ದೇಶ
ಮನೆಯ ಯಾವೆಲ್ಲ ಭಾಗಗಳಲ್ಲಿ ಕರ್ಪೂರವನ್ನಿಡುವುದು ಶುಭದಾಯಕ ಗೊತ್ತೇ?
ಕರ್ಪೂರದ ಬಳಕೆ ಭಾರತೀಯರಲ್ಲಿ ಸಾಮಾನ್ಯ. ಕರ್ಪೂರದ ಪರಿಮಳ ಆಘ್ರಾಣಿಸಿದರೆ ಸಾಕು ನಮ್ಮಲ್ಲಿ ದೈವಿಕ ಭಾವ, ಭಕ್ತಿ ಒಳಗಿನಿಂದ ಜಾಗೃತವಾಗುತ್ತದೆ. ದೇವರಿಗೆ ಆರತಿ ಮಾಡುವಾಗ ಕರ್ಪೂರದಲ್ಲಿ ಮಾಡುತ್ತೇವೆ. ಇಂತಹ ಕರ್ಪೂರ ನಕಾರಾತ್ಮಕ ಶಕ್ತಿಯನ್ನು ದೂರ ಇರಿಸಿ ಸಕಾರಾತ್ಮಕತೆಯನ್ನು ಪಸರಿಸುತ್ತದೆ ಎಂಬ ನಂಬಿಕೆಯೂ ಇದೆ. ಅಷ್ಟೇ ಅಲ್ಲ, ಕರ್ಪೂರವೆಂದರೆ ಶುಭದಾಯಕ ಎಂಬ ಅಗಾಧ ನಂಬಿಕೆಯೂ ಹಿಂದಿನಿಂದಲೇ ಬೆಳೆದು ಬಂದಿದೆ. ಹೀಗಾಗಿಯೇ ಹಲವರು, ದೇವರ ಕೋಣೆಯಲ್ಲಿ ಅಷ್ಟೇ ಅಲ್ಲ, ಮನೆಯ ಹಲವು ಜಾಗಗಳಲ್ಲಿ ಕರ್ಪೂರವನ್ನು ಇಡುವ ರೂಢಿ ಮಾಡಿಕೊಂಡಿರುತ್ತಾರೆ. ಹಾಗಾದರೆ ಬನ್ನಿ, ಮನೆಯ ಯಾವೆಲ್ಲ ಭಾಗಗಳಲ್ಲಿ ಕರ್ಪೂರವನ್ನು ಇಡುವ ಮೂಲಕ ಸಕಾರಾತ್ಮಕ ಪರಿಣಾಮಗಳನ್ನು ಪಡೆಯಬಹುದು ಎಂಬ ನಂಬಿಕೆಯಿದೆ ಎಂಬುದನ್ನು ನೋಡೋಣ.
ಕರ್ಪೂರವನ್ನಿಡಲು ಪ್ರಶಸ್ತವಾದ ಸ್ಥಳ ಎಂದರೆ ಅದು ಪೂಜೆ ಮಾಡುವ ಕೋಣೆ. ನಿಮ್ಮ ಮನೆಯಲ್ಲೊಂದು ಪೂಜೆ, ಧ್ಯಾನದ ಕೋಣೆ ಇದ್ದರೆ, ಅಲ್ಲಿ ಪುಡಿ ಮಾಡಿದ ಕರ್ಪೂರವನ್ನು ಇಟ್ಟುಕೊಳ್ಳುವುದು ಶುಭದಾಯಕ ಎಂದು ನಂಬಲಾಗುತ್ತದೆ. ನೀವು ಪೂಜೆಯ ಸಂದರ್ಭ ಇದನ್ನು ಹೊತ್ತಿಸಿಕೊಳ್ಳಬಹುದು, ಅಥವಾ ಶುಭ ಸಂದರ್ಭಗಳಲ್ಲಿಯೂ ಕರ್ಪೂರದ ದೀಪ ಹಚ್ಚಬಹುದು.
