Connect with us

ಬೆಂಗಳೂರು

ಅಕ್ಟೋಬರ್‌ ತಿಂಗಳಲ್ಲೇ ಈ ಸರ್ಕಾರದ ಕಥೆ ಮುಗಿಯಲಿದೆ : ಆರ್‌.ಅಶೋಕ್

Published

on

ಬೆಂಗಳೂರು: ಯುವ ಜನರ ಸಾವಿನ ಶಾಪ ತಟ್ಟಿ ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಇಂದು ಬಿಜೆಪಿ ವತಿಯಿಂದ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆರ್​ಸಿಬಿ ಗೆದ್ದದ್ದು ಸಿದ್ದರಾಮಯ್ಯ ಮತ್ತು ತಂಡವೇ ಅಥವಾ ಡಿ.ಕೆ.ಶಿವಕುಮಾರ್ ಮತ್ತವರ ತಂಡವೇ ಎಂಬಂತೆ ವಿಜಯೋತ್ಸವ ಮಾಡಿದ್ದಾರೆ ಎಂದು ಕಿಡಿಕಾರಿದರು.

ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಪ್ಪು ಮಾಡಿಲ್ಲದಿದ್ದರೆ ಸರಿಯಾಗಿ ತನಿಖೆ ನಡೆಸಬೇಕಿತ್ತು. ಈಗ ಹೈಕೋರ್ಟ್‌ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದರೆ, ಕೋರ್ಟ್‌ ಸರ್ಕಾರವನ್ನು ನಂಬುತ್ತಿಲ್ಲ ಎಂದರ್ಥ. ಮೃತ 11 ಜನರ ಕುಟುಂಬದವರನ್ನೇ ಕೇಳಿ ತನಿಖೆಗೆ ನೀಡಬಹುದಿತ್ತು. ಮೊದಲು ಜಿಲ್ಲಾಧಿಕಾರಿ, ಆ ನಂತರ ನಿವೃತ್ತ ನ್ಯಾಯಾಧೀಶರು, ಆ ಬಳಿಕ ಎಸ್‌ಐಟಿ ತನಿಖೆ ಎಂದು ಹೇಳಿದ್ದಾರೆ. ಯಾವುದರಲ್ಲೂ ಖಚಿತತೆ ಇಲ್ಲ ಎಂದರು.

ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರು ಕ್ರಿಕೆಟಿಗರ ಜೊತೆಗೆ ಫೋಟೋ ಶೂಟ್‌ ಮಾಡಿಕೊಂಡಿದ್ದರಿಂದಲೇ 11 ಜನರು ಮೃತರಾಗಿದ್ದಾರೆ. ಬಿಜೆಪಿ ಎಲ್ಲ ಬಗೆಯ ಹೋರಾಟಗಳನ್ನು ಮಾಡಿದೆ. ಇನ್ನು ಮುಂದೆಯೂ ಹೋರಾಟ ಮಾಡಲಿದೆ. ಸರ್ಕಾರವೇ ಜನರನ್ನು ವಿಧಾನಸೌಧಕ್ಕೆ ಆಹ್ವಾನಿಸಿದೆ. ಹಾಗೆ ಆಹ್ವಾನ ನೀಡದೇ ಹೋಗಿದ್ದರೆ ಈ ದುರಂತ ನಡೆಯುತ್ತಿರಲಿಲ್ಲ. ನಾವು ಪ್ರತಿಭಟನೆ ಮಾಡಿದಾಗ ನೂರಾರು ಪೊಲೀಸರು ಬಂದಿದ್ದರು. ಅದೇ ರೀತಿ ಎರಡು ಲಕ್ಷ ಜನರನ್ನು ನಿಯಂತ್ರಣ ಮಾಡಲು ಹೆಚ್ಚು ಪೊಲೀಸರನ್ನು ನಿಯೋಜಿಸಬೇಕಿತ್ತು ಎಂದು ಹೇಳಿದರು.

