ಸುತ್ತ ಮುತ್ತ
ಈ ದೇಶದಲ್ಲಿ ಮಗು ಹುಟ್ಟಿದ್ರೆ ಸಿಗುತ್ತೆ 50 ಲಕ್ಷ… ಕಾರಣ ಜನಸಂಖ್ಯೆ!
Switzerland ತನ್ನ ಪ್ರಕೃತಿ ಸೌಂದರ್ಯಕ್ಕೆ ಪ್ರಪಂಚದಾದ್ಯಂತ ಹೆಸರುವಾಸಿಯಾಗಿರುವ ಸುಂದರವಾದ ದೇಶವಾಗಿದೆ. ಈ ದೇಶದ ಪರ್ವತಗಳಲ್ಲಿರುವ ಅಲ್ಬಿನೆನ್ ಎಂಬ ಹಳ್ಳಿಯು ಸುಂದರವಾದ ಕಣಿವೆಗಳಿಗೂ ಹೆಸರುವಾಸಿಯಾಗಿದೆ.
ಈ ಗ್ರಾಮವು ಸಮುದ್ರ ಮಟ್ಟದಿಂದ ಸುಮಾರು 4,265 ಅಡಿ ಎತ್ತರದಲ್ಲಿದೆ. ಹಿಮದಿಂದ ಆವೃತವಾದ ಪರ್ವತಗಳ ನಡುವೆ ಇರುವ ಈ ಹಳ್ಳಿಯು ನಿಮ್ಮ ಹೃದಯವನ್ನು ಗೆಲ್ಲುವುದಂತೂ ಖಚಿತ. ಅಷ್ಟೊಂದು ಸುಂದರವಾಗಿದೆ ಈ ಗ್ರಾಮ.
ಈಗ ವಿಷಯ ಏನಂದ್ರೆ ಈ ಹಳ್ಳಿಯ ಜನಸಂಖ್ಯೆಯು ನಿರಂತರವಾಗಿ ಕಡಿಮೆಯಾಗುತ್ತಿದೆ, ಇದನ್ನು ತಡೆಯಲು ಸರ್ಕಾರವು ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. ಒಂದು ವರದಿಯ ಪ್ರಕಾರ, ಈ ಗ್ರಾಮದಲ್ಲಿ ಕೇವಲ 240 ರಿಂದ 245 ಜನರು ಮಾತ್ರ ಉಳಿದಿದ್ದಾರೆ.
ಈ ಹಳ್ಳಿಯ ಆರ್ಥಿಕತೆ ಕುಸಿಯದಂತೆ ಉಳಿಸಲು, ಸ್ವಿಸ್ ಸರ್ಕಾರ ಇಲ್ಲಿ ಜನರನ್ನು ನೆಲೆಸುವಂತೆ ಮಾಡಲು ಒಂದು ಕೊಡುಗೆಯನ್ನು ಪ್ರಾರಂಭಿಸಿದೆ. ಈ ಕೊಡುಗೆಯಲ್ಲಿ, ಸರ್ಕಾರವು ಈ ಗ್ರಾಮದಲ್ಲಿ ನೆಲೆಸಲು 50 ಲಕ್ಷ ರೂಪಾಯಿಗಳಿಗಿಂತ ಹೆಚ್ಚು ಹಣವನ್ನು ನೀಡುವ ಯೋಜನೆಯನ್ನು ಪ್ರಾರಂಭಿಸಿದೆ.
ನಿಮ್ಮ ಕುಟುಂಬದಲ್ಲಿ ನಾಲ್ಕು ಸದಸ್ಯರಿದ್ದರೆ, ಪ್ರತಿಯೊಬ್ಬ ವಯಸ್ಕ ಸದಸ್ಯರಿಗೆ ಸುಮಾರು 22,500 ಪೌಂಡ್ಗಳು ಅಂದರೆ 22 ಲಕ್ಷ ರೂಪಾಯಿಗಳಿಗಿಂತ ಹೆಚ್ಚು ಹಣವನ್ನು ನೀಡಲಾಗುವುದು. ಇಷ್ಟು ಮಾತ್ರವಲ್ಲದೆ, ಪ್ರತಿ ಮಗುವಿಗೆ ಸುಮಾರು 9,000 ಪೌಂಡ್ಗಳು ಅಂದರೆ 8 ಲಕ್ಷ ರೂಪಾಯಿಗಳಿಗಿಂತ ಹೆಚ್ಚು ನೀಡಲಾಗುವುದು.
