Connect with us

ರಾಜ್ಯ

ಸಿಎಂ ಸಿದ್ಧರಾಮಯ್ಯ ಕುರಿತ ಸಂಶೋಧನೆಗೆ ಪಿಹೆಚ್‌ಡಿ ಪದವಿ ಪಡೆದ ಹಳ್ಳಿ ಹೈದ ಬೀರಪ್ಪ

Published

on

ಆಡಳಿತದಲ್ಲಿ ಕನ್ನಡಕ್ಕೆ ಆದ್ಯತೆ ನೀಡಿ  ಸಿಎಂ ಸಿದ್ದರಾಮಯ್ಯ ಸೂಚನೆ
ಸಿಎಂ ಸಿದ್ಧರಾಮಯ್ಯ ಕುರಿತ ಸಂಶೋಧನೆಗೆ ಪಿಹೆಚ್‌ಡಿ ಪದವಿ ಪಡೆದ ಹಳ್ಳಿ ಹೈದ ಬೀರಪ್ಪ

ಮೈಸೂರು ಜಿಲ್ಲೆಯ ಹಳ್ಳಿ ಹುಡುಗ ಬೀರಪ್ಪ ಹೆಚ್‌ ತಮ್ಮ ಪಿಹೆಚ್‌ಡಿ ಸಂಶೋಧನಾ ವಿಷಯವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರ ಕುರಿತು ಅಧ್ಯಯನ ಮಾಡಿದ್ದು, ಈ ಸಂಶೋಧನೆಗೆ ಪಿಹೆಚ್‌ಡಿ ಪದವಿ ಪ್ರದಾನ ಮಾಡಲಾಗಿದೆ.

ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ಹಳ್ಳಿ ಹೈದ ಬೀರಪ್ಪ ಹೆಚ್‌ ಸಿಎಂ ಸಿದ್ಧರಾಮಯ್ಯ ನವರ ಕುರಿತು ಸಂಶೋಧನೆ ನಡೆಸಿ ಪಿಹೆಚ್‌ಡಿ ಪದವಿ ಪಡೆದಿದ್ದಾರೆ.

ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ನಂತರ, ಇದೇ ವಿವಿಯಲ್ಲಿ ಪ್ರಾಧ್ಯಾಪಕರಾದ ಡಾ ಎನ್‌ ಮಮತ ರವರ ಮಾರ್ಗದರ್ಶನದಲ್ಲಿ ಪಿಹೆಚ್‌ಡಿ ಸಂಶೋಧನೆಗೆ ಪ್ರವೇಶ ಪಡೆದಿದ್ದರು.

ಸಿದ್ಧರಾಮಯ್ಯನವರು ಮಾಜಿ ಸಿಎಂ ಆಗಿದ್ದ ಕಾಲದಲ್ಲೇ ಇವರ ಕುರಿತು ಸಂಶೋಧನೆ ಕೈಗೊಂಡಿದ್ದ ಬೀರಪ್ಪ, ಅಕ್ಟೋಬರ್ 12 ರಂದು ತಮ್ಮ ಸಂಶೋಧನಾ ಮಹಾಪ್ರಬಂಧವನ್ನು ವಿವಿಗೆ ಸಲ್ಲಿಸಿದ್ದಾರೆ.2019 ರಲ್ಲಿ ಬೀರಪ್ಪ ಕೈಗೊಂಡ ಸಿದ್ಧರಾಮಯ್ಯ ನವರ ಕುರಿತ ಪಿಹೆಚ್‌ಡಿ ಪದವಿಯ ವಿಷಯ ‘ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರವರ ರಾಜಕೀಯ ಸಂವಹನ ಮತ್ತು ಅಭಿವೃದ್ಧಿ ದೃಷ್ಟಿಕೋನ: ಒಂದು ವಿಶ್ಲೇಷಣಾತ್ಮಕ ಅಧ್ಯಯನ’.ಈ ಹಿಂದೆ ದೇವರಾಜ ಅರಸು ರವರು ಎಲ್ಲ ಸಮುದಾಯಗಳ ಏಳಿಗೆಗೆ ಕೆಲಸ ಮಾಡುತ್ತಿದ್ದರು. ಅವರ ಹಾಗೆಯೇ ಸಿದ್ಧರಾಮಯ್ಯ ನವರು ಸಹ. ಅವರ ಇಂತಹ ಗುಣಗಳೇ, ಅವರ ಅಭಿವೃದ್ಧಿ ದೃಷ್ಟಿಕೋನಗಳೇ ಸಿಎಂ ಸಿದ್ಧರಾಮಯ್ಯ ನವರ ಕುರಿತು ಸಂಶೋಧನೆ ಮಾಡಲು ಪ್ರೇರಣೆ ನೀಡಿದವು ಎಂದು ಪಿಹೆಚ್‌ಡಿ ಪದವಿ ಪಡೆದ ಬೀರಪ್ಪ ಹೇಳಿದ್ದಾರೆ.

