ಆರೋಗ್ಯ
ದೊಡ್ಡಪತ್ರೆ:ಪುಟ್ಟ ಎಲೆಗಳ ದೊಡ್ಡ ಪ್ರಯೋಜನಗಳು!
ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು. ಅಂತಹ ಒಂದು ಗಿಡಗಳಲ್ಲಿ ದೊಡ್ಡಪತ್ರೆಯೂ ಒಂದು.ಮನೆಯ ಹಿತ್ತಲಿನಲ್ಲಿರುವ ಅದೆಷ್ಟೋ ಸಸ್ಯಗಳು ಸಾಮಾನ್ಯ ಕಾಯಿಲೆಗಳಿಗೆ ಪರಿಣಾಮಕಾರಿ ಪರಿಹಾರವನ್ನು ನೀಡುತ್ತದೆ. ಹೂವಿನ ಗಿಡಗಳ ನಡುವೆಯೇ ಬೆಳೆದು ಆರೋಗ್ಯ ವೃದ್ಧಿಸುವ ಕೆಲಸ ಮಾಡುವ ಪುಟ್ಟ ಪುಟ್ಟ ಗಿಡಗಳ ಆರೋಗ್ಯ ಗುಣ ಮಾತ್ರ ಬಹು ದೊಡ್ಡದು. ಅದರಲ್ಲಿ ದೊಡ್ಡ ಪತ್ರೆ ಗಿಡ ಕೂಡ ಒಂದು. ಸಾಮಾನ್ಯವಾಗಿ ಎಲ್ಲರ ಮನೆಯ ಹಿತ್ತಲಿನಲ್ಲಿ ಈ ದೊಡ್ಡ ಪತ್ರೆ ಗಿಡ ಕಂಡು ಬರುತ್ತದೆ. ಇದನ್ನು ಪುಟ್ಟ ಪಾಟ್ನಲ್ಲಿಯೂ ಇಟ್ಟು ಬೆಳೆಸಬಹುದಾಗಿದೆ. ಇದನ್ನು ಸಾಂಬಾರ ಸೊಪ್ಪು ಅಥವಾ ಅಜವನ ಗಿಡ ಎಂದೂ ಕರೆಯುತ್ತಾರೆ.ದೊಡ್ಡಪತ್ರೆಯು ಸುಮಾರು ಮೂವತ್ತರಿಂದ ತೊಂಬತ್ತು ಸೆ.ಮೀ ಎತ್ತರದವರೆಗೆ ಬೆಳೆಯಬಲ್ಲದು, ಇದರ ಎಲೆಗಳು ದೊಡ್ಡ ಮತ್ತು ದಪ್ಪವಾಗಿದ್ದು ಕಡು ಸುವಾಸನೆಯನ್ನು ಹೊಂದಿರುತ್ತವೆ, ದೊಡ್ಡಪತ್ರೆಯ ರಂಬೆಗಳು ಮತ್ತು ಹೂಗಳು ಚಿಕ್ಕದಾಗಿದೆ.ಆಫ್ರಿಕಾ ದೇಶಗಳಲ್ಲಿ ಇದನ್ನು ಪುದೀನಾದ ಬದಲಿಗೆ ಖಾದ್ಯಗಳಲ್ಲಿ ಬಳಸುತ್ತಾರೆ. ದಕ್ಷಿಣಭಾರತದಲ್ಲಿ ಸಾಮಾನ್ಯವಾಗಿ ಇದನ್ನು ಜ್ವರ, ಶೀತ, ಕೆಮ್ಮುಗಳಿಗೆ ಮನೆಮದ್ದಾಗಿ ಬಳಸಲಾಗುತ್ತದೆ. ಗಾಯ ಅಥವಾ ಚೇಳು ಕಡಿತವಾದಾಗ ಪ್ರಥಮ ಚಿಕಿತ್ಸೆಯಾಗಿ ಇದರ ಎಲೆಗಳನ್ನು ಜಜ್ಜಿ ಬಳಸಲಾಗುತ್ತದೆ. ದಕ್ಷಿಣ ಕರ್ನಾಟಕದಲ್ಲಿ ದೊಡ್ಡಪತ್ರೆಯ ಚಟ್ನಿ, ತಂಬುಳಿ ಮಾಡಲಾಗುತ್ತದೆ. ಈಗ ಈ ದೊಡ್ಡ ಪತ್ರೆ ಸೊಪ್ಪು ಯಾವೆಲ್ಲಾ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ ಎನ್ನುವ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಿ ಇಲ್ಲಿದೆ ನೋಡಿ.
