ರಾಜ್ಯ
ನಟ ಪ್ರಕಾಶ್ ರಾಜ್ ಶಿವಣ್ಣ ಕೇಳಿದ ಕ್ಷಮೆಗೆ ಸಿದ್ಧಾರ್ಥ್ ನೀಡಿದ ಪ್ರತಿಕ್ರಿಯೆ ಏನು
ಚೆನ್ನೈ: ತಮಿಳು ನಟ ಸಿದ್ಧಾರ್ಥ್ ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದರು, ಈ ವೇಳೆ ತಮಿಳುನಾಡಿಗೆ ಕಾವೇರಿ ನೀರುವ ಹಂಚಿಕೆ ವಿಚಾರವಾಗಿ ಪ್ರತಿಭಟನೆಗಳು ನಡೆಯುತ್ತಿದ್ದವು, ಹೀಗಾಗಿ ಕೆಲ ಕನ್ನಡ ಪರ ಸಂಘಟನೆಗಳು ಸುದ್ದಿಗೋಷ್ಟಿಯನ್ನು ತಡೆದು ವಿರೋಧ ವ್ಯಕ್ತಪಡಿಸಿದರ, ಈ ಹಿನ್ನೆಲೆ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಹಾಗೂ ಬಹುಭಾಷಾ ನಟ ಪ್ರಕಾಶ್ ರಾಜ್ ಕ್ಷಮೆಯಾಚಿಸಿದ್ದಾರೆ,
ಈ ಕುರಿತು ಕಾರ್ಯಕ್ರಮಯೊಂದರಲ್ಲಿ ಮಾತನಾಡಿರುವ ಸಿದ್ಧಾರ್ಥ್ ಅವರ ಕ್ಷಮೆಯನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದಿದ್ದಾರೆ, ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ಭಾರೀ ಪ್ರತಿಭಟನೆಗಳು ನಡೆದವು, ತಮಿಳು ಸಿನಿಮಾಗಳನ್ನು ಬ್ಯಾನ್ ಮಾಡಬೇಕು ಎನ್ನುವ ಆಗ್ರಹ ಕೂಡ ಕೇಳಿ ಬಂತು, ಈ ಸಂದರ್ಭದಲ್ಲಿ ಎಸ್ಆರ್ವಿ ಥಿಯೇಟರ್ನಲ್ಲಿ ಸಿದ್ಧಾರ್ಥ್ ಸುದ್ದಿಗೋಷ್ಟಿ ಆಯೋಜನೆ ಮಾಡಿದರು, ಅವರು ನಟಿಸಿ ನಿರ್ಮಸಿರು ಚಿಕ್ಕು ಸಿನಿಮಾದ ಶೋ ಕೂಡ ಇತ್ತು, ಕನ್ನಡ ಪರ ಹೋರಾಟಗಾರರು ಸುದ್ದಿಗೋಷ್ಠಿಗೆ ಅಡಚಣೆ ಮಾಡಿದರು, ಹೀಗಾಗಿ ಸಿದ್ಧಾರ್ಥ್ ಅವರು ಅರ್ಧಕ್ಕೆ ಹೊರ ನಡೆದರು,
ಈ ಘಟನೆಯನ್ನು ಖಂಡಿಸಿ ಪ್ರಕಾಶ್ ರಾಜ್ ಸಿದ್ಧಾರ್ಥ್ ಗೆ ಕ್ಷಮೆಯಾಚಿಸಿದ್ದರು, ಅಲ್ಲದೆ ಶಿವರಾಜ್ ಕುಮಾರ್ ಕೂಡ ಕನ್ನಡಿಗರ ಪರವಾಗಿ ಕ್ಷೆಮೆಯಾಚಿಸಿದರು, ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ಧಾರ್ಥ್ ಶಿವರಾಜ್ ಕುಮಾರ್ ಹಾಗೂ ಪ್ರಕಾಶ್ ರಾಜ್ ಅವರು ಕ್ಷೆಮೆಯನ್ನು ಸ್ವೀಕರಿಸಲು ಸಾಧ್ಯವಿಲ್ಲ ಅದರೆ ಅವರು ಯಾವುದೇ ತಪ್ಪು ಮಾಡಿಲ್ಲ ಅವರಿಂದ ಯಾವುದೇ ರೀತಿಯ ತೊಂದರೆ ಕೂಡ ಆಗಿಲ್ಲ ಹೀಗಾಗಿ ಅವರು ಕ್ಷಮೆ ಕೇಳುವ ಅಗತ್ಯವೇ ಇರಲಿಲ್ಲ, ಅದರೂ ಅವರು ಕ್ಷಮೆ ಕೇಳಿದ್ದಾರೆ ಇದಕ್ಕೆ ಅವರ ಉದಾರತೆಯೇ ಕಾರಣ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ.
