Connect with us

ಬೆಂಗಳೂರು

ಇಂದು ಇಡೀ ದಿನ ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ ಸಿಎಂ

Published

on

ಬೆಂಗಳೂರು: ಇಂದು ಇಡೀ ದಿನ ಸಿಎಂ ಸಿಎಂ ಸಿದ್ದರಾಮಯ್ಯ (CM Siddaramaiah) ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಸೋಮವಾರ ತಲೆಸುತ್ತು ಕಾಣಿಸಿಕೊಂಡಿದ್ದ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಶೇಷಾದ್ರಿಪುರಂನಲ್ಲಿರುವ ಅಪೋಲೊ ಆಸ್ಪತ್ರೆಗೆ (Apollo Hospitals) ಹೋಗಿದ್ದರು.

ಇಂದು ಯಾವುದೇ ಸಭೆ, ಕಾರ್ಯಕ್ರಮಗಳು ನಿಗದಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಸಿಎಂ ವಿಶ್ರಾಂತಿಯಲ್ಲಿದ್ದು ಬುಧವಾರ ದೆಹಲಿಗೆ ಪ್ರಯಾಣಿಸಲಿದ್ದಾರೆ.

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ರಾಜ್ಯ

Mekedatu ಯೋಜನೆಗೆ ಬಿಗ್ ಅಪ್‌ಡೇಟ್: ಕೇಂದ್ರದ ಅಂತಿಮ ಅನುಮತಿಗೆ ರಾಜ್ಯ ಸರ್ಕಾರ ಸಜ್ಜು

Published

on

By

ಮೈಸೂರು: ಬಹುನಿರೀಕ್ಷಿತ Mekedatu ಯೋಜನೆ ಜಾರಿಗೆ ಕೇಂದ್ರ ಸರ್ಕಾರದಿಂದ ಅಂತಿಮ ಅನುಮತಿ ಪಡೆಯಲು ಕರ್ನಾಟಕ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್‌ನ ಅನುಕೂಲಕರ ತೀರ್ಪಿನ ಹಿನ್ನೆಲೆಯಲ್ಲಿ ಯೋಜನೆಗೆ ಸಂಬಂಧಿಸಿದ ಮುಂದಿನ ಪ್ರಕ್ರಿಯೆಗಳನ್ನು ವೇಗಗೊಳಿಸಲು ಸರ್ಕಾರ ಮುಂದಾಗಿದೆ.

ಮೈಸೂರಿನ ಸುತ್ತೂರು ಮಠದಲ್ಲಿ ನಡೆದ ಡಾ. ಶ್ರೀ ರಾಜೇಂದ್ರ ಸ್ವಾಮೀಜಿ ಅವರ 111ನೇ ಜಯಂತಿ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್, ಕಾವೇರಿ ನೀರನ್ನು ಸಂರಕ್ಷಿಸಿ ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದು ರಾಜ್ಯದ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಮೇಕೆದಾಟು ಯೋಜನೆಗೆ 5,400 ಹೆಕ್ಟೇರ್ ಭೂಮಿ ಅಗತ್ಯ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅರಣ್ಯ ಪ್ರದೇಶ ಸೇರಿದಂತೆ ಸುಮಾರು 5,400 ಹೆಕ್ಟೇರ್ ಭೂಮಿ ಅಗತ್ಯವಿದೆ ಎಂದು ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು. ಅರಣ್ಯ ಭೂಮಿಯನ್ನು ಬಳಸಿಕೊಳ್ಳಬೇಕಾದ ಸಂದರ್ಭದಲ್ಲಿ ಅದಕ್ಕೆ ಬದಲಾಗಿ ಪರ್ಯಾಯ ಭೂಮಿ ಒದಗಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ತಿಳಿಸಿದರು.

ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕಾವೇರಿ ನೀರನ್ನು ಸಮರ್ಪಕವಾಗಿ ಸಂರಕ್ಷಿಸಿ ಬಳಸಿಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಮೇಕೆದಾಟು ಯೋಜನೆ ಪ್ರಮುಖವಾಗಿದ್ದು, ಯೋಜನೆಯ ಮುಂದಿನ ಹಂತಗಳಿಗೆ ರಾಜ್ಯ ಸರ್ಕಾರ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುತ್ತಿದೆ ಎಂದು ಅವರು ಹೇಳಿದರು.

ಕೇಂದ್ರಕ್ಕೆ ಶೀಘ್ರದಲ್ಲೇ ನಿಯೋಗ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಶೀಘ್ರದಲ್ಲೇ ಮನವಿ ಸಲ್ಲಿಸಲಾಗುವುದು ಎಂದು ಉಪಮುಖ್ಯಮಂತ್ರಿ ತಿಳಿಸಿದರು. ಈ ವಿಚಾರದಲ್ಲಿ ರಾಜ್ಯದ ಪ್ರತಿಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೇಂದ್ರದ ಬಳಿ ನಿಯೋಗ ಕೊಂಡೊಯ್ಯುವ ಸಿದ್ಧತೆ ನಡೆಯುತ್ತಿದೆ ಎಂದರು.

ದೇಶದ ಭೂಮಿ, ನೀರು ಹಾಗೂ ಭಾಷೆಗೆ ಸಂಬಂಧಿಸಿದ ಪ್ರಮುಖ ವಿಚಾರಗಳಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇರಬೇಕು. ತಮಿಳುನಾಡು ಭೇಟಿಯ ಸಂದರ್ಭದಲ್ಲಿಯೂ ಈ ವಿಚಾರದ ಕುರಿತು ಚರ್ಚೆ ನಡೆಸಿರುವುದಾಗಿ ಡಿ.ಕೆ. ಶಿವಕುಮಾರ್ ಹೇಳಿದರು.

ತುಂಗಭದ್ರಾ ಹೂಳು ತೆರವಿಗೂ ಮಹತ್ವ

ಇದೇ ವೇಳೆ ತುಂಗಭದ್ರಾ ಜಲಾಶಯದ ಬಗ್ಗೆಯೂ ಮಾತನಾಡಿದ ಡಿ.ಕೆ. ಶಿವಕುಮಾರ್, ಜಲಾಶಯದಲ್ಲಿ ಸುಮಾರು 33 ಟಿಎಂಸಿ ಅಡಿ ಹೂಳು ಸಂಗ್ರಹವಾಗಿದೆ ಎಂದು ತಿಳಿಸಿದರು.

ಹೂಳು ತೆರವುಗೊಳಿಸುವ ಸಂಬಂಧ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆದಿರುವುದು ಐತಿಹಾಸಿಕ ಬೆಳವಣಿಗೆಯಾಗಿದೆ. ಜಲಾಶಯದ ಹೂಳು ತೆರವುಗೊಳಿಸಲು ಕೇಂದ್ರ ಸರ್ಕಾರ ಹೊಸ ನೀತಿಯನ್ನು ರೂಪಿಸಿದೆ ಎಂದು ಅವರು ಮಾಹಿತಿ ನೀಡಿದರು.

ಮೇಕೆದಾಟು ಯೋಜನೆಗೆ ಕೇಂದ್ರದ ಅಂತಿಮ ಅನುಮತಿ ಪಡೆಯುವ ಪ್ರಯತ್ನದ ಜೊತೆಗೆ, ಕಾವೇರಿ ನೀರಿನ ಸಮರ್ಪಕ ಬಳಕೆ ಹಾಗೂ ಜಲಾಶಯಗಳ ಸಾಮರ್ಥ್ಯ ಹೆಚ್ಚಿಸುವ ಕ್ರಮಗಳಿಗೂ ರಾಜ್ಯ ಸರ್ಕಾರ ಒತ್ತು ನೀಡುತ್ತಿದೆ.