ಸಾಮಾನ್ಯವಾಗಿ ಆಹಾರ ಸೇವನೆಯಲ್ಲಿ ಬದಲಾವಣೆ, ಹವಾಮಾನದಲ್ಲಿನ ವ್ಯತ್ಯಾಸದಿಂದ ಶ್ವಾಸಕೋಶದಲ್ಲಿ ಕಫ ಕಟ್ಟಿಕೊಳ್ಳುತ್ತದೆ. ಇದರಿಂದ ಶೀತವಾದರೆ ಎಷ್ಟು ದಿನವಾದರೂ ಕಡಿಮೆಯಾಗುವುದಿಲ್ಲ. ಇದಕ್ಕೆ ದೊಡ್ಡ ಪತ್ರೆ ಸೊಪ್ಪು ಉತ್ತಮ ಮನೆಮದ್ದಾಗಿದೆ. ದೊಡ್ಡಪತ್ರೆ ಎಲೆ, ತುಳಸಿ ಎಲೆ ಮತ್ತು ವೀಳ್ಯದೆಲೆಯನ್ನು ಅರೆದು ರಸ ತೆಗೆದು ಅದಕ್ಕೆ ಜೇನುತುಪ್ಪ ಬೆರೆಸಿ ಕುಡಿದರೆ ನೆಗಡಿ, ಕೆಮ್ಮು ದೂರವಾಗುತ್ತದೆ. ಚಿಕ್ಕ ಮಕ್ಕಳಿಗೂ ಕೂಡ ಈ ದೊಡ್ಡ ಪತ್ರೆ ಸೊಪ್ಪನ್ನು ಔಷಧವಾಗಿ ಬಳಸಬಹುದಾಗಿದೆ.ದೊಡ್ಡ ಪತ್ರೆ ಸೊಪ್ಪನ್ನು ಕೊಯ್ದು ತಂದು ಬೆಂಕಿಯಲ್ಲಿ ಸುಟ್ಟು ಅದರ ರಸವನ್ನು ತೆಗದು ಅದಕ್ಕೆ ಅರ್ಧ ಚಮಚ ಬೆಲ್ಲ ಸೇರಿಸಿ ಕುಡಿದರೆ ಒಂದೆ ದಿನದಲ್ಲಿ ಶೀತ, ಕಟ್ಟಿದ ಮೂಗಿನ ಸಮಸ್ಯೆ ನಿವಾರಣೆಯಾಗುತ್ತದೆ.ದೊಡ್ಡ ಪತ್ರೆ ಸೊಪ್ಪನ್ನು ಬೆಂಕಿಯ ಮೇಲೆ ಇಟ್ಟು ಬಾಡಿಸಿ ನಂತರ ಅದನ್ನು ನೆತ್ತಿಗೆ ಹಾಕಿದರೆ ದೇಹದಲ್ಲಿನ ತಣ್ಣನೆಯ ಅಂಶ ನಿವಾರಣೆಯಾಗಿ ಜ್ವರ, ಶೀತ ಕಡಿಮೆಯಾಗುತ್ತದೆ. ಮಕ್ಕಳಿಗೆ ಇದು ಬೆಸ್ಟ್ ಔಷಧವಾಗಿದೆ.ಮಕ್ಕಳಿಗೆ ಜ್ವರ ಬಂದಾಗ ದೊಡ್ಡಪತ್ರೆ ಎಲೆ ಬಾಡಿಸಿ ನೆತ್ತಿಯ ಮೇಲೆ ಇಡುತ್ತಾರೆ. ಈ ಎಲೆಗಳ ಪೇಸ್ಟ್ ತಯಾರಿಸಿ ಅದನ್ನು ಚೇಳು ಕಚ್ಚಿದ ಗಾಯಕ್ಕೆ ಹಚ್ಚಿದರೆ ನೋವು ದೂರವಾಗುತ್ತದೆ. ಒಂದು ವಾರದವರೆಗೆ ದೊಡ್ಡ ಪತ್ರೆಯ ಎಲೆಗಳನ್ನು ತಿಂದರೆ ಅರಿಶಿಣ ಕಾಮಾಲೆ ವಾಸಿಯಾಗುತ್ತದೆ. ದೊಡ್ಡಪತ್ರೆಯನ್ನು ಜೀರಿಗೆ, ಎಳ್ಳಿನೊಂದಿಗೆ ಹುರಿದು ಕಾಯಿತುರಿ ಜೊತೆ ರುಬ್ಬಿ ಅದಕ್ಕೆ ಉಪ್ಪು, ಮಜ್ಜಿಗೆ ಹಾಕಿ ತಂಬುಳಿ ಮಾಡಿ ಕುಡಿದರೆ ಪಿತ್ತದ ಖಾಯಿಲೆಗಳು ಗುಣಮುಖವಾಗುವುದು.