ಡಿಕೆಶಿ ಚಿಂತೆಯಲ್ಲಿದ್ದಾರೆ ಅಶೋಕ್​ ವ್ಯಂಗ್ಯ: ಇದಕ್ಕಾಗಿಯೇ ಮೂರು ದಿನದ ಅಧಿವೇಶನ ಕರೆಯಲು ಆಗ್ರಹಿಸಿದ್ದೇನೆ. ಸರ್ಕಾರದ ತಪ್ಪಿಲ್ಲ ಎಂದಾದರೆ ಯಾರ ತಪ್ಪು ಎಂದು ಸರಿಯಾಗಿ ತಿಳಿಸಲಿ. ಅಕ್ಟೋಬರ್‌ ತಿಂಗಳಲ್ಲೇ ಈ ಸರ್ಕಾರದ ಕಥೆ ಮುಗಿಯಲಿದೆ. ಎಲ್ಲ ಶಾಸಕರು ನಾವೇ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಇನ್ನು 2028 ಕ್ಕೆ ಇವರು ಅಧಿಕಾರಕ್ಕೆ ಬರಲು ಹೇಗೆ ಸಾಧ್ಯ? ಡಿ.ಕೆ.ಶಿವಕುಮಾರ್‌ ಬಹಳ ಚಿಂತೆಯಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.

ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಅಲ್ಲಿ ಬನ್ನಿ, ಇಲ್ಲಿ ಬನ್ನಿ ಎಂದು ಕರೆದಿದ್ದಾರೆ. ಹೀಗೆ ಕರೆದು 11 ಜನರ ಪ್ರಾಣ ತೆಗೆದಿದ್ದಾರೆ. ಕಪ್ ಆರ್​​ಸಿಬಿಯದು. ಆದರೆ, ತಪ್ಪು ಸರ್ಕಾರದ್ದು. ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿದ್ದಾರೆ. ಇಂಟೆಲಿಜೆನ್ಸ್ ಮುಖ್ಯಸ್ಥರಾದವರನ್ನು ಅಮಾನತು ಮಾಡಿಲ್ಲವೇಕೆ? ಎಂದು ಪ್ರಶ್ನಿಸಿದರು.

ಸಿಎಂ, ಡಿಸಿಎಂ ಇಮೇಜ್​ಗೆ 11 ಬಲಿ: ವಿಜಯೇಂದ್ರ

ಮುಖ್ಯಮಂತ್ರಿಗಳ ಜನಪ್ರಿಯತೆ ಹೆಚ್ಚಿಸಲು ಮತ್ತು ಇಮೇಜ್ ವೃದ್ಧಿಗೆ ಆರ್​ಸಿಬಿ ವಿಜಯೋತ್ಸವದ ಕಾರ್ಯಕ್ರಮ ಏರ್ಪಡಿಸಿದ್ದಾರೆ ಹಾಗೂ 11 ಜನರ ಸಾವಿಗೆ ಕಾರಣವಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ಕಾಲ್ತುಳಿತ ಪ್ರಕರಣದಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡ್ಂ ಪಾರ್ಕ್​ನಲ್ಲಿ ಇಂದು ಬಿಜೆಪಿ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದ ಉಪ ಮುಖ್ಯಮಂತ್ರಿಯವರು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾರ್ಯಕ್ರಮ ನಡೆಸಿದ್ದಾರೆ. ಮುಖ್ಯಮಂತ್ರಿ – ಉಪ ಮುಖ್ಯಮಂತ್ರಿಗಳ ನಡುವಿನ ಪೈಪೋಟಿ, ಹುಚ್ಚಾಟದಿಂದ 11 ಜನ ಅಮಾಯಕರು ಸಾವನ್ನಪ್ಪಿದ್ದಾರೆ ಎಂದು ಆಕ್ಷೇಪಿಸಿದರು.

ಇಂಥ ಭಂಡ ಸರ್ಕಾರ, ಮುಖ್ಯಮಂತ್ರಿ – ಉಪ ಮುಖ್ಯಮಂತ್ರಿಗಳು ಜನಪ್ರಿಯತೆ ಕಳೆದುಕೊಂಡಿದ್ದಾರೆ. ರಾಜ್ಯ ಸರ್ಕಾರದ ಪ್ರಾಯೋಜಕತ್ವದಲ್ಲಿ ಈ 11 ಜನರು ಸಾಯುವಂತಾಗಿದೆ. ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

ಮಾಜಿ ಸಚಿವ ಬೈರತಿ ಬಸವರಾಜ್ ಮಾತನಾಡಿ, ಈ ಸರ್ಕಾರ ಕೂಡಲೇ ತೊಲಗಬೇಕು. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ರಾಜ್ಯ

B Nagendra ದಿಢೀರ್ Delhi ಭೇಟಿ; Congress High Command ಜೊತೆ ಮಹತ್ವದ ಮಾತುಕತೆ ಸಾಧ್ಯತೆ!