ಬೀರಪ್ಪ, ತಾನು ಸ್ನಾತಕೋತ್ತರ ಪದವಿ ಪಡೆಯುವ ಮುನ್ನವೇ ಸರ್ಕಾರಿ ಉದ್ಯೋಗದಲ್ಲಿದ್ದೆ. ಆದರೆ ಕಾವೇರಿ ಹೋರಾಟಕ್ಕಾಗಿ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿದೆ. ನಂತರ ಮೈಸೂರು ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿಯೇ ಎಂಎ ಪದವಿ ಪಡೆದೆ. ಈಗ ಇದೇ ವಿಭಾಗದಲ್ಲಿ ಪಿಹೆಚ್‌ಡಿ ಪಡೆದಿರುವುದು, ಅದರಲ್ಲೂ ಸಿಎಂ ಸಿದ್ಧರಾಮಯ್ಯ ಕುರಿತು ಸಂಶೋಧನಾ ಮಹಾಪ್ರಬಂಧ ಮಂಡಿಸಿರುವುದು ನನಗೆ ಹೆಚ್ಚು ಸಂತೋಷ ಉಂಟುಮಾಡಿದೆ. ನನ್ನ ಮಾರ್ಗದರ್ಶಕರಾದ ಎನ್‌ ಮಮತ ರವರು ಹೆಚ್ಚು ಪ್ರೋತ್ಸಾಹ ನೀಡಿದರು, ವಿಭಾಗದ ಎಲ್ಲ ಪ್ರಾಧ್ಯಾಪಕರು ಈ ಸಂಶೋಧನೆಗೆ ಹಲವು ರೀತಿ ಸಹಾಯ ಮಾಡಿದ್ದಾರೆ ಎಂದಿದ್ದಾರೆ.

ಬೀರಪ್ಪ ನವರ ಮಹಾಪ್ರಬಂಧ ಮಂಡನೆ ವೇಳೆ ಮೈಸೂರು ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ಎನ್‌ ಮಮತ, ಡಾ ಸಿ ಕೆ ಪುಟ್ಟಸ್ವಾಮಿ, ಡಾ ಸಪ್ನ ರವರು ಹಾಜರಿದ್ದರು.

ದೇಶ

SIR ಎಂದರೇನು? ಕರ್ನಾಟಕದ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಸಂಪೂರ್ಣ ಮಾಹಿತಿ

Published

on

ಬೆಂಗಳೂರು: ಕರ್ನಾಟಕದಲ್ಲಿ Special Intensive Revision (SIR) ಅಥವಾ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರ ಪಟ್ಟಿಯನ್ನು ಹೆಚ್ಚು ನಿಖರಗೊಳಿಸುವ ಉದ್ದೇಶದಿಂದ ಚುನಾವಣಾ ಆಯೋಗ (ECI) ರಾಜ್ಯಾದ್ಯಂತ ಮನೆ-ಮನೆ ಪರಿಶೀಲನೆ ನಡೆಸುತ್ತಿದೆ.

