ದೇಶ
ಈ ಸಲ ಕಪ್ ನಮ್ದೇ ಘೋಷವಾಕ್ಯ ಹುಟ್ಟಿದ್ದು ಹೇಗೆ? ಅದು ಆರ್ಸಿಬಿ ತಂಡಕ್ಕೆ ಸ್ಫೂರ್ತಿ ತುಂಬಿದ್ದು ಹೇಗೆ? ಇದರ ಹಿಂದಿದೆ ರೋಚಕ ಇತಿಹಾಸ!
ಬೆಂಗಳೂರು: 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಕಪ್ ಗೆದ್ದಿದೆ. ಕೋಟ್ಯಂತರ ಅಭಿಮಾನಿಗಳ ಆಶಯದಂತೆ ಈ ಸಲ ಕಪ್ ನಮ್ಮದಾಗಿದೆ. ಇದಕ್ಕೆ ಸ್ಫೂರ್ತಿ ಆಗಿದ್ದು, “ಈ ಸಲ ಕಪ್ ನಮ್ದೆ” ಎಂಬ ಘೋಷ ವಾಕ್ಯ! ಈ ಘೋಷ ವಾಕ್ಯದ ಹಿಂದೆಯೂ ಒಂದು ಐಪಿಲ್ ಇತಿಹಾಸ ಇದೆ. ಪ್ರತಿ ಬಾರಿ ಅಭಿಮಾನಿಗಳು ಈ ಸಲ ಕಪ್ ನಮ್ದೇ ಎಂದು ಹೇಳಿಕೊಂಡೇ ಬರುತ್ತಿದ್ದರು. ಕೊನೆಗೂ ಅಭಿಮಾನಿಗಳ ಆಸೆ ಈಡೇರಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ಸಂಜೆ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸುತ್ತಿದ್ದಂತೆ ಈ ಸಲ ಕಪ್ ನಮ್ದೇ ಎಂಬ ಘೋಷ ವಾಕ್ಯ ಮುಗಿಲು ಮುಟ್ಟಿತ್ತು. ಬೆಂಗಳೂರಿನ ಬೀದಿ ಬೀದಿಗಳಲ್ಲಿ ಅಭಿಮಾನಿಗಳು ಈ ಸಲ ಕಪ್ ನಮ್ದೇ ಎಂದು ಕೂಗಿ ಕಪ್ಪಳಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಹಾಗಿದ್ದರೆ ಬನ್ನಿ ಈ ಸಲ ಕಪ್ ನಮ್ದೇ ಎಂಬ ಪದ ಹುಟ್ಟಿದ್ದು ಹೇಗೆ? ಅದರ ಹಿಂದಿನ ರೋಚಕ ಇತಿಹಾಸವನ್ನು ತಿಳಿಯೋಣ!
ಈ ಸಲ ಕಪ್ ನಮ್ದೇ ಪದ ಹುಟ್ಟಿದ್ದು ಹೇಗೆ?
