ಅಪರಾಧ
ಬೆಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ – ಸೈಬರ್ ವಂಚನೆ ಯತ್ನ
ಬೆಂಗಳೂರು, ಫೆ.16: Bengaluru ನಗರ ಪೊಲೀಸ್ ಆಯುಕ್ತರ ಹೆಸರನ್ನೇ ದುರುಪಯೋಗಪಡಿಸಿಕೊಂಡು ಸೈಬರ್ ವಂಚಕರು ನಕಲಿ ಫೇಸ್ಬುಕ್ ಖಾತೆ ತೆರೆಯುವ ಮೂಲಕ ಜನರನ್ನು ಮೋಸಗೊಳಿಸಲು ಯತ್ನಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸ್ ಆಯುಕ್ತ Seemant Kumar Singh ಅವರ ಹೆಸರಿನಲ್ಲಿ ಹಿಂದಿ ಭಾಷೆಯಲ್ಲಿ ಖಾತೆ ಸೃಷ್ಟಿಸಿ, ಗಣ್ಯರೊಂದಿಗೆ ತೆಗೆದಿರುವ ಫೋಟೋಗಳನ್ನು ಪೋಸ್ಟ್ ಮಾಡಿ ವಿಶ್ವಾಸ ಗಳಿಸಲು ಪ್ರಯತ್ನಿಸಲಾಗಿದೆ.
ಆ ಖಾತೆಯನ್ನು ನಿಜವಾದ ಆಯುಕ್ತರದ್ದೆಂದು ನಂಬಿದ ಕೆಲವರು ಪ್ರತಿಕ್ರಿಯೆ ನೀಡಿದ ಬಳಿಕ, ಖಾಸಗಿ ಸಂದೇಶಗಳ ಮೂಲಕ ಹಣ ಕೇಳುವ ಯತ್ನ ನಡೆದಿದೆ ಎಂದು ತಿಳಿದುಬಂದಿದೆ. ಮೊದಲಿಗೆ ನಂಬಿಕೆ ಮೂಡಿಸಿ ಬಳಿಕ ಹಣ ದೋಚುವ ಉದ್ದೇಶವೇ ಇದಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಈ ರೀತಿಯ ಪ್ರಕರಣ ಇದೇ ಮೊದಲಲ್ಲ. ಈ ಹಿಂದೆ Alok Kumar ಹಾಗೂ Bhimashankar ಅವರ ಹೆಸರಲ್ಲಿಯೂ ನಕಲಿ ಸಾಮಾಜಿಕ ಜಾಲತಾಣ ಖಾತೆಗಳು ತೆರೆಯಲಾಗಿದ್ದವು. ಇದೀಗ ಮತ್ತೊಮ್ಮೆ ಇದೇ ಮಾದರಿಯ ವಂಚನೆ ಬೆಳಕಿಗೆ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.
ಘಟನೆ ಸಂಬಂಧ Bengaluru City Cyber Crime Police Stationನಲ್ಲಿ ಪ್ರಕರಣ ದಾಖಲಾಗಿದ್ದು, ನಕಲಿ ಖಾತೆ ಸೃಷ್ಟಿಸಿದವರ ಪತ್ತೆಗೆ ತನಿಖೆ ಆರಂಭಿಸಲಾಗಿದೆ. ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಗಣ್ಯರ ಹೆಸರಿನ ಖಾತೆಗಳನ್ನು ಕಂಡ ಕೂಡಲೇ ನಂಬದೆ, ಪರಿಶೀಲನೆ ನಡೆಸಿ ಸಂಶಯಾಸ್ಪದ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ.
ಅಪರಾಧ
Bidadi Township ವಿವಾದ ತೀವ್ರ: 20ಕ್ಕೂ ಹೆಚ್ಚು ರೈತರ ವಿರುದ್ಧ ಎಫ್ಐಆರ್
ರಾಮನಗರ: Bidadi Township ಬಿಡದಿ ಟೌನ್ಶಿಪ್ ಯೋಜನೆ (Bidadi Township Project) ಸಂಬಂಧ ಜಂಟಿ ಭೂಮಾಪನ (JMC Survey) ಕಾರ್ಯದ ವೇಳೆ ಉಂಟಾದ ಗಲಾಟೆ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಮಂಡಲಹಳ್ಳಿಯಲ್ಲಿ ಜೆಎಂಸಿ ಸರ್ವೆಗೆ ತಡೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ರೈತರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ.
