ಬೆಂಗಳೂರು
ಉಗ್ರರ ದಾಳಿ: ಜಮೀರ್ ಅಹಮದ್ ಖಾನ್ ಖಂಡನೆ

ಬೆಂಗಳೂರು : ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ಕೃತ್ಯ ಅತ್ಯಂತ ಹೇಯ ಹಾಗೂ ಅಮಾನವೀಯ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತೀವ್ರ ವಾಗಿ ಖಂಡಿಸಿದ್ದಾರೆ.
ಈ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 28 ಮಂದಿ ಬಲಿಯಾಗಿರುವುದು ಅತೀವ ನೋವು ತಂದಿದೆ.
ಪಹಲ್ಗಾಮ್ ಉಗ್ರರ ದಾಳಿ ಈ ಹಿಂದಿನ ಶಕ್ತಿಗಳನ್ನು ಭಾರತೀಯರೆಲ್ಲರೂ ಒಗ್ಗಟ್ಟಾಗಿ ಎದುರಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
ಜಮ್ಮು- ಕಾಶ್ಮೀರದಲ್ಲಿ 370 ವಿಧಿ ರದ್ದು ಗೊಂಡ ನಂತರ ಶಾಂತಿ ನೆಲೆಸಿದೆ ಎಂದು ಹೇಳಿದ್ದ ಕೇಂದ್ರ ಸರ್ಕಾರ ದೇಶದ ಭದ್ರತೆಯ ವಿಚಾರದಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ.
ಕೃತ್ಯದಲ್ಲಿ ಬಲಿಯಾದವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಬಿಬಿಎಂಪಿ
ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯ: ಜು.1ರಿಂದ ಹೊಸ ನಿಯಮ ಜಾರಿಗೆ..!

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಸ್ವತ್ತುಗಳು ಇ-ಖಾತಾ ಪಡೆದಿರುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿ ಆದೇಶಿಸಿದೆ.
ಈ ಸಂಬಂಧ ಸೋಮವಾರ ಆದೇಶ ಹೊರಡಿಸಿರುವ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು, ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶವನ್ನು ಜಾರಿ ಮಾಡಲಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೇ ಇ-ಖಾತಾ ನೀಡಲಾಗುತ್ತಿದೆ. ಆದುದರಿಂದ ಸ್ವತ್ತುಗಳ ದತ್ತಾಂಶವು ಇ-ಆಸ್ತಿ ತಂತ್ರಾಂಶದಲ್ಲಿ ಲಭ್ಯವಿರುತ್ತದೆ ಎಂದು ಹೇಳಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮತ್ತು ವಿತರಣೆ ವ್ಯವಸ್ಥೆ ಮಾಡಲಾಗಿದೆ. ಅದರ ಜತೆಗೆ ಸ್ವತ್ತುಗಳಿಗೆಇ-ಖಾತಾವನ್ನು ಆನ್ಲೈನ್ಮೂಲಕ ನೀಡಲಾಗುತ್ತಿದೆ. ಇದೀಗ ಎರಡೂ ತಂತ್ರಾಂಶವನ್ನು ಏಕೀಕರಣಗೊಳಿಸಲಾಗುತ್ತಿದೆ. ಹೀಗಾಗಿ ಕಟ್ಟಡನಕ್ಷೆ ಮಂಜೂರಾತಿಗೆ ಅರ್ಜಿಸಲ್ಲಿ ಸುವವರು ಮೊದಲು ಇ- ಖಾತಾವನ್ನು ಪಡೆದಿರಬೇಕಿದೆ.