ಈ ಪ್ರಕ್ರಿಯೆಯ ಪ್ರಮುಖ ಉದ್ದೇಶ ಸತ್ತವರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ನಕಲಿ ಹಾಗೂ ಅನರ್ಹ ಮತದಾರರ ಹೆಸರುಗಳನ್ನು ತೆಗೆದುಹಾಕುವುದು ಮತ್ತು ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದಾಗಿದೆ. ಕರ್ನಾಟಕದಲ್ಲಿ 5.54 ಕೋಟಿಗೂ ಅಧಿಕ ಮತದಾರರು ನೋಂದಾಯಿತರಾಗಿದ್ದು, ಅವರಲ್ಲಿ ಸುಮಾರು 91.61% ಮತದಾರರ ವಿವರಗಳು ಈಗಾಗಲೇ ಮ್ಯಾಪ್ ಆಗಿವೆ. ಉಳಿದ ಮತದಾರರ ಮಾಹಿತಿಯನ್ನು ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಸಾವಿರಾರು ಅಧಿಕಾರಿಗಳು ಹಾಗೂ 5,950 BLOಗಳು ಈ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಮತದಾರರಿಗೆ ಅಗತ್ಯ ದಾಖಲೆಗಳು ಹಾಗೂ ಪ್ರಮಾಣಪತ್ರಗಳನ್ನು ಸೇವಾ ಸಿಂಧು, ನಾಡಕಚೇರಿ, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳ ಮೂಲಕ ಪಡೆಯುವ ವ್ಯವಸ್ಥೆಯನ್ನೂ ಸರ್ಕಾರ ಕಲ್ಪಿಸಿದೆ.

ಇದೀಗ SIR ಪ್ರಕ್ರಿಯೆ ರಾಜಕೀಯ ವಿವಾದಕ್ಕೂ ಕಾರಣವಾಗಿದೆ. ಕೆಲವು ರಾಜಕೀಯ ಪಕ್ಷಗಳು ಮನೆ-ಮನೆ ಪರಿಶೀಲನೆಯ ಬದಲು ಸಾರ್ವಜನಿಕ ಸ್ಥಳಗಳಲ್ಲಿ ಅರ್ಜಿ ವಿತರಣೆ, ನಿಯಮ ಉಲ್ಲಂಘನೆ ಹಾಗೂ ರಾಜಕೀಯ ಹಸ್ತಕ್ಷೇಪದ ಆರೋಪಗಳನ್ನು ಮಾಡಿವೆ. ಆದರೆ, ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು, ಇನ್ನೂ ಮ್ಯಾಪ್ ಆಗದ ಮತದಾರರ ಹೆಸರುಗಳು ತಕ್ಷಣವೇ ಪಟ್ಟಿಯಿಂದ ಕೈಬಿಡಲಾಗುವುದಿಲ್ಲ. ಕರಡು ಪಟ್ಟಿ ಪ್ರಕಟವಾದ ಬಳಿಕ ದಾಖಲೆ ಸಲ್ಲಿಸಲು ಮತ್ತು ಆಕ್ಷೇಪಣೆ ಸಲ್ಲಿಸಲು ಸೂಕ್ತ ಅವಕಾಶ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮತದಾರರ ಪಟ್ಟಿಯನ್ನು ಪಾರದರ್ಶಕ ಹಾಗೂ ನಿಖರವಾಗಿಡುವ ಉದ್ದೇಶದಿಂದ ನಡೆಯುತ್ತಿರುವ ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಿ ಅಗತ್ಯ ದಾಖಲೆಗಳನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸುವಂತೆ ಚುನಾವಣಾ ಆಯೋಗ ಮನವಿ ಮಾಡಿದೆ.

Continue Reading

ದೇಶ

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅವ್ಯವಸ್ಥೆ? ಬಿಎಲ್‌ಒಗಳ ಮೇಲೆ ಒತ್ತಡ ಆರೋಪಿಸಿದ ವಿಜಯೇಂದ್ರ

