ದೇಶ
99 ಸಹೋದರರ ಹತ್ಯೆ ಮಾಡಿ ಇಲ್ಲಿ ಹಾಕಿದ್ದನಂತೆ ಚಕ್ರವರ್ತಿ ಅಶೋಕ!? ಏನು ಹೇಳುತ್ತೆ ಇತಿಹಾಸ?
ಪಾಟ್ನಾ: ಬಿಹಾರದಲ್ಲಿದೆ ಒಂದು ನಿಗೂಢವಾದ ಬಾವಿ. ಸದಾ ಜೀವಂತಿಕೆಯಿಂದ ಇರುವ ಈ ಬಾವಿಯಲ್ಲಿ ಇದುವರೆಗೆ ನೀರು ಬತ್ತಿದ್ದೇ ಇಲ್ಲವಂತೆ. ಸ್ವತಃ ಚಕ್ರವರ್ತಿ ಅಶೋಕನೂ ಈ ಬಾವಿಯ ನೀರು ಖಾಲಿ ಮಾಡಲು ವಿಫಲನಾಗಿದ್ದ ಎನ್ನುತ್ತವೆ ಇಲ್ಲಿನ ಸ್ಥಳೀಯರ ದಂತಕಥೆಗಳು. ಹಾಗಾದರೆ ಈ ಬಾವಿ ಬಿಹಾರದಲ್ಲಿ ಎಲ್ಲಿದೆ? ಏನಿದರ ವಿಶೇಷತೆ? ಇತಿಹಾಸ ಏನು ಹೇಳುತ್ತದೆ? ಇಲ್ಲಿದೆ ಮಾಹಿತಿ..
ಚಕ್ರವರ್ತಿ ಸಾಮ್ರಾಟ್ ಅಶೋಕನನ್ನು ಭಾರತದ ಅತ್ಯಂತ ಪ್ರಭಾವಶಾಲಿ ಆಡಳಿತಗಾರರಲ್ಲಿ ಒಬ್ಬ ಎನ್ನುತ್ತದೆ ಇತಿಹಾಸ. ಮೌರ್ಯ ರಾಜವಂಶದ ಮೂರನೇ ದೊರೆ. ಮೌರ್ಯ ರಾಜವಂಶದ ಸ್ಥಾಪಕ ಚಂದ್ರಗುಪ್ತ ಮೌರ್ಯನ ಮಗ ಬಿಂದುಸಾರನ ಮಗ. ಅಶೋಕನ ಜನ್ಮ ದಿನವನ್ನು ಬಿಹಾರದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಕ್ರಿಸ್ತಪೂರ್ವ 304ರಲ್ಲಿ ಜನಿಸಿ, ಕ್ರಿ.ಪೂ. 269 ರಿಂದ 232 ರವರೆಗೆ ಆಡಳಿತ ನಡೆಸಿದ ಅಶೋಕನ ಜನ್ಮದಿನವನ್ನು ಏಪ್ರಿಲ್ 14 ರಂದು ಆಚರಿಸಲು ಬಿಹಾರ ಸರ್ಕಾರ ನಿರ್ಧರಿಸಿತ್ತು. ಆದರೆ, ಅಶೋಕ ಚೈತ್ರಮಾಸದ ಅಷ್ಟಮಿಯ ದಿನ ಹುಟ್ಟಿದ ಕಾರಣ, ಬಿಹಾರದಲ್ಲಿ ಚೈತ್ರ ಅಷ್ಟಮಿಯನ್ನು ಅಶೋಕ ಅಷ್ಟಮಿ ಎಂದೂ ಕೊಂಡಾಡಲಾಗುತ್ತದೆ.
ಈ ಸಂದರ್ಭದಲ್ಲಿ ಚಕ್ರವರ್ತಿ ಅಶೋಕ ನಿರ್ಮಿಸಿದ ಎಂದು ಹೇಳುವ ಬಿಹಾರದ ಪಾಟ್ನಾದ ಕುಮ್ರಾರ್ ಪುರಾತತ್ವ ಸ್ಥಳದಲ್ಲಿರುವ ಈ ನಿಗೂಢ ಬಾವಿಯ ಬಗ್ಗೆ ತಿಳಿಯೋಣ ಬನ್ನಿ..
