ದೇಶ
ಮಂಗಳವಾರದ ಭವಿಷ್ಯ: ಈ ರಾಶಿಯವರಿಗೆ ಇಂದು ಹೊಸ ಯೋಜನೆ ಆರಂಭಿಸಲು ಸುದಿನ!
ರಾಶಿ ಭವಿಷ್ಯ:
ಮೇಷ: ಕೆಲವೊಮ್ಮೆ ನೀವು ಒತ್ತಡದಲ್ಲಿರುವುದು ಒಳ್ಳೆಯದು ಏಕೆಂದರೆ ಇದು ನಿಮ್ಮ ಸಾಮರ್ಥ್ಯವನ್ನು ಪೂರ್ಣವಾಗಿ ಹೊರತರುತ್ತದೆ. ನೀವು ನಿಮ್ಮ ಕೆಲಸದಲ್ಲಿ ಎಲ್ಲ ನಿಮ್ಮ ಸಹೋದ್ಯೋಗಿಗಳನ್ನೂ ಮೀರುತ್ತೀರಿ. ಆದರೆ, ಫಲಿತಾಂಶಗಳು ನಿಮ್ಮ ನಿರೀಕ್ಷೆಗಳಿಗೆ ಹೊಂದಿಕೊಳ್ಳುವುದಿಲ್ಲ. ಫಲಿತಾಂಶಗಳು ತಡವಾಗುವುದರಿಂದ ನೀವು ತಾಳ್ಮೆಯಿಂದ ಇರಬೇಕು.
ವೃಷಭ: ನಿಮ್ಮದೇ ಸಾಧನೆಗಳನ್ನು ಯೋಜಿಸುವುದು ಮತ್ತು ಮಿತ್ರರ ಯಶಸ್ಸಿಗೆ ಕೊಡುಗೆ ನೀಡುವುದು ಇಂದಿನ ಕಾರ್ಯಸೂಚಿ. ವ್ಯಾಪಾರ ಅಥವಾ ಕೆಲಸದಲ್ಲಿ ನಿಮ್ಮ ಆಲೋಚನೆಗಳು ಚಲನಶೀಲವಾಗಿರುತ್ತವೆ ಮತ್ತು ಯಾವುದೇ ಯೋಜನೆಗಳು ನಿಮ್ಮ ಭವಿಷ್ಯಕ್ಕೆ ಸದೃಢ ತಳಹದಿ ನಿರ್ಮಿಸುತ್ತವೆ.
ಮಿಥುನ: ಇಂದು ಎಲ್ಲ ಬಗೆಯ ಪಾಲುದಾರಿಕೆಗಳಿಗೆ ಪ್ರವೇಶಿಸಲು ಅತ್ಯುತ್ತಮ ದಿನವಾಗಿದೆ. ನೀವು ನಿಮ್ಮ ಆತ್ಮೀಯ ಮಿತ್ರರೊಂದಿಗೆ ಬಂಧ ಬೆಳೆಸಿಕೊಳ್ಳಲು, ಜಂಟಿ ಖಾತೆ ತೆರೆಯಲು, ವ್ಯವಹಾರಗಳನ್ನು ನಡೆಸಲು ಮತ್ತು ಉಜ್ವಲ ಭವಿಷ್ಯಕ್ಕೆ ಯೋಜನೆ ರೂಪಿಸಬಹುದಾದ ದಿನ. ನೀವು ಮಾಡುವ ಪ್ರತಿಯೊಂದರಲ್ಲೂ ಮೊದಲ ಸ್ಥಾನದಲ್ಲಿರುತ್ತೀರಿ. ಮತ್ತಷ್ಟು ಅಧ್ಯಯನಗಳಿಗೆ ಹೋಗಲು ಬಯಸುವ ನಿಮ್ಮಲ್ಲಿ ಕೆಲವರು, ಮಾಹಿತಿಪೂರ್ಣ ನಿರ್ಧಾರಗಳನ್ನು ಇಂದು ತೆಗೆದುಕೊಳ್ಳಬಹುದು.
ಕರ್ಕಾಟಕ: ಜನರು ನಿಮ್ಮನ್ನು ಸುತ್ತುವರಿಯುತ್ತಾರೆ. ನಿಮ್ಮ ಮನರಂಜನೆಯಿಂದ ಅವರನ್ನು ತೊಡಗಿಸಿಕೊಳ್ಳುತ್ತೀರಿ. ಸಾಮಾಜಿಕ ಸಂಪರ್ಕಗಳು ನಿಮಗೆ ಲಾಭ ತರುತ್ತವೆ. ವಿದ್ಯಾರ್ಥಿಗಳು ನಿರೀಕ್ಷೆ ಮೀರುತ್ತಾರೆ. ತಮ್ಮ ಕೆಲಸಕ್ಕೆ ಗಮನ ನೀಡುತ್ತಾರೆ. ಒಟ್ಟಾರೆ ಎಲ್ಲರಿಗೂ ಇದು ಒಳ್ಳೆಯ ದಿನವಾಗಿದೆ.
