Connect with us

ಸಿನಿಮಾ

Operation Leopard: ಕೊನೆಗೂ ಪತ್ತೆಯಾದ ಚಿರತೆ ಆದರೆ, ವೈದ್ಯರ ಮೇಲೆ ದಾಳಿ ಮಾಡಿ ಎಸ್ಕೇಪ್

Published

on

Operation Leopard: ಕೊನೆಗೂ ಪತ್ತೆಯಾದ ಚಿರತೆ ಆದರೆ, ವೈದ್ಯರ ಮೇಲೆ ದಾಳಿ ಮಾಡಿ ಎಸ್ಕೇಪ್

ಬೊಮ್ಮನಹಳ್ಳಿಯ ಕೂಡ್ಲು ಗೇಟ್‌ ಬಳಿ‌ ಇರುವ ಕೃಷ್ಣಾ ರೆಡ್ಡಿ ಬಡಾವಣೆಯ ನಿರ್ಮಾಣ ಹಂತದಲ್ಲಿರುವ ಪಾಳು ಬಿದ್ದ ಕಟ್ಟಡದಲ್ಲಿ ಕಾಣಿಸಿಕೊಂಡ ಚಿರತೆ ಕೊನೆಗೂ ಪತ್ತೆಯಾಗಿದೆ. ಆದರೆ, ಅದು ಅರಿವಳಿಕೆ ನೀಡಲು ಹೋದ ವೈದ್ಯಾಧಿಕಾರಿಗಳಿಗೆ ದಾಳಿ ಮಾಡಿ ಗಾಯಗೊಳಿಸಿ, ಬಳಿಕ ಅಲ್ಲಿಂದ ತಪ್ಪಿಸಿಕೊಂಡಿದೆ.
ಈ ಮೂಲಕ ಕಳೆದ ಮೂರು ದಿನಗಳಿಂದ ಈ ಭಾಗದಲ್ಲಿ ಭಾರಿ ಆತಂಕ ಮೂಡಿಸಿದ್ದ ಚಿರತೆಯನ್ನು ಸೆರೆ ಹಿಡಿಯುವ ಅರಣ್ಯ ಅಧಿಕಾರಿಗಳ ಕಾರ್ಯಾಚರಣೆ ಅಲ್ಪ ಯಶಸ್ಸನ್ನು ಪಡೆದಿದೆ. ಆದರೆ, ಇದು ಮುಂದುವರಿಯಲಿದ್ದು ಇಂದೇ ಪತ್ತೆಯಾಗುವ ಸಾಧ್ಯತೆ ಇದೆ. ಚಿರತೆ ಕಟ್ಟಡದ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಜಿಗಿದು ಪರಾರಿಯಾಗುತ್ತಿದೆ.ಕೂಡ್ಲು ಸಮೀಪದ ಕೃಷ್ಣಾರೆಡ್ಡಿ ಬಡಾವಣೆಯಲ್ಲಿ ಕಳೆದ ಭಾನುವಾರ ರಾತ್ರಿ ಚಿರತೆಯೊಂದು ಓಡಾಡಿತ್ತು. ರಾತ್ರಿ 11 ಗಂಟೆಗೆ ಕಾಂಪೌಂಡ್ ಗೋಡೆ ಜಿಗಿದು ಓಡಿದ್ದನ್ನು ಪರಪ್ಪನ ಅಗ್ರಹಾರ ಲಾ ಆ್ಯಂಡ್ ಆರ್ಡರ್ ಪೊಲೀಸರು ಗಮನಿಸಿದ್ದರು. ಮರುದಿನ ಗಮನಿಸುವಾಗ ಅಲ್ಲಿ ಚಿರತೆಯ ಹೆಜ್ಜೆಗಳು ಪತ್ತೆಯಾಗಿತ್ತು. ಕಡೆಂಜಾ ಅಪಾರ್ಟ್‌ಮೆಂಟ್‌ನಲ್ಲಿ ಮಧ್ಯಾಹ್ನದ ಹೊತ್ತಿಗೇ ಚಿರತೆ ಮೆಟ್ಟಿಲು ಹತ್ತಿ ಹೋಗುವುದು ಸಿಸಿ ಟಿವಿಯಲ್ಲಿ ದಾಖಲಾಗಿತ್ತು.ಈ ಎಲ್ಲ ಘಟನಾವಳಿಗಳ ಹಿನ್ನೆಲೆಯಲ್ಲಿ ಸೋಮವಾರ ಸಂಜೆಯಿಂದಲೇ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಂದು ದಿನವಾದರೂ ಚಿರತೆಯನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ಈ ನಡುವೆ ಮಂಗಳವಾರ ಸಂಜೆ ಥರ್ಮಲ್ ತಂತ್ರಜ್ಞಾನದ ಡ್ರೋಣ್ ಮೂಲಕ ಕಾರ್ಯಾಚರಣೆ ನಡೆಸಿದ್ದರೂ ಸಿಕ್ಕಿರಲಿಲ್ಲ. ಮೂರನೇ ದಿನದ ಕಾರ್ಯಾಚರಣೆಗೆ ಹುಣಸೂರಿನಿಂದ ವನ್ಯ ಜೀವಿ ರಕ್ಷಣಾ ತಂಡ ಆಗಮಿಸಿತ್ತು. ಜತೆಗೆ ವನ್ಯ ಜೀವಿ ಸಂರಕ್ಷಣಾ ವಿಭಾಗದ ಶಾರ್ಪ್ ಶೂಟರ್ಸ್ ಕೂಡಾ ಬಂದಿದ್ದರು.ಸಾಮಾನ್ಯವಾಗಿ ಯಾವುದೇ ಪ್ರಾಣಿಗೆ ಅರವಳಿಕೆ ಮದ್ದು ನೀಡಬೇಕಾದ್ರೆ ಹೆಚ್ಚು ಮಾಂಸ ಇರುವ ಸ್ಥಳ ನೋಡಿ ಹೊಡೆಯಬೇಕು. ಆದರೆ, ಅರಿವಳಿಕೆ ಹಾಕುವ ಪ್ರಯತ್ನದಲ್ಲಿ ವೈದ್ಯರು ವಿಫಲವಾಗಿದ್ದಾರೆ. ಎರಡು ಬಾರಿ ಅರವಳಿಕೆ ಮದ್ದು ಹೊಡೆದರೂ ಸರಿಯಾದ ಜಾಗಕ್ಕೆ ಬಿದ್ದಿರಲಿಲ್ಲ ಎನ್ನಲಾಗಿದೆ. ಎರಡನೇ ಬಾರಿ ಹೊಡೆದ ಅರಿವಳಿಕೆ ಯಶಸ್ವಿಯಾಗಿದೆ ಎಂದು ತಿಳಿದು ಡಾ. ಕಿರಣ್‌ ಅವರು ಪರಿಶೀಲನೆಗೆ ಮುಂದಾಗಿದ್ದರು ಎನ್ನಲಾಗಿದೆ. ಅಷ್ಟರಲ್ಲಿ ಚಿರತೆ ಕಿರಣ್ ಮೇಲೆ ದಾಳಿ ಮಾಡಿ ಎಸ್ಕೇಪ್ ಆಗಿದೆ. ಕುತ್ತಿಗೆ ಭಾಗ ಮತ್ತು ಕೈಗೆ ಪರಚಿ ಎಸ್ಕೇಪ್ ಆಗಿದೆ. ಓಡುವ ಭರದಲ್ಲಿ ಇನ್ನಿಬ್ಬರ ಮೇಲೆಯೂ ದಾಳಿ ಮಾಡಿದೆ.