ರಾಜ್ಯ
ಮೈಸೂರಿ ನಲ್ಲಿ Siddaramaiah ಕಾರಿಗೆ ಮುತ್ತಿಗೆ; 165 ಎಕರೆ ಭೂಮಿಗಾಗಿ ರೈತರ ಪ್ರತಿಭಟನೆ
ಮೈಸೂರು: ಮಾಜಿ ಮುಖ್ಯಮಂತ್ರಿ Siddaramaiah ಹಾಗೂ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಕೃಷಿ ಭೂಮಿ ಸ್ವಾಧೀನ ವಿರೋಧಿಸಿ ರೈತರು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ತಮ್ಮ ಜೀವನಾಧಾರವಾಗಿರುವ 165 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಾರದು ಎಂದು ಆಗ್ರಹಿಸಿದ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಕೆಎಸ್ಒಯು ಬಡಾವಣೆಯಲ್ಲಿ ಆಯೋಜಿಸಿದ್ದ ಪತ್ರಕರ್ತರ ನೂತನ ಭವನದ ಕಾಮಗಾರಿಗೆ ಚಾಲನೆ, ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತರಿಗೆ ಅಭಿನಂದನೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಮತ್ತು ಡಾ. ಯತೀಂದ್ರ ಸಿದ್ದರಾಮಯ್ಯ ಆಗಮಿಸಿದ್ದರು. ಈ ವೇಳೆ ಸ್ಥಳದಲ್ಲಿದ್ದ ರೈತರು ಏಕಾಏಕಿ ಪ್ರತಿಭಟನೆ ಆರಂಭಿಸಿದರು.
ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (KIADB) ಕೈಗೊಂಡಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಕೂಡಲೇ ಕೈಬಿಡಬೇಕು ಎಂದು ರೈತರು ಒತ್ತಾಯಿಸಿದರು.
ಸಿದ್ದರಾಮಯ್ಯ ಕಾರಿಗೆ ಮುತ್ತಿಗೆ ಹಾಕಿದ ರೈತರು
ಕಾರ್ಯಕ್ರಮ ಮುಗಿಸಿ ಸಿದ್ದರಾಮಯ್ಯ ಅವರು ಹೊರಟ ಸಂದರ್ಭದಲ್ಲಿ ಪ್ರತಿಭಟನಾಕಾರರು ಅವರ ಕಾರನ್ನು ಸುತ್ತುವರಿದು ಘೋಷಣೆಗಳನ್ನು ಕೂಗಿದರು. ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಬಳಿಕ ಸಿದ್ದರಾಮಯ್ಯ ಅವರ ವಾಹನ ಸುಗಮವಾಗಿ ತೆರಳಲು ಪೊಲೀಸರು ಅನುವು ಮಾಡಿಕೊಟ್ಟರು.
ಇದಾದ ಬಳಿಕ ರೈತರು ಕಾರ್ಯಕ್ರಮದ ವೇದಿಕೆಯಲ್ಲಿದ್ದ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಲು ಮುಂದಾದರು. ರೈತರ ಪರವಾಗಿ ಬಿಜೆಪಿ ಮುಖಂಡ ಡಾ. ಶುಶ್ರುತ್ ಗೌಡ ಕೂಡ ಸಚಿವರನ್ನು ಭೇಟಿ ಮಾಡಿ, ಭೂಸ್ವಾಧೀನದಿಂದ ರೈತರಿಗೆ ಆಗುತ್ತಿರುವ ಸಮಸ್ಯೆಯನ್ನು ಪರಿಹರಿಸುವಂತೆ ಒತ್ತಾಯಿಸಿದರು.