Published

on

By

ನವದೆಹಲಿ: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಸಚಿವ B Nagendra ಅವರು ರಾತ್ರೋರಾತ್ರಿ ರಾಷ್ಟ್ರ ರಾಜಧಾನಿ Delhi ಗೆ ತೆರಳಿದ್ದಾರೆ. ಸದ್ಯ ದೆಹಲಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ ಅವರು, ಇಂದು Congress High Command ನ ಪ್ರಮುಖ ನಾಯಕರನ್ನು ಭೇಟಿಯಾಗುವ ಸಾಧ್ಯತೆಯಿದೆ.

ರಾಜ್ಯ ರಾಜಕೀಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ವಿವಾದ ತೀವ್ರವಾಗಿರುವ ಸಂದರ್ಭದಲ್ಲೇ ನಾಗೇಂದ್ರ ಅವರ ದಿಢೀರ್ ದೆಹಲಿ ಭೇಟಿ ಕುತೂಹಲ ಮೂಡಿಸಿದೆ. ಪ್ರಕರಣದ ವಿಚಾರವಾಗಿ ವಿರೋಧ ಪಕ್ಷಗಳು ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿದ್ದು, ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲು ಸಿದ್ಧತೆ ನಡೆಸಿವೆ. ಹೀಗಾಗಿ ನಾಗೇಂದ್ರ ಅವರ ದೆಹಲಿ ಪ್ರವಾಸಕ್ಕೆ ರಾಜಕೀಯ ಮಹತ್ವ ಬಂದಿದೆ.

ಖರ್ಗೆ ಸೇರಿದಂತೆ ವರಿಷ್ಠರನ್ನು ಭೇಟಿಯಾಗುವ ಸಾಧ್ಯತೆ

ದೆಹಲಿಯಲ್ಲಿ ಸಚಿವ ನಾಗೇಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರನ್ನು ಭೇಟಿಯಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಹಾಗೂ ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಕುರಿತು ಪಕ್ಷದ ವರಿಷ್ಠರಿಗೆ ಮಾಹಿತಿ ನೀಡುವ ಸಾಧ್ಯತೆ ಇದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣದ ಹಿನ್ನೆಲೆಯಲ್ಲಿ ನಾಗೇಂದ್ರ ಅವರ ಹೆಸರು ರಾಜಕೀಯವಾಗಿ ಪದೇಪದೆ ಚರ್ಚೆಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ತಮ್ಮ ನಿಲುವನ್ನು ಹೈಕಮಾಂಡ್ ಮುಂದೆ ಸ್ಪಷ್ಟಪಡಿಸುವ ಉದ್ದೇಶದಿಂದ ಅವರು ದೆಹಲಿಗೆ ತೆರಳಿದ್ದಾರೆ ಎನ್ನಲಾಗುತ್ತಿದೆ.

ಸಚಿವ ಸ್ಥಾನಕ್ಕೆ ಕಂಟಕವಾಗುತ್ತಾ ವಿವಾದ?

ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆಯನ್ನೂ ವಿರೋಧ ಪಕ್ಷಗಳು ನೀಡಿವೆ.

ಇದರ ನಡುವೆಯೇ ನಾಗೇಂದ್ರ ಅವರು ಕಾಂಗ್ರೆಸ್‌ ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಸಚಿವ ಸ್ಥಾನದಲ್ಲಿ ಮುಂದುವರಿಯುತ್ತಾರೆಯೇ ಅಥವಾ ಪ್ರಕರಣದ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಯಾವುದೇ ನಿರ್ಧಾರ ಕೈಗೊಳ್ಳುತ್ತಾರೆಯೇ ಎಂಬ ಕುತೂಹಲ ರಾಜ್ಯ ರಾಜಕೀಯದಲ್ಲಿ ಹೆಚ್ಚಾಗಿದೆ.

ದೆಹಲಿ ಭೇಟಿಯ ಬಳಿಕ ಸಿಗಲಿದೆಯೇ ಸ್ಪಷ್ಟ ಚಿತ್ರಣ?