ಸಿಂಹಳೀಯ ಸಾಹಿತ್ಯದಲ್ಲಿರುವ ಇತಿಹಾಸ ಏನು ಹೇಳುತ್ತೆ?: ಈಟಿವಿ ಭಾರತ ಜೊತೆಗೆ ಮಾತನಾಡಿದ ಇತಿಹಾಸಕಾರ ಪ್ರೊ.ಆದಿತ್ಯ ನಾರಾಯಣ್ ಝಾ, “ಕ್ರಿಸ್ತಪೂರ್ವ 269ರಲ್ಲಿ ತಂದೆ ಬಿಂದುಸಾರನ ಮರಣಾನಂತರ ಉತ್ತರಾಧಿಕಾರಿಯಾಗಿ ಪಟ್ಟವೇರಿದ ಅಶೋಕ ನಂತರ ರಾಜನಾಗಿ ಆಳ್ವಿಕೆ ನಡೆಸುತ್ತಾನೆ. ಉತ್ತರಾಧಿಕಾರಿಯಾಗಿ ಸಿಂಹಾಸನವೇರಿದ 8 ವರ್ಷಗಳವರೆಗೆ ಅಶೋಕ ಅತ್ಯಂತ ಕ್ರೂರ ಆಡಳಿತಗಾರನಾಗಿದ್ದನು. ಅದಕ್ಕಾಗಿಯೇ ಕೆಲವು ಐತಿಹಾಸಿಕ ಮೂಲಗಳಲ್ಲಿ ಅವನನ್ನು ಚಂದಾಶೋಕ ಅಥವಾ ಕಾಮಶೋಕ ಎಂದೂ ಕರೆಯಲಾಗುತ್ತದೆ. ಈ ವಿವರಣೆಗಳು ಯಾವುದೇ ಭಾರತೀಯ ಸಾಹಿತ್ಯದಲ್ಲಿ ಕಂಡು ಬರುವುದಿಲ್ಲ. ಈ ಎಲ್ಲ ವಿಷಯಗಳು ಶ್ರೀಲಂಕಾದಲ್ಲಿ ಬರೆದ ಬೌಧ ಸಾಹಿತ್ಯದಲ್ಲಿವೆ. ಸಿಂಹಳೀಯ ಸಾಹಿತ್ಯದ ದೀಪವಂಶ ಮತ್ತು ಮಹಾವಂಶದಲ್ಲಿ ಅಶೋಕನ ಬಗ್ಗೆ ಈ ರೀತಿಯ ವಿವರಣೆಗಳನ್ನು ಬರೆಯಲಾಗಿದೆ” ಎನ್ನುತ್ತಾರೆ ಅವರು. ಬಿಹಾರದ ರಾಜಧಾನಿ ಪಾಟ್ನಾದಲ್ಲಿರುವ ಈ ನಿಗೂಢ ಬಾವಿಯನ್ನು ಚಕ್ರವರ್ತಿ ಅಶೋಕನ ಕಾಲದಲ್ಲಿ ನಿರ್ಮಿಸಲಾಗಿದೆ ಎಂದು ದಂತಕಥೆಗಳು ಉಲ್ಲೇಖಿಸುತ್ತವೆ. ನಂತರದಲ್ಲಿ ಈ ಬಾವಿಯನ್ನು ಪಾಟ್ನಾದ ಆಗಮ ಕುವಾನ್ (ಎಂದರೆ ಎಂದೂ ಬತ್ತದ ಬಾವಿ – ಆಳವರಿಯಲಾಗದ ಬಾವಿ) ಎಂದು ಗುರುತಿಸಲಾಯಿತು. ಈ ಆಗಮ ಕುವಾನ್ ಬಗ್ಗೆ ಅನೇಕ ರೀತಿಯ ಕಥೆಗಳು ಜನರಲ್ಲಿ ಪ್ರಚಲಿತದಲ್ಲಿವೆ. ಈ ಬಾವಿಯನ್ನು ಆಳವಾದ ಬಾವಿಗಳಲ್ಲಿ ಒಂದು ಎಂದು ಪರಿಗಣಿಸಲಾಗಿದ್ದು, ಇದರ ಆಳ 105 ಅಡಿ ಎಂದು ಹೇಳಲಾಗುತ್ತದೆ.
