Connect with us

ರಾಜಕೀಯ

ದಳಪತಿಗಳ ಬುಟ್ಟಿಯಲ್ಲಿ ಆಪರೇಷನ್ ಹಸ್ತ ಶಾಸಕರ ಬೇಟೆಯಾಡಲು ಕಾಂಗ್ರೆಸ್ ನಾಯಕರಿಗೆ ಟಾಸ್ಕ್

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ನಿರ್ಧರಿಸಿದೆ. ಹೀಗಿರುವಾಗ ಕಾಂಗ್ರೆಸ್ ಪಕ್ಷವು ಜೆಡಿಎಸ್ 19 ಶಾಸಕರ ಪೈಕಿ 13 ಮಂದಿಯನ್ನು ಬೇಟೆಯಾಡುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಯಲ್ಲಿ ಜೆಡಿಎಸ್ ನ 7 ಅಥವಾ 8 ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಅಧಿಕಾರ ವಿರೋಧಿ ಕಾನೂನಿನ ಪ್ರಕಾರ, ಒಂದು ಪಕ್ಷದ ಒಟ್ಟು ಶಾಸಕರಲ್ಲಿ ಮೂರನೇ ಎರಡರಷ್ಟು ಮಂದಿ ಮತ್ತೊಂದು ಪಕ್ಷದೊಂದಿಗೆ ವಿಲೀನಗೊಳಿಸಲು ಅವಕಾಶವಿದೆ, ಹೀಗಾಗಿ 13 ಶಾಸಕರನ್ನು ಸೆಳೆಯುವ ಉದ್ದೇಶವಿತ್ತು ಎಂದು ಮೂಲಗಳು ತಿಳಿಸಿವೆ.

ಜೆಡಿಎಸ್ ಶಾಸಕರ ಮನವೊಲಿಸುವ ಕೆಲಸವನ್ನು ಸಿದ್ದರಾಮಯ್ಯ ತಮ್ಮ ಸಂಪುಟದ ಕೆಲವು ಸಹೋದ್ಯೋಗಿಗಳು ಮತ್ತು ಹಿರಿಯ ನಾಯಕರಿಗೆ ನೀಡಿದ್ದಾರೆ. ಹನೂರು ಜೆಡಿಎಸ್ ಶಾಸಕ ಎಂ ಆರ್ ಮಂಜುನಾಥ್ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಗುರ್ಮಿಟ್ಕಲ್ ಶಾಸಕ ಶರಣಗೌಡ ಕಂದಕೂರ್, ದೇವಗಿರಿ ಶಾಸಕಿ ಕರೆಮ್ಮ ಜಿ ನಾಯ್ಕ ಸೇರಿದಂತೆ 4-5 ಶಾಸಕರು, ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿಯಿಂದ ಅಸಮಾಧಾನಗೊಂಡಿದ್ದು ಪಕ್ಷ ಬದಲಾಯಿಸಲು ಸಿದ್ಧರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರನ್ನು ಕಾಂಗ್ರೆಸ್ ಗೆ ಕರೆ ತರಲು ಸಚಿವ ಹಾಗೂ ಸಿಎಂ ಸಿದ್ದರಾಮಯ್ಯ ಆವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಭೈರತಿ ಸುರೇಶ್ ಅವರಿಗೆ ಟಾಸ್ಕ್ ನೀಡಲಾಗಿದೆ ಎಂದು ಹೇಳಲಾಗಿದೆ.

ತುಮಕೂರಿನಲ್ಲಿ ಚಿಕ್ಕನಾಯಕನಹಳ್ಳಿ ಜೆಡಿಎಸ್ ಶಾಸಕ ಬಿ.ಸುರೇಶ್ ಬಾಬು ಅವರ ಮನವೊಲಿಸುವ ಕಾರ್ಯವನ್ನು ಜಿಲ್ಲಾ ಸಚಿವ ಡಾ.ಜಿ.ಪರಮೇಶ್ವರ ಹಾಗೂ ನವದೆಹಲಿಯಲ್ಲಿನ ಕರ್ನಾಟಕದ ವಿಶೇಷ ಪ್ರತಿನಿಧಿ ಹಾಗೂ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರಿಗೆ ವಹಿಸಲಾಗಿದೆ.