ಈ ವೇಳೆ ಯತೀಂದ್ರ ಸಿದ್ದರಾಮಯ್ಯ ಹಾಗೂ ಶುಶ್ರುತ್ ಗೌಡ ನಡುವೆ ಮಾತಿನ ಚಕಮಕಿ ನಡೆಯಿತು. “ನೀವ್ಯಾಕೆ ಈ ವಿಚಾರದಲ್ಲಿ ರಾಜಕೀಯ ಮಾಡಲು ಇಲ್ಲಿದ್ದೀರಿ?” ಎಂದು ಯತೀಂದ್ರ ಪ್ರಶ್ನಿಸಿದರು. ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಶಾಸಕರಾದ ಡಿ. ರವಿಶಂಕರ್ ಮತ್ತು ದರ್ಶನ್ ಧ್ರುವನಾರಾಯಣ್ ಮಧ್ಯಪ್ರವೇಶಿಸಿ ಸಚಿವರನ್ನು ಸಮಾಧಾನಪಡಿಸಿದರು.
165 ಎಕರೆ ಕೃಷಿ ಭೂಮಿ ಸ್ವಾಧೀನಕ್ಕೆ ವಿರೋಧ
ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದ ಸಮೀಪದ ವರುಣಾ ವಿಧಾನಸಭಾ ಕ್ಷೇತ್ರದ ಮರಸೆ ಹಾಗೂ ಮುದರಗಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ಮಾಣ ಹಾಗೂ ಕೈಗಾರಿಕಾ ಯೋಜನೆಗಳಿಗಾಗಿ 165 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು KIADB ಮುಂದಾಗಿದೆ ಎನ್ನಲಾಗಿದೆ.
ಈ ಪ್ರದೇಶದಲ್ಲಿ ಭತ್ತ, ತೆಂಗು, ಬಾಳೆ ಸೇರಿದಂತೆ ವಿವಿಧ ಬೆಳೆಗಳನ್ನು ರೈತರು ಬೆಳೆಯುತ್ತಿದ್ದಾರೆ. ನೂರಾರು ಕುಟುಂಬಗಳು ಈ ಕೃಷಿ ಭೂಮಿಯನ್ನೇ ತಮ್ಮ ಜೀವನೋಪಾಯಕ್ಕೆ ಅವಲಂಬಿಸಿವೆ. ಹೀಗಾಗಿ ಭೂಮಿ ಸ್ವಾಧೀನವಾದರೆ ತಮ್ಮ ಕುಟುಂಬಗಳ ಜೀವನ ಸಂಕಷ್ಟಕ್ಕೆ ಸಿಲುಕಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಪರಿಹಾರ ಬೇಡ, ಭೂಮಿಯೇ ಬೇಕು ಎಂದ ರೈತರು
ಭೂಮಿಗೆ ಪರಿಹಾರ ನೀಡುವುದಕ್ಕಿಂತ ತಮ್ಮ ಕೃಷಿ ಜಮೀನನ್ನು ಉಳಿಸಿಕೊಡುವುದೇ ತಮ್ಮ ಪ್ರಮುಖ ಬೇಡಿಕೆ ಎಂದು ರೈತರು ಸ್ಪಷ್ಟಪಡಿಸಿದ್ದಾರೆ. ಸರ್ಕಾರ ಪರ್ಯಾಯ ವ್ಯವಸ್ಥೆ ಅಥವಾ ಪರಿಹಾರ ನೀಡಿದರೂ ತಮ್ಮ ಜೀವನಾಧಾರವಾಗಿರುವ ಜಮೀನನ್ನು ಬಿಟ್ಟುಕೊಡಲು ಸಿದ್ಧರಿಲ್ಲ ಎಂದು ತಿಳಿಸಿದ್ದಾರೆ.
ತಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ರೈತ ಸಂಘಟನೆಗಳು ಎಚ್ಚರಿಕೆ ನೀಡಿವೆ. ಮೈಸೂರಿನಲ್ಲಿ ನಡೆದ ಈ ಪ್ರತಿಭಟನೆ ಇದೀಗ KIADB ಭೂಸ್ವಾಧೀನ ಪ್ರಕ್ರಿಯೆ ಮತ್ತು ರೈತರ ಹಕ್ಕುಗಳ ವಿಚಾರವನ್ನು ಮತ್ತೆ ಮುನ್ನೆಲೆಗೆ ತಂದಿದೆ.