ಎಂದೂ ಬತ್ತದ ಬಾವಿ: ಅಶೋಕ ತನ್ನ ಆಳ್ವಿಕೆ ಅವಧಿಯಲ್ಲಿ ಈ ಬಾವಿಯನ್ನು ಕೊರೆಯಿಸಿದ್ದನು ಎಂದು ಪ್ರತೀತಿ ಇದೆ. ಇದರ ನೀರು ಎಂದೂ ಬತ್ತುವುದಿಲ್ಲ. ದೇಶದಲ್ಲಿ ಅನೇಕ ಕ್ಷಾಮಗಳು ಬಂದು ಹೋಗಿವೆ. ಆದರೆ ಆ ಕಾಲದಲ್ಲೂ ಈ ಬಾವಿಯ ನೀರುವ ಬತ್ತಿರಲಿಲ್ಲ. ಸ್ವತಃ ಅಶೋಕನೂ ಈ ಬಾವಿಯ ನೀರು ಖಾಲಿ ಮಾಡುವಲ್ಲಿ ವಿಫಲನಾಗಿದ್ದನು ಎಂದು ಹೇಳಲಾಗುತ್ತದೆ. ಈ ಬಾವಿಯನ್ನು ಬ್ರಿಟಿಷ್ ಪರಿಶೋಧಕ ಲಾರೆನ್ಸ್ ವಾಡೆಲ್ ಕಂಡು ಹಿಡಿದನು.
ಅಶೋಕನ ಕಾಲದ ಬಾವಿಯ ಇತಿಹಾಸ: ಚಕ್ರವರ್ತಿ ಅಶೋಕನ ಆರಂಭದ ಆಳ್ವಿಕೆ ಹಾಗೂ ಆತನ ಪಟ್ಟಾಭಿಷೇಕಕ್ಕೂ ಮೊದಲು ಕ್ರೂರ ಆಡಳಿತ ನಡೆಸಿದ್ದ ಎಂಬ ಇತಿಹಾಸ ಇದೆ. ಈ ಅವಧಿಯಲ್ಲಿ ತನ್ನ 99 ಸಹೋದರರು ಮತ್ತು ಸಂಬಂಧಿಕರನ್ನು ಕೊಂದು ಅವರ ದೇಹಗಳನ್ನು ಈ ಬಾವಿಗೆ ಎಸೆದಿದ್ದನು ಎನ್ನುವ ಜಾನಪದ ಇತಿಹಾಸ ಇಲ್ಲಿ ಜನಪ್ರಿಯವಾಗಿದೆ. ಈ ಬಗ್ಗೆ ಯಾವುದೇ ಅಧಿಕೃತ ಐತಿಹಾಸಿಕ ಪುರಾವೆಗಳು ಇನ್ನೂ ಕಂಡು ಬಂದಿಲ್ಲ. ಆದರೆ ಸಿಂಹಳೀಯ ಸಾಹಿತ್ಯದಲ್ಲಿರುವ ಇತಿಹಾಸದಲ್ಲಿ ಇದನ್ನು ಉಲ್ಲೇಖಿಸಲಾಗಿದೆ. ಚಕ್ರವರ್ತಿ ಅಶೋಕನ ಮರಣದ ಸುಮಾರು 400 ವರ್ಷಗಳ ನಂತರ ಇತಿಹಾಸದಲ್ಲಿ ಆಗಮ ಕುವಾನ್ ಬಗ್ಗೆ ಬರೆದ ಸಾಹಿತ್ಯದಲ್ಲಿ ಕಂಡು ಬರುತ್ತವೆ. ಅಶೋಕನ ಅವಧಿಯಲ್ಲಿ ಬರೆದ ಐತಿಹಾಸಿಕ ಪುಸ್ತಕಗಳಲ್ಲಿ ಅಥವಾ ಅವನ ಮರಣದ ಕೆಲವು ದಿನಗಳ ನಂತರದಲ್ಲಿ ಬರೆದಂತಹ ಸಾಹಿತ್ಯಗಳಲ್ಲಿ ಈ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎನ್ನುತ್ತಾರೆ ಪ್ರೊ.ಆದಿತ್ಯ ನಾರಾಯಣ್ ಝಾ.
