Connect with us

ದೇಶ

ಇನ್ಫಿ ನಾರಾಯಣ ಮೂರ್ತಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸುಧಾ ಮೂರ್ತಿ

Published

on

ಇನ್ಫಿ ನಾರಾಯಣ ಮೂರ್ತಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸುಧಾ ಮೂರ್ತಿ
ಇನ್ಫಿ ನಾರಾಯಣ ಮೂರ್ತಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸುಧಾ ಮೂರ್ತಿ

ನವದೆಹಲಿ: ದೇಶದ ಒಟ್ಟಾರೆ ಉತ್ಪಾದಕತೆಯನ್ನು ಹೆಚ್ಚಿಸಲು ಯುವಕರಿಗೆ ವಾರಕ್ಕೆ 70 ಗಂಟೆಗಳ ಕಾರ್ಯ ನಿರ್ವಹಿಸಬೇಕು ಎಂದು ಇನ್ಫೋಸಿಸ್ ಸಂಸ್ಧಾಪಕ ನಾರಾಯಣ ಮೂರ್ತಿ ಹೇಳಿಕೆ ನೀಡಿದ್ದರು, ಈ ಬಗ್ಗೆ ಪತ್ನಿ ಸುಧಾ ಮೂರ್ತಿ ಪ್ರತಿಕ್ರಿಯೆ ನೀಡಿದ್ದಾರೆ, ಭಾನುವಾರ ನಡೆದ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ನಲ್ಲಿ ಅವರು ಮಾತನಾಡುತ್ತ ತನ್ನ ಪುಸ್ತಕಗಳು ಮತ್ತು ನಾರಾಯಣ ಮೂರ್ತಿ ಅವರೊಂದಿಗಿನ ಜೇವನದ ಅನುಭವವನ್ನು ಹಂಚಿಕೊAಡಿದ್ದಾರೆ, ಈ ವೇಳೆ ನಾರಾಯಣ ಮೂರ್ತಿ ಅವರ ಹೇಳಿಕೆ ವಿಚಾರವಾಗಿ ಮಾತನಾಡಿ ತಮ್ಮ ಪತಿ ಉತ್ಸಾಹ ಮತ್ತು ಕಠಿಣ ಪರಿಶ್ರಮವನ್ನು ನಂಬುತ್ತಾರೆ, ಅವರು ವಾರಕ್ಕೆ 80 ರಿಂದ 90 ಗಂಟೆಗಳ ಕಾಲ ಕೆಲಸ ಮಾಡಿದ್ದಾರೆ, ಹಾಗಾಗಿ ಅವರಿಗೆ ಅದಕ್ಕಿಂತ ಕಡಿಮೆ ಕೆಲಸ ಮಾಡಿ ಗೊತ್ತಿಲ್ಲ ಅವರು ನಿಜವಾಗಿಯೂ ಶ್ರಮ ಜೀವಿ ಎಂದು ಹೇಳಿದರು,
ಅದರೆ ಇಂದಿನ ಕಾರ್ಪೋರೇಟ್ ಲೋಕದಲ್ಲಿ ವಿಷಯಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದು ಮುಖ್ಯವಾಗÀತ್ತದೆ, ಜನರು ವಿಭನ್ನ ಅಭಿವ್ಯಕ್ತಿಗಳನ್ನು ಹೊಂದಿದ್ದಾರೆ, ಅದರೆ ನಾರಾಯಣ ಮೂರ್ತಿ ಅವರು ಹೇಳುವ ಮಾತುಗಳ ಹಾಗೆಯೇ ಬದುಕಿದವರು, ಹೇಳಿದ ಮಾತಿನಂತೆ ನಡೆದುಕೊಂಡಿದ್ದರುಮ ಹಾಗಾಗಿ ಅವರು ತಮ್ಮ ಅನುಭವವನ್ನು ಹಂಚಿಕೊAಡಿದ್ದಾರೆ ಎಂದರು,

