ಅಪರಾಧ
31–45 ವರ್ಷದವರ ಸುಳ್ಳು ದಾಖಲೆ ಜಾಲ – ಯಾದಗಿರಿ ಯೋಜನೆಗಳಿಗೆ ಭಾರೀ ಹಾನಿ
ಯಾದಗಿರಿ: ರಾಜ್ಯದಲ್ಲಿ ಸರ್ಕಾರದ ಯೋಜನೆಗಳನ್ನು ದುರುಪಯೋಗ ಮಾಡುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಯಾದಗಿರಿ ಜಿಲ್ಲೆಯಲ್ಲಿ ಅಚ್ಚರಿ ಘಟನೆ ನಡೆದಿದೆ. 31–45 ವರ್ಷದೊಳಗಿನ ಅನರ್ಹರು ಸುಳ್ಳು ದಾಖಲೆಗಳ ಮೂಲಕ “ಸಂಧ್ಯಾ ಸುರಕ್ಷಾ ಯೋಜನೆ”ಡಿ ವೃದ್ಧಾಪ್ಯ, ವಿಧವಾ ಪಿಂಚಣಿ ಪಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.
ವಯಸ್ಸು ತಕ್ಕವರಲ್ಲದವರಿಂದ ಕೂಡ ಸರ್ಕಾರಿ ಸೌಲಭ್ಯ ಪಡೆಯುತ್ತಿರುವುದರಿಂದ ಪ್ರತಿ ತಿಂಗಳೂ ಸರ್ಕಾರಕ್ಕೆ ಕೋಟ್ಯಂತರ ನಷ್ಟ ಉಂಟಾಗಿದೆ. ಸರ್ಪುರ, ಶಹಾಪುರ, ವಡಗೇರಾ, ಹುಣಸಗಿ ಹಾಗೂ ಗುರುಮಠಕಲ್ ತಾಲೂಕುಗಳಲ್ಲಿ ಇಂತಹ ಸಾವಿರಾರು ಪ್ರಕರಣಗಳು ಬೆಳಕಿಗೆ ಬಂದಿವೆ. ಯಾದಗಿರಿ ಜಿಲ್ಲೆಯಿಂದಲೇ ಪ್ರತಿ ತಿಂಗಳು ಸುಮಾರು 12 ಕೋಟಿ ರೂ. ಸರ್ಕಾರದ ಬೊಕ್ಕಸಿಗೆ ಕನ್ನ ಹಾಕಲಾಗುತ್ತಿದೆ ಎಂದು ಅಂದಾಜಿಸಲಾಗಿದೆ.
ಪ್ರತಿ ವ್ಯಕ್ತಿಗೆ ವೃದ್ಧಾಪ್ಯ ಪಿಂಚಣಿ 1200 ರೂ. ಮಾತ್ರವಿದ್ದು, ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ 10 ಸಾವರಿಗಳಿಗೆ ವೃದ್ಧಾಪ್ಯ-ವಿಧವಾ ಮತ್ತು 5000ಕ್ಕೂ ಅಧಿಕ ಅಂಗವಿಕಲರ ಪಿಂಚಣಿಗಳನ್ನು ಮಂಜೂರಿಸಲಾಗುತ್ತಿದೆ. ಈ ಪ್ರಕರಣದ ಹಿಂದೆ ಸಂಘಟಿತ ಜಾಲ ಕಾರ್ಯ ನಿರ್ವಹಿಸುತ್ತಿದ್ದು, ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. ಸುರಪುರ ನಗರಸಭೆ ಸದಸ್ಯ ಸೋಮನಾಥ್ ಡೋಣ್ಣೇಗೇರಾ ಈ ಕುರಿತು ಎಸ್.ಪಿ. ಪೃಥ್ವಿಕ್ ಶಂಕರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಅಪರಾಧ
Renukaswamy Murder Case ನಲ್ಲಿ ಮಹತ್ವದ ಬೆಳವಣಿಗೆ: ಮಾಫಿ ಸಾಕ್ಷಿಯಾದ ಪ್ರದೋಷ್, ಮುಂದೆ ಏನಾಗಲಿದೆ?
