Connect with us

ಬಿಬಿಎಂಪಿ

ವರ್ಗಾವಣೆಯಲ್ಲಿಯೂ ಬಿಬಿಎಂಪಿ ಭ್ರಷ್ಟಾಚಾರ – ಒಲ್ಲದವರಿಗೆ ಗೇಟ್‌ ಪಾಸ್‌, ಬೇಕಾದವರಿಗೆ ಸ್ಟೇಟಸ್‌!

Published

on

ಬೆಂಗಳೂರು : ಬಿಬಿಎಂಪಿಯ ಹಲವು ಭ್ರಷ್ಟಾಚಾರಗಳ ಪೈಕಿ ಈಗ ಸಾರ್ವತ್ರಿಕ ವರ್ಗಾವಣೆಯಲ್ಲಿ ದಂಧೆ ನಡೆದಿರುವ ಆರೋಪ ಕೇಳಿಬಂದಿದೆ. ಯಾವುದೇ ಸೇವಾಜೇಷ್ಟತೆ, ಅರ್ಹತೆ, ಅನುಭವಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ ಬೇಕಾಬಿಟ್ಟಿ ವರ್ಗಾವಣೆ ಮಾಡಿದ್ದಾರೆಂದು ಸ್ವತಃ ಸಿಬ್ಬಂದಿಗಳೇ ಆಕ್ರೋಶ ಹೊರಹಾಕಿದ್ದಾರೆ.

ಒಂದೇ ಕಚೇರಿಯಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತ್ತಿರುವವರನ್ನು ವರ್ಗಾಯಿಸಬೇಕೆಂಬ ನಿಯಮವಿದ್ದರೂ ಇತ್ತೀಚೆಗೆ ನೇಮಕವಾದವರನ್ನು ವರ್ಗಾಯಿಸಿ ಹಳೆಯ ತಲೆಗಳನ್ನು ಉಳಿಸಿಕೊಳ್ಳುವ ಪ್ರಯತ್ನಗಳು ವ್ಯಾಪಕವಾಗಿ ನಡೆದಿದೆ. ಇದಕ್ಕೆ ಬಲಿಪಶುಗಳಾಗಿರುವ ಸಿಬ್ಬಂದಿಗಳು ವರ್ಗಾವಣೆಗೆ ಆಕ್ಷೇಪ ಸಲ್ಲಿಸಿದ್ದಾರೆ.

ನೇಮಕವಾಗಿರುವ ದಿನಾಂಕಕ್ಕೂ ಹಾಗೂ ಎಚ್‌ಆರ್‌ಎಂಎಸ್‌ ನಲ್ಲಿ ದಾಖಲಾಗಿರುವ ದಿನಾಂಕಕ್ಕೂ ವ್ಯತ್ಯಾಸವಿರುದು ದೋಷಪೂರಿತವೆಂದೆ ಸ್ವತಃ ಬಿಬಿಎಂಪಿ ಒಳಾಡಳಿತವೇ ಒಪ್ಪಿಕೊಂಡಿದೆ .ಆದರೂ ಸಹ ಎಚ್‌ಆರ್‌ಎಂಎಸ್‌ ದಾಖಲೆಗೆ ಅನುಸಾರವಾಗಿ ಬಿಬಿಎಂಪಿ ವರ್ಗಾವಣೆ ಮಾಡಿದೆ.

ಅಲ್ಲದೇ ಎಂಟೂ ವಲಯಗಳಲ್ಲಿಯೂ ವರ್ಗಾವಣೆಯಲ್ಲಿ ಪಕ್ಷಪಾತ ತೋರಲಾಗಿದ್ದು, ಕೇವಲ ಎರಡು ವಲಯಗಳ ಸಿಬ್ಬಂದಿಗೆ ಮಾತ್ರ ಈ ವರ್ಗಾವಣೆ ಜಾರಿಯಾಗಿದೆ. ಮಿಕ್ಕವರು ಹಣಬಲ, ಅಧಿಕಾರಿಗಳ ಬೆಂಬಲ, ಜಾತಿಬಲ ಗಳಿಂದ ಪಾರಾಗಿದ್ದಾರೆಂದು ಸಿಬ್ಬಂದಿ ವರ್ಗ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವರ್ಗಾವಣೆ ನಿಯಮ ಪಾರದರ್ಶಕವಾಗಿರಲಿ, ಎಲ್ಲರಿಗೂ ಸಮಾನವಾಗಿ ಜಾರಿಯಾಗಲಿ ಎಂದು ಸಿಬ್ಬಂದಿಗಳು ಆಗ್ರಹಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

