Connect with us

ದೇಶ

ಬೆಂಗಳೂರಿನಲ್ಲಿ ವಾಯುಮಾಲಿನ್ಯ ಏರಿಕೆ: 85 ಮೆಟ್ರೋ ನಿಲ್ದಾಣಗಳಲ್ಲಿ ಸೆನ್ಸರ್ ಅಳವಡಿಕೆ, AQI ಕುಸಿತದ ಕಾರಣ ಪತ್ತೆಗೆ ಕ್ರಮ

Published

on

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ (Air Pollution) ಪ್ರಮಾಣ ಹೆಚ್ಚಾಗುತ್ತಿದ್ದು, ಶುದ್ಧ ಗಾಳಿಯ ಸೂಚ್ಯಂಕದಲ್ಲಿ (AQI) ನಿರಂತರ ಕುಸಿತ ಕಂಡುಬರುತ್ತಿದೆ. ಗಾಳಿಯ ಗುಣಮಟ್ಟ ಏಕೆ ಹದಗೆಡುತ್ತಿದೆ? ಯಾವ ಭಾಗಗಳಲ್ಲಿ ವಾಯುಮಾಲಿನ್ಯ ಅಧಿಕವಾಗಿದೆ? ಎಂಬುದನ್ನು ಪತ್ತೆಹಚ್ಚಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಮಹತ್ವದ ಕ್ರಮಕ್ಕೆ ಮುಂದಾಗಿದೆ.

ನಗರದ ವಿವಿಧ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಸೆನ್ಸರ್‌ಗಳನ್ನು (Air Quality Sensors) ಅಳವಡಿಸಲು ಯೋಜನೆ ರೂಪಿಸಲಾಗಿದೆ. ಇದರ ಭಾಗವಾಗಿ 85 ಮೆಟ್ರೋ ನಿಲ್ದಾಣಗಳು, 55 ಬಿಎಂಟಿಸಿ ಟಿಟಿಎಂಸಿ ಕಟ್ಟಡಗಳು, ಪ್ರಮುಖ ರಸ್ತೆ, ಕೈಗಾರಿಕಾ ಪ್ರದೇಶಗಳು ಹಾಗೂ ಫ್ಯಾಕ್ಟರಿಗಳಿರುವ ಏರಿಯಾಗಳಲ್ಲಿ ಸೆನ್ಸರ್ ಅಳವಡಿಸಲಾಗುತ್ತದೆ.

ವಾಯು ಗುಣಮಟ್ಟ ಕುಸಿತಕ್ಕೆ ಟ್ರಾಫಿಕ್ ದಟ್ಟಣೆ, ಕಟ್ಟಡ ನಿರ್ಮಾಣದ ಅವಶೇಷಗಳು, ಕೈಗಾರಿಕಾ ಧೂಳು ಅಥವಾ ಇತರೆ ಕಾರಣಗಳೇ ಕಾರಣವೇ ಎಂಬುದನ್ನು ವೈಜ್ಞಾನಿಕವಾಗಿ ಗುರುತಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಸಂಗ್ರಹವಾಗುವ ಡೇಟಾ ಆಧರಿಸಿ ಮುಂದಿನ ದಿನಗಳಲ್ಲಿ ಮಾಲಿನ್ಯ ನಿಯಂತ್ರಣ ಕ್ರಮಗಳನ್ನು ಜಾರಿಗೆ ತರಲಾಗುತ್ತದೆ.

ಪರಿಸರ ತಜ್ಞರ ಪ್ರಕಾರ AQI 0–50 ಇದ್ದರೆ ಉತ್ತಮ ವಾತಾವರಣ ಎಂದು ಪರಿಗಣಿಸಲಾಗುತ್ತದೆ. ಆದರೆ ಬೆಂಗಳೂರಿನ ಹಲವಾರು ಭಾಗಗಳಲ್ಲಿ ವಾಯುಮಾಲಿನ್ಯ ಪ್ರಮಾಣ 100 ದಾಟಿರುವುದು ಆತಂಕಕ್ಕೆ ಕಾರಣವಾಗಿದೆ.

