Connect with us

ಬೆಂಗಳೂರು

ತಂದೆ ಹೆಸರಲ್ಲಿ ಸ್ವಂತ ಖರ್ಚಿನಲ್ಲಿ 101 ಜನರಿಗೆ ಕಾಶಿಯಾತ್ರೆ ಮಾಡಿಸುತ್ತಿರುವ ನಟ ಜಿಮ್ ರವಿ

Published

on

ಕೋಲಾರ ಮೂಲದ ಎ.ಕೆ‌.ರವಿ ಅವರು ಜಿಮ್ ರವಿ ಎಂದೇ ಖ್ಯಾತರು. ದೇಹದಾರ್ಢ್ಯ ಪಟುವಾಗಿ ದೇಶ, ವಿದೇಶಗಳಲ್ಲಿ ಜನಪ್ರಿಯರಾಗಿರುವ ಜಿಮ್ ರವಿ ಇತ್ತೀಚೆಗೆ “ಪುರುಷೋತ್ತಮ” ಎಂಬ ಚಿತ್ರದಲ್ಲಿ ನಾಯಕನಾಗಿಯೂ ಕಾಣಿಸಿಕೊಂಡಿದ್ದರು. ಅಲ್ಲದೇ, ಸಾಮಾಜಿಕ ಕಾರ್ಯಗಳ ಮೂಲಕವೂ ಹೆಸರು ಸಂಪಾದಿಸಿದ್ದಾರೆ.

ಆದರೆ, ತಾವು ಮಾಡುವ ಸಾಮಾಜಿಕ ಕೆಲಸಕ್ಕೆ ಸಂಬಂಧಿಸಿದಂತೆ ಒಂದು ದಿನವೂ ಪ್ರಚಾರ ಬಯಸಿದವರಲ್ಲ.‌ ಅವರೀಗ ಮತ್ತೊಂದು ಮಹತ್ತರ ಕಾರ್ಯಕ್ಕೆ ಮುಂದಾಗಿದ್ದಾರೆ. ಸ್ನೇಹಿತರ ಒತ್ತಾಯಕ್ಕೆ ಮಣಿದ ರವಿ ಅವರು ಈ ಕಾರ್ಯ ಇತರರಿಗೂ ಮಾದರಿಯಾಗಲಿ ಎಂಬ ಉದ್ದೇಶದಿಂದ ಇತ್ತೀಚೆಗೆ ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು

‌ಕೋಲಾರದಿಂದ ಬೆಂಗಳೂರಿಗೆ ಬಂದು ಟೌನ್ ಹಾಲ್​ನಲ್ಲಿ ನಡೆದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಗಳಿಸಿದ ವಿಷಯದೊಂದಿಗೆ ಮಾತು ಆರಂಭಿಸಿದ ಜಿಮ್ ರವಿ, ”ನಮ್ಮದು ಮಧ್ಯಮವರ್ಗ ಕುಟುಂಬ‌‌. ಪ್ರತಿದಿನ ಮುದ್ದೆ ತಿನ್ನುತ್ತಿದ್ದ ನಾವು ಹಬ್ಬಗಳಲ್ಲೇ ಅನ್ನ ಉಣ್ಣುತ್ತಿದ್ದದ್ದು. ನನ್ನ ತಾಯಿ ನನಗೆ ಆದರ್ಶ. ಜೀವನದ ಪಾಠ ಕಲಿಸಿದ ಮಹಾತಾಯಿ‌ ಅವರು. ಒಬ್ಬರ ಸುಖಕ್ಕೆ ನೀನು ಆಗದಿದ್ದರೂ ‌ಪರವಾಗಿಲ್ಲ, ಕಷ್ಟದಲ್ಲಿರುವವರ ಜೊತೆಗಿರು. ಹಿರಿಯರೆದುರು ಕೈಕಟ್ಟಿ ನಿಲ್ಲೆಂದು ಅಮ್ಮ ಹೇಳಿಕೊಟ್ಟಿದ್ದಾರೆ. ಹೀಗೆ ಜೀವನ ಸಾಗುತ್ತಿದ್ದಾಗ ಅಮ್ಮ ನಮ್ಮನ್ನು ಬಿಟ್ಟು ಹೋದರು. ಅಮ್ಮನ ನಿಧನದ ಕೆಲ ತಿಂಗಳ ನಂತರ ಅಪ್ಪ, ನನ್ನ ಹತ್ತಿರ ಬಂದು ನಿಮ್ಮ ಅಮ್ಮನ ಸಾವಿನಿಂದ ಬಹಳ ದುಖವಾಗಿದೆ. ಹಾಗಾಗಿ, ನನ್ನನ್ನು ಕಾಶಿ‌ಯಾತ್ರೆಗೆ ಕರೆದುಕೊಂಡು ಹೋಗು ಎಂದರು. ನನ್ನ ಹತ್ತಿರ ಆಗ ಹಣವಿರಲಿಲ್ಲ. ಅಪ್ಪನಿಗೆ ಏರುದನಿಯಲ್ಲಿ ಈಗ ಅದೆಲ್ಲ ಆಗಲ್ಲ ಎಂದುಬಿಟ್ಟೆ”.

