ಬೆಂಗಳೂರು
ಕನ್ನಡದ ಒಂದೇ ಒಂದು ಸಿನಿಮಾ (Cinema) ಹಿಟ್ ಲಿಸ್ಟ್ ಸೇರಿಲ್ಲ Special Report

ಕನ್ನಡದ ಮಾರ್ಕೆಟ್ ನ ಕಬ್ಜಾ ಮಾಡ್ಕೊತಿದ್ದಾವಾ ಪರಭಾಷೆ ಸಿನಿಮಾಗಳು? ಮಲಯಾಳಂ ಸಿನಿಮಾಗಳು (Malayalam Cinema) ಗಳಿಸ್ತಿವೆ ಕೋಟಿ ಕೋಟಿ ಹಣ? ಈ ವರ್ಷ ಕನ್ನಡದ ಒಂದೇ ಒಂದು ಸಿನಿಮಾ (Cinema) ಹಿಟ್ ಲಿಸ್ಟ್ ಸೇರಿಲ್ಲ. ಆ ಕುರಿತ ಆ ಸ್ಪೆಷಲ್ ರಿಪೋರ್ಟ್ ಇಲ್ಲಿದೆ .
ಕನ್ನಡ ನೆಲದಲ್ಲಿ ಕನ್ನಡಿಗನೇ ಸಾರ್ವಭೌಮ. ಈ ಮಾತು ಸಿನಿಮಾ ವಿಚಾರದಲ್ಲಿ ಸುಳ್ಳಾಗ್ತಿದೆ. ಕನ್ನಡಿಗರು ಕನ್ನಡ ಸಿನಿಮಾಗಳತ್ತ ಬೆನ್ನು ಮಾಡಿ ಕೂತಿದ್ದಾರೆ. ಅದರಲ್ಲೂ ಥಿಯೇಟರಿಗೆ ಬರಲು ಜಪ್ಪಯ್ಯ ಅಂದ್ರೂ ಒಪ್ಪುತ್ತಿಲ್ಲ ಕನ್ನಡ ಸಿನಿರಸಿಕರು.
ಪರಿಣಾಮ ಈ ವರ್ಷ ಶುರುವಾಗಿ ನಾಲ್ಕು ತಿಂಗಳಾದ್ರೂ ಒಂದೇ ಒಂದು ಕನ್ನಡ ಸಿನಿಮಾ ಹಿಟ್ ಲಿಸ್ಟ್ ಸೇರಿಲ್ಲ. ಬಾಕ್ಸಾಫೀಸ್ ನಲ್ಲಿ ಝಣ ಝಣ ಕಾಂಚಾಣ ಎಣಿಸಿಲ್ಲ.
ಹೌದು, 2025 ಸ್ಯಾಂಡಲ್ ವುಡ್ ಪಾಲಿಗೆ ದುಸ್ವಪ್ನವಾಗಿದೆ. ಎಷ್ಟು ಒಳ್ಳೆಯ ಸಿನಿಮಾ ಕೊಟ್ರೂ ಜನ ಬರ್ತಿಲ್ಲ. ಇನ್ನೆಂಥ ಸಿನಿಮಾ ಕೊಡಬೇಕು ಗುರು ಅಂತ ಸಿನಿಮಾ ಮಂದಿ ತಲೆ ಕೆರೆದುಕೊಳ್ಳುವಂತೆ ಮಾಡಿದೆ.
ಜನವರಿಯಿಂದ ಏಪ್ರಿಲ್ ಕೊನೆಯ ತನಕ ಕನ್ನಡದ 80 ಸಿನಿಮಾಗಳು ರಿಲೀಸ್ ಆಗಿವೆ. ಅದರಲ್ಲಿ ಛೂಮಂತರ್, ಯುದ್ಧಕಾಂಡ, ಫಾರೆಸ್ಟ್ ನಂತಹ ಸಿನಿಮಾಗಳು ಪಾಸಿಟಿವ್ ರಿಪೋರ್ಟ್ ಪಡ್ಕೊಂಡಿವೆ. ಪರ್ವಾಗಿಲ್ಲ ಒಮ್ಮೆ ನೋಡಬಹುದು ಎಂಬ ಟಾಕ್ ಪಡ್ಕೊಂಡಿವೆ.. ಆದ್ರೆ ರಿಸಲ್ಟ್ ಮಾತ್ರ ಶೂನ್ಯ.
