Connect with us

ಬೆಂಗಳೂರು

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; 4134 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಕ್ಕೆ ಸರ್ಕಾರ ಆದೇಶ

Published

on

ಬೆಂಗಳೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ರಾಜ್ಯದ ಒಟ್ಟು 4134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ (English Medium classes) 2025-26ನೇ ಸಾಲಿನಿಂದ 1ನೇ ತರಗತಿಯಿಂದ ಪ್ರಸ್ತುತ ನಡೆಯುತ್ತಿರುವ ಕನ್ನಡ ಅಥವಾ ಇತರೆ ಮಾಧ್ಯಮದ ಜತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) (Bilingual) ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಷರತ್ತುಗಳಿಗೊಳಪಟ್ಟು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಇನ್ನು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಬಿಳಲುಕೊಪ್ಪ ಸರ್ಕಾರಿ ಪ್ರೌಢಶಾಲೆ, ಹೊಸೂರು-ಗುಡ್ಡಕೇರಿ ಸರ್ಕಾರಿ ಪ್ರೌಢಶಾಲೆ ಮತ್ತು ಹೆದ್ದೂರು ಸರ್ಕಾರಿ ಪ್ರೌಢಶಾಲೆ ಪ್ರಸ್ತುತ ನಡೆಯುತ್ತಿರುವ ಕನ್ನಡ ಅಥವಾ ಇತರೆ ಮಾಧ್ಯಮದ ಜತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) (Bilingual) ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಅನುಮತಿ ನೀಡಲಾಗಿದೆ.

ವಿದ್ಯಾರ್ಥಿಗಳಲ್ಲಿ ಮಾತೃ ಭಾಷೆಯ ಜತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು ರಾಜ್ಯದ 4,000 ಸರ್ಕಾರಿ ಶಾಲೆಗಳಲ್ಲಿ ದ್ವಿ ಭಾಷಾ ವಿಭಾಗವನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿಗಳು 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿದ್ದರು. ಪ್ರಸ್ತುತ ಶೈಕ್ಷಣಿಕ ಸಾಲಿನವರೆಗೆ ರಾಜ್ಯದ ಒಟ್ಟು 4,404 ಸರ್ಕಾರಿ ಪ್ರಾಥಮಿಕ ಶಾಲೆಗಳು / KPS / PM SHRI ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಪ್ರಾರಂಭಿಸಲು ಈಗಾಗಲೇ ಆದೇಶವಾಗಿರುತ್ತದೆ. ಬೆಂಗಳೂರು ಉತ್ತರ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಗಳಲ್ಲಿ ಒಟ್ಟು 1465 ಸರ್ಕಾರಿ ಶಾಲೆಗಳು ಇರುತ್ತವೆ. ಈ ಪೈಕಿ ಬೆಂಗಳೂರು ಉತ್ತರ (373 ಸರ್ಕಾರಿ ಪ್ರಾಥಮಿಕ ಶಾಲೆಗಳು) ಮತ್ತು ಬೆಂಗಳೂರು ದಕ್ಷಿಣ(730 ಸರ್ಕಾರಿ ಪ್ರಾಥಮಿಕ ಶಾಲೆಗಳು) ಜಿಲ್ಲೆಗಳಲ್ಲಿನ ಒಟ್ಟು 1,103 ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯನ್ನು ಪ್ರಾರಂಭಿಕ ತರಗತಿಯನ್ನಾಗಿ ಹೊಂದಿದ್ದು, ಇವುಗಳಲ್ಲಿ ದ್ವಿಭಾಷಾ ತರಗತಿಗಳನ್ನು ಪ್ರಾರಂಭಿಸಲು ಪರಿಗಣಿಸಲಾಗಿದೆ.