ನಮ್ಮ ಯೋಜನೆ ಒಂದಾದರೆ, ವಿಧಿ ಮತ್ತೊಂದು: ”ಅದಾದ ಕೆಲ ತಿಂಗಳ ಬಳಿಕ ಮತ್ತೆ ಕೇಳಿದರು. ಆಗ ನಾನು ಅವರಿಗೆ ವಿಮಾನದಲ್ಲಿ ಕರೆದುಕೊಂಡು ಹೋಗುತ್ತೇನೆಂದು ಹೇಳಿ ಸಮಾಧಾನಪಡಿದೆ.‌ ಕೆಲ ದಿನಗಳ ನಂತರ ಗೆಳೆಯರ ಹತ್ತಿರ ಸಾಲ ಮಾಡಿ ಅಪ್ಪನ ಕಾಶಿಯಾತ್ರೆಗೆ ವಿಮಾನದ ಟಿಕೆಟ್ ಬುಕ್ ಮಾಡಿದೆ.‌ ಆ ವಿಷಯವನ್ನು ಅಪ್ಪನಿಗೆ ಫೋನ್ ಮಾಡಿ ತಿಳಿಸಿದೆ. ಅವರು ಖುಷಿಯಾಗುತ್ತಾರೆ‌. ಆದರೆ ವಿಧಿ ಬೇರೆಯದ್ದಾಗಿತ್ತು,

ಅಪ್ಪನ ಹೆಸರಿನಲ್ಲಿ ಕಾಶಿಯಾತ್ರೆ: ”ನಾನು ಈ ವಿಷಯ ತಿಳಿಸಿದ ಕೆಲವೇ ಗಂಟೆಗಳಲ್ಲೇ ಅಪ್ಪ ನಮ್ಮನ್ನು ಬಿಟ್ಟು ಹೋದರು. ಅವರ ಕಾಶಿಯಾತ್ರೆಯ ಆಸೆಯೂ ಅವರ ಜೊತೆಗೆ ಹೋಗಿ ಬಿಡ್ತು. ಅದೇ ದಿನ ನಾನು ನಿರ್ಧಾರ ಮಾಡಿದೆ. ನಮ್ಮ ಅಪ್ಪನ ಆಸೆ ಈಡೇರಿಸಲು, ಕಾಶಿಯಾತ್ರೆ ಮಾಡಲು ಸಾಧ್ಯವಿಲ್ಲದ ಕೆಲ ಅಶಕ್ತರಿಗೆ ಅಪ್ಪನ ಹೆಸರಿನಲ್ಲಿ ಕಾಶಿಯಾತ್ರೆ ಮಾಡಿಸಬೇಕು ಎಂದು ನಿರ್ಧರಿಸಿದೆ” ಎಂದು ತಿಳಿಸಿದರು.