ಅತ್ಯಧಿಕ ಗಳಿಕೆಯೇ 6 ಕೋಟಿಯಾ?
ಕನ್ನಡದ ಸಿನಿಮಾವೊಂದು ಈ ವರ್ಷ ಹೈಯೆಸ್ಟ್ ಗಳಿಕೆ ಕಂಡಿದೆ ಅಂದ್ರೆ? ಅದು ಶರಣ್ ನಟನೆಯ ಛೂಮಂತರ್ ಸಿನಿಮಾ. ಈ ಸಿನಿಮಾ 5 ರಿಂದ 6 ಕೋಟಿ ಗಳಿಸಿದೆ ಎನ್ನಲಾಗ್ತಿದೆ. ಇದುವೆ ಈ ವರ್ಷದ ಹೈಯೆಸ್ಟ್ ಗಳಿಕೆ ಇಲ್ಲಿತನಕ ಅಂದ್ರೆ? ಅದು ನಿಜಕ್ಕೂ ದುರಂತವೇ ಸರಿ.
ಕನ್ನಡ ಸಿನಿಮಾಗಳ ಕಡೆ ಮಾತ್ರ ಯಾಕೆ ನಿರಾಸಕ್ತಿ?
ಇದು ಕನ್ನಡ ನೆಲದಲ್ಲಿ ಕನ್ನಡ ಸಿನಿಮಾಗಳಿಗೆ ಮಾತ್ರ ನಿರಾಸಕ್ತಿ. ಆದ್ರೆ ಇದೇ ಕನ್ನಡ ಮಣ್ಣಲ್ಲಿ ಪರಭಾಷೆಯ ಸಿನಿಮಾಗಳು ಕೋಟಿ ಕೋಟಿಯನ್ನ ಲೂಟಿ ಮಾಡ್ತಾ ಇವೆ.. ಅದಕ್ಕೆ ಬೆಸ್ಟ್ ಎಕ್ಸಾಂಪಲ್ ಅಂದ್ರೆ? ಮೋಹನ್ ಲಾಲ್ ನಟನೆಯ ಎಂಪುರಾನ್ ಸಿನಿಮಾ.. ಈ ಸಿನಿಮಾ ಬಗ್ಗೆ ಅಂತಹ ಪಾಸಿಟಿವ್ ಟಾಕ್ ಏನು ಕೇಳಿ ಬರಲಿಲ್ಲ.. ನೋಡಿದವರೆಲ್ಲಾ ಬಯ್ಕೊಂಡೇ ಆಚೆ ಬಂದ್ರು.. ಆದ್ರೂ ಸಹ ಈ ಸಿನಿಮಾ ಕರ್ನಾಟಕದಲ್ಲಿಯೇ 15 ಕೋಟಿ ಹಣ ಗಳಿಸಿದೆ.. ಹಂಗಂತ ಕೇವಲ ಮಲಯಾಳಿಗಳು ಮಾತ್ರ ಈ ಸಿನಿಮಾವನ್ನ ನೋಡಿಲ್ಲ.. ಕನ್ನಡಿಗರು ಸಹ ಮುಗಿಬಿದ್ದು ನೋಡಿದ್ದಾರೆ.
ಹೌಸ್ಫುಲ್ ಪ್ರದರ್ಶನ ಕಾಣ್ತಿದೆ ಪರಭಾಷೆ ಸಿನಿಮಾ
ಅಷ್ಟೇ ಅಲ್ಲದೆ ರಿಸೆಂಟಾಗಿ ಬಿಡುಗಡೆಯಾದ ತುಡರುಮ್ ಎಂಬ ಸಿನಿಮಾ ಬೆಂಗಳೂರು, ಮಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಹಲವು ಪ್ರಮುಖ ನಗರಗಳಲ್ಲಿ ಬಿಡುಗಡೆಯಾದ 9 ದಿನಗಳಾದ್ರೂ ಸಹ ಹೌಸ್ ಫುಲ್ ಪ್ರದರ್ಶನ ಕಾಣ್ತಿದೆ.
