Connect with us

ರಾಜ್ಯ

ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಯಾದ ರಾಜ್ಯದ ಹೊಯ್ಸಳ ದೇವಾಲಯಗಳು.

Published

on


ಕರ್ನಾಟಕದ ಪ್ರವಾಸವು ನಿಜಕ್ಕೂ ಅದ್ಭುತ. ಭಾರತದಲ್ಲಿರುವ ಪ್ರವಾಸಿಗರು, ಸಂದರ್ಶಕರು ತಮ್ಮ ಜೀವಿತಾವಧಿಯಲ್ಲಿ ತಪ್ಪದೇ ಕರ್ನಾಟಕ ರಾಜ್ಯದ ಪ್ರವಾಸ ಮಾಡಲೇಬೇಕು.ಕರ್ನಾಟಕದ ಕೆಲವು ಪ್ರವಾಸಿ ಸ್ಥಳಗಳು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿದೆ.ಈ ಸ್ಥಳಕ್ಕೆ ನೀವು ಈಗಾಗಲೇ ಹೋಗಿ ಬಂದಿರಬಹುದು
ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಹಾಸನ ಜಿಲ್ಲೆ ಬೇಲೂರು ಮತ್ತು ಹಳೆಬೀಡಿನಲ್ಲಿರುವ ಹಾಗೂ ಮೈಸೂರು ಜಿಲ್ಲೆ ಸೋಮನಾಥಪುರದಲ್ಲಿರುವ ಹೊಯ್ಸಳ ದೇವಾಲಯಗಳು ಸ್ಥಾನ ಪಡೆದಿವೆ. ಕರ್ನಾಟಕದ ಹೊಯ್ಸಳರ ಕಾಲದ ಮೂರು ಪ್ರಮುಖ ದೇವಾಲಯಗಳು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.ಈ ಪ್ರತಿಷ್ಠಿತ ಮಾನ್ಯತೆ ಪಡೆದ ಭಾರತದ 42ನೇ ತಾಣವಾಗಿದೆ.ಹೊಯ್ಸಳ ದೇವಾಲಯಗಳು, ಏಪ್ರಿಲ್ 2014 ರಿಂದಲೂ ಯುನೆಸ್ಕೊದ ತಾತ್ಕಾಲಿಕ ಪಟ್ಟಿಯಲ್ಲಿದ್ದವು. 2022-23 ಕ್ಕೆ ವಿಶ್ವ ಪಾರಂಪರಿಕ ತಾಣವಾಗಿ ಪರಿಗಣಿಸಲು ಜನವರಿ 2022 ರಲ್ಲಿ ಭಾರತದಿಂದ ನಾಮನಿರ್ದೇಶನ ಮಾಡಲಾಗಿತ್ತು. ಸರ್ಕಾರದ ಮನವಿಗೆ ಒಪ್ಪಿ ಈಗ ಯುನೆಸ್ಕೊ ಪಟ್ಟಿಗೆ ಸೇರ್ಪಡೆ ಮಾಡಿದೆ. ಇದನ್ನು ವಿಶ್ವಸಂಸ್ಥೆಯು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ. ಈ ವಿಚಾರವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಇದು ದೇಶಕ್ಕೆ ಮತ್ತಷ್ಟು ಹೆಮ್ಮೆಯನ್ನುಂಟು ಮಾಡಿದೆ. ಹೊಯ್ಸಳ ದೇವಾಲಯಗಳ ಕಾಲಾತೀತ ಸೌಂದರ್ಯ ಮತ್ತು ಸಂಕೀರ್ಣ ವಿವರಗಳು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ನಮ್ಮ ಪೂರ್ವಜರ ಅಸಾಧಾರಣ ಕರಕುಶಲತೆಗೆ ಸಾಕ್ಷಿಯಾಗಿದೆ ಎಂದಿದ್ದಾರೆ. ಈ ಮೂರು ಹೊಯ್ಸಳ ದೇವಾಲಯಗಳು ಈಗಾಗಲೇ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ರಕ್ಷಿತ ಸ್ಮಾರಕಗಳಾಗಿವೆ.ಹೊಯ್ಸಳರು 12 ಮತ್ತು 13ನೇ ಶತಮಾನದಲ್ಲಿ ಕರ್ನಾಟಕವನ್ನು ಆಳಿದ ಪ್ರಮುಖ ರಾಜವಂಶಜರು. ಕಲೆ, ಸಾಹಿತ್ಯ ಮತ್ತು ಪ್ರಮುಖವಾಗಿ ದೇವಾಲಯದ ವಾಸ್ತುಶಿಲ್ಪದ ಮೇಲೆ ಪ್ರಭಾವ ಬೀರಿದ್ದಾರೆ. ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರುನಾಡಿನ ಹೊಯ್ಸಳರ ಕಾಲದ ದೇವಾಲಯಗಳು ಸೇರ್ಪಡೆಗೊಂಡಿರುವುದು ಖುಷಿಯ ಜೊತೆಗೆ ಹೆಮ್ಮೆಯ ಸಂಗತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Continue Reading