ರಾಜ್ಯ
Karnataka Girl Child Scheme ಹೆಣ್ಣು ಮಗು ಹುಟ್ಟಿದರೆ ₹5,000 ಬಹುಮಾನ: ಬೆಳಗಾವಿ ಗ್ರಾಮ ಪಂಚಾಯಿತಿಯ ವಿನೂತನ ಯೋಜನೆ
ಬೆಳಗಾವಿ:Karnataka Girl Child Scheme ಗ್ರಾಮೀಣ ಪ್ರದೇಶಗಳಲ್ಲಿ ಹೆಣ್ಣು ಮಕ್ಕಳ ಜನನ ಪ್ರಮಾಣ ಹೆಚ್ಚಿಸುವ ಜೊತೆಗೆ ಅವರ ಭವಿಷ್ಯಕ್ಕೆ ಆರ್ಥಿಕ ಭದ್ರತೆ ಕಲ್ಪಿಸುವ ಉದ್ದೇಶದಿಂದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಮತನೂರು ಗ್ರಾಮ ಪಂಚಾಯಿತಿ ವಿನೂತನ ಯೋಜನೆಯೊಂದನ್ನು ಆರಂಭಿಸಿದೆ. ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಣ್ಣು ಮಗು ಜನಿಸಿದರೆ ಕುಟುಂಬಕ್ಕೆ ₹5,000 ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ.

ಹೆಣ್ಣು ಮಕ್ಕಳ ಜನನವನ್ನು ಉತ್ತೇಜಿಸುವ ಹಾಗೂ ಸಮಾಜದಲ್ಲಿ ಇನ್ನೂ ಕಂಡುಬರುವ ಲಿಂಗ ತಾರತಮ್ಯವನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಹೆಣ್ಣು ಮಗು ಕುಟುಂಬಕ್ಕೆ ಹೊರೆಯಲ್ಲ, ಬದಲಿಗೆ ಆಕೆಯ ಭವಿಷ್ಯಕ್ಕೆ ಕುಟುಂಬ ಮತ್ತು ಸಮಾಜ ಒಟ್ಟಾಗಿ ಬೆಂಬಲ ನೀಡಬೇಕು ಎಂಬ ಸಂದೇಶವನ್ನು ಈ ಯೋಜನೆಯ ಮೂಲಕ ಸಾರಲಾಗುತ್ತಿದೆ.
ಹೆಣ್ಣು ಮಗು ಹುಟ್ಟಿದರೆ ₹5,000 ನೆರವು
ಕಮತನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಣ್ಣು ಮಗು ಜನಿಸಿದ ಕುಟುಂಬಗಳಿಗೆ ₹5,000 ಪ್ರೋತ್ಸಾಹ ಧನ ನೀಡಲಾಗುತ್ತದೆ. ಈ ಆರ್ಥಿಕ ನೆರವನ್ನು ಮಗುವಿನ ಭವಿಷ್ಯಕ್ಕಾಗಿ ಬಳಸಿಕೊಳ್ಳುವಂತೆ ಪಂಚಾಯಿತಿ ಸೂಚಿಸಿದೆ.
ವಿಶೇಷವಾಗಿ ಸುಕನ್ಯಾ ಸಮೃದ್ಧಿ ಯೋಜನೆ ಖಾತೆ ಅಥವಾ ಮಗುವಿನ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆದು ಈ ಹಣವನ್ನು ಠೇವಣಿ ಇಡುವಂತೆ ಸಲಹೆ ನೀಡಲಾಗಿದೆ. ಇದರಿಂದ ಚಿಕ್ಕ ವಯಸ್ಸಿನಿಂದಲೇ ಹೆಣ್ಣು ಮಗುವಿನ ಭವಿಷ್ಯಕ್ಕಾಗಿ ಉಳಿತಾಯ ಮಾಡುವ ಅವಕಾಶ ಕುಟುಂಬಗಳಿಗೆ ದೊರೆಯಲಿದೆ.