ಸಿಂಹ: ಕೆಲ ಭರವಸೆಗಳು ಖಾಸಗಿ ಮಾತುಗಳಂತೆ. ಎಂದಿಗೂ ವಾಸ್ತವಗೊಳ್ಳುವುದಿಲ್ಲ. ಇಂದು ಅದೇ ರೀತಿಯಲ್ಲಿದೆ, ನೀವು ಏನನ್ನು ಬಯಸುತ್ತೀರೋ ಅದಕ್ಕೆ ಎಷ್ಟೋ ಹತ್ತಿರ ಮತ್ತು ಎಷ್ಟೋ ದೂರವಿದ್ದೀರಿ. ನೀವು ಉದಾರ ವಿಜೇತ ಮತ್ತು ವಿನಯಶೀಲ ಸೋತವರು. ನೆನಪಿಟ್ಟುಕೊಳ್ಳಿ, ಪ್ರತಿದಿನವೂ ಭಾನುವಾರವಲ್ಲ; ಅಲ್ಲದೆ ನೀವು ಪ್ರತಿ ಸಲವೂ ಗೆಲ್ಲಲು ಸಾಧ್ಯವಿಲ್ಲ. ನಿರಾಸೆಗಳನ್ನು ತಪ್ಪಿಸಲು ನಿಮ್ಮ ನಿರೀಕ್ಷೆಗಳನ್ನು ಕಡಿಮೆ ಮಾಡಿಕೊಳ್ಳಿ. ಬದಲಾವಣೆಯ ಗಾಳಿಗೆ ಕಾಯಿರಿ – ಅದು ಹೆಚ್ಚೇನೂ ಸಮಯ ತೆಗೆದುಕೊಳ್ಳುವುದಿಲ್ಲ.
ಕನ್ಯಾ: ಇಂದು, ನಿಮ್ಮ ದಕ್ಷತೆ ನಿಮಗೆ ಮೊಲಗಳಂತೆ ಐಡಿಯಾಗಳನ್ನು ಹುಟ್ಟುಹಾಕುತ್ತದೆ. ನಿಮಗೆ ವೈದ್ಯರ ಕೈಗಳಿವೆ ಮತ್ತು ನೀವು ಹಲವು ತಪ್ಪುಗಳನ್ನು ಸರಿಯಾಗಿ ಮಾಡಬಲ್ಲಿರಿ. ನೀವು ಬಹಳ ಅರ್ಥ ಮಾಡಿಕೊಳ್ಳಬಲ್ಲವರು ಮತ್ತು ಜನರ ಮನಸ್ಸನ್ನು ಓದುವುದು ನಿಮಗೆ ಮತ್ತು ನಿಮ್ಮ ಪ್ರೀತಿಪಾತ್ರರಿಗೆ ಅದ್ಭುತಗಳನ್ನು ಮಾಡಬಲ್ಲದು.
ತುಲಾ: ಈ ದಿನ ಬಹಳ ಹಂಬಲದ ದಿನ. ನೀವು ಉತ್ತಮ ಭವಿಷ್ಯಕ್ಕಾಗಿ ಹಂಬಲಿಸುತ್ತೀರಿ. ನೀವು ವಿಶ್ವದ ಕುರಿತು ನಿಮ್ಮ ಹೊರನೋಟ ಬದಲಾಯಿಸುತ್ತೀರಿ. ಅದಕ್ಕೆ ನಿಮ್ಮ ಪ್ರೀತಿಪಾತ್ರರು ಮತ್ತು ಅವರ ಆರೈಕೆಯ ಪ್ರವೃತ್ತಿ ಕಾರಣ. ಹಾಗೆ ಮಾಡುವುದರಿಂದ ನಿಮ್ಮ ಜೀವನವನ್ನು ಉತ್ತಮಪಡಿಸಲು ನೆರವಾಗುತ್ತದೆ.
ವೃಶ್ಚಿಕ: ನಿಮ್ಮ ತಾರೆಗಳ ಜೋಡಣೆ ಇಂದು ನಿಮಗೆ ರಚನಾತ್ಮಕ ಅನುಕೂಲಕರ ದಿನವನ್ನು ಉತ್ಪಾದಿಸುವಂತಿದೆ. ನೀವು ಹಿರಿಯರು ಮತ್ತು ಕಿರಿಯರು ಪ್ರತಿಯೊಬ್ಬರನ್ನೂ ಸಮಾನರಂತೆ ಕಾಣುವ ತಂಡದ ಪ್ರಾಮುಖ್ಯತೆಯನ್ನು ಅರಿತಿದ್ದೀರಿ. ಇದು ನಿಮ್ಮ ಪರಿಸರವನ್ನು ಸಾಮರಸ್ಯಕರವಾಗಿಸುತ್ತದೆ.