ದೇಶ

Ukraine ಮೇಲೆ ರಷ್ಯಾದ ಭೀಕರ ದಾಳಿ: ಮೊದಲ ಬಾರಿಗೆ FAB-3000 ಗ್ಲೈಡ್ ಬಾಂಬ್ ಪ್ರಯೋಗ

Published

on

ಮಾಸ್ಕೋ:Ukraine Russia ನಾಲ್ಕು ವರ್ಷಗಳಿಂದ ಮುಂದುವರಿಯುತ್ತಿರುವ ರಷ್ಯಾ-ಉಕ್ರೇನ್ ಯುದ್ಧ ಇದೀಗ ಮತ್ತಷ್ಟು ತೀವ್ರಗೊಂಡಿದ್ದು, ರಷ್ಯಾ ತನ್ನ ಅತ್ಯಂತ ಶಕ್ತಿಶಾಲಿ FAB-3000 Glide Bomb ಅನ್ನು ಉಕ್ರೇನ್ ಮೇಲೆ ಪ್ರಯೋಗಿಸಿರುವುದಾಗಿ ತಿಳಿಸಿದೆ. ಉಕ್ರೇನ್ ನಡೆಸಿದ ಡ್ರೋನ್ ದಾಳಿಗೆ ಪ್ರತೀಕಾರವಾಗಿ ಈ ವೈಮಾನಿಕ ದಾಳಿ ನಡೆಸಲಾಗಿದೆ ಎಂದು ರಷ್ಯಾ ಹೇಳಿಕೊಂಡಿದೆ.

ರಷ್ಯಾ ಮಿಲಿಟರಿಯ ಪ್ರಕಾರ, ಉಕ್ರೇನ್‌ನ ಜಪೋರಿಝಿಯಾ (Zaporizhzhia) ಪ್ರದೇಶದ ಓರಿಖಿವ್ (Orikhiv) ನಗರವನ್ನು ಗುರಿಯಾಗಿಸಿಕೊಂಡು FAB-3000 ಗ್ಲೈಡ್ ಬಾಂಬ್ ಎಸೆಯಲಾಗಿದೆ. ದಾಳಿಯ ವಿಡಿಯೋವನ್ನೂ ರಷ್ಯಾ ಬಿಡುಗಡೆ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಸುಮಾರು 3 ಟನ್ ತೂಕದ FAB-3000 ಗ್ಲೈಡ್ ಬಾಂಬ್ ಸುಮಾರು 1.4 ಟನ್ ಸ್ಫೋಟಕಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಈ ಬಾಂಬ್ ಸ್ಫೋಟದಿಂದ ಭಾರೀ ಪ್ರಮಾಣದ ಹಾನಿ ಸಂಭವಿಸಿರುವ ಸಾಧ್ಯತೆ ಇದ್ದರೂ, ಸಾವುನೋವು ಅಥವಾ ಗಾಯಾಳುಗಳ ಕುರಿತು ಅಧಿಕೃತ ಮಾಹಿತಿ ಇನ್ನೂ ಪ್ರಕಟವಾಗಿಲ್ಲ.

