Connect with us

ಬೆಂಗಳೂರು

ಕನ್ನಡದ ಒಂದೇ ಒಂದು ಸಿನಿಮಾ (Cinema) ಹಿಟ್ ಲಿಸ್ಟ್ ಸೇರಿಲ್ಲ Special Report

ಕನ್ನಡದ ಮಾರ್ಕೆಟ್ ನ ಕಬ್ಜಾ ಮಾಡ್ಕೊತಿದ್ದಾವಾ ಪರಭಾಷೆ ಸಿನಿಮಾಗಳು? ಮಲಯಾಳಂ ಸಿನಿಮಾಗಳು (Malayalam Cinema) ಗಳಿಸ್ತಿವೆ ಕೋಟಿ ಕೋಟಿ ಹಣ? ಈ ವರ್ಷ ಕನ್ನಡದ ಒಂದೇ ಒಂದು ಸಿನಿಮಾ (Cinema) ಹಿಟ್ ಲಿಸ್ಟ್ ಸೇರಿಲ್ಲ. ಆ ಕುರಿತ ಆ ಸ್ಪೆಷಲ್ ರಿಪೋರ್ಟ್ ಇಲ್ಲಿದೆ .

ಕನ್ನಡ ನೆಲದಲ್ಲಿ ಕನ್ನಡಿಗನೇ ಸಾರ್ವಭೌಮ. ಈ ಮಾತು ಸಿನಿಮಾ ವಿಚಾರದಲ್ಲಿ ಸುಳ್ಳಾಗ್ತಿದೆ. ಕನ್ನಡಿಗರು ಕನ್ನಡ ಸಿನಿಮಾಗಳತ್ತ ಬೆನ್ನು ಮಾಡಿ ಕೂತಿದ್ದಾರೆ. ಅದರಲ್ಲೂ ಥಿಯೇಟರಿಗೆ ಬರಲು ಜಪ್ಪಯ್ಯ ಅಂದ್ರೂ ಒಪ್ಪುತ್ತಿಲ್ಲ ಕನ್ನಡ ಸಿನಿರಸಿಕರು.

ಪರಿಣಾಮ ಈ ವರ್ಷ ಶುರುವಾಗಿ ನಾಲ್ಕು ತಿಂಗಳಾದ್ರೂ ಒಂದೇ ಒಂದು ಕನ್ನಡ ಸಿನಿಮಾ ಹಿಟ್ ಲಿಸ್ಟ್ ಸೇರಿಲ್ಲ. ಬಾಕ್ಸಾಫೀಸ್ ನಲ್ಲಿ ಝಣ ಝಣ ಕಾಂಚಾಣ ಎಣಿಸಿಲ್ಲ.

ಹೌದು, 2025 ಸ್ಯಾಂಡಲ್ ವುಡ್ ಪಾಲಿಗೆ ದುಸ್ವಪ್ನವಾಗಿದೆ. ಎಷ್ಟು ಒಳ್ಳೆಯ ಸಿನಿಮಾ ಕೊಟ್ರೂ ಜನ ಬರ್ತಿಲ್ಲ. ಇನ್ನೆಂಥ ಸಿನಿಮಾ ಕೊಡಬೇಕು ಗುರು ಅಂತ ಸಿನಿಮಾ ಮಂದಿ ತಲೆ ಕೆರೆದುಕೊಳ್ಳುವಂತೆ ಮಾಡಿದೆ.

ಜನವರಿಯಿಂದ ಏಪ್ರಿಲ್ ಕೊನೆಯ ತನಕ ಕನ್ನಡದ 80 ಸಿನಿಮಾಗಳು ರಿಲೀಸ್ ಆಗಿವೆ. ಅದರಲ್ಲಿ ಛೂಮಂತರ್, ಯುದ್ಧಕಾಂಡ, ಫಾರೆಸ್ಟ್ ನಂತಹ ಸಿನಿಮಾಗಳು ಪಾಸಿಟಿವ್ ರಿಪೋರ್ಟ್ ಪಡ್ಕೊಂಡಿವೆ. ಪರ್ವಾಗಿಲ್ಲ ಒಮ್ಮೆ ನೋಡಬಹುದು ಎಂಬ ಟಾಕ್ ಪಡ್ಕೊಂಡಿವೆ.. ಆದ್ರೆ ರಿಸಲ್ಟ್ ಮಾತ್ರ ಶೂನ್ಯ.