- ಕೆಲವು ಮಂದಿ ಪುಡಿ ಮಾಡಿದ ಕರ್ಪೂರವನ್ನು ತಮ್ಮ ಕಾರಿನಲ್ಲಿ ಅಥವಾ ತಾವು ಓಡಾಡುವ ವಾಹನದಲ್ಲಿ ಇಟ್ಟುಕೊಳ್ಳಲು ಬಯಸುತ್ತಾರೆ. ಇದರರ್ಥ ಪ್ರಯಾಣ ಶುಭವಾಗಲಿ ಹಾಗೂ ಎಲ್ಲನಕಾರಾತ್ಮಕ ಶಕ್ತಿಯನ್ನು ಕರ್ಪೂರವು ಹೀರಿಕೊಳ್ಳಲಿ ಎಂದು.
- ಕೆಲವರು ತಮ್ಮ ಸ್ನಾನದ ಮನೆ ಅಥವಾ ಬಾತ್ರೂಂನಲ್ಲಿ ಇಟ್ಟುಕೊಳ್ಳಲು ಬಯಸುತ್ತಾರೆ. ಸದಾ ತಾಜಾ ಗಾಳಿ ಸೂಸುತ್ತಿರಲು ಹಾಗೂ ಎಲ್ಲ ಕೆಟ್ಟ ವಾಸನೆಯನ್ನು ಕರ್ಪೂರವು ಹೀರಿಕೊಂಡು ಆ ಕೋಣೆಯನ್ನು ಉತ್ತಮ ಪರಿಮಳದಾಯಕವನ್ನಾಗಿ ಪರಿವರ್ತಿಸಲು ಕರ್ಪೂರದ ಮೊರೆ ಹೋಗುತ್ತಾರೆ.
- ಅಡುಗೆ ಮನೆ ಎಂದರೆ ಮನೆಯೊಂದರ ಹೃದಯ ಭಾಗವಿದ್ದಂತೆ. ನಮಗೆ ನಿತ್ಯವೂ ಬೇಕಾಗುವ ಆಹಾರ ತಯಾರಾಗುವುದೇ ಅಡುಗೆ ಮನೆಯಲ್ಲಿ. ಹಾಗಾಗಿ ಎಲ್ಲ ಕೋಣೆಗಳಿಗಿಂತ ಹೆಚ್ಚು ಮಹತ್ವ ನಾವು ಅಡುಗೆ ಕೋಣೆಗೆ ನೀಡುತ್ತೇವೆ. ಕೆಲವು ಮಂದಿ ಹೀಗಾಗಿ ಕರ್ಪೂರವನ್ನು ಅಡುಗೆ ಕೋಣೆಯಲ್ಲಿಡಲು ಬಯಸುತ್ತಾರೆ. ಯಾಕೆಂದರೆ, ತಾವು ಮಾಡುವ ಅಡುಗೆಯ ಮೂಲಕ ಸಕಾರಾತ್ಮಕ ಪರಿಣಾಮಗಳು ಆಗಲಿ ಎಂಬ ಉದ್ದೇಶ ಇಲ್ಲಿ ಅಡಗಿದೆ. ಆದರೆ ಸೇಫ್ ಆಗಿ ಬೆಂಕಿ ಇರುವೆಡೆಯಿಂದ ದೂರದಲ್ಲಿಡಲು ಮರೆಯಬೇಡಿ.
- ನಿಮ್ಮ ಮನೆಯಲ್ಲಿ ಓದಿಗಾಗಿ ಅಂತಲೇ ಒಂದು ಕೋಣೆ ಇದ್ದರೆ ಅಲ್ಲಿಯೂ ಇಡಬಹುದು. ಒಳ್ಳೆಯ ವಿದ್ಯೆ ತಲೆಗೆ ಹತ್ತಲು, ಏಕಾಗ್ರತೆಗೆ ಹಾಗೂ ಶ್ರದ್ಧೆಗಾಗಿ ಕರ್ಪೂರವನ್ನು ಓದಿನ ಕೋಣೆಯಲ್ಲೂ ಇಡಬಹುದು.
- ಮಕ್ಕಳ ಕೋಣೆಯಲ್ಲಿಯೂ ಇಡುವುದು ಒಳ್ಳೆಯದನ್ನೇ ತರುತ್ತದೆ. ಮಕ್ಕಳ ಮೇಲಾಗುವ ನಕಾರಾತ್ಮಕ ಪ್ರಭಾವಗಳನ್ನು ಇದು ದೂರ ಇರಿಸಿ ಮಕ್ಕಳನ್ನು ಆರೋಗ್ಯವಾಗಿರಿಸುತ್ತದೆ ಎಂಬ ನಂಬಿಕೆಯಿದೆ.