ಕಂದಾಯ ಇಲಾಖೆಯ ಅಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಅಧಿಕಾರಿಗಳ ಮೇಲೆ ದೈಹಿಕ ಹಲ್ಲೆ ನಡೆಸುವುದು ಹಾಗೂ ಸರ್ವೆ ಕಾರ್ಯಕ್ಕೆ ಅಡ್ಡಿಯಾಗಿರುವ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಇದಕ್ಕೂ ನಡುವೆ, ಬಿಡದಿ ಟೌನ್ಶಿಪ್ ಯೋಜನೆ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ರೈತರು ಕಟ್ಟೆಚ್ಚರ ವಹಿಸಿದ್ದು, ಅಧಿಕಾರಿಗಳು ಮತ್ತೆ ಜೆಎಂಸಿ ಸರ್ವೆ ಆರಂಭಿಸಲು ಮುಂದಾದರೆ ಸ್ಥಳದಲ್ಲೇ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ರೈತ ಸಂಘಟನೆಗಳು ಹಾಗೂ ಸ್ಥಳೀಯರು ಯಾವುದೇ ಸಂದರ್ಭಕ್ಕೂ ಸಜ್ಜಾಗಿದ್ದಾರೆ.
ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಜೆಎಂಸಿ ಸರ್ವೆ ಕಾರ್ಯವನ್ನು ಸದ್ಯಕ್ಕೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ಮೊದಲು ಪ್ರತಿಭಟನಾ ನಿರತ ರೈತರೊಂದಿಗೆ ಶಾಂತಿಯುತ ಮಾತುಕತೆ ನಡೆಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ಮತ್ತೊಂದೆಡೆ, ಯೋಜನೆಗೆ ಒಪ್ಪಿಗೆ ಸೂಚಿಸಿರುವ ರೈತರ ಜಮೀನುಗಳಲ್ಲಿ ಮಾತ್ರ ಸರ್ವೆ ಕಾರ್ಯ ಮುಂದುವರಿಸಲು ಜಿಲ್ಲಾಡಳಿತ ಯೋಜನೆ ರೂಪಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ಭದ್ರತೆಯೊಂದಿಗೆ ಸರ್ವೆ ನಡೆಸಲು ಸಿದ್ಧತೆ ನಡೆಯುತ್ತಿದೆ. ಈ ಬೆಳವಣಿಗೆಗಳಿಂದ ಬಿಡದಿ ಟೌನ್ಶಿಪ್ ಯೋಜನೆ ಮತ್ತೊಮ್ಮೆ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಮತ್ತು ರೈತರ ನಡುವಿನ ಮಾತುಕತೆ ಮಹತ್ವ ಪಡೆದುಕೊಳ್ಳಲಿದೆ. ಯೋಜನೆ (Bidadi Township Project) ಸಂಬಂಧ ಜಂಟಿ ಭೂಮಾಪನ (JMC Survey) ಕಾರ್ಯದ ವೇಳೆ ಉಂಟಾದ ಗಲಾಟೆ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಮಂಡಲಹಳ್ಳಿಯಲ್ಲಿ ಜೆಎಂಸಿ ಸರ್ವೆಗೆ ತಡೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ರೈತರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ.
ಕಂದಾಯ ಇಲಾಖೆಯ ಅಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಅಧಿಕಾರಿಗಳ ಮೇಲೆ ದೈಹಿಕ ಹಲ್ಲೆ ನಡೆಸುವುದು ಹಾಗೂ ಸರ್ವೆ ಕಾರ್ಯಕ್ಕೆ ಅಡ್ಡಿಯಾಗಿರುವ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಇದಕ್ಕೂ ನಡುವೆ, ಬಿಡದಿ ಟೌನ್ಶಿಪ್ ಯೋಜನೆ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ರೈತರು ಕಟ್ಟೆಚ್ಚರ ವಹಿಸಿದ್ದು, ಅಧಿಕಾರಿಗಳು ಮತ್ತೆ ಜೆಎಂಸಿ ಸರ್ವೆ ಆರಂಭಿಸಲು ಮುಂದಾದರೆ ಸ್ಥಳದಲ್ಲೇ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ರೈತ ಸಂಘಟನೆಗಳು ಹಾಗೂ ಸ್ಥಳೀಯರು ಯಾವುದೇ ಸಂದರ್ಭಕ್ಕೂ ಸಜ್ಜಾಗಿದ್ದಾರೆ.
ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಜೆಎಂಸಿ ಸರ್ವೆ ಕಾರ್ಯವನ್ನು ಸದ್ಯಕ್ಕೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ಮೊದಲು ಪ್ರತಿಭಟನಾ ನಿರತ ರೈತರೊಂದಿಗೆ ಶಾಂತಿಯುತ ಮಾತುಕತೆ ನಡೆಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ಮತ್ತೊಂದೆಡೆ, ಯೋಜನೆಗೆ ಒಪ್ಪಿಗೆ ಸೂಚಿಸಿರುವ ರೈತರ ಜಮೀನುಗಳಲ್ಲಿ ಮಾತ್ರ ಸರ್ವೆ ಕಾರ್ಯ ಮುಂದುವರಿಸಲು ಜಿಲ್ಲಾಡಳಿತ ಯೋಜನೆ ರೂಪಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ಭದ್ರತೆಯೊಂದಿಗೆ ಸರ್ವೆ ನಡೆಸಲು ಸಿದ್ಧತೆ ನಡೆಯುತ್ತಿದೆ. ಈ ಬೆಳವಣಿಗೆಗಳಿಂದ ಬಿಡದಿ ಟೌನ್ಶಿಪ್ ಯೋಜನೆ ಮತ್ತೊಮ್ಮೆ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಮತ್ತು ರೈತರ ನಡುವಿನ ಮಾತುಕತೆ ಮಹತ್ವ ಪಡೆದುಕೊಳ್ಳಲಿದೆ. ಯೋಜನೆ (Bidadi Township Project) ಸಂಬಂಧ ಜಂಟಿ ಭೂಮಾಪನ (JMC Survey) ಕಾರ್ಯದ ವೇಳೆ ಉಂಟಾದ ಗಲಾಟೆ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಮಂಡಲಹಳ್ಳಿಯಲ್ಲಿ ಜೆಎಂಸಿ ಸರ್ವೆಗೆ ತಡೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ರೈತರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ.
ಕಂದಾಯ ಇಲಾಖೆಯ ಅಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಅಧಿಕಾರಿಗಳ ಮೇಲೆ ದೈಹಿಕ ಹಲ್ಲೆ ನಡೆಸುವುದು ಹಾಗೂ ಸರ್ವೆ ಕಾರ್ಯಕ್ಕೆ ಅಡ್ಡಿಯಾಗಿರುವ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಇದಕ್ಕೂ ನಡುವೆ, ಬಿಡದಿ ಟೌನ್ಶಿಪ್ ಯೋಜನೆ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ರೈತರು ಕಟ್ಟೆಚ್ಚರ ವಹಿಸಿದ್ದು, ಅಧಿಕಾರಿಗಳು ಮತ್ತೆ ಜೆಎಂಸಿ ಸರ್ವೆ ಆರಂಭಿಸಲು ಮುಂದಾದರೆ ಸ್ಥಳದಲ್ಲೇ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ರೈತ ಸಂಘಟನೆಗಳು ಹಾಗೂ ಸ್ಥಳೀಯರು ಯಾವುದೇ ಸಂದರ್ಭಕ್ಕೂ ಸಜ್ಜಾಗಿದ್ದಾರೆ.
ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಜೆಎಂಸಿ ಸರ್ವೆ ಕಾರ್ಯವನ್ನು ಸದ್ಯಕ್ಕೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ಮೊದಲು ಪ್ರತಿಭಟನಾ ನಿರತ ರೈತರೊಂದಿಗೆ ಶಾಂತಿಯುತ ಮಾತುಕತೆ ನಡೆಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ಮತ್ತೊಂದೆಡೆ, ಯೋಜನೆಗೆ ಒಪ್ಪಿಗೆ ಸೂಚಿಸಿರುವ ರೈತರ ಜಮೀನುಗಳಲ್ಲಿ ಮಾತ್ರ ಸರ್ವೆ ಕಾರ್ಯ ಮುಂದುವರಿಸಲು ಜಿಲ್ಲಾಡಳಿತ ಯೋಜನೆ ರೂಪಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ಭದ್ರತೆಯೊಂದಿಗೆ ಸರ್ವೆ ನಡೆಸಲು ಸಿದ್ಧತೆ ನಡೆಯುತ್ತಿದೆ. ಈ ಬೆಳವಣಿಗೆಗಳಿಂದ ಬಿಡದಿ ಟೌನ್ಶಿಪ್ ಯೋಜನೆ ಮತ್ತೊಮ್ಮೆ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಮತ್ತು ರೈತರ ನಡುವಿನ ಮಾತುಕತೆ ಮಹತ್ವ ಪಡೆದುಕೊಳ್ಳಲಿದೆ.