ಇನ್ನೊಂದೆಡೆ, ಉಕ್ರೇನ್ ಕೂಡ ರಷ್ಯಾದ ಪ್ರಮುಖ ಮೂಲಸೌಕರ್ಯಗಳು ಹಾಗೂ ಕಪ್ಪು ಸಮುದ್ರ (Black Sea) ಪ್ರದೇಶವನ್ನು ಗುರಿಯಾಗಿಸಿಕೊಂಡು ಡ್ರೋನ್ ಹಾಗೂ ವೈಮಾನಿಕ ದಾಳಿಗಳನ್ನು ಮುಂದುವರಿಸಿದೆ ಎಂದು ವರದಿಗಳು ತಿಳಿಸಿವೆ. ಉಭಯ ದೇಶಗಳ ನಡುವೆ ಪ್ರತಿದಾಳಿ-ಪ್ರತೀಕಾರದ ಕ್ರಮಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯುದ್ಧದ ತೀವ್ರತೆ ಮತ್ತಷ್ಟು ಏರಿಕೆಯಾಗಿದೆ.

ಈ ಬೆಳವಣಿಗೆಗಳು ಯುರೋಪಿನ ಭದ್ರತಾ ಪರಿಸ್ಥಿತಿಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ರಕ್ಷಣಾ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ನಿರಂತರ ಕ್ಷಿಪಣಿ, ಡ್ರೋನ್ ಮತ್ತು ವೈಮಾನಿಕ ದಾಳಿಗಳಿಂದ ಯುದ್ಧ ಪ್ರದೇಶಗಳಲ್ಲಿ ಮಾನವೀಯ ಸಂಕಷ್ಟವೂ ಮತ್ತಷ್ಟು ಗಂಭೀರವಾಗುತ್ತಿದೆ. ಉಭಯ ದೇಶಗಳ ನಡುವಿನ ಸಂಘರ್ಷ ಯಾವಾಗ ಅಂತ್ಯವಾಗಲಿದೆ ಎಂಬ ಪ್ರಶ್ನೆ ಇನ್ನೂ ಉತ್ತರಿಸದೆಯೇ ಉಳಿದಿದೆ.

Continue Reading

ಬೆಂಗಳೂರು

Gruhajyoti Scheme ಪರಿಷ್ಕರಣೆ ಗೊಂದಲ: ಬೀದಿಯಲ್ಲೇ ಫಾರಂ ಭರ್ತಿ ಆರೋಪ

Published

on

ನೆಲಮಂಗಲ: Gruhajyoti Scheme ಯೋಜನೆಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಕೇಳಿಬಂದಿದೆ. ಮನೆ ಮನೆಗೆ ತೆರಳಿ ಮಾಹಿತಿ ಪರಿಶೀಲಿಸಿ ಅರ್ಜಿ ಭರ್ತಿ ಮಾಡಬೇಕಿದ್ದ ಸಿಬ್ಬಂದಿ, ಸಾರ್ವಜನಿಕ ಸ್ಥಳದಲ್ಲೇ ಜನರನ್ನು ಸೇರಿಸಿ ಫಾರಂ ಭರ್ತಿ ಮಾಡಿಸುತ್ತಿದ್ದಾರೆ ಎಂಬ ಆರೋಪ ಸ್ಥಳೀಯರಿಂದ ವ್ಯಕ್ತವಾಗಿದೆ.

ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ವ್ಯಾಪ್ತಿಯ ನಾರಾಯಣಪ್ಪಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ನಿವಾಸಿಗಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಸಿಬ್ಬಂದಿ ಮನೆಗಳಿಗೆ ಭೇಟಿ ನೀಡದೆ, ಬಡಾವಣೆಯ ಜನರನ್ನು ಒಂದೇ ಸ್ಥಳದಲ್ಲಿ ಸೇರಿಸಿ ಗೃಹಜ್ಯೋತಿ ಪರಿಷ್ಕರಣಾ ಅರ್ಜಿಗಳನ್ನು ಭರ್ತಿ ಮಾಡಿಸುತ್ತಿರುವ ದೃಶ್ಯಗಳು ವೈರಲ್ ಆಗಿವೆ.

