Connect with us

ದೇಶ

₹23 ಲಕ್ಷ UPI ಲೂಟಿ ಪ್ರಕರಣ: PayCM ಸರ್ಕಾರ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ

Published

on

ಬೆಂಗಳೂರು: ಇತ್ತೀಚೆಗೆ ಬಿಎಂಟಿಸಿ (BMTC) ಬಸ್‌ಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಜಾರಿಗೆ ತರಲಾಗಿದ್ದ UPI ಪಾವತಿ ವ್ಯವಸ್ಥೆ ದುರುಪಯೋಗವಾಗಿದ್ದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ಇದೀಗ ರಾಜಧಾನಿಯ ಸರ್ಕಾರಿ ಆಸ್ಪತ್ರೆಗಳಲ್ಲೂ ಇದೇ ಮಾದರಿಯ ಭಾರೀ ಹಗರಣ ಬಯಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದ UPI ಸ್ಕ್ಯಾನರ್‌ ಸ್ಕ್ಯಾಮ್‌ ಕುರಿತು ವಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ತಮ್ಮ ಅಧಿಕೃತ X ಖಾತೆಯ ಮೂಲಕ ಪ್ರತಿಕ್ರಿಯಿಸಿದ ಆರ್. ಅಶೋಕ್, “ಕಾಂಗ್ರೆಸ್ ಸರ್ಕಾರ ನಿಜವಾದ, ಅಸಲಿ PayCM ಸರ್ಕಾರ ಎನ್ನುವುದಕ್ಕೆ ವಿಕ್ಟೋರಿಯಾ ಆಸ್ಪತ್ರೆಯ ಲೂಟಿಯೇ ಸಾಕ್ಷಿ” ಎಂದು ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಂದ ಹಿಡಿದು ಸಚಿವರು, ಅಧಿಕಾರಿಗಳು ತನಕ ಭ್ರಷ್ಟಾಚಾರದಲ್ಲಿ ಮುಳುಗಿರುವಾಗ ಸಾಮಾನ್ಯ ಸಿಬ್ಬಂದಿಗಳು ಸುಮ್ಮನಿರುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆಸ್ಪತ್ರೆಯ ಅಧಿಕೃತ UPI ಸ್ಕ್ಯಾನರ್‌ಗಳನ್ನು ತೆಗೆದು ಹಾಕಿ, ತಮ್ಮ ವೈಯಕ್ತಿಕ ಬ್ಯಾಂಕ್ ಖಾತೆಯ ಸ್ಕ್ಯಾನರ್‌ಗಳನ್ನು ಅಳವಡಿಸಿ ಬಡ ರೋಗಿಗಳಿಂದ ಸುಮಾರು ₹23 ಲಕ್ಷ ಹಣ ಲೂಟಿ ಮಾಡಲಾಗಿದೆ ಎಂದು ಅಶೋಕ್ ಆರೋಪಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನಿರ್ನಾಮವಾಗಲಿದೆ ಎಂಬ ಭಯದಿಂದ ಸಚಿವರು, ಶಾಸಕರು ನಿರ್ಲಜ್ಜವಾಗಿ ಲೂಟಿಯಲ್ಲಿ ತೊಡಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಆರೋಪಗಳ ಪ್ರಕಾರ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳ ಅನುಕೂಲಕ್ಕಾಗಿ ಅಳವಡಿಸಿದ್ದ ಅಧಿಕೃತ UPI ಡಿಜಿಟಲ್ ಪಾವತಿ ವ್ಯವಸ್ಥೆಯ ಬದಲು ಎಂಟು ಮಂದಿ ಸಿಬ್ಬಂದಿಗಳು ತಮ್ಮ ವೈಯಕ್ತಿಕ ಸ್ಕ್ಯಾನರ್‌ಗಳನ್ನು ಬಳಸಿಕೊಂಡಿದ್ದಾರೆ. ಲ್ಯಾಬ್ ಪರೀಕ್ಷೆ, OPD ಶುಲ್ಕ, ಎಕ್ಸ್‌ರೇ ಸೇರಿದಂತೆ ವಿವಿಧ ವೈದ್ಯಕೀಯ ಸೇವೆಗಳ ಹಣ ಸರ್ಕಾರದ ಬೊಕ್ಕಸ ಸೇರಬೇಕಿದ್ದರೂ, ಸಿಬ್ಬಂದಿಗಳ ವೈಯಕ್ತಿಕ ಖಾತೆಗೆ ಹಣ ವರ್ಗಾವಣೆಯಾಗಿತ್ತು.