ಹೆಬ್ಬಾಳ, ಜಯನಗರ, ನಿಮ್ಹಾನ್ಸ್, ಸೆಂಟ್ರಲ್ ಸಿಲ್ಕ್ ಬೋರ್ಡ್, ಸಿಟಿ ರೈಲ್ವೇ ನಿಲ್ದಾಣ, ಬಸವೇಶ್ವರ ನಗರ, ಜಿಗಣಿ, ಕಸ್ತೂರಿನಗರ ಹಾಗೂ ಪೀಣ್ಯ ಭಾಗಗಳಲ್ಲಿ ಗಾಳಿಯ ಗುಣಮಟ್ಟ ಕುಸಿತ ಕಂಡುಬಂದಿದೆ. ಇದರಿಂದ ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಭೀತಿ ಹೆಚ್ಚಾಗಿದೆ.

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ರಾಜ್ಯ

CM D K Shiv Kumar ಮತ್ತೆ ದೆಹಲಿಗೆ; ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಜೊತೆ ಮಹತ್ವದ ಚರ್ಚೆ

Published

on

ಬೆಂಗಳೂರು: CM D K Shiv Kumar ಅವರು ಗುರುವಾರವಷ್ಟೇ ದೆಹಲಿಗೆ ತೆರಳಿ ಬೆಂಗಳೂರಿಗೆ ವಾಪಸಾಗಿದ್ದರೂ, ಇದೀಗ ಮತ್ತೆ ಭಾನುವಾರ ದೆಹಲಿಗೆ ತೆರಳಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯಿಂದ ತೆರವಾಗಿರುವ ಸಚಿವ ಸ್ಥಾನ ಸೇರಿದಂತೆ ಸಂಪುಟಕ್ಕೆ ಸಂಬಂಧಿಸಿದ ಪ್ರಮುಖ ವಿಚಾರಗಳ ಕುರಿತು ಕಾಂಗ್ರೆಸ್‌ ಹೈಕಮಾಂಡ್‌ ನಾಯಕರೊಂದಿಗೆ ಚರ್ಚೆ ನಡೆಸಲು ಅವರು ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಡಿ.ಕೆ. ಶಿವಕುಮಾರ್‌ ಅವರು ಭಾನುವಾರ ತಡರಾತ್ರಿ ಹೈಕಮಾಂಡ್‌ ನಾಯಕರೊಂದಿಗೆ ಮಾತುಕತೆ ನಡೆಸಿ, ಸೋಮವಾರ ಬೆಳಗ್ಗೆ ಬೆಂಗಳೂರಿಗೆ ವಾಪಸಾಗುವ ಸಾಧ್ಯತೆ ಇದೆ.

ಅನ್ನಪೂರ್ಣ ತುಕಾರಾಂಗೆ ಸಚಿವ ಸ್ಥಾನ?

ನಾಗೇಂದ್ರ ಅವರಿಂದ ತೆರವಾಗಿರುವ ಸಚಿವ ಸ್ಥಾನವನ್ನು ಅದೇ ಜಿಲ್ಲೆಯ ಹಾಗೂ ಅದೇ ಸಮುದಾಯಕ್ಕೆ ಸೇರಿದ ಅನ್ನಪೂರ್ಣ ತುಕಾರಾಂ ಅವರಿಗೆ ನೀಡುವ ಕುರಿತು ಚರ್ಚೆಗಳು ನಡೆದಿವೆ ಎನ್ನಲಾಗಿದೆ. ಈ ಹಿಂದೆ ಕೂಡ ಅನ್ನಪೂರ್ಣ ಅವರ ಹೆಸರು ಸಚಿವ ಸ್ಥಾನಕ್ಕೆ ಕೇಳಿಬಂದಿದ್ದು, ಇದೀಗ ಡಿ.ಕೆ. ಶಿವಕುಮಾರ್‌ ಅವರ ದೆಹಲಿ ಭೇಟಿಯ ಹಿನ್ನೆಲೆಯಲ್ಲಿ ಈ ಚರ್ಚೆ ಮತ್ತಷ್ಟು ಬಲಗೊಂಡಿದೆ.

ಆದರೆ ಮತ್ತೊಂದು ಸಚಿವ ಸ್ಥಾನವನ್ನು ಯಾರಿಗೆ ನೀಡಬೇಕು ಎಂಬುದರ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ ಎನ್ನಲಾಗುತ್ತಿದೆ. ಈ ಸ್ಥಾನಕ್ಕಾಗಿ ಹಲವು ಹಿರಿಯ ಶಾಸಕರು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್‌ ವಲಯದ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಆಪ್ತರಿಗೆ ಸ್ಥಾನ ನೀಡಲು ಒತ್ತಡ?

