Connect with us

ಬೆಂಗಳೂರು

ಕನ್ನಡದ ಒಂದೇ ಒಂದು ಸಿನಿಮಾ (Cinema) ಹಿಟ್ ಲಿಸ್ಟ್ ಸೇರಿಲ್ಲ Special Report

Published

on

ಕನ್ನಡದ ಮಾರ್ಕೆಟ್ ನ ಕಬ್ಜಾ ಮಾಡ್ಕೊತಿದ್ದಾವಾ ಪರಭಾಷೆ ಸಿನಿಮಾಗಳು? ಮಲಯಾಳಂ ಸಿನಿಮಾಗಳು (Malayalam Cinema) ಗಳಿಸ್ತಿವೆ ಕೋಟಿ ಕೋಟಿ ಹಣ? ಈ ವರ್ಷ ಕನ್ನಡದ ಒಂದೇ ಒಂದು ಸಿನಿಮಾ (Cinema) ಹಿಟ್ ಲಿಸ್ಟ್ ಸೇರಿಲ್ಲ. ಆ ಕುರಿತ ಆ ಸ್ಪೆಷಲ್ ರಿಪೋರ್ಟ್ ಇಲ್ಲಿದೆ .

ಕನ್ನಡ ನೆಲದಲ್ಲಿ ಕನ್ನಡಿಗನೇ ಸಾರ್ವಭೌಮ. ಈ ಮಾತು ಸಿನಿಮಾ ವಿಚಾರದಲ್ಲಿ ಸುಳ್ಳಾಗ್ತಿದೆ. ಕನ್ನಡಿಗರು ಕನ್ನಡ ಸಿನಿಮಾಗಳತ್ತ ಬೆನ್ನು ಮಾಡಿ ಕೂತಿದ್ದಾರೆ. ಅದರಲ್ಲೂ ಥಿಯೇಟರಿಗೆ ಬರಲು ಜಪ್ಪಯ್ಯ ಅಂದ್ರೂ ಒಪ್ಪುತ್ತಿಲ್ಲ ಕನ್ನಡ ಸಿನಿರಸಿಕರು.

ಪರಿಣಾಮ ಈ ವರ್ಷ ಶುರುವಾಗಿ ನಾಲ್ಕು ತಿಂಗಳಾದ್ರೂ ಒಂದೇ ಒಂದು ಕನ್ನಡ ಸಿನಿಮಾ ಹಿಟ್ ಲಿಸ್ಟ್ ಸೇರಿಲ್ಲ. ಬಾಕ್ಸಾಫೀಸ್ ನಲ್ಲಿ ಝಣ ಝಣ ಕಾಂಚಾಣ ಎಣಿಸಿಲ್ಲ.

ಹೌದು, 2025 ಸ್ಯಾಂಡಲ್ ವುಡ್ ಪಾಲಿಗೆ ದುಸ್ವಪ್ನವಾಗಿದೆ. ಎಷ್ಟು ಒಳ್ಳೆಯ ಸಿನಿಮಾ ಕೊಟ್ರೂ ಜನ ಬರ್ತಿಲ್ಲ. ಇನ್ನೆಂಥ ಸಿನಿಮಾ ಕೊಡಬೇಕು ಗುರು ಅಂತ ಸಿನಿಮಾ ಮಂದಿ ತಲೆ ಕೆರೆದುಕೊಳ್ಳುವಂತೆ ಮಾಡಿದೆ.

ಜನವರಿಯಿಂದ ಏಪ್ರಿಲ್ ಕೊನೆಯ ತನಕ ಕನ್ನಡದ 80 ಸಿನಿಮಾಗಳು ರಿಲೀಸ್ ಆಗಿವೆ. ಅದರಲ್ಲಿ ಛೂಮಂತರ್, ಯುದ್ಧಕಾಂಡ, ಫಾರೆಸ್ಟ್ ನಂತಹ ಸಿನಿಮಾಗಳು ಪಾಸಿಟಿವ್ ರಿಪೋರ್ಟ್ ಪಡ್ಕೊಂಡಿವೆ. ಪರ್ವಾಗಿಲ್ಲ ಒಮ್ಮೆ ನೋಡಬಹುದು ಎಂಬ ಟಾಕ್ ಪಡ್ಕೊಂಡಿವೆ.. ಆದ್ರೆ ರಿಸಲ್ಟ್ ಮಾತ್ರ ಶೂನ್ಯ.

