Connect with us

ಕ್ರೀಡೆ

ಐಪಿಎಲ್ 2025 ರದ್ದು: ದೇಶದ ಭದ್ರತೆಗೆ ಬಿಸಿಸಿಐ ಆದ್ಯತೆ, ಆರ್‌ಸಿಬಿ ಕನಸು ಭಗ್ನ!

ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತು ಭದ್ರತಾ ಆತಂಕಗಳಿಂದಾಗಿ ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಐಪಿಎಲ್ 2025ರ 18ನೇ ಆವೃತ್ತಿಯನ್ನು ಅರ್ಧದಲ್ಲೇ ರದ್ದುಗೊಳಿಸಲಾಗಿದೆ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ ಬಿಸಿಸಿಐ ಘೋಷಿಸಿದೆ. ಈ ನಿರ್ಧಾರವು ಕ್ರಿಕೆಟ್ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರ್‌ಸಿಬಿ ಸೇರಿದಂತೆ ಹಲವು ತಂಡಗಳ ಕಪ್ ಗೆಲ್ಲುವ ಕನಸು ಭಗ್ನವಾಗಿದೆ.

ಮೇ 8, 2025 ರಂದು ಪಂಜಾಬ್‌ನ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಐಪಿಎಲ್ 2025ರ 58ನೇ ಪಂದ್ಯದ ವೇಳೆ, 10.1 ಓವರ್‌ಗಳಲ್ಲಿ ಫ್ಲಡ್‌ಲೈಟ್ ವೈಫಲ್ಯದಿಂದಾಗಿ ಆಟ ತಾತ್ಕಾಲಿಕವಾಗಿ ಸ್ಥಗಿತಗೊಂಡಿತು. ಆದರೆ, ಇದಕ್ಕೆ ಕಾರಣ ಪಾಕಿಸ್ತಾನದಿಂದ ನಡೆದ ಡ್ರೋನ್ ದಾಳಿಯಿಂದ ಉಂಟಾದ ವಿದ್ಯುತ್ ಕಡಿತವಾಗಿತ್ತು ಎಂದು ವರದಿಯಾಗಿದೆ. ಭದ್ರತಾ ಕಾರಣಗಳಿಂದ ಆ ಪಂದ್ಯವನ್ನು ರದ್ದುಗೊಳಿಸಲಾಯಿತು, ಮತ್ತು ಕ್ರೀಡಾಂಗಣದಲ್ಲಿದ್ದ ಎಲ್ಲರನ್ನೂ ತಕ್ಷಣವೇ ಸ್ಥಳಾಂತರಿಸಲಾಯಿತು. ಈ ಘಟನೆಯು ಐಪಿಎಲ್‌ನ ಉಳಿದ ಪಂದ್ಯಗಳ ಮೇಲೆ ಗಂಭೀರ ಪರಿಣಾಮ ಬೀರಿತು.

ವಿದೇಶಿ ಆಟಗಾರರ ಭದ್ರತೆ:

ಐಪಿಎಲ್‌ನಲ್ಲಿ ಭಾಗವಹಿಸುವ ವಿದೇಶಿ ಆಟಗಾರರ ಭದ್ರತೆಯು ಬಿಸಿಸಿಐಗೆ ಪ್ರಮುಖ ಆದ್ಯತೆಯಾಗಿದೆ. ಪಾಕಿಸ್ತಾನದಿಂದ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳ ಭೀತಿಯಿಂದಾಗಿ, ದೇಶದ ಭದ್ರತಾ ವ್ಯವಸ್ಥೆಯನ್ನು ತೀವ್ರಗೊಳಿಸಲಾಗಿದೆ. ಈ ಸಂದರ್ಭದಲ್ಲಿ, ವಿದೇಶಿ ಆಟಗಾರರ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲು ಸಾಧ್ಯವಾಗದ ಕಾರಣ, ಬಿಸಿಸಿಐ ಐಪಿಎಲ್ 2025ರ ಉಳಿದ 14 ಪಂದ್ಯಗಳನ್ನು ಮತ್ತು ಫೈನಲ್ ಪಂದ್ಯವನ್ನು ರದ್ದುಗೊಳಿಸುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದೆ. ಮೇ 9, 2025 ರಂದು ನಡೆದ ತುರ್ತು ಸಭೆಯಲ್ಲಿ ಈ ತೀರ್ಮಾನವನ್ನು ಘೋಷಿಸಲಾಗಿದೆ ಎಂದು ವರದಿಯಾಗಿದೆ.

ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ

ಐಪಿಎಲ್ 2025ರ ರದ್ದತಿಯ ಸುದ್ದಿಯು ಕ್ರಿಕೆಟ್ ಪ್ರಿಯರಿಗೆ ಭಾರೀ ನಿರಾಸೆಯನ್ನುಂಟು ಮಾಡಿದೆ. ಈಗಾಗಲೇ 57 ಪಂದ್ಯಗಳು ಮುಗಿದಿದ್ದು, ಲೀಗ್ ತನ್ನ ಅಂತಿಮ ಹಂತದಲ್ಲಿತ್ತು. ಆದರೆ, ದೇಶದ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರ್‌ಸಿಬಿ ತಂಡದ ಅಭಿಮಾನಿಗಳಿಗೆ ಈ ವರ್ಷವೂ ಕಪ್ ಗೆಲ್ಲುವ ಕನಸು ಭಗ್ನವಾಗಿದೆ, ಇದು ಅವರಿಗೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳು ತಮ್ಮ ನಿರಾಸೆಯನ್ನು ವ್ಯಕ್ತಪಡಿಸುತ್ತಿದ್ದಾರೆ, ಆದರೆ ದೇಶದ ಭದ್ರತೆಗಿಂತ ಕ್ರಿಕೆಟ್ ದೊಡ್ಡದಲ್ಲ ಎಂಬ ಅಭಿಪ್ರಾಯವೂ ಜನಪ್ರಿಯವಾಗಿದೆ.

ಬಿಸಿಸಿಐನ ಸಂದೇಶ

ಬಿಸಿಸಿಐ ಅಧ್ಯಕ್ಷ ಅರುಣ್ ಧುಮಾಲ್ ಈ ಬಗ್ಗೆ ಪ್ರತಿಕ್ರಿಯಿಸಿ, “ದೇಶದ ಭದ್ರತೆಯೇ ನಮಗೆ ಮೊದಲ ಆದ್ಯತೆ. ಆಟಗಾರರ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲು ಸಾಧ್ಯವಾಗದ ಸಂದರ್ಭದಲ್ಲಿ, ಐಪಿಎಲ್ 2025ರ ರದ್ದತಿಯ ನಿರ್ಧಾರವು ಅನಿವಾರ್ಯವಾಗಿತ್ತು. ಕ್ರಿಕೆಟ್ ಅಭಿಮಾನಿಗಳಿಗೆ ಈ ನಿರ್ಧಾರ ಕಷ್ಟಕರವಾಗಿದ್ದರೂ, ದೇಶದ ಸುರಕ್ಷತೆಗೆ ಯಾವುದೇ ರಾಜಿಯಿಲ್ಲ,” ಎಂದು ತಿಳಿಸಿದ್ದಾರೆ. ಶೀಘ್ರದಲ್ಲೇ ಈ ರದ್ದತಿಯ ಬಗ್ಗೆ ಅಧಿಕೃತ ಘೋಷಣೆಯಾಗುವ ಸಾಧ್ಯತೆಯಿದೆ.

ಕ್ರೀಡೆ

ಭಾರತೀಯ ತಂಡದ ಕೋಚ್ ಗೌತಮ್ ಗಂಭೀರ್ ವಿರುದ್ಧ ಟೀಕೆ, ಬಿಸಿಸಿಐ ಸಹಾಯಕ ಕೋಚ್ ಮಾರ್ನೆ ಮಾರ್ಕೆಲ್-ಟೆನ್ ಡೊಶ್ಕಾಟೆ ಬದಲಾವಣೆ ಸಾಧ್ಯತೆ