ಎರಡನೇ ಸಚಿವ ಸ್ಥಾನಕ್ಕೆ ತಮ್ಮ ಆಪ್ತ ಬಸವರಾಜ್ ಶಿವಣ್ಣನವರ್ ಅವರ ಹೆಸರನ್ನು ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಶಿವಣ್ಣನವರ್ ಅವರ ಹೆಸರನ್ನು ಪರಿಗಣಿಸಿರಲಿಲ್ಲ. ಇದರಿಂದ ಅವರು ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್‌ ವಲಯದಲ್ಲಿ ಕೇಳಿಬರುತ್ತಿವೆ. ಹೀಗಾಗಿ ಈ ಬಾರಿ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.

ಕಾನೂನು ತಜ್ಞರೊಂದಿಗೆ ಡಿಕೆಶಿ ಸಭೆ

ದೆಹಲಿಗೆ ತೆರಳಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಕೇವಲ ಪಕ್ಷದ ರಾಜಕೀಯ ವಿಚಾರಗಳ ಬಗ್ಗೆ ಮಾತ್ರ ಚರ್ಚೆ ನಡೆಸುತ್ತಿಲ್ಲ ಎನ್ನಲಾಗಿದೆ. ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡುವ ಮುನ್ನ ಅವರು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿಯಿರುವ ರಾಜ್ಯದ ವಿವಿಧ ಪ್ರಕರಣಗಳ ಕುರಿತು ಕಾನೂನು ತಜ್ಞರೊಂದಿಗೆ ಸಭೆ ನಡೆಸಿದ್ದಾರೆ.

ಕರ್ನಾಟಕಕ್ಕೆ ಸಂಬಂಧಿಸಿದ ಪ್ರಕರಣಗಳ ಶೀಘ್ರ ವಿಲೇವಾರಿ ಹಾಗೂ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಗಳ ಕುರಿತು ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೀಗಾಗಿ ಡಿ.ಕೆ. ಶಿವಕುಮಾರ್‌ ಅವರ ದಿಢೀರ್‌ ದೆಹಲಿ ಪ್ರವಾಸವು ಇದೀಗ ರಾಜ್ಯ ರಾಜಕಾರಣದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ನಾಗೇಂದ್ರ ಅವರಿಂದ ತೆರವಾಗಿರುವ ಸ್ಥಾನಕ್ಕೆ ಅನ್ನಪೂರ್ಣ ತುಕಾರಾಂ ಅವರೇ ಆಯ್ಕೆಯಾಗಲಿದ್ದಾರೆಯೇ ಅಥವಾ ಕಾಂಗ್ರೆಸ್‌ ಹೈಕಮಾಂಡ್‌ ಬೇರೆ ಅಭ್ಯರ್ಥಿಗೆ ಅವಕಾಶ ನೀಡಲಿದೆಯೇ ಎಂಬುದು ಕುತೂಹಲ ಮೂಡಿಸಿದೆ.

Continue Reading

ರಾಜ್ಯ

Sandur ಗೆ ಮತ್ತೆ ಸಚಿವ ಸ್ಥಾನ ಸಿಗುತ್ತಾ? ಅನ್ನಪೂರ್ಣಗೆ ಒಲಿಯಲಿದೆಯೇ ಕಾಂಗ್ರೆಸ್‌ ಮಣೆ?

Published

on

ಸಂಡೂರು: ವಿಜಯನಗರ ಜಿಲ್ಲೆಯ ಏಕೈಕ ಮಹಿಳಾ Sandur MLA Annapurna ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿದೆಯೇ ಎಂಬ ಚರ್ಚೆ ಇದೀಗ ರಾಜಕೀಯ ವಲಯದಲ್ಲಿ ಮುನ್ನೆಲೆಗೆ ಬಂದಿದೆ. ಮಾಜಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಳಿಕ ತೆರವಾಗಿರುವ ಸಚಿವ ಸ್ಥಾನಕ್ಕೆ ಅನ್ನಪೂರ್ಣ ಅವರ ಹೆಸರು ಕೇಳಿಬರುತ್ತಿರುವುದು ಸಂಡೂರು ಕಾಂಗ್ರೆಸ್‌ ವಲಯದಲ್ಲಿ ಕುತೂಹಲ ಮೂಡಿಸಿದೆ.

ಅನ್ನಪೂರ್ಣ ಅವರು ಸಂಡೂರು ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. ಅವರ ಪತಿ ಹಾಗೂ ಮಾಜಿ ಶಾಸಕ ಈ. ತುಕಾರಾಂ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸಲುವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಉಪಚುನಾವಣೆ ನಡೆದಿತ್ತು.