ಬೆಂಗಳೂರು: ಚಿತ್ರದುರ್ಗ ಮೂಲದ Renukaswamy Murder Case ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಮತ್ತೊಂದು ಹಿನ್ನಡೆಯಾಗಿದೆ. ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಷ್ ರಾವ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು ಬೆಂಗಳೂರಿನ ನ್ಯಾಯಾಲಯ ಪುರಸ್ಕರಿಸಿದ್ದು, ಇದೀಗ ಅವರು ಪ್ರಕರಣದಲ್ಲಿ ಸರ್ಕಾರದ ಪರ ಸಾಕ್ಷಿ ನುಡಿಯಲು ಅವಕಾಶ ದೊರೆತಿದೆ.
ನಗರದ 59ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರದೋಷ್ ರಾವ್ ಸಲ್ಲಿಸಿದ್ದ ಅರ್ಜಿಯ ಕುರಿತು ಸುದೀರ್ಘ ವಿಚಾರಣೆ ನಡೆದಿತ್ತು. ಎರಡೂ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶೆ ಸುಜಾತ ಎಂ. ಸಮಭ್ರಾಣಿ ಅವರು ಮಂಗಳವಾರ ಮಹತ್ವದ ಆದೇಶ ಹೊರಡಿಸಿದ್ದಾರೆ.
ದರ್ಶನ್ ಪರ ವಕೀಲರ ಆಕ್ಷೇಪ ತಿರಸ್ಕಾರ
ಪ್ರದೋಷ್ ರಾವ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಬಾರದು ಎಂದು ನಟ ದರ್ಶನ್ ಪರ ವಕೀಲರು ನ್ಯಾಯಾಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಅವರ ಅರ್ಜಿಯನ್ನು ತಿರಸ್ಕರಿಸುವಂತೆ ಕೋರ್ಟ್ಗೆ ಮನವಿ ಮಾಡಲಾಗಿತ್ತು.
ಆದರೆ, ದರ್ಶನ್ ಪರ ವಕೀಲರು ಸಲ್ಲಿಸಿದ್ದ ಆಕ್ಷೇಪಣೆಗಳನ್ನು ನ್ಯಾಯಾಲಯ ಪರಿಗಣಿಸದೆ, ಪ್ರದೋಷ್ ರಾವ್ ಅವರ ಮಾಫಿ ಸಾಕ್ಷಿ ಅರ್ಜಿಯನ್ನು ಅಂಗೀಕರಿಸಿದೆ. ಹೀಗಾಗಿ ಪ್ರಕರಣದ ತನಿಖೆ ಹಾಗೂ ಮುಂದಿನ ವಿಚಾರಣೆಯಲ್ಲಿ ಪ್ರದೋಷ್ ನೀಡಲಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಪ್ರಕರಣಕ್ಕೆ ಸಿಗಲಿದೆಯೇ ಮಹತ್ವದ ತಿರುವು?
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಪ್ರದೋಷ್ ರಾವ್ ಇದೀಗ ಸರ್ಕಾರದ ಪರ ಮಾಫಿ ಸಾಕ್ಷಿಯಾಗಿ ನ್ಯಾಯಾಲಯದ ಮುಂದೆ ಹೇಳಿಕೆ ನೀಡಲಿದ್ದಾರೆ. ಪ್ರಕರಣದ ಘಟನೆಗಳು, ಆರೋಪಿಗಳ ಪಾತ್ರ ಹಾಗೂ ಕೃತ್ಯದ ಬಳಿಕ ನಡೆದ ಬೆಳವಣಿಗೆಗಳ ಕುರಿತು ಅವರು ನೀಡಬಹುದಾದ ಮಾಹಿತಿ ತನಿಖೆಗೆ ಪ್ರಮುಖವಾಗುವ ಸಾಧ್ಯತೆಯಿದೆ.