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ್ ಅವರ ಕೋಚಿಂಗ್ ಶೈಲಿಯನ್ನು ಮಾಜಿ ಕ್ರಿಕೆಟಿಗರು ಸೇರಿದಂತೆ ಸುನಿಲ್ ಗವಾಸ್ಕರ್, ರಿಕಿ ಪಾಂಟಿಂಗ್ ಸೇರಿದಂತೆ ಹಲವು ಹಿರಿಯರು ಭಾರೀ ಟೀಕೆ ಮಾಡಿದ್ದಾರೆ. ಈ ಟೀಕೆಗಳಿಗೆ ಸಂಬಂಧಿಸಿ, ಗಂಭೀರ್ ಮನವಿ ಮಾಡಿಕೊಂಡ ಸಹಾಯಕ ಕೋಚ್‌ಗಳಾದ ಮಾರ್ನೆ ಮಾರ್ಕೆಲ್ (ಬೌಲಿಂಗ್ ಕೋಚ್) ಮತ್ತು ರ್ಯಾನ್ ಟೆನ್ ಡೊಶ್ಕಾಟೆ ಶೀಘ್ರದಲ್ಲೇ ತಮ್ಮ ಹುದ್ದೆಯಿಂದ ವಜಾಗೊಳ್ಳುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಗಳು ಸೂಚಿಸುತ್ತಿವೆ.

ಕಳೆದ ವರ್ಷ ಜುಲೈನಲ್ಲಿ ಗಂಭೀರ್ ಭಾರತದ ಕೋಚ್ ಆಗಿ ನೇಮಕಗೊಂಡಿದ್ದರು. ಅವರ ಮನವಿ ಮೇರೆಗೆ ಐಪಿಎಲ್ ತಂಡಗಳಲ್ಲಿ ಕಾರ್ಯನಿರ್ವಹಿಸಿದ್ದ ಅಭಿಷೇಕ್ ನಾಯರ್, ಮಾರ್ಕೆಲ್ ಮತ್ತು ಡೊಶ್ಕಾಟೆ ಸಹಾಯಕ ಕೋಚ್ ಆಗಿ ನೇಮಕಗೊಂಡಿದ್ದರು. ಆದರೆ, ನ್ಯೂಜಿಲೆಂಡ್ ವಿರುದ್ಧ ವೈಟ್ ವಾಷ್ ಹಾಗೂ ಆಸ್ಟ್ರೇಲಿಯಾ ತಂಡದ ಸೋಲುಗಳು ಬಿಸಿಸಿಐನಲ್ಲಿ ಅಸಮಾಧಾನ ಮೂಡಿಸಿದ ಕಾರಣ, ಮೊದಲನೆಯದಾಗಿ ಸಹಾಯಕ ಕೋಚ್ ಅಭಿಷೇಕ್ ನಾಯರ್ ಹುದ್ದೆಯಿಂದ ವಜಾಗೊಂಡಿದ್ದರು.

ಇದೇ ಹಿನ್ನೆಲೆಯಲ್ಲಿ, ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್ ಮತ್ತು ರ್ಯಾನ್ ಟೆನ್ ಡೊಶ್ಕಾಟೆ ಸಹ ಇನ್ನೂ ಸಹ ಹುದ್ದೆಯಿಂದ ವಜಾಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ತಂಡದ ಆಯ್ಕೆ ಪ್ರಕ್ರಿಯೆ, ಆಟಗಾರರ ಕಾರ್ಯದೊತ್ತಡ, ಪಿಚ್ ಅನ್ವಯ 11 ಆಟಗಾರರ ಆಯ್ಕೆ ಮತ್ತು ಸಮತೋಲನ ಕಾಯ್ದುಕೊಳ್ಳುವ ವಿಚಾರದಲ್ಲಿ ಕೋಚ್‌ಗಳ ಕಾರ್ಯವೈಖರಿಗೆ ಬಿಸಿಸಿಐ ಅತೃಪ್ತಿ ವ್ಯಕ್ತಪಡಿಸಿದೆ.

ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸ್ಥಾನಕ್ಕೂ ಸವಾಲು ಎದುರಾಗಿದೆ. 2023ರ ಜುಲೈನಲ್ಲಿ ನೇಮಕಗೊಂಡ ಈ ಸಮಿತಿ ಮುಖ್ಯಸ್ಥರ ನೇತೃತ್ವದಲ್ಲಿ ಭಾರತ ತಂಡದ ಪ್ರದರ್ಶನ ಕಳೆದ ಒಂದು ವರ್ಷದಿಂದ ತೀರಾ ಕಳಪೆಯಾಗಿದ್ದು, ಸಮರ್ಥ ಆಟಗಾರರ ಆಯ್ಕೆಯಲ್ಲಿ ನಿರಂತರ ಎಡವಾಟಗಳು ನಡೆದಿವೆ ಎಂದು ವಿಶ್ಲೇಷಣೆಗಳು ತಿಳಿಸುತ್ತಿವೆ.