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ರಾಜ್ಯ

Kichcha Sudeep ರ ಮಾನವೀಯತೆ: 4 ಕುಟುಂಬಗಳಿಗೆ ಆಟೋ ನೀಡಿ ಸ್ವಾವಲಂಬಿ ಬದುಕಿಗೆ ದಾರಿ ತೋರಿದ ನಟ

Published

on

ಬೆಂಗಳೂರು: ‘ಅಭಿನಯ ಚಕ್ರವರ್ತಿ’ Kichcha Sudeep ಅವರು ಸಿನಿಮಾಗಳ ಮೂಲಕ ಮಾತ್ರವಲ್ಲ, ಸಮಾಜಮುಖಿ ಕಾರ್ಯಗಳ ಮೂಲಕವೂ ಅಭಿಮಾನಿಗಳ ಮನ ಗೆಲ್ಲುತ್ತಿದ್ದಾರೆ. ತಮ್ಮ ತಾಯಿ ಸರೋಜಾ ಸಂಜೀವ್ ಅವರ ಸ್ಮರಣಾರ್ಥವಾಗಿ ಸುದೀಪ್ ಕೈಗೊಂಡಿರುವ ವಿಶೇಷ ಕಾರ್ಯವೊಂದು ಇದೀಗ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾಗಳನ್ನು ವಿತರಿಸುವ ಮೂಲಕ ಅವರು ಸ್ವಾವಲಂಬಿ ಬದುಕಿಗೆ ನೆರವಾಗಿದ್ದಾರೆ.

ತಾಯಿಯ ಸ್ಮರಣಾರ್ಥವಾಗಿ ಆಡಂಬರದ ಕಾರ್ಯಕ್ರಮಗಳನ್ನು ಆಯೋಜಿಸುವ ಬದಲು, ಕಷ್ಟದಲ್ಲಿರುವ ಕುಟುಂಬಗಳಿಗೆ ಶಾಶ್ವತ ಜೀವನಾಧಾರ ಒದಗಿಸುವ ಪ್ರಯತ್ನವನ್ನು ಸುದೀಪ್ ಮಾಡಿದ್ದಾರೆ. ಕೇವಲ ಹಣಕಾಸಿನ ನೆರವು ನೀಡುವ ಬದಲು ಸ್ವತಃ ದುಡಿದು ಜೀವನ ನಡೆಸಲು ಸಾಧ್ಯವಾಗುವಂತಹ ಸಾಧನವನ್ನು ಒದಗಿಸಿರುವುದು ಈ ಕಾರ್ಯದ ವಿಶೇಷತೆಯಾಗಿದೆ.

ಪವಿತ್ರಾ ಕುಟುಂಬಕ್ಕೆ ನೆರವು

2017ರಲ್ಲಿ ಪತಿಯನ್ನು ಕಳೆದುಕೊಂಡಿರುವ ಪವಿತ್ರಾ ಅವರು ಇಬ್ಬರು ಮಕ್ಕಳ ಜವಾಬ್ದಾರಿಯನ್ನು ಏಕಾಂಗಿಯಾಗಿ ಹೊತ್ತು ಜೀವನ ಸಾಗಿಸುತ್ತಿದ್ದಾರೆ. ಅವರ ಮಗಳು ಹತ್ತನೇ ತರಗತಿಯಲ್ಲಿ ಓದುತ್ತಿದ್ದು, ಮಗನಿಗೆ ನಾಲ್ಕು ವರ್ಷ. ಕುಟುಂಬಕ್ಕೆ ಸ್ಥಿರ ಆದಾಯದ ಮೂಲವಿಲ್ಲದ ಕಾರಣ ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ದೈನಂದಿನ ಜೀವನ ನಿರ್ವಹಣೆ ಕಷ್ಟಕರವಾಗಿತ್ತು. ಇದೀಗ ಸುದೀಪ್ ನೀಡಿರುವ ಆಟೋ ರಿಕ್ಷಾ ಪವಿತ್ರಾ ಅವರ ಕುಟುಂಬಕ್ಕೆ ಸ್ವಾವಲಂಬಿ ಬದುಕಿನ ಹೊಸ ದಾರಿ ತೋರಿಸಿದೆ.