ಸಚಿವ ನಾಗೇಂದ್ರ ಅವರ ದೆಹಲಿ ಭೇಟಿಯ ಪ್ರಮುಖ ಉದ್ದೇಶವೇನು ಎಂಬುದು ಅಧಿಕೃತವಾಗಿ ಸ್ಪಷ್ಟವಾಗಿಲ್ಲ. ಆದರೆ ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ ಹಾಗೂ ತಮ್ಮ ವಿರುದ್ಧದ ರಾಜಕೀಯ ಆರೋಪಗಳ ಕುರಿತು ಹೈಕಮಾಂಡ್ ಜೊತೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ವಿರೋಧ ಪಕ್ಷಗಳು ಸಚಿವರ ರಾಜೀನಾಮೆಗೆ ಪಟ್ಟು ಹಿಡಿದಿರುವ ಸಂದರ್ಭದಲ್ಲಿ ನಾಗೇಂದ್ರ ಅವರ ದೆಹಲಿ ಭೇಟಿ ನಡೆದಿದೆ. ಹೀಗಾಗಿ ಕಾಂಗ್ರೆಸ್‌ ವರಿಷ್ಠರೊಂದಿಗೆ ನಡೆಯುವ ಮಾತುಕತೆ ಹಾಗೂ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಮುಂದಿನ ಬೆಳವಣಿಗೆಗಳ ಬಗ್ಗೆ ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ.

ಮುಂದಿನ ದಿನಗಳಲ್ಲಿ ಪ್ರಕರಣದ ತನಿಖೆ ಯಾವ ದಿಕ್ಕಿನಲ್ಲಿ ಸಾಗುತ್ತದೆ ಮತ್ತು ಕಾಂಗ್ರೆಸ್‌ ಹೈಕಮಾಂಡ್ ಸಚಿವ ನಾಗೇಂದ್ರ ಅವರ ವಿಚಾರದಲ್ಲಿ ಯಾವ ನಿಲುವು ತೆಗೆದುಕೊಳ್ಳುತ್ತದೆ ಎಂಬುದು ಇದೀಗ ರಾಜ್ಯ ರಾಜಕೀಯದ ಪ್ರಮುಖ ಚರ್ಚೆಯಾಗಿದೆ.

Continue Reading

ಬೆಂಗಳೂರು

Vande Mataram ಸಂಪೂರ್ಣ ಹಾಡುವ ವಿಚಾರಕ್ಕೆ ರಾಜಕೀಯ ರಂಪಾಟ; CM ಡಿಕೆಶಿ ಹೇಳಿದ್ದೇನು?

Published

on

By

ಬೆಂಗಳೂರು: ‘Vande Mataram’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂಬ ಕಾಂಗ್ರೆಸ್ ಪಕ್ಷದ ನಿರ್ಧಾರಕ್ಕೆ ಕರ್ನಾಟಕ ಸರ್ಕಾರ ಬದ್ಧವಾಗಿರಲಿದೆ ಎಂದು ಮುಖ್ಯಮಂತ್ರಿ D.K.Shivkumar ಸ್ಪಷ್ಟಪಡಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಗೀತೆಯ ಎಲ್ಲಾ ಆರು ಚರಣಗಳನ್ನು ಹಾಡಲಾಗಿದ್ದರೂ, ಅದು ತಮ್ಮ ಗಮನಕ್ಕೆ ಬಾರದೆ ನಡೆದ ಘಟನೆ ಎಂದು ಅವರು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ಕೈಗೊಂಡಿರುವ ನಿರ್ಧಾರದಂತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

‘ಪಕ್ಷದ ನಿರ್ಧಾರಕ್ಕೆ ನಾನು ಬದ್ಧ’

ಇಂಡಿಯಾ ಟುಡೇ ಆಯೋಜಿಸಿದ್ದ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ತಾವು ಪಕ್ಷದ ಸಿದ್ಧಾಂತವನ್ನು ನಂಬುವ ವ್ಯಕ್ತಿಯಾಗಿದ್ದು, ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಹೇಳಿದರು.

ಸ್ವಾತಂತ್ರ್ಯ ದಿನಾಚರಣೆಯಂದು ವಂದೇ ಮಾತರಂ ಗೀತೆಯ ಆರು ಚರಣಗಳನ್ನು ಹಾಡಿದ ವಿಚಾರ ತಮ್ಮ ಗಮನಕ್ಕೆ ಬಂದಿರಲಿಲ್ಲ ಎಂದು ಅವರು ತಿಳಿಸಿದರು. ಅದು ತಮ್ಮ ಗಮನಕ್ಕೆ ಬಾರದೆ ನಡೆದಿರಬಹುದು ಅಥವಾ ರಾಜಭವನದಲ್ಲಿ ನಡೆದಿರಬಹುದು ಎಂದು ಹೇಳಿದ ಅವರು, ಮುಂದೆ ಯಾವುದೇ ಸರ್ಕಾರಿ ಕಾರ್ಯಕ್ರಮದಲ್ಲೂ ಹಿಂದಿನ ನಿರ್ಧಾರದಂತೆ ಮೊದಲ ಎರಡು ಚರಣಗಳಿಗೆ ಮಾತ್ರ ಸೀಮಿತವಾಗುವುದಾಗಿ ಸ್ಪಷ್ಟಪಡಿಸಿದರು.