ಅಪ್ಪ ನಿಧನರಾಗಿ 14 ವರ್ಷಗಳಾಯಿತು. ಅಂದಿನಿಂದ ಈವರೆಗೂ ಅದಕ್ಕೋಸ್ಕರ ಹುಂಡಿ ಇಟ್ಟು ಹಣ ಕೂಡಿಸುತ್ತಿದ್ದೆ. ಯಾವುದೇ ದುಂದು ವೆಚ್ವ‌‌ ಮಾಡದೇ ಹತ್ತು, ಇಪ್ಪತ್ತು ರೂಪಾಯಿಯಿಂದ ಹಿಡಿದು ಸಾವಿರ ರೂಪಾಯಿಗಳವರೆಗೂ ಹುಂಡಿಯಲ್ಲಿ ಹಾಕುತ್ತಿದ್ದೆ. ಈಗದಕ್ಕೆ ಕಾಲ ಕೂಡಿ ಬಂದಿದೆ. ವಾಣಿಜ್ಯ ತೆರೆಗೆ ಅಧಿಕಾರಿಗಳಾದ ಜಗನ್ನಾಥ್ ಹಾಗೂ ಕುಟುಂಬದವರ ಮಾರ್ಗದರ್ಶನದಲ್ಲಿ ರಾಜ್ಯದ ವಿವಿಧ ಕಡೆಗಳಿಂದ ಸುಮಾರು 80 ಜನ ಅಸಕ್ತರನ್ನು ನಾನೇ ಖುದ್ದಾಗಿ ಭೇಟಿ ಮಾಡಿದ್ದು, ಅವರ ಜೊತೆ 101 ಜನರ ತಂಡ ಜುಲೈ 2ರಂದು ಪಯಣ ಬೆಳೆಸುತ್ತಿದ್ದೇವೆ” ಎಂದು ತಿಳಿಸಿದರು.

ಅವರ ಊರಿನಿಂದ ಬರುವ ಪ್ರಯಾಣದ ವೆಚ್ಚದಿಂದ ಹಿಡಿದು ಎಲ್ಲ ವ್ಯವಸ್ಥೆಯನ್ನೂ ನಾವೇ ಮಾಡುತ್ತಿದ್ದೇವೆ‌. ಜುಲೈ 2ರ ಬೆಳಗ್ಗೆ ಬೆಂಗಳೂರು ವಿಮಾನ ನಿಲ್ದಾಣದಿಂದ ರಾಮ ಜನ್ಮಭೂಮಿ ಅಯೋಧ್ಯೆಗೆ ಪಯಣ ಕೈಗೊಳ್ಳಲಿದ್ದೇವೆ. ಅಲ್ಲಿಂದ ಪ್ರಯಾಗರಾಜ. ಅಲ್ಲಿಂದ ಕಾಶಿ. ಒಟ್ಟು 3 ದಿನಗಳ ಯಾತ್ರೆ. ಎಲ್ಲಾ ಕಡೆ ಎಸಿ ವಾಹನ ಹಾಗೂ ಎಸಿ ಕೊಠಡಿ ವ್ಯವಸ್ಥೆ ಮಾಡಲಾಗಿದೆ‌. ನಮ್ಮ ಜೊತೆ ವೈದ್ಯರು ಹಾಗೂ ಸ್ವಯಂ ಸೇವಕರಿರುತ್ತಾರೆ. ಆಹ್ವಾನಿಸಿದ ಅತಿಥಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದು. ನನಗೆ ಈ ವಿಚಾರ‌ ಪ್ರಚಾರ ಮಾಡುವ ಉದ್ದೇಶವಿರಲಿಲ್ಲ. ಸ್ನೇಹಿತರೋರ್ವರು, ನೀವು ಈ ವಿಷಯ ಜನರಿಗೆ ತಿಳಿಸಿ, ಅದು ಎಷ್ಟೋ ಜನರಿಗೆ ಆದರ್ಶವಾಗಬಹುದು ಎಂದರು. ಹಾಗಾಗಿ, ನಿಮ್ಮ ಮುಂದೆ ಈ ವಿಷಯ ತಿಳಿಸಿದ್ದೇನೆ. ದೇವರು ಅನುಕೂಲ ಮಾಡಿಕೊಟ್ಟರೆ ಮುಂದೆಯೂ ಇದೇ ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳುವ ಯೋಜನೆ ಇದೆ ಎಂದು ಮಾಹಿತಿ ನೀಡಿದರು