ವಿಶೇಷವಾಗಿ ಕೊಲೆ ನಡೆದ ಸ್ಥಳದಲ್ಲಿನ ಘಟನೆಗಳು ಹಾಗೂ ಬಳಿಕ ಸಾಕ್ಷ್ಯ ನಾಶಕ್ಕೆ ನಡೆದಿತ್ತೆನ್ನಲಾದ ಪ್ರಯತ್ನಗಳ ಕುರಿತು ಪ್ರದೋಷ್ ನೀಡುವ ಹೇಳಿಕೆ ಪ್ರಕರಣದ ದಿಕ್ಕಿನ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
ಮಾಫಿ ಸಾಕ್ಷಿಯಾಗಲು ನ್ಯಾಯಾಲಯ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಂದಿನ ಹಂತದಲ್ಲಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ನಡೆಯಲಿದೆ. ಅವರ ಹೇಳಿಕೆಯಲ್ಲಿ ಯಾವೆಲ್ಲ ಪ್ರಮುಖ ಅಂಶಗಳು ಹೊರಬರಲಿವೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.
ಅಪರಾಧ
Mandya ಜೈಲಲ್ಲೂ ‘ರಾಜಾತಿಥ್ಯ’ ಆರೋಪ: ವಿಚಾರಣಾಧೀನ ಖೈದಿಗೆ ವಿಶೇಷ ವಾರ್ಡ್, ಗೆಳತಿಗೂ ಪ್ರವೇಶ!
ಮಂಡ್ಯ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಖೈದಿಗಳಿಗೆ ವಿಶೇಷ ಸೌಲಭ್ಯ ನೀಡಿದ ಆರೋಪದ ಬೆನ್ನಲ್ಲೇ ಇದೀಗ Mandya ಜಿಲ್ಲಾ ಕಾರಾಗೃಹದಲ್ಲೂ ಇದೇ ರೀತಿಯ ಆರೋಪ ಕೇಳಿಬಂದಿದೆ. ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲದ ವಿಚಾರಣಾಧೀನ ಖೈದಿಯೊಬ್ಬನನ್ನು ಮಿಮ್ಸ್ ಆಸ್ಪತ್ರೆಯ ವಿಶೇಷ ವಾರ್ಡ್ನಲ್ಲಿ ಇರಿಸಿರುವುದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (KSLSA) ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (DLSA) ಅಧಿಕಾರಿಗಳ ದಿಢೀರ್ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ.
ಲೋಕಾಯುಕ್ತ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಹಮದ್ ಹುಸೇನ್ ಎಂಬ ವಿಚಾರಣಾಧೀನ ಖೈದಿ ಮಿಮ್ಸ್ ಆಸ್ಪತ್ರೆಯ ವಿಶೇಷ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ, ಆತನಿಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ ಎಂದು ಆಸ್ಪತ್ರೆ ಅಧೀಕ್ಷಕರೇ ಮಾಹಿತಿ ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಇದರ ನಡುವೆ ಮತ್ತೊಂದು ಅಚ್ಚರಿಯ ವಿಚಾರವೂ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಖೈದಿ ಇದ್ದ ವಿಶೇಷ ವಾರ್ಡ್ನಲ್ಲಿ ಮಹಿಳೆಯೊಬ್ಬರು ಪತ್ತೆಯಾಗಿದ್ದು, ವಿಚಾರಣೆ ವೇಳೆ ಆಕೆ ಖೈದಿಯ ಗೆಳತಿ ಎಂದು ತಿಳಿದುಬಂದಿದೆ ಎನ್ನಲಾಗಿದೆ. ನ್ಯಾಯಾಲಯದ ಅನುಮತಿ ಪಡೆಯದೆ ಆಕೆಗೆ ಖೈದಿಯನ್ನು ಭೇಟಿಯಾಗಲು ಅವಕಾಶ ನೀಡಲಾಗಿತ್ತೇ ಎಂಬ ಪ್ರಶ್ನೆ ಇದೀಗ ಎದುರಾಗಿದೆ.