ಕಾಂಗ್ರೆಸ್‌ ನಿರ್ಧಾರವೇನು?

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತನ್ನ ಹಿಂದಿನ ನಿಲುವನ್ನು ಪುನರುಚ್ಚರಿಸಿರುವ ಹಿನ್ನೆಲೆಯಲ್ಲಿ ಈ ಹೇಳಿಕೆ ಬಂದಿದೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು 1937ರಲ್ಲಿ ಕೈಗೊಂಡ ನಿರ್ಣಯವನ್ನು ಇತ್ತೀಚೆಗೆ ಮತ್ತೊಮ್ಮೆ ಉಲ್ಲೇಖಿಸಿದ್ದು, ಸಾರ್ವಜನಿಕ ಮತ್ತು ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವ ನಿಲುವನ್ನು ಮುಂದುವರಿಸಲು ನಿರ್ಧರಿಸಿದೆ.

ಈ ನಿರ್ಧಾರ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ವಂದೇ ಮಾತರಂ ಗೀತೆಯ ಸಂಪೂರ್ಣ ಆವೃತ್ತಿಯನ್ನು ಹಾಡಬೇಕೆಂಬ ಅಭಿಪ್ರಾಯ ಒಂದು ಕಡೆ ಇದ್ದರೆ, ಕಾಂಗ್ರೆಸ್ ತನ್ನ ಹಿಂದಿನ ಪದ್ಧತಿಯಂತೆ ಮೊದಲ ಎರಡು ಚರಣಗಳನ್ನಷ್ಟೇ ಹಾಡುವ ನಿಲುವನ್ನು ಮುಂದುವರಿಸಿದೆ.

ವಂದೇ ಮಾತರಂ ವಿವಾದಕ್ಕೆ ಕಾರಣವೇನು?

ಬಂಕಿಮ್ ಚಂದ್ರ ಚಟರ್ಜಿ ರಚಿಸಿರುವ ವಂದೇ ಮಾತರಂ ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಅತ್ಯಂತ ಪ್ರಮುಖ ರಾಷ್ಟ್ರಭಕ್ತಿ ಗೀತೆಯಾಗಿ ಹೊರಹೊಮ್ಮಿತ್ತು. ಸ್ವಾತಂತ್ರ್ಯ ಚಳವಳಿಯಲ್ಲಿ ಇದು ಜನರಲ್ಲಿ ರಾಷ್ಟ್ರೀಯ ಭಾವನೆ ಮೂಡಿಸುವ ಪ್ರಮುಖ ಸಂಕೇತವಾಗಿತ್ತು.

ಇದೀಗ ಗೀತೆಯ ಸಂಪೂರ್ಣ ಆವೃತ್ತಿಯನ್ನು ಸರ್ಕಾರಿ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಹಾಡಬೇಕೇ ಅಥವಾ ಮೊದಲ ಎರಡು ಚರಣಗಳಿಗೆ ಮಾತ್ರ ಸೀಮಿತವಾಗಬೇಕೇ ಎಂಬ ವಿಚಾರ ರಾಜಕೀಯ ಚರ್ಚೆಯ ಕೇಂದ್ರವಾಗಿದೆ.

ಸಂಪೂರ್ಣ ವಂದೇ ಮಾತರಂ ಹಾಡುವುದನ್ನು ಬೆಂಬಲಿಸುವವರು ಗೀತೆಗೆ ಅದರ ಪೂರ್ಣ ರೂಪದಲ್ಲೇ ಗೌರವ ಸಲ್ಲಿಸಬೇಕು ಎಂದು ವಾದಿಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ತನ್ನ ಐತಿಹಾಸಿಕ ನಿಲುವಿನಂತೆ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.