ಚುನಾವಣೆ

GBA ELECTION : ಜುಲೈ ಮೊದಲ ವಾರದಲ್ಲೇ ವೇಳಾಪಟ್ಟಿ? ಬೆಂಗಳೂರು ರಾಜಕೀಯ ಕಣ ರಂಗೇರಲು ಸಜ್ಜು

Published

on

ಬೆಂಗಳೂರು: ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ಆದೇಶದ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರಪಾಲಿಕೆಗಳ ಚುನಾವಣೆ ಆಗಸ್ಟ್ 31ರೊಳಗೆ ನಡೆಸುವುದು ಬಹುತೇಕ ಖಚಿತವಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗವು ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದೆ.

ಮೂಲಗಳ ಪ್ರಕಾರ, ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಅಧಿಕೃತ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಜುಲೈ 10ರೊಳಗೆ ದಿನಾಂಕ ಘೋಷಣೆಯಾಗಬಹುದು ಎಂದು ಹೇಳಲಾಗುತ್ತಿದ್ದು, ವೇಳಾಪಟ್ಟಿ ಪ್ರಕಟವಾದ ತಕ್ಷಣವೇ ಬೆಂಗಳೂರು ನಗರದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಸುವ ಬಗ್ಗೆ ಆಯೋಗ ಚಿಂತನೆ ನಡೆಸಿದೆ.

ಈ ಹಿಂದೆ ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಗಡುವು ನೀಡಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಹಾಗೂ ಸಿಬ್ಬಂದಿ ಕೊರತೆಯನ್ನು ಪರಿಗಣಿಸಿ ನ್ಯಾಯಾಲಯವು ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿತ್ತು. ಜೊತೆಗೆ, ಯಾವುದೇ ಕಾರಣಕ್ಕೂ ಮತ್ತೆ ಚುನಾವಣೆ ಮುಂದೂಡುವ ಪ್ರಸ್ತಾಪವನ್ನು ತನ್ನ ಮುಂದೆ ತರಬಾರದು ಎಂದು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ನೀಡುವಂತೆ ಸರ್ಕಾರ ಸಲ್ಲಿಸಿದ್ದ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ.

ಇದರ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗವು ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ಸಿದ್ಧತೆ ಹಾಗೂ ಸಿಬ್ಬಂದಿ ನಿಯೋಜನೆ ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿದೆ. ರಾಜಕೀಯ ಪಕ್ಷಗಳೂ ಚುನಾವಣೆಗೆ ಸಜ್ಜಾಗಿವೆ. ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಕಾರ್ಯಕರ್ತರಿಗೆ ಸೂಚನೆ ನೀಡಿದೆ. ಬಿಜೆಪಿ, ಕಳೆದ ಆರು ವರ್ಷಗಳಿಂದ ಚುನಾವಣೆ ನಡೆಯದ ಪರಿಣಾಮ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಆರೋಪಿಸುತ್ತಿದೆ. ಇತ್ತ ಬಿಜೆಪಿ-ಜೆಡಿಎಸ್ ಮೈತ್ರಿಯೂ ಚುನಾವಣಾ ಅಖಾಡಕ್ಕೆ ಸಜ್ಜಾಗಿದ್ದು, ಪಂಚ ಪಾಲಿಕೆ ಚುನಾವಣೆ ಭಾರೀ ಪೈಪೋಟಿಗೆ ಸಾಕ್ಷಿಯಾಗುವ ನಿರೀಕ್ಷೆ ಮೂಡಿದೆ.

Continue Reading

ದೇಶ

ರಾಮಲಿಂಗಾರೆಡ್ಡಿ ಬಳಿಕ ಮುನಿಯಪ್ಪ ಬಂಡಾಯ! ಕಾಂಗ್ರೆಸ್ ಹೈಕಮಾಂಡ್ ತುರ್ತು ಸಭೆ

Published

on

ದೇವನಹಳ್ಳಿ, ಜೂನ್ 5: ನೂತನ ಮುಖ್ಯಮಂತ್ರಿ D. K. Shivakumar ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆಯ ಬೆನ್ನಲ್ಲೇ ಅಸಮಾಧಾನದ ಹೊಗೆ ದಟ್ಟವಾಗುತ್ತಿದೆ. ಹಿರಿಯ ನಾಯಕ Ramalinga Reddy ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ ಬೆನ್ನಲ್ಲೇ ಆಹಾರ ಸಚಿವ K. H. Muniyappa ಕೂಡ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿರುವುದು ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವಾಗಿ ಪರಿಣಮಿಸಿದೆ.