ಅತ್ಯಧಿಕ ಗಳಿಕೆಯೇ 6 ಕೋಟಿಯಾ?

ಕನ್ನಡದ ಸಿನಿಮಾವೊಂದು ಈ ವರ್ಷ ಹೈಯೆಸ್ಟ್ ಗಳಿಕೆ ಕಂಡಿದೆ ಅಂದ್ರೆ? ಅದು ಶರಣ್ ನಟನೆಯ ಛೂಮಂತರ್ ಸಿನಿಮಾ. ಈ ಸಿನಿಮಾ 5 ರಿಂದ 6 ಕೋಟಿ ಗಳಿಸಿದೆ ಎನ್ನಲಾಗ್ತಿದೆ. ಇದುವೆ ಈ ವರ್ಷದ ಹೈಯೆಸ್ಟ್ ಗಳಿಕೆ ಇಲ್ಲಿತನಕ ಅಂದ್ರೆ? ಅದು ನಿಜಕ್ಕೂ ದುರಂತವೇ ಸರಿ.

ಕನ್ನಡ ಸಿನಿಮಾಗಳ ಕಡೆ ಮಾತ್ರ ಯಾಕೆ ನಿರಾಸಕ್ತಿ?

ಇದು ಕನ್ನಡ ನೆಲದಲ್ಲಿ ಕನ್ನಡ ಸಿನಿಮಾಗಳಿಗೆ ಮಾತ್ರ ನಿರಾಸಕ್ತಿ. ಆದ್ರೆ ಇದೇ ಕನ್ನಡ ಮಣ್ಣಲ್ಲಿ ಪರಭಾಷೆಯ ಸಿನಿಮಾಗಳು ಕೋಟಿ ಕೋಟಿಯನ್ನ ಲೂಟಿ ಮಾಡ್ತಾ ಇವೆ.. ಅದಕ್ಕೆ ಬೆಸ್ಟ್ ಎಕ್ಸಾಂಪಲ್ ಅಂದ್ರೆ? ಮೋಹನ್ ಲಾಲ್ ನಟನೆಯ ಎಂಪುರಾನ್ ಸಿನಿಮಾ.. ಈ ಸಿನಿಮಾ ಬಗ್ಗೆ ಅಂತಹ ಪಾಸಿಟಿವ್ ಟಾಕ್ ಏನು ಕೇಳಿ ಬರಲಿಲ್ಲ.. ನೋಡಿದವರೆಲ್ಲಾ ಬಯ್ಕೊಂಡೇ ಆಚೆ ಬಂದ್ರು.. ಆದ್ರೂ ಸಹ ಈ ಸಿನಿಮಾ ಕರ್ನಾಟಕದಲ್ಲಿಯೇ 15 ಕೋಟಿ ಹಣ ಗಳಿಸಿದೆ.. ಹಂಗಂತ ಕೇವಲ ಮಲಯಾಳಿಗಳು ಮಾತ್ರ ಈ ಸಿನಿಮಾವನ್ನ ನೋಡಿಲ್ಲ.. ಕನ್ನಡಿಗರು ಸಹ ಮುಗಿಬಿದ್ದು ನೋಡಿದ್ದಾರೆ.

ಹೌಸ್​ಫುಲ್ ಪ್ರದರ್ಶನ ಕಾಣ್ತಿದೆ ಪರಭಾಷೆ ಸಿನಿಮಾ

ಅಷ್ಟೇ ಅಲ್ಲದೆ ರಿಸೆಂಟಾಗಿ ಬಿಡುಗಡೆಯಾದ ತುಡರುಮ್ ಎಂಬ ಸಿನಿಮಾ ಬೆಂಗಳೂರು, ಮಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಹಲವು ಪ್ರಮುಖ ನಗರಗಳಲ್ಲಿ ಬಿಡುಗಡೆಯಾದ 9 ದಿನಗಳಾದ್ರೂ ಸಹ ಹೌಸ್ ಫುಲ್ ಪ್ರದರ್ಶನ ಕಾಣ್ತಿದೆ.