ಅತ್ಯಧಿಕ ಗಳಿಕೆಯೇ 6 ಕೋಟಿಯಾ?

ಕನ್ನಡದ ಸಿನಿಮಾವೊಂದು ಈ ವರ್ಷ ಹೈಯೆಸ್ಟ್ ಗಳಿಕೆ ಕಂಡಿದೆ ಅಂದ್ರೆ? ಅದು ಶರಣ್ ನಟನೆಯ ಛೂಮಂತರ್ ಸಿನಿಮಾ. ಈ ಸಿನಿಮಾ 5 ರಿಂದ 6 ಕೋಟಿ ಗಳಿಸಿದೆ ಎನ್ನಲಾಗ್ತಿದೆ. ಇದುವೆ ಈ ವರ್ಷದ ಹೈಯೆಸ್ಟ್ ಗಳಿಕೆ ಇಲ್ಲಿತನಕ ಅಂದ್ರೆ? ಅದು ನಿಜಕ್ಕೂ ದುರಂತವೇ ಸರಿ.

ಕನ್ನಡ ಸಿನಿಮಾಗಳ ಕಡೆ ಮಾತ್ರ ಯಾಕೆ ನಿರಾಸಕ್ತಿ?

ಇದು ಕನ್ನಡ ನೆಲದಲ್ಲಿ ಕನ್ನಡ ಸಿನಿಮಾಗಳಿಗೆ ಮಾತ್ರ ನಿರಾಸಕ್ತಿ. ಆದ್ರೆ ಇದೇ ಕನ್ನಡ ಮಣ್ಣಲ್ಲಿ ಪರಭಾಷೆಯ ಸಿನಿಮಾಗಳು ಕೋಟಿ ಕೋಟಿಯನ್ನ ಲೂಟಿ ಮಾಡ್ತಾ ಇವೆ.. ಅದಕ್ಕೆ ಬೆಸ್ಟ್ ಎಕ್ಸಾಂಪಲ್ ಅಂದ್ರೆ? ಮೋಹನ್ ಲಾಲ್ ನಟನೆಯ ಎಂಪುರಾನ್ ಸಿನಿಮಾ.. ಈ ಸಿನಿಮಾ ಬಗ್ಗೆ ಅಂತಹ ಪಾಸಿಟಿವ್ ಟಾಕ್ ಏನು ಕೇಳಿ ಬರಲಿಲ್ಲ.. ನೋಡಿದವರೆಲ್ಲಾ ಬಯ್ಕೊಂಡೇ ಆಚೆ ಬಂದ್ರು.. ಆದ್ರೂ ಸಹ ಈ ಸಿನಿಮಾ ಕರ್ನಾಟಕದಲ್ಲಿಯೇ 15 ಕೋಟಿ ಹಣ ಗಳಿಸಿದೆ.. ಹಂಗಂತ ಕೇವಲ ಮಲಯಾಳಿಗಳು ಮಾತ್ರ ಈ ಸಿನಿಮಾವನ್ನ ನೋಡಿಲ್ಲ.. ಕನ್ನಡಿಗರು ಸಹ ಮುಗಿಬಿದ್ದು ನೋಡಿದ್ದಾರೆ.