ಬೆಂಗಳೂರಿನಲ್ಲಿಯೇ ತುಡರುಮ್ ಮಲಯಾಳಂ ವರ್ಷನ್ 300 ಪ್ಲಸ್ ಶೋ ಪ್ರದರ್ಶನ ಕಾಣ್ತಿದೆ. ಅಷ್ಟೂ ಶೋಸ್ ಫಾಸ್ಟ್ ಫಿಲ್ಲಿಂಗ್ ಆಗ್ತಿವೆ ಅಂದ್ರೆ? ಕರ್ನಾಟಕ ನೆಲದಲ್ಲಿ ಪರಭಾಷೆ ಸಿನಿಮಾಗಳ ಅಬ್ಬರ ಹೇಗಿದೆ ಎಂಬುದಕ್ಕೆ ಸಾಕ್ಷಿ.
ಕನ್ನಡ ಸಿನಿಮಾಗೆ ಮಾತ್ರ ನೀರಸ ಪ್ರತಿಕ್ರಿಯೆ
ಹಾಗೆ ಅಜಿತ್ ನಟನೆಯ ಗುಡ್ ಬ್ಯಾಡ್ ಅಗ್ಲಿ, ವೆಂಕಟೇಶ್ ನಟನೆಯ ಸಂಕ್ರಾತಿಕಿ ವಸ್ತುನ್ನಾಮ್, ನಾನಿ ನಟನೆಯ ಹಿಟ್3 ಸಿನಿಮಾಗಳು ಸಹ ಕರ್ನಾಟಕದಲ್ಲಿ ಒಳ್ಳೆಯ ಗಳಿಕೆಯನ್ನ ಕಾಣ್ತಿವೆ.. ಆದ್ರೆ ಕನ್ನಡ ಸಿನಿಮಾಗಳು ಮಾತ್ರ ಯಾವುದೇ ಪೈಪೋಟಿಯನ್ನ ಕೊಡಲಾಗದೆ ನೀರಸ ಪ್ರತಿಕ್ರಿಯೆಯನ್ನ ಪಡ್ಕೊಳ್ತಿವೆ.
ಕರ್ನಾಟಕದ ಎಷ್ಟೋ ಸಿನಿಮಾ ಮಂದಿರಗಳು ಹಾಕಲು ಒಳ್ಳೆಯ ಕನ್ನಡ ಸಿನಿಮಾಗಳಿಲ್ಲದೆ. ಅನಿವಾರ್ಯವಾಗಿ ಪರಭಾಷೆ ಸಿನಿಮಾಗಳಿಗೆ ಮಣೆ ಹಾಕುವ ನಿರ್ಧಾರಕ್ಕೆ ಬಂದಿವೆ.. ಇಷ್ಟೆಲ್ಲಾ ಆದ್ರೂ ಸಹ ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿಯಾಗಲಿ, ಕಲಾವಿದರ ಸಂಘವಾಗಲಿ, ನಿರ್ಮಾಪಕರ ಸಂಘವಾಗಲಿ ಮುಂದೇನು ಮಾಡಬೇಕು ಎಂಬ ಚಿಂತನೆ ನಡೆಸಿದಂತೆ ಇಲ್ಲ.
ಕನ್ನಡ ಸಿನಿಮಾಗಳ ಈ ಸ್ಥಿತಿಗೆ ಈ ಗತಿಗೆ ಪ್ಯಾನ್ ಇಂಡಿಯಾ ಎಂಬ ಟ್ರೆಂಡ್ ನ ಹಿಂದೆ ಬಿದ್ದಿದ್ದೇ ಕಾರಣ. ಸ್ಟಾರ್ ನಟರು ಮೂರು ವರ್ಷಕ್ಕೆ ಒಂದು ಸಿನಿಮಾ ಮಾಡ್ಕಂಡು ಕಾಲಹರಣ ಮಾಡ್ತಿರೋದೆ ಕಾರಣ ಎಂಬುದು ಸಿನಿರಂಗದಲ್ಲಿಯೇ ಕೇಳಿ ಬರ್ತಿರೋ ಅಪಸ್ವರ. ಸದ್ಯಕ್ಕಂತೂ ಕನ್ನಡ ಚಿತ್ರರಂಗಕ್ಕೆ ಯಾವುದೇ ಆಶಕಿರಣ ಕಾಣಿಸ್ತಾ ಇಲ್ಲ. ಸದ್ಯದ ಪರಿಸ್ಥಿತಿ ಕಂಡು ದೊಡ್ಡ ದೊಡ್ಡವರೇ ಹೆದರುವಂತಹ ಪರಿಸ್ತಿತಿ ಇದೆ. ಹಾಗೆ ಕನ್ನಡ ಸಿನಿಮಾಗಳು ಅಂದ್ರೆ ಸ್ಯಾಟ್ ಲೈಟ್ ರೈಟ್ಸ್ ಸೇಲಾಗ್ತಿಲ್ಲ. ಒಟಿಟಿಗೆ ಕೇಳೋರೆ ಇಲ್ಲ.