ದೊಡ್ಡಪತ್ರೆ ಎಲೆಯನ್ನು ಉಪ್ಪಿನ ಸಹಿತ ತಿಂದರೆ ಜೀರ್ಣಶಕ್ತಿ ಅಧಿಕವಾಗುತ್ತದೆ. ದೊಡ್ಡ ಪತ್ರೆ ಎಲೆಯನ್ನು ಹುಳುಕಡ್ಡಿಯ ಭಾಗಕ್ಕೆ ತಿಕ್ಕುತ್ತಿದ್ದರೆ ಹುಳುಕಡ್ಡಿಯ ನಿವಾರಣೆಯಾಗುತ್ತದೆ. ದೊಡ್ಡ ಪತ್ರೆಯಲ್ಲಿ ವಿಟಮಿನ್ ಸಿ, ಫೈಬರ್ ಮತ್ತು ಕ್ಯಾಲ್ಸಿಯಂ ಗುಣ ಹೇರಳವಾಗಿದೆ. ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಬಲಗೊಳಿಸಲು ಸಹಾಯ ಮಾಡುತ್ತದೆ.ದೊಡ್ಡ ಪತ್ರೆಯ ಗಿಡದ ಎಲೆಯನ್ನು ತಂದು ಬಾಡಿಸಿ ರಸ ತೆಗೆದು ಜೇನುತುಪ್ಪ ಸೇರಿಸಿ ಕುಡಿದರೆ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ. ಅರಿಸಿನ ಕಾಮಾಲೆ ಇದ್ದವರಿಗೂ ದೊಡ್ಡ ಪತ್ರೆ ಸೊಪ್ಪು ಉತ್ತಮ ಮನೆ ಮದ್ದಾಗಿದೆ. ಈ ಎಲೆಯನ್ನು ಆಹಾರ ರೂಪದಲ್ಲಿ ಅಂದರೆ ಚಟ್ನಿ, ತಂಬುಳಿ ಮಾಡಿ ಸೇವಿಸಿದರೆ ಕೆಲವೇ ದಿನಗಳಲ್ಲಿ ಕಾಯಿಲೆ ಚೇತರಿಕೆಯನ್ನು ಕಾಣುತ್ತದೆ. ಕಂಬಳಿ ಹುಳ, ಇಸುಬು ಇಂತಹ ಕೀಟಗಳು ಕಚ್ಚಿದ್ದರೆ ಸಹಿಸಲಾರದ ಉರಿ ಚರ್ಮಕ್ಕಾಗುತ್ತದೆ. ಇದನ್ನು ತಡೆಯಲು ಈ ದೊಡ್ಡ ಪತ್ರೆ ಸೊಪ್ಪು ಸಹಾಯಕವಾಗಿದೆ.
ದೊಡ್ಡ ಪತ್ರೆ ಎಲೆಯ ರಸಕ್ಕೆ ಬೆಲ್ಲ ಸೇರಿಸಿ ಕುಡಿದಾಗ ಬೆಲ್ಲ ಕೂಡ ದೇಹಕ್ಕೆ ಒಳ್ಳೆಯ ಪದಾರ್ಥವಾಗಿದೆ. ಇದು ದೇಹದಿಂದ ವಿಷಯುಕ್ತ ಪದಾರ್ಥವನ್ನು ಹೊರಹಾಕಲು ನೆರವಾಗುತ್ತದೆ. ಆದ್ದರಿಂದ ನಿಮ್ಮ ಮನೆಯ ಹಿತ್ತಲಿನಲ್ಲಿ ದೊಡ್ಡ ಪತ್ರೆ ಸೊಪ್ಪಿದ್ದರೆ ಜೋಪಾನ ಮಾಡಿ ಉಳಿಸಿಕೊಳ್ಳ.
