧಿಯಾಗಿ, ನಿಮ್ಮ ಗುರಿಯನ್ನು ಸಾಧಿಸಲು ಓಂಕಾರವು ಸಹಕರಿಸುವುದು. ಓಂಕಾರವನ್ನು ಪಠಿಸುವವರಿಗೆ ಮಾತ್ರವಲ್ಲದೇ, ಅವರ ಸುತ್ತಮುತ್ತಲಿನವರೂ ಓಂಕಾರದ ಕಂಪನವನ್ನು ಅನುಭವಿಸುವುದರಿಂದ ಇತರರಿಗೂ ಉಪಯೋಗವಾಗುವುದು
“ಓಂಕಾರವನ್ನು ಕಣ್ಣುಗಳನ್ನು ಮುಚ್ಚಿಕೊಂಡು ಜಪಿಸಬೇಕು”….
ನೀವು ಮೊದಲ ಬಾರಿ ಓಂಕಾರ ಪಠಣ ಆರಂಭಿಸುತ್ತಿದ್ದಲ್ಲಿ ಪ್ರತಿದಿನ 5 ನಿಮಿಷ ಮಾತ್ರ ಮಾಡಿ. ಪ್ರತಿದಿನ ಅಭ್ಯಾಸ ಮಾಡುತ್ತಾ ಹಿಡಿತ ಬಂದಂತೆ ಸಮಯವನ್ನು ನಿಧಾನವಾಗಿ ವಿಸ್ತರಿಸುತ್ತಾ ಬನ್ನಿ. ಆರಂಭದಲ್ಲೇ 5 ನಿಮಿಷಕ್ಕಿಂತ ಹೆಚ್ಚು ಅಭ್ಯಾಸ ಮಾಡಿದರೆ ದೇಹದಲ್ಲಿ ಉಂಟಾಗುವ ಶಕ್ತಿಯ ಕಂಪನದಿಂದ ಬಾಧೆಗೊಳಗಾಗಬಹುದು, ಯಾಕೆಂದರೆ ಓಂ ಜಪವು ದೇಹದ ಉಷ್ಣತೆಯನ್ನು ಹೆಚ್ಚಿಸುತ್ತದೆ. ಮುಖ್ಯವಾಗಿ ಮಹಿಳೆಯರು ಹೆಚ್ಚು ಓಂಕಾರವನ್ನು ಜಪಿಸುವುದರಿಂದ ಕಿಬ್ಬೊಟ್ಟೆಯ ಕುಹರದ ಮೇಲೆ ಕಂಪನಗಳು ಹೆಚ್ಚಾಗಿ ಸಂತಾನೋತ್ಪತ್ತಿಯ ಅಂಗಗಳಿಗೆ ಹಾನಿಯಾಗಬಹುದು.
ಓಂ’ ನ ಉಚ್ಛಾರಣೆ ಮಾಡುವುದರಿಂದ ಗಂಟಲಿನಲ್ಲಿ ಕಂಪನ ಉಂಟಾಗುತ್ತದೆ. ಇದರಿಂದ ಥೈರಾಯ್ಡ್ ಗ್ರಂಥಿಗಳ ಮೇಲೆ ಸಕಾರಾತ್ಮಕ ಪ್ರಭಾವ ಉಂಟಾಗುತ್ತದೆ. ನಿಮಗೆ ಭಯವಾಗುತ್ತಿದ್ದರೆ ಕಣ್ಣನ್ನು ಮುಚ್ಚಿಕೊಂಡು ಐದು ಬಾರಿ ದರ್ಘ ಶ್ವಾಸ ತೆಗೆದುಕೊಂಡು ‘ಓಂ’ ಎಂದು ಉಚ್ಛರಿಸಿ. ಶರೀರದ ವಿಷ ಅಂಶಗಳನ್ನು ದೂರ ಮಾಡುತ್ತದೆ.
