Connect with us

ಕ್ರೀಡೆ

 ಆಸ್ಟ್ರೇಲಿಯಾ ಗೆಲುವಿನಿಂದ ಪಾಕ್‌ಗೆ ಒತ್ತಡ, ಎಲ್ಲಾ ತಂಡಗಳ ಸೆಮಿಫೈನಲ್ಸ್‌ಗೆ ಲೆಕ್ಕಾಚಾರ

ಆಸ್ಟ್ರೇಲಿಯಾ ಗೆಲುವಿನಿಂದ ಪಾಕ್ಗೆ ಒತ್ತಡ, ಎಲ್ಲಾ ತಂಡಗಳ ಸೆಮಿಫೈನಲ್ಸ್ಗೆ ಲೆಕ್ಕಾಚಾರ
ಆಸ್ಟ್ರೇಲಿಯಾ ಗೆಲುವಿನಿಂದ ಪಾಕ್ಗೆ ಒತ್ತಡ, ಎಲ್ಲಾ ತಂಡಗಳ ಸೆಮಿಫೈನಲ್ಸ್ಗೆ ಲೆಕ್ಕಾಚಾರ

ಹೊಸದಿಲ್ಲಿ: ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ ಮೊದಲಾವಧಿ ಬಹುತೇಕ ಮುಗಿದಿದೆ. ಇದೀಗ ವಿಶ್ವಕಪ್‌ ಸೆಮಿಫೈನಲ್ಸ್‌ಗೆ ಅರ್ಹತೆ ಪಡೆಯುವ ಸಲುವಾಗಿ ಟೂರ್ನಿಯ ಎರಡನೇ ಅವಧಿಯ ಪಂದ್ಯಗಳು ಎಲ್ಲಾ ತಂಡಗಳಿಗೆ ನಿರ್ಣಯಕವಾಗಿವೆ. ಬುಧವಾರ ನೆದರ್ಲೆಂಡ್ಸ್‌ ವಿರುದ್ಧ ಆಸ್ಟ್ರೇಲಿಯಾ ತಂಡ 309 ರನ್‌ಗಳ ಭಾರಿ ಅಂತರದಲ್ಲಿ ಗೆಲುವು ಪಡೆದ ಬಳಿಕ ಕೆಲ ತಂಡಗಳ ಸೆಮಿಫೈನಲ್ಸ್ ಹಾದಿ ಅತ್ಯಂತ ಕಠಿಣವಾಗಿದೆ.

ಅದರಂತೆ ಹಲವು ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಿದ್ದ ಪಾಕಿಸ್ತಾನ ತಂಡ ಆರಂಭಿಕ ಎರಡೂ ಪಂದ್ಯಗಳಲ್ಲಿ ಗೆಲುವು ಪಡೆದ ಬಳಿಕ ಹ್ಯಾಟ್ರಿಕ್‌ ಸೋಲು ಅನುಭವಿಸಿದೆ. ಭಾರತ, ಆಸ್ಟ್ರೇಲಿಯಾ ಹಾಗೂ ಅಫಘಾನಿಸ್ತಾನ ವಿರುದ್ಧದ ಪಂದ್ಯಗಳಲ್ಲಿ ಪಾಕ್‌ ಸೋಲು ಅನುಭವಿಸಿತ್ತು. ಆದರೂ ಇನ್ನುಳಿದ ಪಂದ್ಯಗಳನ್ನು ಗೆದ್ದು ಸೆಮಿಫೈನಲ್ಸ್‌ಗೆ ಅರ್ಹತೆ ಪಡೆಯಬೇಕೆಂದು ಪ್ಲಾನ್‌ ಮಾಡಿಕೊಂಡಿತ್ತು. ಆದರೆ, ಆಸ್ಟ್ರೇಲಿಯಾ ತಂಡ ದಾಖಲೆಯ ಜಯ ಪಡೆದು ಪಾಯಿಂಟ್ಸ್‌ ಟೇಬಲ್‌ನಲ್ಲಿ ನಾಲ್ಕನೇ ಸ್ಥಾನಕ್ಕೆ ಲಗ್ಗೆ ಇಟ್ಟಿರುವ ಕಾರಣ, ಪಾಕ್‌ಗೆ ಭಾರಿ ಹಿನ್ನಡೆಯಾಗಿದೆ.