ಜೆಡಿಎಸ್ ನ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಜೆಡಿಎಸ್ ಬಲಿಷ್ಠವಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ಸಂದೇಶ ರವಾನಿಸಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ದೇಶ

“ಯತೀಂದ್ರಗೆ ಮಿನಿಮಮ್ ಕಾಮನ್ ಸೆನ್ಸ್ ಇಲ್ಲ” – ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಮಾಗಡಿ ಶಾಸಕ ಬಾಲಕೃಷ್ಣ ಕಿಡಿಕಾರಿದ್ದಾರೆ. “ಯತೀಂದ್ರ ಅವರಿಗೆ ಮಿನಿಮಮ್ ಕಾಮನ್ ಸೆನ್ಸ್ ಕೂಡ ಇಲ್ಲ” ಎಂದು ಅವರು ನೇರ ವಾಗ್ದಾಳಿ ನಡೆಸಿದರು.

ಹೈಕಮಾಂಡ್‌ನಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಯತೀಂದ್ರ ನೀಡಿದ್ದ ಹೇಳಿಕೆಗೆ ಸುವರ್ಣ ಸೌಧದಲ್ಲಿ ಪ್ರತಿಕ್ರಿಯಿಸಿದ ಬಾಲಕೃಷ್ಣ, “ದೊಡ್ಡವರಿಗೆ ಒಂದು ನ್ಯಾಯ, ಚಿಕ್ಕವರಿಗೆ ಒಂದು ನ್ಯಾಯ ಆಗುತ್ತಿದೆ. ಯತೀಂದ್ರಗೆ ನೋಟಿಸ್ ನೀಡದೇ ಇದ್ದದ್ದು ಅಸಮಾಧಾನಕಾರಿ” ಎಂದರು.

“ಈ ರೀತಿ ನಡೆಯುತ್ತಿರುವುದಕ್ಕೆ ನಮ್ಮ ಇಕ್ಬಾಲ್ ಹುಸೇನ್ ಮಾತಾಡಿದ್ರೆ ಬಲಾತ್ಕಾರ, ಯತೀಂದ್ರ ಮಾತಾಡಿದ್ರೆ ಚಮತ್ಕಾರ… ಅದನ್ನು ಅದ್ಭುತವಾಗಿ ಹೇಳಿದ್ದಾರೆ” ಎಂದು ಬಾಲಕೃಷ್ಣ ಮತ್ತಷ್ಟು ತಿರುಗೇಟು ನೀಡಿದರು.

ಇದಕ್ಕೂ ಮುಂಚೆ ಸಚಿವ ಡಿ.ಕೆ. ಶಿವಕುಮಾರ್ ಪರವಾಗಿ ಕೆಲವು ಶಾಸಕರು ನೀಡಿದ ಹೇಳಿಕೆಗಳಿಗೆ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿತ್ತು. ಆದರೆ ಈಗ ಸಿಎಂ ಪುತ್ರ ಯತೀಂದ್ರ ನೇರವಾಗಿ ತಂದೆಯ ಪರ ಬ್ಯಾಟ್ ಬೀಸಿದರೂ ಇನ್ನೂ ನೋಟಿಸ್ ನೀಡಿಲ್ಲ ಎಂಬ ಪ್ರಶ್ನೆಯನ್ನು ಡಿಕೆ ಬೆಂಬಲಿಗ ಶಾಸಕರು ಎತ್ತಿದ್ದಾರೆ.

ಬೆಳಗಾವಿ ಅಧಿವೇಶನದ ರಾಜಕೀಯ ವಾತಾವರಣ ಈ ಆರೋಪ-ಪ್ರತ್ಯಾರೋಪಗಳಿಂದ ಮತ್ತಷ್ಟು ಕಾವು ಪಡೆದಿದೆ.