ಹೌಸ್​ಫುಲ್ ಪ್ರದರ್ಶನ ಕಾಣ್ತಿದೆ ಪರಭಾಷೆ ಸಿನಿಮಾ

ಅಷ್ಟೇ ಅಲ್ಲದೆ ರಿಸೆಂಟಾಗಿ ಬಿಡುಗಡೆಯಾದ ತುಡರುಮ್ ಎಂಬ ಸಿನಿಮಾ ಬೆಂಗಳೂರು, ಮಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಹಲವು ಪ್ರಮುಖ ನಗರಗಳಲ್ಲಿ ಬಿಡುಗಡೆಯಾದ 9 ದಿನಗಳಾದ್ರೂ ಸಹ ಹೌಸ್ ಫುಲ್ ಪ್ರದರ್ಶನ ಕಾಣ್ತಿದೆ.

ಬೆಂಗಳೂರಿನಲ್ಲಿಯೇ ತುಡರುಮ್ ಮಲಯಾಳಂ ವರ್ಷನ್ 300 ಪ್ಲಸ್ ಶೋ ಪ್ರದರ್ಶನ ಕಾಣ್ತಿದೆ. ಅಷ್ಟೂ ಶೋಸ್ ಫಾಸ್ಟ್ ಫಿಲ್ಲಿಂಗ್ ಆಗ್ತಿವೆ ಅಂದ್ರೆ? ಕರ್ನಾಟಕ ನೆಲದಲ್ಲಿ ಪರಭಾಷೆ ಸಿನಿಮಾಗಳ ಅಬ್ಬರ ಹೇಗಿದೆ ಎಂಬುದಕ್ಕೆ ಸಾಕ್ಷಿ.

ಕನ್ನಡ ಸಿನಿಮಾಗೆ ಮಾತ್ರ ನೀರಸ ಪ್ರತಿಕ್ರಿಯೆ

ಹಾಗೆ ಅಜಿತ್ ನಟನೆಯ ಗುಡ್ ಬ್ಯಾಡ್ ಅಗ್ಲಿ, ವೆಂಕಟೇಶ್ ನಟನೆಯ ಸಂಕ್ರಾತಿಕಿ ವಸ್ತುನ್ನಾಮ್, ನಾನಿ ನಟನೆಯ ಹಿಟ್3 ಸಿನಿಮಾಗಳು ಸಹ ಕರ್ನಾಟಕದಲ್ಲಿ ಒಳ್ಳೆಯ ಗಳಿಕೆಯನ್ನ ಕಾಣ್ತಿವೆ.. ಆದ್ರೆ ಕನ್ನಡ ಸಿನಿಮಾಗಳು ಮಾತ್ರ ಯಾವುದೇ ಪೈಪೋಟಿಯನ್ನ ಕೊಡಲಾಗದೆ ನೀರಸ ಪ್ರತಿಕ್ರಿಯೆಯನ್ನ ಪಡ್ಕೊಳ್ತಿವೆ.

ಕರ್ನಾಟಕದ ಎಷ್ಟೋ ಸಿನಿಮಾ ಮಂದಿರಗಳು ಹಾಕಲು ಒಳ್ಳೆಯ ಕನ್ನಡ ಸಿನಿಮಾಗಳಿಲ್ಲದೆ. ಅನಿವಾರ್ಯವಾಗಿ ಪರಭಾಷೆ ಸಿನಿಮಾಗಳಿಗೆ ಮಣೆ ಹಾಕುವ ನಿರ್ಧಾರಕ್ಕೆ ಬಂದಿವೆ.. ಇಷ್ಟೆಲ್ಲಾ ಆದ್ರೂ ಸಹ ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿಯಾಗಲಿ, ಕಲಾವಿದರ ಸಂಘವಾಗಲಿ, ನಿರ್ಮಾಪಕರ ಸಂಘವಾಗಲಿ ಮುಂದೇನು ಮಾಡಬೇಕು ಎಂಬ ಚಿಂತನೆ ನಡೆಸಿದಂತೆ ಇಲ್ಲ.