Continue Reading

ಕ್ರೀಡೆ

ಕನ್ನಡಿಗ ಕ್ರಿಕೆಟಿಗ ದೇವದತ್ ಪಡಿಕ್ಕಲ್ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಅತಿ ಹೆಚ್ಚು ಬೆಲೆಗೆ ಮಾರಾಟ

ಕರ್ನಾಟಕದ ಪ್ರತಿಭಾವಂತ ಕ್ರಿಕೆಟಿಗ ದೇವದತ್ ಪಡಿಕ್ಕಲ್ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಅವರು ‘ಹುಬ್ಬಳ್ಳಿ ಟೈಗರ್ಸ್’ ತಂಡಕ್ಕೆ 13.20 ಲಕ್ಷ ರೂಪಾಯಿಗೆ ಮಾರಾಟ ಆಗಿದ್ದು, ಈ ಮೊತ್ತವು ಮಹಾರಾಜ ಟ್ರೋಫಿಯ ಇತಿಹಾಸದಲ್ಲಿ ಅತಿ ಹೆಚ್ಚು ಬೆಲೆಯಾಗಿದೆ. ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪರ ಉತ್ತಮ ಪ್ರದರ್ಶನ ನೀಡಿ, ಅವರು ಈ ಯಶಸ್ಸಿಗೆ ಪಾತ್ರರಾಗಿದ್ದಾರೆ.

ಕಳೆದ ಐಪಿಎಲ್ ಪಂದ್ಯಾವಳಿಯಲ್ಲಿ ಗಾಯದಿಂದ ಕೆಲವು ಪಂದ್ಯಗಳಿಂದ ದೂರ ಉಳಿದರೂ, ದೇವದತ್ ಪಡಿಕ್ಕಲ್ ಅವರ ಸಾಮರ್ಥ್ಯ ಎಲ್ಲರ ಮನಸ್ಸಿಗೆ ತಲುಪಿತ್ತು. 2024ರ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್‌ನಿಂದ ಹೊರಬಂದ ಬಳಿಕ ಆರ್‌ಸಿಬಿ ತಂಡವು ಅವರನ್ನು 3.20 ಕೋಟಿ ರೂಪಾಯಿಗೆ ಖರೀದಿಸಿದೆ. ಇದೀಗ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡವು 13.20 ಲಕ್ಷ ರೂಪಾಯಿಗೆ ದೇವದತ್ ಪಡಿಕ್ಕಲ್ ಅವರನ್ನು ಪಡೆದಿದ್ದು, ಇದು ಟೂರ್ನಿಯ ದಾಖಲೆಯ ಬೆಲೆಯಾಗಿದೆ.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಜುಲೈ 15ರಂದು ಬೆಂಗಳೂರಿನಲ್ಲಿ ಆಯೋಜಿಸಿದ ಈ ಹರಾಜಿನಲ್ಲಿ ದೇವದತ್ ಪಡಿಕ್ಕಲ್ ಅತಿ ಹೆಚ್ಚು ಬೆಲೆಗೆ ಮಾರಾಟವಾದ ಕನ್ನಡಿಗ ಕ್ರಿಕೆಟಿಗರಾಗಿದ್ದಾರೆ. ಮಹಾರಾಜ ಟ್ರೋಫಿಯಲ್ಲಿ ಪ್ರತಿ ಫ್ರಾಂಚೈಸಿಯು ಕನಿಷ್ಠ ಇಬ್ಬರು ಸ್ಥಳೀಯ ಆಟಗಾರರನ್ನು ತಂಡದಲ್ಲಿ ಇರಿಸಬೇಕು ಎಂಬ ನಿಯಮವಿದ್ದು, ಇದರಿಂದ ಸ್ಥಳೀಯ ಪ್ರತಿಭೆಗಳ ಪ್ರೋತ್ಸಾಹಕ್ಕೆ ದೊಡ್ಡ ಅವಕಾಶ ಸಿಗುತ್ತದೆ.