ಹಿಂಗಾದ್ರೆ ಹೆಂಗೆ ಗುರು? ಇದಕ್ಕೆ ಶಾಸ್ವತ ಪರಿಹಾರ ಕಂಡು ಹಿಡಿಯೋ ನಿಟ್ಟಿನಲ್ಲಿ ಚಿತ್ರರಂಗ ಒಮ್ಮತದಿಂದ ಕಾರ್ಯಕ್ರಮವನ್ನ ರೂಪಿಸಬೇಕಿದೆ.
ಅಪರಾಧ
Breaking News ಚಾಲಕ ಆತ್ಮಹತ್ಯೆ – ಡೆತ್ ನೋಟ್ನಲ್ಲಿ ಸಂಸದ ಡಾ. ಸುಧಾಕರ್ ಹೆಸರು ಉಲ್ಲೇಖ!

ಚಿಕ್ಕಬಳ್ಳಾಪುರ, ಆಗಸ್ಟ್ 7 – ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದೈನಂದಿನ ಶಾಂತಿಯನ್ನು ಬೆಚ್ಚಿಬೀಳಿಸುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ 33 ವರ್ಷದ ಗುತ್ತಿಗೆ ಚಾಲಕ ಬಾಬು ಎಂ. ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೋಕಾಂತರವಾಗಿದೆ.
ಡೆತ್ ನೋಟ್ನಲ್ಲಿ ಸಂಸದ ಡಾ. ಕೆ. ಸುಧಾಕರ್ ಹೆಸರು:
8 ವರ್ಷಗಳಿಂದ ಲೆಕ್ಕಪರಿಶೋಧನೆ ವಿಭಾಗದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಬಾಬು, ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಹಾಗೂ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ವಿರುದ್ಧ ಗಂಭೀರ ಆರೋಪಗಳನ್ನು ಡೆತ್ ನೋಟ್ನಲ್ಲಿ ಉಲ್ಲೇಖಿಸಿದ್ದಾರೆ.
ಆತ್ಮಹತ್ಯೆಗೆ ಕಾರಣವೆನಿಸಿದ ಹಣಕಾಸು ವಂಚನೆ:
ಬಾಬು ಅವರು ಡೆತ್ ನೋಟ್ನಲ್ಲಿ, ಸರ್ಕಾರಿ ಕೆಲಸ ಕೊಡಿಸುತ್ತೇವೆಂದು ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಬಾಬು, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿಯ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು:
ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ತಕ್ಷಣವೇ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ FIR ದಾಖಲಾತಿ ನಡೆಯುವ ಸಾಧ್ಯತೆ ಇದ್ದು, ತನಿಖೆ ಮುಂದುವರಿದಿದೆ.
ಬೆಂಗಳೂರು
ಬೆಂಗಳೂರಿನಲ್ಲಿ ವಸತಿ ಯೋಜನೆಗಳ ಅವ್ಯವಸ್ಥೆ: ಹೊಸ ಯೋಜನೆಗಳ ಬಗ್ಗೆ ಶಾಸಕ ಎಸ್.ಟಿ. ಸೋಮಶೇಖರ್ ಅಸಮಾಧಾನ

ಬೆಂಗಳೂರು, ಆಗಸ್ಟ್ 7 – ನಗರದಲ್ಲಿ ಈಗಿನ ವಸತಿ ಯೋಜನೆಗಳು ಪೂರ್ಣವಾಗಿಲ್ಲದಿರುವಾಗ ಹೊಸ ಭೂಸ್ವಾಧೀನ ಅಧಿಸೂಚನೆಗಳನ್ನು ನೀಡುವುದು ಅರ್ಥವಿಲ್ಲ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಕಿಡಿಕಾರಿದರು.
ಯಶವಂತಪುರ ಕ್ಷೇತ್ರದ ಚುಂಚನಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಬ್ಬರಾಯನಪಾಳ್ಯ ಎ ಹಾಗೂ ಬಿ ಗ್ರಾಮಗಳಲ್ಲಿ ಹೊಸ ಅಂಗನವಾಡಿ ಕಟ್ಟಡ ಮತ್ತು ಕಿರಿಯ ಪ್ರಾಥಮಿಕ ಶಾಲೆಯ ಲೋಕಾರ್ಪಣೆ ವೇಳೆ ಅವರು ಮಾತನಾಡಿದರು.
ಅವರು ಅಭಿಪ್ರಾಯಪಟ್ಟ ಪ್ರಮುಖ ವಿಷಯಗಳು:
- ಬೆಂಗಳೂರಿನ ಜನಸಂಖ್ಯೆ ಈಗಾಗಲೇ 1.5 ಕೋಟಿಗೂ ಮೀರುತ್ತಿದೆ.
- ವಸತಿ ಸಮುಚ್ಛಯಗಳಲ್ಲಿ ಇನ್ನೂ ಅನೇಕ ಅಭಿವೃದ್ಧಿ ಕೆಲಸಗಳು ಬಾಕಿಯಿವೆ.
- ಕುಡಿಯುವ ನೀರಿನ ಕೊರತೆ, ಒಳಚರಂಡಿ ಸಮಸ್ಯೆ, ರಾಜಕಾಲುವೆಗಳ ಉಕ್ಕಿಹರಿವು ನಗರದ ಮುಖ್ಯ ಸಮಸ್ಯೆಗಳಾಗಿವೆ.
- ಕೆಲ ಕಟ್ಟಡಗಳು ಕಳಪೆ ಗುಣಮಟ್ಟದಿಂದ ನಿರ್ಮಾಣವಾಗಿದ್ದು, ಸೋರಿಕೆ ಸಮಸ್ಯೆ ಜನರನ್ನು ಕಾಡುತ್ತಿದೆ.
- “ಕಟ್ಟಡ ಕುಸಿದು ಅನಾಹುತವಾದರೆ ಹೊಣೆ ಯಾರು?” ಎಂದು ಅವರು ಪ್ರಶ್ನಿಸಿದರು.
ಬೇರೆ ಪ್ರಮುಖ ಅಂಶಗಳು:
ನಗರದ ವಾಹನ ಸಂಚಾರ ದಟ್ಟಣೆ, ನಿಯಂತ್ರಣ ತಪ್ಪಿದ ನಗರ ವಿಸ್ತರಣೆ, ಮೂಲಸೌಕರ್ಯದ ಕೊರತೆ ಇವುಗಳಿಂದ ನಾಗರಿಕರು ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬೆಂಗಳೂರಿನಿಂದ ಹೊರಗೆ ಹೊಸ ವಸತಿ ಯೋಜನೆಗಳನ್ನು ರೂಪಿಸಿ ಮೂಲಸೌಕರ್ಯ ಒದಗಿಸಿದರೆ ಜನಸಂದಣಿ ನಿಯಂತ್ರಣ ಸಾಧ್ಯವೆಂದು ಶಾಸಕ ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಹಾಜರಿದ್ದವರು:
ಪಂಚಾಯತ್ ಅಧ್ಯಕ್ಷೆ ಹೇಮಾ ನಾರಾಯಣ್, ಸದಸ್ಯರು ಸದಾನಂದ.ಡಿ, ಎನ್.ಕುಮಾರ್, ರೇವಣಸಿದ್ದಯ್ಯ, ಅಶ್ವತ್, ವೆಂಕಟಾಚಲ, ಸುನಿಲ್, ಪುಟ್ಟಮಲ್ಲು, ತಾತಪ್ಪ, ಶಿವಣ್ಣ, ಹನುಮಂತ ಹಾಗೂ ಗ್ರಾಮಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬಿಬಿಎಂಪಿ
ಜಿಬಿಎ ಚುನಾವಣೆ ಪೂರ್ವಸಿದ್ಧತೆ: ನವೆಂಬರ್ 1ರೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ – ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದ ಪೂರ್ವಸಿದ್ಧತೆಗಳನ್ನು ನವೆಂಬರ್ 1ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಚುನಾವಣೆಗಾಗಿ ಮತದಾರರ ನೋಂದಣಿ ನಿಯಮಗಳನ್ನು ಹೇಗೆ ರೂಪಿಸಬೇಕು ಎಂಬ ಕುರಿತು ಚುನಾವಣಾ ಆಯೋಗದ ಅಭಿಪ್ರಾಯವನ್ನು ಕೇಳಲಾಗುವುದು,” ಎಂದು ಸ್ಪಷ್ಟಪಡಿಸಿದರು.