ಅರ್ಜಿ ಸಲ್ಲಿಕೆಗೆ ದಾಖಲೆಗಳು ಅಗತ್ಯ
ಯೋಜನೆಯಡಿ ಪ್ರೋತ್ಸಾಹ ಧನ ಪಡೆಯಲು ಕೆಲವು ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಮಗುವಿನ ಜನನ ಪ್ರಮಾಣಪತ್ರ, ಹೆತ್ತವರ ಆಧಾರ್ ಕಾರ್ಡ್ ಹಾಗೂ ಪಂಚಾಯಿತಿ ವ್ಯಾಪ್ತಿಯ ನಿವಾಸಿ ದೃಢೀಕರಣ ಪತ್ರವನ್ನು ಅರ್ಜಿಯೊಂದಿಗೆ ನೀಡಬೇಕಾಗಿದೆ.
ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಣ್ಣು ಮಗು ಜನಿಸಿದ ಅರ್ಹ ಕುಟುಂಬಗಳು ಅಗತ್ಯ ದಾಖಲೆಗಳೊಂದಿಗೆ ಯೋಜನೆಯ ಪ್ರಯೋಜನ ಪಡೆಯಬಹುದು.
ಲಿಂಗ ತಾರತಮ್ಯ ತಡೆಗಟ್ಟುವ ಉದ್ದೇಶ
ಸಮಾಜದಲ್ಲಿ ಹೆಣ್ಣು ಮಕ್ಕಳ ಬಗ್ಗೆ ಇರುವ ಕೆಲವು ನಕಾರಾತ್ಮಕ ಮನೋಭಾವಗಳನ್ನು ಬದಲಾಯಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಹೆಣ್ಣು ಮಗುವಿನ ಜನನವನ್ನು ಸಂಭ್ರಮದಿಂದ ಸ್ವೀಕರಿಸುವ ವಾತಾವರಣ ನಿರ್ಮಿಸುವುದು ಹಾಗೂ ಅವರ ಶಿಕ್ಷಣ, ಆರೋಗ್ಯ ಮತ್ತು ಭವಿಷ್ಯಕ್ಕೆ ಕುಟುಂಬಗಳು ಹೆಚ್ಚಿನ ಆದ್ಯತೆ ನೀಡುವಂತೆ ಪ್ರೋತ್ಸಾಹಿಸುವ ಗುರಿಯನ್ನು ಪಂಚಾಯಿತಿ ಹೊಂದಿದೆ.
ಹೆಣ್ಣು ಮಕ್ಕಳ ಜನನ ಪ್ರಮಾಣ ಹೆಚ್ಚಿಸುವುದರ ಜೊತೆಗೆ ಬಾಲಕಿಯರ ಸಬಲೀಕರಣಕ್ಕೂ ಇಂತಹ ಸ್ಥಳೀಯ ಯೋಜನೆಗಳು ನೆರವಾಗಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಸಾರ್ವಜನಿಕರಿಂದ ಮೆಚ್ಚುಗೆ
ಕಮತನೂರು ಗ್ರಾಮ ಪಂಚಾಯಿತಿಯ ಈ ನಿರ್ಧಾರಕ್ಕೆ ಸ್ಥಳೀಯ ಗ್ರಾಮಸ್ಥರು ಹಾಗೂ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಗ್ರಾಮೀಣ ಮಟ್ಟದಲ್ಲಿ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಆರ್ಥಿಕ ನೆರವು ನೀಡುವ ಕ್ರಮವು ಇತರ ಗ್ರಾಮ ಪಂಚಾಯಿತಿಗಳಿಗೂ ಮಾದರಿಯಾಗಬಹುದು ಎಂಬ ಅಭಿಪ್ರಾಯ ಕೇಳಿಬಂದಿದೆ.
ಸ್ಥಳೀಯ ಆಡಳಿತ ಸಂಸ್ಥೆಗಳು ಇಂತಹ ಸಕಾರಾತ್ಮಕ ಯೋಜನೆಗಳನ್ನು ರೂಪಿಸುವುದರಿಂದ ಹೆಣ್ಣು ಮಕ್ಕಳ ಜನನದ ಬಗ್ಗೆ ಸಮಾಜದಲ್ಲಿರುವ ದೃಷ್ಟಿಕೋನದಲ್ಲಿ ಬದಲಾವಣೆ ತರಲು ಸಾಧ್ಯವಾಗಲಿದೆ. ಜೊತೆಗೆ, ಬಾಲಕಿಯರ ಶಿಕ್ಷಣ ಮತ್ತು ಭವಿಷ್ಯದ ಅಗತ್ಯಗಳಿಗಾಗಿ ಆರಂಭಿಕ ಹಂತದಲ್ಲೇ ಉಳಿತಾಯ ಮಾಡುವ ಅಭ್ಯಾಸವೂ ಕುಟುಂಬಗಳಲ್ಲಿ ಬೆಳೆಯಲಿದೆ.