- ಮನೆಯ ದ್ವಾರದಲ್ಲಿಯೂ ಕರ್ಪೂರ ಇಡುವ ಕ್ರಮವಿದೆ. ಮನೆಗೆ ಕೆಟ್ಟ ಶಕ್ತಿಗಳು ಪ್ರವೇಶಿಸದೆ, ಮನೆಯಲ್ಲಿ ಒಳ್ಳೆಯ ಸಕಾರಾತ್ಮಕ ಬೆಳವಣಿಗೆ ಆಗುತ್ತಿರಲಿ ಎಂಬುದು ಇದರ ಆಶಯ.
- ಬಾಲ್ಕನಿಯಲ್ಲೇ ಪುಟಾಣಿ ಗಾರ್ಡನ್ ಇದ್ದರೆ, ಅಥವಾ ಮನೆಯೊಳಗೆ ಪಾಟ್ಗಳಲ್ಲಿ ಗಿಡಗಳನ್ನಿಟ್ಟಿದ್ದರೆ, ಅವುಗಳ ಬೇರಿನ ಸಮೀಪವೂ ಈ ಕರ್ಪೂರವನ್ನಿಡಬಹುದು. ಇದು ಶುಭವಷ್ಟೇ ಅಲ್ಲ, ಗಿಡಗಳಿಗೆ ನೈಸರ್ಗಿಕ ಫಲವತ್ತತೆಯನ್ನೂ ನೀಡುತ್ತದೆ.
ರಾಜ್ಯ
Mysuru Dasara ಗಜಪಡೆ ಅರಮನೆಗೆ ಎಂಟ್ರಿ; ಜನಸಂದಣಿ ಕಂಡು ಶ್ರೀರಾಮ ಆನೆ ಗಾಬರಿ, ಬಳಿಕ ಏನಾಯ್ತು?
ಮೈಸೂರು: ವಿಶ್ವವಿಖ್ಯಾತ Mysuru Dasara 2026 ಹಿನ್ನೆಲೆಯಲ್ಲಿ ದಸರಾ ಗಜಪಡೆಗಳಿಗೆ ಮೈಸೂರು ಅರಣ್ಯ ಭವನದಲ್ಲಿ ಇಂದು ಬೆಳಗ್ಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಲಾಯಿತು. ಒಟ್ಟು 9 ದಸರಾ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಗಜಪಡೆಗಳು ಮೈಸೂರು ಅರಮನೆಯತ್ತ ಪ್ರಯಾಣ ಬೆಳೆಸಿದವು.
ಅರಮನೆ ದ್ವಾರಕ್ಕೆ ಆಗಮಿಸಿದ ದಸರಾ ಗಜಪಡೆಗಳನ್ನು ಮೈಸೂರು ಜಿಲ್ಲಾಡಳಿತ ವತಿಯಿಂದ ಸಂಪ್ರದಾಯಬದ್ಧವಾಗಿ ಸ್ವಾಗತಿಸಲಾಯಿತು. ಶುಭ ಲಗ್ನದಲ್ಲಿ ಆನೆಗಳು ಅರಮನೆ ಪ್ರವೇಶಿಸಬೇಕಿದ್ದ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಸಾಂಪ್ರದಾಯಿಕ ಪೂಜೆ ಹಾಗೂ ಸ್ವಾಗತದ ಬಳಿಕ ದಸರಾ ಆನೆಗಳು ಅರಮನೆ ಆವರಣ ಪ್ರವೇಶಿಸಿದವು.