ಹೀಗಾಗಿ ಜು. 1ರಿಂದ ನಕ್ಷೆ ಮಂಜೂರಾತಿಗೆ ಅರ್ಜಿ ಸಲ್ಲಿಸುವವರುಇ-ಖಾತಾ ಅಥವಾ ಇಪಿಐಡಿ ಸಂಖ್ಯೆಯನ್ನು ತಂತ್ರಾಂಶದಲ್ಲಿ ನಮೂದಿಸುವುದು ಹಾಗೂ ಇ- ಖಾತಾ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇ-ಖಾತಾ ಸಲ್ಲಿಸದ ಅರ್ಜಿಗಳನ್ನು ಕಟ್ಟಡ ನಕ್ಷೆ ಮಂಜೂರಾತಿಗೆ ಪರಿಗಣಿಸದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇನ್ನು, ನಂಬಿಕೆಯೊಂದಿಗೆ ಪರಿಶೀಲನೆ ವ್ಯವಸ್ಥೆ ಅಡಿಯಲ್ಲಿ ನಿಗದಿತ ಕಾಲಮಿತಿಯಲ್ಲಿ ತಾತ್ಕಾಲಿಕ ನಕ್ಷೆ ಮಂಜೂರಾತಿ ಹೊಣೆಯನ್ನು ಸಂಬಂಧಪಟ್ಟ ಸಹಾಯಕ ನಿರ್ದೇಶಕ (ನಗರ ಯೋಜನೆ) ಅವರಿಗೆ ನೀಡಲಾಗಿದೆ. ಒಂದು ವೇಳೆ ಸಹಾಯಕ ನಿರ್ದೇಶಕ (ನಗರ ಯೋಜನೆ) ನಿಗದಿತ ಕಾಲ ಮಿತಿಯಲ್ಲಿ ಅರ್ಜಿಗಳನ್ನು ಪರಿಶೀಲಿಸದಿದ್ದರೆ ತಂತ್ರಾಶದಲ್ಲಿ ಅರ್ಜಿಗಳಿಗೆ ಸ್ವಯಂಚಾಲಿತವಾಗಿ ಡೀಮ್ಡ್ ಅನುಮೋದನೆ ದೊರೆಯಲಿದೆ.
ಒಂದು ವೇಳೆ ನಕ್ಷೆ ಮಂಜೂರಾತಿ ಅರ್ಜಿಗಳು ಇ-ಖಾತಾ ಸೇರಿದಂತೆ ಇನ್ನಿತರ ದಾಖಲೆಗಳನ್ನು ಸಲ್ಲಿಸದೇ ಡೀಮ್ ಅನುಮೋದನೆ ದೊರೆತರೆ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಿ ನಿಯಮದ ಪ್ರಕಾರ ಶಿಸ್ತು ಕ್ರಮಕೈಗೊಳ್ಳುವುದಾಗಿ ಆದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.
5 ಲಕ್ಷ ನಾಗರಿಕರಿಗೆ ಅಂತಿಮ ಇ-ಖಾತಾ ವಿತರಣೆ
ಬಿಬಿಎಂಪಿ ಪಾಲಿಕೆ ವ್ಯಾಪ್ತಿಯಲ್ಲಿ ಈವರೆಗೂ 5 ಲಕ್ಷ ನಾಗರಿಕರು ಅಂತಿಮ ಇ-ಖಾತಾ ಪಡೆದಿದ್ದಾರೆ ಎಂದು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದ್ದಾರೆ.
25 ಲಕ್ಷಕ್ಕಿಂತ ಹೆಚ್ಚು ಕರಡು ಇ-ಖಾತಾಗಳು ಆನ್ಲೈನ್ನಲ್ಲಿ ಲಭ್ಯವಿದೆ. ನಾಗರಿಕರು ತಮ್ಮ ಆಧಾರ್ ಸಂಖ್ಯೆ, ಮಾರಾಟ ದಸ್ತಾವೇಜಿನ ಸಂಖ್ಯೆ, ಆಸ್ತಿಯ ತೆರಿಗೆ ಐ.ಡಿ, ಬೆಸ್ಕಾಂ ಸಂಖ್ಯೆ (ಖಾಲಿ ಜಾಗಕ್ಕೆ ಐಚ್ಛಿಕ) ಮತ್ತು ಆಸ್ತಿಯ ಫೋಟೋ ಹಾಕಬೇಕು. ಈ ಮಾಹಿತಿಗಳನ್ನು ನೀಡಿದ ನಂತರ ನಾಗರಿಕರಿಗೆ ಅಂತಿಮ ಇ-ಖಾತಾ ಕನಿಷ್ಠ 1 ರಿಂದ 2 ದಿನಗಳಲ್ಲಿ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.