ಈ ವರ್ಷದ ಪಂದ್ಯಗಳು ಮುಚ್ಚಿದ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅಭಿಮಾನಿಗಳಿಗೆ ಮೈದಾನದಲ್ಲಿ ವೀಕ್ಷಣೆಗೆ ಅವಕಾಶ ಇಲ್ಲ. ಆದರೂ ದೇವದತ್ ಪಡಿಕ್ಕಲ್ ಅವರ ಸಾಧನೆ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ ಮತ್ತು ಯುವ ಕ್ರಿಕೆಟಿಗರಿಗೆ ಪ್ರೇರಣೆಯಾಗಿದೆ.

Continue Reading

ಕ್ರೀಡೆ

ಮಹಾರಾಜ ಟ್ರೋಫಿ ಸೀಸನ್ 4 ಹರಾಜು ಪ್ರಕ್ರಿಯೆ! ಕಣದಲ್ಲಿ ಆರ್​ಸಿಬಿಯ 109 ಸಿಕ್ಸರ್​ಗಳ ಸ್ಫೋಟಕ ಹಿಟ್ಟರ್!

ಬೆಂಗಳೂರು: ಮಹಾರಾಜ ಟ್ರೋಫಿ ಕೆಎಸ್​ಸಿಎ T-20ಯ 4ನೇ ಸೀಸನ್‌ನ ಆಟಗಾರರ ಹರಾಜು ಇಂದು ಬೆಂಗಳೂರಿನಲ್ಲಿ ನಡೆಯಲಿದೆ. ಕಳೆದ ಋತುವಿನ ರನ್ನರ್-ಅಪ್ ಹುಬ್ಳಿ ಟೈಗರ್ಸ್ ಫ್ರಾಂಚೈಸಿ 41.50 ಲಕ್ಷಗಳ ಗರಿಷ್ಠ ಹಣದೊಂದಿಗೆ ಹರಾಜಿಗೆ ಆಗಮಿಸುತ್ತಿದ್ದರೆ, ಗುಲ್ಬರ್ಗಾ ಮಿಸ್ಟಿಕ್ಸ್ 24.05 ಲಕ್ಷಗಳ ಕಡಿಮೆ ಹಣದೊಂದಿಗೆ ಹರಾಜಿಗೆ ಬರುತ್ತಿದೆ.

ಹರಾಜಿನಲ್ಲಿ ಎ ವರ್ಗದಲ್ಲಿ ಭಾರತ ಅಥವಾ ಐಪಿಎಲ್ ತಂಡವನ್ನ ಪ್ರತಿನಿಧಿಸಿರುವ ಕ್ರಿಕೆಟಿಗರು ಇರಲಿದ್ದಾರೆ. ಕಳೆದ ಋತುವಿನಲ್ಲಿ 2ನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಅಭಿನವ್ ಮನೋಹರ್, ಟೂರ್ನಿಯ 2ನೇ ಸೀಸನ್‌ನಲ್ಲಿ ಹುಬ್ಳಿ ಟೈಗರ್ಸ್ ತಂಡವನ್ನು ಚಾಂಪಿಯನ್‌ ಪಟ್ಟಕ್ಕೇರಿಸಿದ್ದ ನಾಯಕ ಮನೀಶ್ ಪಾಂಡೆ ಎ ವರ್ಗದ ಹರಾಜಿನಲ್ಲಿದ್ದಾರೆ. ಅವರೊಂದಿಗೆ ಕಳೆದ ವರ್ಷ ಗುಲ್ಬರ್ಗ ಮಿಸ್ಟಿಕ್ಸ್ ತಂಡದಲ್ಲಿದ್ದ ದೇವದತ್ ಪಡಿಕ್ಕಲ್, ಮೈಸೂರು ವಾರಿಯರ್ಸ್‌ನ ವಿಜಯದ ಭಾಗವಾಗಿದ್ದ ಶ್ರೇಯಸ್ ಗೋಪಾಲ್ ಮತ್ತು ಕೆ. ಗೌತಮ್ ಕೂಡ ಎ ವರ್ಗದಲ್ಲಿದ್ದಾರೆ.