ಅರಮನೆ ಪ್ರವೇಶದ ವೇಳೆ ಶ್ರೀರಾಮ ಆನೆಗೆ ಗಾಬರಿ
ಇದೇ ವೇಳೆ ಮೈಸೂರು ಅಂಬಾವಿಲಾಸ ಅರಮನೆ ಪ್ರವೇಶಿಸುವ ಸಂದರ್ಭದಲ್ಲಿ ಶ್ರೀರಾಮ ಆನೆ ಏಕಾಏಕಿ ಗಾಬರಿಗೊಂಡ ಘಟನೆ ನಡೆದಿದೆ. ಅರಮನೆ ಮುಂಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದನ್ನು ಕಂಡು ಆನೆ ಕೆಲಕಾಲ ಬೆಚ್ಚಿಬಿದ್ದು ಹಿಂದಕ್ಕೆ ಸರಿಯಲು ಯತ್ನಿಸಿತು.
ಅರಮನೆ ದ್ವಾರದ ಬಳಿ ಹಾಕಲಾಗಿದ್ದ ಬ್ಯಾರಿಕೇಡ್ಗಳು, ಜನರ ಚಲನವಲನ ಹಾಗೂ ಸುತ್ತಮುತ್ತಲಿನ ಗದ್ದಲದಿಂದ ಶ್ರೀರಾಮ ಆನೆ ಮತ್ತಷ್ಟು ಆತಂಕಗೊಂಡಿತು. ಇದರ ನಡುವೆ ಕೇಳಿಬಂದ ನಾದಸ್ವರದ ಸದ್ದಿಗೂ ಆನೆ ಪ್ರತಿಕ್ರಿಯಿಸಿ, ಅರಮನೆ ಆವರಣ ಪ್ರವೇಶಿಸಲು ಹಿಂದೇಟು ಹಾಕಿತು.
ಶ್ರೀರಾಮ ಆನೆ ಗಾಬರಿಗೊಂಡಿದ್ದರಿಂದ ಸ್ಥಳದಲ್ಲಿದ್ದ ಜನರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಪರಿಸ್ಥಿತಿಯನ್ನು ಗಮನಿಸಿದ ಮಾವುತರು ಹಾಗೂ ಕಾವಾಡಿಗರು ತಕ್ಷಣವೇ ಆನೆಯನ್ನು ನಿಯಂತ್ರಣಕ್ಕೆ ತರಲು ಮುಂದಾದರು.
ಮಾವುತರು, ಕಾವಾಡಿಗರಿಂದ ಆನೆ ಹತೋಟಿ
ಮಾವುತರು ಮತ್ತು ಕಾವಾಡಿಗರು ಆನೆಯನ್ನು ಸಮಾಧಾನಪಡಿಸಿ ಹತೋಟಿಗೆ ತಂದ ಬಳಿಕ, ಯಾವುದೇ ತೊಂದರೆಯಾಗದಂತೆ ಸುರಕ್ಷಿತವಾಗಿ ಅರಮನೆ ಆವರಣದೊಳಗೆ ಕರೆದುಕೊಂಡು ಹೋದರು. ಇದರಿಂದ ಸ್ಥಳದಲ್ಲಿದ್ದವರು ನಿಟ್ಟುಸಿರು ಬಿಟ್ಟರು.
ಮೈಸೂರು ದಸರಾ ಜಂಬೂ ಸವಾರಿಯ ಪ್ರಮುಖ ಆಕರ್ಷಣೆಯಾಗಿರುವ ಗಜಪಡೆಯ ಆಗಮನದೊಂದಿಗೆ ಅರಮನೆ ಆವರಣದಲ್ಲಿ ದಸರಾ ಸಂಭ್ರಮ ಮತ್ತಷ್ಟು ಹೆಚ್ಚಾಗಿದೆ. ಆನೆಗಳ ಆರೋಗ್ಯ, ಸುರಕ್ಷತೆ ಮತ್ತು ತರಬೇತಿಗೆ ಅರಣ್ಯ ಇಲಾಖೆ ಹಾಗೂ ಮಾವುತರು ವಿಶೇಷ ಗಮನ ಹರಿಸುತ್ತಿದ್ದಾರೆ.
ರಾಜ್ಯ
KRS ಡ್ಯಾಂಗೆ ಭಾರೀ ಶಾಕ್! ಒಳಹರಿವು ದಿಢೀರ್ ಕುಸಿತ; ಸದ್ಯದ ನೀರಿನ ಮಟ್ಟ ಎಷ್ಟು ಗೊತ್ತಾ?