ಧನು: ನಿಮ್ಮ ಕೋಪ ಬೆಂಕಿಯುಂಡೆಯಷ್ಟು ಬಿಸಿಯಾಗಿದೆ. ಕೋಪ ವಿಶ್ವವನ್ನು ನಾಶ ಮಾಡುತ್ತದೆ ಎಂದು ಜನರು ಹೇಳುತ್ತಾರೆ. ನೀವು ನಿಮ್ಮ ಆಕ್ರಮಣಕಾರಿ ವರ್ತನೆಯಿಂದ ನಿಮ್ಮದೇ ಕಾಲಿಗೆ ಏಟು ಮಾಡಿಕೊಳ್ಳುತ್ತೀರಿ. ಶಾಂತವಾಗಿರಿ ಮತ್ತು ಕೆಲಸ ಮಾಡುವ ಮುನ್ನ ಚಿಂತಿಸಿ. ನೀವು ಹಣಕಾಸಿನ ಕೊರತೆ ಎದುರಿಸುವ ಸಾಧ್ಯತೆಗಳಿವೆ, ಅದನ್ನು ಎಚ್ಚರಿಕೆಯಿಂದ ನಿಭಾಯಿಸಿ.
ಮಕರ: ನಿಮ್ಮ ಅಸಾಧಾರಣ ಬೌದ್ಧಿಕ ಸಾಮರ್ಥ್ಯ ನಿಮಗೆ ಉತ್ಸಾಹಕರ ಫಲಿತಾಂಶಗಳನ್ನು ನೀಡುವುದಲ್ಲದೆ ನಿಮ್ಮ ಹತ್ತಿರದ ಸಹವರ್ತಿಗಳಿಗೆ ನಿಮ್ಮ ಮೌಲಿಕ ಸಲಹೆಯಿಂದ ಅವರ ವೃತ್ತಿಯಲ್ಲಿ ಮಹತ್ತರವಾಗಿ ಪ್ರಗತಿ ಕಾಣಲು ನೆರವಾಗುತ್ತದೆ. ಅಸಂಖ್ಯ ಸಮಸ್ಯೆಗಳು ನಿಮ್ಮ ದಾರಿಯಲ್ಲಿವೆ, ಆದರೆ ನಿಮಗೆ ಆತಂಕಪಡಲು ಕಾರಣವಿಲ್ಲ. ನೀವು ಅವುಗಳ ಪ್ರತಿಯೊಂದನ್ನೂ ಸುಲಭವಾಗಿ ನಿವಾರಿಸುತ್ತೀರಿ. ಅನುಷ್ಠಾನಕ್ಕೆ ಅನುಮೋದನೆ ಪಡೆದ ಪ್ರಾಜೆಕ್ಟ್ ಯಶಸ್ವಿಯಾಗಲಿದೆ ಮತ್ತು ನಿಮಗೆ ಪರ್ಫೆಕ್ಷನಿಸ್ಟ್ ಎಂಬ ಗೌರವ ತಂದುಕೊಡಲಿದೆ.
ಕುಂಭ: ನೀವು ನಿಮ್ಮದೇ ಆದ ವೈಶಿಷ್ಟ್ಯತೆ ರೂಪಿಸಿಕೊಳ್ಳಲು ಯಶಸ್ವಿಯಾಗಿದ್ದೀರಿ. ಇಂದು, ನಿಮ್ಮ ಎಲ್ಲ ಹಿಂದಿನ ಕಠಿಣ ಪರಿಶ್ರಮದ ಸ್ಪಷ್ಟವಾದ ಲಾಭಗಳನ್ನು ಕಾಣುತ್ತೀರಿ. ಆದರೆ, ವ್ಯಾಪಾರದ ವಿರೋಧಿಗಳು ನೋವು ನೀಡುತ್ತಾರೆ. ನಿಮ್ಮ ಆರೋಗ್ಯವೂ ನಿಮಗೆ ತೊಂದರೆ ಕೊಡುತ್ತದೆ. ಆದರೆ, ನೀವು ನಗುನಗುತ್ತಾ ವಿಷಯಗಳನ್ನು ಸರಿಯಾದ ರೀತಿಯಲ್ಲಿ ಸ್ವೀಕರಿಸುತ್ತೀರಿ.