ದೇಶ

Raksha Bandhan 2026: ದೇಶವಾಸಿಗಳಿಗೆ PM Modi ಶುಭಾಶಯ; ಸಹೋದರ-ಸಹೋದರಿಯರ ಬಾಂಧವ್ಯಕ್ಕೆ ವಿಶೇಷ ಸಂದೇಶ

Published

on

By

ನವದೆಹಲಿ: ಸಹೋದರ-ಸಹೋದರಿಯರ ನಡುವಿನ ಪ್ರೀತಿ, ವಿಶ್ವಾಸ ಮತ್ತು ವಾತ್ಸಲ್ಯದ ಸಂಕೇತವಾಗಿರುವ ರಕ್ಷಾಬಂಧನ (Raksha Bandhan) ಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ರಕ್ಷಾಬಂಧನದ ಪವಿತ್ರ ಹಬ್ಬವು ಪ್ರತಿಯೊಬ್ಬರ ಜೀವನದಲ್ಲೂ ಸಂತೋಷ, ಸುಖ ಮತ್ತು ಸಮೃದ್ಧಿಯನ್ನು ತರಲಿ ಎಂದು ಹಾರೈಸಿದ್ದಾರೆ. ಸಹೋದರ-ಸಹೋದರಿಯರ ನಡುವಿನ ಪ್ರೀತಿ ಮತ್ತು ನಂಬಿಕೆಯ ಬಾಂಧವ್ಯ ಸದಾ ಗಟ್ಟಿಯಾಗಿ ಉಳಿಯಲಿ ಎಂದು ಅವರು ಆಶಿಸಿದ್ದಾರೆ.

ಮೋದಿಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು

ರಕ್ಷಾಬಂಧನದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಯವರ ಅಧಿಕೃತ ನಿವಾಸದಲ್ಲೂ ವಿಶೇಷ ಸಂಭ್ರಮ ಕಂಡುಬಂದಿದೆ. ಶಾಲಾ ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಖಿ ಕಟ್ಟಿ ಹಬ್ಬದ ಶುಭಾಶಯಗಳನ್ನು ಕೋರಿದರು.

ಇದೇ ವೇಳೆ ದೇಶದ ಗಡಿ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಭಾರತೀಯ ಸೇನೆ ಮತ್ತು ಭದ್ರತಾ ಪಡೆಗಳ ಯೋಧರಿಗೂ ದೇಶದ ವಿವಿಧ ಭಾಗಗಳ ಮಹಿಳೆಯರು ಹಾಗೂ ಮಕ್ಕಳು ರಾಖಿ ಕಳುಹಿಸಿ ತಮ್ಮ ಪ್ರೀತಿ ಮತ್ತು ಗೌರವವನ್ನು ವ್ಯಕ್ತಪಡಿಸಿದ್ದಾರೆ.

ಮಹಿಳಾ ಶಕ್ತಿ, ಗೌರವಕ್ಕೆ ಒತ್ತು

ರಕ್ಷಾಬಂಧನ ಕೇವಲ ಸಹೋದರ-ಸಹೋದರಿಯರ ಹಬ್ಬವಲ್ಲದೆ, ಮಹಿಳೆಯರ ಗೌರವ, ಸುರಕ್ಷತೆ ಮತ್ತು ಸಬಲೀಕರಣದ ಸಂದೇಶವನ್ನು ಸಾರುವ ಸಂದರ್ಭವೂ ಆಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು ದೇಶದ ಜನತೆಗೆ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಸಂಸ್ಕೃತ ದಿನಕ್ಕೂ ಮೋದಿ ಶುಭಾಶಯ

ರಕ್ಷಾಬಂಧನದ ಜೊತೆಗೆ ವಿಶ್ವ ಸಂಸ್ಕೃತ ದಿನದ ಅಂಗವಾಗಿಯೂ ಪ್ರಧಾನಿ ಮೋದಿ ಅವರು ದೇಶ-ವಿದೇಶಗಳ ಸಂಸ್ಕೃತ ಪ್ರೇಮಿಗಳಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ವಿಶೇಷವೆಂದರೆ, ಅವರು ಸಂಸ್ಕೃತ ಭಾಷೆಯಲ್ಲೇ ಶುಭಾಶಯ ಸಂದೇಶ ಹಂಚಿಕೊಂಡಿದ್ದಾರೆ.