ಬೆಂಗಳೂರಿನಲ್ಲಿಯೇ ತುಡರುಮ್ ಮಲಯಾಳಂ ವರ್ಷನ್ 300 ಪ್ಲಸ್ ಶೋ ಪ್ರದರ್ಶನ ಕಾಣ್ತಿದೆ. ಅಷ್ಟೂ ಶೋಸ್ ಫಾಸ್ಟ್ ಫಿಲ್ಲಿಂಗ್ ಆಗ್ತಿವೆ ಅಂದ್ರೆ? ಕರ್ನಾಟಕ ನೆಲದಲ್ಲಿ ಪರಭಾಷೆ ಸಿನಿಮಾಗಳ ಅಬ್ಬರ ಹೇಗಿದೆ ಎಂಬುದಕ್ಕೆ ಸಾಕ್ಷಿ.

ಕನ್ನಡ ಸಿನಿಮಾಗೆ ಮಾತ್ರ ನೀರಸ ಪ್ರತಿಕ್ರಿಯೆ

ಹಾಗೆ ಅಜಿತ್ ನಟನೆಯ ಗುಡ್ ಬ್ಯಾಡ್ ಅಗ್ಲಿ, ವೆಂಕಟೇಶ್ ನಟನೆಯ ಸಂಕ್ರಾತಿಕಿ ವಸ್ತುನ್ನಾಮ್, ನಾನಿ ನಟನೆಯ ಹಿಟ್3 ಸಿನಿಮಾಗಳು ಸಹ ಕರ್ನಾಟಕದಲ್ಲಿ ಒಳ್ಳೆಯ ಗಳಿಕೆಯನ್ನ ಕಾಣ್ತಿವೆ.. ಆದ್ರೆ ಕನ್ನಡ ಸಿನಿಮಾಗಳು ಮಾತ್ರ ಯಾವುದೇ ಪೈಪೋಟಿಯನ್ನ ಕೊಡಲಾಗದೆ ನೀರಸ ಪ್ರತಿಕ್ರಿಯೆಯನ್ನ ಪಡ್ಕೊಳ್ತಿವೆ.

ಕರ್ನಾಟಕದ ಎಷ್ಟೋ ಸಿನಿಮಾ ಮಂದಿರಗಳು ಹಾಕಲು ಒಳ್ಳೆಯ ಕನ್ನಡ ಸಿನಿಮಾಗಳಿಲ್ಲದೆ. ಅನಿವಾರ್ಯವಾಗಿ ಪರಭಾಷೆ ಸಿನಿಮಾಗಳಿಗೆ ಮಣೆ ಹಾಕುವ ನಿರ್ಧಾರಕ್ಕೆ ಬಂದಿವೆ.. ಇಷ್ಟೆಲ್ಲಾ ಆದ್ರೂ ಸಹ ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿಯಾಗಲಿ, ಕಲಾವಿದರ ಸಂಘವಾಗಲಿ, ನಿರ್ಮಾಪಕರ ಸಂಘವಾಗಲಿ ಮುಂದೇನು ಮಾಡಬೇಕು ಎಂಬ ಚಿಂತನೆ ನಡೆಸಿದಂತೆ ಇಲ್ಲ.