ಇದನ್ನು ಉಚ್ಛಾರ ಮಾಡುವುದರಿಂದ ಒತ್ತಡ ಕಡಿಮೆಯಾಗುತ್ತದೆ. ಹೃದಯವನ್ನು ಆರೋಗ್ಯವಾಗಿಡಲು ಸಹಕಾರಿಯಾಗಿದೆ. ‘ಓಂ’ ಎಂದು ಹೇಳುವುದರಿಂದ ರಕ್ತ ಸಂಚಾರ ಸುಗಮವಾಗುತ್ತದೆ. ಇದನ್ನು ಉಚ್ಛಾರ ಮಾಡುವುದರಿಂದ ಪಚನ ಕ್ರಿಯೆ ಸರಿಯಾಗುತ್ತದೆ. ಇದರಿಂದ ಶರೀರದಲ್ಲಿ ಯುವಾವಸ್ಥೆಯ ಸ್ಫರ್ತಿ ಹರಿದಾಡುತ್ತದೆ.ಆಯಾಸವನ್ನು ದೂರ ಮಾಡಲು ಸುಲಭ ಉಪಾಯ ‘ಓಂ’ ಉಚ್ಛಾರ ಮಾಡುವುದು.ಸರಿಯಾಗಿ ನಿದ್ರೆ ಬರದೇ ಇದ್ದ ಸಮಯದಲ್ಲಿ ಓಂ ಎಂದು ಪಠಣ ಮಾಡಿ. ಇದರಿಂದ ಮನಸ್ಸು ಶಾಂತವಾಗಿ ನಿದ್ರೆ ಚೆನ್ನಾಗಿ ಬರುತ್ತದೆ.ಓಂ’ ಉಚ್ಛಾರ ಮಾಡುವುದರಿಂದ ಉಂಟಾಗುವ ಕಂಪನದಿಂದ ಬೆನ್ನೆಲುಬು ಗಟ್ಟಿಯಾಗುತ್ತದೆ ಹಾಗೂ ಮುಂದೆ ಇದರಿಂದ ಯಾವುದೇ ಸಮಸ್ಯೆ ಕಾಣಿಸುವುದಿಲ್ಲ..
ಆರೋಗ್ಯ
ಭಾರತದ ಮಲೇರಿಯಾ ಲಸಿಕೆ ‘ಆಡ್ಫಾಲ್ಸಿವ್ಯಾಕ್ಸ್’: Plasmodium Falciparum ವಿರುದ್ಧ ನೂತನ ಹೋರಾಟ

ನವದೆಹಲಿ: ಭಾರತವು ಔಷಧೋತ್ಪಾದನೆಯಲ್ಲಿ ತನ್ನನ್ನು ‘ವಿಶ್ವ ಔಷಧ ರಾಜಧಾನಿ’ ಎಂಬ ಹಿರಿಮೆಗೆ ತಂದುಕೊಂಡಿದೆ. ಇದೀಗ, ದೇಶದ ವೈದ್ಯಕೀಯ ಸಂಶೋಧನೆ ಮತ್ತೊಂದು ಮಹತ್ತರ ಸಾಧನೆ ದಾಖಲಿಸಿದೆ – ಭಾರತದ ಮೊದಲ ಮಲೇರಿಯಾ ಲಸಿಕೆ “ಆಡ್ಫಾಲ್ಸಿವ್ಯಾಕ್ಸ್” ಅನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಘೋಷಿಸಿದೆ.
ಈ ಲಸಿಕೆಯನ್ನು ICMR ನ ಭುವನೇಶ್ವರದ ಪ್ರಾದೇಶಿಕ ವೈದ್ಯಕೀಯ ಸಂಶೋಧನಾ ಕೇಂದ್ರ ಹಾಗೂ ರಾಷ್ಟ್ರೀಯ ಮಲೇರಿಯಾ ಸಂಶೋಧನಾ ಸಂಸ್ಥೆ, ಜೊತೆಗೆ ಜೈವಿಕ ತಂತ್ರಜ್ಞಾನ ಇಲಾಖೆಯ ರಾಷ್ಟ್ರೀಯ ರೋಗನಿರೋಧಕ ಸಂಸ್ಥೆಯ ಸಹಭಾಗಿತ್ವದಲ್ಲಿ ರೂಪಿಸಲಾಗಿದೆ.