ಅದು 2016. ಆರ್ಸಿಬಿ ಮಾಜಿ ನಾಯಕ ವಿರಾಟ್ ಕೋಹ್ಲಿ ತಮ್ಮ ವೃತ್ತಿ ಜೀವನದಲ್ಲೇ ಅತ್ಯುತ್ತಮ ಫಾರ್ಮ್ನಲ್ಲಿ ಇದ್ದರು. ಆ ವರ್ಷ ಆರ್ಸಿಬಿ ತಂಡ ಫೈನಲ್ ಅನ್ನು ತಲುಪಿತ್ತು. ಆದರೆ, ಅಂತಿಮ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಕೇವಲ 8 ರನ್ಗಳ ಅಂತರದಿಂದ ಸೋಲು ಅನುಭವಿಸಿತ್ತು. ಅದಾದ ಬಳಿಕ 2017ರಲ್ಲಿ ಆರ್ಸಿಬಿ ತಂಡದ ಪ್ರದರ್ಶನ ಹೇಳಿಕೊಳ್ಳುವ ಮಟ್ಟದಲ್ಲಿ ಇರಲಿಲ್ಲ. ಇಡೀ ತಂಡ ಅಭಿಮಾನಿಗಳ ಮುಂದೆ ತಲೆ ತಗ್ಗಿಸಿತ್ತು. ಆರ್ಸಿಬಿ 2017ರಲ್ಲಿ ಕೊನೆಯ ತಂಡವಾಗಿ ಟೂರ್ನಿಯನ್ನು ಸಮಾಪ್ತಿಗೊಳಿಸಿತ್ತು. ಆದರೆ, ಆರ್ಸಿಬಿ ಅಭಿಮಾನಿಗಳು ಮಾತ್ರ ತಮ್ಮ ನೆಚ್ಚಿನ ತಂಡವನ್ನು ಬಿಟ್ಟುಕೊಡಲಿಲ್ಲ. ಆರ್ಸಿಬಿಯ ಈ ಸೋಲೇ ಈ ಸಲ ಕಪ್ ನಮ್ದೇ ಎಂಬ ಘೋಷ ವಾಕ್ಯ ಹುಟ್ಟಲು ಕಾರಣವಾಯಿತು. ಸೋಲಿನಿಂದ ಧೃತಿಗೆಡದ ಆರ್ಸಿಬಿ ಅಭಿಮಾನಿಗಳು ಮುಂದಿನ ಬಾರಿ ಆರ್ಸಿಬಿ ಕಪ್ ಗೆದ್ದೇ ಗಲ್ಲಲಿದೆ ಎಂಬ ಭರವಸೆಯೊಂದಿಗೆ ಈ ಸಲ ಕಪ್ ನಮ್ದೇ ಎಂಬ ಘೋಷ ವಾಕ್ಯವನ್ನು ಹುಟ್ಟು ಹಾಕಿದರು. ಬಳಿಕ ಈ ವಾಕ್ಯ ಆರ್ಸಿಬಿ ಅಧಿಕೃತ ಜಾಲತಾಣವನ್ನು ಕೂಡ ಅಲಂಕರಿಸಿತು. ಆದರೆ, ಈ ಒಂದು ಕ್ಷಣಕ್ಕಾಗಿ ಆರ್ಸಿಬಿ ಅಭಿಮಾನಿಗಳು 8 ವರ್ಷ ಕಾಯಬೇಕಾಗಿ ಬಂತು!
ಈ ಪದ ಆರ್ಸಿಬಿಗೆ ಸ್ಫೂರ್ತಿ ತುಂಬಿದ್ದು ಹೇಗೆ?
2017ರ ಸೋಲಿನಿಂದ ಧೃತಿಗೆಡದ ಆರ್ಸಿಬಿ 2018ರ ಅನ್ಬಾಕ್ಸ್ ಇವೆಂಟ್ನಲ್ಲಿ ʼಈ ಸಲ ಕಪ್ ನಮ್ದೇ!