ವಿಶ್ವಕಪ್‌ ಟೂರ್ನಿಯಲ್ಲಿ ಆರಂಭಿಕ ಎರಡೂ ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದ ಆಸ್ಟ್ರೇಲಿಯಾ ತಂಡ, ನಂತರ ಸತತ ಮೂರೂ ಪಂದ್ಯಗಳಲ್ಲಿ ಗೆಲುವು ಪಡೆಯುವ ಮೂಲಕ ಭರ್ಜರಿ ಕಮ್‌ಬ್ಯಾಕ್‌ ಮಾಡಿದೆ. ಅದರಲ್ಲೂ ಬುಧವಾರ ನೆದರ್ಲೆಂಡ್ಸ್‌ ವಿರುದ್ಧ 309 ರನ್‌ಗಳ ಭಾರಿ ಅಂತರದ ಜಯದಿಂದ ಆಸ್ಟ್ರೇಲಿಯಾ ತಂಡದ ರನ್‌ರೇಟ್‌ನಲ್ಲಿ ಏರಿಕೆಯಾಗಿದೆ. ಆ ಮೂಲಕ ಟೂರ್ನಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ನಾಲ್ಕನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ದಿಲ್ಲಿಯ ಅರುಣ್ ಜೆಟ್ಲಿ ಸ್ಟೇಡಿಯಂನಲ್ಲಿ 40ನೇ ಓವರ್‌ನಲ್ಲಿ ಕ್ರೀಸ್‌ಗೆ ಬಂದ ಮ್ಯಾಕ್ಸ್‌ವೆಲ್ ತಮ್ಮ ಸ್ಪೋಟಕ ಬ್ಯಾಟಿಂಗ್‌ ಮೂಲಕ ನೆದರ್ಲೆಂಡ್ಸ್ ಬೌಲರ್‌ಗಳಿಗೆ ಭಯ ಹುಟ್ಟಿಸಿದರು. ಮಕ್ಕಳ ಬೌಲಿಂಗ್‌ಗೆ ಆಡುವಂತೆ ಮ್ಯಾಕ್ಸ್‌ವೆಲ್ ಬ್ಯಾಟ್‌ ಬೀಸಿದರು. ಅವರು ಕೇವಲ 44 ಎಸೆತಗಳಲ್ಲಿ 9 ಬೌಂಡರಿ ಮತ್ತು 8 ಸಿಕ್ಸರ್‌ಗಳ ಮೂಲಕ 240.91 ಸ್ಟ್ರೈಕ್ ರೇಟ್‌ನಲ್ಲಿ 106 ರನ್ ಬಾರಿಸಿದರು. ಇದರ ಪರಿಣಾಮ ಹಲವು ತಂಡಗಳು ಸೆಮಿಫೈನಲ್ಸ್‌ ರೇಸ್‌ನಿಂದ ಬಹುತೇಕ ಹೊರಬಿದ್ದಿವೆ.