ಕಮತನೂರು ಗ್ರಾಮ ಪಂಚಾಯಿತಿಯ ₹5,000 ಹೆಣ್ಣು ಮಗು ಜನನ ಪ್ರೋತ್ಸಾಹ ಯೋಜನೆ ಗ್ರಾಮೀಣ ಪ್ರದೇಶದಲ್ಲಿ ಹೆಣ್ಣು ಮಕ್ಕಳ ಸಬಲೀಕರಣಕ್ಕೆ ಹೊಸ ಹೆಜ್ಜೆಯಾಗಿ ಗುರುತಿಸಿಕೊಂಡಿದ್ದು, ಈ ಮಾದರಿಯನ್ನು ಇತರ ಸ್ಥಳೀಯ ಸಂಸ್ಥೆಗಳೂ ಅಳವಡಿಸಿಕೊಳ್ಳುವ ನಿರೀಕ್ಷೆ ಮೂಡಿದೆ.
ದೇಶ
Mantralaya ದಲ್ಲಿ ಇಂದು ವಿಶೇಷ ದಿನ: ಗುರು ರಾಘವೇಂದ್ರ ಸ್ವಾಮಿಗಳ ವೃಂದಾವನಕ್ಕೆ ಮಹಾಪಂಚಾಮೃತ ಅಭಿಷೇಕ
ರಾಯಚೂರು: ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವವು Mantralaya ದಲ್ಲಿ ಶ್ರದ್ಧಾ ಭಕ್ತಿ ಹಾಗೂ ಸಂಭ್ರಮದಿಂದ ನಡೆಯುತ್ತಿದೆ. ರಾಯರು ಸಶರೀರರಾಗಿ ವೃಂದಾವನಸ್ಥರಾಗಿ 355 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಆರಾಧನಾ ಮಹೋತ್ಸವದ ಪ್ರಮುಖ ಘಟ್ಟವಾದ ಮಧ್ಯಾರಾಧನೆಯನ್ನು ಇಂದು ಅತ್ಯಂತ ವೈಭವದಿಂದ ಆಚರಿಸಲಾಗುತ್ತಿದೆ. ದೇಶದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಮಂತ್ರಾಲಯಕ್ಕೆ ಆಗಮಿಸಿ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ.
ವೃಂದಾವನಕ್ಕೆ ಮಹಾಪಂಚಾಮೃತ ಅಭಿಷೇಕ
ಮಧ್ಯಾರಾಧನೆಯ ದಿನ ರಾಯರ ವಿಶೇಷ ಅನುಗ್ರಹ ದೊರೆಯುತ್ತದೆ ಎಂಬ ಭಕ್ತರ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಗುರು ರಾಘವೇಂದ್ರ ಸ್ವಾಮಿಗಳ ವೃಂದಾವನಕ್ಕೆ ವಿಶೇಷ ಮಹಾಪಂಚಾಮೃತ ಅಭಿಷೇಕ ನೆರವೇರಿಸಲಿದ್ದಾರೆ.
ಪ್ರತಿನಿತ್ಯ ನಡೆಯುವ ಪಂಚಾಮೃತ ಅಭಿಷೇಕಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವಿವಿಧ ಪದಾರ್ಥಗಳನ್ನು ಬಳಸಿಕೊಂಡು ಈ ವಿಶೇಷ ಅಭಿಷೇಕ ನಡೆಯಲಿದೆ. ಹಾಲು, ಮೊಸರು, ತುಪ್ಪ, ಜೇನು, ಹಣ್ಣುಗಳು, ಗೋಡಂಬಿ, ಒಣದ್ರಾಕ್ಷಿ ಸೇರಿದಂತೆ ಹಲವು ಪದಾರ್ಥಗಳಿಂದ ವೃಂದಾವನದ ನಾಲ್ಕು ದಿಕ್ಕುಗಳಿಗೂ ಅಭಿಷೇಕ ಮಾಡಲಾಗುತ್ತದೆ.
