Connect with us

ರಾಜಕೀಯ

ಮೇ 1ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ: ಸಿಎಂ ಘೋಷಣೆ – PERMANENT SERVICE FOR POURAKARMIKAS

ಬೆಂಗಳೂರು: “ಮೇ 1ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು.

ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ” ಎಂದರು.

“ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದು” ಎಂದರು.

ವಾಹನ ಚಾಲಕರಿಗೂ ಕಾಯಂ: “ಪೌರ ಕಾರ್ಮಿಕರ ಜೊತೆಗೆ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂ‌ ಮಾಡಲಾಗುವುದು” ಎಂದು ಮುಖ್ಯಮಂತ್ರಿ ಘೋಷಿಸಿದರು. ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಬೇಕು. ವಿದ್ಯಾವಂತರಾದರೆ ಮಾತ್ರ ಸ್ವಾಭಿಮಾನಿಗಳಾಗಲು ಸಾಧ್ಯ. ಮಕ್ಕಳಿಗೆಲ್ಲಾ ಶಿಕ್ಷಣ ಕೊಡಿಸಿ. ಪ್ರತಿಯೊಬ್ಬರೂ ಪ್ರತಿಭಾವಂತರೇ. ಅವಕಾಶ ಸಿಗುವುದಷ್ಟೆ ಮುಖ್ಯ. ಅವಕಾಶ ಸಿಕ್ಕರೆ ಎಲ್ಲರೊಳಗಿನ ಪ್ರತಿಭೆ ಹೊರಗೆ ಬರುತ್ತದೆ ಎಂದರು.

ನಗದು ರಹಿತ ಆರೋಗ್ಯ ಕಾರ್ಡ್: “ಪೌರ ಕಾರ್ಮಿಕ ಸಮುದಾಯಕ್ಕೆ ನಗದು ರಹಿತ ಆರೋಗ್ಯ ಕಾರ್ಡ್​ ನೀಡಲಾಗುವುದು. ಕಾರ್ಮಿಕರ ಸಿಂಧುತ್ವದ ಸಮಸ್ಯೆ ಬಗೆಹರಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು. ಪೌರ ಕಾರ್ಮಿಕರ ಸಂಘಟನೆ ಮತ್ತು ಹೋರಾಟದಲ್ಲಿ ನಾರಾಯಣ್ ಅವರ ಪಾತ್ರ ದೊಡ್ಡದಿದೆ. ಪೌರ ಕಾರ್ಮಿಕ‌ ಸಮುದಾಯದಿಂದ ಬಂದು ಮೇಯರ್ ಆದವರಲ್ಲಿ ನಾರಾಯಣ್ ಅವರು ಮೊದಲಿಗರು” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

“ನಾರಾಯಣ್​ ಅವರು ಸರ್ಕಾರದ ಮುಂದೆ ಇಟ್ಟ ಪೌರ ಕಾರ್ಮಿಕರ ಸಮಸ್ಯೆಗಳಲ್ಲಿ ಹಲವನ್ನು ನಮ್ಮ ಸರ್ಕಾರ ಬಗೆಹರಿಸಿದೆ. ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದು ಪಡಿಸಿ ಪಾಲಿಕೆಗಳಿಂದಲೇ ಸಂಬಳ ಪಾವತಿಸುವ ವ್ಯವಸ್ಥೆ ಜಾರಿಗೆ ಮಾಡಿದ್ದು ನಮ್ಮ ಸರ್ಕಾರ. ಮೈಸೂರಿನಲ್ಲಿ 524 ಮನೆಗಳನ್ನು ಕೊಡಿಸುವಲ್ಲಿ, ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಕಲ್ಪಿಸಿ ಒಂದು ಮನೆಗೆ 6.5 ಲಕ್ಷ ರೂಪಾಯಿ ಹಣ ಕೊಡ್ತಾ ಇರುವುದು ನಮ್ಮ ಸರ್ಕಾರ ಮಾತ್ರ ಎಂದರು.