‘ತುಷ್ಟಿಕರಣ ರಾಜಕೀಯ’ದ ಆರೋಪಕ್ಕೂ ಡಿಕೆಶಿ ತಿರುಗೇಟು

ಇದೇ ಸಂದರ್ಭದಲ್ಲಿ ದೇಶದಲ್ಲಿ ನಡೆಯುತ್ತಿರುವ ತುಷ್ಟಿಕರಣ ರಾಜಕೀಯದ ಆರೋಪಗಳ ಬಗ್ಗೆಯೂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಪಕ್ಷವು ದೇಶದ ವೈವಿಧ್ಯತೆಯನ್ನು ನಂಬುತ್ತದೆ ಎಂದು ಅವರು ಹೇಳಿದರು.

ಭಾರತ ವಿವಿಧ ಸಮುದಾಯಗಳು, ಸಂಸ್ಕೃತಿಗಳು ಮತ್ತು ನಂಬಿಕೆಗಳನ್ನು ಹೊಂದಿರುವ ವೈವಿಧ್ಯಮಯ ದೇಶವಾಗಿದ್ದು, ಸಮಾಜದ ಪ್ರತಿಯೊಂದು ವರ್ಗವನ್ನೂ ಒಟ್ಟಿಗೆ ಕರೆದೊಯ್ಯುವುದು ಕಾಂಗ್ರೆಸ್‌ನ ಸಿದ್ಧಾಂತವಾಗಿದೆ ಎಂದು ಅವರು ಹೇಳಿದರು.

ಬಿಜೆಪಿ ಕಾಂಗ್ರೆಸ್ ವಿರುದ್ಧ ತುಷ್ಟಿಕರಣ ರಾಜಕೀಯದ ಆರೋಪ ಮಾಡುತ್ತಿದೆ. ಆದರೆ ವಾಸ್ತವವಾಗಿ ಬಿಜೆಪಿಯೇ ತುಷ್ಟಿಕರಣದ ರಾಜಕೀಯ ನಡೆಸುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದರು.

ಮುಂದಿನ ಸರ್ಕಾರಿ ಕಾರ್ಯಕ್ರಮಗಳಲ್ಲಿ ಏನಾಗಲಿದೆ?

ಸ್ವಾತಂತ್ರ್ಯ ದಿನಾಚರಣೆಯಂದು ನಡೆದ ಗಾಯನದ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರ ಸ್ಪಷ್ಟನೆ ಮಹತ್ವ ಪಡೆದುಕೊಂಡಿದೆ.

ಮುಂದಿನ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್‌ನ ನಿರ್ಧಾರದಂತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನಷ್ಟೇ ಹಾಡುವ ಸಾಧ್ಯತೆ ಇದೆ. ಈ ವಿಚಾರ ಈಗಾಗಲೇ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿರುವುದರಿಂದ, ಮುಂದಿನ ದಿನಗಳಲ್ಲಿ ವಿವಾದ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ.

Continue Reading

ರಾಜಕೀಯ

Valmiki Corporation Scam: ‘ನಾಗೇಂದ್ರ ನಿರಪರಾಧಿ ಎಂದು ಸಾಬೀತಾದರೆ ಸಿಎಂ ಮಾಡಿಕೊಳ್ಳಿ’ ಎಂದ ವಿಜಯೇಂದ್ರ

Published

on

By

ಬೆಂಗಳೂರು: Valmiki Corporation Scam ಹಣ ದುರ್ಬಳಕೆ ಪ್ರಕರಣ ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಕಾವು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ತನಿಖೆಯಲ್ಲಿ ನಾಗೇಂದ್ರ ನಿರಪರಾಧಿ ಎಂದು ಸಾಬೀತಾದರೆ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿಕೊಳ್ಳಲಿ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಚಾರ್ಜ್‌ಶೀಟ್‌ನಲ್ಲೂ ನಾಗೇಂದ್ರ ಅವರ ಹೆಸರು ಉಲ್ಲೇಖವಾಗಿದೆ ಎಂದು ಆರೋಪಿಸಿದರು.