ವಿಷ್ಣುವರ್ಧನ್ ಅಭಿಮಾನಿಗೂ ಸುದೀಪ್ ಆಸರೆ

ಹುಬ್ಬಳ್ಳಿಯ ಮೃತ್ಯುಂಜಯ ಅವರು ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಅವರ ಹೆಸರಿನಲ್ಲಿ ಹಲವು ಜನಪರ ಕಾರ್ಯಕ್ರಮಗಳನ್ನು ಆಯೋಜಿಸಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಸುಮಾರು 50ಕ್ಕೂ ಹೆಚ್ಚು ಜನಪರ ಕಾರ್ಯಕ್ರಮಗಳನ್ನು ಸಂಘಟಿಸಿದ್ದ ಮೃತ್ಯುಂಜಯ ಅವರ ಕುಟುಂಬ ಇತ್ತೀಚೆಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ಈ ಪರಿಸ್ಥಿತಿಯನ್ನು ಅರಿತ ಸುದೀಪ್, ಮೃತ್ಯುಂಜಯ ಅವರಿಗೆ ಆಟೋ ರಿಕ್ಷಾ ನೀಡಿ ನೆರವಾಗಿದ್ದಾರೆ.

ಫೈಟರ್ ಬಸವರಾಜ್‌ಗೂ ಹೊಸ ಆಸರೆ

ಕನ್ನಡ ಚಿತ್ರರಂಗದಲ್ಲಿ ಸಾಹಸ ಕಲಾವಿದರಾಗಿ ದೀರ್ಘಕಾಲ ಸೇವೆ ಸಲ್ಲಿಸಿರುವ ಫೈಟರ್ ಬಸವರಾಜ್ ಅವರನ್ನೂ ಸುದೀಪ್ ಈ ನೆರವಿಗೆ ಆಯ್ಕೆ ಮಾಡಿದ್ದಾರೆ. ಸುಮಾರು 900ಕ್ಕೂ ಅಧಿಕ ಸಿನಿಮಾಗಳಲ್ಲಿ ಫೈಟರ್ ಆಗಿ ಕೆಲಸ ಮಾಡಿರುವ ಬಸವರಾಜ್, ಸುದೀಪ್ ಅವರೊಂದಿಗೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ ಎನ್ನಲಾಗಿದೆ.

ಚಿತ್ರರಂಗದಲ್ಲಿ ಹಲವು ವರ್ಷಗಳ ಅನುಭವವಿದ್ದರೂ ಸದ್ಯ ಸ್ಥಿರ ಆದಾಯದ ಕೊರತೆಯಿಂದ ಸಂಕಷ್ಟದಲ್ಲಿದ್ದ ಬಸವರಾಜ್ ಅವರಿಗೆ ಆಟೋ ರಿಕ್ಷಾ ಹೊಸ ಜೀವನಾಧಾರವಾಗಿದೆ.

ಸಾಯಿ ಮಧು ಕುಟುಂಬಕ್ಕೆ ನೆರವಿನ ಹಸ್ತ

ಸುದೀಪ್ ಅವರ ತಾಯಿಗೆ ಆಪ್ತರಾಗಿದ್ದ ಸಾಯಿ ಮಧು ಅವರು ಒಂದು ವರ್ಷದ ಹಿಂದೆ ಮಿದುಳಿನ ಪಾರ್ಶ್ವವಾಯುವಿನಿಂದ ನಿಧನರಾಗಿದ್ದರು. ಅವರಿಗೆ 3ನೇ ಮತ್ತು 6ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಮಗನನ್ನು ಕಳೆದುಕೊಂಡಿದ್ದ ವೃದ್ಧ ತಂದೆ ಬಾಡಿಗೆ ಆಟೋ ಓಡಿಸಿ ಕುಟುಂಬವನ್ನು ನೋಡಿಕೊಳ್ಳುತ್ತಿದ್ದರು.