ಗೃಹಜ್ಯೋತಿ ಪರಿಷ್ಕರಣಾ ಅರ್ಜಿಯಲ್ಲಿ ಮನೆಯ ಮಾಲೀಕರು ಹೊರರಾಜ್ಯದವರೇ, ಐಟಿ ತೆರಿಗೆ ಪಾವತಿದಾರರೇ, ಎಪಿಎಲ್ ಕಾರ್ಡ್ ಹೊಂದಿರುವವರೇ ಅಥವಾ ಬಾಡಿಗೆ ಮನೆಯವರೇ ಎಂಬ ಹಲವು ಮಾಹಿತಿಗಳನ್ನು ಪರಿಶೀಲಿಸಬೇಕಾಗಿದೆ. ಆದರೆ ಈ ಎಲ್ಲ ಮಾಹಿತಿಯನ್ನು ಸ್ಥಳ ಪರಿಶೀಲನೆ ನಡೆಸದೆ ಸಾಮೂಹಿಕವಾಗಿ ಅರ್ಜಿ ಭರ್ತಿ ಮಾಡುತ್ತಿರುವುದು ಯೋಜನೆಯ ಪಾರದರ್ಶಕತೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಸ್ಥಳೀಯರು, ಈ ರೀತಿಯ ಕ್ರಮದಿಂದ ನಿಜವಾದ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗುವ ಸಾಧ್ಯತೆ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಯೋಜನೆಗಳು ಸರಿಯಾದ ಫಲಾನುಭವಿಗಳಿಗೆ ತಲುಪಬೇಕಾದರೆ ನಿಯಮಾನುಸಾರ ಮನೆ ಮನೆ ಸಮೀಕ್ಷೆ ನಡೆಸುವುದು ಅಗತ್ಯ ಎಂದು ಅವರು ಒತ್ತಾಯಿಸಿದ್ದಾರೆ.

ಈ ಆರೋಪಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಇನ್ನೂ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋಗಳ ಹಿನ್ನೆಲೆಯಲ್ಲಿ ಗೃಹಜ್ಯೋತಿ ಪರಿಷ್ಕರಣೆ ಪ್ರಕ್ರಿಯೆಯ ಪಾರದರ್ಶಕತೆ ಕುರಿತು ಸಾರ್ವಜನಿಕರಲ್ಲಿ ಚರ್ಚೆ ಆರಂಭವಾಗಿದೆ.