ಲೋಕಾಯುಕ್ತ ಪ್ರಕರಣದಲ್ಲಿ ಜೈಲು ಸೇರಿದ್ದ ಖೈದಿ
ಶ್ರೀರಂಗಪಟ್ಟಣ ತಾಲೂಕು ಭೂ ದಾಖಲೆಗಳ ಕಚೇರಿಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಮಹಮದ್ ಹುಸೇನ್ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಜುಲೈ 2ರಂದು ದಾಳಿ ನಡೆಸಿದ್ದ ಅಧಿಕಾರಿಗಳು ಸರ್ಕಾರಿ ತಂತ್ರಾಂಶದಲ್ಲಿ ದಾಖಲೆಗಳ ಡಿಜಿಟಲೀಕರಣ, ಆಕಾರ್ಬಂಧ್ ದಾಖಲೆ ಹಾಗೂ ನಕಲಿ ದಾಖಲೆ ಸೃಷ್ಟಿಗೆ ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿದ್ದರು. ಜುಲೈ 3ರಂದು ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
ಆರೋಪಿಯ ವಿರುದ್ಧ ಬಿಎನ್ಎಸ್ನ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಜೈಲು ವೈದ್ಯಾಧಿಕಾರಿಯ ಸಲಹೆಯ ಮೇರೆಗೆ ಮಹಮದ್ ಹುಸೇನ್ ಅವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
ಗಂಭೀರ ಆರೋಗ್ಯ ಸಮಸ್ಯೆ ಇಲ್ಲ ಎಂದ ಆಸ್ಪತ್ರೆ ಅಧೀಕ್ಷಕ
ಆದರೆ ಮಿಮ್ಸ್ ಆಸ್ಪತ್ರೆ ಅಧೀಕ್ಷಕ ಡಾ. ಶಿವಕುಮಾರ್ ಅವರು ಖೈದಿಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ, ಆತನನ್ನು ಒತ್ತಾಯಪೂರ್ವಕವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿಯನ್ನೂ ನೀಡಿದ್ದಾರೆ.
ಸೋಮವಾರ ಸಂಜೆ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ KSLSA ಹಾಗೂ DLSA ಅಧಿಕಾರಿಗಳ ತಂಡ ಆಸ್ಪತ್ರೆ ಮತ್ತು ಜೈಲಿನಲ್ಲಿನ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿತು. ವಿಶೇಷ ವಾರ್ಡ್ನಲ್ಲಿ ಖೈದಿಯನ್ನು ಇರಿಸಿರುವುದು, ಮಹಿಳೆಗೆ ಪ್ರವೇಶ ನೀಡಿರುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ.
ಜಿಲ್ಲಾ ಸತ್ರ ನ್ಯಾಯಾಧೀಶ ಹಾಗೂ DLSA ಅಧ್ಯಕ್ಷ ಚಂದ್ರಶೇಖರ ಸಿ., KSLSA ಸದಸ್ಯ ಕಾರ್ಯದರ್ಶಿ ಶಶಿಧರ ಶೆಟ್ಟಿ ಸೇರಿದಂತೆ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ.
ಖೈದಿಗೆ ವಿಶೇಷ ವಾರ್ಡ್ ಸೌಲಭ್ಯ ನೀಡಲು ಹಾಗೂ ಮಹಿಳೆಗೆ ಪ್ರವೇಶ ಕಲ್ಪಿಸಲು ಅಗತ್ಯ ಅನುಮತಿ ಪಡೆಯಲಾಗಿತ್ತೇ ಎಂಬುದು ಇದೀಗ ಪ್ರಮುಖ ಪ್ರಶ್ನೆಯಾಗಿದೆ. ಪರಿಶೀಲನಾ ವರದಿ ಮತ್ತು ಅಧಿಕಾರಿಗಳಿಂದ ಪಡೆಯುವ ಮಾಹಿತಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಅಪರಾಧ
3,400 ಮುತ್ತಿನಿಂದ ಕಾರು ಅಲಂಕಾರ; 55 ಲಕ್ಷ ವೀಕ್ಷಣೆ! ಕೊನೆಗೆ ಪ್ರಿಯಕರನಿಗೆ ಪೊಲೀಸರು ಕೊಟ್ಟ ಶಾಕ್ ಏನು?