ಆರೋಗ್ಯ
LIFE STYLE ನಿಂತುಕೊಂಡು ನೀರು ಕುಡಿಯುವುದರಿಂದ ಏನಾಗುತ್ತದೆ?
ಬೆಂಗಳೂರು: ಇಂದಿನ ವೇಗದ ಜೀವನಶೈಲಿಯಲ್ಲಿ ನಾವು ಅನೇಕ ಸಣ್ಣ ಅಭ್ಯಾಸಗಳನ್ನು ಗಮನಿಸದೆ ನಿರ್ಲಕ್ಷಿಸುತ್ತೇವೆ. ಅದರಲ್ಲಿ ಪ್ರಮುಖವಾದುದು ನಿಂತುಕೊಂಡು ನೀರು ಕುಡಿಯುವ ಅಭ್ಯಾಸ. ಕಚೇರಿಯಾಗಲಿ, ಮನೆಯಲ್ಲಾಗಲಿ ಅಥವಾ ಹೊರಗಡೆ ಇದ್ದಾಗಲೂ ಜನರು ನಿಂತೆಯೇ ನೀರು ಕುಡಿಯುತ್ತಾರೆ. ಆದರೆ ಈ ಸಣ್ಣ ಅಭ್ಯಾಸವೇ ಭವಿಷ್ಯದಲ್ಲಿ ದೊಡ್ಡ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎನ್ನುವುದು ಆಯುರ್ವೇದದ ಎಚ್ಚರಿಕೆ.
ನಾವು ಕುಳಿತುಕೊಂಡು ನೀರು ಕುಡಿದಾಗ ದೇಹವು ಅದನ್ನು ನಿಧಾನವಾಗಿ ಹೀರಿಕೊಳ್ಳಲು ಅವಕಾಶ ದೊರಕುತ್ತದೆ. ಇದರಿಂದ ನೀರು ದೇಹದ ಅಂಗಾಂಗಗಳಿಗೆ ಸಮರ್ಪಕವಾಗಿ ವಿತರಣೆ ಆಗುತ್ತದೆ. ಆದರೆ ನಿಂತುಕೊಂಡು ನೀರು ಕುಡಿಯುವಾಗ ನೀರು ವೇಗವಾಗಿ ಹೊಟ್ಟೆಗೆ ಸೇರುತ್ತದೆ. ಇದರಿಂದ ದೇಹವು ಅದನ್ನು ಸರಿಯಾಗಿ ಬಳಸಿಕೊಳ್ಳಲು ಸಾಧ್ಯವಾಗದೆ, ಜೀರ್ಣಕ್ರಿಯೆಯ ಮೇಲೆ ದುಷ್ಪರಿಣಾಮ ಬೀರುತ್ತದೆ.
ಆಯುರ್ವೇದದ ಪ್ರಕಾರ, ನಿಂತು ನೀರು ಕುಡಿಯುವುದರಿಂದ ದೇಹದ ನೀರಿನ ಸಮತೋಲನ ಹಾಳಾಗುತ್ತದೆ. ಪರಿಣಾಮವಾಗಿ ನೀರು ಕೀಲುಗಳು ಮತ್ತು ಮೊಣಕಾಲುಗಳ ಸುತ್ತ ಸಂಗ್ರಹವಾಗುತ್ತದೆ. ಇದರಿಂದ ಚಿಕ್ಕ ವಯಸ್ಸಿನಲ್ಲಿಯೇ ಮೊಣಕಾಲು ನೋವು, ಕೀಲು ಬಿಗಿತ ಮತ್ತು ಸಂಧಿ ಸಮಸ್ಯೆಗಳು ಕಾಣಿಸಿಕೊಳ್ಳಬಹುದು.
ಇನ್ನೂ, ನಿಂತು ನೀರು ಕುಡಿಯುವುದರಿಂದ ನೀರು ಸರಿಯಾಗಿ ಶೋಧನೆ ಆಗದೆ ನೇರವಾಗಿ ಮೂತ್ರಪಿಂಡಗಳಿಗೆ ತಲುಪುತ್ತದೆ. ಇದು ಮೂತ್ರಪಿಂಡಗಳ ಮೇಲೆ ಹೆಚ್ಚುವರಿ ಒತ್ತಡ ಉಂಟುಮಾಡುತ್ತದೆ. ದೀರ್ಘಕಾಲ ಈ ಅಭ್ಯಾಸ ಮುಂದುವರಿದರೆ ಕಿಡ್ನಿ ಸಮಸ್ಯೆಗಳಿಗೂ ಕಾರಣವಾಗಬಹುದು.