ಕಳಿಂಗ ಯುದ್ಧದ ನಂತರ ಮನ ಪರಿವರ್ತನೆ: ಕ್ರಿ.ಪೂ 261ರಲ್ಲಿ ಕಳಿಂಗ ಯುದ್ಧ ನಡೆದಿತ್ತು. ಆ ಬಹುದೊಡ್ಡ ಯುದ್ಧದಲ್ಲಿ ಲಕ್ಷಾಂತರ ಸಾಮಾನ್ಯ ಜನರು ಪ್ರಾಣ ಕಳೆದುಕೊಂಡಿದ್ದರು. ಕಳಿಂಗ ಯುದ್ಧ ಕೇವಲ ಎರಡು ರಾಜ್ಯಗಳ ನಡುವಿನ ಯುದ್ಧವಾಗಿರದೇ, ಮೊದಲ ನರಮೇಧವಾಗಿತ್ತು. ಈ ಯುದ್ಧದ ಬಳಿಕ ಅಶೋಕನ ಮನಸ್ಸು ಪರಿವರ್ತನೆಯಾಯಿತು. ನಂತರ ಈತ ಅನುಸರಿಸಿದ ಧಮ್ಮನೀತಿ ಭಾರತದಲ್ಲಿ ಮಾತ್ರವಲ್ಲದೇ, ಭಾರತದ ಹೊರಗೂ ಶಾಂತಿಯ ಸಂದೇಶವನ್ನು ಸಾರಿತ್ತು. ಆದ್ದರಿಂದಲೇ ಈತನನ್ನು ಇತಿಹಾಸದ ಪುಟಗಳಲ್ಲಿ ಸನ್ಯಾಸಿ ರಾಜ ಎಂದು ಕರೆಯಲಾಗುತ್ತದೆ.
ಕಳಿಂಗ ಯುದ್ಧಕ್ಕೂ ಮುನ್ನ ಶೈವ ಸಿದ್ಧಾಂತವನ್ನು ಪಾಲಿಸುತ್ತಿದ್ದ. ಆದರೆ ಕಳಿಂಗ ಯುದ್ಧಾ ನಂತರ ಶಾಂತಿಯ ಸಂಕೇತವಾದ ಬೌದ್ಧ ಧರ್ಮವನ್ನು ಅಳವಡಿಸಿಕೊಂಡನು. ಇದಾದ ಬಳಿಕ ಅಹಿಂಸಾ ಮಾರ್ಗದಲ್ಲಿ ಸಾಗಿ ಇಡೀ ಜಗತ್ತಿಗೆ ಅಹಿಂಸೆಯ ಸಂದೇಶವನ್ನು ಸಾರಿದ್ದನು. ನಂತರ ಯುದ್ಧಗಳನ್ನು ತ್ಯಜಿಸುವುದಾಗಿ ಘೋಷಿಸಿದ್ದನು. ಮಾತ್ರವಲ್ಲದೇ ಆತನ ನಂತರದ ಮೌರ್ಯ ಪೀಳಿಗೆ ಕೂಡ ಎಂದಿಗೂ ಯುದ್ಧ ಮಾಡುವುದಿಲ್ಲ. ಧಮ್ಮನೀತಿಯನ್ನು ಪಾಲಿಸುತ್ತಾರೆ ಎನ್ನುವ ವಾಗ್ಧಾನವನ್ನು ಮಾಡಿದ್ದನು. ಕಳಿಂಗ ಯುದ್ಧದ ನಂತರವೂ ಚಕ್ರವರ್ತಿ ಅಶೋಕ ರಾಜ್ಯಾಡಳಿತ ನಡೆಸಿದ್ದನು. ರಾಜನಾಗಿದ್ದರೂ, ಸಕಲ ವೈಯಕ್ತಿಕ ಭೋಗಗಳನ್ನು ತ್ಯಜಿಸಿ, ಸನ್ಯಾಸಿ ರಾಜನಾಗಿ ಅಂದರೆ ಏನೂ ಇಲ್ಲದ ರಾಜನಾಗಿ, ಹಳದಿ ಬಟ್ಟೆ ಧರಿಸಿ ಬೌದ್ಧ ಯೋಗಿಯಾಗಿದ್ದ. ಉಳಿದ ಅಧಿಕಾರಾವಧಿಯಲ್ಲಿ ದೇಶದ ಇತರ ಭಾಗಗಳಲ್ಲಿ ಧಾರ್ಮಿಕ ಸಾಮರಸ್ಯವನ್ನು ಸ್ಥಾಪಿಸುವ ಕೆಲಸ ಮಾಡಿದ್ದ ಎನ್ನುತ್ತಾರೆ ಆದಿತ್ಯ ನಾರಾಯಣ್.