‘ನಾಗೇಂದ್ರ ಹೆಸರು ಚಾರ್ಜ್‌ಶೀಟ್‌ನಲ್ಲಿದೆ’

ವಾಲ್ಮೀಕಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾದ ಪ್ರಕರಣದ ತನಿಖೆಯಲ್ಲಿ ಹಲವು ಗಂಭೀರ ಅಂಶಗಳು ಹೊರಬಂದಿವೆ ಎಂದು ವಿಜಯೇಂದ್ರ ಹೇಳಿದರು. ಶಿವಮೊಗ್ಗದಲ್ಲಿ ಪ್ರಾಮಾಣಿಕ ಅಧಿಕಾರಿ ಹಾಗೂ ಬೋವಿ ಸಮಾಜದ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಡೆತ್‌ನೋಟ್‌ನಲ್ಲಿ ಅಂದಿನ ಸಚಿವ ನಾಗೇಂದ್ರ ಅವರ ಮೌಖಿಕ ಆದೇಶದ ಮೇರೆಗೆ ಹಣವನ್ನು ತೆಲಂಗಾಣಕ್ಕೆ ವರ್ಗಾಯಿಸಲಾಗಿತ್ತು ಎಂದು ಉಲ್ಲೇಖಿಸಿರುವುದಾಗಿ ಅವರು ಹೇಳಿದರು.

ಈ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ಅವರನ್ನು ತಕ್ಷಣ ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

‘ದಲಿತರ ಹಣವನ್ನು ಲೂಟಿ ಮಾಡಲಾಗಿದೆ’

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣ ದುರ್ಬಳಕೆಯಾಗಿದೆ ಎಂಬುದು ಬಿಜೆಪಿಯ ಪ್ರಮುಖ ಆರೋಪವಾಗಿದೆ. ₹187 ಕೋಟಿ ಹಣ ಲೂಟಿಯಾಗಿದೆ ಎಂದು ವಿಜಯೇಂದ್ರ ಆರೋಪಿಸಿದ್ದು, ಆ ಹಣವನ್ನು ವಾಪಸ್ ಪಡೆದು ದಲಿತ ಸಮುದಾಯದ ಅಭಿವೃದ್ಧಿಗೆ ಬಳಸಬೇಕು ಎಂದು ಒತ್ತಾಯಿಸಿದರು.

“ಬಿಜೆಪಿ ಎತ್ತಿರುವ ಪ್ರಶ್ನೆ ಗಂಭೀರವಾಗಿದೆ. ಯಾವುದೇ ಕಾರಣಕ್ಕೂ ಇಂತಹ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವವರನ್ನು ಮುಂದುವರಿಸಬಾರದು” ಎಂಬ ಸಂದೇಶವನ್ನು ಅವರು ಸರ್ಕಾರಕ್ಕೆ ನೀಡಿದ್ದಾರೆ.

ಅಧಿವೇಶನ ಆರಂಭಕ್ಕೂ ಮುನ್ನವೇ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಆಗ್ರಹಿಸಿತ್ತು ಎಂದು ವಿಜಯೇಂದ್ರ ಹೇಳಿದರು. ಉತ್ತರ ಕರ್ನಾಟಕದ ಸಮಸ್ಯೆಗಳು, ಬರಗಾಲ, ನೀರಾವರಿ ಯೋಜನೆಗಳು ಹಾಗೂ ಕೆಪಿಎಸ್‌ಸಿ ಹಗರಣ ಸೇರಿದಂತೆ ಹಲವು ವಿಚಾರಗಳು ಅಧಿವೇಶನದಲ್ಲಿ ಚರ್ಚೆಯಾಗಬೇಕಿವೆ ಎಂದರು.

‘ನಮ್ಮ ಹೋರಾಟವನ್ನು ಹಗುರವಾಗಿ ತೆಗೆದುಕೊಳ್ಳಬೇಡಿ’

ವಾಲ್ಮೀಕಿ ನಿಗಮದ ಪ್ರಕರಣದ ವಿಚಾರದಲ್ಲಿ ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಹೋರಾಟವನ್ನು ಸರ್ಕಾರ ಹಗುರವಾಗಿ ಪರಿಗಣಿಸಬಾರದು ಎಂದು ವಿಜಯೇಂದ್ರ ಎಚ್ಚರಿಸಿದರು.

ಸದನದಲ್ಲಿ ದಲಿತರ ಪರವಾಗಿ ಧ್ವನಿ ಎತ್ತುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರನ್ನು ಗೂಂಡಾಗಳು ಎಂದು ಕರೆಯಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ದಲಿತ ಸಮುದಾಯಕ್ಕೆ ನ್ಯಾಯ ದೊರೆಯುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.