ಕುಟುಂಬದ ಪರಿಸ್ಥಿತಿಯನ್ನು ತಿಳಿದ ಸುದೀಪ್, ಅವರಿಗೆ ಸ್ವಂತ ಆಟೋ ರಿಕ್ಷಾ ನೀಡಿ ನೆರವಾಗಿದ್ದಾರೆ. ಇದರಿಂದ ಕುಟುಂಬದ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಜೊತೆಗೆ ಭವಿಷ್ಯದಲ್ಲಿ ಸ್ವತಃ ದುಡಿದು ಜೀವನ ನಡೆಸಲು ಅವಕಾಶ ಸಿಕ್ಕಿದೆ.

ಸುದೀಪ್ ಅವರ ಈ ಸಮಾಜಮುಖಿ ಕಾರ್ಯವು ತಾಯಿಯ ಮೇಲಿನ ಪ್ರೀತಿಯನ್ನು ಅರ್ಥಪೂರ್ಣ ರೀತಿಯಲ್ಲಿ ವ್ಯಕ್ತಪಡಿಸಿರುವ ಉದಾಹರಣೆಯಾಗಿದೆ. ಕೇವಲ ತಾತ್ಕಾಲಿಕ ಆರ್ಥಿಕ ನೆರವಿನ ಬದಲು ನಾಲ್ಕು ಕುಟುಂಬಗಳಿಗೆ ಜೀವನೋಪಾಯದ ಸಾಧನ ಒದಗಿಸಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಕಾರಣವಾಗಿದೆ.

Continue Reading

ಬೆಂಗಳೂರು

Bengaluru Street Lights: 140 ದೀಪಗಳು ಕಾರ್ಯನಿರ್ವಹಿಸದಿರುವುದು ಪತ್ತೆ, ಸಚಿವ Krishna Byre Gowda ಗರಂ

Published

on

ಬೆಂಗಳೂರು, ಆಗಸ್ಟ್ 30: ಗ್ರೇಟರ್ Bengaluru ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ವಿದ್ಯುತ್ ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಸಚಿವ Krishna Byre Gowda ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ನಗರದ ಪ್ರಮುಖ ರಸ್ತೆಗಳಲ್ಲಿ ಬೀದಿ ದೀಪಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಸಚಿವರು ಖುದ್ದಾಗಿ ಪರಿಶೀಲನೆ ನಡೆಸಿದ್ದು, ಈ ವೇಳೆ ದೊಡ್ಡ ಪ್ರಮಾಣದಲ್ಲಿ ದೀಪಗಳು ನಿಷ್ಕ್ರಿಯವಾಗಿರುವುದು ಪತ್ತೆಯಾಗಿದೆ.

222 ದೀಪಗಳಲ್ಲಿ 140 ನಿಷ್ಕ್ರಿಯ

ಆಗಸ್ಟ್ 28ರ ಸಂಜೆ ಹಡ್ಸನ್ ವೃತ್ತದಿಂದ ಚಾಲುಕ್ಯ ವೃತ್ತದವರೆಗೆ ಸಚಿವ ಕೃಷ್ಣಬೈರೇಗೌಡ ಅವರು ಬೀದಿ ದೀಪಗಳ ಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ಒಟ್ಟು 222 ವಿದ್ಯುತ್ ಕಂಬಗಳ ಪೈಕಿ 140 ಕಂಬಗಳಲ್ಲಿನ ಎಲ್‌ಇಡಿ ದೀಪಗಳು ಕಾರ್ಯನಿರ್ವಹಿಸದಿರುವುದು ಕಂಡುಬಂದಿದೆ.