ದೇಶ

ರಾಜಮೌಳಿ ಚಿತ್ರದಲ್ಲಿ ಜೂ. ಎನ್‌ಟಿಆರ್ ಪುತ್ರ ಎಂಟ್ರಿ? ‘ವಾರಣಾಸಿ’ ಬಗ್ಗೆ ಭಾರೀ ಚರ್ಚೆ

Published

on

ನವದೆಹಲಿ: ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ S. S. Rajamouli ಅವರ ಸಿನಿಮಾಗಳು ವಿಶ್ವದಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿವೆ. ಅವರ ಹೊಸ ಸಿನಿಮಾ ‘ವಾರಣಾಸಿ’ ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿದ್ದು, ಇದಕ್ಕೆ ಸಂಬಂಧಿಸಿದ ಹೊಸ ಸುದ್ದಿಯೊಂದು ಸಿನಿ ವಲಯದಲ್ಲಿ ಸದ್ದು ಮಾಡುತ್ತಿದೆ.

ಸ್ಟಾರ್ ನಟ Jr. NTR ಅವರ ಪುತ್ರ ಭಾರ್ಗವ್ ರಾಮ್ ಈ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಚಿತ್ರದಲ್ಲಿ ನಟಿಸುತ್ತಿರುವ Mahesh Babu ಅವರ ಬಾಲ್ಯದ ಪಾತ್ರದಲ್ಲಿ ಭಾರ್ಗವ್ ರಾಮ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ರಾಜಮೌಳಿ ಅವರ ಸಿನಿಮಾಗಳಲ್ಲಿ ನಾಯಕನ ಬಾಲ್ಯದ ಕಥೆಗೆ ವಿಶೇಷ ಮಹತ್ವವಿರುತ್ತದೆ. ಇದೇ ಶೈಲಿಯನ್ನು ‘ವಾರಣಾಸಿ’ ಸಿನಿಮಾದಲ್ಲಿಯೂ ಮುಂದುವರಿಸಲಾಗುತ್ತಿದ್ದು, ಫ್ಲ್ಯಾಶ್‌ಬ್ಯಾಕ್ ಸನ್ನಿವೇಶದಲ್ಲಿ ಬಾಲ್ಯದ ಪಾತ್ರ ಪ್ರಮುಖ ಪಾತ್ರವಹಿಸಲಿದೆ ಎಂದು ತಿಳಿದುಬಂದಿದೆ.