ದೇಶ

“ಬ್ರೆಡ್ ಇಲ್ಲ ಅಂದ್ರೆ ಕೇಕ್ ತಿನ್ನಿ!” – ಜೋಶಿಗೆ ತಿರುಗೇಟು

Published

on

By

ಬಾಗಲಕೋಟೆ: ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ವಿಚಾರ ರಾಜಕೀಯ ಕಾಳಗಕ್ಕೆ ತಿರುಗಿದೆ. ಕೇಂದ್ರ ಸಚಿವ Pralhad Joshi ಅವರು “ಗ್ಯಾಸ್ ಇಲ್ಲದಿದ್ದರೆ ಪೆಟ್ರೋಲ್ ಬಳಸಿ” ಎಂಬ ಸಲಹೆ ನೀಡಿದ್ದಕ್ಕೆ ಕೆಪಿಸಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಕೆಪಿಸಿಸಿ ವಕ್ತಾರ A. N. Nataraj Gowda ಅವರು ಈ ಹೇಳಿಕೆಯನ್ನು ಫ್ರೆಂಚ್ ಕ್ರಾಂತಿಯ “ಬ್ರೆಡ್ ಇಲ್ಲದಿದ್ದರೆ ಕೇಕ್ ತಿನ್ನಿ” ಎಂಬ ಮನೋಭಾವಕ್ಕೆ ಹೋಲಿಸಿ ಕಿಡಿಕಾರಿದ್ದಾರೆ. “ದಿನಗೂಲಿ ನಂಬಿ ಬದುಕುವ ಆಟೋ ಚಾಲಕರಿಗೆ ಪೆಟ್ರೋಲ್ ಬಳಸುವಂತೆ ಹೇಳುವುದು ಆರ್ಥಿಕ ವಾಸ್ತವತೆ ತಿಳಿಯದ ಮಾತು” ಎಂದು ಆರೋಪಿಸಿದರು.

ಕೇಂದ್ರ ಸಚಿವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಕೆಪಿಸಿಸಿ ಮೂರು ಪ್ರಮುಖ ಪ್ರಶ್ನೆಗಳನ್ನು ಎತ್ತಿದೆ. ಪೆಟ್ರೋಲ್ ದರ ಗ್ಯಾಸ್‌ಗಿಂತ ಬಹಳ ಹೆಚ್ಚಿದ್ದು, ಅದರಿಂದ ಬಡ ಚಾಲಕರ ಜೀವನ ಸಾಗುವುದೇ ಹೇಗೆ ಎಂದು ಪ್ರಶ್ನಿಸಿದೆ. ಜೊತೆಗೆ, ಹೆಚ್ಚಿನ ಆಟೋಗಳು Dedicated LPG/CNG ಎಂಜಿನ್ ಹೊಂದಿರುವುದರಿಂದ ಪೆಟ್ರೋಲ್ ಬಳಸುವುದು ತಾಂತ್ರಿಕವಾಗಿ ಸಾಧ್ಯವಿಲ್ಲ ಎಂದು ಹೇಳಿದೆ.

ಇನ್ನು, ಇಂಧನ ಪೂರೈಕೆಯನ್ನು ನಿಯಂತ್ರಿಸುವ ಹೊಣೆಗಾರಿಕೆ ಕೇಂದ್ರ ಸರ್ಕಾರದ್ದೇ ಆಗಿದ್ದು, ಖಾಸಗಿ ಕಂಪನಿಗಳಿಂದ ಉಂಟಾಗಿರುವ ಕೃತಕ ಅಭಾವದ ಮೇಲೆ ಕ್ರಮ ಕೈಗೊಳ್ಳದಿರುವುದೇಕೆ ಎಂದು ಪ್ರಶ್ನಿಸಿದೆ. “ಅಂತಾರಾಷ್ಟ್ರೀಯ ಬಿಕ್ಕಟ್ಟು” ನೆಪವೊಡ್ಡಿ ಸರ್ಕಾರ ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದೆ ಎಂದು ಆರೋಪಿಸಲಾಗಿದೆ.

ಈ ನಡುವೆ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕೆ ನಡೆಸಿದ ಕೆಪಿಸಿಸಿ, ಸಚಿವರು ತಕ್ಷಣವೇ ಆಟೋ ಚಾಲಕರಲ್ಲಿ ಕ್ಷಮೆ ಕೇಳಬೇಕು ಮತ್ತು ಎಲ್‌ಪಿಜಿ ಪೂರೈಕೆಯನ್ನು ಸುಧಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.

ಒಟ್ಟಿನಲ್ಲಿ, ಎಲ್‌ಪಿಜಿ ಕೊರತೆ ಸಮಸ್ಯೆ ಇದೀಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದ್ದು, ಬಡ ಆಟೋ ಚಾಲಕರ ಸಂಕಷ್ಟ ಮತ್ತಷ್ಟು ಗಂಭೀರವಾಗಿದೆ.