ಪ್ಲಾಸ್ಮೋಡಿಯಂ ಫಾಲ್ಸಿಪ್ಯಾರಮ್ ವಿರುದ್ಧ ಲಸಿಕೆ:
ಆಡ್ಫಾಲ್ಸಿವ್ಯಾಕ್ಸ್ ಲಸಿಕೆ, ಮಲೇರಿಯಾದ ಪ್ರಮುಖ ಕಾರಣಕರವಾಗಿರುವ Plasmodium falciparum ವಿರುದ್ಧ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಈ ಲಸಿಕೆ ಎರಡು ಹಂತಗಳಲ್ಲಿ ಪರಾವಲಂಬಿಯನ್ನು ಗುರಿಯಾಗಿಸುತ್ತಿದ್ದು, ದೀರ್ಘಕಾಲ ದೇಹದಲ್ಲಿ ಇರುವುದು ಹಾಗೂ ಸಾಮಾನ್ಯ ಉಷ್ಣಾಂಶದಲ್ಲಿಯೇ 9 ತಿಂಗಳವರೆಗೆ ಸಂಗ್ರಹಿಸಬಹುದಾಗಿದೆ.
ಅನುಮೋದನೆಗೂ ಮುನ್ನ 7 ವರ್ಷಗಳು ಬೇಕಾಗಬಹುದು:
ಲಸಿಕೆ ಪ್ರಸ್ತುತ ಆರಂಭಿಕ ಪರೀಕ್ಷಾ ಹಂತದಲ್ಲಿದೆ. ಇದರ ಮೊದಲ ಫಲಿತಾಂಶಗಳು ಅತ್ಯಂತ ಹೃದಯಂಗಮವಾಗಿವೆ. ಆದರೆ ಮಾನವ ಬಳಕೆಗೆ ಮುನ್ನ ಎಲ್ಲಾ ಹಂತದ ಪರೀಕ್ಷೆ ಹಾಗೂ ಅನುಮೋದನೆಗಳಿಗಾಗಿ ಇನ್ನೂ ಸುಮಾರು 7 ವರ್ಷಗಳು ಬೇಕಾಗಬಹುದು.
ವಿದೇಶಿ ಲಸಿಕೆಗಳಿಗಿಂತ ಅಗ್ಗ ಮತ್ತು ಪರಿಣಾಮಕಾರಿ:
ಭಾರತದ ಈ ಲಸಿಕೆ ಅಸ್ತಿತ್ವದಲ್ಲಿರುವ ವಿದೇಶಿ ಲಸಿಕೆಗಳಿಗಿಂತ ಅಗ್ಗವಾಗಿದ್ದು, ಹೆಚ್ಚು ಪರಿಣಾಮಕಾರಿಯೂ ಆಗಬಹುದು. ಇದು ಮೇಕ್ ಇನ್ ಇಂಡಿಯಾ ಯ ಉದ್ದೇಶಗಳನ್ನು ನೆರವೇರಿಸುತ್ತದೆ ಮತ್ತು ಮಾಸ್ ಲೆವೆಲ್ನಲ್ಲಿ ಮಲೇರಿಯಾ ತಡೆಯುವಲ್ಲಿ ಪ್ರಮುಖ ಸಾಧನವಾಗಬಲ್ಲದು.
ಆರೋಗ್ಯ
ಅಲರ್ಜಿ ನಿಯಂತ್ರಣ ಹೇಗೆ?

ನವದೆಹಲಿ: ಮಳೆಗೆ ಬಿಡುವಿಲ್ಲದ ಕಾಲವಿದು. ರಾತ್ರಿಯೆಲ್ಲ ಮಳೆ ಸುರಿದಾಗ, ಬೆಳಗಿನ ಸ್ವಚ್ಛ ಹವೆಯನ್ನು ನೋಡಿದರೆ ಎದೆ ಹಗುರಾಗುವಷ್ಟು ತಾಜಾ ಗಾಳಿಯನ್ನು ಉಸಿರಾಡಬಹುದು ಎನ್ನುವ ಭಾವ ಬರುತ್ತದೆ. ಆದರೆ ಅಸ್ತಮಾ, ಅಲರ್ಜಿ (Allergies) ಇರು ವವರಿಗೆ ಮಳೆಗಾಲವೂ ಕಷ್ಟವೇ. ಎಲ್ಲೆಡೆ ಒದ್ದೆ, ತೇವ ಆವರಿಸಿಕೊಂಡಿರುವಾಗ ಬ್ಯಾಕ್ಟೀರಿಯಗಳು, ಫಂಗಸ್ಗಳ ಕಾಟ ಹೆಚ್ಚು. ಇದ ರಿಂದಲೇ ಇನ್ನಷ್ಟು ಅಲರ್ಜಿ ಸಮಸ್ಯೆ ಬಿಗಡಾಯಿಸುತ್ತದೆ. ಅದರಲ್ಲೂ ಮೋಡ ಬಿಗಿದಿದ್ದ ರಂತೂ ಶ್ವಾಸನಾಳಗಳೂ ಬಿಗಿದು, ಆಷಾಢದ ಗಾಳಿಯಂತೆಯೇ ಶ್ವಾಸಕೋಶವೂ ಶಬ್ದ ಮಾಡಲಾರಂಭಿ ಸುತ್ತದೆ. ಇವಿಷ್ಟು ಸಾಲದೆಂಬಂತೆ ನಾನಾ ರೀತಿಯ ವೈರಸ್ ಸೋಂಕುಗಳು ಅಮರಿಕೊಂಡು, ಸೋಂಕು ಗುಣವಾದ ಮೇಲೂ ಅಲರ್ಜಿ ಸಮಸ್ಯೆ ಉಲ್ಭಣಿಸುವಂತೆ ಮಾಡುತ್ತವೆ. ಮಳೆಗಾಲದಲ್ಲಿ ಅಸ್ತಮಾ, ಅಲರ್ಜಿಗಳ ನಿಯಂತ್ರಣ ಹೇಗೆ?