ಈ ಬೆಳವಣಿಗೆಯಿಂದ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ವರಿಷ್ಠರು, ಸರ್ಕಾರದ ಆರಂಭದಲ್ಲೇ ಉಂಟಾಗಿರುವ ಬಿಕ್ಕಟ್ಟನ್ನು ಶಮನಗೊಳಿಸಲು ದೇವನಹಳ್ಳಿ ಬಳಿಯ Kempegowda International Airport ಸಮೀಪದ ವಿಐಪಿ ಲಾಂಜ್ ಹಾಗೂ ತಾಜ್ ಹೋಟೆಲ್‌ನಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಕಾಂಗ್ರೆಸ್ ನಾಯಕ Rahul Gandhi, ಎಐಸಿಸಿ ಉಸ್ತುವಾರಿ Randeep Singh Surjewala, ಮಾಜಿ ಮುಖ್ಯಮಂತ್ರಿ Siddaramaiah ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದು, ಅಸಮಾಧಾನಗೊಂಡಿರುವ ನಾಯಕರನ್ನು ಮನವೊಲಿಸುವ ಪ್ರಯತ್ನ ನಡೆದಿದೆ.

ಖಾತೆ ಹಂಚಿಕೆಯಲ್ಲಿ ತಮ್ಮ ಹಿರಿತನಕ್ಕೆ ಸೂಕ್ತ ಗೌರವ ಸಿಕ್ಕಿಲ್ಲ ಎಂದು ಬೇಸರಗೊಂಡಿರುವ ಕೆ.ಎಚ್. ಮುನಿಯಪ್ಪ, ತಮಗೆ ಕೃಷಿ ಅಥವಾ ಸಮಾಜ ಕಲ್ಯಾಣ ಇಲಾಖೆಯನ್ನು ನೀಡುವಂತೆ ವರಿಷ್ಠರ ಮುಂದೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ತಮಗೆ ಹಂಚಿಕೆಯಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜವಾಬ್ದಾರಿಯನ್ನು ಸ್ವೀಕರಿಸುವುದಿಲ್ಲ ಎಂದು ಅವರು ಹಠ ಹಿಡಿದಿರುವುದು ಸರ್ಕಾರಕ್ಕೆ ಮತ್ತಷ್ಟು ಮುಜುಗರ ಉಂಟುಮಾಡಿದೆ.

ಇದಕ್ಕೂ ಮುನ್ನ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿದ್ದರಿಂದ ಅಸಮಾಧಾನಗೊಂಡ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಇದರಿಂದ ಸರ್ಕಾರ ರಚನೆಯಾದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಒಳಗೆ ಭಿನ್ನಮತದ ಧ್ವನಿ ಜೋರಾಗಿದೆ.

ಈ ಬೆಳವಣಿಗೆಗಳು ಕಾಂಗ್ರೆಸ್ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಸವಾಲುಗಳನ್ನು ತಂದೊಡ್ಡಿದ್ದು, ಹೈಕಮಾಂಡ್ ನಡೆಸುತ್ತಿರುವ ಈ ಹೈವೋಲ್ಟೇಜ್ ಸಭೆಯ ಫಲಿತಾಂಶದ ಮೇಲೆ ರಾಜ್ಯ ರಾಜಕಾರಣದ ಮುಂದಿನ ಬೆಳವಣಿಗೆಗಳು ಅವಲಂಬಿತವಾಗಿವೆ.