ಸಂಸ್ಕೃತವು ಭಾರತದ ಪ್ರಾಚೀನ ಜ್ಞಾನ ಪರಂಪರೆಯ ಪ್ರಮುಖ ಭಾಗವಾಗಿದ್ದು, ಅಪಾರ ಜ್ಞಾನ ಸಂಪತ್ತನ್ನು ಒಳಗೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ಮಹಾಭಾರತದ ಶ್ಲೋಕವೊಂದನ್ನು ಹಂಚಿಕೊಂಡು ಸಂಸ್ಕೃತ ಭಾಷೆಯ ಮಹತ್ವವನ್ನು ಸ್ಮರಿಸಿದ್ದಾರೆ.

ಪ್ರಾಚೀನ ಗುರುಕುಲ ಪರಂಪರೆಯಲ್ಲಿ ಶ್ರಾವಣ ಪೂರ್ಣಿಮೆಯಂದು ಹೊಸ ಶಿಕ್ಷಣ ವರ್ಷ ಆರಂಭವಾಗುತ್ತಿದ್ದ ಹಿನ್ನೆಲೆಯಲ್ಲಿ ವಿಶ್ವ ಸಂಸ್ಕೃತ ದಿನವನ್ನು ಆಚರಿಸಲಾಗುತ್ತದೆ. ಸಂಸ್ಕೃತ ಭಾಷೆಯ ಕಲಿಕೆ, ಸಂರಕ್ಷಣೆ ಮತ್ತು ಪ್ರಸಾರಕ್ಕಾಗಿ ಶ್ರಮಿಸುತ್ತಿರುವ ಎಲ್ಲರ ಪ್ರಯತ್ನವನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.

Continue Reading

ದೇಶ

LPG e-KYC Deadline: ಗ್ಯಾಸ್‌ ಗ್ರಾಹಕರೇ ಗಮನಿಸಿ, ಆಗಸ್ಟ್ 31 ಕೊನೆಯ ಗಡುವು! ಮಾಡದಿದ್ದರೆ ಏನಾಗುತ್ತೆ?

Published

on

By

ಬೆಂಗಳೂರು: ದೇಶದ LPG ಗ್ರಾಹಕರಿಗೆ ಕೇಂದ್ರ ಸರ್ಕಾರ ಮಹತ್ವದ ಸೂಚನೆ ನೀಡಿದ್ದು, ನಕಲಿ ಹಾಗೂ ವಂಚನೆಯ ಗ್ಯಾಸ್‌ ಸಂಪರ್ಕಗಳನ್ನು ಗುರುತಿಸುವ ಉದ್ದೇಶದಿಂದ LPG e-KYC ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಲಾಗಿದೆ. ಆರಂಭದಲ್ಲಿ ಆಗಸ್ಟ್ 23ರವರೆಗೆ ಗಡುವು ನೀಡಲಾಗಿತ್ತು. ಇದೀಗ ಈ ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ.

ಇಂಡಿಯನ್ ಆಯಿಲ್, ಎಚ್‌ಪಿಸಿಎಲ್ ಮತ್ತು ಬಿಪಿಸಿಎಲ್ ಸೇರಿದಂತೆ ದೇಶದ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳ ದೇಶೀಯ ಎಲ್‌ಪಿಜಿ ಗ್ರಾಹಕರು ಇ-ಕೆವೈಸಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ನಕಲಿ ದಾಖಲೆಗಳು ಅಥವಾ ಇತರರ ಹೆಸರಿನಲ್ಲಿ ಪಡೆದಿರುವ ಸಂಪರ್ಕಗಳನ್ನು ಪತ್ತೆಹಚ್ಚುವುದು ಈ ಪ್ರಕ್ರಿಯೆಯ ಪ್ರಮುಖ ಉದ್ದೇಶವಾಗಿದೆ.