Published

on

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಗಂಭೀರ ಅವ್ಯವಸ್ಥೆ ನಡೆಯುತ್ತಿದ್ದು, ರಾಜ್ಯ ಸರ್ಕಾರ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಬೂತ್ ಮಟ್ಟದ ಅಧಿಕಾರಿಗಳ (BLO) ಮೇಲೆ ಒತ್ತಡ ಹೇರುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಮನೆ ಮನೆಗೆ ತೆರಳಿ ನಮೂನೆಗಳನ್ನು ವಿತರಿಸುವ ಬದಲು ಕಲ್ಯಾಣ ಮಂಟಪ, ಚೌಲ್ಟ್ರಿ ಹಾಗೂ ಮಸೀದಿಗಳಲ್ಲಿ ಕುಳಿತು ಅರ್ಜಿಗಳನ್ನು ಹಂಚುತ್ತಿರುವುದು ನಿಯಮ ಉಲ್ಲಂಘನೆಯಾಗಿದೆ ಎಂದು ದೂರಿದರು. ಕೆಲವು ಶಾಸಕರ ಕಚೇರಿಗಳಲ್ಲೇ ಬಿಎಲ್‌ಒಗಳನ್ನು ಕೂರಿಸಿ ಕೆಲಸ ಮಾಡಿಸಲಾಗುತ್ತಿದೆ ಎಂದು ಆರೋಪಿಸಿ, ಈ ಕುರಿತು ಸಾಕ್ಷ್ಯ ಸಮೇತ ದೂರು ಸಲ್ಲಿಸಿರುವುದಾಗಿ ತಿಳಿಸಿದರು.

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ವಿತರಿಸಲಾಗುತ್ತಿರುವ ಅರ್ಜಿಗಳ ಮೇಲೆ ಕಾಂಗ್ರೆಸ್ ಮುಖಂಡರ ಫೋಟೋಗಳು ಮುದ್ರಣಗೊಂಡಿರುವ ವಿಚಾರವನ್ನೂ ಚುನಾವಣಾ ಆಯೋಗದ ಗಮನಕ್ಕೆ ತಂದಿರುವುದಾಗಿ ವಿಜಯೇಂದ್ರ ಹೇಳಿದರು. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗಿರುವ ಎಲ್ಲೆಡೆ ಮರುಪರಿಷ್ಕರಣೆ ನಡೆಸುವಂತೆ ಆಗ್ರಹಿಸಿದರು.

ಮೈಸೂರು ಸಂಸದ ಯದುವೀರ್ ಒಡೆಯರ್ ಮಾತನಾಡಿ, ನರಸಿಂಹರಾಜ ಕ್ಷೇತ್ರದಲ್ಲಿ ಮತದಾರರ ಸಂಖ್ಯೆಯಲ್ಲಿ ಅಸಹಜ ಏರಿಕೆ ಕಂಡುಬಂದಿದ್ದು, ಮನೆಗಳ ಸಂಖ್ಯೆ ಹೆಚ್ಚಳವಾಗದೆ ಮತದಾರರ ಸಂಖ್ಯೆ ಮಾತ್ರ ಹೆಚ್ಚಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದರು. ಅಕ್ರಮ ಮತದಾರರನ್ನು ತಡೆಯಲು ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸುವುದು ಅಗತ್ಯ ಎಂದು ಒತ್ತಾಯಿಸಿದರು.

ಇದೇ ವೇಳೆ, ಬರ ಪರಿಸ್ಥಿತಿಯಲ್ಲಿ ಮೈಸೂರು ದಸರಾ ಸಂದರ್ಭದಲ್ಲಿ ಕಂಬಳ ಆಯೋಜನೆಗೆ ಕೋಟಿ ಕೋಟಿ ರೂಪಾಯಿ ವೆಚ್ಚ ಮಾಡುವ ಬದಲು ಸರಳ ಹಾಗೂ ಸಾಂಪ್ರದಾಯಿಕ ದಸರಾ ಆಚರಣೆ ನಡೆಸುವುದು ಸೂಕ್ತ ಎಂದು ಯದುವೀರ್ ಒಡೆಯರ್ ಅಭಿಪ್ರಾಯಪಟ್ಟರು.

Continue Reading

ದೇಶ

ಗ್ರೇಟರ್ ಬೆಂಗಳೂರಿನಲ್ಲಿ ಒತ್ತುವರಿ ತೆರವು ಅಬ್ಬರ: ಮೂರು ದಿನಗಳಲ್ಲಿ 202.7 ಕಿ.ಮೀ ಪಾದಚಾರಿ ಮಾರ್ಗ ಮುಕ್ತ