ʼ ಎಂದು ಅಧಿಕೃತವಾಗಿ ಘೋಷಿಸಿತು. ಅಂದಿನ ನಾಯಕ ವಿರಾಟ್ ಕೊಹ್ಲಿ ಈ ಸಲ ಕಪ್ ನಮ್ದೇ ಎಂದು ಹೇಳಿದ್ದು ವೈರಲ್ ಆಯಿತು. ಈ ಮೂಲಕ ಈ ಪದ ಆರ್ಸಿಬಿ ತಂಡದ ಘೋಷವಾಕ್ಯವಾಗಿ ರೂಪಗೊಂಡಿತು. ಆದರೆ, 2018ರಲ್ಲಿಯೂ ಆರ್ಸಿಬಿ ಕಪ್ ಗೆಲ್ಲಲು ಆಗಲೇ ಇಲ್ಲ. ಆದರೂ ಅಭಿಮಾನಿಗಳು ಮಾತ್ರ ಈ ಬಾರಿ ಕಪ್ ನಮ್ದೇ ಎಂದು ಹೇಳುವುದನ್ನು ನಿಲ್ಲಿಸಲಿಲ್ಲ. ಪ್ರತಿ ಬಾರಿ ಆರ್ಸಿಬಿ ಸೋತಾಗಲೂ ಅ ಅಭಿಮಾನಿಗಳು ಈ ಸಲ ಕಪ್ ನಮ್ದೇ ಎಂದು ಎದೆ ತಟ್ಟಿ ಹೇಳಿಕೊಳ್ಳುತ್ತಿದ್ದು. ಟೀಕೆಗಳನ್ನು ಲೆಕ್ಕಿಸದೇ ಆರ್ಸಿಬಿ ಅಭಿಮಾನಿಗಳು ತಂಡವನ್ನು ಹುರುದುಂಬಿಸಿದರು. ಇದು ತಂಡದ ಸ್ಫೂರ್ತಿ ಪತಾಕೆಯನ್ನು ಎತ್ತಿಹಿಡಿಯಲು ಕಾರಣವಾಯಿತು. ಈ ಒಂದು ಪದವೇ ತಂಡಕ್ಕೆ ಸ್ಫೂರ್ತಿಯನ್ನು ತುಂಬಿತು. ಈ ಘೋಷವಾಕ್ಯ ಹುಟ್ಟಿ 8 ವರ್ಷದ ಬಳಿಕ ಆರ್ಸಿಬಿ ಕಪ್ ಗೆದ್ದಿದೆ. ಅಭಿಮಾನಿಗಳ ಕನಸು ನನಸಾಗಿದೆ.
ಈ ಬಾರಿಯ ಐಪಿಎಲ್ನಲ್ಲಿ ಆರ್ಸಿ ಉತ್ತಮ ಪ್ರದರ್ಶನ ತೋರಿ ಫೈನಲ್ ತಲುಪುತ್ತಿದ್ದತೆ ಪ್ರತಿಯೊಬ್ಬ ಅಭಿಮಾನಿಗಳ ಬಾಯಲ್ಲಿ ಬರುತ್ತಿದ್ದದ್ದು ಒಂದೇ ಪದ. ಈ ಸಲ ಕಪ್ ನಮ್ದೇ! ಫೈನಲ್ ಪಂದ್ಯದ 18 ನೇ ಓವರ್ನಲ್ಲಿ ಬಹುತೇಕ ಆರ್ಸಿಬಿ ಗೆಲುವು ಖಚಿತವಾಗುವ ರೀತಿಯಲ್ಲಿತ್ತು. ಸ್ಟೇಡಿಯಂನ ಬಿಗ್ ಸ್ಕ್ರೀನ್ನಲ್ಲಿ ಈ ಸಲ ಕಪ್ ನಮ್ದೇ ಎಂದು ತೋರಿಸುತ್ತಿದ್ದಂತೆ ಮೈದಾನದಲ್ಲಿ ಆರ್ಸಿಬಿ ಅಭಿಮಾನಿಗಳ ಕೂಗು ಮುಗಿಲು ಮಟ್ಟಿತ್ತು. ಅಭಿಮಾನಿಗಳು ಹುಚ್ಚೆದ್ದು ಕುಣಿಯಲು ಆರಂಭಿಸಿದರು. ಸಾಮಾಜಿಕ ಜಾಲತಾಣಗಳಲಿ #ಈ ಸಲ ಕಪ್ ನಮ್ದೇ ಟ್ರೆಂಡ್ ಆಯಿತು. ಸಾಮಾಜಿಕ ಜಾಲತಾಣದಲ್ಲಿ ಸಂಚಲನಕ್ಕೆ ಕಾರಣವಾಯಿತು.
ಕೊನೆಗೂ ಈ ಸಲ ಕಪ್ ನಮ್ಮದಾಯ್ತು!