ಕನ್ನಡ ಸಿನಿಮಾಗಳ ಈ ಸ್ಥಿತಿಗೆ ಈ ಗತಿಗೆ ಪ್ಯಾನ್ ಇಂಡಿಯಾ ಎಂಬ ಟ್ರೆಂಡ್ ನ ಹಿಂದೆ ಬಿದ್ದಿದ್ದೇ ಕಾರಣ. ಸ್ಟಾರ್ ನಟರು ಮೂರು ವರ್ಷಕ್ಕೆ ಒಂದು ಸಿನಿಮಾ ಮಾಡ್ಕಂಡು ಕಾಲಹರಣ ಮಾಡ್ತಿರೋದೆ ಕಾರಣ ಎಂಬುದು ಸಿನಿರಂಗದಲ್ಲಿಯೇ ಕೇಳಿ ಬರ್ತಿರೋ ಅಪಸ್ವರ. ಸದ್ಯಕ್ಕಂತೂ ಕನ್ನಡ ಚಿತ್ರರಂಗಕ್ಕೆ ಯಾವುದೇ ಆಶಕಿರಣ ಕಾಣಿಸ್ತಾ ಇಲ್ಲ. ಸದ್ಯದ ಪರಿಸ್ಥಿತಿ ಕಂಡು ದೊಡ್ಡ ದೊಡ್ಡವರೇ ಹೆದರುವಂತಹ ಪರಿಸ್ತಿತಿ ಇದೆ. ಹಾಗೆ ಕನ್ನಡ ಸಿನಿಮಾಗಳು ಅಂದ್ರೆ ಸ್ಯಾಟ್ ಲೈಟ್ ರೈಟ್ಸ್ ಸೇಲಾಗ್ತಿಲ್ಲ. ಒಟಿಟಿಗೆ ಕೇಳೋರೆ ಇಲ್ಲ.

ಹಿಂಗಾದ್ರೆ ಹೆಂಗೆ ಗುರು? ಇದಕ್ಕೆ ಶಾಸ್ವತ ಪರಿಹಾರ ಕಂಡು ಹಿಡಿಯೋ ನಿಟ್ಟಿನಲ್ಲಿ ಚಿತ್ರರಂಗ ಒಮ್ಮತದಿಂದ ಕಾರ್ಯಕ್ರಮವನ್ನ ರೂಪಿಸಬೇಕಿದೆ.

ದೇಶ

BMSCE ವಿಜ್ಞಾನ ಪ್ರದರ್ಶನ: 14 ಶಾಲೆಗಳ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ 60+ ಮಾದರಿ ಪ್ರದರ್ಶನ

ಬೆಂಗಳೂರು: BMS College of Engineering ವತಿಯಿಂದ ಯುವಕ ಸಂಘದ ಕ್ಯಾಂಪಸ್–2 ಕಮ್ಯೂನಿಟಿ ಯೋಜನೆ ಅಡಿಯಲ್ಲಿ ವಿಜ್ಞಾನ ಮಾದರಿಗಳ ಅಂತಿಮ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಕಾಲೇಜು ಆವರಣದಲ್ಲಿ ಭರ್ಜರಿಯಾಗಿ ಆಯೋಜಿಸಲಾಯಿತು.

ಕಳೆದ 8 ತಿಂಗಳುಗಳಿಂದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಪರಿಸರ, ವಿಜ್ಞಾನ, ಜೀವನ ಕೌಶಲ್ಯ ಮತ್ತು ಮಾನಸಿಕ ಸಮಾಲೋಚನೆ ವಿಷಯಗಳಲ್ಲಿ ವಿಶೇಷ ತರಬೇತಿ ನೀಡಲಾಗಿತ್ತು. ತರಬೇತಿಯ ಬಳಿಕ ಆಯ್ಕೆಯಾದ ಪ್ರಾಜೆಕ್ಟ್‌ಗಳನ್ನು ಈ ವೇದಿಕೆಯಲ್ಲಿ ಪ್ರದರ್ಶಿಸಲಾಯಿತು.


60ಕ್ಕೂ ಹೆಚ್ಚು ವಿಜ್ಞಾನ ಮಾದರಿ ಪ್ರದರ್ಶನ

14 ಶಾಲೆಗಳಿಂದ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ, 60ಕ್ಕೂ ಹೆಚ್ಚು ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ಸೃಜನಶೀಲತೆ, ವೈಜ್ಞಾನಿಕ ಮನೋಭಾವ ಮತ್ತು ನವೀನ ಆಲೋಚನೆಗಳು ವಿಶೇಷವಾಗಿ ಗಮನಸೆಳೆದವು.