ಬೆಂಗಳೂರು
KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು; ರಾಜ್ಯಪಾಲರಿಂದ ರಾಷ್ಟ್ರಪತಿಗೆ ತನಿಖೆ ಶಿಫಾರಸು
ಬೆಂಗಳೂರು: KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅಮಾನತುಗೊಳಿಸಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಅವರ ವಿರುದ್ಧ ಕೇಳಿಬಂದಿರುವ ನೇಮಕಾತಿ ಅಕ್ರಮ, ಸ್ವಜನಪಕ್ಷಪಾತ ಹಾಗೂ ಅಧಿಕಾರ ದುರುಪಯೋಗದ ಆರೋಪಗಳ ಕುರಿತು ತನಿಖೆ ನಡೆಸಲು ಭಾರತದ ಸಂವಿಧಾನದ 317(1)ನೇ ವಿಧಿ ಅಡಿಯಲ್ಲಿ ಸುಪ್ರೀಂ ಕೋರ್ಟ್ಗೆ ಉಲ್ಲೇಖಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಲಾಗಿದೆ.
ರಾಜ್ಯಪಾಲರ ಆದೇಶದಂತೆ, ತನಿಖೆ ಪೂರ್ಣಗೊಂಡು ರಾಷ್ಟ್ರಪತಿಗಳಿಂದ ಮುಂದಿನ ಆದೇಶ ಬರುವವರೆಗೆ ಶಿವಶಂಕರಪ್ಪ ಸಾಹುಕಾರ್ ಅವರನ್ನು ಕೆಪಿಎಸ್ಸಿ ಅಧ್ಯಕ್ಷ ಸ್ಥಾನದಿಂದ ತಕ್ಷಣದಿಂದಲೇ ಅಮಾನತುಗೊಳಿಸಲಾಗಿದೆ. ಅಲ್ಲಿಯವರೆಗೆ ಆಯೋಗದ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿಯರು ಕೆಪಿಎಸ್ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಹಿತಾಸಕ್ತಿ ಸಂಘರ್ಷವನ್ನು ಘೋಷಿಸದೇ ಇದ್ದಿರುವುದು, ನೇಮಕಾತಿ ಪ್ರಕ್ರಿಯೆಯಿಂದ ದೂರ ಉಳಿಯದಿರುವುದು ಹಾಗೂ ಮೀಸಲಾತಿ ಸೌಲಭ್ಯ ಪಡೆಯಲು ತಪ್ಪು ಮಾಹಿತಿ ನೀಡಿರುವ ಆರೋಪಗಳು ತನಿಖೆಗೆ ಕಾರಣವಾಗಿವೆ. ಪ್ರಕರಣದಲ್ಲಿ ಅವರ ಪುತ್ರಿಯೊಬ್ಬರು ವಾರ್ಷಿಕ ಆದಾಯವನ್ನು ಕೇವಲ ₹40,000 ಎಂದು ನಮೂದಿಸಿದ ಆದಾಯ ಪ್ರಮಾಣಪತ್ರ ಸಲ್ಲಿಸಿ ಹಿಂದುಳಿದ ವರ್ಗಗಳ ಮೀಸಲಾತಿ ಹಾಗೂ ‘ಕ್ರೀಮಿ ಲೇಯರ್’ ವಿನಾಯಿತಿ ಪಡೆಯಲು ಯತ್ನಿಸಿದ್ದರೆಂಬ ಗಂಭೀರ ಆರೋಪ ಕೇಳಿಬಂದಿದೆ.