ಭೋಪಾಲ್: ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೀಕ್ಷಣೆ ಪಡೆಯಬೇಕು ಎಂಬ ಆಸೆಯಲ್ಲಿ ಕೆಲವರು ಮಾಡುವ ಸಾಹಸಗಳು ಕೆಲವೊಮ್ಮೆ ಸಂಕಷ್ಟಕ್ಕೆ ಕಾರಣವಾಗುತ್ತವೆ. ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಯುವಕನೊಬ್ಬ ರೀಲ್ಸ್ಗಾಗಿ ಮಾಡಿದ್ದ ವಿಭಿನ್ನ ಪ್ರಯೋಗ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಕಾರಿನ ಮೇಲೆ ಬರೋಬ್ಬರಿ 3,400 ಲಿಪ್ಸ್ಟಿಕ್ ಮುತ್ತಿನ ಗುರುತುಗಳನ್ನು ಹಾಕಿಸಿ ರಸ್ತೆಯಲ್ಲಿ ರೀಲ್ಸ್ ಮಾಡಿದ್ದ ಯುವಕನಿಗೆ ಕೊನೆಗೆ ಸಂಚಾರ ಪೊಲೀಸರು ದಂಡ ವಿಧಿಸಿದ್ದಾರೆ.
ಗ್ವಾಲಿಯರ್ ನಿವಾಸಿ ಆದಿತ್ಯ ಸಿಕರ್ವಾರ್ ತನ್ನ ಬಿಳಿ ಬಣ್ಣದ ಮಾರುತಿ ಸುಜುಕಿ ಸ್ವಿಫ್ಟ್ ಕಾರನ್ನು ವಿಶೇಷ ರೀತಿಯಲ್ಲಿ ಅಲಂಕರಿಸಿ ರೀಲ್ಸ್ ಮಾಡಿದ್ದಾನೆ. ಆತನ ಗೆಳತಿ ಲಿಪ್ಸ್ಟಿಕ್ ಬಳಸಿ ಕಾರಿನ ಬಾನೆಟ್, ಬಾಗಿಲು ಸೇರಿದಂತೆ ವಿವಿಧ ಭಾಗಗಳಲ್ಲಿ ಸುಮಾರು 3,400 ಮುತ್ತಿನ ಗುರುತುಗಳನ್ನು ಮೂಡಿಸಿದ್ದಾಳೆ. ಈ ವಿಭಿನ್ನ ಅಲಂಕಾರ ಪೂರ್ಣಗೊಳಿಸಲು ಸುಮಾರು ಮೂರೂವರೆ ಗಂಟೆ ಸಮಯ ತೆಗೆದುಕೊಂಡಿದೆ ಎನ್ನಲಾಗಿದೆ.
ರಸ್ತೆಗಿಳಿದ ‘ಕಿಸ್ಸಿಂಗ್ ಕಾರ್’
ಲಿಪ್ಸ್ಟಿಕ್ ಗುರುತುಗಳಿಂದ ಸಂಪೂರ್ಣವಾಗಿ ಅಲಂಕರಿಸಲಾದ ಕಾರನ್ನು ಬಳಿಕ ರಸ್ತೆಗೆ ತೆಗೆದುಕೊಂಡು ಹೋಗಲಾಗಿದೆ. ಈ ವೇಳೆ ಕಾರನ್ನು ವೇಗವಾಗಿ ಚಲಾಯಿಸುತ್ತಾ ರೀಲ್ಸ್ ಚಿತ್ರೀಕರಿಸಲಾಗಿದೆ. ನಂತರ ಅದನ್ನು ‘ಕಿಸ್ಸಿಂಗ್ ಕಾರ್’ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.
ವಿಡಿಯೋ ಪ್ರಕಟವಾದ ಕೆಲವೇ ಗಂಟೆಗಳಲ್ಲಿ ಭಾರೀ ವೈರಲ್ ಆಗಿದೆ. ಕೇವಲ 24 ಗಂಟೆಗಳಲ್ಲಿ 55 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ಆದರೆ ಇದೇ ಜನಪ್ರಿಯತೆ ಯುವಕನಿಗೆ ಸಂಕಷ್ಟ ತಂದಿದೆ.