ಮೀನ: ಹೊಸ ಯೋಜನೆಗಳನ್ನು ಪ್ರಾರಂಭಿಸಲು ಇದು ಪವಿತ್ರವಾದ ಸಮಯ. ಇಂದು ನಿಮ್ಮ ಭವಿಷ್ಯಕ್ಕೆ ಗಮನಾರ್ಹ ಹೂಡಿಕೆ ಮಾಡುವುದನ್ನು ಕಾಣುತ್ತೀರಿ. ನಿಮ್ಮ ಕುಟುಂಬ ನಿಮ್ಮ ಯಶಸ್ಸಿಗೆ ತಳಹದಿ, ಮತ್ತು ಅದನ್ನು ಮನದಲ್ಲಿಟ್ಟುಕೊಳ್ಳುವುದು ನಿಮಗೆ ಕೆಲವು ಪ್ರಮುಖ ಒಳನೋಟಗಳನ್ನು ನೀಡುತ್ತದೆ. ನಿಮ್ಮ ನಗು ಇಂದು ಹಲವು ಹೃದಯಗಳನ್ನು ಗೆಲ್ಲುತ್ತದೆ.
ದೇಶ
Nepal flood ಮರಿಗಳನ್ನು ಬಿಟ್ಟು ಕದಲಲಿಲ್ಲ! ಪ್ರವಾಹದ ಮಧ್ಯೆ ಆನೆಗಳ ವಾತ್ಸಲ್ಯದ ದೃಶ್ಯ ವೈರಲ್
ಬಹ್ರೈಚ್: Nepal flood ದಲ್ಲಿ ಉಂಟಾದ ಭೀಕರ ಜಲಪ್ರಳಯದ ರಭಸಕ್ಕೆ ಸಿಲುಕಿದ್ದ 5 ಕಾಡಾನೆಗಳ ಹಿಂಡು ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಕಟರ್ನಿಯಾಘಾಟ್ ಬಳಿಯ ಗಿರ್ಜಾಪುರಿ ಬ್ಯಾರೇಜ್ ಸಮೀಪ ಪ್ರವಾಹದಲ್ಲಿ ಕೊಚ್ಚಿಕೊಂಡು ಬಂದಿದೆ. ಆಗಸ್ಟ್ 25ರಂದು ನಡೆದ ಈ ಘಟನೆಯಲ್ಲಿ ಮೂರು ವಯಸ್ಕ ಆನೆಗಳು ಹಾಗೂ ಎರಡು ಮರಿಗಳು ಪ್ರವಾಹದ ಸುಳಿಗೆ ಸಿಲುಕಿದ್ದವು.
ಕೌಡಿಯಾಲ ನದಿಯಲ್ಲಿ ನೀರಿನ ಹರಿವು ಏಕಾಏಕಿ ಹೆಚ್ಚಾದ ಹಿನ್ನೆಲೆಯಲ್ಲಿ ಆನೆಗಳ ಹಿಂಡು ಸಂಕಷ್ಟಕ್ಕೆ ಸಿಲುಕಿತ್ತು. ನೀರಿನ ರಭಸ ಹೆಚ್ಚಿದ್ದರಿಂದ ಆನೆ ಮರಿಗಳಿಗೆ ತೇಲುವುದು ಕಷ್ಟವಾಗಿತ್ತು. ಈ ವೇಳೆ ವಯಸ್ಕ ಆನೆಗಳು ಮರಿಗಳನ್ನು ಸುತ್ತುವರಿದು ನಿಂತು, ಅವುಗಳನ್ನು ಪ್ರವಾಹದ ರಭಸದಿಂದ ರಕ್ಷಿಸಲು ಪ್ರಯತ್ನಿಸಿರುವುದು ಗಮನ ಸೆಳೆದಿದೆ.
ಮರಿಗಳನ್ನು ಬಿಟ್ಟು ಕದಲದ ದೊಡ್ಡ ಆನೆಗಳು
ಪ್ರವಾಹದ ನೀರು ಅಪಾಯಕಾರಿಯಾಗಿ ಹರಿಯುತ್ತಿದ್ದರೂ ವಯಸ್ಕ ಆನೆಗಳು ಮರಿಗಳನ್ನು ಏಕಾಂಗಿಯಾಗಿ ಬಿಡಲಿಲ್ಲ. ಅವುಗಳ ಸುತ್ತಲೂ ನಿಂತು ಮರಿಗಳಿಗೆ ರಕ್ಷಣೆ ನೀಡುವ ಮೂಲಕ ಸುರಕ್ಷಿತವಾಗಿ ದಡ ಸೇರುವಂತೆ ನೆರವಾದವು.