ಅಭಿಷೇಕದ ಬಳಿಕ ಗುರು ರಾಘವೇಂದ್ರ ಸ್ವಾಮಿಗಳ ವೃಂದಾವನಕ್ಕೆ ಚಿನ್ನದ ಕವಚದೊಂದಿಗೆ ವಿಶೇಷ ಅಲಂಕಾರ ಪೂಜೆ ನಡೆಯಲಿದೆ. ಮಧ್ಯಾರಾಧನೆಯ ಅಂಗವಾಗಿ ಮಠದ ಪ್ರಾಕಾರದಲ್ಲಿ ಚಿನ್ನದ ರಥೋತ್ಸವವೂ ನಡೆಯಲಿದೆ.
ರಾಯರು ಇಂದಿಗೂ ವೃಂದಾವನದಲ್ಲಿದ್ದಾರೆ ಎಂಬ ನಂಬಿಕೆ
ಗುರು ರಾಘವೇಂದ್ರ ಸ್ವಾಮಿಗಳು ತಮ್ಮ ಯೋಗ ಸಾಮರ್ಥ್ಯದ ಮೂಲಕ ಇಂದಿಗೂ ವೃಂದಾವನದಲ್ಲಿ ಸಶರೀರರಾಗಿ ನೆಲೆಸಿದ್ದಾರೆ ಎಂಬುದು ಭಕ್ತರ ಬಲವಾದ ನಂಬಿಕೆಯಾಗಿದೆ. ಮಧ್ಯಾರಾಧನೆಯ ದಿನ ರಾಯರು ವಿಶೇಷವಾಗಿ ಭಕ್ತರನ್ನು ಅನುಗ್ರಹಿಸುತ್ತಾರೆ ಎಂಬ ಪ್ರತೀತಿಯೂ ಇದೆ.
ಈ ಕಾರಣದಿಂದಲೇ ಆರಾಧನಾ ಮಹೋತ್ಸವದ ಮೂರು ಪ್ರಮುಖ ದಿನಗಳಲ್ಲಿ ಮಧ್ಯಾರಾಧನೆಗೆ ವಿಶೇಷ ಮಹತ್ವ ನೀಡಲಾಗುತ್ತದೆ. ರಾಯರ ದರ್ಶನಕ್ಕಾಗಿ ಮಂತ್ರಾಲಯಕ್ಕೆ ಆಗಮಿಸಿರುವ ಭಕ್ತರು ವಿವಿಧ ಪೂಜೆ ಹಾಗೂ ಸೇವೆಗಳಲ್ಲಿ ಭಾಗವಹಿಸುತ್ತಿದ್ದಾರೆ.
ರಾತ್ರಿ ತೆಪ್ಪೋತ್ಸವ
ಮಧ್ಯಾರಾಧನೆಯ ಅಂಗವಾಗಿ ಮಂತ್ರಾಲಯದ ಪರಿಮಳ ತೀರ್ಥ ಪುಷ್ಕರಣಿಯಲ್ಲಿ ರಾತ್ರಿ ವೇಳೆ ತೆಪ್ಪೋತ್ಸವ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಲಿದ್ದಾರೆ.
ಮಠದ ವತಿಯಿಂದ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಹಲವು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ದೇಶದ ವಿವಿಧ ರಾಜ್ಯಗಳಿಂದ ಭಕ್ತರು ಹಾಗೂ ಗಣ್ಯರು ಮಂತ್ರಾಲಯಕ್ಕೆ ಆಗಮಿಸಿ ರಾಯರ ದರ್ಶನ ಪಡೆಯುತ್ತಿದ್ದಾರೆ.
ಆಗಸ್ಟ್ 31ರಂದು ಮಹಾರಥೋತ್ಸವ
ಮಧ್ಯಾರಾಧನೆಯ ಬಳಿಕ ಆಗಸ್ಟ್ 31ರಂದು ಉತ್ತರಾರಾಧನೆ ನಡೆಯಲಿದೆ. ಉತ್ತರಾರಾಧನೆಯ ಅಂಗವಾಗಿ ಮಂತ್ರಾಲಯದ ರಾಜಬೀದಿಯಲ್ಲಿ ಭವ್ಯ ಮಹಾರಥೋತ್ಸವ ಆಯೋಜಿಸಲಾಗಿದೆ.