ಪ್ರತಿದಿನ ಸುಮಾರು 3,000 ಜನರು ಈ ಪ್ರಕ್ರಿಯೆ ನಡೆಸುತ್ತಿದ್ದಾರೆ. ಮತ್ತು ಇಷ್ಟೇ ಸಂಖ್ಯೆಯವರಿಗೆ ಇ-ಖಾತಾ ಅನುಮೋದನೆ ದೊರೆಯುತ್ತಿದೆ. ಈವರೆಗೆ ಸುಮಾರು 5 ಲಕ್ಷ ನಾಗರಿಕರು ತಮ್ಮ ಇ-ಖಾತಾ ಪಡೆದುಕೊಂಡಿದ್ದಾರೆ. ಅರ್ಜಿ ಸಲ್ಲಿಕೆಯಾದ 1 ರಿಂದ 2 ದಿನಗಳಲ್ಲಿ ಇ-ಖಾತಾ ಅನುಮೋದಿತವಾಗಲಿದೆ. ನಾಗಕರಿರು ಇ-ಖಾತಾವನ್ನು ಆನ್ಲೈನ್ BBMPeAasthi.karnataka.gov.in ಮೂಲಕ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ
ದೇಶ
ರೇಷನ್ ಕಾರ್ಡ್ನಿಂದ ಏನೆಲ್ಲಾ ಪ್ರಯೋಜನ?: ನೀವು ಪಡೆದುಕೊಂಡಿದ್ದೀರಾ?

ಬೆಂಗಳೂರು: ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಅದರಲ್ಲಿ ಪ್ರಮುಖವಾಗಿ ಪಡಿತರ ಚೀಟಿಯೂ ಒಂದು.
ರೇಷನ್ ಕಾರ್ಡ್ ಇದ್ದರೆ ಆಯಾ ಕಾರ್ಡ್ಗಳನ್ನು ಅನುಸರಿಸಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕಡಿಮೆ ದರದಲ್ಲಿ ಅಕ್ಕಿ, ಬೇಳೆ, ಗೋಧಿ, ಸಕ್ಕರೆ ಸೇರಿ ಹಲವು ಆಹಾರ ಪದಾರ್ಥಗಳು ದೊರೆಯುತ್ತದೆ. ಬಿಪಿಎಲ್ ಕಾರ್ಡ್ದಾರರ ಕುಟುಂಬಕ್ಕೆ ಅಕ್ಕಿ, ಗೋಧಿ, ಸಕ್ಕರೆ ಮತ್ತಿತರ ಆಹಾರ ಪದಾರ್ಥಿಗಳು ಉಚಿತವಾಗಿ ದೊರೆತರೆ, ಎಪಿಎಲ್ ಕಾರ್ಡ್ದಾರರಿಗೆ ಸರ್ಕಾರ ನಿಗದಿಪಡಿಸಿದ ಕಡಿಮೆ ದರದಲ್ಲಿ ಪಡಿತರ ಸಿಗುತ್ತದೆ. ಇದರಿಂದ ಹಲವಾರು ಕುಟುಂಬಗಳು ನೆಮ್ಮದಿಯ ಜೀವನ ಸಾಗಿಸಬಹುದಾಗಿದೆ. ಇಷ್ಟೇ ಅಲ್ಲದೆ, ರೇಷನ್ ಕಾರ್ಡ್ ಇದ್ದರೆ ಇನ್ನೂ ಹಲವು ಸೌಲಭ್ಯಗಳು ಸರ್ಕಾರದಿಂದ ಉಚಿತವಾಗಿ ಸಿಗುತ್ತವೆ. ಅದೆಷ್ಟೋ ಜನರಿಗೆ ಇದರ ಸರಿಯಾದ ಮಾಹಿತಿ ಇರುವುದಿಲ್ಲ.