🎓 ಗಣ್ಯರ ಉಪಸ್ಥಿತಿ

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಎನ್‌ಎಸ್‌ಎಸ್ ರಾಜ್ಯ ಅಧಿಕಾರಿ ಡಾ. ಪ್ರತಾಪ್ ಲಿಂಗಯ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ:

  • ಡಾ. ಭೀಮಶಾ ಆರ್ಯ – ಪ್ರಾಂಶುಪಾಲರು
  • ಡಾ. ಎಲ್. ರವಿಕುಮಾರ್ – ಉಪ ಪ್ರಾಂಶುಪಾಲರು
  • ಡಾ. ಶೇಷಾಚಲಂ – ಉಪ ಪ್ರಾಂಶುಪಾಲರು
  • ಡಾ. ಸುಜಾತಾ ಎನ್. – ಯೋಜನಾ ಅಧಿಕಾರಿ
  • ಯುವಕ ಸಂಘದ ಸಂಯೋಜಕರು

ಕಾರ್ಯಕ್ರಮದಲ್ಲಿ ಭಾಗವಹಿಸಿದರು.


ವಿದ್ಯಾರ್ಥಿಗಳಿಗೆ ಸೌಲಭ್ಯ

ಬಿಎಂಎಸ್ ಕಾಲೇಜ್ ಆಫ್ ಇಂಜಿನಿಯರಿಂಗ್ ವತಿಯಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಬರವಣಿಗೆ ಪ್ಯಾಡ್‌ಗಳನ್ನು ವಿತರಿಸಲಾಯಿತು. ಜೊತೆಗೆ ಊಟ ಹಾಗೂ ಉಪಹಾರದ ವ್ಯವಸ್ಥೆ ಕೂಡ ಮಾಡಲಾಗಿತ್ತು.


ವೈಜ್ಞಾನಿಕ ಚಿಂತನೆಗೆ ಉತ್ತೇಜನ

ಒಟ್ಟಾರೆ, ಈ ವಿಜ್ಞಾನ ಪ್ರದರ್ಶನವು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ, ಸೃಜನಶೀಲತೆ ಮತ್ತು ನವೀನತೆಯನ್ನು ಉತ್ತೇಜಿಸುವಲ್ಲಿ ಮಹತ್ವದ ಪಾತ್ರವಹಿಸಿತು. ಶಾಲಾ–ಕಾಲೇಜು ಸಹಯೋಗದ ಉತ್ತಮ ಉದಾಹರಣೆಯಾಗಿ ಕಾರ್ಯಕ್ರಮ ಮೆಚ್ಚುಗೆಗೆ ಪಾತ್ರವಾಯಿತು.

Continue Reading

ದೇಶ

HAL ಠಾಣೆ ಇನ್ಸ್‌ಪೆಕ್ಟರ್ ವಿರುದ್ಧ ಗಂಭೀರ ಆರೋಪ: ಅರವಿಂದ್ ರೆಡ್ಡಿ ಕಾಲಿಗೆ ಬೀಳಲು ಬೆದರಿಕೆ?

ಬೆಂಗಳೂರು: ತನಗೆ ಹಾಗೂ ಸ್ನೇಹಿತೆಯಾಗಿರುವ ನಟಿಗೆ ಉದ್ಯಮಿ ಅರವಿಂದ್ ರೆಡ್ಡಿಯ ಕಾಲು ಹಿಡಿಯುವಂತೆ ಎಚ್‌ಎಎಲ್ ಠಾಣೆಯ ಇನ್ಸ್‌ಪೆಕ್ಟರ್ ಬೆದರಿಸಿದ್ದಾರೆ ಎಂದು ಆರೋಪಿಸಿ ಬಿ.ಕೆ. ವೈಶಾಕ್ ಕರ್ನಾಟಕ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.

ಉದ್ಯಮಿ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ ಕಳುಹಿಸಿದ ಪ್ರಕರಣದಲ್ಲಿ ಎಚ್‌ಎಎಲ್ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು ಹಾಗೂ ಇನ್ಸ್‌ಪೆಕ್ಟರ್ ಅಜರುದ್ದೀನ್ ವಿರುದ್ಧ ವಿಚಾರಣೆ ನಡೆಸಲು ಸಕ್ಷಮ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ವೈಶಾಕ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಇನ್ಸ್‌ಪೆಕ್ಟರ್ ಅಜರುದ್ದೀನ್ ಹಾಗೂ ಅರವಿಂದ್ ರೆಡ್ಡಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಕಾಲಿಗೆ ಬೀಳುವಂತೆ ಸೂಚನೆ?