Continue Reading

ದೇಶ

ಬೆಂಗಳೂರು ಹೃದಯ ಸ್ಪರ್ಶಿ ಕಥೆ: ಯುವತಿಗೆ ನೆರವಾದ ಅಪರಿಚಿತರು

Published

on

By

ಬೆಂಗಳೂರು: ಸಿಲಿಕಾನ್ ಸಿಟಿಯ ಕತ್ತಲ ರಾತ್ರಿಯಲ್ಲಿ ಯುವತಿಯೊಬ್ಬಳಿಗೆ ರಕ್ಷೆಯಾಗಿ ನಿಂತ ಸಾರಿಗೆ ಸಿಬ್ಬಂದಿ ಹಾಗೂ ಬೈಕ್ ಟ್ಯಾಕ್ಸಿ ಚಾಲಕನ ಮಾನವೀಯತೆ ಈಗ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ನಗರದ ಗದ್ದಲದ ನಡುವೆ ಮಾನವೀಯ ಮೌಲ್ಯಗಳು ಇನ್ನೂ ಜೀವಂತವಾಗಿವೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.

ಸೋಮವಾರ ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಐಶ್ವರ್ಯ ಎಂಬ ಯುವತಿ Bangalore Metropolitan Transport Corporation ಬಸ್‌ನಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ನಿಲ್ದಾಣದಿಂದ ಕಾಡುಗೋಡಿಗೆ ಬಂದಿಳಿದಿದ್ದರು. ಆ ಸಮಯದಲ್ಲಿ ಸುತ್ತಮುತ್ತ ಸಂಪೂರ್ಣ ಕತ್ತಲು ಆವರಿಸಿಕೊಂಡಿದ್ದು, ರಸ್ತೆಗಳಲ್ಲಿ ಜನರ ಓಡಾಟವೂ ಇರಲಿಲ್ಲ. ನಿರ್ಜನ ಪ್ರದೇಶದಲ್ಲಿ ಒಬ್ಬಳೇ ಸಿಲುಕಿದ ಯುವತಿ ಮನೆಗೆ ತೆರಳಲು ಕ್ಯಾಬ್ ಬುಕ್ ಮಾಡಲು ಪ್ರಯತ್ನಿಸಿದರೂ ಯಾವುದೇ ವಾಹನ ಲಭ್ಯವಾಗಲಿಲ್ಲ.

ಈ ಸಂದರ್ಭದಲ್ಲಿ ಯುವತಿಯ ಸ್ಥಿತಿಯನ್ನು ಗಮನಿಸಿದ ಬಿಎಂಟಿಸಿ ಸಿಬ್ಬಂದಿ, ಆಕೆಯನ್ನು ಬಸ್ ಸ್ಟಾಪ್‌ನಲ್ಲಿ ಬಿಟ್ಟು ತೆರಳದೆ ಸುರಕ್ಷಿತ ವಾಹನ ಸಿಗುವವರೆಗೂ ಅಲ್ಲಿಯೇ ಉಳಿದುಕೊಂಡರು. ಅವರ ಈ ಕಾಳಜಿ ಮಾನವೀಯತೆಗೆ ಉತ್ತಮ ಉದಾಹರಣೆಯಾಗಿದೆ.

ಅದೇ ಸಮಯದಲ್ಲಿ ಆ ಮಾರ್ಗವಾಗಿ ಬಂದ Rapido ಚಾಲಕನೊಬ್ಬ ಯುವತಿಯ ನೆರವಿಗೆ ಧಾವಿಸಿದರು. ಬಿಎಂಟಿಸಿ ಸಿಬ್ಬಂದಿ ಚಾಲಕನ ವಿವರಗಳನ್ನು ಖಚಿತಪಡಿಸಿಕೊಂಡ ಬಳಿಕವೇ ಯುವತಿಯನ್ನು ಅವರೊಂದಿಗೆ ಕಳುಹಿಸಿದರು. ವಿಶೇಷವೆಂದರೆ, ಆ ಚಾಲಕ ಯಾವುದೇ ಹಣ ಪಡೆಯದೆ ಯುವತಿಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.

ಈ ಘಟನೆಯ ಕುರಿತು ಐಶ್ವರ್ಯ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ತಮಗೆ ನೆರವಾದ ಬಿಎಂಟಿಸಿ ಸಿಬ್ಬಂದಿ ಮತ್ತು ರ‍್ಯಾಪಿಡೋ ಚಾಲಕನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಹೃದಯಸ್ಪರ್ಶಿ ಘಟನೆ ಈಗ ವೈರಲ್ ಆಗಿ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

Continue Reading

ದೇಶ

Bengaluru : ₹180ಗೆ ತೆಂಗಿನ ನೀರು? ಬೆಂಗಳೂರಲ್ಲಿ ಏನಾಗ್ತಿದೆ ನೋಡಿ!