ಸಂಡೂರಿಗೆ ಸಚಿವ ಸ್ಥಾನ ಹೊಸದಲ್ಲ

ಸಂಡೂರು ಕ್ಷೇತ್ರಕ್ಕೆ ಸಚಿವ ಸ್ಥಾನ ದೊರೆಯುತ್ತಿರುವುದು ಇದೇ ಮೊದಲೇನಲ್ಲ. ಕ್ಷೇತ್ರದಿಂದ ಸತತ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ದಿ. ಎಂ.ವೈ. ಘೋರ್ಪಡೆ ಅವರು ರಾಜ್ಯದ ಹಣಕಾಸು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾಗಿ ಮೂರು ಅವಧಿ ಕಾರ್ಯನಿರ್ವಹಿಸಿದ್ದರು.

ಇದೇ ಕ್ಷೇತ್ರದಿಂದ ಆಯ್ಕೆಯಾಗಿದ್ದ ಸಂತೋಷ್‌ ಲಾಡ್‌ ಅವರು 2006-07ರ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದರು. 2018ರ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಈ. ತುಕಾರಾಮ್‌ ಅವರು ಅಲ್ಪಾವಧಿಗೆ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದರು.

ತುಕಾರಾಮ್‌ಗೆ ಕೈತಪ್ಪಿದ್ದ ಸಚಿವ ಸ್ಥಾನ

ಈ. ತುಕಾರಾಮ್‌ ಅವರು ಸಂಡೂರು ಕ್ಷೇತ್ರದಿಂದ ಸತತ ನಾಲ್ಕು ಬಾರಿ ಕಾಂಗ್ರೆಸ್‌ ಶಾಸಕರಾಗಿ ಆಯ್ಕೆಯಾಗಿದ್ದರು. ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸಲುವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಂಸದರಾದರು.

ಆ ಸಂದರ್ಭದಲ್ಲಿ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳಿದ್ದರೂ, ಕಾಂಗ್ರೆಸ್‌ ಹೈಕಮಾಂಡ್‌ ಹಾಗೂ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒತ್ತಾಸೆಯ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದರು ಎಂಬ ಮಾತು ಕಾಂಗ್ರೆಸ್‌ ವಲಯದಲ್ಲಿ ಕೇಳಿಬರುತ್ತಿದೆ.

ನಂತರ ನಡೆದ ಸಂಡೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ತುಕಾರಾಮ್‌ ಅವರ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್‌ ನೀಡಿತ್ತು. ಅವರು ಗೆಲುವು ಸಾಧಿಸಿ ವಿಧಾನಸಭೆ ಪ್ರವೇಶಿಸಿದ್ದರು.

ನಾಗೇಂದ್ರ ರಾಜೀನಾಮೆ ಬಳಿಕ ಹೆಚ್ಚಿದ ಚರ್ಚೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣದ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ಒತ್ತಡ ಹೆಚ್ಚಾದ ಬಳಿಕ ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ತೆರವಾಗಿರುವ ಸಚಿವ ಸ್ಥಾನ ಯಾರಿಗೆ ಸಿಗಲಿದೆ ಎಂಬ ಚರ್ಚೆ ಮತ್ತೆ ಗರಿಗೆದರಿದೆ.

ಇದರ ನಡುವೆ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ಇಲ್ಲ ಎಂಬ ಪ್ರತಿಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಪುಟಕ್ಕೆ ಮಹಿಳೆಯೊಬ್ಬರನ್ನು ಸೇರಿಸುವ ಸಾಧ್ಯತೆಯ ಬಗ್ಗೆ ಸುಳಿವು ನೀಡಿದ್ದರು. ಇದರಿಂದ ಜಿಲ್ಲೆಯ ಏಕೈಕ ಮಹಿಳಾ ಶಾಸಕಿ ಅನ್ನಪೂರ್ಣ ಅವರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಮತ್ತಷ್ಟು ಬಲವಾಗಿದೆ.

ಪಕ್ಷ ಸಂಘಟನೆಗೂ ಅನುಕೂಲ?

