Connect with us

ದೇಶ

ಟಾಟಾ ನೆಕ್ಸಾನ್ ಇವಿ ಫೇಸ್​ಲಿಫ್ಟ್ ಭಾರತದಲ್ಲಿ ಬಿಡುಗಡೆ

Published

on

ಟಾಟಾ ನೆಕ್ಸಾನ್ ಇವಿ ಫೇಸ್ಲಿಫ್ಟ್ ಭಾರತದಲ್ಲಿ ಬಿಡುಗಡೆ

ಬೆಂಗಳೂರು: ಟಾಟಾ ಮೋಟಾರ್ಸ್ ನೆಕ್ಸಾನ್ ಇವಿ ಫೇಸ್ ಲಿಫ್ಟ್ ಕಾರನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಇದರ ಆರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ 14.74 ಲಕ್ಷ ರೂಪಾಯಿಗಳ ಈ ಪರಿಚಯಾತ್ಮಕ ಬೆಲೆಗಳು ಸೀಮಿತ ಅವಧಿಗೆ ಮಾತ್ರ ಇರುತ್ತದೆ. ನಿರ್ದಿಷ್ಟ ಸಂಖ್ಯೆಯ ಬುಕ್ಕಿಂಗ್ ಆದ ಬಳಿಕ ಬೆಲೆಯೇ ಏರಿಕೆಯಾಗಲಿದೆ ಎಂಬ ಸೂಚನೆಯನ್ನು ಕಂಪನಿ ನೀಡಿದೆ. ಹೊಸ ವಿನ್ಯಾಸ, ಹಲವಾರು ಹೊಸ ಫೀಚರ್ಗಳೊಂದಿಗೆ ಹೊಸ ನೆಕ್ಸಾನ್ ಇವಿ ಫೇಸ್ಲಿಫ್ಟ್ ಬಂದಿದೆ.
ಟಾಟಾ ನೆಕ್ಸಾನ್ ಭಾರತದ ಮಾರುಕಟ್ಟೆಯ ಜನಪ್ರಿಯ ಕಾಂಪ್ಯಾಕ್ಟ್ ಎಸ್ ಯುವಿ . ಇದರ ಎಲೆಕ್ಟ್ರಿಕ್ ರೂಪಾಂತರವು ನವೀಕರಿಸಿದ ವಿನ್ಯಾಸ, ಹೊಸ ವೈಶಿಷ್ಟ್ಯಗಳು ಮತ್ತು ಸುಧಾರಿತ ಎಲೆಕ್ಟ್ರಿಕ್ ಪವರ್ ಟ್ರೇನ್ ಸೇರಿದಂತೆ ಹಲವು ಹೊಸತನಗಳೊಂದಿಗೆ ಬಂದಿದೆ.ಈ ಎಲೆಕ್ಟ್ರಿಕ್ ಎಸ್ ಯುವಿಯು ಹೊಸ ಬಾಹ್ಯ ವಿನ್ಯಾಸ, ನವೀಕರಿಸಿದ ಒಳಾಂಗಣ ಮತ್ತು ಹೊಸ ಎಲೆಕ್ಟ್ರಿಕ್ ಮೋಟರ್ ಅನ್ನು ಒಳಗೊಂಡಿರುವ ಪೂರ್ತಿ ಮೇಕ್ ಓವರ್ ಗೆ ಒಳಗಾಗಿದೆ. ಟಾಟಾ ಮೋಟಾರ್ಸ್ ಈಗಾಗಲೇ ನೆಕ್ಸಾನ್ ಇವಿಯ 53,000ಕ್ಕೂ ಹೆಚ್ಚು ಯುನಿಟ್ ಗಳ ಮಾರಾಟ ಮಾಡಿದೆ. ಹೀಗಾಗಿ ಫೇಸ್ ಲಿಫ್ಟ್ ಮೂಲಕ ಯಶಸ್ಸನ್ನು ಮತ್ತಷ್ಟು ವಿಸ್ತರಿಸುವ ಗುರಿಯನ್ನು ಹೊಂದಿದೆ.
2023ರ ಟಾಟಾ ನೆಕ್ಸಾನ್ ಇವಿ ಫೇಸ್ ಲಿಫ್ಟ್ ತನ್ನ ಆಂತರಿಕ ದಹನಕಾರಿ ಎಂಜಿನ್ (ಐಸಿಇ ಎಂಜಿನ್) ಪ್ರತಿರೂಪದೊಂದಿಗೆ ಪಾದಾರ್ಪಣೆ ಮಾಡಿದೆ. ಪೆಟ್ರೋಲ್ ಕಾರು ಬೆಲೆ 8.10 ಲಕ್ಷಗಳಿಂದ (ಎಕ್ಸ್ ಶೋರೂಂ) ಪ್ರಾರಂಭವಾಗುತ್ತದೆ. ಐಸಿಇ ಚಾಲಿತ ನೆಕ್ಸಾನ್ ಫೇಸ್ ಲಿಫ್ಟ್ ನಂತೆಯೇ, ಇವಿ ರೂಪಾಂತರವು ಟಾಟಾದ ಕರ್ವ್ ಪರಿಕಲ್ಪನೆಯಿಂದ ವಿನ್ಯಾಸ ಸ್ಫೂರ್ತಿ ಪಡೆದಿದೆ. ಆದಾಗ್ಯೂ, ವಿಭಿನ್ನ ಏರ್ ಡ್ಯಾಮ್ ಮತ್ತು ಪೂರ್ಣ-ಅಗಲದ ಎಲ್ಇಡಿ ಲೈಟ್ ಬಾರ್ ಸೇರಿದಂತೆ ವಿಶಿಷ್ಟ ವೈಶಿಷ್ಟ್ಯಗಳಿವೆ. ಇದು ಏಳು ವಿಭಿನ್ನ ಪೇಂಟ್ ಆಯ್ಕೆಯನ್ನು ನೀಡುತ್ತದೆ: ಎಂಪವರ್ಡ್ ಆಕ್ಸೈಡ್, ಪ್ರಿಸ್ಟೈನ್ ವೈಟ್, ಇಂಟೆನ್ಸಿ ಟೀಲ್, ಫ್ಲೇಮ್ ರೆಡ್, ಡೇಟೋನಾ ಗ್ರೇ, ಫಿಯರ್ಲೆಸ್ ಪರ್ಪಲ್ ಮತ್ತು ಕ್ರಿಯೇಟಿವ್ ಓಷನ್ ಎಂಬ ಬಣ್ಣಗಳಿವೆ.