LPG e-KYC ಮಾಡದಿದ್ದರೆ ಏನಾಗಬಹುದು?

ಗ್ರಾಹಕರು ನಿಗದಿತ ಅವಧಿಯಲ್ಲಿ ಇ-ಕೆವೈಸಿ ಪೂರ್ಣಗೊಳಿಸದಿದ್ದರೂ ತಕ್ಷಣವೇ ಗ್ಯಾಸ್‌ ಸಂಪರ್ಕ ಕಡಿತಗೊಳ್ಳುತ್ತದೆ ಎಂದು ಹೇಳಲಾಗಿಲ್ಲ. ಆದರೆ ಮುಂದಿನ ದಿನಗಳಲ್ಲಿ ಸಿಲಿಂಡರ್ ಬುಕ್ಕಿಂಗ್, ವಿತರಣೆ ಅಥವಾ ಇತರ ಸೇವೆಗಳಲ್ಲಿ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ. ಕೆಲವು ಸಂದರ್ಭಗಳಲ್ಲಿ ಎಲ್‌ಪಿಜಿ ಸಬ್ಸಿಡಿ ಸೇವೆಯ ಮೇಲೂ ಪರಿಣಾಮ ಉಂಟಾಗಬಹುದು.

ಇ-ಕೆವೈಸಿ ಪೂರ್ಣಗೊಂಡ ಬಳಿಕ ಬಾಕಿ ಉಳಿದಿರುವ ಸೇವೆಗಳು ಮರುಪ್ರಾರಂಭವಾಗುವ ಸಾಧ್ಯತೆಯಿದೆ. ಹೀಗಾಗಿ ಗ್ರಾಹಕರು ಕೊನೆಯ ದಿನದವರೆಗೆ ಕಾಯದೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಉತ್ತಮ.

ಮೊಬೈಲ್‌ನಲ್ಲೇ ಉಚಿತವಾಗಿ e-KYC ಮಾಡುವುದು ಹೇಗೆ?

ಎಲ್‌ಪಿಜಿ ಗ್ರಾಹಕರು ಮನೆಯಲ್ಲೇ ಕುಳಿತು ಮೊಬೈಲ್ ಮೂಲಕ ಇ-ಕೆವೈಸಿ ಪೂರ್ಣಗೊಳಿಸಬಹುದು. ಇದಕ್ಕಾಗಿ ಮೊದಲು ನಿಮ್ಮ ಗ್ಯಾಸ್‌ ಕಂಪನಿಯ ಅಧಿಕೃತ ಮೊಬೈಲ್ ಆ್ಯಪ್‌ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.

ನಂತರ ಗ್ಯಾಸ್‌ ಸಂಪರ್ಕಕ್ಕೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯ ಮೂಲಕ ಆ್ಯಪ್‌ನಲ್ಲಿ ನೋಂದಣಿ ಮಾಡಿಕೊಂಡು ಲಾಗಿನ್ ಆಗಬೇಕು. ಅಗತ್ಯವಿದ್ದರೆ 16 ಅಥವಾ 17 ಅಂಕಿಗಳ LPG ID ನಮೂದಿಸಬೇಕು.

ಮುಂದೆ ಆ್ಯಪ್‌ನ ಪ್ರೊಫೈಲ್ ಅಥವಾ ಮೆನು ವಿಭಾಗದಲ್ಲಿ ಕಾಣಿಸುವ LPG e-KYC / Re-KYC ಆಯ್ಕೆಯನ್ನು ಆರಿಸಬೇಕು. ನಿಯಮ ಮತ್ತು ಷರತ್ತುಗಳನ್ನು ಒಪ್ಪಿಕೊಂಡ ನಂತರ ಮುಖದ ದೃಢೀಕರಣಕ್ಕಾಗಿ ಸೂಚನೆಗಳನ್ನು ಅನುಸರಿಸಬೇಕು.