ಉತ್ತರಾರಾಧನೆಯೊಂದಿಗೆ ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಪ್ರಮುಖ ಮೂರು ದಿನಗಳ ಕಾರ್ಯಕ್ರಮಗಳು ಮುಕ್ತಾಯಗೊಳ್ಳಲಿವೆ. ಆದರೆ ಮಠದಲ್ಲಿ ನಡೆಯುತ್ತಿರುವ ಸಪ್ತರಾತ್ರೋತ್ಸವದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸೆಪ್ಟೆಂಬರ್ 2ರವರೆಗೆ ಮುಂದುವರಿಯಲಿವೆ.
ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂತ್ರಾಲಯವು ಭಕ್ತರಿಂದ ಕಳೆಗಟ್ಟಿದ್ದು, ವಿಶೇಷ ಪೂಜೆ, ಅಭಿಷೇಕ, ರಥೋತ್ಸವ ಮತ್ತು ತೆಪ್ಪೋತ್ಸವ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ಭಕ್ತರ ಗಮನ ಸೆಳೆಯುತ್ತಿವೆ.
-
ದೇಶ16 ಗಂಟೆಗಳು agoRewa Hospital ‘ಇಲ್ಲಿ ಡೆಲಿವರಿ ಮಾಡಿಸಬೇಡಿ’ ಎಂದ ಯುವತಿ: ಹೆರಿಗೆ ಬಳಿಕ ತಾಯಿ-ಮಗು ದಾರುಣ ಸಾವು
-
ರಾಜ್ಯ16 ಗಂಟೆಗಳು agoST Leaders ನ್ನೇ ಗುರಿಯಾಗಿಸಲಾಗುತ್ತಿದೆ: B Nagendra ರಾಜೀನಾಮೆ ಕುರಿತು K N Rajanna ಸ್ಫೋಟಕ ಹೇಳಿಕೆ
-
ರಾಜ್ಯ24 ಗಂಟೆಗಳು agoB Nagendra ರಾಜೀನಾಮೆ: ಡಿಕೆ ಶಿವಕುಮಾರ್ ಹೇಳಿದ್ದೇನು? ಬಿಜೆಪಿ ವಿರುದ್ಧ ಸಿಎಂ ಗರಂ, ‘ನಾಗೇಂದ್ರ ನಿರಪರಾಧಿ’ ಎಂದ ಡಿಸಿಎಂ
-
ಬೆಂಗಳೂರು23 ಗಂಟೆಗಳು agoBengaluru ನಲ್ಲಿ ಕುಡಿದು ನೀರಿನ ಟ್ಯಾಂಕರ್ ಚಲಾಯಿಸುತ್ತಿದ್ದ 40 ಚಾಲಕರ ಬಂಧನ; ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಅಲರ್ಟ್!
-
ದೇಶ23 ಗಂಟೆಗಳು agoNepal-Tibet ಪ್ರವಾಹದ ಭೀಕರ ದೃಶ್ಯ ಚೀನಾದಲ್ಲಿ ಕಾಣೆಯಾಗಿದ್ದೇಕೆ? ವೈರಲ್ ವಿಡಿಯೋಗೆ ಸೆನ್ಸಾರ್!
-
ದೇಶ16 ಗಂಟೆಗಳು agoNepal ದಲ್ಲಿ ಪ್ರವಾಹದ ಆರ್ಭಟ: ತೇಲಿಬಂದ Bank ಲಾಕರ್ ಒಡೆದು ಲಕ್ಷಾಂತರ ರೂಪಾಯಿ ಕಳವು
-
ರಾಜಕೀಯ23 ಗಂಟೆಗಳು agoRamakrishna Hegde ಜನ್ಮಶತಮಾನೋತ್ಸವ: ಬಿಜೆಪಿ ಗೆಲುವನ್ನು ಮೊದಲೇ ಊಹಿಸಿದ್ದ ಕರ್ನಾಟಕದ ಧೀಮಂತ ನಾಯಕ!
-
ಬೆಂಗಳೂರು5 ಗಂಟೆಗಳು agoGruha Lakshmi ಯೋಜನೆ: ಫಲಾನುಭವಿಗಳಿಗೆ ಹೊಸ ನಿಯಮ, ಆಗಸ್ಟ್ 30ರಿಂದ ಬಯೋಮೆಟ್ರಿಕ್ ಪರಿಶೀಲನೆ