ನೆಕ್ಸಾನ್ ಇವಿ ಫೇಸ್ ಲಿಫ್ಟ್ ನ ಕ್ಯಾಬಿನ್ ನಲ್ಲಿ, ಹೊಸ ಫೀಚರ್ಗಳನ್ನು ನೀಡಲಾಗಿದೆ. ವಿಶೇಷವೆಂದರೆ, ಎರಡು ದೊಡ್ಡ ಟಚ್ಸ್ಕ್ರಿನ್ ಸಿಸ್ಟಮ್ಗಳಿವೆ. 12.3-ಇಂಚಿನ ಟಚ್ ಸ್ಕ್ರೀನ್ ಇನ್ಫೋಟೈನ್ ಮೆಂಟ್ ಸಿಸ್ಟಮ್ ಮತ್ತು 10.25-ಇಂಚಿನ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಇದರಲ್ಲಿದೆ. ಇದು ಕ್ಯಾಬಿನ್ ನ ಪ್ರೀಮಿಯಂ ಅನುಭವವನ್ನು ಹೆಚ್ಚಿಸುತ್ತದೆ.
ಹೊಸ ಸ್ಟೀರಿಂಗ್-ಮೌಂಟೆಡ್ ಪ್ಯಾಡಲ್ ಶಿಫ್ಟರ್, 360 ಡಿಗ್ರಿ ಕ್ಯಾಮೆರಾ, ಬ್ಲೈಂಡ್ ಸ್ಪಾಟ್ ಮಾನಿಟರ್, ವೈರ್ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್, ವಾಯ್ಸ್ ಕಮಾಂಡ್ ಫಂಕ್ಷನಾಲಿಟಿ, ಎತ್ತರ-ಸರಿಹೊಂದಿಸಬಹುದಾದ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟುಗಳು, ಏರ್ ಪ್ಯೂರಿಫೈಯರ್, ಸಬ್ ವೂಫರ್ ಹೊಂದಿರುವ ಜೆಬಿಎಲ್ ಆಡಿಯೊ ಸಿಸ್ಟಮ್ ಮತ್ತು ಸನ್ ರೂಫ್ ನೀಡಲಾಗಿದೆ.
ಸುರಕ್ಷತಾ ವೈಶಿಷ್ಟ್ಯಗಳಿಗೆ ಸಂಬಂಧಿಸಿದಂತೆ 2023 ಟಾಟಾ ನೆಕ್ಸಾನ್ ಇವಿ ಫೇಸ್ ಲಿಫ್ಟ್ ಈಗ ಆರು ಏರ್ ಬ್ಯಾಗ್ ಗಳು ಮತ್ತು ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್ (ಇಎಸ್ ಸಿ) ಅನ್ನು ಸ್ಟ್ಯಾಂಡರ್ಡ್ ಆಗಿ ಹೊಂದಿದೆ. ಹೆಚ್ಚುವರಿಯಾಗಿ, ಮುಂಭಾಗ ಮತ್ತು ಹಿಂಭಾಗದ ಪಾರ್ಕಿಂಗ್ ಸೆನ್ಸಾರ್ ಗಳು, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಹಿಲ್ ಆರೋಹಣ ಮತ್ತು ಇಳಿಯುವಿಕೆ ನಿಯಂತ್ರಣ, ಜೊತೆಗೆ ಹಿಂಭಾಗದ ಡಿಸ್ಕ್ ಬ್ರೇಕ್ ಗಳನ್ನು ಹೊಂದಿದೆ.
ಪವರ್ ಟ್ರೇನ್ ಗೆ ಹೋಗುವುದಾದರೆ, ಎಲೆಕ್ಟ್ರಿಕ್ ಎಸ್ ಯುವಿ ಈಗ ಹೊಸ ಜೆನ್ 2 ಮೋಟರ್ ಹೊಂದಿದೆ, ಇದು ಅದರ ಹಿಂದಿನದಕ್ಕಿಂತ 20 ಕೆ.ಜಿ ಹಗುರವಾಗಿದೆ. ಈ ನವೀಕರಿಸಿದ ಎಲೆಕ್ಟ್ರಿಕ್ ವಾಹನವು ಒಂದು ಬಾರಿ ಚಾರ್ಜ್ ಮಾಡಿದರೆ 465 ಕಿ.ಮೀ ವರೆಗೆ ರೇಂಜ್ ನೀಡುತ್ತದೆ. ಲಾಂಗ್ ರೇಂಜ್ ವೇರಿಯೆಂಟ್ನಲ್ಲಿ ಇವಿ 143 ಬಿಹೆಚ್ ಪಿ ಗರಿಷ್ಠ ಶಕ್ತಿ ಮತ್ತು 215 ಎನ್ಎಂ ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಪವರ್ ಔಟ್ ಪುಟ್ ಸಣ್ಣ ಹೆಚ್ಚಳವನ್ನು ಕಂಡಿದೆ. ಅದೇ ರೀತಿ ಹೊಸ ಮಾಡೆಲ್ನಲ್ಲಿ ಟಾರ್ಕ್ ಸ್ವಲ್ಪ ಕಡಿಮೆ ಮಾಡಲಾಗಿದೆ. ಇದು ಕೇವಲ 8.9 ಸೆಕೆಂಡುಗಳಲ್ಲಿ 0 ರಿಂದ 100 ಕಿ.ಮೀ ವೇಗವನ್ನು ಪಡೆಯುತ್ತದೆ. ಸಿಟಿ, ಇಕೋ ಮತ್ತು ಸ್ಪೋರ್ಟ್ ಎಂಬ ಮೂರು ವಿಭಿನ್ನ ಚಾಲನಾ ಮೋಡ್ ಗಳನ್ನು ನೀಡಲಾಗಿದೆ.