ಕಾರ್ಡ್ ಇದ್ದರೆ ಗ್ಯಾಸ್ ಸಿಲಿಂಡರ್, ಆರೋಗ್ಯ ವಿಮೆ, ಶಿಕ್ಷಣಕ್ಕೆ ಆರ್ಥಿಕ ನೆರವು, ಉಚಿತ ಹೊಲಿಗೆ ಯಂತ್ರ ಸೇರಿದಂತೆ ಹಲವು ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಸರ್ಕಾರದಿಂದ ಯಾವೆಲ್ಲಾ ಸೌಲಭ್ಯಗಳು ಸಿಗುತ್ತವೆ ಎಂಬುದರ ಮಾಹಿತಿ ಇಲ್ಲಿದೆ.
ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು: ಒಂದು ಕುಟುಂಬದ ಆರ್ಥಿಕ ಸ್ಥಿತಿಗತಿಯನ್ನು ರೇಷನ್ ಕಾರ್ಡ್ ತೋರಿಸುತ್ತಿರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಶಿಕ್ಷಣ ನೆರವು ಯೋಜನೆಗಳಲ್ಲಿ ಅರ್ಹತೆ ರೂಪದಲ್ಲಿ ರೇಷನ್ ಕಾರ್ಡ್ ಬಳಕೆ ಮಾಡಬಹುದು. ಶುಲ್ಕ ಮನ್ನಾ ಹಾಗೂ ವಿದ್ಯಾರ್ಥಿ ವೇತನ ಮತ್ತಿತರ ಸೌಲಭ್ಯ ದೊರೆಯುತ್ತದೆ. ಅಷ್ಟೇ ಅಲ್ಲದೆ, ವ್ಯಕ್ತಿಯ ಹೆಸರು, ವಯಸ್ಸು ಮತ್ತು ವಿಳಾಸ, ಕುಟುಂಬದ ವಿವರಗಳನ್ನು ಒಳಗೊಂಡಿರುವ ಕಾರಣ ರೇಷನ್ ಕಾರ್ಡ್ ಅನ್ನು ಪ್ರಮುಖ ಗುರುತಿನ ಚೀಟಿಯಾಗಿಯೂ ಬಳಸಬಹುದು. ಮತದಾನ ಮತ್ತಿತರ ಕಡೆ ಐಡಿ ಪ್ರೂಪ್ ಆಗಿ ಈ ಕಾರ್ಡ್ ಬಳಕೆ ಮಾಡಬಹುದು. ಕೆಲವು ಪಿಂಚಣಿ ಯೋಜನೆಗಳಿಗೆ ಅಥವಾ ಬ್ಯಾಂಕ್ನಲ್ಲಿ ಖಾತೆ ತೆರೆಯಲು ಸಹ ಪಡಿತರ ಚೀಟಿ ಬಳಸಬಹುದಾಗಿದೆ.
ಉಜ್ವಲ ಗ್ಯಾಸ್ ಸಿಲಿಂಡರ್ : ಅಡುಗೆ ಗ್ಯಾಸ್ ಇಲ್ಲದವರಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಸಿಗುತ್ತದೆ. ರೇಷನ್ ಕಾರ್ಡ್ ಬಳಸಿಕೊಂಡು ಈ ಯೋಜನೆ ಪಡೆಯುಬಹುದಾಗಿದೆ.
ಶ್ರಮಿಕ್ ಕಾರ್ಡ್ : ಅಸಂಘಟಿತ ವಲಯದ ಕಾರ್ಮಿಕರಿಗೆ ಶ್ರಮಿಕ್ ಕಾರ್ಡ್ ಯೋಜನೆಯಡಿ ರೇಷನ್ ಕಾರ್ಡ್ ಆಧಾರವಾಗಿ ಕೆಲಸದ ಲಾಭ, ಉದ್ಯೋಗ ಅವಕಾಶ ಸೇರಿದಂತೆ ಹಲವು ನೆರವು ದೊರೆಯುತ್ತದೆ. ಆ ಮೂಲಕ ಕಾರ್ಮಿಕರು ಕಾನೂನುಬದ್ಧವಾಗಿ ಸರ್ಕಾರದ ಸವಲತ್ತುಗಳನ್ನು ಪಡೆಯಬಹುದು ಎನ್ನುತ್ತಾರೆ ಅಧಿಕಾರಿಗಳು.