ವಿಶ್ವಕಪ್‌ ಸೆಮಿಫೈನಲ್ಸ್‌ಗೆ ಅರ್ಹತೆ ಪಡೆಯಲು ಒಂದು ತಂಡಕ್ಕೆ 7 ಗೆಲುವುಗಳು ಅಂದರೆ 14 ಅಂಕಗಳ ಅಗತ್ಯವಿದೆ. ಆದರೆ 12 ಅಂಕಗಳನ್ನು ಪಡೆದರೂ ಅಗ್ರ-4ಕ್ಕೆ ಪ್ರವೇಶ ಪಡೆಯಬಹುದು. ಟೂರ್ನಿಯ ಸೆಮಿಫೈನಲ್ಸ್‌ಗೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ಮುಂದಿನ ಪಂದ್ಯಗಳು ಎಲ್ಲಾ ತಂಡಗಳಿಗೆ ನಿರ್ಣಾಯಕವಾಗಿವೆ. ಪ್ರಸ್ತುತ ಭಾರತ, ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ತಂಡಗಳ ಸೆಮಿಫೈನಲ್ಸ್‌ ಹಾದಿ ಸುಲಭವಾಗಿದೆ. ಭಾರತ 5 ಗೆಲುವಿನ ನಂತರ 10 ಅಂಕಗಳನ್ನು ಹೊಂದಿದ್ದರೆ, ದಕ್ಷಿಣ ಆಫ್ರಿಕಾ 5 ರಲ್ಲಿ 4 ಗೆಲುವಿನ ನಂತರ 8 ಅಂಕಗಳನ್ನು ಪಡೆದುಕೊಂಡಿದೆ ಹಾಗೂ ನ್ಯೂಜಿಲೆಂಡ್ 5 ರಲ್ಲಿ 4 ಗೆಲುವಿನ ಬಳಿಕ 8 ಅಂಕಗಳನ್ನು ಹೊಂದಿದೆ. ಈ ಮೂರೂ ತಂಡಗಳ ನೆಟ್‌ ರನ್‌ರೇಟ್‌ ಪ್ಲಸ್‌ ಆಗಿದೆ.

ಆಸ್ಟ್ರೇಲಿಯಾ 6 ಅಂಕಗಳೊಂದಿಗೆ +1.142ರ ಅತ್ಯುತ್ತಮ ರನ್‌ರೇಟ್‌ ಹೊಂದಿದೆ. ಆ ಮೂಲಕ ನಾಲ್ಕನೇ ಸ್ಥಾನದಲ್ಲಿದೆ. ಪಾಕಿಸ್ತಾನ ತಂಡ 5ನೇ ಸ್ಥಾನದಲ್ಲಿದ್ದು, ಅಪಘಾನಿಸ್ತಾನ ಆರನೇ ಸ್ಥಾನದಲ್ಲಿದೆ. ಈ ಎರಡೂ ತಂಡಗಳು ತಲಾ 2 ಗೆಲುವಿನಿಂದ 4 ಅಂಕಗಳನ್ನು ಹೊಂದಿವೆ. ಈ ಎರಡೂ ತಂಡಗಳಿಗೆ ಇನ್ನೂ 4 ಪಂದ್ಯಗಳು ಬಾಕಿ ಇವೆ ಹಾಗೂ 12 ಅಂಕಗಳನ್ನು ಕಲೆ ಹಾಕಲು ಮಾತ್ರ ಅವಕಾಶವಿದೆ. ಆದರೆ, ಆಸ್ಟ್ರೇಲಿಯಾ ಇನ್ನುಳಿದ 4ರಲ್ಲಿಯೂ ಗೆದ್ದರೆ 14 ಅಂಕಗಳನ್ನು ದಾಖಲಿಸಲಿದೆ. ಇದು ಈ ಎರಡೂ ತಂಡಗಳಿಗೆ ಹಿನ್ನಡೆಯನ್ನು ತಂದೊಡ್ಡಬಹುದು. ಇನ್ನು ಹಾಲಿ ಚಾಂಪಿಯನ್ಸ್ ಇಂಗ್ಲೆಂಡ್‌ ಆಡಿರುವ 4 ಪಂದ್ಯಗಳಿಂದ ಮೂರರಲ್ಲಿ ಸೋತು, ಕೇವಲ ಒಂದರಲ್ಲಿ ಜಯಿಸಿದೆ. ಆದರೂ ಇನ್ನುಳಿದ 5 ಪಂದ್ಯಗಳಲ್ಲಿ ಗೆದ್ದು ಇಂಗ್ಲೆಂಡ್‌ ಕೂಡ 12 ಅಂಕಗಳನ್ನು ಕಲೆ ಹಾಕಲಿದೆ.