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಪರಿಣಾಮ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ (KRS) ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ದಿಢೀರ್ ಇಳಿಕೆಯಾಗಿದೆ. ಕೊಡಗು ಸೇರಿದಂತೆ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಿರುವುದರಿಂದ ಜಲಾಶಯದ ಒಳಹರಿವು ಗಣನೀಯವಾಗಿ ಕುಸಿದಿದೆ.
ಕಳೆದ ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿತ್ತು. ಇದರಿಂದ ಜಲಾಶಯದ ನೀರಿನ ಮಟ್ಟವೂ ವೇಗವಾಗಿ ಏರಿಕೆಯಾಗಿತ್ತು.
ಬುಧವಾರ ಬೆಳಿಗ್ಗೆ 9,438 ಕ್ಯೂಸೆಕ್ ಇದ್ದ ಕೆಆರ್ಎಸ್ ಜಲಾಶಯದ ಒಳಹರಿವು ಗುರುವಾರ ವೇಳೆಗೆ ಬರೋಬ್ಬರಿ 17,427 ಕ್ಯೂಸೆಕ್ಗೆ ಏರಿಕೆಯಾಗಿತ್ತು. ಆದರೆ ಇದೀಗ ಕಾವೇರಿ ಕೊಳ್ಳದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರದ ವೇಳೆಗೆ ಒಳಹರಿವು 10,028 ಕ್ಯೂಸೆಕ್ಗೆ ಕುಸಿದಿದೆ.
ಒಂದೇ ದಿನದಲ್ಲಿ ಒಳಹರಿವಿನಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿರುವುದು ಜಲಾಶಯದ ನೀರಿನ ಲಭ್ಯತೆ ಕುರಿತು ಕುತೂಹಲ ಮೂಡಿಸಿದೆ. ಮುಂದಿನ ದಿನಗಳಲ್ಲಿ ಕೊಡಗು ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಉತ್ತಮ ಮಳೆಯಾಗುತ್ತದೆಯೇ ಎಂಬುದರ ಮೇಲೆ ಕೆಆರ್ಎಸ್ಗೆ ಒಳಹರಿವಿನ ಪ್ರಮಾಣ ಅವಲಂಬಿತವಾಗಿರಲಿದೆ.
110 ಅಡಿ ದಾಟಿದ KRS ನೀರಿನ ಮಟ್ಟ
ಒಳಹರಿವು ಕಡಿಮೆಯಾಗಿದ್ದರೂ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 110.20 ಅಡಿಗೆ ತಲುಪಿದೆ. ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯದ ಮಟ್ಟ 124.80 ಅಡಿಯಾಗಿದೆ.
ಸದ್ಯ ಜಲಾಶಯದಲ್ಲಿ 31.923 ಟಿಎಂಸಿ ನೀರು ಸಂಗ್ರಹವಾಗಿದೆ. 110 ಅಡಿಗೂ ಹೆಚ್ಚು ನೀರು ಸಂಗ್ರಹವಾಗಿರುವುದು ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ಹಾಗೂ ಮಂಡ್ಯ, ಮೈಸೂರು ಸೇರಿದಂತೆ ಹಲವು ಪ್ರದೇಶಗಳ ಕುಡಿಯುವ ನೀರಿನ ಅಗತ್ಯಗಳಿಗೆ ಸದ್ಯಕ್ಕೆ ಆಶಾದಾಯಕ ಬೆಳವಣಿಗೆಯಾಗಿದೆ.
ಕಳೆದ ಕೆಲವು ದಿನಗಳಲ್ಲಿ ಹೆಚ್ಚಾಗಿದ್ದ ಒಳಹರಿವು ಇದೀಗ ಇಳಿಕೆಯಾಗಿರುವುದರಿಂದ ಜಲಾಶಯದ ನೀರಿನ ಮಟ್ಟ ಮತ್ತು ಒಳಹರಿವಿನ ಮೇಲೆ ರೈತರು ಹಾಗೂ ಅಧಿಕಾರಿಗಳು ನಿಗಾ ಇರಿಸಿದ್ದಾರೆ. ಮುಂದಿನ ಮಳೆಯ ಪ್ರಮಾಣದ ಆಧಾರದ ಮೇಲೆ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಳಿತವಾಗುವ ಸಾಧ್ಯತೆಯಿದೆ.