ಕಳೆದ ವರ್ಷದ ಹರಾಜಿನಲ್ಲಿ ಅತ್ಯಂತ ದುಬಾರಿ (8.60 ಲಕ್ಷ) ಬೆಲೆಗೆ ಹರಾಜಾಗಿದ್ದ ಚೇತನ್.ಎಲ್‌.ಆರ್ ಹರಾಜಿನ ಬಿ ವರ್ಗದಲ್ಲಿದ್ದು, ಮತ್ತೊಮ್ಮೆ ಗಮನ ಸೆಳೆಯುವ ನಿರೀಕ್ಷೆಯಿದೆ. ಕಳೆದ ವರ್ಷ ಮೈಸೂರು ವಾರಿಯರ್ಸ್ ಪರ 16 ವಿಕೆಟ್‌ಗಳೊಂದಿಗೆ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ವಿದ್ಯಾಧರ್ ಪಾಟೀಲ್, ಮಂಗಳೂರು ಡ್ರಾಗನ್ಸ್ ಪರ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳಾಗಿದ್ದ ಕೆ.ವಿ. ಸಿದ್ಧಾರ್ಥ್ ಮತ್ತು ನಿಕಿನ್ ಜೋಸ್, ರೋಹನ್ ಪಾಟೀಲ್, ಅನೀಶ್ ಕೆ.ವಿ. ಮತ್ತು ಮೊಹಮ್ಮದ್ ತಹಾ ಹಾಗೂ ವೇಗಿ ದರ್ಶನ್ ಎಂ.ಬಿ ಬಿ ವರ್ಗದಲ್ಲಿ ಸೇರಿದ್ದಾರೆ.

ಕಳೆದ ಋತುವಿನಲ್ಲಿ 17 ವಿಕೆಟ್‌ಗಳೊಂದಿಗೆ ವಿಕೆಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಕುಮಾರ್ ಎಲ್‌.ಆರ್, ಭಾರತದ ಅಂಡರ್ 19 ವೇಗಿ ಸಮರ್ಥ್ ನಾಗರಾಜ್, ಸಮಿತ್ ದ್ರಾವಿಡ್, ವಿಕೆಟ್ ಕೀಪರ್-ಬ್ಯಾಟರ್ ಹರ್ಷಿಲ್ ಧರ್ಮಾನಿ ಮತ್ತು ಕಳೆದ ಋತುವಿನಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಪರ 14 ವಿಕೆಟ್‌ಗಳನ್ನು ಕಬಳಿಸಿದ್ದ ಎಂ.ಕ್ರಾಂತಿ ಕುಮಾರ್ ಸಿ ವರ್ಗದಲ್ಲಿದ್ದಾರೆ.

ಏತನ್ಮಧ್ಯೆ, ಕೆಎಸ್‌ಸಿಎಯ ಎಲ್ಲಾ ನೋಂದಾಯಿತ ಆಟಗಾರರಿಗೆ ಡಿ ವರ್ಗವನ್ನ ಕಾಯ್ದಿರಿಸಲಾಗಿದೆ. ಈ ಗುಂಪಿನಲ್ಲಿ ಕಳೆದ ವರ್ಷ ಬೆಂಗಳೂರು ಬ್ಲಾಸ್ಟರ್ಸ್ ಪರ 16 ವಿಕೆಟ್‌ಗಳೊಂದಿಗೆ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಹೊರಹೊಮ್ಮಿದ ಲವೀಶ್ ಕೌಶಲ್ ಪ್ರಮುಖ ಆಕರ್ಷಣೆಯಾಗಿದ್ದಾರೆ.