ಏಕೆ ಹೆಚ್ಚುತ್ತದೆ?: ಈ ಮಳೆಗೆ, ಒಂದು ಹಿಡಿ ಮಣ್ಣು ಇದ್ದಲ್ಲೂ ಹುಲ್ಲು ಹಸಿರಾಗುತ್ತದೆ. ಈ ಹುಲ್ಲಿ ನಿಂದ ವಾತಾವರಣ ಸೇರುವ ಅಲರ್ಜಿಕಾರಕಗಳು ಹಲವು ರೀತಿಯವು. ಜೋರು ಗಾಳಿಯಲ್ಲಿ ಇದರ ಹೂವಿನ ಪರಾಗಗಳೆಲ್ಲ ಎಲ್ಲೆಡೆ ಪಸರಿಸುತ್ತವೆ. ಅಲರ್ಜಿಗೆ ಕಾರಣ ವಾಗುತ್ತವೆ. ತೇವ ಹೆಚ್ಚಿದ್ದಲ್ಲಿ ಫಂಗಸ್ ಪ್ರಮಾಣವೂ ಹೆಚ್ಚು. ಜೋರು ಮಳೆಯ ಪರಿಸರದಲ್ಲಿ ಗೋಡೆ, ಬಾಗಿಲುಗಳ ಮೇಲೂ ಫಂಗಸ್ ಬೆಳೆದಿರುತ್ತದೆ. ಇವುಗಳನ್ನು ಕಾಲಕಾಲಕ್ಕೆ ಸ್ವಚ್ಛ ಗೊಳಿಸದಿದ್ದರೆ ಅಸ್ತಮಾ ಸಮಸ್ಯೆ ಬಿಗ ಡಾಯಿಸಬಹುದು. ಯಾವುದೇ ರೀತಿಯ ಪರಾಗಗಳ ಅಲರ್ಜಿಯೂ ಈಗ ತೊಂದರೆ ಕೊಟ್ಟೀತು. ಜೋರು ಗಾಳಿ ಮತ್ತು ಮೋಡ ಮುಸುಕಿದ ವಾತಾ ವರಣಗಳೇ ಇದಕ್ಕೆ ಕಾರಣ.
ಲಕ್ಷಣಗಳು: ಅಲರ್ಜಿ ಹೆಚ್ಚುತ್ತಿದೆ ಎನ್ನುವುದಕ್ಕೆ ಈ ಲಕ್ಷಣಗಳು ಕಾಣಿಸಿಕೊಳ್ಳಬಹುದು- ಸೀನು ಗಳ ಸರಮಾಲೆ, ಮೂಗು ಸೋರುವುದು, ಒಣ ಕೆಮ್ಮು, ಉಸಿರಾಡಲು ಕಷ್ಟವಾಗುವುದು, ಉಸಿರಾಡುವಾಗ ಸಿಳ್ಳೆ ಹಾಕಿದಂತೆ ಪುಪ್ಪುಸಗಳಿಂದ ಶಬ್ದ ಬರುವುದು, ಸುಸ್ತು-ಆಯಾಸ, ಕಣ್ಣು ಕೆಂಪಾಗುವುದು, ಕಣ್ಣಿನಲ್ಲಿ ತುರಿಕೆ, ಕಣ್ಣು ಊದಿಕೊಂಡು ನೀರು ಬರುವುದು, ತಲೆನೋವು, ಮೈ ಮೇಲೆ ಗುಳ್ಳೆಗಳು ಬಂದು ಕೆಂಪಾಗುವುದು… ಇತ್ಯಾದಿ.