ಇದಕ್ಕಾಗಿ Aadhaar Face RD ಆ್ಯಪ್ ಅಗತ್ಯವಿರಬಹುದು. ಮುಖದ ದೃಢೀಕರಣ ಯಶಸ್ವಿಯಾದ ಬಳಿಕ ಗ್ರಾಹಕರ ವಿವರಗಳು ಪರದೆಯ ಮೇಲೆ ಕಾಣಿಸಿಕೊಳ್ಳುತ್ತವೆ. ವಿವರಗಳನ್ನು ಪರಿಶೀಲಿಸಿ ಕೊನೆಯಲ್ಲಿ Submit ಆಯ್ಕೆಯನ್ನು ಒತ್ತಿದರೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.

ಹೀಗಾಗಿ ಇಂಡೇನ್, ಎಚ್‌ಪಿಸಿಎಲ್ ಅಥವಾ ಭಾರತ್ ಗ್ಯಾಸ್‌ ಬಳಸುತ್ತಿರುವ ಗ್ರಾಹಕರು ಆಗಸ್ಟ್ 31ರೊಳಗೆ LPG e-KYC ಪೂರ್ಣಗೊಳಿಸುವುದು ಉತ್ತಮ.

Continue Reading

ರಾಜಕೀಯ

B Nagendra ರಾಜೀನಾಮೆ: ಕಾಂಗ್ರೆಸ್‌ನಲ್ಲಿ ಬಿಗ್ ಟ್ವಿಸ್ಟ್, ಹೈಕಮಾಂಡ್ ಮುಂದಿದೆ ಮಹತ್ವದ ನಿರ್ಧಾರ!

Published

on

By

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಸಚಿವ B Nagendra ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಗುರುವಾರವೇ ನಾಗೇಂದ್ರ ಅವರು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ತಲುಪಿಸಿದ್ದಾರೆ ಎನ್ನಲಾಗಿದೆ. ಆದರೆ ರಾಜೀನಾಮೆಯನ್ನು ಅಂಗೀಕರಿಸಬೇಕೇ ಅಥವಾ ತಿರಸ್ಕರಿಸಿ ಅವರನ್ನು ಸಚಿವ ಸ್ಥಾನದಲ್ಲಿ ಮುಂದುವರಿಸಬೇಕೇ ಎಂಬ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠರು ಹಾಗೂ ರಾಜ್ಯ ನಾಯಕತ್ವದ ನಡುವೆ ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ರಾಜೀನಾಮೆ ಅಂಗೀಕಾರದ ಬಗ್ಗೆ ಕುತೂಹಲ

ನಾಗೇಂದ್ರ ಅವರು ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ನಾಯಕತ್ವದ ಮುಂದಿಟ್ಟಿದ್ದು, ಸರ್ಕಾರಕ್ಕೆ ಮತ್ತಷ್ಟು ಮುಜುಗರವಾಗದಂತೆ ರಾಜಕೀಯವಾಗಿ ಮುನ್ನೆಚ್ಚರಿಕೆಯ ಹೆಜ್ಜೆ ಇಟ್ಟಿದ್ದಾರೆ ಎನ್ನಲಾಗಿದೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರ ವಿರುದ್ಧ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿ ನಿರಂತರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.

ಇದೀಗ ನಾಗೇಂದ್ರ ಅವರ ರಾಜೀನಾಮೆ ಸಲ್ಲಿಕೆಯಾಗಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಆದರೆ ರಾಜೀನಾಮೆ ಸಲ್ಲಿಸಿರುವುದು ಮಾತ್ರ ಖಚಿತವಾಗಿದ್ದು, ಅದನ್ನು ಅಂಗೀಕರಿಸುವ ಕುರಿತು ಅಂತಿಮ ನಿರ್ಧಾರ ಇನ್ನೂ ಹೊರಬಿದ್ದಿಲ್ಲ ಎನ್ನಲಾಗಿದೆ.