ಹೌದು, ಈ ಸಲ ಕಪ್ ನಮ್ಮದಾಗಿದೆ. 18 ವರ್ಷಗಳ ಕಾಯುವಿಕೆ ಕೊನೆಗೊಂಡಿದೆ. ಈ ಒಂದು ಕ್ಷಣಕ್ಕಾಗಿ ಆರ್ಸಿಬಿ ಅಭಿಮಾನಿಗಳು 18 ವರ್ಷ ಕಾದಿದ್ದರು. ಪಂದ್ಯ ಮುಗಿದ ಬಳಿಕ ಆರ್ಸಿಬಿ ದಿಗ್ಗಜರಾದ ವಿರಾಟ್ ಕೊಹ್ಲಿ, ಎಬಿಡಿ ವಿಲಿಯರ್ಸ್ ಹಾಗೂ ಕ್ರಿಸ್ಗೇಲ್ ಒಟ್ಟಿಗೇ ಸೇರಿ ಈ ಸಲ ಕಪ್ ನಮ್ದು! ಎಂದು ಘೋಷಿಸುಸಿದರು. ಸ್ವತಃ ವಿರಾಟ್ ಕೊಹ್ಲಿ ತಾನು ಜೀವನದಲ್ಲಿ ಈ ಒಂದು ಕ್ಷಣವನ್ನು ನೋಡುತ್ತೇನೆ ಅಂದುಕೊಂಡಿರಲಿಲ್ಲ. ಈ ಗೆಲುವಿಗೆ ಅಭಿಮಾನಿಗಳ ಸ್ಫೂರ್ತಿಯೇ ಕಾರಣ ಎಂದು ಹೇಳಿಕೊಂಡಿದ್ದಾರೆ. ಆರ್ಸಿಬಿ ಅಭಿಮಾನಿಗಳಿಗೂ ಇದೇ ಬೇಕಿತ್ತು. ಕೊನೆಗೂ ಆ ಮಾತು ನಿಜವಾಗಿದೆ. ಈ ಸಲ ಕಪ್ ನಮ್ಮದು!
ದೇಶ
ದೆಹಲಿಯಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ; ಕನ್ನಡ ಭವನದಲ್ಲಿ ಸಚಿವರ ಉಪಹಾರ ಸಭೆ
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ Siddaramaiah ಅವರು ಇಂದು ಬೆಳಗ್ಗೆ ರಾಜಧಾನಿಯ ಕನ್ನಡ ಭವನದಲ್ಲಿ ರಾಜ್ಯದ ಪ್ರಮುಖ ಸಚಿವರು ಹಾಗೂ ಕಾಂಗ್ರೆಸ್ ನಾಯಕರೊಂದಿಗೆ ಉಪಹಾರ ಸೇವನೆ ಮಾಡುವ ಮೂಲಕ ಪರೋಕ್ಷವಾಗಿ ತಮ್ಮ ರಾಜಕೀಯ ಶಕ್ತಿ ಪ್ರದರ್ಶನ ಮಾಡಿದ್ದಾರೆ.
ಈ ಉಪಹಾರ ಸಭೆಯಲ್ಲಿ ಗೃಹ ಸಚಿವ G. Parameshwara, ಸಚಿವರಾದ Satish Jarkiholi, H. C. Mahadevappa, Bairathi Suresh, K. J. George, M. B. Patil ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ಜೊತೆಗೆ ಹಿರಿಯ ಕಾಂಗ್ರೆಸ್ ಮುಖಂಡ B. K. Hariprasad ಹಾಗೂ ಕಾನೂನು ಸಲಹೆಗಾರ ಪೊನ್ನಣ್ಣ ಸಹ ಉಪಸ್ಥಿತರಿದ್ದರು.
ಈ ವೇಳೆ ರಾಜ್ಯ ಕಾಂಗ್ರೆಸ್ನ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಹಾಗೂ ಸಚಿವ ಸಂಪುಟ ಪುನರ್ರಚನೆ ಕುರಿತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ. ಹೈಕಮಾಂಡ್ ಭೇಟಿಗೂ ಮುನ್ನ ರಾಜ್ಯದ ಪ್ರಭಾವಿ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ.
ಇದೇ ವೇಳೆ ನವದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿ ‘ಇಂದಿರಾ ಭವನ’ದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ ಆರಂಭಿಸಿದೆ. ಉಪ ಮುಖ್ಯಮಂತ್ರಿ D. K. Shivakumar ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಜೊತೆ ಮಾತುಕತೆ ನಡೆಸಲಿದ್ದಾರೆ.