ಈ ನಿಗೂಢ ಬಾವಿ ಬಗೆಗಿದೆ ಧಾರ್ಮಿಕ ನಂಬಿಕೆ: ಈ ಬಾವಿ ಮಾತಾ ಶೀತಲ ದೇವಾಲಯದ ಅಂಗಳದಲ್ಲಿದೆ. ಇದು ಪಾಟ್ನಾದ ಅತ್ಯಂತ ಹಳೆಯ ದೇವಾಲಯ. ಇಲ್ಲಿಗೆ ಭಕ್ತಿಯಿಂದ ಬರುವ ಭಕ್ತರು ಯಾವುದೇ ಇಷ್ಟಾರ್ಥ ಇದ್ದರೂ ಈಡೇರುತ್ತವೆ ಎಂದು ಹೇಳಲಾಗುತ್ತದೆ. ಈ ಬಾವಿಯ ನೀರನ್ನು ಶೀತಲ ಮಾತೆಯ ಪೂಜೆಗೆ ಬಳಸಲಾಗುತ್ತದೆ. ಈ ಬಾವಿಗೆ ನೈವೇದ್ಯ ಸಲ್ಲಿಸಿದರೆ ಇಷ್ಟಾರ್ಥಗಳು ನೆರವೇರುತ್ತವೆ. ಜೊತೆಗೆ ಬಾವಿಯ ನೀರು ದೇಹದ ಪ್ರತಿಯೊಂದು ಕಾಯಿಲೆಯನ್ನು ಗುಣಪಡಿಸುತ್ತದೆ ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ.
ದೇಶ
“ನರಕದಲ್ಲಿ ಬದುಕಬೇಕಾಗುತ್ತದೆ”: ಇರಾನ್ಗೆ ಟ್ರಂಪ್ ಎಚ್ಚರಿಕೆ
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಹಾರ್ಮುಜ್ ಜಲಸಂಧಿಯನ್ನು ಕೂಡಲೇ ಮುಕ್ತಗೊಳಿಸದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ತಮ್ಮ Truth Social ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, “ಇರಾನ್ ಮೂಲಸೌಕರ್ಯಗಳ ಮೇಲೆ ಭಾರೀ ದಾಳಿ ನಡೆಯಬಹುದು. ಇತಿಹಾಸದಲ್ಲಿ ಕಾಣದ ರೀತಿಯ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ” ಎಂದು ಕಠಿಣ ಭಾಷೆಯಲ್ಲಿ ಹೇಳಿದ್ದಾರೆ.
ಇದರ ಬೆನ್ನಲ್ಲೇ, ಇರಾನ್ ಒಳಗೆ ಪತನಗೊಂಡಿದ್ದ ಎಫ್-15 ಯುದ್ಧವಿಮಾನ ಕಮಾಂಡರ್ರನ್ನು ಅಮೆರಿಕಾ ವಿಶೇಷ ಪಡೆಗಳು ಯಶಸ್ವಿಯಾಗಿ ರಕ್ಷಿಸಿರುವುದನ್ನು ಟ್ರಂಪ್ ಶ್ಲಾಘಿಸಿದ್ದಾರೆ. ಶತ್ರು ಪ್ರದೇಶದಲ್ಲಿದ್ದ ಗಾಯಗೊಂಡ ಸೈನಿಕರನ್ನು ಸುರಕ್ಷಿತವಾಗಿ ಕರೆತಂದಿರುವುದು ಸಾಹಸಮಯ ಕಾರ್ಯಾಚರಣೆಯಾಗಿದೆ ಎಂದು ಅವರು ಹೇಳಿದ್ದಾರೆ.