ಕ್ರೀಡೆ

ವಾಂಖೆಡೆನಲ್ಲಿ RCB ದಬ್ಬಾಳಿಕೆ: ಚಿನ್ನಸ್ವಾಮಿ ಕಾದಿದೆ!

Published

on

By

ಮುಂಬೈ: Indian Premier League 2026ರ ಪಂದ್ಯದಲ್ಲಿ Royal Challengers Bengaluru ತಂಡವು Mumbai Indians ವಿರುದ್ಧ 18 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ RCB ತನ್ನ ಇತಿಹಾಸದಲ್ಲೇ ಅತಿ ಹೆಚ್ಚು ಮೊತ್ತವನ್ನು ದಾಖಲಿಸಿದೆ.

ಈ ಪಂದ್ಯದಲ್ಲಿ Phil Salt 36 ಎಸೆತಗಳಲ್ಲಿ 78 ರನ್ ಸಿಡಿಸಿ ‘ಪ್ಲೇಯರ್ ಆಫ್ ದ ಮ್ಯಾಚ್’ ಪ್ರಶಸ್ತಿ ಪಡೆದರು. ನಾಯಕ Rajat Patidar ಕೇವಲ 20 ಎಸೆತಗಳಲ್ಲಿ 53 ರನ್ ಸಿಡಿಸಿ ತಂಡಕ್ಕೆ ಬಲವಾದ ವೇದಿಕೆ ಒದಗಿಸಿದರು. ಪಾಟಿದಾರ್ 17 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಟೂರ್ನಿಯ ಇತಿಹಾಸದಲ್ಲೇ ವೇಗವಾದ ಫಿಫ್ಟಿ ಸಿಡಿಸಿದ ನಾಯಕ ಎಂಬ ದಾಖಲೆ ನಿರ್ಮಿಸಿದರು.