Continue Reading

ಬೆಂಗಳೂರು

KPSC ರದ್ದು ಮಾಡುತ್ತೇನೆ ಎಂದಿದ್ದ ಪ್ರಿಯಾಂಕ್ ಖರ್ಗೆ ಈಗ ಏಕೆ ಸುಮ್ಮನಿದ್ದಾರೆ? ಹೆಚ್‌ಡಿಕೆ ಕಿಡಿ

Published

on

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC)ದಲ್ಲಿ ನಡೆಯುತ್ತಿರುವ ನೇಮಕಾತಿ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೆಪಿಎಸ್‌ಸಿ ಬಗ್ಗೆ ಸಾರ್ವಜನಿಕರಲ್ಲಿ ಅಸಹ್ಯಕರ ಭಾವನೆ ಮೂಡಿದ್ದು, ಇಂತಹ ಸಂಸ್ಥೆ ಅಗತ್ಯವಿದೆಯೇ ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ ಎಂದು ಅವರು ಹೇಳಿದ್ದಾರೆ.

ಕೆಪಿಎಸ್‌ಸಿ ಎಇಇ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹೆಚ್‌ಡಿ ಕುಮಾರಸ್ವಾಮಿ, ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳ ಭವಿಷ್ಯದೊಂದಿಗೆ ಕೆಪಿಎಸ್‌ಸಿ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು.

‘ಸಂಪೂರ್ಣ ಅಧಿಕಾರ ಸಿಕ್ಕರೆ KPSC ರದ್ದು ಮಾಡ್ತೀನಿ ಎಂದಿದ್ರಲ್ಲಾ’

ಪ್ರಿಯಾಂಕ್ ಖರ್ಗೆ ಅವರು ಹಿಂದೆ ಸಂಪೂರ್ಣ ಅಧಿಕಾರ ದೊರೆತರೆ ಕೆಪಿಎಸ್‌ಸಿಯನ್ನು ರದ್ದುಪಡಿಸುವುದಾಗಿ ಹೇಳಿದ್ದರು. ಇದೀಗ ಅಧಿಕಾರದಲ್ಲಿರುವ ಅವರು ಕೆಪಿಎಸ್‌ಸಿ ವಿರುದ್ಧ ಏನು ಕ್ರಮ ಕೈಗೊಂಡಿದ್ದಾರೆ ಎಂದು ಹೆಚ್‌ಡಿಕೆ ಪ್ರಶ್ನಿಸಿದರು.

ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದರು. ಆದರೆ ಕೆಪಿಎಸ್‌ಸಿ ಪರಿಸ್ಥಿತಿ ಹಂತಹಂತವಾಗಿ ಹದಗೆಡುತ್ತಿದೆ. ಇಂತಹ ಸಂಸ್ಥೆಯನ್ನು ಹೇಗೆ ಸರಿಪಡಿಸುತ್ತೀರಿ ಎಂದು ಸರ್ಕಾರವನ್ನು ಪ್ರಶ್ನಿಸಿದರು.

ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕಾನೂನುಬಾಹಿರವಾಗಿ ಯಾರಿಗೂ ಸೂಚನೆ ನೀಡಿಲ್ಲ. ತಮ್ಮ ಸಂಬಂಧಿಕರು ಅಥವಾ ಆಪ್ತರಿಗೆ ಅನುಕೂಲವಾಗುವಂತೆ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನ ನೀಡಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು. 2006ರಲ್ಲಿ ದಲಿತ ಸಮುದಾಯದ ವ್ಯಕ್ತಿಯೊಬ್ಬರನ್ನು ಕೆಪಿಎಸ್‌ಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾಗಿ ಅವರು ಹೇಳಿದರು.