ಪೌರ ಕಾರ್ಮಿಕರ ಸಂಬಳವನ್ನು 7 ಸಾವಿರದಿಂದ 17 ಸಾವಿರಕ್ಕೆ ಏರಿಸಿದ್ದು ಇದೇ ಸಿದ್ದರಾಮಯ್ಯ. ನೀವೆಲ್ಲಾ ಈಗ ಕಷ್ಟ ಪಟ್ಟು ಶುಚಿತ್ವದ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಮಕ್ಕಳೂ ಇದೇ ಕೆಲಸ ಮಾಡಬಾರದು. ನಿಮ್ಮ ಮಕ್ಕಳು ಇತರ ಕೆಲಸಗಳಿಗೆ ಹೋಗಬೇಕು. ಆ ರೀತಿ ನೀವು ಬೆಳೆಯಬೇಕು. ಸಮಾಜದ ಮುಖ್ಯವಾಹಿನಿಗೆ ಬರಬೇಕು. ಪ್ರತೀ ವರ್ಷ ಒಂದು ಸಾವಿರ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಪೌರ ಕಾರ್ಮಿಕ ಸಮುದಾಯವೂ ವಿಶ್ವ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

ಅಗಸ್ಟ್ 10 ರಂದು ಬೆಂಗಳೂರು ಮೆಟ್ರೋ ಫೇಸ್-3 ಶಂಕುಸ್ಥಾಪನೆ: ಪ್ರಧಾನಿ ಮೋದಿ ಉದ್ಘಾಟನೆ ನೆರವೇರಿಸಲಿದ್ದಾರೆ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಮತ್ತೊಂದು ಸಿಹಿ ಸುದ್ದಿ. ಬೆಂಗಳೂರು ಮೆಟ್ರೋ ಫೇಸ್-3 ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಸ್ಟ್ 10ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಪ್ರಕಟಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಆಗಸ್ಟ್ 10ರಂದು ಪ್ರಧಾನಿ ಮೋದಿ ಮೆಟ್ರೋ ಯೆಲ್ಲೋ ಲೈನ್ ಅನ್ನು ಉದ್ಘಾಟಿಸುವುದರ ಜೊತೆಗೆ ಜೆಪಿ ನಗರ ವೆಗಾಸಿಟಿ ಮಾಲ್‌ನಿಂದ ಕಡಬಗೆರೆವರೆಗೆ ವಿಸ್ತರಿಸಲಾಗಿರುವ ಮೆಟ್ರೋ ಮಾರ್ಗದ ಶಂಕುಸ್ಥಾಪನೆ ಕಾರ್ಯವನ್ನು ಸಹ ನೆರವೇರಿಸಲಿದ್ದಾರೆ,” ಎಂದು ಹೇಳಿದರು.

ಈ ಯೋಜನೆಯು ಸುಮಾರು ₹17,000 ಕೋಟಿ ವೆಚ್ಚದ ಫೇಸ್-3 ಯೋಜನೆಯ ಭಾಗವಾಗಿದೆ. ಮೊದಲೇ ಯೆಲ್ಲೋ ಲೈನ್ ಶಂಕುಸ್ಥಾಪನೆಗೆ ಮೋದಿ ಅವರೇ ಆಗಿದ್ದರೆ, ಈಗ ಉದ್ಘಾಟನೆಯ ಗೌರವವೂ ಅವರಿಗೇ ಸಲ್ಲಲಿದೆ.

ಡಿಸಿಎಂ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ:
ಡಿಸಿಎಂ ಡಿ.ಕೆ. ಶಿವಕುಮಾರ್ ಮೆಟ್ರೋ ಯೋಜನೆಯಲ್ಲಿ ರಾಜ್ಯದ ಪಾತ್ರವಿದೆ ಎಂದು ಹೇಳಿರುವುದರ ಬಗ್ಗೆ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸುತ್ತಾ, “ಇದುವರೆಗೆ ಈ ಯೋಜನೆಯ ಬಗ್ಗೆ ಯಾವ ರಾಜ್ಯ ಸಚಿವರೂ ಚಿಂತೆ ಮಾಡಿಲ್ಲ. ಪ್ರಧಾನಿ ಬರುವ ಸುದ್ದಿ ತಿಳಿಯುತ್ತಿದ್ದಂತೆ ಕ್ರೆಡಿಟ್ ಕಳಿಸಲು ಮುಂದಾಗಿದ್ದಾರೆ,” ಎಂದು ಟೀಕಿಸಿದರು.