Continue Reading

ರಾಜಕೀಯ

“ಡಿಕೆ ಶಿವಕುಮಾರ್ ಸಿಎಂ ಆಗಲೇಬೇಕು” : ಶಾಸಕ ಎಸ್.ಟಿ. ಸೋಮಶೇಖರ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಪದೇ ಪದೇ ಚರ್ಚೆಗೆ ಗ್ರಾಸವಾಗುತ್ತಿರುವ ಮುಖ್ಯಮಂತ್ರಿ ಬದಲಾವಣೆ ವಿಷಯ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ಬಾರಿ ಶಾಸಕರಾದ ಎಸ್.ಟಿ. ಸೋಮಶೇಖರ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಪರವಾಗಿ ಬಲವಾಗಿ ಮಾತಾಡಿದ್ದು, ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸೋಮಶೇಖರ್, “ಡಿಕೆ ಶಿವಕುಮಾರ್ ಏಕೆ ಮುಖ್ಯಮಂತ್ರಿಯಾಗಬಾರದು? ಪಕ್ಷವನ್ನು ಕಟ್ಟಿಕೊಂಡವರು, ಪಕ್ಷದ ಶಕ್ತಿ ಹೆಚ್ಚಿಸಿದವರು. ಅವರ ಹಣೆಯಲ್ಲಿ ಸಿಎಂ ಸ್ಥಾನ ಬರೆದಿದ್ದರೆ, ಅವರು ಖಚಿತವಾಗಿ ಸಿಎಂ ಆಗುತ್ತಾರೆ” ಎಂದು ಸ್ಪಷ್ಟಪಡಿಸಿದರು. ಅವರು ನಿನ್ನೆ ನಡೆದ ಡಿನ್ನರ್ ಬಗ್ಗೆ ಹೇಳುವಾಗ, “ಶಿವಕುಮಾರ್ ಅವರು ಊಟಕ್ಕೆ ಕರೆದಿದ್ದರು, ಅಲ್ಲಿ ಸುಮಾರು 70 ಶಾಸಕರು ಇದ್ದರು” ಎಂದು ಮಾಹಿತಿ ಹಂಚಿಕೊಂಡರು.

ಡಿನ್ನರ್ ಬಳಿಕ ಮತ್ತೊಬ್ಬ ಪ್ರಮುಖ ನಾಯಕ ಮತ್ತು ಡಿಕೆ ಶಿವಕುಮಾರ್ ಅವರ ಆಪ್ತನಾದ ಇಕ್ಬಾಲ್ ಹುಸೇನ್ ಕೂಡಾ ತೀವ್ರ ಹೇಳಿಕೆ ನೀಡಿ, “ಸಂಕ್ರಾಂತಿ ಅಲ್ಲ, ಅಧಿವೇಶನ ಮುಗಿಯುತ್ತಲೇ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ” ಎಂದು ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದರು.

ತಡರಾತ್ರಿ ಪ್ರವೀಣ್ ದೊಡ್ಡಣ್ಣನವರ್ ತೋಟದ ಮನೆಯಲ್ಲಿ ನಡೆದ ಈ ಭರ್ಜರಿ ಸಭೆಯಲ್ಲಿ ಎಸ್.ಟಿ. ಸೋಮಶೇಖರ್, ಶಿವರಾಂ ಹೆಬ್ಬಾರ್, ಹ್ಯಾರಿಸ್, ಮಾಗಡಿ ಬಾಲಕೃಷ್ಣ ಸೇರಿದಂತೆ 55–70 ಶಾಸಕರು ಭಾಗಿಯಾಗಿದ್ದರು. ಸಭೆಯ ನಂತರವೇ DKShi ಪರವಾಗಿ ನೀಡಲಾದ ಹೇಳಿಕೆಗಳು ಸಿದ್ಧರಾಮಯ್ಯ ಬಣಕ್ಕೆ ಆತಂಕ ತರಿಸಿದೆ.

ಈ ನಡುವೆ ಹೈಕಮಾಂಡ್ ಕೂಡಾ ಪರಿಸ್ಥಿತಿ ಗಂಭೀರವಾಗುತ್ತಿರುವುದರಿಂದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ್ ಖರ್ಗೆ ಅವರೊಂದಿಗೆ ಆಂತರಿಕ ಚರ್ಚೆ ನಡೆಸಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಅಧಿವೇಶನ ಮುಗಿದ ನಂತರ ತೀರ್ಮಾನ ಸಂಭವನೀಯ ಎಂಬ ಇಕ್ಬಾಲ್ ಹುಸೇನ್ ಹೇಳಿಕೆ ರಾಜಕೀಯದಲ್ಲಿ ಬೆಂಕಿಗೆ ಎಣ್ಣೆ ಸುರಿದಂತಾಗಿದೆ.

ಇನ್ನೊಂದೆಡೆ, ಸಿಎಂ ಸಿದ್ದರಾಮಯ್ಯ ಅವರ ಪುತ್ರ ಮತ್ತು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಬದಲಾವಣೆ ಕುರಿತು ಪ್ರಸಕ್ತ ಗಾಳಿಚರ್ಚೆಗಳಿಗೆ ತೆರೆ ಬಿದ್ದಂತೆ ಮಾತನಾಡಿ, “ಮುಖ್ಯಮಂತ್ರಿ ಬದಲಾವಣೆ ಇಲ್ಲ. ಹೈಕಮಾಂಡ್ ಇದನ್ನು ಸ್ಪಷ್ಟಪಡಿಸಿದೆ” ಎಂದು ಹೇಳಿದ್ದಾರೆ. ಕೇವಲ ಎರಡು ದಿನಗಳೊಳಗೆ ಅವರು ಎರಡನೇ ಬಾರಿ ಇದೇ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಬಲವಾದ ಸಂದೇಶ ನೀಡಿದಂತಾಗಿದೆ.