ಏನು ಮಾಡಬೇಕು?: ಅಸ್ತಮಾ, ಅಲರ್ಜಿ ತೊಂದರೆಯಿದೆ ಎಂದಾದರೆ ವೈದ್ಯರು ಹೇಳಿದ ಔಷಧಿ ಗಳನ್ನು ನಿಯಮಿತವಾಗಿ ತೆಗೆದುಕೊಳ್ಳಿ. ಅಲರ್ಜಿ ನಿಯಂತ್ರಣಕ್ಕೆ ಸರಿಯಾದ ಚಿಕಿತ್ಸಾ ವಿಧಾನ ವನ್ನು ಪಾಲಿಸುವುದು ಅತ್ಯಗತ್ಯ. ಪಫ್ಗಳನ್ನು ತೆಗೆದುಕೊಳ್ಳಬೇಕು ಎಂದಾದರೆ, ದಿನದ ಲೆಕ್ಕವನ್ನು ಪಕ್ಕಾ ಇರಿಸಿಕೊಳ್ಳಿ. ಸೋಂಕುಗಳಿಂದ ತಪ್ಪಿಸಿಕೊಳ್ಳುವುದು ಮುಖ್ಯ ಎಂದಾದಲ್ಲಿ ಫ್ಲೂ ಲಸಿಕೆ ಪಡೆಯಿರಿ. ಯಾವೆಲ್ಲ ಆಹಾರಗಳು ಅಲರ್ಜಿ ತರುತ್ತವೆ ನಿಮಗೆ ಎಂಬುದನ್ನು ತಿಳಿದು ಕೊಳ್ಳುವುದು ಹೆಚ್ಚಿನ ನೆರವನ್ನು ನೀಡಬಹುದು.
ಮನೆಯೊಳಗೆ ಹೆಚ್ಚಿನ ತೇವ ನಿಲ್ಲದಂತೆ ಜಾಗ್ರತೆ ಮಾಡಿ. ಸಾಕಷ್ಟು ಗಾಳಿ-ಬೆಳಕು ಆಡುವಂತಿರಲಿ. ಮಳೆ ಇಲ್ಲದ ಸಮಯದಲ್ಲಿ, ಬಿಸಿಲಿದ್ದಾಗ ಕಿಟಕಿಗಳನ್ನು ತೆರೆದಿಡುವುದು ಸಹಕಾರಿ. ಹಾಗಿಲ್ಲದಿದ್ದರೆ ಎಕ್ಸಾಸ್ಟ್ ಫ್ಯಾನ್ಗಳನ್ನು ಅಳವಡಿಸಿಕೊಳ್ಳಿ. ಮನೆಯೊಳಗೆ ದೂಳು, ಕಸ ಉಳಿಯದಿರಲಿ. ಮನೆ ಯಲ್ಲಿ ಸಾಕು ಪ್ರಾಣಿಗಳಿದ್ದರೆ, ಅವುಗಳ ಕೂದಲಿನಿಂದ ಅಲರ್ಜಿ ಉಂಟಾಗುವ ಸಾಧ್ಯತೆ ಹೆಚ್ಚು. ಹಾಸಿಗೆ-ಹೊದಿಕೆಯ ವಸ್ತ್ರಗಳನ್ನು ಕಪಾಟಿನಿಂದ ನೇರವಾಗಿ ತೆಗೆದು ಉಪಯೋಗಿಸಬೇಡಿ. ಅವು ಗಳನ್ನು ಬಿಸಿಲಿಗೆ ಆರಲು ಬಿಡಿ ಅಥವಾ ಡ್ರೈಯರ್ಗೆ ಹಾಕಿ. ಅದಿಲ್ಲದಿದ್ದರೆ ಇಸ್ತ್ರಿ ಮಾಡಿ ಉಪ ಯೋಗಿಸಿ. ಇದರಿಂದ ಮೈಟ್ಗಳ ಉಪಟಳವನ್ನು ತಪ್ಪಿಸಬಹುದು.