ಎಇಇ ನೇಮಕಾತಿ ಕುರಿತು ಗಂಭೀರ ಆರೋಪ

ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳ ನೇಮಕಾತಿ ಪ್ರಕ್ರಿಯೆ ಕುರಿತು ಹಲವು ಪ್ರಶ್ನೆಗಳನ್ನು ಎತ್ತಿದ ಹೆಚ್‌ಡಿಕೆ, ಪ್ರಶ್ನೆಪತ್ರಿಕೆ ಸೇರಿದಂತೆ ಪರೀಕ್ಷಾ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದರು. ಪ್ರಶ್ನೆಪತ್ರಿಕೆಯನ್ನು ರೆಸಾರ್ಟ್‌ಗೆ ತೆಗೆದುಕೊಂಡು ಹೋಗಲಾಗಿದೆ ಎಂಬ ಆರೋಪದ ಬಗ್ಗೆ ಸರ್ಕಾರ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಒಎಂಆರ್‌ ಶೀಟ್‌ ತಿದ್ದಲಾಗಿದೆ, ಸಿಸಿಟಿವಿ ವ್ಯವಸ್ಥೆ ಸಮರ್ಪಕವಾಗಿರಲಿಲ್ಲ ಹಾಗೂ ದೃಶ್ಯಾವಳಿಗಳಿಗೆ ಸಂಬಂಧಿಸಿದಂತೆ ಹಲವು ಅನುಮಾನಗಳಿವೆ ಎಂದು ಅವರು ಆರೋಪಿಸಿದರು. ಈ ವಿಚಾರದಲ್ಲಿ ಸರ್ಕಾರ ನ್ಯಾಯಾಲಯದ ಮುಂದೆ ತನ್ನ ನಿಲುವನ್ನು ಸ್ಪಷ್ಟವಾಗಿ ಮಂಡಿಸಬೇಕಿತ್ತು ಎಂದರು.

‘ಯುವಕರಿಗೆ ಎಷ್ಟು ಉದ್ಯೋಗ ಕೊಟ್ಟಿದ್ದೀರಿ?’

ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಎಷ್ಟು ಉದ್ಯೋಗಗಳನ್ನು ನೀಡಲಾಗಿದೆ ಎಂಬುದನ್ನು ಸರ್ಕಾರ ಜನರ ಮುಂದೆ ಬಹಿರಂಗಪಡಿಸಬೇಕು ಎಂದು ಹೆಚ್‌ಡಿ ಕುಮಾರಸ್ವಾಮಿ ಆಗ್ರಹಿಸಿದರು.

ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲೂ ಅಕ್ರಮ ನಡೆದಿದೆ ಎಂದು ಆರೋಪಿಸಿದ ಅವರು, ಹೆಚ್ಚಿನ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವಕಾಶ ಸಿಗದೆ ಕಡಿಮೆ ಅಂಕ ಪಡೆದವರಿಗೆ ಉತ್ತಮ ರ‍್ಯಾಂಕ್ ದೊರೆತಿದೆ ಎಂಬ ಆರೋಪಗಳ ಬಗ್ಗೆ ತನಿಖೆ ನಡೆಸಬೇಕು ಎಂದರು.

ಪ್ರತಿಭಾವಂತ ವಿದ್ಯಾರ್ಥಿಗಳು ಕಣ್ಣೀರು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಣ ನೀಡಿದರೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ ಎಂದು ಅವರು ಆರೋಪಿಸಿದರು.

ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆ

ಕೆಪಿಎಸ್‌ಸಿ ಅಧ್ಯಕ್ಷರು, ಸದಸ್ಯರು, ಕಾರ್ಯದರ್ಶಿ ಹಾಗೂ ಕಂಟ್ರೋಲರ್‌ಗಳ ಅಧಿಕಾರ ಮತ್ತು ಜವಾಬ್ದಾರಿಗಳ ಬಗ್ಗೆಯೂ ಹೆಚ್‌ಡಿಕೆ ಪ್ರಶ್ನೆಗಳನ್ನು ಎತ್ತಿದರು. ನೇಮಕಾತಿ ಅಕ್ರಮಗಳ ಆರೋಪ ಕೇಳಿಬಂದರೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಎಷ್ಟು ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದರು.