ರೈತರ ಬೆಳೆ ವಿಮೆಗೆ ಕಾರ್ಡ್ ಬಳಕೆ : ರೈತರ ಬೆಳೆ ವಿಮೆಗೂ ಈ ಕಾರ್ಡ್ ಬಳಕೆಯಾಗುತ್ತದೆ. ಕೃಷಿಯಲ್ಲಿ ನಷ್ಟ ಸಂಭವಿಸಿದರೆ ರೈತರು ರೇಷನ್ ಕಾರ್ಡ್ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಿ ಬೆಳೆ ನಷ್ಟ ಪರಿಹಾರ ಪಡೆಯಬಹುದು. ವಿಶೇಷವಾಗಿ ಬರ, ಪ್ರವಾಹ, ಮಳೆಹಾನಿ ವೇಳೆ ಗುರುತಿಗಾಗಿ ರೇಷನ್ ಕಾರ್ಡ್ ನೀಡಬಹುದು.
ಮನೆ ನಿರ್ಮಾಣಕ್ಕೂ ನೆರವು : ಎಷ್ಟೋ ಜನರಿಗೆ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಆರ್ಥಿಕ ನೆರವು ಸಿಗುತ್ತದೆ ಎಂಬುದೇ ಗೊತ್ತಿರುವುದಿಲ್ಲ. ರೇಷನ್ ಕಾರ್ಡ್ದಾರರು ಮನೆಗೆ ಅರ್ಜಿ ಸಲ್ಲಿಸಿ ಹಣದ ಸಹಾಯ ಪಡೆದು ತಮ್ಮ ಸ್ವಂತ ಮನೆ ಕಟ್ಟಿಕೊಳ್ಳಬಹುದು. ಪ್ರಧಾನ ಮಂತ್ರಿ ಅವಾಜ್ ಯೋಜನೆ (ರಾಜ್ಯ ಸರ್ಕಾರದಲ್ಲೂ ಈ ಯೋಜನೆ ಇದೆ) ಬಳಕೆ ಆಗುತ್ತದೆ. ಜೊತೆಗೆ ಕಾರ್ಡ್ ಇದ್ದರೆ ಮನೆ ಸಾಲದ ಮೇಲಿನ ಸಬ್ಸಿಡಿ ಸಹ ಸಿಗುತ್ತದೆ.
ಮಹಿಳೆಯರಿಗೆ ಹೊಲಿಗೆ ಯಂತ್ರ : ಮಹಿಳೆಯರು ಸ್ವಾವಲಂಬಿ ಆಗಲು ರಾಜ್ಯ ಸರ್ಕಾರ ನೀಡುತ್ತಿರುವ ಮತ್ತೊಂದು ಯೋಜನೆ ಎಂದರೆ ಅದು ಉಚಿತ ಹೊಲಿಗೆ ಯಂತ್ರ ವಿತರಣೆ. ಪಡಿತರ ಚೀಟಿ ಹೊಂದಿರುವ ಮಹಿಳೆಯರು ಹೊಲಿಗೆ ಯಂತ್ರವನ್ನು ಉಚಿತವಾಗಿ ಪಡೆದು ಸ್ವಂತ ಉದ್ಯೋಗ ಪ್ರಾರಂಭಿಸಬಹುದು. ಮಹಿಳೆಯರ ಸ್ವಾವಲಂಬಿ ಬದುಕಿಗೆ ಈ ಯೋಜನೆ ಪ್ರಮುಖವಾಗಿದೆ.
ಬೆಂಗಳೂರು
ಪತ್ನಿ ಬಳಿಯೂ ರಾಜಕೀಯ ಮಾತಾಡಲ್ಲ, ಪರಂ ಗರಂ!