ಜೀರ್ಣಕ್ರಿಯೆ ಹದಗೆಡುವುದರಿಂದ ಗ್ಯಾಸ್, ಆಮ್ಲೀಯತೆ, ಎದೆಯುರಿ, ಮಲಬದ್ಧತೆ ಹಾಗೂ ಹೊಟ್ಟೆ ಭಾರವಾದ ಅನುಭವ ಉಂಟಾಗುತ್ತದೆ. ದೇಹವು ನೀರನ್ನು ಸರಿಯಾಗಿ ಬಳಸಿಕೊಳ್ಳದಾಗ ಶಕ್ತಿ ಕುಂಠಿತವಾಗುತ್ತದೆ ಮತ್ತು ವ್ಯಕ್ತಿಗೆ ನಿರಂತರ ದಣಿವು ಹಾಗೂ ಆಲಸ್ಯ ಕಾಣಿಸಿಕೊಳ್ಳುತ್ತದೆ.
ಆರೋಗ್ಯವಾಗಿರಲು ಬಯಸಿದರೆ ಯಾವಾಗಲೂ ಆರಾಮವಾಗಿ ಕುಳಿತು, ನಿಧಾನವಾಗಿ ನೀರು ಕುಡಿಯಬೇಕು. ತುಂಬಾ ತಣ್ಣನೆಯ ನೀರನ್ನು ತಪ್ಪಿಸಿ, ಕೋಣೆಯ ಉಷ್ಣಾಂಶದ ನೀರನ್ನು ಗಾಜು ಅಥವಾ ಮಣ್ಣಿನ ಪಾತ್ರೆಯಲ್ಲಿ ಸಂಗ್ರಹಿಸಿ ಕುಡಿಯುವುದು ಉತ್ತಮ ಎಂದು ತಜ್ಞರು ಸಲಹೆ ನೀಡುತ್ತಾರೆ.
Blog
ತೀರ್ಥಹಳ್ಳಿಯಲ್ಲಿ ಮಂಗನ ಕಾಯಿಲೆಗೆ ಯುವಕ ಬಲಿ
ಶಿವಮೊಗ್ಗ, ಜನವರಿ 29: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸಸಿ ತೋಟ ಗ್ರಾಮದಲ್ಲಿ ಮಂಗನ ಕಾಯಿಲೆ (KFD – Kyasanur Forest Disease) ಸೋಂಕಿಗೆ ಮತ್ತೊಂದು ಬಲಿ ಬಿದ್ದಿದೆ. 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.
ಮೃತರನ್ನು ಸಸಿ ತೋಟ ನಿವಾಸಿ ಕಿಶೋರ್ ಎಂದು ಗುರುತಿಸಲಾಗಿದೆ. ಜನವರಿ 20ರಿಂದ ಕಿಶೋರ್ ಅವರಿಗೆ ತೀವ್ರ ಜ್ವರ, ತಲೆನೋವು, ದೇಹದ ನೋವು ಸೇರಿದಂತೆ ಮಂಗನ ಕಾಯಿಲೆಗೆ ಸಂಬಂಧಿಸಿದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಆರಂಭದಲ್ಲಿ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದ್ದು, ಜ್ವರ ತಗ್ಗದೆ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು.
ರೋಗಲಕ್ಷಣಗಳು ಉಲ್ಬಣಗೊಂಡ ಹಿನ್ನೆಲೆ ಜನವರಿ 25ರಂದು ಹೆಚ್ಚಿನ ಚಿಕಿತ್ಸೆಗೆ ಉಡುಪಿ ಜಿಲ್ಲೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿನ ತಜ್ಞ ವೈದ್ಯರ ತಂಡ ಸತತವಾಗಿ ಚಿಕಿತ್ಸೆ ನೀಡಿದರೂ, ಸೋಂಕಿನ ತೀವ್ರತೆ ಹೆಚ್ಚಾಗಿದ್ದರಿಂದ ಕಿಶೋರ್ ಚಿಕಿತ್ಸೆಗೇ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಈ ಘಟನೆ ಬಳಿಕ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ತೀರ್ಥಹಳ್ಳಿ ಮತ್ತು ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಬಿಗಿಗೊಳಿಸಲಾಗಿದೆ. ಮಂಗನ ಕಾಯಿಲೆ ಟಿಕ್ (Tick) ಮೂಲಕ ಹರಡುವ ಸೋಂಕಾಗಿರುವುದರಿಂದ ಅರಣ್ಯ ಪ್ರದೇಶಕ್ಕೆ ತೆರಳುವವರು ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಅಧಿಕಾರಿಗಳು ಸಲಹೆ ನೀಡಿದ್ದಾರೆ.