Continue Reading

ದೇಶ

ಅಧಿವೇಶನದ ನಂತರ ಡಿಕೆಶಿ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್

ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್

ಬೆಳಗಾವಿ: “ಸಂಕ್ರಾಂತಿಯಲ್ಲ, ಅಧಿವೇಶನ ಮುಗಿದ ಕೂಡಲೇ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ” ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಬೆಳಗಾವಿ ಸುವರ್ಣಸೌಧದಲ್ಲಿ ಸ್ಪಷ್ಟಪಡಿಸಿದ್ದಾರೆ.

“ನನ್ನ ಹಣೆಯಲ್ಲಿ ಬರೆದಿದ್ದಕ್ಕೆ ನಾನು ಶಾಸಕನಾಗಿದ್ದೇನೆ. ಹಾಗೆಯೇ ಡಿ.ಕೆ. ಶಿವಕುಮಾರ್ ಅವರ ಹಣೆಯಲ್ಲಿ ಸಿಎಂ ಸ್ಥಾನ ಬರೆದಿದೆ. ಅವರು ಖಚಿತವಾಗಿ ಸಿಎಂ ಆಗುತ್ತಾರೆ” ಎಂದು ಇಕ್ಬಾಲ್ ಹುಸೇನ್ ಹೇಳಿದರು. “ನಿನ್ನೆ 55 ಜನ ಶಾಸಕರು ಒಟ್ಟಿಗೆ ಊಟ ಮಾಡಿದ್ದೇವೆ. ಅದರಲ್ಲಿ ಯಾವ ರಾಜಕೀಯ ಚರ್ಚೆಯೂ ನಡೆಯಲಿಲ್ಲ. ನಮಗೆ ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು, ಆಗಲೇಬೇಕು” ಎಂದರು.

“ಡಿ.ಕೆ. ಶಿವಕುಮಾರ್ ಕಷ್ಟಪಟ್ಟಿದ್ದಾರೆ, ಅದರ ಫಲ ಅವರು ಪಡೆಯಲೇಬೇಕು. ಅಧಿವೇಶನ ಮುಗಿದ ತಕ್ಷಣ ಬದಲಾವಣೆ ಸಾಧ್ಯ. ಸಂಖ್ಯಾಬಲ ಮುಖ್ಯವಲ್ಲ, ಹೈಕಮಾಂಡ್ ನಿರ್ದೇಶನೆಯೇ ಅಂತಿಮ” ಎಂದು ಅವರು ಹೇಳಿದರು.

ಡಿನ್ನರ್‌ ಸಭೆಯಲ್ಲಿ 50–60 ಮಂದಿ ಸೇರಿದ್ದರೂ, ಇದು ರಾಜಕೀಯ ಚರ್ಚೆಗೆ ವೇದಿಕೆ ಆಗಲಿಲ್ಲ ಎಂದು ಸ್ಪಷ್ಟಪಡಿಸಿದರು. “ಡಿ.ಕೆ. ಶಿವಕುಮಾರ್ ಕರೆದರೆ ಯಾವ ಪಕ್ಷದವರಾದರೂ ಬರುತ್ತಾರೆ. ವಿಶ್ವಾಸ, ಪ್ರೀತಿ, ಬಾಂಧವ್ಯ – ಪಕ್ಷವೇನೂ matter ಆಗೋದಿಲ್ಲ. ಕಾಂಗ್ರೆಸ್ ಶಿಸ್ತಿನ ಪಕ್ಷ” ಎಂದರು.

ಮುಖ್ಯಮಂತ್ರಿಯ ಪರವಾಗಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿ, “ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ನೀಡಿರುವ ಮಾರ್ಗದರ್ಶನವೇ ನಮಗೆ ಅಂತಿಮ. ನಾಯಕತ್ವ ಬದಲಾವಣೆ ಬಗ್ಗೆ ನನಗೆ ಮಾಹಿತಿ ಇಲ್ಲ; ನಾನು ಡಿನ್ನರ್‌ಗೆ ಹೋಗಿರಲಿಲ್ಲ” ಎಂದು ಹೇಳಿದರು.

Continue Reading

Trending