ಮನೆಯಿಂದ ಹೊರಗೆ ಹೋಗುವಾಗ ಬೆಚ್ಚಗಿನ ವಸ್ತ್ರಗಳು ಅಗತ್ಯ. ಗಾಳಿ ಹೆಚ್ಚಿದ್ದರೆ ಮುಖಕ್ಕೆ ಮಾಸ್ಕ್ ಹಾಕಿ. ಕಟುವಾದ ಪರಿಮಳಗಳು ನಿಮಗೆ ಹೇಳಿಸಿದ್ದಲ್ಲ. ನಿಮ್ಮ ವೈಯಕ್ತಿಕ ಶುಚಿತ್ವದ ವಸ್ತುಗಳಾದ ಸೋಪು, ಶಾಂಪು, ಕ್ರೀಮ್ಗಳಿಗೆ ಕಟುವಾದ ಘಮವಿದ್ದರೆ, ಅದನ್ನು ಬದಲಾಯಿಸಿ. ಪರ್ಫ್ಯೂಮ್ಗಳು ಸಹ ತೊಂದರೆ ತಂದಾವು, ಜೋಕೆ. ಮಳೆ-ಚಳಿ ಏನೇ ಆದರೂ ದಿನವೂ ಸ್ನಾನ ಮಾಡಿ. ಹೊರಗಿ ನಿಂದ ಬಂದಾಕ್ಷಣ ಆ ಬಟ್ಟೆಗಳನ್ನು ಬದಲಿಸಿ, ಕೈ-ಕಾಲು ತೊಳೆದು ಕೊಳ್ಳಿ. ಇದರಿಂದ ಸೋಂಕು ಮತ್ತು ಅಲರ್ಜಿಕಾರಕಗಳನ್ನು ನಿಯಂತ್ರಿಸಬಹುದು. ಉಗುರು ಗಳನ್ನು ಕತ್ತರಿಸಿ, ಸ್ವಚ್ಛ ಮಾಡಿ ಕೊಳ್ಳಿ.
ಆಹಾರ: ಸಮತೋಲಿತ ಮತ್ತು ಸತ್ವಭರಿತ ಆಹಾರವನ್ನು ಸೇವಿಸುವುದು ಹೆಚ್ಚಿನ ತೊಂದರೆ ಯನ್ನು ಬುಡದಲ್ಲೇ ತಪ್ಪಿಸುತ್ತದೆ. ಒಮೇಗಾ ೩ ಕೊಬ್ಬಿನಾಮ್ಲ ಹೆಚ್ಚಿರುವ ಆಹಾರವನ್ನು ಸೇವಿಸಿ. ಇದೀಗ ಬೆಣ್ಣೆ ಹಣ್ಣು ಅಥವಾ ಅವಕಾಡೊಗಳ ಕಾಲ. ಒಮೇಗಾ ೩ ಕೊಬ್ಬಿನಾಮ್ಲ ಹೇರಳ ವಾಗಿರುವ ಅವುಗಳನ್ನು ಮನಸೋಇಚ್ಛೆ ತಿನ್ನಿ. ಜೊತೆಗೆ ವಿಟಮಿನ್ ಸಿ ಹೆಚ್ಚಿರುವ ಕಿತ್ತಳೆ, ಬೆರ್ರಿಗಳು, ಪಾಲಕ್ ಸೊಪ್ಪು, ಕ್ಯಾಪ್ಸಿಕಂನಂಥವು ನಿಮಗೆ ಬೇಕು. ಚೆನ್ನಾಗಿ ನೀರು ಕುಡಿಯಿರಿ, ಮಳೆಗಾಲದಲ್ಲಿ ಬಾಯಾರಿಕೆಯೇ ಆಗುವುದಿಲ್ಲ ಎಂಬ ನೆವ ಹೇಳಬೇಡಿ. ಹರ್ಬಲ್ ಚಹಾಗಳು, ಸೂಪ್ಗಳನ್ನು ಯಥೇಚ್ಛ ಕುಡಿಯಿರಿ.
ಆರೋಗ್ಯ
ಹೃದಯಾಘಾತಕ್ಕೆ ಹೊಸ ಕಾರಣ ಬಿಚ್ಚಿಟ್ಟ ಹೃದ್ರೋಗ ತಜ್ಞರು: ಬೆಂಗಳೂರಿಗರೇ ಎಚ್ಚರ!