ಫ್ಲೈಓವರ್ ಪ್ರಗತಿಯ ಮೇಲೂ ಟೀಕೆ:
“ಈಜಿಪುರದ 2.5 ಕಿ.ಮೀ ಫ್ಲೈಓವರ್‌ನ್ನು ಎಂಟು ವರ್ಷಗಳಿಂದ ಪೂರ್ಣಗೊಳಿಸಲಾಗಿಲ್ಲ. ಅದರೆ ಇದೀಗ 100 ಕಿ.ಮೀ ರಸ್ತೆಗಳ ಯೋಜನೆ ಪ್ರಾರಂಭಿಸಿದ್ದಾರೆ,” ಎಂದು ಹೇಳಿದ್ದಾರೆ.

ಮೆಟ್ರೋ ಯೋಜನೆಗೆ ಹಿಂದೆ ಸರ್ಕಾರದ ಕೊಡುಗೆ:
ಕೊರೋನಾ ಸಮಯದಲ್ಲೂ ಯಡಿಯೂರಪ್ಪ ಮತ್ತು ಬೊಮ್ಮಾಯಿ ಸರ್ಕಾರಗಳು ಅನುದಾನ ಒದಗಿಸಿ ಕೆಲಸ ಮುಂದುವರೆದಿದ್ದವು. ಆದರೆ ಇದೀಗ ಎಂಡಿ ನೇಮಕ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಳಂಬ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

Continue Reading

ರಾಜಕೀಯ

ಮಾಜಿ ಡಿಸಿಎಂ ಈಶ್ವರಪ್ಪ ಮತ್ತೆ ಭಾರೀ ವಾಗ್ದಾಳಿ: ಯಡಿಯೂರಪ್ಪ ಕುಟುಂಬ, ಬಿಜೆಪಿಗೆ ತೀವ್ರ ಕಿಡಿ

ಬಳ್ಳಾರಿ:
ಬಿಜೆಪಿಯಿಂದ ಉಚ್ಚಾಟನೆಯಾದ ನಂತರ ಸೈಲೆಂಟ್ ಆಗಿದ್ದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಇದೀಗ ಮತ್ತೆ ಸುದ್ದಿಯಲ್ಲಿ ಮೂಡಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನದು ಭಾರತೀಯ ಬಿಜೆಪಿಯ ಟೀಮ್, ಯಾವುದೇ ಗುಂಪಿನೊಂದಿಗೆ ನಾನು ಹೋಗುವುದಿಲ್ಲ. ಆದರೆ ಬಿಜೆಪಿ ಶುದ್ಧೀಕರಣಗೊಳ್ಳಬೇಕು ಎಂಬುದು ಎಲ್ಲರ ಅಭಿಪ್ರಾಯ. ಅದು ನನ್ನದು ಸಹ ಆಗಿದೆ,” ಎಂದು ಪರೋಕ್ಷವಾಗಿ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈಶ್ವರಪ್ಪನ ಈ ಹೇಳಿಕೆ ಕೇಸರಿಪಾಳ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಅನೇಕ ನಾಯಕರು ಈಶ್ವರಪ್ಪನ ನೇರ ಭಾಷೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ಯಡಿಯೂರಪ್ಪನ ಕುಟುಂಬದ ಮದುವೆಯಲ್ಲಿ ಭಾಗವಹಿಸಿದ ಈಶ್ವರಪ್ಪ:
ಇತ್ತೀಚೆಗೆ ಈಶ್ವರಪ್ಪ ಯಡಿಯೂರಪ್ಪನ ಮೊಮ್ಮಗನ ಮದುವೆಯಲ್ಲಿ ಭಾಗವಹಿಸಿ ಎಲ್ಲರಿಗೂ ಆಶ್ಚರ್ಯ ತಂದಿದ್ದರು. ಈ ಘಟನೆಯ ಬಳಿಕ ಅವರು ಮತ್ತೆ ಪಕ್ಷದ ಪರ ನಿಂತು ಮಾತನಾಡಿದ್ದಾರೆ.