Continue Reading

ದೇಶ

Good Touch- Bad Touch ನಿಂದ POCSO ತನಕ: ಪಠ್ಯದಲ್ಲಿ ಹೊಸ ವಿಷಯಗಳು

Published

on

ಬೆಂಗಳೂರು: Good Touch- Bad Touch ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಸರ್ಕಾರ ಚಿಂತನೆ ನಡೆಸಿದ್ದು, ಶಾಲಾ ಪಠ್ಯಕ್ರಮದಲ್ಲಿ **ಲೈಂಗಿಕ ಶಿಕ್ಷಣ (Sex Education)**ವನ್ನು ಪ್ರಮುಖ ಭಾಗವಾಗಿ ಸೇರಿಸುವ ಕುರಿತು ಗಂಭೀರ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಾಲ್ಯದಿಂದಲೇ ಸುರಕ್ಷತೆ, ಸಮ್ಮತಿ (Consent) ಹಾಗೂ ಕಾನೂನು ಅರಿವು ನೀಡುವುದು ಅಗತ್ಯ ಎಂದು ಶಿಕ್ಷಣ ಮತ್ತು ಕಾನೂನು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಸ್ತಾವಿತ ಪಠ್ಯಕ್ರಮದ ಉದ್ದೇಶ ಕೇವಲ ದೈಹಿಕ ಬೆಳವಣಿಗೆ ಅಥವಾ ಹದಿಹರೆಯದ ಬದಲಾವಣೆಗಳ ಬಗ್ಗೆ ಮಾಹಿತಿ ನೀಡುವುದಲ್ಲ. ಮಕ್ಕಳಿಗೆ ಗುಡ್ ಟಚ್ ಮತ್ತು ಬ್ಯಾಡ್ ಟಚ್ ನಡುವಿನ ವ್ಯತ್ಯಾಸವನ್ನು ಅರ್ಥಮಾಡಿಕೊಡುವುದು, ಅಸುರಕ್ಷಿತ ಪರಿಸ್ಥಿತಿಗಳನ್ನು ಗುರುತಿಸಿ ಪೋಷಕರು ಅಥವಾ ಶಿಕ್ಷಕರಿಗೆ ಧೈರ್ಯವಾಗಿ ತಿಳಿಸುವ ಆತ್ಮವಿಶ್ವಾಸ ಬೆಳೆಸುವುದು ಇದರ ಪ್ರಮುಖ ಗುರಿಯಾಗಿದೆ.

ಇದರ ಜೊತೆಗೆ, ವೈಯಕ್ತಿಕ ಗಡಿ (Personal Boundaries), ಪರಸ್ಪರ ಗೌರವ ಹಾಗೂ **ಸಮ್ಮತಿ (Consent)**ಯ ಮಹತ್ವವನ್ನು ಬಾಲ್ಯದಲ್ಲೇ ತಿಳಿಸುವುದಕ್ಕೂ ಆದ್ಯತೆ ನೀಡಲಾಗುತ್ತಿದೆ. ಒಬ್ಬರ ವೈಯಕ್ತಿಕ ಸ್ವಾತಂತ್ರ್ಯವನ್ನು ಗೌರವಿಸುವ ಮನೋಭಾವ ಬೆಳೆಸುವುದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಹದಿಹರೆಯದ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ (POCSO – Protection of Children from Sexual Offences Act) ಕುರಿತು ಮೂಲಭೂತ ಮಾಹಿತಿ ನೀಡುವ ಪ್ರಸ್ತಾಪವೂ ಇದೆ. ಮಕ್ಕಳಿಗೆ ತಮ್ಮ ಹಕ್ಕುಗಳು ಹಾಗೂ ಕಾನೂನು ರಕ್ಷಣೆಯ ಬಗ್ಗೆ ಅರಿವು ಮೂಡಿದರೆ, ದೌರ್ಜನ್ಯಗಳ ವಿರುದ್ಧ ಧೈರ್ಯವಾಗಿ ಧ್ವನಿ ಎತ್ತಲು ಸಾಧ್ಯವಾಗುತ್ತದೆ ಎಂದು ಹೇಳಲಾಗಿದೆ.

ಶಿಕ್ಷಣ ಇಲಾಖೆಯ ಮೂಲಗಳ ಪ್ರಕಾರ, ಈ ನಿಟ್ಟಿನಲ್ಲಿ ಶಾಲಾ ಪಠ್ಯಕ್ರಮವನ್ನು ಹಂತ ಹಂತವಾಗಿ ನವೀಕರಿಸುವ ಜೊತೆಗೆ ಶಿಕ್ಷಕರಿಗೆ ವಿಶೇಷ ತರಬೇತಿ ನೀಡುವ ಸಾಧ್ಯತೆಯನ್ನೂ ಪರಿಶೀಲಿಸಲಾಗುತ್ತಿದೆ. ಮಕ್ಕಳಿಗೆ ಸುರಕ್ಷಿತ, ಜಾಗೃತ ಹಾಗೂ ಗೌರವಯುತ ವಾತಾವರಣ ಕಲ್ಪಿಸುವ ದಿಸೆಯಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ ಎಂದು ಶಿಕ್ಷಣ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Continue Reading

Trending