ಅನ್ನಪೂರ್ಣ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ರಾಜಕೀಯವಾಗಿ ಅನುಕೂಲವಾಗಬಹುದು ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ನಂದಿಹಳ್ಳಿ ಎನ್.ಕೆ.ಎಸ್. ಮಂಜುನಾಥ ಅವರು, ಸಂಡೂರು ಕ್ಷೇತ್ರದ ಮೊದಲ ಹಾಗೂ ಜಿಲ್ಲೆಯ ಏಕೈಕ ಮಹಿಳಾ ಶಾಸಕಿ ಅನ್ನಪೂರ್ಣ ಅವರನ್ನು ಗುರುತಿಸಿ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಸದ್ಯ ಅನ್ನಪೂರ್ಣ ಅವರಿಗೆ ಸಚಿವ ಸ್ಥಾನ ಸಿಗುತ್ತದೆಯೇ ಎಂಬುದು ಕಾಂಗ್ರೆಸ್‌ ಹೈಕಮಾಂಡ್‌ ಹಾಗೂ ರಾಜ್ಯ ನಾಯಕತ್ವದ ನಿರ್ಧಾರವನ್ನು ಅವಲಂಬಿಸಿದೆ. ಆದರೆ ನಾಗೇಂದ್ರ ರಾಜೀನಾಮೆ ಬಳಿಕ ಸಂಡೂರು ಕ್ಷೇತ್ರದಲ್ಲಿ ಸಚಿವ ಸ್ಥಾನದ ಚರ್ಚೆ ಮಾತ್ರ ಜೋರಾಗಿದೆ.

Continue Reading

ದೇಶ

Hindu Dharma ಬಗ್ಗೆ ಮೋಹನ್ ಭಾಗವತ್ ಮಹತ್ವದ ಹೇಳಿಕೆ; ಟೊರೊಂಟೊದಲ್ಲಿ ಏನಂದ್ರು?

Published

on

ಟೊರೊಂಟೊ, ಆಗಸ್ಟ್ 31: Hindu Dharma ವು ಸಮಾಜವನ್ನು ವಿಭಜಿಸುವ ಶಕ್ತಿಯಲ್ಲ, ಬದಲಿಗೆ ಇಡೀ ಜಗತ್ತನ್ನು ಒಗ್ಗೂಡಿಸುವ ತತ್ವವಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.

ಕೆನಡಾದ ಟೊರೊಂಟೊದಲ್ಲಿ ‘ಕೆನಡಿಯನ್ ಹಿಂದೂಸ್ ಫಾರ್ ಔಟ್ರೀಚ್, ರಿಲೇಶನ್ಸ್ ಅಂಡ್ ಡೈಲಾಗ್’ (CHORD) ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ಭಾರತೀಯ ಪರಂಪರೆಯಲ್ಲಿರುವ ಸಹಬಾಳ್ವೆ, ವೈವಿಧ್ಯತೆ ಮತ್ತು ಮಾನವೀಯತೆಯ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಭಾರತೀಯ ಸಂಸ್ಕೃತಿಯಲ್ಲಿ ಇತರರಿಗೆ ಸಹಾಯ ಮಾಡುವುದು ಹಾಗೂ ಇಡೀ ಜಗತ್ತನ್ನು ಒಂದು ಕುಟುಂಬವೆಂದು ಪರಿಗಣಿಸುವ ಗುಣ ಬೇರೂರಿದೆ ಎಂದು ಭಾಗವತ್ ಹೇಳಿದರು.

ಹಿಂದೂ ಎಂಬುದು ಸೀಮಿತ ಪರಿಕಲ್ಪನೆಯಲ್ಲ

‘ಹಿಂದೂ’ ಎಂಬ ಪದವನ್ನು ಕೇವಲ ನಿರ್ದಿಷ್ಟ ಭಾಷೆ, ಪೂಜಾ ಪದ್ಧತಿ ಅಥವಾ ಜೀವನಶೈಲಿಗೆ ಸೀಮಿತಗೊಳಿಸಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಹಿಂದೂ ತತ್ವಜ್ಞಾನವು ಸಮಾಜದಲ್ಲಿರುವ ವಿವಿಧ ರೀತಿಯ ನಂಬಿಕೆಗಳು, ಆಚರಣೆಗಳು ಮತ್ತು ವೈವಿಧ್ಯತೆಗಳನ್ನು ಗೌರವಿಸಿ ಸ್ವೀಕರಿಸುತ್ತದೆ ಎಂದರು.

ಸಮಾಜದಲ್ಲಿ ನೂರಾರು ಭಾಷೆಗಳು, ಜಾತಿಗಳು ಮತ್ತು ಧರ್ಮಗಳು ಇರುವುದು ಸಹಜ. ಆದರೆ ಈ ಎಲ್ಲ ವೈವಿಧ್ಯತೆಯ ಹಿಂದೆ ಇರುವ ಆಂತರಿಕ ಏಕತೆಯೇ ಪ್ರಮುಖವಾದುದು ಎಂದು ಅವರು ವಿವರಿಸಿದರು.