ಬಳ್ಳಾರಿ ಚಲೋಗೂ ಮುನ್ನವೇ ಬಿಗ್ ಟ್ವಿಸ್ಟ್

ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸೆಪ್ಟೆಂಬರ್ 1ರಿಂದ 10 ದಿನಗಳ ‘ಬಳ್ಳಾರಿ ಚಲೋ ಪಾದಯಾತ್ರೆ’ ನಡೆಸಲು ಘೋಷಿಸಿದೆ. ವಾಲ್ಮೀಕಿ ನಿಗಮದ ಹಗರಣವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲು ಬಿಜೆಪಿ ಸಜ್ಜಾಗಿದೆ.

ಆದರೆ ಬಿಜೆಪಿ ಪಾದಯಾತ್ರೆ ಆರಂಭಕ್ಕೂ ಮುನ್ನವೇ ನಾಗೇಂದ್ರ ಅವರು ರಾಜೀನಾಮೆ ಸಲ್ಲಿಸಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಈ ಬೆಳವಣಿಗೆಯ ನಂತರ ಬಿಜೆಪಿ ತನ್ನ ಹೋರಾಟದ ಮುಂದಿನ ಕಾರ್ಯತಂತ್ರವನ್ನು ಹೇಗೆ ರೂಪಿಸಲಿದೆ ಎಂಬುದೂ ಗಮನ ಸೆಳೆದಿದೆ.

ಸಿಎಂ ಡಿಕೆಶಿ ಮತ್ತು ಹೈಕಮಾಂಡ್ ನಿರ್ಧಾರವೇನು?

ನಾಗೇಂದ್ರ ಅವರ ರಾಜೀನಾಮೆ ಪತ್ರ ಇದೀಗ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮುಂದಿದ್ದು, ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವ ಮುಂದಿನ ನಿರ್ಧಾರ ಕೈಗೊಳ್ಳಬೇಕಿದೆ.

ರಾಜೀನಾಮೆಯನ್ನು ಅಂಗೀಕರಿಸಿದರೆ, ಹಗರಣದ ವಿಚಾರದಲ್ಲಿ ಸರ್ಕಾರ ಕೈಗೊಂಡ ಕ್ರಮವೆಂದು ಕಾಂಗ್ರೆಸ್ ಇದನ್ನು ಬಿಂಬಿಸುವ ಸಾಧ್ಯತೆಯಿದೆ. ಮತ್ತೊಂದೆಡೆ, ರಾಜೀನಾಮೆಯನ್ನು ತಿರಸ್ಕರಿಸಿ ನಾಗೇಂದ್ರ ಅವರನ್ನು ಮುಂದುವರಿಸುವ ನಿರ್ಧಾರ ಕೈಗೊಂಡರೆ ಪ್ರತಿಪಕ್ಷಗಳಿಂದ ಮತ್ತಷ್ಟು ರಾಜಕೀಯ ಒತ್ತಡ ಎದುರಾಗುವ ಸಾಧ್ಯತೆಯಿದೆ.

ಹೀಗಾಗಿ ಬಿ. ನಾಗೇಂದ್ರ ಅವರ ರಾಜೀನಾಮೆ ಅಂಗೀಕಾರವಾಗುತ್ತದೆಯೇ ಅಥವಾ ಅವರು ಸಚಿವರಾಗಿ ಮುಂದುವರಿಯುತ್ತಾರೆಯೇ ಎಂಬುದು ಇದೀಗ ರಾಜ್ಯ ರಾಜಕೀಯದ ಪ್ರಮುಖ ಪ್ರಶ್ನೆಯಾಗಿದೆ.

Continue Reading

Trending