ಇದರೊಂದಿಗೆ, ಸರ್ಕಾರವು ಈ ಕೊಡುಗೆಯಲ್ಲಿ ಕೆಲವು ಷರತ್ತುಗಳನ್ನು ಸಹ ಇರಿಸಿದೆ. ಈ ಗ್ರಾಮದಲ್ಲಿ ನೆಲೆಸಲು ಪರವಾನಗಿ ತೆಗೆದುಕೊಳ್ಳುವವರು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು ಅನ್ನೋದು ಮುಖ್ಯವಾದ ಕಂಡೀಶನ್ ಆಗಿದೆ.
ದೇಶ
ಪೊಲೀಸ್ ವಾಹನವೇ ಪ್ರವೇಶಿಸದ ಗ್ರಾಮ: ಶಾಂತಿಯುತ ಬದುಕಿನ ಅದ್ಭುತ ಕಥೆ
ಇತ್ತೀಚಿನ ದಿನಗಳಲ್ಲಿ ಸಣ್ಣ ವಿಷಯಕ್ಕೂ ಜಗಳ-ಕೇಸು ಸಾಮಾನ್ಯವಾಗಿರುವ ಸಂದರ್ಭದಲ್ಲೇ, ಬಿಹಾರದ ಒಂದು ಹಳ್ಳಿ ದೇಶಕ್ಕೆ ಮಾದರಿಯಾಗಿ ಹೊರಹೊಮ್ಮಿದೆ. ಕಲಿಯಾಚಕ್ ಗ್ರಾಮ ಕಳೆದ 118 ವರ್ಷಗಳಿಂದ ಯಾವುದೇ ಅಪರಾಧ ದಾಖಲಾಗದೇ ಶಾಂತಿಯುತ ಜೀವನ ನಡೆಸುತ್ತಿರುವುದು ವಿಶೇಷ.
ನಳಂದ ಜಿಲ್ಲೆಯ ಈ ಗ್ರಾಮದಲ್ಲಿ ಸ್ಥಾಪನೆಯಾದ ದಿನದಿಂದಲೂ ಗಂಭೀರ ಅಪರಾಧಗಳೇ ನಡೆದಿಲ್ಲ. ಅಷ್ಟೇ ಅಲ್ಲ, ಇಷ್ಟು ವರ್ಷಗಳಲ್ಲಿ ಪೊಲೀಸ್ ಸೈರನ್ ಕೂಡ ಕೇಳಿಸಿಲ್ಲ ಎಂಬುದು ಆಶ್ಚರ್ಯಕರ ಸಂಗತಿ. ಗ್ರಾಮದಲ್ಲಿ ಯಾವುದೇ ಸಣ್ಣಪುಟ್ಟ ವಿವಾದಗಳು ಉಂಟಾದರೂ, ಹಿರಿಯರು ಕೂತು ಸಮಸ್ಯೆಯನ್ನು ಪರಿಹರಿಸುತ್ತಾರೆ.
ಈ ಗ್ರಾಮ ಹಿಲ್ಸಾ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ. ಆದರೆ ಪೊಲೀಸ್ ದಾಖಲೆಗಳಲ್ಲಿ ಈ ಗ್ರಾಮದಿಂದ ಒಂದೇ ಒಂದು ದೂರು ಕೂಡ ಇಲ್ಲದಿರುವುದು ಅಧಿಕಾರಿಗಳನ್ನೇ ಅಚ್ಚರಿಗೊಳಿಸಿದೆ.
ಗ್ರಾಮದಲ್ಲಿ ಸುಮಾರು 60 ಕುಟುಂಬಗಳು, 500 ಜನರು ವಾಸಿಸುತ್ತಿದ್ದು, ವಿವಿಧ ಜಾತಿ-ವರ್ಗಗಳ ಜನರು ಸಹೋದರತ್ವದಿಂದ ಬದುಕುತ್ತಿದ್ದಾರೆ. “ಗ್ರಾಮದ ಸಮಸ್ಯೆಗಳನ್ನು ಗ್ರಾಮದಲ್ಲೇ ಬಗೆಹರಿಸಬೇಕು” ಎಂಬುದು ಇವರ ಮೂಲ ತತ್ವವಾಗಿದೆ.