ಈ ದೃಶ್ಯ ಅರಣ್ಯ ಇಲಾಖೆ ಸಿಬ್ಬಂದಿಯ ಗಮನಕ್ಕೂ ಬಂದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ.
ಬ್ಯಾರೇಜ್ ಗೇಟ್ಗಳನ್ನು ಬಂದ್ ಮಾಡಿದ ಅಧಿಕಾರಿಗಳು
ಆನೆಗಳ ಹಿಂಡು ಅಪಾಯದಲ್ಲಿರುವುದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಬಳಿಕ ಗಿರ್ಜಾಪುರಿ ಬ್ಯಾರೇಜ್ನ ಗೇಟ್ಗಳನ್ನು ಮುಚ್ಚಲಾಗಿದ್ದು, ನೀರಿನ ಹರಿವಿನ ವೇಗವನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ನೀರಿನ ರಭಸ ಕಡಿಮೆಯಾದ ಬಳಿಕ ವಯಸ್ಕ ಆನೆಗಳು ಚೇತರಿಸಿಕೊಂಡಿವೆ. ನಂತರ ಅವು ಎರಡು ಆನೆ ಮರಿಗಳನ್ನು ಸುರಕ್ಷಿತವಾಗಿ ದಂಡೆಯತ್ತ ಕರೆದೊಯ್ದಿವೆ.
ಸುರಕ್ಷಿತವಾಗಿ ಕಾಡಿಗೆ ಮರಳಿದ ಆನೆಗಳು
ಆನೆಗಳ ಹಿಂಡು ದಡ ತಲುಪಿದ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಅವುಗಳನ್ನು ಬ್ಯಾರೇಜ್ ಪ್ರದೇಶದಿಂದ ದೂರಕ್ಕೆ ಕಳುಹಿಸಿ ಸುರಕ್ಷಿತವಾಗಿ ಕಾಡಿನತ್ತ ಸಾಗುವಂತೆ ಮಾಡಿದ್ದಾರೆ.
ಆಪತ್ತಿನ ಸಮಯದಲ್ಲೂ ಮರಿಗಳನ್ನು ಬಿಟ್ಟು ಹೋಗದೆ ಅವುಗಳನ್ನು ಸುತ್ತುವರಿದು ರಕ್ಷಿಸಿದ ಆನೆಗಳ ವರ್ತನೆ ಸಾರ್ವಜನಿಕರ ಗಮನ ಸೆಳೆದಿದೆ. ಮತ್ತೊಂದೆಡೆ, ಪರಿಸ್ಥಿತಿಯನ್ನು ತ್ವರಿತವಾಗಿ ಅರಿತು ನೀರಾವರಿ ಇಲಾಖೆಯ ಸಹಕಾರದೊಂದಿಗೆ ಬ್ಯಾರೇಜ್ ಗೇಟ್ಗಳನ್ನು ಬಂದ್ ಮಾಡಿ ಆನೆಗಳ ಜೀವ ಉಳಿಸಿದ ಅರಣ್ಯ ಇಲಾಖೆ ಸಿಬ್ಬಂದಿಯ ಸಮಯಪ್ರಜ್ಞೆಗೂ ಮೆಚ್ಚುಗೆ ವ್ಯಕ್ತವಾಗಿದೆ.
ರಾಜ್ಯ
Mysuru ರಲ್ಲೂ ಭೂಸ್ವಾಧೀನ ವಿವಾದ: 165 ಎಕರೆ ಕೃಷಿ ಭೂಮಿಗೆ KIADB ನೋಟಿಸ್, ರೈತರ ಆಕ್ರೋಶ
ಮೈಸೂರು: ರಾಮನಗರ ಜಿಲ್ಲೆಯ ಬಿಡದಿ ಟೌನ್ಶಿಪ್ ಭೂಸ್ವಾಧೀನ ವಿವಾದದ ಬೆನ್ನಲ್ಲೇ ಇದೀಗ Mysuru ಜಿಲ್ಲೆಯಲ್ಲೂ ಫಲವತ್ತಾದ ಕೃಷಿ ಭೂಮಿ ಸ್ವಾಧೀನಕ್ಕೆ ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ 165 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಪ್ರಾಥಮಿಕ ಅಧಿಸೂಚನೆ ಹೊರಡಿಸಿದೆ ಎನ್ನಲಾಗಿದ್ದು, ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಮೈಸೂರು ವಿಮಾನ ನಿಲ್ದಾಣದ ಸಮೀಪದಲ್ಲಿರುವ ವರುಣಾ ಕ್ಷೇತ್ರದ ಮರಸೆ ಹಾಗೂ ಮದರಗಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಭೂಮಿಯನ್ನು ಗುರುತಿಸಲಾಗಿದೆ. ಈ ಪ್ರದೇಶದ ಜಮೀನುಗಳಲ್ಲಿ ರೈತರು ಅಡಕೆ, ಬಾಳೆ, ತೆಂಗು, ಭತ್ತ ಸೇರಿದಂತೆ ವಿವಿಧ ವಾಣಿಜ್ಯ ಹಾಗೂ ಆಹಾರ ಬೆಳೆಗಳನ್ನು ಬೆಳೆಯುತ್ತಿದ್ದಾರೆ.