ಇದೀಗ ಹಾರ್ಮುಜ್ ಜಲಸಂಧಿ ವಿವಾದ ಜಾಗತಿಕ ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಗಲ್ಫ್ ರಾಷ್ಟ್ರಗಳಿಂದ ಯುರೋಪ್ ಮತ್ತು ಏಷ್ಯಾಕ್ಕೆ ತೈಲ ಸಾಗಾಣಿಕೆ ಮಾಡುವ ಪ್ರಮುಖ ಮಾರ್ಗವೇ ಇದು. ಇರಾನ್ ಈ ಮಾರ್ಗದ ಮೇಲೆ ನಿಯಂತ್ರಣ ಸಾಧಿಸಿರುವುದರಿಂದ ಜಾಗತಿಕ ತೈಲ ಬೆಲೆ ಏರಿಕೆಯ ಆತಂಕ ಎದುರಾಗಿದೆ.
ಇದರ ನಡುವೆ ಇರಾನ್ ಕೂಡ ತಿರುಗೇಟು ನೀಡಿದ್ದು, “ನಮ್ಮ ಮೇಲೆ ದಾಳಿ ಮಾಡಿದರೆ ಅಮೆರಿಕದ ಸೇನಾ ನೆಲೆಗಳ ಮೇಲೆ ಪ್ರತಿದಾಳಿ ನಡೆಸುತ್ತೇವೆ” ಎಂದು ಎಚ್ಚರಿಸಿದೆ.
ಒಟ್ಟಿನಲ್ಲಿ, ಅಮೆರಿಕಾ-ಇರಾನ್ ನಡುವಿನ ವಾಕ್ಸಮರ ಮತ್ತು ಯುದ್ಧದ ವಾತಾವರಣ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಜಾಗತಿಕ ಶಾಂತಿಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.
ಕ್ರೀಡೆ
ಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!
ಬೆಂಗಳೂರುದ ಎಂ. ಚಿನ್ನಸ್ವಾಮಿ ಕ್ರೀಡಾಂಗಣನಲ್ಲಿ ನಡೆಯುತ್ತಿರುವ Indian Premier League ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ.
ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಆರ್ಸಿಬಿಗೆ ಬ್ಯಾಟಿಂಗ್ ಆಹ್ವಾನಿಸಿದರು. ಆರಂಭದಲ್ಲಿ ವಿರಾಟ್ ಕೊಹ್ಲಿ (28) ಬೇಗ ಔಟ್ ಆದರೂ, ಫಿಲ್ ಸಾಲ್ಟ್ (46) ತಂಡಕ್ಕೆ ವೇಗ ನೀಡಿದರು.
ಆದರೆ, ನಂತರದ ಹಂತದಲ್ಲಿ ಆರ್ಸಿಬಿ ಬ್ಯಾಟಿಂಗ್ ಭರ್ಜರಿಯಾಗಿ ಸಿಡಿಯಿತು. ದೇವದತ್ತ ಪಡಿಕಲ್ (50) ಅರ್ಧಶತಕ ಸಿಡಿಸಿ ತಂಡಕ್ಕೆ ಬಲ ನೀಡಿದರೆ, ನಾಯಕ ರಜತ್ ಪಾಟೀದಾರ್ (48*) ವೇಗದ ಇನ್ನಿಂಗ್ಸ್ ಆಡಿದರು. ಅಂತಿಮವಾಗಿ ಟಿಮ್ ಡೇವಿಡ್ (70*) ಬ್ಯಾಕ್ ಟು ಬ್ಯಾಕ್ ಸಿಕ್ಸರ್ಗಳಿಂದ ಚೆನ್ನೈ ಬೌಲರ್ಗಳನ್ನು ಕಂಗೆಡಿಸಿದರು.
ಪವರ್ಪ್ಲೇಯಲ್ಲೇ ವಿಕೆಟ್ ಪಡೆಯಲು ವಿಫಲವಾದ ಸಿಎಸ್ಕೆ ಬೌಲರ್ಗಳು ಮತ್ತೆ ಅದೇ ತಪ್ಪನ್ನು ಮುಂದುವರೆಸಿದರು. ಪರಿಣಾಮವಾಗಿ, ಆರ್ಸಿಬಿ 20 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭಾರೀ 250 ರನ್ ಗಳಿಸಿತು.
ಈ ಬೃಹತ್ ಗುರಿಯನ್ನು ಬೆನ್ನತ್ತುತ್ತಿರುವ ಸಿಎಸ್ಕೆ, ತನ್ನ ಮೊದಲ ಗೆಲುವು ದಾಖಲಿಸಬಹುದೇ ಎಂಬುದು ಈಗ ಕುತೂಹಲ ಮೂಡಿಸಿದೆ.