Continue Reading

ಚುನಾವಣೆ

ಪೆರಂಬೂರ್ ಕಣಕ್ಕೆ ನಟ ವಿಜಯ್ ಎಂಟ್ರಿ: ತಮಿಳುನಾಡು ರಾಜಕೀಯದಲ್ಲಿ ಸಂಚಲನ

Published

on

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ನಟ Vijay ನೇತೃತ್ವದ Tamilaga Vettri Kazhagam (TVK) ಪಕ್ಷದ ರಾಜಕೀಯ ಪ್ರವೇಶ ರಾಜ್ಯ ರಾಜಕೀಯ ಸಮೀಕರಣಗಳಲ್ಲಿ ಭಾರೀ ಬದಲಾವಣೆ ತಂದಿದೆ. ವಿಶೇಷವಾಗಿ, ವಿಜಯ್ ಅವರು ಪೆರಂಬೂರ್ ವಿಧಾನಸಭಾ ಕ್ಷೇತ್ರವನ್ನು ತಮ್ಮ ಚೊಚ್ಚಲ ಚುನಾವಣಾ ಕಣವಾಗಿ ಆರಿಸಿಕೊಂಡಿರುವುದು ದೊಡ್ಡ ಚರ್ಚೆಗೆ ಕಾರಣವಾಗಿದೆ.

Perambur ಕ್ಷೇತ್ರವು ಸಾಂಪ್ರದಾಯಿಕವಾಗಿ ದ್ರಾವಿಡ ಪಕ್ಷಗಳ ಭದ್ರಕೋಟೆಯಾಗಿದ್ದರೂ, ಈ ಬಾರಿ ವಿಜಯ್ ಪ್ರವೇಶದಿಂದಾಗಿ ಹೈ-ಪ್ರೊಫೈಲ್ ಕಣವಾಗಿ ಪರಿಣಮಿಸಿದೆ. Dravida Munnetra Kazhagam (DMK) ಮತ್ತು All India Anna Dravida Munnetra Kazhagam (AIADMK) ಪಕ್ಷಗಳಿಗೆ ಇದು ಹೊಸ ಸವಾಲಾಗಿ ಪರಿಣಮಿಸಿದೆ.

ಈ ಕ್ಷೇತ್ರದಲ್ಲಿ ಡಿಎಂಕೆ ಒಂಬತ್ತು ಬಾರಿ ಗೆಲುವು ಸಾಧಿಸಿದ್ದು, ಸತ್ಯವಾಣಿ ಮುತ್ತು ಮತ್ತು ಪರಿಥಿ ಇಲಂವಝುತಿ ಅವರಂತಹ ನಾಯಕರಿಂದ ರಾಜಕೀಯ ಇತಿಹಾಸ ರೂಪುಗೊಂಡಿದೆ. 2016ರಲ್ಲಿ ಎಐಎಡಿಎಂಕೆ ಅಲ್ಪ ಅಂತರದಲ್ಲಿ ಗೆಲುವು ಸಾಧಿಸಿದರೂ, 2019ರ ಉಪಚುನಾವಣೆ ಮತ್ತು 2021ರ ಚುನಾವಣೆಯಲ್ಲಿ ಡಿಎಂಕೆ ಮತ್ತೆ ತನ್ನ ಪ್ರಾಬಲ್ಯವನ್ನು ಸ್ಥಾಪಿಸಿತ್ತು.

ಸುಮಾರು 2.22 ಲಕ್ಷಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ ಪೆರಂಬೂರ್ ಕ್ಷೇತ್ರದಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿರುವುದು ಗಮನಾರ್ಹ. ಯುವಕರು ಮತ್ತು ಕಾರ್ಮಿಕ ವರ್ಗದ ಪ್ರಭಾವ ಹೆಚ್ಚಿರುವ ಈ ಪ್ರದೇಶದಲ್ಲಿ ಉದ್ಯೋಗ, ಹಣದುಬ್ಬರ ನಿಯಂತ್ರಣ, ವಸತಿ ಮತ್ತು ಮೂಲಸೌಕರ್ಯ ಪ್ರಮುಖ ಚುನಾವಣಾ ವಿಷಯಗಳಾಗಿವೆ.

ವಿಜಯ್ ಅವರ ಯುವಜನಪ್ರಿಯತೆ ಈ ಬಾರಿ ದ್ರಾವಿಡ ಪಕ್ಷಗಳ ದೀರ್ಘಕಾಲದ ಹಿಡಿತವನ್ನು ಸವಾಲು ಮಾಡಬಹುದು ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ. ಪೆರಂಬೂರ್ ಕಣ ಇದೀಗ ಸಾಮಾನ್ಯ ಚುನಾವಣೆ ಮಾತ್ರವಲ್ಲ, ಹೊಸ ರಾಜಕೀಯ ಶಕ್ತಿಯ ಪರೀಕ್ಷೆಯಾಗಿ ಪರಿಣಮಿಸಿದೆ.

Continue Reading

Trending