ಈ ಶಾಂತಿಯುತ ವಾತಾವರಣಕ್ಕೆ ಪ್ರಮುಖ ಕಾರಣ ಮಾಜಿ ಪಂಚಾಯಿತಿ ಅಧ್ಯಕ್ಷ ಸಾಧು ಶರಣ್ ಸಿಂಗ್ ಅವರ ಮಾರ್ಗದರ್ಶನ. ಅವರ ಪ್ರಯತ್ನದಿಂದ ಈ ಗ್ರಾಮ ಮಾದರಿಯಾಗಿ ರೂಪುಗೊಂಡಿದೆ.
ಇಲ್ಲಿನ ಯುವಕರು ಕೆಟ್ಟ ಅಭ್ಯಾಸಗಳಿಂದ ದೂರವಿದ್ದು ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳತ್ತ ಗಮನ ಹರಿಸುತ್ತಿದ್ದಾರೆ.
ಗಮನಿಸಿ: ಮೇಲಿನ ವಿವರಗಳು ಬಿಹಾರದ ಕಲಿಯಾಚಕ್ ಗ್ರಾಮದ ಕುರಿತು ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳು ಒದಗಿಸಿದ ಮಾಹಿತಿಯನ್ನು ಆಧರಿಸಿವೆ. ಇದು ಅಪರಾಧ ಮುಕ್ತ ಗ್ರಾಮವಾಗಿ ದೇಶದಲ್ಲಿ ವಿಶೇಷ ಮನ್ನಣೆಯನ್ನು ಗಳಿಸಿದೆ.
ಒಟ್ಟಿನಲ್ಲಿ, ಕಲಿಯಾಚಕ್ ಗ್ರಾಮವು ಒಗ್ಗಟ್ಟು, ಸಹೋದರತ್ವ ಮತ್ತು ಶಾಂತಿಯುತ ಬದುಕಿನ ನಿಜವಾದ ಮಾದರಿಯಾಗಿ ಇಡೀ ದೇಶಕ್ಕೆ ಪ್ರೇರಣೆಯಾಗಿದೆ.
ದೇಶ
ಎನ್ಎಂಎಸಿಸಿ ವೇದಿಕೆಯಲ್ಲಿ ನೀತಾ ಅಂಬಾನಿ ಸೀರೆ ಸದ್ದು: ಐವರಿ-ಗೋಲ್ಡ್ ಲುಕ್ ವೈರಲ್
ಮುಂಬೈನಲ್ಲಿ ನಡೆದ NMACC third anniversary ಕಾರ್ಯಕ್ರಮದಲ್ಲಿ ನೀತಾ ಅಂಬಾನಿ ಅವರು ತಮ್ಮ ವೈಭವಶಾಲಿ ಸೀರೆ ಲುಕ್ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ. ಭಾರತೀಯ ಸಂಸ್ಕೃತಿ ಮತ್ತು ಸಾಂಪ್ರದಾಯಿಕತೆಗೆ ಪ್ರತೀಕವಾಗಿರುವ ಅವರ ಶೈಲಿ ಫ್ಯಾಷನ್ ಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ.
ಈ ವಿಶೇಷ ಕಾರ್ಯಕ್ರಮಕ್ಕೆ ಪತಿ ಮುಕೇಶ್ ಅಂಬಾನಿ ಅವರೊಂದಿಗೆ ಆಗಮಿಸಿದ ನೀತಾ, ಐವರಿ-ಗೋಲ್ಡ್ ಕಾಂಜೀವರಂ ರೇಷ್ಮೆ ಸೀರೆಯನ್ನು ಧರಿಸಿದ್ದರು. ಹೊನ್ನಿನ ನೂಲುಗಳಿಂದ ನೇಯ್ದ ಈ ಸೀರೆಗೆ ಮರೂನ್ ಕೆಂಪು ಅಂಚು ಹೆಚ್ಚುವರಿ ಶೋಭೆ ನೀಡಿತು.
ಈ ಸೀರೆ ಕೈಮಗ್ಗದಲ್ಲಿ ಪರಿಣಿತ ಕಲಾವಿದ ಆರ್. ವರಧನ್ ಅವರ ಕೈಚಳಕದಿಂದ ಮೂಡಿಬಂದಿದ್ದು, ಇದನ್ನು ತಯಾರಿಸಲು ಸುಮಾರು ನಾಲ್ಕು ತಿಂಗಳು ಸಮಯ ತೆಗೆದುಕೊಂಡಿದೆ. ಜರಿ ಕಸೂತಿ ಮತ್ತು ನಯವಾದ ಮೇಲ್ಮೈ ಈ ಸೀರೆಗೆ ವಿಶೇಷ ಮೌಲ್ಯ ನೀಡಿದೆ.