ಕೆಪಿಎಸ್‌ಸಿ ಅಕ್ರಮಗಳಿಗೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದ ಅವರು, ಉದ್ಯೋಗಾಕಾಂಕ್ಷಿಗಳ ಹಿತ ಕಾಪಾಡಲು ಪಾರದರ್ಶಕ ನೇಮಕಾತಿ ವ್ಯವಸ್ಥೆ ರೂಪಿಸಬೇಕು ಎಂದು ಒತ್ತಾಯಿಸಿದರು.

‘ಬರೀ ಹೇಳಿಕೆ ಕೊಡಬೇಡಿ, ಪ್ರಾಮಾಣಿಕವಾಗಿ ಕೆಲಸ ಮಾಡಿ. ಕೆಪಿಎಸ್‌ಸಿ ಯಾವಾಗ ಸರಿಪಡಿಸುತ್ತೀರಿ ಎಂಬುದನ್ನು ಜನರಿಗೆ ತಿಳಿಸಿ’ ಎಂದು ಸರ್ಕಾರದ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

Continue Reading

ಬೆಂಗಳೂರು

Bengaluru Teenage Pregnancy: ಬೆಂಗಳೂರಿನಲ್ಲಿ 17 ವರ್ಷದ ಬಾಲಕಿಯರ ಗರ್ಭಧಾರಣೆ ಹೆಚ್ಚಳ; 4 ತಿಂಗಳಲ್ಲಿ 60 ಪ್ರಕರಣ

Published

on

ಬೆಂಗಳೂರು:Bengaluru ನಗರದಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರ ಗರ್ಭಧಾರಣೆ ಪ್ರಕರಣಗಳು ಆರೋಗ್ಯ ಇಲಾಖೆಯ ಅಂಕಿ-ಅಂಶಗಳಲ್ಲಿ ಮುಂದುವರಿದಿರುವುದು ಆತಂಕಕ್ಕೆ ಕಾರಣವಾಗಿದೆ. 2026ರ ಏಪ್ರಿಲ್‌ನಿಂದ ಜುಲೈವರೆಗೆ ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ 14ರಿಂದ 17 ವರ್ಷದೊಳಗಿನ 60 ಬಾಲಕಿಯರ ಗರ್ಭಧಾರಣೆ ಪ್ರಕರಣಗಳು ಬೆಂಗಳೂರಿನಲ್ಲಿ ದಾಖಲಾಗಿವೆ.

ವಿಧಾನಸಭೆಯಲ್ಲಿ ಮಂಡಿಸಲಾದ ಆರೋಗ್ಯ ಇಲಾಖೆಯ ಪೋರ್ಟಲ್‌ನ ಅಂಕಿ-ಅಂಶಗಳ ಆಧಾರದ ಮೇಲೆ ಈ ಮಾಹಿತಿ ಲಭ್ಯವಾಗಿದೆ. ಆದರೆ ಇವು ತಾತ್ಕಾಲಿಕ ಅಂಕಿ-ಅಂಶಗಳಾಗಿದ್ದು, ಆರೋಗ್ಯ ಕೇಂದ್ರಗಳ ದಾಖಲೆಗಳು ನವೀಕರಣಗೊಂಡ ಬಳಿಕ ಅಂತಿಮ ಸಂಖ್ಯೆಯಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ ಇಳಿಕೆ

2024-25ರಲ್ಲಿ ಬೆಂಗಳೂರು ನಗರದಲ್ಲಿ 14ರಿಂದ 17 ವರ್ಷದ ಬಾಲಕಿಯರಿಗೆ ಸಂಬಂಧಿಸಿದಂತೆ ಒಟ್ಟು 394 ಗರ್ಭಧಾರಣೆ ಪ್ರಕರಣಗಳು ದಾಖಲಾಗಿದ್ದವು. 2025-26ರಲ್ಲಿ ಈ ಸಂಖ್ಯೆ 262ಕ್ಕೆ ಇಳಿಕೆಯಾಗಿದೆ. ಅಂದರೆ ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.33.5ರಷ್ಟು ಇಳಿಕೆ ಕಂಡುಬಂದಿದೆ.