ಮತ್ತೊಂದೆಡೆ ಬಾಂಗ್ಲಾದೇಶ ಮತ್ತು ನೆದರ್ಲೆಂಡ್ಸ್‌ ತಂಡಗಳು ತಲಾ 5 ಪಂದ್ಯಗಳನ್ನು ಆಡಿದ್ದು, ಒಂದೊಂದು ಪಂದ್ಯದಲ್ಲಿ ಜಯಿಸಿವೆ. ಆ ಮೂಲಕ ಟೂರ್ನಿಯ ಸೆಮಿಫೈನಲ್ಸ್‌ ರೇಸ್‌ನಿಂದ ಬಹುತೇಕ ಹೊರಬಿದ್ದಿವೆ. ಆದರೆ, ಈ ತಂಡಗಳು ಇನ್ನುಳಿದ 4 ಪಂದ್ಯಗಳಲ್ಲಿ ಗೆದ್ದರೂ ಒಟ್ಟಾರೆ 9 ಅಂಕಗಳನ್ನು ಕಲೆ ಹಾಕಬಹುದಷ್ಟೆ. ಈ ಎರಡೂ ತಂಡಗಳು ಎದುರಾಳಿ ತಂಡಗಳನ್ನು ಸೋಲಿಸಿದರೆ, ಸೆಮಿಫೈನಲ್ಸ್ ಚಿತ್ರಣ ಸ್ವಲ್ಪ ಬದಲಾಗಬಹುದು. ಅಂದ ಹಾಗೆ ಇನ್ನುಳಿದ ಪಂದ್ಯಗಳನ್ನು ಗೆದ್ದು ಟೂರ್ನಿಯಿಂದ ಗೌರವಯುತವಾಗಿ ನಿರ್ಗಮಿಸಿಲು ಬಾಂಗ್ಲಾ, ನೆದರ್ಲೆಂಡ್ಸ್‌ ಎದುರು ನೋಡುತ್ತಿವೆ.

ಕ್ರೀಡೆ

ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.

ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್‌ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.

ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.

ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.

Continue Reading

ಕ್ರೀಡೆ

ಭಾರತೀಯ ತಂಡದ ಕೋಚ್ ಗೌತಮ್ ಗಂಭೀರ್ ವಿರುದ್ಧ ಟೀಕೆ, ಬಿಸಿಸಿಐ ಸಹಾಯಕ ಕೋಚ್ ಮಾರ್ನೆ ಮಾರ್ಕೆಲ್-ಟೆನ್ ಡೊಶ್ಕಾಟೆ ಬದಲಾವಣೆ ಸಾಧ್ಯತೆ

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ್ ಅವರ ಕೋಚಿಂಗ್ ಶೈಲಿಯನ್ನು ಮಾಜಿ ಕ್ರಿಕೆಟಿಗರು ಸೇರಿದಂತೆ ಸುನಿಲ್ ಗವಾಸ್ಕರ್, ರಿಕಿ ಪಾಂಟಿಂಗ್ ಸೇರಿದಂತೆ ಹಲವು ಹಿರಿಯರು ಭಾರೀ ಟೀಕೆ ಮಾಡಿದ್ದಾರೆ. ಈ ಟೀಕೆಗಳಿಗೆ ಸಂಬಂಧಿಸಿ, ಗಂಭೀರ್ ಮನವಿ ಮಾಡಿಕೊಂಡ ಸಹಾಯಕ ಕೋಚ್‌ಗಳಾದ ಮಾರ್ನೆ ಮಾರ್ಕೆಲ್ (ಬೌಲಿಂಗ್ ಕೋಚ್) ಮತ್ತು ರ್ಯಾನ್ ಟೆನ್ ಡೊಶ್ಕಾಟೆ ಶೀಘ್ರದಲ್ಲೇ ತಮ್ಮ ಹುದ್ದೆಯಿಂದ ವಜಾಗೊಳ್ಳುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಗಳು ಸೂಚಿಸುತ್ತಿವೆ.