ಕಳೆದ ಕೆಲ ತಿಂಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಅರಣ್ಯ ಅಂಚಿನ ಗ್ರಾಮಗಳಲ್ಲಿ ವಾಸಿಸುವ ಜನರು ಮತ್ತು ಅರಣ್ಯಕ್ಕೆ ಹೋಗುವ ಕೂಲಿ ಕಾರ್ಮಿಕರು ವಿಶೇಷ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಜ್ವರ, ತಲೆನೋವು, ರಕ್ತಸ್ರಾವದಂತಹ ಲಕ್ಷಣಗಳು ಕಂಡುಬಂದರೆ ತಕ್ಷಣವೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ಸಂಪರ್ಕಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.
ಆರೋಗ್ಯ
EGG HEALTH BENIFITS : ಪ್ರತಿದಿನ ಮೊಟ್ಟೆ ತಿನ್ನುವುದರಿಂದ ಏನು ಲಾಭ?
ಆರೋಗ್ಯ ಡೆಸ್ಕ್: ಮೊಟ್ಟೆ (Egg) ಅತ್ಯಂತ ಪೌಷ್ಟಿಕ ಹಾಗೂ ಸುಲಭವಾಗಿ ಲಭ್ಯವಿರುವ ಆಹಾರಗಳಲ್ಲಿ ಒಂದಾಗಿದೆ. ಆದರೆ ದಿನಕ್ಕೆ ಎಷ್ಟು ಮೊಟ್ಟೆಗಳನ್ನು ಸೇವಿಸಬೇಕು ಎಂಬ ಗೊಂದಲ ಬಹುತೇಕ ಜನರಲ್ಲಿ ಕಂಡುಬರುತ್ತದೆ. ಅತಿಯಾದ ಮೊಟ್ಟೆ ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗಬಹುದಾದ್ದರಿಂದ ಸರಿಯಾದ ಪ್ರಮಾಣ ತಿಳಿದುಕೊಳ್ಳುವುದು ಬಹಳ ಮುಖ್ಯ.
ಹಾರ್ವರ್ಡ್ ಹಾಗೂ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯಗಳೊಂದಿಗೆ ಕಾರ್ಯನಿರ್ವಹಿಸುವ ಖ್ಯಾತ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಸೌರಭ್ ಸೇಥಿ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅವರ ಪ್ರಕಾರ, ಮೊಟ್ಟೆಗಳು ಸಂಪೂರ್ಣ ಪ್ರೋಟೀನ್ ಅನ್ನು ಹೊಂದಿದ್ದು, ಒಂಬತ್ತು ಅಗತ್ಯ ಅಮೈನೋ ಆಮ್ಲಗಳನ್ನು ಒಳಗೊಂಡಿವೆ. ಇದರಿಂದ ಸ್ನಾಯುಗಳ ನಿರ್ಮಾಣ ಮತ್ತು ಪುನರ್ ನಿರ್ಮಾಣಕ್ಕೆ ಸಹಾಯವಾಗುತ್ತದೆ. ಜಿಮ್ಗೆ ಹೋಗುವವರಿಗೆ ಇದು ಅತ್ಯುತ್ತಮ ಮತ್ತು ಕಡಿಮೆ ವೆಚ್ಚದ ಆಹಾರವಾಗಿದೆ.
ಡಾ. ಸೇಥಿ ಅವರು ಹಸಿ ಮೊಟ್ಟೆ ಸೇವನೆ ತಪ್ಪಿಸಬೇಕು ಎಂದು ಎಚ್ಚರಿಸಿದ್ದಾರೆ. ಹಸಿ ಮೊಟ್ಟೆಗಳಿಂದ ಸಾಲ್ಮೊನೆಲ್ಲಾ ಸೋಂಕಿನ ಅಪಾಯವಿದ್ದು, ಬೇಯಿಸಿದ ಮೊಟ್ಟೆಗಳಲ್ಲಿ ಇರುವ ಪ್ರೋಟೀನ್ ದೇಹಕ್ಕೆ ಉತ್ತಮವಾಗಿ ಹೀರಿಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.