ಆದರೆ 2026-27ರ ಆರಂಭದ ಕೇವಲ ನಾಲ್ಕು ತಿಂಗಳಲ್ಲಿ 60 ಪ್ರಕರಣಗಳು ದಾಖಲಾಗಿರುವುದು ಗಮನ ಸೆಳೆದಿದೆ. ಈ ಸಂಖ್ಯೆ ವರ್ಷದ ಉಳಿದ ಅವಧಿಯಲ್ಲಿ ಹೇಗೆ ಬದಲಾಗಲಿದೆ ಎಂಬುದು ಆರೋಗ್ಯ ಇಲಾಖೆಯ ಅಂತಿಮ ಅಂಕಿ-ಅಂಶಗಳು ಬಿಡುಗಡೆಯಾದ ಬಳಿಕ ಸ್ಪಷ್ಟವಾಗಲಿದೆ.

ರಾಜ್ಯದಲ್ಲೂ ಗರ್ಭಧಾರಣೆ ಪ್ರಕರಣಗಳ ಇಳಿಕೆ

ಕರ್ನಾಟಕದ ಒಟ್ಟಾರೆ ಅಂಕಿ-ಅಂಶಗಳನ್ನು ಗಮನಿಸಿದರೆ, 2024-25ರಲ್ಲಿ 14ರಿಂದ 17 ವರ್ಷದ ಬಾಲಕಿಯರಲ್ಲಿ 4,579 ಗರ್ಭಧಾರಣೆ ಪ್ರಕರಣಗಳು ದಾಖಲಾಗಿದ್ದವು. 2025-26ರಲ್ಲಿ ಈ ಸಂಖ್ಯೆ 3,308ಕ್ಕೆ ಇಳಿಕೆಯಾಗಿದೆ. ಅಂದರೆ ಸುಮಾರು ಶೇ.28ರಷ್ಟು ಇಳಿಕೆ ಕಂಡುಬಂದಿದೆ.

2026ರ ಏಪ್ರಿಲ್‌ನಿಂದ ಜುಲೈವರೆಗೆ ರಾಜ್ಯಾದ್ಯಂತ 725 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಬೆಂಗಳೂರಿನ 60 ಪ್ರಕರಣಗಳು ಶೇ.8.3ರಷ್ಟು ಪಾಲು ಹೊಂದಿವೆ.

17 ವರ್ಷದ ಬಾಲಕಿಯರ ಸಂಖ್ಯೆಯೇ ಹೆಚ್ಚು

ಬೆಂಗಳೂರಿನ ವಯಸ್ಸುವಾರು ಅಂಕಿ-ಅಂಶಗಳನ್ನು ಗಮನಿಸಿದರೆ 17 ವರ್ಷದ ಬಾಲಕಿಯರಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. 2025-26ರಲ್ಲಿ 17 ವರ್ಷದವರಲ್ಲಿ 342 ಪ್ರಕರಣಗಳು ವರದಿಯಾಗಿದ್ದರೆ, 16 ವರ್ಷದವರಲ್ಲಿ 37, 15 ವರ್ಷದವರಲ್ಲಿ 12 ಹಾಗೂ 14 ವರ್ಷದವರಲ್ಲಿ 3 ಪ್ರಕರಣಗಳು ದಾಖಲಾಗಿದ್ದವು.

2026ರ ಏಪ್ರಿಲ್‌ನಿಂದ ಜುಲೈವರೆಗೆ ದಾಖಲಾಗಿರುವ 60 ಪ್ರಕರಣಗಳಲ್ಲಿ 17 ವರ್ಷದವರು 37, 16 ವರ್ಷದವರು 16, 15 ವರ್ಷದವರು 5 ಮತ್ತು 14 ವರ್ಷದವರು 2 ಪ್ರಕರಣಗಳಿದ್ದಾರೆ.