ಬೌಲಿಂಗ್ ವಿಭಾಗದಲ್ಲಿ Krunal Pandya (1/26) ಮತ್ತು Suyash Sharma (2/47) ಪ್ರಮುಖ ಪಾತ್ರವಹಿಸಿ ಮುಂಬೈ ತಂಡವನ್ನು ನಿಯಂತ್ರಿಸಿದರು.

ಪಂದ್ಯದ ಬಳಿಕ ಮಾತನಾಡಿದ ಪಾಟಿದಾರ್, “ಪ್ರತಿ ಪಂದ್ಯದಲ್ಲೂ 200ಕ್ಕೂ ಹೆಚ್ಚು ರನ್‌ಗಳು ಬರುತ್ತಿವೆ. ಇದು ತಂಡಕ್ಕೆ ಆತ್ಮವಿಶ್ವಾಸ ಹೆಚ್ಚಿಸುತ್ತಿದೆ” ಎಂದು ಹೇಳಿದರು. ತಮ್ಮ ಬ್ಯಾಟಿಂಗ್ ಬಗ್ಗೆ ಮಾತನಾಡಿ, “ನಾನು ಬಾಲ್‌ಗೆ ಪ್ರತಿಕ್ರಿಯಿಸುತ್ತೇನೆ, ಸ್ಪಷ್ಟತೆಯಿಂದ ಆಟ ಆಡುತ್ತೇನೆ” ಎಂದು ತಿಳಿಸಿದ್ದಾರೆ.

ಕೃಣಾಲ್ ಪಾಂಡ್ಯಾ ತಂಡದ ಬ್ಯಾಟಿಂಗ್ ಶಕ್ತಿಯನ್ನು ಮೆಚ್ಚಿ, “ವಿರಾಟ್, ಸಾಲ್ಟ್, ಟಿಮ್ ಎಲ್ಲರೂ ಕೊಡುಗೆ ನೀಡಿದ್ದಾರೆ” ಎಂದರು. ಕೋಚ್ Malolan Rangarajan ರಸಿಖ್‌ರ ಹೋರಾಟ ಮನೋಭಾವವನ್ನು ಶ್ಲಾಘಿಸಿದರು.

ಈ ಗೆಲುವಿನೊಂದಿಗೆ RCB ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದ್ದು, ಮುಂದಿನ ಚಿನ್ನಸ್ವಾಮಿ ಪಂದ್ಯಕ್ಕಾಗಿ ಕಾತುರವಾಗಿದೆ.

Continue Reading

ದೇಶ

ಕಾಂಗ್ರೆಸ್‌ನಲ್ಲಿ ಭೂಕಂಪ: ನಜೀರ್ ಅಹ್ಮದ್‌ಗೆ ಸುರ್ಜೇವಾಲಾ ಅಲ್ಟಿಮೇಟಂ

Published

on

By

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಒಳಅಸಮಾಧಾನ ತೀವ್ರಗೊಂಡಿರುವ ನಡುವೆಯೇ, ರಾಜ್ಯ ಉಸ್ತುವಾರಿ Randeep Singh Surjewala ಅವರು ಸಿಎಂ ರಾಜಕೀಯ ಕಾರ್ಯದರ್ಶಿ Naseer Ahmed ಅವರಿಗೆ ಕಠಿಣ ಡೆಡ್‌ಲೈನ್ ನೀಡಿದ್ದಾರೆ.

ಇಂದು (ಏಪ್ರಿಲ್ 13) ಸಂಜೆಯೊಳಗೆ ರಾಜೀನಾಮೆ ಸಲ್ಲಿಸುವಂತೆ ಸೂಚಿಸಿರುವ ಸುರ್ಜೇವಾಲಾ, ಸಮಯಕ್ಕೆ ರಾಜೀನಾಮೆ ನೀಡದಿದ್ದರೆ ಅವರನ್ನು ಸ್ಥಾನದಿಂದ ವಜಾಗೊಳಿಸಲು ಮುಖ್ಯಮಂತ್ರಿ Siddaramaiah ಅವರಿಗೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ, “ನಸೀರ್ ಅಹ್ಮದ್ ಇನ್ನೂ ರಾಜೀನಾಮೆ ನೀಡಿಲ್ಲ. ಮುಂದಿನ ದಿನಗಳಲ್ಲಿ ಕೊಡಬಹುದು. ಕಾಂಗ್ರೆಸ್ ಸೋಲನ್ನು ಒಪ್ಪಿಕೊಂಡಿಲ್ಲ. ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

ದಾವಣಗೆರೆ ದಕ್ಷಿಣ ಉಪಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಹೆಚ್ಚಾಗಿದ್ದು, ಕೆಲವು ನಾಯಕರ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿವೆ. ನಸೀರ್ ಅಹ್ಮದ್ ಅವರು ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರೆಂದು ಸಿಎಂ ಹೇಳಿದ್ದಾರೆ.