Published

on

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗಗಳ ಮೇಲಿನ ಒತ್ತುವರಿ ತೆರವು ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, ಕಳೆದ ಮೂರು ದಿನಗಳಲ್ಲಿ ಒಟ್ಟು 202.7 ಕಿಲೋಮೀಟರ್ ಉದ್ದದ ಫುಟ್‌ಪಾತ್‌ಗಳನ್ನು ಒತ್ತುವರಿಯಿಂದ ಮುಕ್ತಗೊಳಿಸಲಾಗಿದೆ. ಪಾಲಿಕೆ ಅಧಿಕಾರಿಗಳು ಪೊಲೀಸ್ ಭದ್ರತೆಯೊಂದಿಗೆ ನಗರದ ಪ್ರಮುಖ ಆರ್ಟಿರಿಯಲ್ ಹಾಗೂ ಸಬ್-ಆರ್ಟಿರಿಯಲ್ ರಸ್ತೆಗಳಲ್ಲಿ ಕಾರ್ಯಾಚರಣೆ ಮುಂದುವರಿಸಿದ್ದು, ಕೆಲವು ಕಡೆಗಳಿಂದ ವ್ಯಾಪಕ ವಿರೋಧವೂ ವ್ಯಕ್ತವಾಗಿದೆ.

ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಈ ಕ್ರಮವನ್ನು ಸಮರ್ಥಿಸಿಕೊಂಡಿದ್ದು, ಪಾದಚಾರಿಗಳ ಸುರಕ್ಷತೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಒತ್ತುವರಿ ತೆರವು ಅನಿವಾರ್ಯ ಎಂದು ತಿಳಿಸಿದ್ದಾರೆ.

ಜುಲೈ 1ರಂದು ಪೂರ್ವ, ಕೇಂದ್ರ, ಉತ್ತರ, ದಕ್ಷಿಣ ಹಾಗೂ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 76.55 ಕಿ.ಮೀ ಪಾದಚಾರಿ ಮಾರ್ಗಗಳಿಂದ ಒತ್ತುವರಿ ತೆರವುಗೊಳಿಸಲಾಯಿತು. ಜುಲೈ 2ರಂದು 64.55 ಕಿ.ಮೀ ಹಾಗೂ ಜುಲೈ 3ರಂದು 61.60 ಕಿ.ಮೀ ಉದ್ದದ ಫುಟ್‌ಪಾತ್‌ಗಳನ್ನು ತೆರವುಗೊಳಿಸಲಾಯಿತು.

ಮೂರು ದಿನಗಳ ಕಾರ್ಯಾಚರಣೆಯಲ್ಲಿ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಒತ್ತುವರಿ ತೆರವು ದಾಖಲಾಗಿದ್ದು, ಉಳಿದ ನಾಲ್ಕು ವಲಯಗಳಲ್ಲಿಯೂ ನಿರಂತರ ಕಾರ್ಯಾಚರಣೆ ನಡೆದಿದೆ. ಪಾದಚಾರಿಗಳಿಗೆ ಸುಗಮ ಸಂಚಾರ ಕಲ್ಪಿಸುವುದು ಹಾಗೂ ಸಾರ್ವಜನಿಕ ಸ್ಥಳಗಳನ್ನು ಅತಿಕ್ರಮಣದಿಂದ ಮುಕ್ತಗೊಳಿಸುವುದು ಈ ಕಾರ್ಯಾಚರಣೆಯ ಪ್ರಮುಖ ಉದ್ದೇಶವಾಗಿದೆ.

ಪಾಲಿಕೆ ಅಧಿಕಾರಿಗಳ ಪ್ರಕಾರ, ನಗರದಲ್ಲಿ ಗುರುತಿಸಲಾದ ಇತರೆ ಒತ್ತುವರಿ ಪ್ರದೇಶಗಳಲ್ಲಿಯೂ ಮುಂದಿನ ದಿನಗಳಲ್ಲಿ ಇದೇ ರೀತಿಯ ಕಾರ್ಯಾಚರಣೆ ಮುಂದುವರಿಯಲಿದೆ. ಸಾರ್ವಜನಿಕ ರಸ್ತೆ ಮತ್ತು ಫುಟ್‌ಪಾತ್‌ಗಳನ್ನು ಸುರಕ್ಷಿತ ಹಾಗೂ ಅಡೆತಡೆರಹಿತವಾಗಿಡಲು ನಾಗರಿಕರ ಸಹಕಾರವೂ ಅಗತ್ಯ ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

Continue Reading

Trending