ಹದಿಹರೆಯದ ಗರ್ಭಧಾರಣೆಯಿಂದ ಆರೋಗ್ಯ ಅಪಾಯ

ತಜ್ಞರ ಪ್ರಕಾರ, ಹದಿಹರೆಯದಲ್ಲೇ ಗರ್ಭಧಾರಣೆಯಾಗುವುದರಿಂದ ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೆ ಹಲವು ರೀತಿಯ ಪರಿಣಾಮ ಉಂಟಾಗುವ ಸಾಧ್ಯತೆಯಿದೆ. ಅಕಾಲಿಕ ಹೆರಿಗೆ ಹಾಗೂ ಕಡಿಮೆ ತೂಕದ ಮಗು ಜನಿಸುವ ಅಪಾಯ ಹೆಚ್ಚಾಗಬಹುದು. ಹೀಗಾಗಿ ಪ್ರತಿಯೊಂದು ಪ್ರಕರಣದಲ್ಲೂ ಆರಂಭಿಕ ಪ್ರಸವಪೂರ್ವ ಆರೈಕೆ, ಪೌಷ್ಟಿಕಾಂಶದ ಮೌಲ್ಯಮಾಪನ ಮತ್ತು ಸೂಕ್ತ ಸಮಾಲೋಚನೆಗೆ ಆದ್ಯತೆ ನೀಡಬೇಕಿದೆ.

ಚಿಕ್ಕ ವಯಸ್ಸಿನ ಗರ್ಭಧಾರಣೆಯನ್ನು ಕೇವಲ ಸಾಮಾಜಿಕ ಸಮಸ್ಯೆಯಾಗಿ ನೋಡುವ ಬದಲು ವೈದ್ಯಕೀಯ ದೃಷ್ಟಿಯಿಂದಲೂ ಗಂಭೀರವಾಗಿ ಪರಿಗಣಿಸಬೇಕು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬಾಲ್ಯವಿವಾಹ, ದೌರ್ಜನ್ಯ ಕುರಿತು ಪ್ರಶ್ನೆಗಳು

ಹದಿಹರೆಯದ ಬಾಲಕಿಯರಲ್ಲಿ ಗರ್ಭಧಾರಣೆ ಮುಂದುವರಿದಿರುವುದು ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯ, ಸಂತಾನೋತ್ಪತ್ತಿ ಆರೋಗ್ಯದ ಕುರಿತು ಅರಿವಿನ ಕೊರತೆ ಹಾಗೂ ಅಗತ್ಯ ಆರೋಗ್ಯ ಸೇವೆಗಳ ಲಭ್ಯತೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆಗೆ ಕಾರಣವಾಗಿದೆ.

ಅದೇ ವೇಳೆ, ಆರೋಗ್ಯ ಇಲಾಖೆಯ ಪೋರ್ಟಲ್‌ನಲ್ಲಿರುವ ಅಂಕಿ-ಅಂಶಗಳು ಇನ್ನೂ ಅಂತಿಮಗೊಂಡಿಲ್ಲ. ಆದ್ದರಿಂದ ಪ್ರಸ್ತುತ ಲಭ್ಯವಿರುವ ಸಂಖ್ಯೆಯನ್ನು ಅಂತಿಮ ವರ್ಷದ ಅಂಕಿ-ಅಂಶವೆಂದು ಪರಿಗಣಿಸಬಾರದು. ಆರೋಗ್ಯ ಕೇಂದ್ರಗಳ ದಾಖಲೆಗಳ ನವೀಕರಣದ ಬಳಿಕ ಪ್ರಕರಣಗಳ ನಿಖರ ಚಿತ್ರಣ ಲಭ್ಯವಾಗಲಿದೆ.

Continue Reading

Trending