ಇದಕ್ಕೂ ಮೊದಲು ಸುರ್ಜೇವಾಲಾ ಅವರು ಸಚಿವ Zameer Ahmed Khan, Abdul Jabbar ಹಾಗೂ ನಸೀರ್ ಅಹ್ಮದ್ ವಿರುದ್ಧ ವರದಿ ಸಲ್ಲಿಸಿದ್ದರು. ಈಗಾಗಲೇ ಅಬ್ದುಲ್ ಜಬ್ಬಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಅದನ್ನು D. K. Shivakumar ಅಂಗೀಕರಿಸಿದ್ದಾರೆ.

ಈ ಬೆಳವಣಿಗೆ ಕಾಂಗ್ರೆಸ್ ಒಳರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದ್ದು, ಮುಂದಿನ ಕ್ರಮಗಳ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

Continue Reading

ದೇಶ

ಸಚಿವ ಸ್ಥಾನ ಕೇಳೋದು ತಪ್ಪಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

Published

on

By

ಬೆಂಗಳೂರು: ಹಿರಿಯ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಗೃಹ ಸಚಿವ G. Parameshwara ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಅದೇನು ಗ್ಯಾಂಬ್ಲಿಂಗ್ ಅಲ್ಲ, ಶಾಸಕರು ತಮ್ಮ ಅರ್ಹತೆಯ ಆಧಾರದಲ್ಲಿ ಕೇಳುತ್ತಿದ್ದಾರೆ” ಎಂದು ಹೇಳಿದ್ದಾರೆ.

ಎರಡು ಮೂರು ಬಾರಿ ಗೆದ್ದಿರುವ ಶಾಸಕರು ಸಚಿವರಾಗಲು ಸಮರ್ಥರು. ಹೀಗಾಗಿ ಸಚಿವ ಸ್ಥಾನಕ್ಕಾಗಿ ಕೇಳುವುದು ಸಹಜ. ಆದರೆ ಅಂತಿಮ ನಿರ್ಧಾರ ಮುಖ್ಯಮಂತ್ರಿ ಮತ್ತು ಹೈಕಮಾಂಡ್ ಕೈಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ಪಕ್ಷ ಪುನಾರಚನೆ ಕುರಿತು ಮಾತನಾಡಿದ ಪರಮೇಶ್ವರ್, “ನಾಯಕತ್ವ ವಿಚಾರವಾಗಲಿ, ಸಚಿವ ಸಂಪುಟ ಪುನಾರಚನೆ ಆಗಲಿ, ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಹಿರಂಗವಾಗಿ ಕೇಳುವುದರಲ್ಲಿ ತಪ್ಪೇನಿಲ್ಲ” ಎಂದು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಈಗ ಪುನಾರಚನೆ ಚರ್ಚೆ ನಡೆಯುತ್ತಿದೆ. ಅಧ್ಯಕ್ಷ ಸ್ಥಾನ ವಿಚಾರವನ್ನು ಹೈಕಮಾಂಡ್‌ಗೆ ಬಿಟ್ಟಿದ್ದೇವೆ” ಎಂದು ಹೇಳಿದರು.

ಇನ್ನೂ ದಾವಣಗೆರೆ ಕ್ಷೇತ್ರದಲ್ಲಿ Abdul Jabbar ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ಅವರು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಉಲ್ಲೇಖಿಸಿದರು. D. K. Shivakumar ಹೊಸ ಸಮಿತಿ ರಚನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಪುನಾರಚನೆ ನಡೆದರೆ ಹಿರಿಯರು ಸ್ಥಾನ ಬಿಟ್ಟುಕೊಡಬೇಕಾದರೆ ನಾವು ಒಪ್ಪಲೇಬೇಕು. ಹೈಕಮಾಂಡ್ ತೀರ್ಮಾನಕ್ಕೆ ಯಾರೂ ವಿರೋಧಿಸುವ ಪ್ರಶ್ನೆಯೇ ಇಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

Continue Reading

Trending