ಕನ್ನಡ ಸಿನಿಮಾಗಳ ಈ ಸ್ಥಿತಿಗೆ ಈ ಗತಿಗೆ ಪ್ಯಾನ್ ಇಂಡಿಯಾ ಎಂಬ ಟ್ರೆಂಡ್ ನ ಹಿಂದೆ ಬಿದ್ದಿದ್ದೇ ಕಾರಣ. ಸ್ಟಾರ್ ನಟರು ಮೂರು ವರ್ಷಕ್ಕೆ ಒಂದು ಸಿನಿಮಾ ಮಾಡ್ಕಂಡು ಕಾಲಹರಣ ಮಾಡ್ತಿರೋದೆ ಕಾರಣ ಎಂಬುದು ಸಿನಿರಂಗದಲ್ಲಿಯೇ ಕೇಳಿ ಬರ್ತಿರೋ ಅಪಸ್ವರ. ಸದ್ಯಕ್ಕಂತೂ ಕನ್ನಡ ಚಿತ್ರರಂಗಕ್ಕೆ ಯಾವುದೇ ಆಶಕಿರಣ ಕಾಣಿಸ್ತಾ ಇಲ್ಲ. ಸದ್ಯದ ಪರಿಸ್ಥಿತಿ ಕಂಡು ದೊಡ್ಡ ದೊಡ್ಡವರೇ ಹೆದರುವಂತಹ ಪರಿಸ್ತಿತಿ ಇದೆ. ಹಾಗೆ ಕನ್ನಡ ಸಿನಿಮಾಗಳು ಅಂದ್ರೆ ಸ್ಯಾಟ್ ಲೈಟ್ ರೈಟ್ಸ್ ಸೇಲಾಗ್ತಿಲ್ಲ. ಒಟಿಟಿಗೆ ಕೇಳೋರೆ ಇಲ್ಲ.

ಹಿಂಗಾದ್ರೆ ಹೆಂಗೆ ಗುರು? ಇದಕ್ಕೆ ಶಾಸ್ವತ ಪರಿಹಾರ ಕಂಡು ಹಿಡಿಯೋ ನಿಟ್ಟಿನಲ್ಲಿ ಚಿತ್ರರಂಗ ಒಮ್ಮತದಿಂದ ಕಾರ್ಯಕ್ರಮವನ್ನ ರೂಪಿಸಬೇಕಿದೆ.

ದೇಶ

ಬೆಂಗಳೂರು ಜೀವನ ವೆಚ್ಚಕ್ಕೆ ಸವಾಲು: ಮಹಿಳೆಯ ಬಜೆಟ್ ಟ್ರಾವೆಲ್ ಸ್ಟೋರಿ

Published

on

By

ಬೆಂಗಳೂರು: ಐಷಾರಾಮಿ ಜೀವನಶೈಲಿ ಮತ್ತು ಹೆಚ್ಚುತ್ತಿರುವ ವೆಚ್ಚಗಳಿಗೆ ಹೆಸರಾದ Bengaluru ನಗರದಲ್ಲಿ ಕೇವಲ 500 ರೂ.ಗಳಲ್ಲಿ ದಿನ ಕಳೆಯಲು ಸಾಧ್ಯವೇ ಎಂಬ ಪ್ರಶ್ನೆಗೆ ಯುವತಿ ನೀಡಿದ ಉತ್ತರ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪಶ್ಚಿಮ ಬಂಗಾಳ ಮೂಲದ ಪ್ರಿಯಾಂಕಾ ಮಂಡಲ್ ಎಂಬ ಮಹಿಳೆ, ಸೀಮಿತ ಬಜೆಟ್‌ನಲ್ಲಿ ನಗರ ಜೀವನ ಹೇಗಿರುತ್ತದೆ ಎಂಬುದನ್ನು ಪರೀಕ್ಷಿಸಲು ಮುಂದಾಗಿದ್ದರು. ದಿನವನ್ನು ಇಡ್ಲಿ ಉಪಹಾರದಿಂದ ಆರಂಭಿಸಿದ ಅವರು, ಕ್ಯಾಬ್ ಬದಲು ಮೆಟ್ರೋ ಪ್ರಯಾಣವನ್ನು ಆಯ್ಕೆ ಮಾಡಿಕೊಂಡರು. ಇದರಿಂದ ಖರ್ಚನ್ನು ಕಡಿಮೆ ಮಾಡಲು ಸಹಾಯವಾಯಿತು.