ಈ ಕುರಿತು ಸಚಿವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎರಡು ಬಾರಿ ಸಭೆ ನಡೆಸಿದ್ದರೂ ನಿರ್ಲಕ್ಷ್ಯ

GBA ವ್ಯಾಪ್ತಿಯ ವಿದ್ಯುತ್ ಬೀದಿ ದೀಪಗಳ ನಿರ್ವಹಣೆ ಕುರಿತು ಈಗಾಗಲೇ ಎರಡು ಬಾರಿ ಸಭೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಆಗಸ್ಟ್ 4ರಂದು ನಡೆದ ಸಭೆಯಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಬೀದಿ ದೀಪಗಳ ನಿರ್ವಹಣೆಯಲ್ಲಿ ಯಾವುದೇ ಲೋಪವಾಗದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು.

ಲೋಪಗಳನ್ನು ಸರಿಪಡಿಸಲು ಅಗತ್ಯ ಕಾಲಾವಕಾಶವನ್ನೂ ನೀಡಲಾಗಿತ್ತು. ಆದರೂ ಪ್ರಮುಖ ರಸ್ತೆಯಲ್ಲೇ ಹೆಚ್ಚಿನ ಸಂಖ್ಯೆಯ ದೀಪಗಳು ಕಾರ್ಯನಿರ್ವಹಿಸದಿರುವುದು ಅಧಿಕಾರಿಗಳ ಕರ್ತವ್ಯ ಲೋಪವನ್ನು ತೋರಿಸುತ್ತದೆ ಎಂದು ಸಚಿವರು ಹೇಳಿದ್ದಾರೆ.

ಪ್ರಮುಖ ರಸ್ತೆಯಲ್ಲೇ ಬೀದಿ ದೀಪಗಳು ಬಂದ್

ಹಡ್ಸನ್ ರಸ್ತೆ ಬೆಂಗಳೂರಿನ ಹೃದಯಭಾಗದಲ್ಲಿರುವ ಪ್ರಮುಖ ರಸ್ತೆಯಾಗಿದೆ. ಈ ರಸ್ತೆ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವುದರ ಜತೆಗೆ ನ್ಯಾಯಾಲಯ ಸಂಕೀರ್ಣ ಹಾಗೂ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನಿವಾಸದ ಸಮೀಪದಲ್ಲಿದೆ.

ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುವ ಇಂತಹ ಪ್ರಮುಖ ರಸ್ತೆಯಲ್ಲಿ ಬೀದಿ ದೀಪಗಳು ಕಾರ್ಯನಿರ್ವಹಿಸದಿರುವುದು ಗಂಭೀರ ವಿಚಾರವಾಗಿದೆ. ರಾತ್ರಿ ವೇಳೆ ವಾಹನ ಸವಾರರು ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಬೀದಿ ದೀಪಗಳ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ.

ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ

ಈ ಹಿಂದೆ ಸಭೆಗಳಲ್ಲಿ ನೀಡಲಾಗಿದ್ದ ಸೂಚನೆಗಳನ್ನು ಪಾಲಿಸದೆ ಕರ್ತವ್ಯ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳುವಂತೆ ಕೃಷ್ಣಬೈರೇಗೌಡ ಸೂಚಿಸಿದ್ದಾರೆ.

ಬೀದಿ ದೀಪಗಳ ನಿರ್ವಹಣೆಯಲ್ಲಿ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿಯನ್ನು ಪರಿಶೀಲಿಸಿ, ನಿರ್ಲಕ್ಷ್ಯ ಕಂಡುಬಂದರೆ ಸೂಕ್ತ ಕ್ರಮ ಜರುಗಿಸುವಂತೆ ಸಚಿವರು ಸೂಚಿಸಿದ್ದಾರೆ. ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿನ ಬೀದಿ ದೀಪಗಳ ಸಮಸ್ಯೆ ಶೀಘ್ರವಾಗಿ ಪರಿಹಾರವಾಗಬೇಕು ಎಂಬ ನಿರೀಕ್ಷೆ ಸಾರ್ವಜನಿಕರಲ್ಲಿ ಮೂಡಿದೆ.