ಈ ಸಂಬಂಧ ಕೆಪಿಎಸ್ಸಿ ಕಾರ್ಯದರ್ಶಿ ಶೋಭಾ ಅವರ ದೂರಿನ ಮೇರೆಗೆ ಈಗಾಗಲೇ ಎಫ್ಐಆರ್ ದಾಖಲಾಗಿದ್ದು, ಆದಾಯ ಪ್ರಮಾಣಪತ್ರ ನೀಡಿದ ಕಂದಾಯ ಇಲಾಖೆಯ ಅಧಿಕಾರಿಗಳ ಪಾತ್ರದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಧಿಕಾರ ದುರುಪಯೋಗ ನಡೆದಿದೆಯೇ ಎಂಬುದರ ಕುರಿತು ಪೊಲೀಸರು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಈ ಬೆಳವಣಿಗೆಯಿಂದ ಕೆಪಿಎಸ್ಸಿ ನೇಮಕಾತಿ ಪ್ರಕ್ರಿಯೆ ಮತ್ತು ಆಡಳಿತ ವ್ಯವಸ್ಥೆಯ ಪಾರದರ್ಶಕತೆ ಕುರಿತು ಹೊಸ ಚರ್ಚೆ ಆರಂಭವಾಗಿದ್ದು, ತನಿಖೆಯ ಅಂತಿಮ ವರದಿಯತ್ತ ರಾಜ್ಯದ ಗಮನ ಕೇಂದ್ರೀಕೃತವಾಗಿದೆ.
ಅಪರಾಧ
Telangana ‘ಇದು ನನ್ನ ಆಯ್ಕೆ’ ಎಂದ ಎಸ್ಐಗೆ ದುಬಾರಿ ಆಯಿತು; ಡಿಜಿಪಿಯಿಂದ ಅಮಾನತು ಸೂಚನೆ
ಹೈದರಾಬಾದ್: Telangana ದ ರಂಗಾರೆಡ್ಡಿ ಜಿಲ್ಲೆಯಲ್ಲಿ ಆರು ವರ್ಷದ ಮೊಮ್ಮಗಳಿಗೆ ಸಾರ್ವಜನಿಕ ರಸ್ತೆಯಲ್ಲಿ ಕಾರು ಚಾಲನೆ ಮಾಡಲು ಅವಕಾಶ ನೀಡಿದ ಪೊಲೀಸ್ ಸಬ್-ಇನ್ಸ್ಪೆಕ್ಟರ್ (SI) ವಿರುದ್ಧ ಪ್ರಕರಣ ದಾಖಲಾಗಿದ್ದು, ರಾಜ್ಯ ಪೊಲೀಸ್ ಮಹಾನಿರ್ದೇಶಕರು (DGP) ಅಮಾನತು ಮಾಡಲು ಆದೇಶ ನೀಡಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ವರದಿಗಳ ಪ್ರಕಾರ, ಸಬ್-ಇನ್ಸ್ಪೆಕ್ಟರ್ ಪೂಜಾರಿ ತಿರುಪತಿ ಅವರು ತಮ್ಮ ಆರು ವರ್ಷದ ಮೊಮ್ಮಗಳನ್ನು ನಗರದ ಜನನಿಬಿಡ ರಸ್ತೆಯಲ್ಲಿ ಕಾರಿನ ಸ್ಟೀರಿಂಗ್ ಹಿಂದೆ ಕುಳ್ಳಿರಿಸಿ ಚಾಲನೆ ಮಾಡಲು ಅವಕಾಶ ನೀಡಿದ್ದರು. ವಾಹನ ನಿಧಾನವಾಗಿ ಚಲಿಸುತ್ತಿದ್ದರೂ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿ ವಾಹನಗಳ ಸಾಲು ನಿರ್ಮಾಣವಾಗಿತ್ತು.
ಸ್ಥಳೀಯರು ಈ ಅಪಾಯಕಾರಿ ಕ್ರಮವನ್ನು ಪ್ರಶ್ನಿಸಿದಾಗ, “ಇದು ನನ್ನ ಆಯ್ಕೆ, ಪ್ರಶ್ನೆ ಮಾಡಲು ನೀವು ಯಾರು?” ಎಂದು ಅಧಿಕಾರಿ ಪ್ರತಿಕ್ರಿಯಿಸಿದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ ವೈರಲ್ ಆದ ನಂತರ ಸಾರ್ವಜನಿಕರು ಹಾಗೂ ಸಾಮಾಜಿಕ ಜಾಲತಾಣ ಬಳಕೆದಾರರು ಪೊಲೀಸ್ ಇಲಾಖೆಯ ವಿರುದ್ಧ ಟೀಕೆ ವ್ಯಕ್ತಪಡಿಸಿ, ಕಾನೂನು ಎಲ್ಲರಿಗೂ ಸಮಾನವಾಗಿರಬೇಕು ಎಂದು ಆಗ್ರಹಿಸಿದರು.