ಫಲವತ್ತಾದ ಜಮೀನು ಕೈಗಾರಿಕೆಗೆ?
ತಮ್ಮ ಜೀವನಾಧಾರವಾಗಿರುವ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ವರ್ಷಗಳಿಂದ ಕೃಷಿ ಚಟುವಟಿಕೆ ನಡೆಸುತ್ತಿರುವ ಜಮೀನುಗಳನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದು ಸ್ಥಳೀಯ ರೈತರು ಪಟ್ಟುಹಿಡಿದಿದ್ದಾರೆ.
ವಿಮಾನ ನಿಲ್ದಾಣದ ಸಮೀಪವಿರುವ ಮರಸೆ-ಮದರಗಳ್ಳಿ ಭಾಗದಲ್ಲಿ ಕೈಗಾರಿಕಾ ಪ್ರದೇಶ ನಿರ್ಮಿಸುವ ಉದ್ದೇಶದಿಂದ KIADB ಪ್ರಾಥಮಿಕ ಅಧಿಸೂಚನೆ ಹೊರಡಿಸಿರುವುದಾಗಿ ತಿಳಿದುಬಂದಿದೆ. ಭೂಸ್ವಾಧೀನ ಪ್ರಕ್ರಿಯೆ ಮುಂದುವರಿದರೆ ತಮ್ಮ ಕೃಷಿ ಮತ್ತು ಜೀವನೋಪಾಯಕ್ಕೆ ತೀವ್ರ ಹೊಡೆತ ಬೀಳಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಬಿಡದಿ ಮಾದರಿಯಲ್ಲಿ ಮೈಸೂರಲ್ಲೂ ಹೋರಾಟ?
ಬೆಂಗಳೂರು ಸಮೀಪದ ಬಿಡದಿಯಲ್ಲಿ ಭೂಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದ ಮಾದರಿಯಲ್ಲೇ ಮೈಸೂರಿನಲ್ಲೂ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ಹಾಗೂ ಭೂಮಾಲೀಕರು ಸಜ್ಜಾಗುತ್ತಿದ್ದಾರೆ ಎನ್ನಲಾಗಿದೆ.
165 ಎಕರೆ ಕೃಷಿ ಭೂಮಿ ಸ್ವಾಧೀನದ ವಿಚಾರ ಇದೀಗ ವರುಣಾ ಕ್ಷೇತ್ರದಲ್ಲಿ ರಾಜಕೀಯ ಹಾಗೂ ರೈತ ಹೋರಾಟಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಸರ್ಕಾರದ ಭೂಸ್ವಾಧೀನ ಪ್ರಸ್ತಾವನೆಗೆ ರೈತರ ಪ್ರತಿಕ್ರಿಯೆ ಮತ್ತು ಮುಂದಿನ ಕ್ರಮಗಳತ್ತ ಇದೀಗ ಗಮನ ಹರಿದಿದೆ
ಬೆಂಗಳೂರು
Bengaluru ಪಾರ್ಕ್ ಜಾಗ ಬಳಕೆಗೆ ವಿರೋಧ: ಸರ್ಕಾರದ ವಿರುದ್ಧ ಸಿಡಿದೆದ್ದ ನಾಗರಿಕರು, 6 ಪ್ರಮುಖ ಬೇಡಿಕೆ
ಬೆಂಗಳೂರು: ರಾಜ್ಯ ಸರ್ಕಾರದ ಮೂಲಸೌಕರ್ಯ ಯೋಜನೆಗಳಿಗೆ Bengaluru ರಿನ ಉದ್ಯಾನವನ ಹಾಗೂ ಉದ್ಯಾನಗಳ ಜಾಗವನ್ನು ಬಳಸಿಕೊಳ್ಳುವ ಸಚಿವ ಸಂಪುಟದ ನಿರ್ಧಾರಕ್ಕೆ ನಾಗರಿಕರು ಮತ್ತು ವಿವಿಧ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಪಾರ್ಕ್ಗಳ ಭೂಮಿಯನ್ನು ಇತರ ಕಾಮಗಾರಿಗಳಿಗೆ ಬಳಸುವುದರಿಂದ ನಗರದ ಪರಿಸರ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.