Continue Reading

ಬೆಂಗಳೂರು

BJP ‘ಗೊಂದಲಕ್ಕೆ ಅವಕಾಶವೇ ಇಲ್ಲ’: ಸೆ.1ರ ಪಾದಯಾತ್ರೆ ಕುರಿತು ವಿಜಯೇಂದ್ರ ಮಹತ್ವದ ಹೇಳಿಕೆ

Published

on

ಬೆಂಗಳೂರು: BJP ರಾಜ್ಯ ರಾಜಕೀಯದಲ್ಲಿ ಮತ್ತೆ ಪಾದಯಾತ್ರೆಯ ಕಾವು ಹೆಚ್ಚಾಗಿದ್ದು, ಸೆಪ್ಟೆಂಬರ್‌ 1ರಿಂದ ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆ ಕುರಿತು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ. ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರೊಂದಿಗೆ ತಾವು ಸ್ವತಃ ಮಾತನಾಡಿದ್ದು, ರಾಷ್ಟ್ರೀಯ ನಾಯಕರ ಅನುಮತಿಯನ್ನೂ ಪಡೆದುಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾತನಾಡಿದ ವಿಜಯೇಂದ್ರ, ಬಿ. ನಾಗೇಂದ್ರ ರಾಜೀನಾಮೆ ನೀಡಿದ ಬಳಿಕವೂ ಪಾದಯಾತ್ರೆ ಏಕೆ ಎಂಬ ಪ್ರಶ್ನೆ ಪಕ್ಷದ ಕೆಲವು ಮುಖಂಡರಲ್ಲಿ ಮೂಡಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ಅನುಮತಿ ಪಡೆದಿರುವುದಾಗಿ ಹೇಳಿದರು.

ಕುಮಾರಸ್ವಾಮಿ ಅವರು ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ನಾಗೇಂದ್ರ ರಾಜೀನಾಮೆ ನೀಡಿದ ಬಳಿಕ ಪಾದಯಾತ್ರೆಯ ಉದ್ದೇಶವೇನು ಎಂಬುದು ಸ್ಪಷ್ಟವಾಗಿಲ್ಲ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಪಾದಯಾತ್ರೆ ಕೇವಲ ನಾಗೇಂದ್ರ ರಾಜೀನಾಮೆ ವಿಚಾರಕ್ಕೆ ಸೀಮಿತವಾಗಿಲ್ಲ. ಸುಮಾರು 8ರಿಂದ 10 ಪ್ರಮುಖ ವಿಚಾರಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಕುಮಾರಸ್ವಾಮಿ ಅವರೊಂದಿಗೆ ಮತ್ತೆ ಮಾತುಕತೆ ನಡೆಸುವುದಾಗಿ ತಿಳಿಸಿದ ಅವರು, ಈ ವಿಚಾರದಲ್ಲಿ ಅವರಿಗೆ ತಪ್ಪು ಕಲ್ಪನೆ ಉಂಟಾಗಿರಬಹುದು ಎಂದರು.

ಸೆ.1ರಿಂದ ಲಿಂಗಸುಗೂರಿನಿಂದ ಪಾದಯಾತ್ರೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ, ಎಸ್‌ಇಪಿ-ಟಿಎಸ್‌ಪಿ ಅನುದಾನ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ, ಉತ್ತರ ಕರ್ನಾಟಕದ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಪಾದಯಾತ್ರೆ ನಡೆಸಲಿದೆ ಎಂದು ವಿಜಯೇಂದ್ರ ಹೇಳಿದರು.

ಸೆಪ್ಟೆಂಬರ್‌ 1ರಂದು ಲಿಂಗಸುಗೂರಿನಿಂದ ಪಾದಯಾತ್ರೆ ಆರಂಭವಾಗಲಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ದುರ್ಬಳಕೆಯಾಗಿದೆ ಎನ್ನಲಾದ ₹185 ಕೋಟಿ ಹಣವನ್ನು ಮರಳಿ ನಿಗಮಕ್ಕೆ ಜಮಾ ಮಾಡಬೇಕು ಎಂದು ಅವರು ಆಗ್ರಹಿಸಿದರು.