ಘಟನೆಯ ಬಳಿಕ ನರ್ಸಿಂಗಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 125 ಹಾಗೂ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 180 ಮತ್ತು 184ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವಿಚಾರಣೆ ವೇಳೆ ಇದು ಆಟೋಮ್ಯಾಟಿಕ್ ಕಾರಾಗಿದ್ದರಿಂದ ವಾಹನ ತನ್ನ ನಿಯಂತ್ರಣದಲ್ಲೇ ಇತ್ತು ಎಂದು ಎಸ್ಐ ಹೇಳಿದ್ದು, ಮೊಮ್ಮಗಳನ್ನು ವಿಶ್ವದ ಅತಿ ಕಿರಿಯ ಚಾಲಕಿ ಎಂಬ ಗಿನ್ನೆಸ್ ವಿಶ್ವ ದಾಖಲೆ ಪ್ರಯತ್ನಕ್ಕೆ ಸಿದ್ಧಪಡಿಸುತ್ತಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಆದರೆ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ತೆಲಂಗಾಣ ಡಿಜಿಪಿ ಸಿ.ವಿ. ಆನಂದ್, ಸೈಬರಾಬಾದ್ ಪೊಲೀಸ್ ಆಯುಕ್ತರಿಗೆ ಆರೋಪಿತ ಎಸ್ಐ ಅವರನ್ನು ಅಮಾನತುಗೊಳಿಸಿ ಇಲಾಖಾ ತನಿಖೆ ಆರಂಭಿಸುವಂತೆ ಸೂಚಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಮುಂದಿನ ಕ್ರಮವನ್ನು ಇಲಾಖೆ ಕೈಗೊಳ್ಳಲಿದೆ.
-
ಅಪರಾಧ24 ಗಂಟೆಗಳು agoTelangana ‘ಇದು ನನ್ನ ಆಯ್ಕೆ’ ಎಂದ ಎಸ್ಐಗೆ ದುಬಾರಿ ಆಯಿತು; ಡಿಜಿಪಿಯಿಂದ ಅಮಾನತು ಸೂಚನೆ
-
ರಾಜ್ಯ17 ಗಂಟೆಗಳು agoBakrid ವೇಳೆ ಗೋಹತ್ಯೆ ತಡೆ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ; ತಮಿಳುನಾಡು ಸರ್ಕಾರಕ್ಕೆ ಸದ್ಯದ ನೆಮ್ಮದಿ
-
ದೇಶ21 ಗಂಟೆಗಳು agoPM Narendra Modi ಜಕಾರ್ತಾ ಭೇಟಿ ಐತಿಹಾಸಿಕ; ಭಾರತ-ಇಂಡೋನೇಷ್ಯಾ ನಡುವೆ ಹಲವು ಮಹತ್ವದ ಒಪ್ಪಂದಗಳು
-
ರಾಜ್ಯ20 ಗಂಟೆಗಳು agoGovernment Office ಗಳಿಗೆ ಡಿಸಿ ದಿಢೀರ್ ಭೇಟಿ; ತಡವಾಗಿ ಬಂದ ಅಧಿಕಾರಿಗಳ ವಿರುದ್ಧ ಕಠಿಣ ಸೂಚನೆ
-
ರಾಜ್ಯ18 ಗಂಟೆಗಳು agoBidadi Township ವಿರೋಧಕ್ಕೆ ರೈತರ ರಣಕಹಳೆ; JMC ಕಾರಿನ ಮೇಲೆ ಕಲ್ಲು ತೂರಾಟ
-
ಬೆಂಗಳೂರು18 ಗಂಟೆಗಳು agoYeshwanthpura ದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ; ಬ್ಯಾಡರಹಳ್ಳಿ, ಭಾರತನಗರದಲ್ಲಿ ಹೆಚ್ಚಿದ ಭೀತಿ
-
ದೇಶ18 ಗಂಟೆಗಳು agoAadhar Card ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಇಮೇಲ್ ಅಪ್ಡೇಟ್ ಮೊಬೈಲ್ನಲ್ಲೇ ಉಚಿತ!
-
ರಾಜ್ಯ39 ನಿಮಿಷಗಳು agoGruha Lakshmi ಫಲಾನುಭವಿಗಳೇ ಗಮನಿಸಿ: ಇ-ಕೆವೈಸಿ ಸುದ್ದಿ ಸುಳ್ಳು, ಸೈಬರ್ ಕೇಂದ್ರಕ್ಕೆ ಅಲೆಯದಿರಿ