ಆಭರಣಗಳ ವಿಷಯದಲ್ಲಿ ನೀತಾ ಅಂಬಾನಿ ಬರ್ಮಾ ರೂಬಿ ಅಲಂಕೃತ ಚಿನ್ನದ ಮಾವಿನ ಸರ ಹಾಗೂ ಬಸ್ರಾ ಮುತ್ತಿನ ಕರ್ಣಾಭರಣ ಧರಿಸಿ ಸಾಂಪ್ರದಾಯಿಕತೆಗೆ ಆಧುನಿಕ ಸ್ಪರ್ಶ ನೀಡಿದ್ದಾರೆ.
ಕಾರ್ಯಕ್ರಮದ ವೇಳೆ ಅವರು ಭಾರತೀಯ ಕಲೆ ಮತ್ತು ಸಂಸ್ಕೃತಿಯ ಮಹತ್ವವನ್ನು ಒತ್ತಿ ಹೇಳಿ, “ಸಂಖ್ಯೆ 3”ರ ಸಾಂಸ್ಕೃತಿಕ ಅರ್ಥವನ್ನು ತ್ರಿಮೂರ್ತಿ, ತ್ರಿದೇವಿ ಮತ್ತು ತ್ರಿವೇಣಿ ಸಂಗಮದ ಉದಾಹರಣೆಗಳ ಮೂಲಕ ವಿವರಿಸಿದರು.
ಈ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಭಾರತೀಯ ಹಸ್ತಕುಶಲತೆ ಮತ್ತು ಕಾಂಜೀವರಂ ಸೀರೆಗಳಿಗೆ ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಮೆಚ್ಚುಗೆ ವ್ಯಕ್ತವಾಗಿದೆ.
ದೇಶ
Indian Railways: ರೈಲಲ್ಲೇ ಮದುವೆ ಸಂಭ್ರಮ: Indian Railwaysನಲ್ಲಿ ಹೊಸ ಟ್ರೆಂಡ್!
ಭಾರತದಲ್ಲಿ ಮದುವೆ ಎಂದರೆ ಸಂಭ್ರಮ, ಸಂಪ್ರದಾಯ ಮತ್ತು ಅದ್ಧೂರಿತನದ ಮಿಶ್ರಣ. ಇತ್ತೀಚಿನ ದಿನಗಳಲ್ಲಿ ನವ ಜೋಡಿಗಳು ತಮ್ಮ ವಿವಾಹವನ್ನು ವಿಭಿನ್ನವಾಗಿ ಆಚರಿಸಲು ಹೊಸ ಹೊಸ ಆಲೋಚನೆಗಳನ್ನು ಪ್ರಯತ್ನಿಸುತ್ತಿದ್ದಾರೆ. ಇದೀಗ ಅಂತಹದೇ ಒಂದು ವಿಶಿಷ್ಟ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಮಾರ್ವಾಡಿ ಕುಟುಂಬವೊಂದು Indian Railways ಸೇವೆಯನ್ನು ವಿಭಿನ್ನ ರೀತಿಯಲ್ಲಿ ಬಳಸಿಕೊಂಡು ಮದುವೆ ಸಂಭ್ರಮವನ್ನು ಆಚರಿಸಿದೆ. ಸಾಮಾನ್ಯವಾಗಿ ಮದುವೆಗಾಗಿ ಬಸ್ ಅಥವಾ ಖಾಸಗಿ ವಾಹನಗಳನ್ನು ಬಳಸುವ ಬದಲು, ಈ ಕುಟುಂಬವು ರೈಲ್ವೆಯ Full Tariff Rate ಯೋಜನೆಯಡಿ ಇಡೀ ಕೋಚ್ನ್ನು ಕಾಯ್ದಿರಿಸಿದೆ.