ಬೆಂಗಳೂರು: ಮಂಗಳೂರಲ್ಲಿ ನಡೆದ ಸರಣಿ ಕೊಲೆ ಪ್ರಕರಣಗಳ ಬಳಿಕ ಇತ್ತೀಚಿಗೆ ಆರ್ಸಿಬಿ ತಂಡ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಘಟನೆಯಲ್ಲಿ 11 ಜನ ಉಸಿರು ಚೆಲ್ಲಿದ್ದಾರೆ,
ನಿರಂತರವಾಗಿ ಕಾನೂನು ವ್ಯವಸ್ಧೆ ಹದಗೆಡುತ್ತಿದೆ, ಗೃಹ ಸಚಿವ ಜಿ.ಪರಮೇಶ್ವರ್ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳ ಆಗ್ರಹ ಬೆನ್ನಲ್ಲೇ ತಮಗಿರುವ ಗೃಹ ಇಲಾಖೆ ಖಾತೆ ಬದಲಾಯಿಸಿ ಎಂದು ಪರಮೇಶ್ವರ್ ಅವರು ಕೇಳಿಕೊಂಡಿದ್ದಾರೆ ಎಂಬ ವದಂತಿಗೆ ಅವರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ,
ಏನೇ ಇದ್ದರೂ ನನ್ನ ಬಳಿಯೇ ಸ್ಪಷ್ಟನೇ ಕೇಳಿ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ನಾನು ನನ್ನ ಪತ್ನಿ ಬಳಿಯೂ ಯಾವತ್ತೂ ರಾಜಕೀಯ ಮಾತನಾಡಲ್ಲ, ಹೀಗಿರವಾಗ ಈ ವದಂತಿ ಏಕೆ? ಖಾತೆ ಬದಲಾವಣೆ ಅಂತಾ ನಿಮಗೆ ಯಾರು ಹೇಳಿದ್ದಾರೆ? ಏನೇ ಇದ್ದರೂ ನನ್ನ ಬಳಿ ಮಾಹಿತಿ ಪಡೆಯಿರಿ ಎಂದಿದ್ದಾರೆ,
ನಾನು ಸಾಫ್ಟ್ ಆಗಿಯೇ ನಡೆದುಕೊಂಡಿದ್ದೇನೆ, ಏನೇ ಕೇಳಿ ನಾನೇ ಉತ್ತರ ಕೊಡುತ್ತೇನೆ, ಸುಮ್ಮನೇ ಒಬ್ಬರ ವ್ಯಕ್ತಿತ್ವದ ಕೊಲೆ ಮಾಡಬಾರದು, ಅದು ಯಾರಿಗೂ ಶೋಭೆ ತರಲ್ಲ, ಖಾತೆ ಬದಲಾಯಿಸಿ ಎಂದು ಸಿಎಂ ಹೇಳಿದ್ದಾರೆ ಎಂಬ ಸುದ್ದಿ ಸುಳ್ಳು, ಈ ರೀತಿ ಹೇಳಬೇಡಿ, ಇಂತಹ ವದಂತಿಯಿಂದ ನಮ್ಮ ಮತದಾರರು ಅಭಿಮಾನಿಗಳಿಗೆ ತಪ್ಪಾಗಿ ಸಂದೇಶ ಹೋಗುತ್ತದೆ, ಇದೇ ಖಾತೆಯನ್ನೇ ನೀಡಿ ಎಂದು ನಾನು ಯಾರಿಗೂ ಕೇಳಿಲ್ಲ, ಕಾಲ್ತುಳಿತ ದುರಂತದಿಂದ ಎಲ್ಲರಿಗೂ ನೋವಾಗಿದೆ, ಇದರ ಮಧ್ಯೆ ಖಾತೆ ಬದಲಾವಣೆ ಎಂಬ ಸಂಗತಿ ಸತ್ಯಕ್ಕೆ ದೂರವಾದದ್ದು ಎಂದು ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.
-
ಬಿಬಿಎಂಪಿ4 weeks ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