ಗುರುವಾರ ಅರ್ಜಿ ವಿಚಾರಣೆಗೆ ಬಂದಾಗ, ವೈಶಾಕ್ ಪರ ವಕೀಲರು ಹಾಜರಾಗಿ ಮಹತ್ವದ ಆರೋಪ ಮಂಡಿಸಿದರು. ಫೆಬ್ರವರಿ 6ರಂದು ಅರ್ಜಿದಾರರನ್ನು ಬಿಡುಗಡೆ ಮಾಡಲು ಹೈಕೋರ್ಟ್ ಸೂಚಿಸಿದ್ದರೂ, ಠಾಣೆಗೆ ಪ್ರಕರಣದಲ್ಲಿ ಹೆಸರು ಕೇಳಿಬಂದ ನಟಿಯನ್ನೂ ಕರೆಸಲಾಗಿತ್ತು. ಅಲ್ಲದೆ, ಅರವಿಂದ್ ರೆಡ್ಡಿಯ ಕಾಲಿಗೆ ಬೀಳುವಂತೆ ವೈಶಾಕ್‌ಗೆ ಸೂಚನೆ ನೀಡಲಾಗಿದೆ ಎಂದು ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಪ್ರಕರಣದ ಕುರಿತು ತೀರ್ಮಾನ ಕೈಗೊಳ್ಳುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿ, ವಿಚಾರಣೆಯನ್ನು ಫೆಬ್ರವರಿ 17ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ

ಜನವರಿಯಲ್ಲಿ ವೈಶಾಕ್ ಕೊರಿಯರ್ ಮೂಲಕ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ ಕಳುಹಿಸಿ, ನಟಿಯೊಂದಿಗೆ ಇರುವ ಜಗಳ ಬಗೆಹರಿಸಿಕೊಳ್ಳಬೇಕು. ಇಲ್ಲದಿದ್ದರೆ 6ರಿಂದ 7 ಕೋಟಿ ರೂ. ಹಣವನ್ನು ಕಳುಹಿಸಬೇಕು ಎಂದು ಒತ್ತಾಯಿಸಿದ್ದರು ಎಂಬ ಆರೋಪ ಇದೆ. ಬೇಡಿಕೆ ಈಡೇರಿಸದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸೂಚಿಸಿದ್ದಾಗಿ ದೂರಿನಲ್ಲಿ ಹೇಳಲಾಗಿದೆ.

ಈ ಕುರಿತು ಅರವಿಂದ್ ರೆಡ್ಡಿ ದೂರು ನೀಡಿದ್ದು, ಎಚ್‌ಎಎಲ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಫೆಬ್ರವರಿ 2ರಂದು ನಟಿಯ ಮನೆಯಲ್ಲಿ ವೈಶಾಕ್ ಅವರನ್ನು ಬಂಧಿಸಲಾಗಿತ್ತು.

ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದು, ಮುಂದಿನ ವಿಚಾರಣೆ ಫೆಬ್ರವರಿ 17ರಂದು ನಡೆಯಲಿದೆ.

Continue Reading

ದೇಶ

ಸಿಎಂ ಕುರ್ಚಿ ಉಳಿಸಿಕೊಳ್ಳಲು ಶಾಸಕರ ವಿದೇಶ ಪ್ರವಾಸ? ವಿಜಯೇಂದ್ರ ಗಂಭೀರ ಆರೋಪ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರ ಬಂದ ಬಳಿಕ ಅನುದಾನ ಬೇಡಿಕೆ ಇಟ್ಟಿದ್ದರೂ ಗಂಗಕಲ್ಯಾಣ ಯೋಜನೆ, ಮನೆ ನಿರ್ಮಾಣ ಸೇರಿದಂತೆ ಹಲವು ಕಾರ್ಯಗಳು ನಡೆಯದೆ ಜನರಲ್ಲಿ ಅಸಮಾಧಾನ ಮೂಡಿದೆ ಎಂದು ಆರೋಪಿಸಿದರು. ಶಾಸಕರು ತಮ್ಮ ಖರ್ಚಿನಲ್ಲಿ ವಿದೇಶಕ್ಕೆ ಹೋಗುತ್ತಿದ್ದಾರೆ ಎಂಬ ಸಿಎಂ ಹೇಳಿಕೆಯನ್ನು ಪ್ರಶ್ನಿಸಿ, “ತಮ್ಮ ಕುರ್ಚಿ ಉಳಿಸಿಕೊಳ್ಳಲು ತಾವೇ ಅವರನ್ನು ಕಳಿಸುತ್ತಿದ್ದಾರೆ” ಎಂದು ಟೀಕಿಸಿದರು.