ರಾಜ್ಯದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ, ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಬಗ್ಗೆ ಹೃದ್ರೋಗ ತಜ್ಞರು ಆಘಾತಕಾರಿ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಮತ್ತು ತಾಪಮಾನದ ಏರಿಳಿತಗಳು ಹೃದಯಾಘಾತಕ್ಕೆ ಪ್ರಮುಖ ಕಾರಣಗಳಾಗಿವೆ. ಬೆಂಗಳೂರಿನ ವಾಯು ಗುಣಮಟ್ಟವು ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಇದು ನಗರವಾಸಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.
ತಜ್ಞರ ಎಚ್ಚರಿಕೆ
“ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಮತ್ತು ತಾಪಮಾನದ ಬದಲಾವಣೆಯು ಹೃದಯಾಘಾತಕ್ಕೆ ಕಾರಣವಾಗಬಹುದು ಎಂದು ಸಂಶೋಧನೆಗಳು ತೋರಿಸಿವೆ. ಬೆಂಗಳೂರಿನಂತಹ ದೊಡ್ಡ ನಗರಗಳಲ್ಲಿ ವಾಯು ಮಾಲಿನ್ಯವು ಗಣನೀಯವಾಗಿ ಹೆಚ್ಚಾಗುತ್ತಿದೆ. ಇದರಲ್ಲಿ ಪಾರ್ಟಿಕ್ಯುಲೇಟ್ ಮ್ಯಾಟರ್ (PM 2.5 ಮತ್ತು PM 10) ಮತ್ತು ಸೀಸದ (ಲೆಡ್) ಮಟ್ಟವು ಆತಂಕಕಾರಿಯಾಗಿದೆ. ಶಬ್ದ ಮಾಲಿನ್ಯವು 80 ಡೆಸಿಬಲ್ಗಿಂತ ಹೆಚ್ಚಾದಾಗ ರಕ್ತದೊತ್ತಡವನ್ನು ಏರಿಸುತ್ತದೆ, ಇದರಿಂದ ಹೃದಯಾಘಾತದ ಸಂಭವ ಹೆಚ್ಚಾಗುತ್ತದೆ,” ಎಂದು ಹೃದ್ರೋಗ ತಜ್ಞ ಡಾ. ನಟೇಶ್ ಬಿ.ಹೆಚ್ ವಿವರಿಸಿದ್ದಾರೆ.
ಕಾರ್ಡಿಯೋಲಾಜಿಕಲ್ ಸೊಸೈಟಿ ಆಫ್ ಇಂಡಿಯಾದ ‘ಹಾರ್ಟ್ ಅಟ್ಯಾಕ್ ಆಂಡ್ ಏರ್ ಪೊಲ್ಯೂಷನ್’ ಥೀಮ್ ಅಡಿಯಲ್ಲಿ ನಡೆದ ಸಂಶೋಧನೆಯು, ಬೆಂಗಳೂರಿನ ಕೆಂಗೇರಿ, HSR ಲೇಔಟ್ನಂತಹ ಪ್ರದೇಶಗಳಲ್ಲಿ ವಾಯು ಮಾಲಿನ್ಯದ ಮಟ್ಟ ಗಣನೀಯವಾಗಿ ಏರಿಕೆಯಾಗಿರುವುದನ್ನು ದೃಢಪಡಿಸಿದೆ. ಮೇ 2025ರಲ್ಲಿ ದಾಖಲಾದ AQI (ವಾಯು ಗುಣಮಟ್ಟ ಸೂಚ್ಯಂಕ) ಮಟ್ಟಗಳು ಆತಂಕಕಾರಿಯಾಗಿದ್ದವು: ಮೇ 6ರಂದು 144 AQI, ಮೇ 16ರಂದು 191 AQI, ಮತ್ತು ಮೇ 31ರಂದು 157 AQI.
ಬೆಂಗಳೂರಿನಲ್ಲಿ ಮಾಲಿನ್ಯ ಹೆಚ್ಚಲು ಹಲವು ಕಾರಣಗಳಿವೆ:
- ಗುಂಡಿಮಯ ರಸ್ತೆಗಳು: ರಸ್ತೆಗಳ ದುರಸ್ಥಿತಿಯಿಂದ ವಾಹನಗಳು ನಿಧಾನವಾಗಿ ಚಲಿಸುತ್ತವೆ, ಇದರಿಂದ ಹೊಗೆ ಮತ್ತು ಧೂಳು ಹೆಚ್ಚಾಗುತ್ತದೆ.