ಎಫ್‌ಐಆರ್ ದಾಖಲು:
ಇದಕ್ಕೂ ಮಿಕ್ಕಿ, ಮಾಜಿ ಡಿಸಿಎಂ ಈಶ್ವರಪ್ಪ ಪುತ್ರ ಕಾಂತೇಶ್ ಮತ್ತು ಸೊಸೆ ಶಾಲಿನಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಕೇಸ್ ದಾಖಲಾಗಿದೆ.

ಅದಕ್ಕೂ ಹಿಂದಿನ ಘಟನೆಗಳು:
ಈ ಪ್ರಕರಣ ಸಂಬಂಧ ಕಳೆದ ಏಪ್ರಿಲ್‌ನಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಲೋಕಾಯುಕ್ತರಿಗೆ ವರದಿ ಸಲ್ಲಿಸಲು ಸೂಚಿಸಿತ್ತು. ಇದೀಗ ಖಾಸಗಿ ವಕೀಲ ವಿನೋದ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

Continue Reading

ರಾಜಕೀಯ

ಮತಗಳ್ಳತನದ ದಾಖಲೆ ಬಿಡುಗಡೆಗೆ ರಾಹುಲ್ ಗಾಂಧಿ ಸಜ್ಜು: ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಯಾವತ್ತೂ “ಹಿಟ್ ಅಂಡ್ ರನ್” ರಾಜಕೀಯ ಮಾಡಲ್ಲ, ಎಲ್ಲದಕ್ಕೂ ದಾಖಲಾತಿಗಳಿವೆ. ಕರ್ನಾಟಕದಲ್ಲಿ ನಡೆದ ಮತಗಳ್ಳತನದ ಬಗ್ಗೆ ದಾಖಲೆಗಳನ್ನು ರಾಹುಲ್ ಗಾಂಧಿ ಬಹಿರಂಗಪಡಿಸುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, “ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿ ಮೂಲಕ ಮತಗಳ್ಳತನದ ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆ. ಆ.8 ರಂದು ಇದೇ ಕುರಿತು ಕರ್ನಾಟಕದಲ್ಲಿಯೂ ಸಾಕ್ಷ್ಯ ಬಿಡುಗಡೆ ಮಾಡಲಾಗುತ್ತದೆ” ಎಂದು ಹೇಳಿದರು.

ಇದೊಂದು ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗ ಯಾರ ನಿಯಂತ್ರಣದಲ್ಲಿದೆ ಎಂಬುದನ್ನು ಜನತೆಯೇ ನಿರ್ಧರಿಸಬೇಕಿದೆ ಎಂದು ಅವರು ಹೇಳಿದ್ದಾರೆ.

BJP ಪ್ರತಿಕ್ರಿಯೆ ಬಗ್ಗೆ ಖರ್ಗೆ ಪ್ರತಿಸ್ಪಂದನೆ:

“ನಾವು ಆರೋಪವನ್ನೇ ಮಾಡಿಲ್ಲ. documentation ಇದೆ, ಅದನ್ನೇ ತೋರಿಸುತ್ತಿದ್ದೇವೆ. ಬಿಜೆಪಿಯವರು ಏಕೆ ಎಲ್ಲಾ ಸಂಸ್ಥೆಗಳ ವಕ್ತಾರರಂತೆ ಮಾತನಾಡುತ್ತಿದ್ದಾರೆ? ಆಯಾ ಸಂಸ್ಥೆಗಳಿಗೆ ತಮ್ಮದೇ ಆದ ವಕ್ತಾರರು ಇದ್ದಾರೆ, ಅವರು ಸ್ಪಷ್ಟನೆ ನೀಡಲಿ,” ಎಂದು ತೀವ್ರ ಟೀಕೆ ಮಾಡಿದರು.

Continue Reading

Trending