‘ನಾಗೇಂದ್ರ ಸಣ್ಣ ಮೀನು, ದೊಡ್ಡ ಮೀನುಗಳು ಇನ್ನೂ ಇವೆ’

ಪ್ರಕರಣದ ಹಿಂದೆ ಇನ್ನಷ್ಟು ದೊಡ್ಡ ವ್ಯಕ್ತಿಗಳು ಮತ್ತು ಶಕ್ತಿಗಳು ಇರಬಹುದು ಎಂದು ವಿಜಯೇಂದ್ರ ಗಂಭೀರ ಆರೋಪ ಮಾಡಿದರು.

“ಸಚಿವ ನಾಗೇಂದ್ರ ಬಹಳ ಸಣ್ಣ ಮೀನು ಮಾತ್ರ. ಇದರ ಹಿಂದೆ ದೊಡ್ಡ ಮೀನುಗಳು, ತಿಮಿಂಗಿಲಗಳು ಇವೆ” ಎಂದು ಹೇಳಿದ ಅವರು, ಪ್ರಕರಣದ ಸಂಪೂರ್ಣ ಸತ್ಯವನ್ನು ಹೊರಗೆ ತರುವ ನಿಟ್ಟಿನಲ್ಲಿ ಬಿಜೆಪಿ ಹೋರಾಟ ನಡೆಸಲಿದೆ ಎಂದರು.

ನಾಗೇಂದ್ರ ಅವರ ವೈಯಕ್ತಿಕ ತೇಜೋವಧೆ ಮಾಡುವುದು ಬಿಜೆಪಿಯ ಉದ್ದೇಶವಲ್ಲ. ದಲಿತ ಸಮುದಾಯಕ್ಕೆ ನ್ಯಾಯ ಕೊಡಿಸುವುದೇ ಪಕ್ಷದ ಉದ್ದೇಶ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.

ರಾಜೀನಾಮೆ ಪಡೆಯುವವರೆಗೂ ಹೋರಾಟ

ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡುವವರೆಗೂ ಬಿಜೆಪಿ ಹೋರಾಟ ಮುಂದುವರಿಯಲಿದೆ ಎಂದು ವಿಜಯೇಂದ್ರ ಘೋಷಿಸಿದರು. ವಾಲ್ಮೀಕಿ ನಿಗಮದ ಹಣವನ್ನು ಸಂಪೂರ್ಣವಾಗಿ ವಾಪಸ್ ಪಡೆದು, ಅದನ್ನು ಸಂಬಂಧಪಟ್ಟ ಸಮುದಾಯದ ಅಭಿವೃದ್ಧಿಗೆ ಬಳಸಬೇಕು ಎಂಬುದು ಬಿಜೆಪಿಯ ಪ್ರಮುಖ ಬೇಡಿಕೆಯಾಗಿದೆ.

ಈ ವಿಚಾರ ಮುಂದಿನ ವಿಧಾನಸಭಾ ಅಧಿವೇಶನದಲ್ಲೂ ಪ್ರತಿಧ್ವನಿಸುವ ಸಾಧ್ಯತೆ ಇದೆ.

ವಿಧಾನಪರಿಷತ್ ಚುನಾವಣೆಗೂ ಬಿಜೆಪಿ ತಂತ್ರ

ಇದೇ ವೇಳೆ ಮುಂಬರುವ ವಿಧಾನಪರಿಷತ್ ಚುನಾವಣೆಗಳ ಬಗ್ಗೆಯೂ ವಿಜಯೇಂದ್ರ ಮಾಹಿತಿ ನೀಡಿದರು. ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ ಕುರಿತು ಬಿಜೆಪಿ ಶಾಸಕರ ವಿಶೇಷ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದರು.

ಈ ಮೂರು ಕ್ಷೇತ್ರಗಳಲ್ಲೂ ಪ್ರಸ್ತುತ ಬಿಜೆಪಿ ಅಭ್ಯರ್ಥಿಗಳು ಹಾಗೂ ಸಂಘಟನೆ ಬಲಪಡಿಸುವ ಕುರಿತು ಕಾರ್ಯತಂತ್ರ ರೂಪಿಸಲಾಗುತ್ತಿದೆ. ಅಭ್ಯರ್ಥಿಗಳು ಮತ್ತು ಪಕ್ಷದ ಸಂಘಟನೆಯನ್ನು ಸಮನ್ವಯಗೊಳಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಸಿದ್ಧತೆ ನಡೆಸಲಾಗುತ್ತಿದೆ ಎಂದು ವಿಜಯೇಂದ್ರ ತಿಳಿಸಿದರು

Continue Reading

Trending