ಕಳೆದ ವರ್ಷ ಜುಲೈನಲ್ಲಿ ಗಂಭೀರ್ ಭಾರತದ ಕೋಚ್ ಆಗಿ ನೇಮಕಗೊಂಡಿದ್ದರು. ಅವರ ಮನವಿ ಮೇರೆಗೆ ಐಪಿಎಲ್ ತಂಡಗಳಲ್ಲಿ ಕಾರ್ಯನಿರ್ವಹಿಸಿದ್ದ ಅಭಿಷೇಕ್ ನಾಯರ್, ಮಾರ್ಕೆಲ್ ಮತ್ತು ಡೊಶ್ಕಾಟೆ ಸಹಾಯಕ ಕೋಚ್ ಆಗಿ ನೇಮಕಗೊಂಡಿದ್ದರು. ಆದರೆ, ನ್ಯೂಜಿಲೆಂಡ್ ವಿರುದ್ಧ ವೈಟ್ ವಾಷ್ ಹಾಗೂ ಆಸ್ಟ್ರೇಲಿಯಾ ತಂಡದ ಸೋಲುಗಳು ಬಿಸಿಸಿಐನಲ್ಲಿ ಅಸಮಾಧಾನ ಮೂಡಿಸಿದ ಕಾರಣ, ಮೊದಲನೆಯದಾಗಿ ಸಹಾಯಕ ಕೋಚ್ ಅಭಿಷೇಕ್ ನಾಯರ್ ಹುದ್ದೆಯಿಂದ ವಜಾಗೊಂಡಿದ್ದರು.

ಇದೇ ಹಿನ್ನೆಲೆಯಲ್ಲಿ, ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್ ಮತ್ತು ರ್ಯಾನ್ ಟೆನ್ ಡೊಶ್ಕಾಟೆ ಸಹ ಇನ್ನೂ ಸಹ ಹುದ್ದೆಯಿಂದ ವಜಾಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ತಂಡದ ಆಯ್ಕೆ ಪ್ರಕ್ರಿಯೆ, ಆಟಗಾರರ ಕಾರ್ಯದೊತ್ತಡ, ಪಿಚ್ ಅನ್ವಯ 11 ಆಟಗಾರರ ಆಯ್ಕೆ ಮತ್ತು ಸಮತೋಲನ ಕಾಯ್ದುಕೊಳ್ಳುವ ವಿಚಾರದಲ್ಲಿ ಕೋಚ್‌ಗಳ ಕಾರ್ಯವೈಖರಿಗೆ ಬಿಸಿಸಿಐ ಅತೃಪ್ತಿ ವ್ಯಕ್ತಪಡಿಸಿದೆ.

ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸ್ಥಾನಕ್ಕೂ ಸವಾಲು ಎದುರಾಗಿದೆ. 2023ರ ಜುಲೈನಲ್ಲಿ ನೇಮಕಗೊಂಡ ಈ ಸಮಿತಿ ಮುಖ್ಯಸ್ಥರ ನೇತೃತ್ವದಲ್ಲಿ ಭಾರತ ತಂಡದ ಪ್ರದರ್ಶನ ಕಳೆದ ಒಂದು ವರ್ಷದಿಂದ ತೀರಾ ಕಳಪೆಯಾಗಿದ್ದು, ಸಮರ್ಥ ಆಟಗಾರರ ಆಯ್ಕೆಯಲ್ಲಿ ನಿರಂತರ ಎಡವಾಟಗಳು ನಡೆದಿವೆ ಎಂದು ವಿಶ್ಲೇಷಣೆಗಳು ತಿಳಿಸುತ್ತಿವೆ.