ಹಗಲಿನಲ್ಲಿ ಚಹಾ ತೆಗೆದುಕೊಂಡು ಸಣ್ಣ ವಿರಾಮ ಮಾಡಿಕೊಂಡ ಅವರು, ಮಧ್ಯಾಹ್ನ ಊಟದ ವೇಳೆಗೆ ಸವಾಲು ಎದುರಿಸಿದರು. ಆಹಾರದ ಬೆಲೆಗಳು ಹೆಚ್ಚಿರುವುದರಿಂದ, 120 ರೂ. ಒಳಗೆ ಊಟ ಮುಗಿಸುವ ಗುರಿ ಇಟ್ಟುಕೊಂಡು ಖರ್ಚನ್ನು ನಿಯಂತ್ರಿಸಿದರು.

ಸಂಜೆ ವೇಳೆ ವಡಾ ಪಾವ್ ಮತ್ತು ಚಹಾ ಸೇವಿಸಿ ದಿನವನ್ನು ಮುಗಿಸಿದ ಪ್ರಿಯಾಂಕಾ, ಅಚ್ಚರಿಯ ರೀತಿಯಲ್ಲಿ ತಮ್ಮ ಬಜೆಟ್‌ನಿಂದ ಸುಮಾರು 200 ರೂ. ಉಳಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಕಡಿಮೆ ಹಣದಲ್ಲೂ ಸರಿಯಾದ ಯೋಜನೆ ಇದ್ದರೆ ದಿನವನ್ನು ನಿರ್ವಹಿಸಬಹುದು ಎಂಬುದನ್ನು ಅವರು ತೋರಿಸಿದ್ದಾರೆ.

ಈ ವಿಡಿಯೋ ವೈರಲ್ ಆದ ಬಳಿಕ, ಹಲವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಕೆಲವರು Indira Canteen ನಲ್ಲಿ ಕಡಿಮೆ ದರದಲ್ಲಿ ಊಟ ಸಿಗುತ್ತದೆ ಎಂದು ಸಲಹೆ ನೀಡಿದ್ದಾರೆ. ಮತ್ತೊಬ್ಬರು, ಇದು ಒಬ್ಬರಿಗೆ ಮಾತ್ರ ಸಾಧ್ಯ, ಕುಟುಂಬದೊಂದಿಗೆ ಬದುಕುವುದು ಬೆಂಗಳೂರಿನಲ್ಲಿ ಕಷ್ಟಕರ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ, ಈ ಪ್ರಯೋಗ ನಗರ ಜೀವನದ ಖರ್ಚು ಹಾಗೂ ಬಜೆಟ್ ನಿರ್ವಹಣೆ ಬಗ್ಗೆ ಹೊಸ ಚರ್ಚೆಗೆ ಕಾರಣವಾಗಿದೆ.