ಎಐಸಿಸಿ ಅಧ್ಯಕ್ಷ Mallikarjun Kharge, ಲೋಕಸಭೆ ವಿರೋಧ ಪಕ್ಷದ ನಾಯಕ Rahul Gandhi, ಎಐಸಿಸಿ ಪ್ರಧಾನ ಕಾರ್ಯದರ್ಶಿ K. C. Venugopal ಹಾಗೂ ರಾಜ್ಯ ಉಸ್ತುವಾರಿ Randeep Singh Surjewala ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
ಇದರ ಜೊತೆಗೆ ಜೂನ್ 18ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಕುರಿತೂ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ದೇಶ
“ಡಿಕೆಶಿ ಗುಂಪುಕಟ್ಟುವ ರಾಜಕಾರಣಿ ಅಲ್ಲ”; ಶಾಸಕ ಬಾಲಕೃಷ್ಣ
ನವದೆಹಲಿ: ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಮಾಗಡಿ ಶಾಸಕ H. C. Balakrishna ಡಿಸಿಎಂ D. K. Shivakumar ಪರವಾಗಿ ಮಹತ್ವದ ಹೇಳಿಕೆ ನೀಡಿದ್ದಾರೆ. “ಡಿಕೆ ಶಿವಕುಮಾರ್ ಅವರು ಗುಂಪುಕಟ್ಟಿಕೊಂಡು ರಾಜಕೀಯ ಮಾಡುವವರಲ್ಲ. ಅವರು ಹೈಕಮಾಂಡ್ಗೆ ನಿಷ್ಠೆಯಿಂದ ಇರುವ ನಾಯಕ” ಎಂದು ಹೇಳಿದ್ದಾರೆ.
ದೆಹಲಿಯಲ್ಲಿ https://hosasuddi.in/ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ Siddaramaiah ಹಾಗೂ ಡಿಕೆ ಶಿವಕುಮಾರ್ ಇಬ್ಬರನ್ನೂ ಚರ್ಚೆಗೆ ಕರೆದಿರುವುದರಿಂದ ಇಂದು ಏನಾದರೂ ಸ್ಪಷ್ಟ ತೀರ್ಮಾನ ಹೊರಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.
“ರಾಜ್ಯದಲ್ಲಿ ಉಂಟಾಗಿರುವ ಗೊಂದಲಕ್ಕೆ ಹೈಕಮಾಂಡ್ ತೆರೆ ಎಳೆಯಬೇಕು. ಎಲ್ಲವೂ ಸ್ಪಷ್ಟವಾಗಬೇಕು. ಮುಂದಿನ ಚುನಾವಣೆಯ ದೃಷ್ಟಿಯಿಂದ ಇದು ಅಗತ್ಯ” ಎಂದು ಬಾಲಕೃಷ್ಣ ಅಭಿಪ್ರಾಯಪಟ್ಟರು.
ಸಿಎಂ ಜೊತೆ ಕೆಲವು ಸಚಿವರು ದೆಹಲಿಗೆ ತೆರಳಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, “ಇದರಲ್ಲಿ ವಿಶೇಷ ಏನೂ ಇಲ್ಲ. ಈ ಹಿಂದೆಯೂ ಸಿಎಂ ದೆಹಲಿಗೆ ಹೋಗುವಾಗ ಸಚಿವರು ಜೊತೆಯಾಗುತ್ತಿದ್ದರು. ಕುತೂಹಲದಿಂದ 3-4 ಸಚಿವರು ಹೋಗಿರಬಹುದು” ಎಂದು ಹೇಳಿದರು.