ಅದೇ ರೀತಿ ಕೊಪ್ಪಳ ಭಾಗದಲ್ಲಿ ಸಮಾನಾಂತರ ಜಲಾಶಯ ನಿರ್ಮಾಣದ ವಿಚಾರವನ್ನು ಜಾರಿಗೊಳಿಸಬೇಕು ಮತ್ತು ರಾಜ್ಯದ 2.5 ಲಕ್ಷ ಯುವಜನರಿಗೆ ಉದ್ಯೋಗ ನೀಡುವ ಭರವಸೆಯನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೆ.ಎನ್. ರಾಜಣ್ಣ ಅವರ ರಾಜೀನಾಮೆ ವಿಚಾರವನ್ನೂ ಪ್ರಸ್ತಾಪಿಸಿದ ವಿಜಯೇಂದ್ರ, ದಲಿತರ ಬಗ್ಗೆ ಕಾಂಗ್ರೆಸ್‌ ನಾಯಕರು ಮಾತನಾಡುವ ಮೊದಲು ತಮ್ಮ ಸರ್ಕಾರದ ಕ್ರಮಗಳನ್ನು ಪರಿಶೀಲಿಸಬೇಕು ಎಂದು ವಾಗ್ದಾಳಿ ನಡೆಸಿದರು.

ಹಿಂದಿನ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಿಸಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಆ ಕ್ರಮಕ್ಕೆ ಹಿನ್ನಡೆ ಉಂಟಾಗಿದೆ ಎಂದು ಆರೋಪಿಸಿದರು.

ಎಸ್‌ಇಪಿ ಮತ್ತು ಟಿಎಸ್‌ಪಿ ಹಣದ ಬಳಕೆ, ಬರಗಾಲ ಹಾಗೂ ಉತ್ತರ ಕರ್ನಾಟಕದ ಅಭಿವೃದ್ಧಿ ಸೇರಿದಂತೆ ಹಲವು ವಿಚಾರಗಳಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದರು.

ಕೆಪಿಎಸ್‌ಸಿ ಅಕ್ರಮದ ಬಗ್ಗೆಯೂ ಪ್ರಸ್ತಾಪ

ಕೆಪಿಎಸ್‌ಸಿ ಅಕ್ರಮ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ತನಿಖೆಗೆ ಹಾಜರಾಗಿರುವ ವಿಚಾರದ ಬಗ್ಗೆಯೂ ವಿಜಯೇಂದ್ರ ಪ್ರತಿಕ್ರಿಯಿಸಿದರು. ಪ್ರಕರಣದ ತನಿಖೆ ಮುಂದುವರಿಯಲಿ ಮತ್ತು ಸತ್ಯಾಸತ್ಯತೆ ಹೊರಬರಲಿ ಎಂದು ಹೇಳಿದರು.

ಯಾರೇ ಪ್ರಭಾವಿ ವ್ಯಕ್ತಿಗಳಾಗಿದ್ದರೂ ಅಕ್ರಮದಲ್ಲಿ ಪಾತ್ರವಿದ್ದರೆ ಸತ್ಯ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು. ಈ ಮೂಲಕ ಕೆಪಿಎಸ್‌ಸಿ ನೇಮಕಾತಿ ಅಕ್ರಮದ ವಿಚಾರವನ್ನೂ ಬಿಜೆಪಿ ತನ್ನ ಪಾದಯಾತ್ರೆಯಲ್ಲಿ ಪ್ರಮುಖವಾಗಿ ಪ್ರಸ್ತಾಪಿಸುವ ಸಾಧ್ಯತೆ ಇದೆ.

Continue Reading

Trending