ಆಕ್ರಮಣಕ್ಕಿಂತ ಜ್ಞಾನ ಹಂಚಿದ ಭಾರತ

ಭಾರತದ ಪೂರ್ವಜರು ಮೆಕ್ಸಿಕೋದಿಂದ ಸೈಬೀರಿಯಾವರೆಗೆ ಹಾಗೂ ಹಿಮಾಲಯದಿಂದ ಆಗ್ನೇಯ ಏಷ್ಯಾದವರೆಗೆ ಸಂಚರಿಸಿದ್ದರೂ, ಯಾವುದೇ ಪ್ರದೇಶವನ್ನು ವಶಪಡಿಸಿಕೊಳ್ಳುವ ಉದ್ದೇಶ ಹೊಂದಿರಲಿಲ್ಲ ಎಂದು ಭಾಗವತ್ ಹೇಳಿದರು.

ಬದಲಿಗೆ ಭಾರತವು ಆಯುರ್ವೇದ, ಖಗೋಳಶಾಸ್ತ್ರ ಮತ್ತು ನಾಗರಿಕತೆಯ ಜ್ಞಾನವನ್ನು ಜಗತ್ತಿನ ವಿವಿಧ ಭಾಗಗಳಿಗೆ ಹಂಚಿಕೊಂಡಿದೆ ಎಂದು ಅವರು ತಿಳಿಸಿದರು.

ನಿರಾಶ್ರಿತರಿಗೆ ಭಾರತ ಆಶ್ರಯ

ಭಾರತವು ಸಂಕಷ್ಟದಲ್ಲಿರುವವರಿಗೆ ಆಶ್ರಯ ನೀಡಿದ ಹಲವು ಐತಿಹಾಸಿಕ ಉದಾಹರಣೆಗಳಿವೆ ಎಂದು ಭಾಗವತ್ ಹೇಳಿದರು. ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಪೋಲಿಷ್ ನಿರಾಶ್ರಿತರಿಗೆ ಜಾಮ್‌ನಗರದ ಮಹಾರಾಜರು ಆಶ್ರಯ ನೀಡಿದ ಘಟನೆಯನ್ನು ಅವರು ಸ್ಮರಿಸಿದರು.

ಪಾರ್ಸಿಗಳು, ಯಹೂದಿಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರಿಗೆ ಭಾರತ ಸುರಕ್ಷಿತ ನೆಲೆಯಾಗಿ ಉಳಿದಿದೆ ಎಂದರು.

ಸಂಕಷ್ಟದಲ್ಲೂ ನೆರವಿನ ಹಸ್ತ

ವಿಶ್ವದ ಯಾವುದೇ ಭಾಗದಲ್ಲಿ ಬಿಕ್ಕಟ್ಟು ಎದುರಾದಾಗ ಭಾರತ ಮಾನವೀಯ ನೆಲೆಯಲ್ಲಿ ನೆರವಿಗೆ ಧಾವಿಸುತ್ತದೆ ಎಂದು ಭಾಗವತ್ ಹೇಳಿದರು. ಇತ್ತೀಚಿನ ಯುದ್ಧಪೀಡಿತ ಪ್ರದೇಶಗಳಿಂದ ಭಾರತೀಯರ ಜೊತೆಗೆ ಏಳುಕ್ಕೂ ಹೆಚ್ಚು ದೇಶಗಳ ವಿದೇಶಿ ಪ್ರಜೆಗಳನ್ನು ಕೂಡ ರಕ್ಷಿಸಿರುವುದು ಭಾರತದ ಮಾನವೀಯ ದೃಷ್ಟಿಕೋನಕ್ಕೆ ಉದಾಹರಣೆ ಎಂದು ಅವರು ತಿಳಿಸಿದರು.

ಭಾರತೀಯ ಸಂಸ್ಕೃತಿಯ ಮೂಲತತ್ವವು ಸಹಬಾಳ್ವೆ, ವೈವಿಧ್ಯತೆಯ ಗೌರವ ಮತ್ತು ಮಾನವೀಯ ನೆರವಿನಲ್ಲಿದೆ ಎಂಬ ಸಂದೇಶವನ್ನು ಮೋಹನ್ ಭಾಗವತ್ ತಮ್ಮ ಭಾಷಣದಲ್ಲಿ ಒತ್ತಿ ಹೇಳಿದರು.

Continue Reading

Trending