ವಿಡಿಯೋ ನೋಡಿದ ಪೊಲೀಸರಿಗೆ ಸಿಕ್ಕ ಸುಳಿವು
ವೈರಲ್ ವಿಡಿಯೋ ಗ್ವಾಲಿಯರ್ ಸಂಚಾರ ಪೊಲೀಸರ ಗಮನಕ್ಕೂ ಬಂದಿದೆ. ವಿಡಿಯೋದಲ್ಲಿ ಕಾರನ್ನು ಅತಿವೇಗವಾಗಿ ಚಾಲನೆ ಮಾಡುತ್ತಿರುವುದು ಕಂಡುಬಂದಿದೆ. ಅದರಲ್ಲೂ ಕಾರಿನ ನೋಂದಣಿ ಸಂಖ್ಯೆ ಸ್ಪಷ್ಟವಾಗಿ ಕಾಣಿಸುತ್ತಿತ್ತು. ಈ ನೋಂದಣಿ ಸಂಖ್ಯೆಯ ಆಧಾರದ ಮೇಲೆ ಪೊಲೀಸರು ವಾಹನವನ್ನು ಪತ್ತೆಹಚ್ಚಿದ್ದಾರೆ.
ನಂತರ ಥಾಟಿಪುರ ಪ್ರದೇಶದಿಂದ ಕಾರನ್ನು ವಶಕ್ಕೆ ಪಡೆದು ಆದಿತ್ಯನನ್ನು ಸಂಚಾರ ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ರಸ್ತೆ ಸುರಕ್ಷತೆಗೆ ಅಪಾಯ ಉಂಟುಮಾಡುವ ರೀತಿಯಲ್ಲಿ ವಾಹನ ಚಲಾಯಿಸಿರುವ ಬಗ್ಗೆ ಪೊಲೀಸರು ಆತನಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಠಾಣೆಯಲ್ಲೇ 3,400 ಮುತ್ತುಗಳ ಅಂತ್ಯ!
ವಿಚಾರಣೆ ವೇಳೆ ತನ್ನ ತಪ್ಪನ್ನು ಒಪ್ಪಿಕೊಂಡ ಬಳಿಕ ಪೊಲೀಸರು ಕಾರಿನ ಮೇಲಿದ್ದ ಎಲ್ಲಾ ಲಿಪ್ಸ್ಟಿಕ್ ಗುರುತುಗಳನ್ನು ತೆರವುಗೊಳಿಸುವಂತೆ ಆದಿತ್ಯನಿಗೆ ಸೂಚಿಸಿದ್ದಾರೆ. ಹೀಗಾಗಿ ಠಾಣೆಯಲ್ಲೇ ನೀರು ಬಳಸಿ ಕಾರಿನ ಮೇಲಿದ್ದ ಸುಮಾರು 3,400 ಮುತ್ತಿನ ಗುರುತುಗಳನ್ನು ಸ್ವಚ್ಛಗೊಳಿಸಲಾಗಿದೆ.
ಅಷ್ಟೇ ಅಲ್ಲದೆ, ಸಂಚಾರ ನಿಯಮ ಉಲ್ಲಂಘನೆ ಹಾಗೂ ರಸ್ತೆ ಸುರಕ್ಷತೆಗೆ ಧಕ್ಕೆ ತರುವ ರೀತಿಯಲ್ಲಿ ವಾಹನ ಚಲಾಯಿಸಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು 5,500 ರೂಪಾಯಿ ದಂಡ ವಿಧಿಸಿದ್ದಾರೆ.