ಆರ್ಸಿಬಿ ಬ್ಯಾಟಿಂಗ್ ವಿವರ:
- ವಿರಾಟ್ ಕೊಹ್ಲಿ – 28 (18)
- ಫಿಲ್ ಸಾಲ್ಟ್ – 46 (30)
- ದೇವದತ್ತ ಪಡಿಕಲ್ – 50 (29)
- ರಜತ್ ಪಾಟೀದಾರ್ – 48* (19)
- ಟಿಮ್ ಡೇವಿಡ್ – 70* (25)
ದೇಶ
ಪೊಲೀಸ್ ವಾಹನವೇ ಪ್ರವೇಶಿಸದ ಗ್ರಾಮ: ಶಾಂತಿಯುತ ಬದುಕಿನ ಅದ್ಭುತ ಕಥೆ
ಇತ್ತೀಚಿನ ದಿನಗಳಲ್ಲಿ ಸಣ್ಣ ವಿಷಯಕ್ಕೂ ಜಗಳ-ಕೇಸು ಸಾಮಾನ್ಯವಾಗಿರುವ ಸಂದರ್ಭದಲ್ಲೇ, ಬಿಹಾರದ ಒಂದು ಹಳ್ಳಿ ದೇಶಕ್ಕೆ ಮಾದರಿಯಾಗಿ ಹೊರಹೊಮ್ಮಿದೆ. ಕಲಿಯಾಚಕ್ ಗ್ರಾಮ ಕಳೆದ 118 ವರ್ಷಗಳಿಂದ ಯಾವುದೇ ಅಪರಾಧ ದಾಖಲಾಗದೇ ಶಾಂತಿಯುತ ಜೀವನ ನಡೆಸುತ್ತಿರುವುದು ವಿಶೇಷ.
ನಳಂದ ಜಿಲ್ಲೆಯ ಈ ಗ್ರಾಮದಲ್ಲಿ ಸ್ಥಾಪನೆಯಾದ ದಿನದಿಂದಲೂ ಗಂಭೀರ ಅಪರಾಧಗಳೇ ನಡೆದಿಲ್ಲ. ಅಷ್ಟೇ ಅಲ್ಲ, ಇಷ್ಟು ವರ್ಷಗಳಲ್ಲಿ ಪೊಲೀಸ್ ಸೈರನ್ ಕೂಡ ಕೇಳಿಸಿಲ್ಲ ಎಂಬುದು ಆಶ್ಚರ್ಯಕರ ಸಂಗತಿ. ಗ್ರಾಮದಲ್ಲಿ ಯಾವುದೇ ಸಣ್ಣಪುಟ್ಟ ವಿವಾದಗಳು ಉಂಟಾದರೂ, ಹಿರಿಯರು ಕೂತು ಸಮಸ್ಯೆಯನ್ನು ಪರಿಹರಿಸುತ್ತಾರೆ.
ಈ ಗ್ರಾಮ ಹಿಲ್ಸಾ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ. ಆದರೆ ಪೊಲೀಸ್ ದಾಖಲೆಗಳಲ್ಲಿ ಈ ಗ್ರಾಮದಿಂದ ಒಂದೇ ಒಂದು ದೂರು ಕೂಡ ಇಲ್ಲದಿರುವುದು ಅಧಿಕಾರಿಗಳನ್ನೇ ಅಚ್ಚರಿಗೊಳಿಸಿದೆ.
ಗ್ರಾಮದಲ್ಲಿ ಸುಮಾರು 60 ಕುಟುಂಬಗಳು, 500 ಜನರು ವಾಸಿಸುತ್ತಿದ್ದು, ವಿವಿಧ ಜಾತಿ-ವರ್ಗಗಳ ಜನರು ಸಹೋದರತ್ವದಿಂದ ಬದುಕುತ್ತಿದ್ದಾರೆ. “ಗ್ರಾಮದ ಸಮಸ್ಯೆಗಳನ್ನು ಗ್ರಾಮದಲ್ಲೇ ಬಗೆಹರಿಸಬೇಕು” ಎಂಬುದು ಇವರ ಮೂಲ ತತ್ವವಾಗಿದೆ.