ಮೊಟ್ಟೆಗಳು ವಿಟಮಿನ್ ಎ, ಡಿ, ಇ, ಬಿ12 ಹಾಗೂ ಕಬ್ಬಿಣ, ಸೆಲೆನಿಯಮ್, ರಂಜಕದಂತಹ ಖನಿಜಗಳಲ್ಲಿ ಸಮೃದ್ಧವಾಗಿವೆ. ಮೊಟ್ಟೆಯ ಹಳದಿ ಭಾಗದಲ್ಲಿರುವ ಲುಟೀನ್ ಮತ್ತು ಜಿಯಾಕ್ಸಾಂಥಿನ್ ಕಣ್ಣುಗಳ ಆರೋಗ್ಯಕ್ಕೆ ಉಪಯುಕ್ತವಾಗಿದ್ದು, ವಯಸ್ಸಿನ ಪರಿಣಾಮದಿಂದ ಉಂಟಾಗುವ ದೃಷ್ಟಿ ಸಮಸ್ಯೆಗಳಿಂದ ರಕ್ಷಿಸುತ್ತದೆ.
ಸಾಮಾನ್ಯವಾಗಿ, ಪ್ರತಿದಿನ 1 ರಿಂದ 2 ಮೊಟ್ಟೆಗಳನ್ನು ಸೇವಿಸುವುದು ಹೆಚ್ಚಿನ ಜನರಿಗೆ ಸುರಕ್ಷಿತ ಎಂದು ಡಾ. ಸೌರಭ್ ಸೇಥಿ ಹೇಳಿದ್ದಾರೆ. ಸರಿಯಾದ ಪ್ರಮಾಣದಲ್ಲಿ ಮೊಟ್ಟೆ ಸೇವಿಸಿದರೆ ತೂಕ ನಿಯಂತ್ರಣ, ಹೃದಯ ಆರೋಗ್ಯ ಮತ್ತು ಒಟ್ಟಾರೆ ದೈಹಿಕ ಕ್ಷೇಮಕ್ಕೆ ಸಹಕಾರಿ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
-
ಬೆಂಗಳೂರು10 hours agoBENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ
-
ದೇಶ10 hours agoGBA ELECTION : 5 ಪಾಲಿಕೆಗಳಿಗೆ ವಾರ್ಡ್ ಗಡಿ ಪಾಲನೆ ಕಡ್ಡಾಯ – ಮುಖ್ಯ ಆಯುಕ್ತ ಸೂಚನೆ
-
ಅಪರಾಧ9 hours agoCRIME : ಬೆಂಗಳೂರಿನಲ್ಲಿ ಮತ್ತೆ ರೋಡ್ ರೇಜ್: ಬಾನೆಟ್ ಮೇಲೆ ವ್ಯಕ್ತಿ ಇದ್ದರೂ 1 ಕಿ.ಮೀ ಕಾರು ಚಲಾಯಿಸಿದ ಚಾಲಕ
-
ದೇಶ8 hours agoLATEST : “ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ
-
ದೇಶ7 hours ago2026 ಪ್ರೇಮಿಗಳ ದಿನ ಶನಿವಾರ: ರೋಮ್ಯಾಂಟಿಕ್ ವಾರಾಂತ್ಯಕ್ಕೆ ಟಾಪ್ 5 ಪ್ರವಾಸ ತಾಣಗಳು
-
ದೇಶ8 hours agoBHARATH BANDH : ದೇಶವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರ ಹೋರಾಟ, ಹಲವು ರಾಜ್ಯಗಳಲ್ಲಿ ಬಂದ್ ಪರಿಣಾಮ
-
ಅಪರಾಧ8 hours agoBAIRATHI BASAVARJU BREAKING NEWS : ಸಿಐಡಿ ಲುಕ್ಔಟ್ ನೋಟಿಸ್ ಜಾರಿ, ತನಿಖೆ ತೀವ್ರ
-
ದೇಶ9 hours agoಹೊಸಕೋಟೆಗೆ ಬಜೆಟ್ ಬಲ ಸಿಗುತ್ತಾ? ಮೆಟ್ರೋ, ನೀರಾವರಿ, ಒಳಚರಂಡಿ ಯೋಜನೆಗಳ ನಿರೀಕ್ಷೆ