Published

on

By

ಬೆಂಗಳೂರು: ಬೇಸಿಗೆ ತಾಪಮಾನ ಏರಿಕೆಯಾಗುತ್ತಿದ್ದಂತೆ ತಂಪು ಪಾನೀಯಗಳ ಬೇಡಿಕೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಅದರಲ್ಲೂ ನೈಸರ್ಗಿಕ ಪಾನೀಯವಾದ ತೆಂಗಿನ ನೀರಿಗೆ ಸಿಕ್ಕಿರುವ ಬೇಡಿಕೆ ಈಗ ಅಚ್ಚರಿಯ ಮಟ್ಟ ತಲುಪಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈಗ ತೆಂಗಿನ ನೀರನ್ನು ಲೀಟರ್‌ಗೆ ಮಾರಾಟ ಮಾಡಲಾಗುತ್ತಿದ್ದು, ಅದರ ಬೆಲೆ ಕೇಳಿದವರು ಬೆಚ್ಚಿಬಿದ್ದಿದ್ದಾರೆ.

ನಗರದ ಕೆಲವು ಭಾಗಗಳಲ್ಲಿ ಒಂದು ಲೀಟರ್ ತೆಂಗಿನ ನೀರಿಗೆ ₹180 ವರೆಗೆ ದರ ನಿಗದಿ ಮಾಡಲಾಗಿದೆ. ಕೆಲವು ಕಡೆಗಳಲ್ಲಿ ಒಂದೇ ತೆಂಗಿನಕಾಯಿ ₹70ರಿಂದ ₹80ರೊಳಗೆ ಮಾರಾಟವಾಗುತ್ತಿದ್ದರೂ, ಬೇಡಿಕೆ ಹೆಚ್ಚಾದ ಕಾರಣ ವ್ಯಾಪಾರಿಗಳು ಹೊಸ ರೀತಿಯಲ್ಲಿ ಲೀಟರ್ ಲೆಕ್ಕದಲ್ಲಿ ಮಾರಾಟ ಆರಂಭಿಸಿದ್ದಾರೆ.

ಬೆಂಗಳೂರಿನ ನವನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಅಂಗಡಿಗಳ ಮುಂದೆ “1 ಲೀಟರ್ ತೆಂಗಿನ ನೀರು – ₹180” ಎಂಬ ಬೋರ್ಡ್‌ಗಳು ಕಾಣಿಸಿಕೊಂಡಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೇಸಿಗೆ ಉಷ್ಣತೆ ಹೆಚ್ಚಾಗುತ್ತಿದ್ದಂತೆ ಜನರು ಹೆಚ್ಚು ತಂಪು ಮತ್ತು ಆರೋಗ್ಯಕರ ಪಾನೀಯಗಳನ್ನು ಆರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತೆಂಗಿನ ನೀರಿನ ಬೇಡಿಕೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.

ವ್ಯಾಪಾರಿಗಳ ಪ್ರಕಾರ, ಪೂರೈಕೆ ಕಡಿಮೆ ಹಾಗೂ ಬೇಡಿಕೆ ಹೆಚ್ಚಿರುವುದರಿಂದ ದರ ಏರಿಕೆ ಅನಿವಾರ್ಯವಾಗಿದೆ. ಆದರೆ ಸಾಮಾನ್ಯ ಜನರು ಮಾತ್ರ ಈ ದರ ಏರಿಕೆಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. “ಇಷ್ಟು ದುಬಾರಿ ದರದಲ್ಲಿ ತೆಂಗಿನ ನೀರು ಖರೀದಿಸಲು ಸಾಧ್ಯವೇ?” ಎಂಬ ಪ್ರಶ್ನೆ ಕೇಳುತ್ತಿದ್ದಾರೆ.

ಒಟ್ಟಿನಲ್ಲಿ, ಬೇಸಿಗೆಯ ಬೇಡಿಕೆ ಹಾಗೂ ಪೂರೈಕೆ ನಡುವಿನ ಅಸಮತೋಲನದಿಂದ ಬೆಂಗಳೂರಿನಲ್ಲಿ ತೆಂಗಿನ ನೀರಿನ ಬೆಲೆ ಗಗನಕ್ಕೇರಿದೆ.

Continue Reading

Trending