ಡಿಜಿಟಲ್ ಪಾವತಿಗಳಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯ ಡಾ. ದೀಪಕ್ ಅನುಮಾನ ವ್ಯಕ್ತಪಡಿಸಿದ್ದು, ಆಂತರಿಕ ತನಿಖೆಯಲ್ಲಿ ಹಗರಣ ಬೆಳಕಿಗೆ ಬಂದಿದೆ. ಈ ಕುರಿತು ವೈದ್ಯಕೀಯ ಅಧೀಕ್ಷಕರು ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರೀತಿ, ಸಲ್ಮಾ, ಎಸ್. ಪುನೀತಾ, ಶಶಿಕಲಾ, ಸತ್ಯಾ, ಲಕ್ಷ್ಮೀ ಕಾಂತಮ್ಮ, ದರ್ಶನ್ ಮತ್ತು ಮಹೇಂದ್ರ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ಸದ್ಯ ತನಿಖೆ ಮುಂದುವರಿದಿದೆ.

ಆರೋಗ್ಯ

ಹಣ್ಣುಗಳ ರಾಣಿ ಮ್ಯಾಂಗೋಸ್ಟೀನ್‌ನ ಆರೋಗ್ಯಕರ ಲಾಭಗಳು

Published

on

By

ಮ್ಯಾಂಗೋಸ್ಟೀನ್ ಹಣ್ಣು (Mangosteen) – ಆರೋಗ್ಯಕ್ಕೆ ಅಮೂಲ್ಯವಾದ ಉಷ್ಣವಲಯದ ಹಣ್ಣು
ಮ್ಯಾಂಗೋಸ್ಟೀನ್ ಹಣ್ಣಿನ ಪ್ರಮುಖ ಪ್ರಯೋಜನಗಳು:

  • ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ:
    ವಿಟಮಿನ್ C ಮತ್ತು ಶಕ್ತಿಶಾಲಿ ಆಂಟಿಆಕ್ಸಿಡೆಂಟ್‌ಗಳ ಸಮೃದ್ಧಿಯಿಂದ ದೇಹದ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ.
  • ಜೀರ್ಣಕ್ರಿಯೆಗೆ ಸಹಕಾರಿ:
    ನಾರಿನಂಶ ಹೆಚ್ಚಿರುವುದರಿಂದ ಮಲಬದ್ಧತೆ ಕಡಿಮೆ ಮಾಡಿ, ಜೀರ್ಣಾಂಗದ ಆರೋಗ್ಯವನ್ನು ಉತ್ತಮಗೊಳಿಸುತ್ತದೆ.
  • ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ನೆರವು:
    ನೈಸರ್ಗಿಕ ಸಂಯುಕ್ತಗಳು ಮತ್ತು ಫೈಬರ್ ರಕ್ತದ ಸಕ್ಕರೆ ಮಟ್ಟವನ್ನು ಸಮತೋಲನದಲ್ಲಿಡಲು ಸಹಾಯ ಮಾಡುತ್ತವೆ.
  • ಉರಿಯೂತ ಮತ್ತು ನೋವು ಕಡಿಮೆ ಮಾಡುತ್ತದೆ:
    ದೇಹದ ವಿವಿಧ ಭಾಗಗಳಲ್ಲಿ ಉಂಟಾಗುವ ಉರಿಯೂತ ಮತ್ತು ಊತವನ್ನು ತಗ್ಗಿಸಲು ನೆರವಾಗುತ್ತದೆ.
  • ಚರ್ಮದ ಆರೋಗ್ಯ ಕಾಪಾಡುತ್ತದೆ:
    ಚರ್ಮಕ್ಕೆ ಹೊಳಪು ನೀಡುವ ಜೊತೆಗೆ, ವಯಸ್ಸಾಗುವ ಲಕ್ಷಣಗಳನ್ನು ನಿಧಾನಗೊಳಿಸಲು ಸಹಕಾರಿ.
  • ಹೃದಯದ ಆರೋಗ್ಯಕ್ಕೆ ಒಳ್ಳೆಯದು:
    ರಕ್ತಸಂಚಾರವನ್ನು ಸುಧಾರಿಸಿ, ಹೃದಯದ ಕಾರ್ಯಕ್ಷಮತೆಯನ್ನು ಬೆಂಬಲಿಸುತ್ತದೆ.
  • ತೂಕ ನಿಯಂತ್ರಣಕ್ಕೆ ಸಹಾಯ:
    ಕಡಿಮೆ ಕ್ಯಾಲೊರಿ ಮತ್ತು ಹೆಚ್ಚು ನಾರಿನಂಶ ಹೊಂದಿರುವುದರಿಂದ ಹೊಟ್ಟೆ ತುಂಬಿದ ಅನುಭವ ನೀಡುತ್ತದೆ.
  • ದೇಹದ ದಣಿವು ಕಡಿಮೆ ಮಾಡುತ್ತದೆ:
    ನೈಸರ್ಗಿಕ ಪೋಷಕಾಂಶಗಳು ದೇಹಕ್ಕೆ ಚೈತನ್ಯ ಮತ್ತು ಶಕ್ತಿ ನೀಡುತ್ತವೆ.
    ತಿನ್ನುವ ವಿಧಾನ:
  • ಹಣ್ಣಿನ ದಪ್ಪ ನೇರಳೆ ಬಣ್ಣದ ಸಿಪ್ಪೆಯನ್ನು ಎಚ್ಚರಿಕೆಯಿಂದ ತೆಗೆಯಿರಿ.
  • ಒಳಗಿರುವ ಬಿಳಿ ಬಣ್ಣದ ಮೃದುವಾದ ತಿರುಳನ್ನು ಮಾತ್ರ ಸೇವಿಸಬೇಕು.
  • ತಾಜಾ ಹಣ್ಣಾಗಿ ಅಥವಾ ಹಣ್ಣಿನ ಸಲಾಡ್‌ಗಳಲ್ಲಿ ಸೇರಿಸಿ ತಿನ್ನಬಹುದು.
    ಎಚ್ಚರಿಕೆ:
  • ರಕ್ತ ತೆಳುವಾಗಿಸುವ ಔಷಧಿಗಳನ್ನು ಸೇವಿಸುತ್ತಿರುವವರು ವೈದ್ಯರ ಸಲಹೆ ಪಡೆಯುವುದು ಉತ್ತಮ.
  • ಶಸ್ತ್ರಚಿಕಿತ್ಸೆಗೆ ಒಳಗಾಗುವವರು ಮುನ್ನೆಚ್ಚರಿಕೆಯಿಂದ ಬಳಸಬೇಕು.
  • ಯಾವುದೇ ಆಹಾರಕ್ಕೆ ಅಲರ್ಜಿ ಇರುವವರು ಮೊದಲ ಬಾರಿ ಕಡಿಮೆ ಪ್ರಮಾಣದಲ್ಲಿ ಸೇವಿಸುವುದು ಸೂಕ್ತ.
    ಸೂಚನೆ:
    ಮ್ಯಾಂಗೋಸ್ಟೀನ್ ಅನ್ನು “ಹಣ್ಣುಗಳ ರಾಣಿ” ಎಂದು ಕರೆಯಲಾಗುತ್ತದೆ. ಇದರ ಸಿಹಿ-ಹುಳಿ ರುಚಿ ಮತ್ತು ಆರೋಗ್ಯಕರ ಗುಣಗಳಿಂದ ಇದು ವಿಶ್ವದಾದ್ಯಂತ ಜನಪ್ರಿಯವಾಗಿದೆ. 🍈✨
Continue Reading

ದೇಶ

ಮುಂಬೈಗೆ ಜಲಸಂಕಷ್ಟದ ಕಾಟ: ಕಟ್ಟಡ ಕಾಮಗಾರಿ, ಈಜುಕೊಳಗಳಿಗೆ ನೀರು ಬಂದ್!

Published

on

ಮುಂಬೈ: ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದರೂ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಮಳೆಯ ಕೊರತೆ ತೀವ್ರ ಜಲಸಂಕಷ್ಟಕ್ಕೆ ಕಾರಣವಾಗಿದೆ. ನಗರದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿರುವ ಹಿನ್ನೆಲೆಯಲ್ಲಿ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ನೀರಿನ ಸಂರಕ್ಷಣೆಗಾಗಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಘೋಷಿಸಿದೆ.

ಬಿಎಂಸಿ ಹೊರಡಿಸಿರುವ ಹೊಸ ನಿರ್ದೇಶನದ ಪ್ರಕಾರ, ನಗರದಲ್ಲಿ ಪ್ರಸ್ತುತ ನಡೆಯುತ್ತಿರುವ ವಿವಿಧ ನಿರ್ಮಾಣ ಯೋಜನೆಗಳಿಗೆ ನೀಡಲಾಗಿದ್ದ ನೀರಿನ ಸಂಪರ್ಕಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ. ಜೊತೆಗೆ, ಹೊಸ ಕಟ್ಟಡ ಕಾಮಗಾರಿಗಳಿಗೆ ನೀರಿನ ಸಂಪರ್ಕ ಮಂಜೂರಾತಿಯನ್ನೂ ಮುಂದಿನ ಆದೇಶದವರೆಗೆ ಅಮಾನತುಗೊಳಿಸಲಾಗಿದೆ.

ನಗರದ ನೀರಿನ ಲಭ್ಯತೆಯನ್ನು ಸಮರ್ಪಕವಾಗಿ ನಿರ್ವಹಿಸುವ ಉದ್ದೇಶದಿಂದ ಸಾರ್ವಜನಿಕ ಹಾಗೂ ಖಾಸಗಿ ಈಜುಕೊಳಗಳಿಗೆ ನೀಡಲಾಗುತ್ತಿರುವ ನೀರಿನ ಸರಬರಾಜನ್ನೂ ತಾತ್ಕಾಲಿಕವಾಗಿ ನಿಲ್ಲಿಸಲಾಗುತ್ತಿದೆ. ಅಲ್ಲದೆ, ಕೈಗಾರಿಕಾ ಘಟಕಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಕ್ರೀಡಾ ಕ್ಲಬ್‌ಗಳಿಗೆ ನೀರಿನ ಪೂರೈಕೆಯಲ್ಲಿ ಶೇಕಡಾ 20ರಷ್ಟು ಕಡಿತ ಜಾರಿಗೊಳಿಸಲಾಗಿದೆ.

ಪ್ಯಾಕೇಜ್ ಕುಡಿಯುವ ನೀರು ಮತ್ತು ಪಾನೀಯ ಉತ್ಪಾದನಾ ಸಂಸ್ಥೆಗಳು ತಮ್ಮ ನೀರಿನ ಬಳಕೆಯನ್ನು ಅಗತ್ಯ ಮಟ್ಟಕ್ಕೆ ಸೀಮಿತಗೊಳಿಸುವಂತೆ ಸೂಚಿಸಲಾಗಿದೆ. ಲಭ್ಯವಿರುವ ನೀರಿನ ಸಂಪನ್ಮೂಲಗಳನ್ನು ಜವಾಬ್ದಾರಿಯಿಂದ ಬಳಸಬೇಕು ಹಾಗೂ ಅನಗತ್ಯವಾಗಿ ನೀರು ಪೋಲು ಮಾಡಬಾರದು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಜಲಾಶಯಗಳಲ್ಲಿ ನೀರಿನ ಸಂಗ್ರಹ ಪ್ರಮಾಣ ಕುಸಿಯುತ್ತಿರುವ ಕಾರಣ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಇದೆ. ಹೀಗಾಗಿ ನಾಗರಿಕರು ನೀರು ಸಂರಕ್ಷಣೆ ಬಗ್ಗೆ ಹೆಚ್ಚಿನ ಜಾಗೃತಿ ತೋರಬೇಕು ಎಂದು ಬಿಎಂಸಿ ತಿಳಿಸಿದೆ. ಕುಡಿಯುವ ನೀರನ್ನು ದುರುಪಯೋಗಪಡಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Continue Reading

ದೇಶ

ಟ್ರಂಪ್ ಎದುರೇ ಅಮೆರಿಕ ವಿರುದ್ಧ ಮೋದಿ ಆಕ್ಷೇಪ: ಭಾರತೀಯ ನಾವಿಕರ ಸಾವಿನ ಬಗ್ಗೆ ತೀವ್ರ ಕಳವಳ

Published

on

ಬೆಂಗಳೂರು/ಇವಿಯನ್ (ಫ್ರಾನ್ಸ್):

ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎದುರೇ ಓಮನ್ ಕೊಲ್ಲಿಯಲ್ಲಿ ನಡೆದ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಸಾವನ್ನಪ್ಪಿದ ಘಟನೆ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದರು. ನಾವಿಕರ ಸುರಕ್ಷತೆ ಮತ್ತು ಅಂತಾರಾಷ್ಟ್ರೀಯ ಸಮುದ್ರ ಮಾರ್ಗಗಳ ಭದ್ರತೆ ಜಾಗತಿಕ ಸಮುದಾಯದ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಅವರು ಒತ್ತಿ ಹೇಳಿದರು.