ಲಾಲ್ಬಾಗ್ನಲ್ಲಿ ಬೃಹತ್ ಬ್ಯಾನರ್ಗಳನ್ನು ಪ್ರದರ್ಶಿಸುವ ಮೂಲಕ ನಾಗರಿಕರು ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಮುಖ್ಯಮಂತ್ರಿ ಅವರಿಗೆ ಜಂಟಿ ಮನವಿ ಸಲ್ಲಿಸಿ, ಉದ್ಯಾನವನಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ನಾಗರಿಕ ಸಂಘಟನೆಗಳ ಪ್ರಕಾರ, ಉದ್ಯಾನವನಗಳು ಖಾಲಿ ಜಾಗವಲ್ಲ. ಅವು ನಗರದ ಉಷ್ಣಾಂಶ ನಿಯಂತ್ರಣ, ಮಳೆನೀರು ನಿರ್ವಹಣೆ, ಜೀವವೈವಿಧ್ಯ ಸಂರಕ್ಷಣೆ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಪ್ರಮುಖವಾದ ಮೂಲಸೌಕರ್ಯಗಳಾಗಿವೆ.
ಸಂಶೋಧನೆಗಳನ್ನು ಉಲ್ಲೇಖಿಸಿರುವ ಸಂಘಟನೆಗಳು, ಬೆಂಗಳೂರಿನ ಹಸಿರು ಪ್ರದೇಶಗಳು ಸುತ್ತಮುತ್ತಲಿನ ಪ್ರದೇಶಗಳಿಗಿಂತ ಸರಾಸರಿ 2.23 ಡಿಗ್ರಿ ಸೆಲ್ಸಿಯಸ್ವರೆಗೆ ತಂಪಾಗಿರುತ್ತವೆ ಎಂದು ಹೇಳಿದ್ದಾರೆ. ಉದ್ಯಾನವನಗಳಿಂದ ಉಂಟಾಗುವ ಈ ತಂಪಿನ ಪರಿಣಾಮ ಸುಮಾರು 347 ಮೀಟರ್ ವ್ಯಾಪ್ತಿಯವರೆಗೆ ಕಂಡುಬರುತ್ತದೆ ಎಂಬ ಮಾಹಿತಿಯನ್ನೂ ನೀಡಿದ್ದಾರೆ.
ಶೇ.28ರಷ್ಟು ವಾರ್ಡ್ಗಳಲ್ಲಿ ಪಾರ್ಕ್ಗಳೇ ಇಲ್ಲ!
ಐಐಹೆಚ್ಎಸ್ ಸಂಶೋಧನೆಯನ್ನು ಉಲ್ಲೇಖಿಸಿರುವ ನಾಗರಿಕ ಗುಂಪುಗಳು, ಬೆಂಗಳೂರಿನ ಸುಮಾರು 28 ಪ್ರತಿಶತ ವಾರ್ಡ್ಗಳಲ್ಲಿ ಒಂದೇ ಒಂದು ಉದ್ಯಾನವನ ಅಥವಾ ಸೂಕ್ತ ಹಸಿರು ಪ್ರದೇಶವಿಲ್ಲ ಎಂದು ಹೇಳಿದ್ದಾರೆ. ಈಗಿರುವ ಉದ್ಯಾನವನಗಳ ಜಾಗವನ್ನೂ ಮೂಲಸೌಕರ್ಯ ಯೋಜನೆಗಳಿಗೆ ಬಳಸಿಕೊಂಡರೆ ಪರಿಸರದ ಮೇಲಿನ ಒತ್ತಡ ಮತ್ತಷ್ಟು ಹೆಚ್ಚಲಿದೆ ಎಂದು ಎಚ್ಚರಿಸಿದ್ದಾರೆ.
ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆ
ನಾಗರಿಕ ಸಂಘಟನೆಗಳು ಸರ್ಕಾರದ ಮುಂದೆ ಪ್ರಮುಖವಾಗಿ ಆರು ಬೇಡಿಕೆಗಳನ್ನು ಇಟ್ಟಿವೆ.
- ಕರ್ನಾಟಕ ಸರ್ಕಾರಿ ಉದ್ಯಾನವನಗಳ ಸಂರಕ್ಷಣೆ ಕಾಯ್ದೆಗೆ ಉದ್ದೇಶಿಸಿರುವ ತಿದ್ದುಪಡಿಯನ್ನು ಹಿಂಪಡೆಯಬೇಕು.
- ಅಸ್ತಿತ್ವದಲ್ಲಿರುವ ಉದ್ಯಾನವನಗಳನ್ನು ನಿರ್ಮಾಣ ಕಾಮಗಾರಿಗಳಿಗೆ ಬಳಸುವುದನ್ನು ತಡೆಯಬೇಕು.