ಇದಲ್ಲದೆ, “2028ರ ವಿಧಾನಸಭೆ ಚುನಾವಣೆ ಕಾಂಗ್ರೆಸ್ಗೆ ಬಹಳ ಮುಖ್ಯ. ಈಗಿನ ಗೊಂದಲ ಪರಿಹಾರವಾದರೆ ಮುಂದಿನ ಚುನಾವಣೆಗೆ ಅನುಕೂಲವಾಗಲಿದೆ. ಆದರೆ ನಾವು ಮಾತನಾಡಿದ ಕೂಡಲೇ ಏನೂ ಆಗುವುದಿಲ್ಲ. ಹೈಕಮಾಂಡ್ಗೆ ಎಲ್ಲವೂ ಗೊತ್ತಿದೆ. ಅವರ ತೀರ್ಮಾನವೇ ಅಂತಿಮ” ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಪವರ್ ಶೇರಿಂಗ್ ಹಾಗೂ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಬಾಲಕೃಷ್ಣ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಆರೋಗ್ಯ
WHO ಎಚ್ಚರಿಕೆ ಬಳಿಕ ಭಾರತದಲ್ಲೂ ಮುನ್ನೆಚ್ಚರಿಕೆ ಕ್ರಮ; ವಿಜಯವಾಡದಲ್ಲಿ ಕ್ಯಾಂಪ್
ವಿಜಯವಾಡ: ಜಾಗತಿಕ ಮಟ್ಟದಲ್ಲಿ ಎಬೋಲಾ ವೈರಸ್ ಕುರಿತ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ, ಆಂಧ್ರ ಪ್ರದೇಶ ಆರೋಗ್ಯ ಇಲಾಖೆ ವಿಜಯವಾಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಎಬೋಲಾ ತಪಾಸಣಾ ಶಿಬಿರ ಆರಂಭಿಸಿದೆ. ಸಿಂಗಾಪುರದಿಂದ ಆಗಮಿಸುವ ಪ್ರಯಾಣಿಕರ ಮೇಲೆ ಕಟ್ಟುನಿಟ್ಟಿನ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.
ಆಂಧ್ರ ಸರ್ಕಾರ ನಿಯೋಜಿಸಿರುವ ವೈದ್ಯಕೀಯ ತಂಡಗಳು ಪ್ರಯಾಣಿಕರ ದೇಹದ ಉಷ್ಣಾಂಶ ಪರೀಕ್ಷೆ, ಆರೋಗ್ಯ ಲಕ್ಷಣಗಳ ಪರಿಶೀಲನೆ ಹಾಗೂ ಶಂಕಿತ ಸೋಂಕಿನ ಗುರುತು ಪತ್ತೆ ಕಾರ್ಯ ನಡೆಸುತ್ತಿವೆ. ಜ್ವರ, ವಾಂತಿ, ದೌರ್ಬಲ್ಯ ಅಥವಾ ರಕ್ತಸ್ರಾವದಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ಮಾಹಿತಿ ನೀಡುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ.
ಆರೋಗ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಇದು ಕೇವಲ ಮುನ್ನೆಚ್ಚರಿಕಾ ಕ್ರಮವಾಗಿದ್ದು ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ವಿಶ್ವ ಆರೋಗ್ಯ ಸಂಸ್ಥೆ (WHO) ಹೊರಡಿಸಿರುವ ಆರೋಗ್ಯ ಎಚ್ಚರಿಕೆ ಹಿನ್ನೆಲೆಯಲ್ಲಿ ನಿಗಾ ಕ್ರಮ ಬಲಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ನಡುವೆ ಮಾಜಿ WHO ಮುಖ್ಯ ವಿಜ್ಞಾನಿ Soumya Swaminathan ಭಾರತವು ಎಬೋಲಾ ವಿರುದ್ಧದ ಸಂಶೋಧನೆ, ಲಸಿಕೆ ಅಭಿವೃದ್ಧಿ ಹಾಗೂ ರೋಗ ಪತ್ತೆ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರ ವಹಿಸಬಹುದು ಎಂದು ಹೇಳಿದ್ದಾರೆ. WHO ಹಾಗೂ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಸಹಯೋಗದೊಂದಿಗೆ ಭಾರತ ಹೆಚ್ಚಿನ ಸಂಶೋಧನೆ ಕೈಗೊಳ್ಳಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಪ್ರಸ್ತುತ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ ಹಾಗೂ ಉಗಾಂಡಾದ ಕೆಲವು ಭಾಗಗಳಲ್ಲಿ ಎಬೋಲಾ ಸೋಂಕು ಹೆಚ್ಚಳ ಕಂಡುಬಂದಿದೆ. WHO ಮಹಾನಿರ್ದೇಶಕ Tedros Adhanom Ghebreyesus ನೀಡಿರುವ ಮಾಹಿತಿಯಂತೆ, ಕಾಂಗೋದಲ್ಲಿ ಈಗಾಗಲೇ 101 ಪ್ರಕರಣಗಳು ದೃಢಪಟ್ಟಿದ್ದು, 10 ಮಂದಿ ಮೃತಪಟ್ಟಿದ್ದಾರೆ. ಇನ್ನೂ ನೂರಾರು ಶಂಕಿತ ಪ್ರಕರಣಗಳ ತನಿಖೆ ನಡೆಯುತ್ತಿದೆ.