ಹರಾಜಿನಲ್ಲಿ ಪ್ರತಿ ತಂಡಕ್ಕೆ 50.00 ಲಕ್ಷ ರೂ.ಗಳ ಮೊತ್ತವನ್ನು ಪಡೆಯಲು ಅವಕಾಶವಿದೆ. ತಲಾ 4 ಆಟಗಾರರನ್ನು ಉಳಿಸಿಕೊಂಡ ಬಳಿಕ ಹುಬ್ಳಿ ಟೈಗರ್ಸ್ 41.50 ಲಕ್ಷ ರೂ ಮೊತ್ತದೊಂದಿಗೆ ಹರಾಜಿಗೆ ಪ್ರವೇಶಿಸುತ್ತದೆ, ಅವರ ನಂತರದಲ್ಲಿ 37.70 ಲಕ್ಷ ರೂ.ಗಳೊಂದಿಗೆ ಮಂಗಳೂರು ಡ್ರಾಗನ್ಸ್, 36.50 ಲಕ್ಷ ರೂ.ಗಳೊಂದಿಗೆ ಮೈಸೂರು ವಾರಿಯರ್ಸ್, 30.80 ಲಕ್ಷ ರೂ.ಗಳೊಂದಿಗೆ ಶಿವಮೊಗ್ಗ ಲಯನ್ಸ್, 28.40 ಲಕ್ಷ ರೂ.ಗಳೊಂದಿಗೆ ಬೆಂಗಳೂರು ಬ್ಲಾಸ್ಟರ್ಸ್ ಮತ್ತು 24.05 ಲಕ್ಷ ರೂ.ಗಳೊಂದಿಗೆ ಗುಲ್ಬರ್ಗಾ ಮಿಸ್ಟಿಕ್ಸ್ ಹರಾಜಿಗೆ ಪ್ರವೇಶಿಸುತ್ತಿವೆ.

ಮೈಸೂರು ವಾರಿಯರ್ಸ್: ಕರುಣ್ ನಾಯರ್ (INR 6.8L), ಪ್ರಸಿದ್ಧ್ ಕೃಷ್ಣ (INR 2L), ಕಾರ್ತಿಕ್ ಎಸ್.ಯು (INR 0.5L), ಕಾರ್ತಿಕ್ ಸಿ.ಎ (INR 4.2L)

ಬೆಂಗಳೂರು ಬ್ಲಾಸ್ಟರ್ಸ್: ಮಯಾಂಕ್ ಅಗರವಾಲ್ (INR 14L), ಶುಭಾಂಗ್ ಹೆಗ್ಡೆ (INR 4.3L), ಸೂರಜ್ ಅಹುಜಾ (INR 1L), ನವೀನ್ ಎಂ.ಜಿ (INR 2.3L)

ಹುಬ್ಬಳ್ಳಿ ಟೈಗರ್ಸ್: ಮನ್ವಂತ್ ಕುಮಾರ್.ಎಲ್ (INR 1L), ಶ್ರೀಜಿತ್ ಕೆ.ಎಲ್ (INR 2.1L), ಕಾರಿಯಪ್ಪ ಕೆ.ಸಿ (INR 4.2L), ಕಾರ್ತಿಕೇಯ ಕೆ.ಪಿ (INR 1.2L)

ಗುಲ್ಬರ್ಗಾ ಮಿಸ್ಟಿಕ್ಸ್: ಲವ್ನಿತ್ ಸಿಸೋಡಿಯಾ (INR 7.2L), ಪ್ರವೀಣ್ ದುಬೆ (INR 6.8L), ವೈಶಾಕ್.ವಿ (INR 8.8L), ಸ್ಮರನ್.ಆರ್ (INR 3.15L)

ಶಿವಮೊಗ್ಗ ಲಯನ್ಸ್: ಕೌಶಿಕ್.ವಿ (INR 5.9L), ನಿಹಾಲ್ ಉಳ್ಳಾಲ್ (INR 2.1L), ಹಾರ್ದಿಕ್ ರಾಜ್ (INR 5.8L), ಅವಿನಾಶ್.ಡಿ (INR 5.4L)

ಮಂಗಳೂರು ಡ್ರಾಗನ್ಸ್ : ಅಭಿಲಾಷ್ ಶೆಟ್ಟಿ (INR 6.3L), ಮ್ಯಾಕ್ನೀಲ್ ಹ್ಯಾಡ್ಲಿ ನೊರೊನ್ಹಾ (INR 5L), ಪರಸ್ ಗುರ್ಬೌಕ್ಸ್ ಆರ್ಯ (INR 0.5L), ಲೋಚನ್ ಎಸ್ ಗೌಡ (INR 0.5L)

ಹರಾಜು ಪ್ರಕ್ರಿಯೆ ಸಮಯ ಬೆಳಿಗ್ಗೆ : 9ಕ್ಕೆ
ನೇರ ಪ್ರಸಾರ :- ಫ್ಯಾನ್ ಕೋಡ್

Continue Reading

Trending