Continue Reading

ಅಪರಾಧ

ಶಕ್ತಿ ಯೋಜನೆ ಹೆಸರಿನಲ್ಲಿ ಲೂಟಿ: BMTC ಸಿಬ್ಬಂದಿ ವಿರುದ್ಧ ಕಠಿಣ ಕ್ರಮ

Published

on

By

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುತ್ತಿದ್ದರೆ, Bangalore Metropolitan Transport Corporation ನಲ್ಲಿ ಕೆಲವು ನೌಕರರು ಇದನ್ನು ದುರುಪಯೋಗ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕೆಲವು ನಿರ್ವಾಹಕರು ಪುರುಷ ಪ್ರಯಾಣಿಕರಿಗೆ ಉಚಿತ ಟಿಕೆಟ್ ನೀಡಿ, ಅವರಿಂದ ಹಣ ವಸೂಲಿ ಮಾಡುತ್ತಿದ್ದರೆಂಬ ಆಘಾತಕಾರಿ ವಿಚಾರ ಪತ್ತೆಯಾಗಿದೆ. ಕನ್ನಡದಲ್ಲಿ ಮಾತ್ರ ಮುದ್ರಿತವಾಗಿರುವ ಟಿಕೆಟ್ ಮಾಹಿತಿಯನ್ನು ಬಳಸಿಕೊಂಡು, ಕನ್ನಡ ಓದಲು ಬಾರದ ಹೊರರಾಜ್ಯದ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಈ ದಂಧೆ ನಡೆಸಲಾಗುತ್ತಿತ್ತು.

ಇನ್ನಷ್ಟು ಗಂಭೀರವಾಗಿ, ಅಧಿಕೃತ ಯುಪಿಐ ಕ್ಯೂಆರ್ ಕೋಡ್‌ಗಳನ್ನು ತೆಗೆದುಹಾಕಿ, ತಮ್ಮ ವೈಯಕ್ತಿಕ ಖಾತೆಗಳ ಕ್ಯೂಆರ್ ಕೋಡ್ ಮೂಲಕ ಹಣವನ್ನು ನೇರವಾಗಿ ತಮ್ಮ ಖಾತೆಗೆ ವರ್ಗಾಯಿಸಿಕೊಳ್ಳಲಾಗುತ್ತಿತ್ತು. ಈ ಮೂಲಕ ಸಾರಿಗೆ ನಿಗಮದ ಆದಾಯಕ್ಕೂ ನಷ್ಟ ಉಂಟಾಗಿದೆ.

ದೂರುಗಳ ಆಧಾರದ ಮೇಲೆ ನಡೆಸಿದ ತನಿಖೆಯಲ್ಲಿ ಹತ್ತಕ್ಕೂ ಹೆಚ್ಚು ಸಿಬ್ಬಂದಿ ಈ ಅಕ್ರಮದಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. ಇದರಲ್ಲಿ ನಾಲ್ವರು ಪ್ರಮುಖ ನಿರ್ವಾಹಕರನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ. ಅವರ ಖಾತೆಗಳಲ್ಲಿ ಸಾವಿರಾರು ರೂಪಾಯಿಗಳ ಅಕ್ರಮ ಹಣ ವರ್ಗಾವಣೆ ನಡೆದಿರುವುದು ದೃಢಪಟ್ಟಿದೆ.

ಈ ಘಟನೆ ಹಿನ್ನೆಲೆ, ಬಿಎಂಟಿಸಿ ಅಧಿಕಾರಿಗಳು ಉಳಿದ ಸಿಬ್ಬಂದಿಗಳ ಮೇಲೂ ನಿಗಾ ವಹಿಸಿದ್ದು, ಇಂತಹ ದುರುಪಯೋಗದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಒಟ್ಟಿನಲ್ಲಿ, ಸಾರ್ವಜನಿಕರಿಗೆ ನೀಡಲಾಗುತ್ತಿರುವ ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುವ ಇಂತಹ ಘಟನೆಗಳು ಸಾರಿಗೆ ವ್ಯವಸ್ಥೆಯ ಮೇಲ್ವಿಚಾರಣೆ ಬಲಪಡಿಸುವ ಅಗತ್ಯವಿದೆ ಎಂಬುದನ್ನು ಸ್ಪಷ್ಟಪಡಿಸುತ್ತವೆ.