ರೆಸಾರ್ಟ್ ರಾಜಕೀಯದ ಮೇಲೆ ಲೇವಡಿ

ಕಾಂಗ್ರೆಸ್ ಶಾಸಕರು ರೆಸಾರ್ಟ್ ಬುಕ್ ಮಾಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, “ಅವರಿಗೆ ಅನುಕೂಲವಾಗಲಿ ಎಂದು ಬಿಜೆಪಿಯಿಂದ ಬಡಿಗೆ ರೆಡಿ ಮಾಡಿಸಿದ್ದೇವೆ” ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಅಂತರದ ರಾಜಕೀಯ ನಡೆಯುತ್ತಿದೆ ಎಂದು ಹೇಳಿದರು.

₹5,000 ಕೋಟಿ ಎಲ್ಲಿಗೆ ಹೋಯ್ತು?

ಗೃಹ ಲಕ್ಷ್ಮೀ ಯೋಜನೆಯ ₹5,000 ಕೋಟಿ ಹಣದ ಬಗ್ಗೆ ಸ್ಪಷ್ಟ ಉತ್ತರ ಸಿಗಲಿಲ್ಲ ಎಂದು ಆರೋಪಿಸಿದ ಅವರು, “ಹಣ ಉಪಯೋಗ ಆಯ್ತಾ? ದುರಪಯೋಗ ಆಯ್ತಾ? ಸಿಎಂ ಉತ್ತರ ಕೊಡಬೇಕು” ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರಕ್ಕೆ ನಕಲಿ ದಾಖಲೆ ನೀಡಿರುವ ವಿಚಾರದಲ್ಲೂ ಮುಂದಿನ ದಿನಗಳಲ್ಲಿ ವಿವರವಾದ ಸುದ್ದಿಗೋಷ್ಠಿ ನಡೆಸುವುದಾಗಿ ತಿಳಿಸಿದರು.

ಪ್ರಾದೇಶಿಕ ಅಸಮಾನತೆ ಹೆಚ್ಚಳ

ಪ್ರಾದೇಶಿಕ ಅಸಮಾನತೆ ನಿವಾರಣೆ ಸಮಿತಿ ವರದಿ ಉಲ್ಲೇಖಿಸಿ, ರಾಜ್ಯದಲ್ಲಿ ಅಸಮಾನತೆ ಶೇಕಡಾ 60ರಿಂದ 72.08ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಹಿಂದುಳಿದಿದೆ ಎಂದು ಆರೋಪಿಸಿದರು.

ಕುರಿಗಾರರಿಗೆ ಪರಿಹಾರ ಬಾಕಿ

ಅನುಗ್ರಹ ಯೋಜನೆಯಡಿ 45 ಕೋಟಿ ರೂ. ಬಾಕಿ ಇಟ್ಟಿದ್ದು, 90 ಸಾವಿರ ಸಾವಿನ ಪೈಕಿ ಕೇವಲ 30 ಸಾವಿರ ಕುರಿಮರಿಗಳಿಗೆ ಮಾತ್ರ ಪರಿಹಾರ ನೀಡಲಾಗಿದೆ ಎಂದು ಆರೋಪಿಸಿದರು.

ಬಿಜೆಪಿ ಕಾರ್ಯಕಾರಿಣಿ ಸಭೆ

ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸರ್ಕಾರದ ವೈಫಲ್ಯಗಳು ಮತ್ತು ಮುಂದಿನ ಚುನಾವಣಾ ತಂತ್ರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.

Continue Reading

Trending