ಎಬೋಲಾ ವೈರಸ್ನ ‘ಬುಂಡಿಬುಗ್ಯೋ’ ರೂಪಾಂತರಿ ತಳಿಯು ಪತ್ತೆ ಹಾಗೂ ಚಿಕಿತ್ಸೆ ಕಾರ್ಯಕ್ಕೆ ಸವಾಲು ಎಸೆದಿರುವುದರಿಂದ ಜಾಗತಿಕ ಆರೋಗ್ಯ ಸಂಸ್ಥೆಗಳು ಎಚ್ಚರಿಕೆಯಿಂದ ಪರಿಸ್ಥಿತಿಯನ್ನು ಗಮನಿಸುತ್ತಿವೆ.
-
ದೇಶ4 hours ago‘ಕಾಕ್ರೋಚ್ ಜನತಾ ಪಾರ್ಟಿ’ಗೆ ಅಧಿಕೃತ ರೂಪ? ಚುನಾವಣಾ ಆಯೋಗಕ್ಕೆ ಅರ್ಜಿ
-
ದೇಶ2 hours agoದೆಹಲಿಯಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ; ಕನ್ನಡ ಭವನದಲ್ಲಿ ಸಚಿವರ ಉಪಹಾರ ಸಭೆ
-
ದೇಶ4 hours agoಡಿಕೆಶಿಗೆ ಹೊಸ ಸವಾಲಾ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜಾರಕಿಹೊಳಿ ಲಾಬಿ
-
ದೇಶ3 hours agoಇಂದಿರಾ ಭವನದಲ್ಲಿ ಮೂರು ಸುತ್ತಿನ ಸಭೆ; ಕರ್ನಾಟಕ ಸಿಎಂ ಬದಲಾವಣೆ ಚರ್ಚೆ ತೀವ್ರ
-
ದೇಶ3 hours agoಸಿದ್ದರಾಮಯ್ಯ ರಾಜೀನಾಮೆ ಊಹಾಪೋಹಕ್ಕೆ ಹೊಸ ತಿರುವು; ಡಿಕೆಶಿಗೆ ಮತ್ತೆ ನಿರಾಸೆಯೇ?
-
ದೇಶ4 hours agoಕದನ ವಿರಾಮ ಮಾತುಕತೆ ಮಧ್ಯೆಯೇ US ಏರ್ಸ್ಟ್ರೈಕ್; ಬಂದರ್ ಅಬ್ಬಾಸ್ನಲ್ಲಿ ಸ್ಫೋಟ
-
ಆರೋಗ್ಯ3 hours agoWHO ಎಚ್ಚರಿಕೆ ಬಳಿಕ ಭಾರತದಲ್ಲೂ ಮುನ್ನೆಚ್ಚರಿಕೆ ಕ್ರಮ; ವಿಜಯವಾಡದಲ್ಲಿ ಕ್ಯಾಂಪ್
-
ಕ್ರೀಡೆ4 hours agoಕೊಹ್ಲಿಗೆ ಜೊತೆಯಾಗೋದು ಯಾರು? ಆರ್ಸಿಬಿ ಪ್ಲೇಯಿಂಗ್ ಇಲೆವೆನ್ ಗೊಂದಲ