ವೈರಲ್ ವಿಡಿಯೋದಲ್ಲಿ ವಧು-ವರರ ಕುಟುಂಬ ರೈಲ್ವೆ ನಿಲ್ದಾಣದಲ್ಲಿ ಸೇರಿ ಮೊದಲಿಗೆ ಕೇಕ್ ಕತ್ತರಿಸಿ ಸಂಭ್ರಮ ಆರಂಭಿಸುತ್ತದೆ. ಬಳಿಕ ರೈಲನ್ನು ತಳಿರು ತೋರಣ ಮತ್ತು ಹೂಗಳಿಂದ ಅಲಂಕರಿಸಿ ಹಬ್ಬದ ವಾತಾವರಣ ನಿರ್ಮಿಸಲಾಗಿದೆ. ರೈಲಿನೊಳಗೆ ಮನೆಮಾತಿನಂತೆ ಆರಾಮದಾಯಕ ವ್ಯವಸ್ಥೆ ಮಾಡಿದ್ದು, ನೀರಿನ ಬಾಟಲಿ, ಬಾಳೆ ಎಲೆ, ಹೊಸ ಬಟ್ಟೆಗಳನ್ನು ಸಹ ಸಾಗಿಸಲಾಗಿದೆ.
ಹೆಣ್ಣು-ಗಂಡಿನ ಬಂಧುಗಳು ಸಾಲು ಸಾಲಾಗಿ ಕುಳಿತು ಸಂಭ್ರಮಿಸುವ ದೃಶ್ಯಗಳು ವಿಡಿಯೋದಲ್ಲಿ ಕಾಣಿಸಿಕೊಂಡಿದ್ದು, “ಮಾರ್ವಾಡಿ ಮದುವೆ ಎಂದರೆ ಹೀಗಿರುತ್ತದೆ” ಎಂಬ ಶೀರ್ಷಿಕೆಯಲ್ಲಿ ಹಂಚಲಾಗಿದೆ.
ಈ ಹೊಸ ಐಡಿಯಾವನ್ನು ಹಲವರು ಶ್ಲಾಘಿಸಿದ್ದು, ಕಡಿಮೆ ವೆಚ್ಚದಲ್ಲಿ ಸುಲಭ ಪ್ರಯಾಣಕ್ಕೆ ಇದು ಉತ್ತಮ ಮಾರ್ಗ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ ಸಾರ್ವಜನಿಕ ಸಾರಿಗೆಯನ್ನು ಹೀಗೆ ಬಳಸುವುದರಿಂದ ಇತರ ಪ್ರಯಾಣಿಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ ಎಂಬ ಆತಂಕವೂ ವ್ಯಕ್ತವಾಗಿದೆ.
-
ದೇಶ11 hours ago“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್ ಟಾಂಗ್, ದಾವಣಗೆರೆ ರಾಜಕೀಯ ಕುತೂಹಲ
-
ದೇಶ11 hours agoಕಾಗದ-ಇಂಕ್ ಬೆಲೆ ಏರಿಕೆ: ಪ್ರಿಂಟಿಂಗ್ ಪ್ರೆಸ್ಗಳಿಗೆ ಶಾಕ್
-
ದೇಶ10 hours agoಪೊಲೀಸ್ ವಾಹನವೇ ಪ್ರವೇಶಿಸದ ಗ್ರಾಮ: ಶಾಂತಿಯುತ ಬದುಕಿನ ಅದ್ಭುತ ಕಥೆ
-
ಕ್ರೀಡೆ8 hours agoಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!
-
ದೇಶ11 hours agoIndian Railways: ರೈಲಲ್ಲೇ ಮದುವೆ ಸಂಭ್ರಮ: Indian Railwaysನಲ್ಲಿ ಹೊಸ ಟ್ರೆಂಡ್!
-
ದೇಶ11 hours ago‘I Love My Daughter’ ಟೀ ಶರ್ಟ್ನಲ್ಲಿ ಸಂಭ್ರಮ: ವಿಚ್ಛೇದನಕ್ಕೆ ಹೊಸ ಅರ್ಥ ನೀಡಿದ ಕುಟುಂಬ
-
ದೇಶ11 hours agoಎನ್ಎಂಎಸಿಸಿ ವೇದಿಕೆಯಲ್ಲಿ ನೀತಾ ಅಂಬಾನಿ ಸೀರೆ ಸದ್ದು: ಐವರಿ-ಗೋಲ್ಡ್ ಲುಕ್ ವೈರಲ್
-
ದೇಶ11 hours agoಟ್ರಂಪ್ ದೇಶದಲ್ಲಿ ಭಾರತೀಯರ ಸದ್ದು: ಮೇಯರ್ ರೇಸ್ನಲ್ಲಿ ತಮಿಳುನಾಡಿನ ಕುವರಿ