- ಯೋಜನೆಗಳಿಗೆ ಉದ್ಯಾನವನಗಳನ್ನು ಹೊರತುಪಡಿಸಿ ಪರ್ಯಾಯ ಜಾಗಗಳನ್ನು ಮೊದಲು ಪರಿಶೀಲಿಸಬೇಕು.
- ಹಸಿರು ಪ್ರದೇಶಗಳಿಗೆ ಸಂಬಂಧಿಸಿದ ಯೋಜನೆಗಳ ಕುರಿತು ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕು.
- ಪರಿಸರ, ಸಾಮಾಜಿಕ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಯೋಜನೆಗಳ ಪರಿಣಾಮದ ಸಮಗ್ರ ಅಧ್ಯಯನ ನಡೆಸಬೇಕು.
- ನಗರ ಯೋಜನೆಯಲ್ಲಿ ಉದ್ಯಾನವನಗಳನ್ನು ಅತ್ಯಗತ್ಯ ಸಾರ್ವಜನಿಕ ಆಸ್ತಿಯಾಗಿ ಗುರುತಿಸಿ ರಕ್ಷಿಸಬೇಕು.
ಬೆಂಗಳೂರು ನಗರಕ್ಕೆ ಇನ್ನಷ್ಟು ಹಸಿರು ಪ್ರದೇಶಗಳ ಅಗತ್ಯವಿದೆ. ಇರುವ ಉದ್ಯಾನವನಗಳ ಜಾಗವನ್ನು ಕಡಿಮೆ ಮಾಡುವ ಬದಲು ಅವುಗಳನ್ನು ಮತ್ತಷ್ಟು ಸಂರಕ್ಷಿಸಿ ವಿಸ್ತರಿಸಬೇಕು ಎಂದು ನಾಗರಿಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
-
ಬೆಂಗಳೂರು23 ಗಂಟೆಗಳು agoVande Mataram ಸಂಪೂರ್ಣ ಹಾಡುವ ವಿಚಾರಕ್ಕೆ ರಾಜಕೀಯ ರಂಪಾಟ; CM ಡಿಕೆಶಿ ಹೇಳಿದ್ದೇನು?
-
ದೇಶ22 ಗಂಟೆಗಳು agoBJP ಶಾಸಕರ ಖಾಸಗಿ ಕಾರು ತೊಳೆಯಲು ಅಗ್ನಿಶಾಮಕ ವಾಹನ ಬಳಕೆ? ವಿಡಿಯೋ ವೈರಲ್, ಭಾರೀ ಆಕ್ರೋಶ
-
ಬೆಂಗಳೂರು5 ಗಂಟೆಗಳು agoEid Milad ಮೆರವಣಿಗೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಹಲವರ ವಿರುದ್ಧ FIR, 6 ಮಂದಿ ಬಂಧನ
-
ದೇಶ4 ಗಂಟೆಗಳು agoMantralaya: ಇಂದಿನಿಂದ ಸಪ್ತರಾತ್ರೋತ್ಸವ ಆರಂಭ; ಮಹಾರಥೋತ್ಸವ, ತೆಪ್ಪೋತ್ಸವ ಸೇರಿದಂತೆ ಹಲವು ಕಾರ್ಯಕ್ರಮ
-
ಬೆಂಗಳೂರು4 ಗಂಟೆಗಳು agoNalanda English Medium School ವಾರ್ಷಿಕೋತ್ಸವದಲ್ಲಿ ಎಸ್. ಜಾನಕಿ ಗೀತೆಗಳಿಗೆ ವಿದ್ಯಾರ್ಥಿಗಳ ನೃತ್ಯ ನಮನ
-
ದೇಶ4 ಗಂಟೆಗಳು agoNepal Flood: ನೇಪಾಳದಲ್ಲಿ ಸಿಲುಕಿದ ಕನ್ನಡಿಗರೇ ಗಮನಿಸಿ; ಸರ್ಕಾರದಿಂದ Google Form ಬಿಡುಗಡೆ
-
ರಾಜ್ಯ5 ಗಂಟೆಗಳು agoB Nagendra ದಿಢೀರ್ Delhi ಭೇಟಿ; Congress High Command ಜೊತೆ ಮಹತ್ವದ ಮಾತುಕತೆ ಸಾಧ್ಯತೆ!
-
ಬೆಂಗಳೂರು4 ಗಂಟೆಗಳು agoAnand Sweets: ಸಿಹಿ ತಿನ್ನುವಾಗ ನಾಲಿಗೆ, ಹಲ್ಲಿಗೆ ಗಾಯ; ₹2,050 ಖರೀದಿಗೆ ಕಾನೂನು ನೋಟಿಸ್