ದೇಶ
KPSC Recruitment Scam: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಗಂಭೀರ ಆರೋಪ; ನೇಮಕಾತಿ ದಂಧೆ ಬಯಲು ಎಂದ ಕೇಂದ್ರ ಸಚಿವ
ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ KPSC ದಲ್ಲಿ ಅಕ್ರಮ ಹಾಗೂ ನೇಮಕಾತಿ ದಂಧೆ ನಡೆಯುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. KPSC ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ ಅವರು, ಸರ್ಕಾರದ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದಾರೆ.
KPSC ಸಂಸ್ಥೆಯ ಮೇಲಿನ ಜನರ ವಿಶ್ವಾಸ ಕಡಿಮೆಯಾಗಿದೆ ಎಂದು ಆರೋಪಿಸಿದ ಎಚ್ಡಿಕೆ, ಉದ್ಯೋಗಾಕಾಂಕ್ಷಿಗಳಿಗೆ ಆಯೋಗದ ಬಗ್ಗೆ ಯಾವುದೇ ಭರವಸೆ ಉಳಿದಿಲ್ಲ ಎಂದು ಹೇಳಿದ್ದಾರೆ. KPSC ಸದಸ್ಯರ ನೇಮಕಾತಿಯಲ್ಲಿಯೇ ದೊಡ್ಡ ಮಟ್ಟದ ದಂಧೆ ನಡೆಯುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
KPSC ಸದಸ್ಯರ ನೇಮಕಕ್ಕೂ ರೇಟ್ ಫಿಕ್ಸ್?
KPSC ಸದಸ್ಯರನ್ನು ನೇಮಕ ಮಾಡುವಾಗ ನಿರ್ದಿಷ್ಟ ದರ ನಿಗದಿಪಡಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಜಾತಿಯ ಹೆಸರಿನಲ್ಲಿ ಹಾಗೂ ಹಣದ ಆಧಾರದ ಮೇಲೆ ಸದಸ್ಯರ ನೇಮಕಾತಿ ನಡೆಯುತ್ತಿದೆ ಎಂದು ಅವರು ದೂರಿದ್ದಾರೆ.
KPSC ಮೇಲಿನ ಜನರ ನಂಬಿಕೆ ಕಳೆದುಹೋಗಲು ರಾಜ್ಯ ಸರ್ಕಾರವೇ ಕಾರಣ ಎಂದು ಟೀಕಿಸಿರುವ ಅವರು, ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮಗಳ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
73 ಸಾವಿರ ಉದ್ಯೋಗ ಭರವಸೆ ಏನಾಯಿತು?
ರಾಜ್ಯದ ನಾಲ್ಕು ಇಲಾಖೆಗಳ ನೇಮಕಾತಿ ಪ್ರಕ್ರಿಯೆಯನ್ನು ಉಲ್ಲೇಖಿಸಿದ ಎಚ್ಡಿಕೆ, ಕಾಂಗ್ರೆಸ್ ಸರ್ಕಾರ ನೀಡಿದ್ದ 73 ಸಾವಿರ ಉದ್ಯೋಗಗಳ ಭರವಸೆ ಏನಾಯಿತು ಎಂದು ಪ್ರಶ್ನಿಸಿದ್ದಾರೆ.
ಭ್ರಷ್ಟಾಚಾರಕ್ಕೆ ಅವಕಾಶವೇ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳುತ್ತಾರೆ. ಆದರೆ ನೇಮಕಾತಿ ಸೇರಿದಂತೆ ವಿವಿಧ ವಿಚಾರಗಳಲ್ಲಿ ಹೊಸ ತಿದ್ದುಪಡಿಗಳ ಹೆಸರಿನಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸರ್ಕಾರ ಗಮನಿಸಬೇಕು ಎಂದು ಅವರು ಹೇಳಿದ್ದಾರೆ.
ಎಂಜಿನಿಯರ್ ನೇಮಕಾತಿಯಲ್ಲೂ ಅಕ್ರಮ ಆರೋಪ
ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಾಲ್ವರು ಕಾರ್ಯನಿರ್ವಾಹಕ ಎಂಜಿನಿಯರ್ಗಳ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕುಮಾರಸ್ವಾಮಿ, ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ.