ಹೆಚ್ಚಿನ ವೀಕ್ಷಣೆ ಪಡೆಯುವ ಉದ್ದೇಶದಿಂದ ಮಾಡಿದ್ದ ರೀಲ್ಸ್ ಕೊನೆಗೆ ಪೊಲೀಸರ ಗಮನ ಸೆಳೆದು ದಂಡ ಕಟ್ಟುವ ಪರಿಸ್ಥಿತಿಗೆ ತಂದಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ಉದ್ದೇಶದಿಂದ ಸಾರ್ವಜನಿಕ ರಸ್ತೆಯಲ್ಲಿ ಅಪಾಯಕಾರಿ ರೀತಿಯಲ್ಲಿ ವಾಹನ ಚಲಾಯಿಸುವುದು ಎಷ್ಟೇ ಜನಪ್ರಿಯತೆ ತಂದರೂ, ಅದು ಸಂಚಾರ ನಿಯಮಗಳಿಗೆ ಹೊರತಾಗಿಲ್ಲ ಎಂಬುದನ್ನು ಈ ಘಟನೆ ಮತ್ತೊಮ್ಮೆ ನೆನಪಿಸಿದೆ.
-
ಬೆಂಗಳೂರು11 ಗಂಟೆಗಳು agoKannada Sahitya Parishat ನ ಗೌರವ ದತ್ತಿ ಪ್ರಶಸ್ತಿ ಪ್ರಕಟ: 2025, 2026ನೇ ಸಾಲಿನ ಪುರಸ್ಕೃತರು ಇವರೇ!
-
ಬೆಂಗಳೂರು18 ಗಂಟೆಗಳು agoB Nagendra ವಿರುದ್ಧ ಬಿಜೆಪಿ-ಜೆಡಿಎಸ್ ದೂರು: ರಾಜ್ಯಪಾಲರಿಗೆ ಮನವಿ ಸಲ್ಲಿಕೆ
-
ದೇಶ16 ಗಂಟೆಗಳು agoIran ಮೇಲೆ America ದ ಹೊಸ ನಿರ್ಬಂಧ! ಭಾರತದ ಅಕ್ಕಿ, ಚಹಾ, ಔಷಧ ರಫ್ತಿಗೆ ಎದುರಾಯ್ತಾ ದೊಡ್ಡ ಹೊಡೆತ?
-
ದೇಶ15 ಗಂಟೆಗಳು agoChina Robot Revolution ರೋಬೋಟ್ ಗಳಿಗೆ ತರಬೇತಿ, ಯುವಕರಿಗೆ ಹೊಸ ಪಾಠ! ಚೀನಾ ಭವಿಷ್ಯದ ಉದ್ಯೋಗಕ್ಕಾಗಿ ಮಾಡುತ್ತಿರುವುದೇನು?
-
ಬೆಂಗಳೂರು17 ಗಂಟೆಗಳು agoUrvashi ಚಿತ್ರಮಂದಿರ ನೆಲಸಮಕ್ಕೆ ದಿಢೀರ್ ಬ್ರೇಕ್! Karnataka High Court ಆದೇಶದ ಹಿಂದಿರುವ ಕಾರಣವೇನು?
-
ಬೆಂಗಳೂರು17 ಗಂಟೆಗಳು agoSignal ನಲ್ಲಿ ನಿಂತಿದ್ದ ಬೈಕ್ ಸವಾರನಿಗೆ ಹಿಂಬದಿಯಿಂದ ಕಾರು ಡಿಕ್ಕಿ! 50 ಅಡಿ ದೂರಕ್ಕೆ ಹಾರಿ ಯುವಕ ಸಾವು
-
ದೇಶ18 ಗಂಟೆಗಳು agoCentre Government ವಿರುದ್ಧ ಮತ್ತೆ ಸಿಡಿದೆದ್ದ CJP! ಸೆ.5ರಂದು ನಡೆಯಲಿದೆ ಬೃಹತ್ ಪ್ರತಿಭಟನಾ ಮೆರವಣಿಗೆ
-
ರಾಜಕೀಯ17 ಗಂಟೆಗಳು agoBJP ತೊರೆದ ಬೆನ್ನಲ್ಲೇ ನಟ ದೇವನ್ಗೆ ವಿಜಯ್ ಪಕ್ಷದಿಂದ ಕರೆ! ಕೇರಳದ ಅಧ್ಯಕ್ಷ ಹುದ್ದೆಯ ಆಫರ್