Continue Reading

ಕ್ರೀಡೆ

ಕನ್ನಡಿಗ ಕ್ರಿಕೆಟಿಗ ದೇವದತ್ ಪಡಿಕ್ಕಲ್ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಅತಿ ಹೆಚ್ಚು ಬೆಲೆಗೆ ಮಾರಾಟ

ಕರ್ನಾಟಕದ ಪ್ರತಿಭಾವಂತ ಕ್ರಿಕೆಟಿಗ ದೇವದತ್ ಪಡಿಕ್ಕಲ್ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಅವರು ‘ಹುಬ್ಬಳ್ಳಿ ಟೈಗರ್ಸ್’ ತಂಡಕ್ಕೆ 13.20 ಲಕ್ಷ ರೂಪಾಯಿಗೆ ಮಾರಾಟ ಆಗಿದ್ದು, ಈ ಮೊತ್ತವು ಮಹಾರಾಜ ಟ್ರೋಫಿಯ ಇತಿಹಾಸದಲ್ಲಿ ಅತಿ ಹೆಚ್ಚು ಬೆಲೆಯಾಗಿದೆ. ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪರ ಉತ್ತಮ ಪ್ರದರ್ಶನ ನೀಡಿ, ಅವರು ಈ ಯಶಸ್ಸಿಗೆ ಪಾತ್ರರಾಗಿದ್ದಾರೆ.

ಕಳೆದ ಐಪಿಎಲ್ ಪಂದ್ಯಾವಳಿಯಲ್ಲಿ ಗಾಯದಿಂದ ಕೆಲವು ಪಂದ್ಯಗಳಿಂದ ದೂರ ಉಳಿದರೂ, ದೇವದತ್ ಪಡಿಕ್ಕಲ್ ಅವರ ಸಾಮರ್ಥ್ಯ ಎಲ್ಲರ ಮನಸ್ಸಿಗೆ ತಲುಪಿತ್ತು. 2024ರ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್‌ನಿಂದ ಹೊರಬಂದ ಬಳಿಕ ಆರ್‌ಸಿಬಿ ತಂಡವು ಅವರನ್ನು 3.20 ಕೋಟಿ ರೂಪಾಯಿಗೆ ಖರೀದಿಸಿದೆ. ಇದೀಗ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡವು 13.20 ಲಕ್ಷ ರೂಪಾಯಿಗೆ ದೇವದತ್ ಪಡಿಕ್ಕಲ್ ಅವರನ್ನು ಪಡೆದಿದ್ದು, ಇದು ಟೂರ್ನಿಯ ದಾಖಲೆಯ ಬೆಲೆಯಾಗಿದೆ.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಜುಲೈ 15ರಂದು ಬೆಂಗಳೂರಿನಲ್ಲಿ ಆಯೋಜಿಸಿದ ಈ ಹರಾಜಿನಲ್ಲಿ ದೇವದತ್ ಪಡಿಕ್ಕಲ್ ಅತಿ ಹೆಚ್ಚು ಬೆಲೆಗೆ ಮಾರಾಟವಾದ ಕನ್ನಡಿಗ ಕ್ರಿಕೆಟಿಗರಾಗಿದ್ದಾರೆ. ಮಹಾರಾಜ ಟ್ರೋಫಿಯಲ್ಲಿ ಪ್ರತಿ ಫ್ರಾಂಚೈಸಿಯು ಕನಿಷ್ಠ ಇಬ್ಬರು ಸ್ಥಳೀಯ ಆಟಗಾರರನ್ನು ತಂಡದಲ್ಲಿ ಇರಿಸಬೇಕು ಎಂಬ ನಿಯಮವಿದ್ದು, ಇದರಿಂದ ಸ್ಥಳೀಯ ಪ್ರತಿಭೆಗಳ ಪ್ರೋತ್ಸಾಹಕ್ಕೆ ದೊಡ್ಡ ಅವಕಾಶ ಸಿಗುತ್ತದೆ.

ಈ ವರ್ಷದ ಪಂದ್ಯಗಳು ಮುಚ್ಚಿದ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅಭಿಮಾನಿಗಳಿಗೆ ಮೈದಾನದಲ್ಲಿ ವೀಕ್ಷಣೆಗೆ ಅವಕಾಶ ಇಲ್ಲ. ಆದರೂ ದೇವದತ್ ಪಡಿಕ್ಕಲ್ ಅವರ ಸಾಧನೆ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ ಮತ್ತು ಯುವ ಕ್ರಿಕೆಟಿಗರಿಗೆ ಪ್ರೇರಣೆಯಾಗಿದೆ.

Continue Reading

Trending