ಚುನಾವಣೆ ಹಕ್ಕು ಕಾಪಾಡುವ ಕುರಿತು ಮಾರ್ಗದರ್ಶನ:
ಪಕ್ಷದ ಕಾರ್ಯಕರ್ತರು ಮತ್ತು ಬ್ಲಾಕ್ ಅಧ್ಯಕ್ಷರಿಗೆ, ತಮ್ಮ ಮತದಾನದ ಹಕ್ಕನ್ನು ಕಾಪಾಡಿಕೊಳ್ಳುವ ಕುರಿತು ಮಾರ್ಗದರ್ಶನ ನೀಡಲಾಗಿದೆ. “ಶಾಸಕರನ್ನು ಹಾಗೂ ಬ್ಲಾಕ್ ಲೆವಲ್ ನಾಯಕರನ್ನು ಮತ್ತೊಮ್ಮೆ ಸಭೆಗೆ ಕರೆದು ಸಿದ್ಧತೆ ಕುರಿತ ಚರ್ಚೆ ನಡೆಯಲಿದೆ,” ಎಂದರು.
ಇಂಡಿಯಾ ಒಕ್ಕೂಟ ಮತ್ತು ಪ್ರತಿಭಟನೆ ಕುರಿತು ಸ್ಪಷ್ಟನೆ:
“ಮುಖ್ಯಮಂತ್ರಿಗಳಿಗೆ ಇಂಡಿಯಾ ಒಕ್ಕೂಟದ ಸಭೆಗೆ ಆಹ್ವಾನ ಇದೆ. ನಾನು ಇಲ್ಲಿ ಪ್ರತಿಭಟನಾ ಸಭೆಗಾಗಿ ಸಿದ್ಧತೆಗಳನ್ನು ನೋಡಿಕೊಳ್ಳುತ್ತಿದ್ದೇನೆ,” ಎಂದು ಡಿಸಿಎಂ ಹೇಳಿದರು. “ಸ್ವಾತಂತ್ರ ಉದ್ಯಾನದಲ್ಲಿ ಮತಚೂರಿ ವಿರುದ್ಧsymbolic ಪ್ರತಿಭಟನೆ ನಡೆಯಲಿದ್ದು, ಇದು ನ್ಯಾಯಾಲಯದ ಆದೇಶದಂತೆ ಹಮ್ಮಿಕೊಳ್ಳಲಾಗಿದೆ,” ಎಂದು ಹೇಳಿದರು.
ರಾಜ್ಯಮಟ್ಟದ ಪ್ರತಿಭಟನೆ:
ಪ್ರತಿಯೊಬ್ಬ ಜಿಲ್ಲೆಯಿಂದ ಕನಿಷ್ಠ 50 ನಾಯಕರು, ಕಾರ್ಯಕರ್ತರು, ಪರಾಜಿತ ಅಭ್ಯರ್ಥಿಗಳು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಲಾಗಿದೆ. “ಬೆಂಗಳೂರು ಮಾತ್ರವಲ್ಲ, ಇಡೀ ಕರ್ನಾಟಕದಿಂದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ,” ಎಂದು ಅವರು ಹೇಳಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು9 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