- ವಾಹನಗಳ ಸಂಖ್ಯೆ: ಒಂದೂವರೆ ಕೋಟಿಗೂ ಅಧಿಕ ವಾಹನಗಳು ರಸ್ತೆಯಲ್ಲಿರುವುದು ಮಾಲಿನ್ಯಕ್ಕೆ ಕಾರಣ
- ಹಳೆಯ ವಾಹನಗಳು: ಹೊಗೆ ಉಗುಳುವ ಹಳೆಯ ವಾಹನಗಳು ವಾಯು ಮಾಲಿನ್ಯವನ್ನು ಉಲ್ಬಣಗೊಳಿಸುತ್ತವೆ.
- ಶಬ್ದ ಮಾಲಿನ್ಯ: ಟ್ರಾಫಿಕ್ ಜಾಮ್ನಿಂದ ಶಬ್ದ ಮಾಲಿನ್ಯವು 80 ಡೆಸಿಬಲ್ಗಿಂತ ಮೀರಿದೆ, ಇದು ಒತ್ತಡ ಮತ್ತು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ.
- ಬೆಂಗಳೂರಿನ ಜನರಿಗೆ ಈ ಸುದ್ದಿಯು ಆತಂಕವನ್ನುಂಟುಮಾಡಿದೆ. ಟ್ರಾಫಿಕ್ ಜಾಮ್, ಗುಂಡಿಮಯ ರಸ್ತೆಗಳು, ಮತ್ತು ಕುಸಿಯುತ್ತಿರುವ ವಾಯು ಗುಣಮಟ್ಟವು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಶಾಲಾ ಮಕ್ಕಳ ಆರೋಗ್ಯದ ಮೇಲೂ ಇದರ ಪರಿಣಾಮವು ಕಾಣಿಸಿಕೊಂಡಿದ್ದು, ಜನರು ಸರ್ಕಾರದಿಂದ ರಸ್ತೆ ಸುಧಾರಣೆ, ವಾಹನ ನಿಯಂತ್ರಣ ಮತ್ತು ಮಾಲಿನ್ಯ ತಡೆಗಟ್ಟುವ ಕ್ರಮಗಳನ್ನು ಒತ್ತಾಯಿಸುತ್ತಿದ್ದಾರೆ.
- ತಜ್ಞರು ಕೆಲವು ತಡೆಗಟ್ಟುವ ಕ್ರಮಗಳನ್ನು ಸೂಚಿಸಿದ್ದಾರೆ:
- ಮಾಸ್ಕ್ ಧರಿಸಿ: PM 2.5 ಮತ್ತು PM 10 ಕಣಗಳಿಂದ ರಕ್ಷಣೆಗಾಗಿ N95 ಮಾಸ್ಕ್ಗಳನ್ನು ಬಳಸಿ.
- ವಾಹನ ನಿಯಂತ್ರಣ: ಹಳೆಯ ವಾಹನಗಳಿಗೆ ಕಡ್ಡಾಯ ಎಮಿಷನ್ ಟೆಸ್ಟ್
- ಶಬ್ದ ಕಡಿಮೆಗೊಳಿಸಿ: ಟ್ರಾಫಿಕ್ ಜಾಮ್ ಕಡಿಮೆ ಮಾಡಲು ರಸ್ತೆ ಸುಧಾರಣೆ.
- ನಿಯಮಿತ ಆರೋಗ್ಯ ತಪಾಸಣೆ: ಹೃದಯದ ಆರೋಗ್ಯವನ್ನು ಮೇಲ್ವಿಚಾರಣೆ ಮಾಡಿ.
- ಈ ದಿಶೆಯಲ್ಲಿ ಸರ್ಕಾರ ಮತ್ತು ಜನರ ಸಹಕಾರದಿಂದ ಮಾತ್ರ ಮಾಲಿನ್ಯದಿಂದ ಉಂಟಾಗುವ ಹೃದಯಾಘಾತದ ಸಂಖ್ಯೆಯನ್ನು ಕಡಿಮೆಗೊಳಿಸಬಹುದು
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