Continue Reading

ದೇಶ

ಜಮೀರ್ ವಿರುದ್ಧ ಮುಸ್ಲಿಂ ನಾಯಕರ ಅಸಮಾಧಾನ: ಕಾಂಗ್ರೆಸ್‌ಗೆ ಹೊಸ ತಲೆನೋವು

Published

on

By

ಬೆಂಗಳೂರು: ದಾವಣಗೆರೆ ಉಪಚುನಾವಣೆ ಮುಗಿದರೂ ಕಾಂಗ್ರೆಸ್ ಪಕ್ಷದ ಒಳಜಗಳ ಮಾತ್ರ ಇನ್ನೂ ಶಮನವಾಗಿಲ್ಲ. Indian National Congress ಒಳಗೆ ಬಂಡಾಯ, ಅಸಮಾಧಾನ ಮತ್ತಷ್ಟು ತೀವ್ರವಾಗುತ್ತಿದೆ. ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡದ ವಿಚಾರವಾಗಿ ಆರಂಭವಾದ ಅಸಮಾಧಾನ ಈಗ ಚುನಾವಣೆಯ ಬಳಿಕವೂ ಮುಂದುವರಿದಿದೆ.

ಸಚಿವ Zameer Ahmed Khan ವಿರುದ್ಧ ಸ್ವಪಕ್ಷದವರೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡದಿರುವುದು ಹಾಗೂ ಮುಸ್ಲಿಂ ನಾಯಕರನ್ನು ಮನವೊಲಿಸಲು ವಿಫಲವಾದ ಕಾರಣ, ಅವರ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿಬರುತ್ತಿದೆ. ಈ ವಿಚಾರವಾಗಿ ಹೈಕಮಾಂಡ್‌ಗೆ ವರದಿ ಕೂಡ ಸಲ್ಲಿಕೆಯಾಗಿದೆ ಎನ್ನಲಾಗಿದೆ.

ಇನ್ನೊಂದೆಡೆ, ಡಿಸಿಎಂ D. K. Shivakumar ಪ್ರತಿಕ್ರಿಯಿಸಿ, ಈ ಸಂಬಂಧ ವರದಿಗಳನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಆರೋಪ-ಪ್ರತ್ಯಾರೋಪಗಳು ಸಹಜವಾದರೂ, ಪಕ್ಷವು ಎಲ್ಲವನ್ನೂ ಗಮನಿಸುತ್ತಿದೆ ಎಂದಿದ್ದಾರೆ.

ಈ ನಡುವೆ ಸಂಪುಟ ಪುನಾರಚನೆ ವಿಚಾರವೂ ಕಾಂಗ್ರೆಸ್‌ನಲ್ಲಿ ಮತ್ತೆ ಚರ್ಚೆಗೆ ಬಂದಿದೆ. ಸುಮಾರು 40ಕ್ಕೂ ಹೆಚ್ಚು ಹಿರಿಯ ಶಾಸಕರು ದೆಹಲಿಗೆ ತೆರಳಿ, Mallikarjun Kharge ಹಾಗೂ Rahul Gandhi ಅವರನ್ನು ಭೇಟಿ ಮಾಡಿ ಸಚಿವ ಸ್ಥಾನಕ್ಕಾಗಿ ಒತ್ತಾಯ ಮಂಡಿಸಲು ತಯಾರಾಗಿದ್ದಾರೆ.

ಇದರ ಜೊತೆಗೆ, ಮುಖ್ಯಮಂತ್ರಿ Siddaramaiah ಐದು ವರ್ಷಗಳ ಕಾಲ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಸಚಿವರು ಸ್ಪಷ್ಟಪಡಿಸಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.

ಒಟ್ಟಿನಲ್ಲಿ ದಾವಣಗೆರೆ ಉಪಚುನಾವಣೆ ಕಾಂಗ್ರೆಸ್‌ಗೆ ಒಳಜಗಳದ ಬಾಗಿಲು ತೆರೆದಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ರಾಜಕೀಯದಲ್ಲಿ ಮತ್ತಷ್ಟು ಬದಲಾವಣೆಗಳ ಸಾಧ್ಯತೆ ಹೆಚ್ಚಾಗಿದೆ.

Continue Reading

Trending