ಫ್ರಾನ್ಸ್‌ನ ಇವಿಯನ್‌ನಲ್ಲಿ ನಡೆದ ಜಿ7 ನಾಯಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಹಾರ್ಮುಜ್ ಜಲಸಂಧಿಯಲ್ಲಿನ ಉದ್ವಿಗ್ನ ಪರಿಸ್ಥಿತಿ ಜಾಗತಿಕ ಆರ್ಥಿಕತೆಗೆ ಭಾರೀ ಹೊಡೆತ ನೀಡುತ್ತಿದೆ ಎಂದು ಎಚ್ಚರಿಸಿದರು. ಅಂತಾರಾಷ್ಟ್ರೀಯ ವ್ಯಾಪಾರ ಸಾಗಣೆ ನಿರಂತರವಾಗಿ ನಡೆಯಬೇಕಾದರೆ ಸಮುದ್ರ ಮಾರ್ಗಗಳ ಸುರಕ್ಷತೆ ಖಚಿತವಾಗಬೇಕು ಎಂದು ಅವರು ಹೇಳಿದರು.

ಹಾರ್ಮುಜ್ ಬಿಕ್ಕಟ್ಟಿನ ಬಗ್ಗೆ ಕಳವಳ

“ಹಾರ್ಮುಜ್ ಜಲಸಂಧಿಯ ಅಸ್ಥಿರತೆಯಿಂದ ಮಾನವೀಯ ಹಾಗೂ ಆರ್ಥಿಕ ನಷ್ಟ ಹೆಚ್ಚುತ್ತಿದೆ. ಸಮುದ್ರ ಮಾರ್ಗಗಳನ್ನು ಸುರಕ್ಷಿತವಾಗಿಡುವುದು ಮತ್ತು ನಾವಿಕರು ಯಾವುದೇ ಭಯವಿಲ್ಲದೆ ಕಾರ್ಯನಿರ್ವಹಿಸುವ ವಾತಾವರಣ ನಿರ್ಮಿಸುವುದು ಅಗತ್ಯ” ಎಂದು ಮೋದಿ ಹೇಳಿದರು.

ಮೂವರು ಭಾರತೀಯ ನಾವಿಕರ ದುರ್ಮರಣ

ಓಮನ್ ಕೊಲ್ಲಿಯಲ್ಲಿ ಪಲಾವ್ ಧ್ವಜ ಹೊಂದಿದ್ದ ತೈಲ ಪೂರೈಕೆ ಹಡಗು ‘ಸೆಟ್ಟೆಬೆಲ್ಲೊ’ ಮೇಲೆ ನಡೆದ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಸಾವನ್ನಪ್ಪಿದ್ದರು. ಹಡಗಿನಲ್ಲಿ ಒಟ್ಟು 28 ಸಿಬ್ಬಂದಿ ಇದ್ದು, ಅವರಲ್ಲಿ 24 ಮಂದಿ ಭಾರತೀಯರಾಗಿದ್ದರು. ಈ ಘಟನೆ ಬಳಿಕ ಭಾರತ ಸರ್ಕಾರ ಅಮೆರಿಕದ ಮುಂದೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

ಅಮೆರಿಕದ ವಿರುದ್ಧ ಭಾರತ ಪ್ರತಿಭಟನೆ

ನವದೆಹಲಿಯಲ್ಲಿರುವ ಅಮೆರಿಕದ ರಾಜತಾಂತ್ರಿಕ ಅಧಿಕಾರಿಗಳನ್ನು ಕರೆಸಿ ಭಾರತ ಎರಡು ಬಾರಿ ಅಧಿಕೃತ ಪ್ರತಿಭಟನೆ ಸಲ್ಲಿಸಿತ್ತು. ವಿದೇಶಾಂಗ ಸಚಿವ ಎಸ್. ಜೈಶಂಕರ್ ಕೂಡ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರೊಂದಿಗೆ ಮಾತನಾಡಿ ಭಾರತದ ಆತಂಕವನ್ನು ವ್ಯಕ್ತಪಡಿಸಿದ್ದರು.

Continue Reading

Trending