ಈ ಇಲಾಖೆಯ ಸಚಿವರಾಗಿ ಹಿಂದೆ ಕಾರ್ಯನಿರ್ವಹಿಸಿದ್ದ ಪ್ರಿಯಾಂಕ್ ಖರ್ಗೆ ಅವರಿಗೆ ನೇಮಕಾತಿಯಲ್ಲಿನ ಅಕ್ರಮದ ಬಗ್ಗೆ ಮಾಹಿತಿ ಇದ್ದರೂ ನೇಮಕಾತಿ ಮಾಡಲಾಗಿದೆ ಎಂದು ಎಚ್ಡಿಕೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿ ಉದ್ಯೋಗ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿರಬೇಕು. ಉದ್ಯೋಗಕ್ಕಾಗಿ ಕಾಯುತ್ತಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯದೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು ಎಂದು ಅವರು ಹೇಳಿದ್ದಾರೆ.
-
ಬೆಂಗಳೂರು22 ಗಂಟೆಗಳು agoLiver ಚಿಕಿತ್ಸೆಗೆ ಗುಡ್ ನ್ಯೂಸ್: ಹಲವು ತಜ್ಞರು ಒಂದೇ ಕಡೆ, ರೋಗಿಗಳಿಗೆ ಸುಲಭ ಚಿಕಿತ್ಸೆ
-
ಬೆಂಗಳೂರು3 ಗಂಟೆಗಳು agoMake My Propertyz ಟೈಟಲ್ ಸ್ಪಾನ್ಸರ್; ಮೋಹನ್, ಆಂಜನಪ್ಪ, ಹರೀಶ್, ಸಂತೋಷ್, ಗೌರೀಶ್, Hosa Suddi, ಶಿವಕುಮಾರ್ರಿಂದ ಕ್ರೀಡೆಗೆ ಬೆಂಬಲ!
-
ದೇಶ2 ಗಂಟೆಗಳು agoNepal Flood Horror: ಮಹಿಳೆಯ ಮೃತದೇಹದಿಂದ ಆಭರಣ ಕಳವು; ವೈರಲ್ ವಿಡಿಯೋ ಆಧರಿಸಿ ಇಬ್ಬರ ಬಂಧನ
-
ದೇಶ5 ಗಂಟೆಗಳು agoPM Narendra Modi Foreign Visit: ಮೋದಿ 4 ದಿನಗಳ ವಿದೇಶ ಪ್ರವಾಸ, ಎಸ್ಸಿಒ ಶೃಂಗಸಭೆಯಲ್ಲಿ ಭಾಗಿ
-
ದೇಶ2 ಗಂಟೆಗಳು agoKPSC Recruitment Scam: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಗಂಭೀರ ಆರೋಪ; ನೇಮಕಾತಿ ದಂಧೆ ಬಯಲು ಎಂದ ಕೇಂದ್ರ ಸಚಿವ
-
ದೇಶ5 ಗಂಟೆಗಳು agoNepal ಭೀಕರ ಪ್ರವಾಹ: ಸಾವಿನ ಸಂಖ್ಯೆ 469ಕ್ಕೆ ಏರಿಕೆ, ಸಾವಿರಕ್ಕೂ ಹೆಚ್ಚು ಮಂದಿ ನಾಪತ್ತೆ!
-
ಸಿನಿಮಾ4 ಗಂಟೆಗಳು ago‘Toxic’ ವಿರುದ್ಧ ಮಾತನಾಡಿದವರಿಗೆ ಕಾನೂನು ನೋಟಿಸ್? ಚಿತ್ರತಂಡದ ನಡೆಗೆ ಕಾರಣವೇನು?
-
ದೇಶ4 ಗಂಟೆಗಳು agoMantralaya ದಲ್ಲಿ ಭಕ್ತಿಯ ವೈಭವ: ರಾಯರ ಆರಾಧನೆಗೆ ಚಾಲನೆ, ಆಗಸ್ಟ್ 31ಕ್ಕೆ ಮಹಾರಥೋತ್ಸವ