ಈ ಶಾಂತಿಯುತ ವಾತಾವರಣಕ್ಕೆ ಪ್ರಮುಖ ಕಾರಣ ಮಾಜಿ ಪಂಚಾಯಿತಿ ಅಧ್ಯಕ್ಷ ಸಾಧು ಶರಣ್ ಸಿಂಗ್ ಅವರ ಮಾರ್ಗದರ್ಶನ. ಅವರ ಪ್ರಯತ್ನದಿಂದ ಈ ಗ್ರಾಮ ಮಾದರಿಯಾಗಿ ರೂಪುಗೊಂಡಿದೆ.
ಇಲ್ಲಿನ ಯುವಕರು ಕೆಟ್ಟ ಅಭ್ಯಾಸಗಳಿಂದ ದೂರವಿದ್ದು ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳತ್ತ ಗಮನ ಹರಿಸುತ್ತಿದ್ದಾರೆ.
ಗಮನಿಸಿ: ಮೇಲಿನ ವಿವರಗಳು ಬಿಹಾರದ ಕಲಿಯಾಚಕ್ ಗ್ರಾಮದ ಕುರಿತು ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳು ಒದಗಿಸಿದ ಮಾಹಿತಿಯನ್ನು ಆಧರಿಸಿವೆ. ಇದು ಅಪರಾಧ ಮುಕ್ತ ಗ್ರಾಮವಾಗಿ ದೇಶದಲ್ಲಿ ವಿಶೇಷ ಮನ್ನಣೆಯನ್ನು ಗಳಿಸಿದೆ.
ಒಟ್ಟಿನಲ್ಲಿ, ಕಲಿಯಾಚಕ್ ಗ್ರಾಮವು ಒಗ್ಗಟ್ಟು, ಸಹೋದರತ್ವ ಮತ್ತು ಶಾಂತಿಯುತ ಬದುಕಿನ ನಿಜವಾದ ಮಾದರಿಯಾಗಿ ಇಡೀ ದೇಶಕ್ಕೆ ಪ್ರೇರಣೆಯಾಗಿದೆ.
-
ದೇಶ10 hours ago“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್ ಟಾಂಗ್, ದಾವಣಗೆರೆ ರಾಜಕೀಯ ಕುತೂಹಲ
-
ದೇಶ10 hours agoಕಾಗದ-ಇಂಕ್ ಬೆಲೆ ಏರಿಕೆ: ಪ್ರಿಂಟಿಂಗ್ ಪ್ರೆಸ್ಗಳಿಗೆ ಶಾಕ್
-
ದೇಶ8 hours agoಪೊಲೀಸ್ ವಾಹನವೇ ಪ್ರವೇಶಿಸದ ಗ್ರಾಮ: ಶಾಂತಿಯುತ ಬದುಕಿನ ಅದ್ಭುತ ಕಥೆ
-
ಕ್ರೀಡೆ6 hours agoಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!
-
ದೇಶ9 hours agoIndian Railways: ರೈಲಲ್ಲೇ ಮದುವೆ ಸಂಭ್ರಮ: Indian Railwaysನಲ್ಲಿ ಹೊಸ ಟ್ರೆಂಡ್!
-
ದೇಶ10 hours ago‘I Love My Daughter’ ಟೀ ಶರ್ಟ್ನಲ್ಲಿ ಸಂಭ್ರಮ: ವಿಚ್ಛೇದನಕ್ಕೆ ಹೊಸ ಅರ್ಥ ನೀಡಿದ ಕುಟುಂಬ
-
ದೇಶ9 hours agoಎನ್ಎಂಎಸಿಸಿ ವೇದಿಕೆಯಲ್ಲಿ ನೀತಾ ಅಂಬಾನಿ ಸೀರೆ ಸದ್ದು: ಐವರಿ-ಗೋಲ್ಡ್ ಲುಕ್ ವೈರಲ್
-
ದೇಶ9 hours agoಟ್ರಂಪ್ ದೇಶದಲ್ಲಿ ಭಾರತೀಯರ ಸದ್ದು: ಮೇಯರ್ ರೇಸ್ನಲ್ಲಿ ತಮಿಳುನಾಡಿನ ಕುವರಿ