ಹೆಚ್ಚಿನ ಆಸಕ್ತಿಯ ಸಂಗತಿ ಎಂದರೆ, Jr. NTR ಕೂಡ ಬಾಲನಟನಾಗಿಯೇ ತಮ್ಮ ಸಿನಿ ಜೀವನವನ್ನು ಆರಂಭಿಸಿದ್ದರು. ‘ರಾಮಾಯಣಂ’ ಚಿತ್ರದಲ್ಲಿ ಅಭಿನಯಿಸಿ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದರು. ಈಗ ಅವರ ಪುತ್ರವೂ ಅದೇ ಹಾದಿಯಲ್ಲಿ ಸಾಗುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಈ ಸಿನಿಮಾದಲ್ಲಿ ನಟಿಸಲು ಅನೇಕ ದೊಡ್ಡ ನಟರು ಆಸಕ್ತಿ ತೋರಿಸುತ್ತಿದ್ದು, ಸಂಭಾವನೆ ಇಲ್ಲದಿದ್ದರೂ ಪಾತ್ರಕ್ಕಾಗಿ ಕಾಯುತ್ತಿದ್ದಾರೆ ಎನ್ನಲಾಗುತ್ತಿದೆ. ರಾಜಮೌಳಿ ನಿರ್ದೇಶನ ಮತ್ತು ಮಹೇಶ್ ಬಾಬು ನಟನೆಯ ಸಂಯೋಜನೆಯಿಂದ ‘ವಾರಣಾಸಿ’ ಈಗಾಗಲೇ ಬಹು ನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.

ಒಟ್ಟಾರೆ, ಭಾರ್ಗವ್ ರಾಮ್ ಅವರ ಎಂಟ್ರಿ ಬಗ್ಗೆ ಅಧಿಕೃತ ಘೋಷಣೆ ಇನ್ನೂ ಬಾರದಿದ್ದರೂ, ಈ ಸುದ್ದಿ ಜೂ. ಎನ್‌ಟಿಆರ್ ಅಭಿಮಾನಿಗಳಿಗೆ ಸಂತಸದ ಅಲೆ ಮೂಡಿಸಿದೆ.

Continue Reading

ದೇಶ

‘ಬಡೇ ಸಾಬ್’ ಪಾತ್ರದ ಹಿಂದಿನ ಸತ್ಯ: ದಾವೂದ್ ಕುರಿತ ಚರ್ಚೆ

Published

on

ಬೆಂಗಳೂರು: ಭಾರತದ ಮೋಸ್ಟ್ ವಾಂಟೆಡ್ ಅಪರಾಧಿ Dawood Ibrahim ಮತ್ತೆ ಸುದ್ದಿಯಲ್ಲಿದ್ದಾರೆ. ಬಾಲಿವುಡ್‌ನಲ್ಲಿ ಬಿಡುಗಡೆಯಾದ Dhurandhar 2 ಚಿತ್ರದ ಭಾರೀ ಯಶಸ್ಸಿನ ಬೆನ್ನಲ್ಲೇ ದಾವೂದ್ ಇಬ್ರಾಹಿಂ ಕುರಿತ ಚರ್ಚೆ ಮತ್ತೆ ಜೋರಾಗಿದೆ.

1990ರ ದಶಕದ 1993 Bombay bombings ದಾಳಿಗಳ ಮಾಸ್ಟರ್ ಮೈಂಡ್ ಆಗಿದ್ದ ದಾವೂದ್, ನಂತರ ಪಾಕಿಸ್ತಾನಕ್ಕೆ ಪಲಾಯನ ಮಾಡಿದನು. ಅಂದಿನಿಂದಲೇ ತನ್ನ ‘ಡಿ-ಗ್ಯಾಂಗ್’ ಕಾರ್ಯಾಚರಣೆಗಳನ್ನು ಅಲ್ಲಿಂದಲೇ ನಿರ್ವಹಿಸುತ್ತಿದ್ದಾನೆ ಎಂಬ ಆರೋಪಗಳಿವೆ.

ಸದ್ಯದ ಮಾಹಿತಿಗಳ ಪ್ರಕಾರ, ದಾವೂದ್ ಪಾಕಿಸ್ತಾನದ Karachi ನಗರದಲ್ಲಿನ ಕ್ಲಿಫ್ಟನ್ ಪ್ರದೇಶದ 13ನೇ ರಸ್ತೆಯ ‘ವೈಟ್ ಹೌಸ್’ ಎಂಬ ಐಷಾರಾಮಿ ಮನೆಯಲ್ಲಿ ವಾಸಿಸುತ್ತಿದ್ದಾನೆ ಎನ್ನಲಾಗುತ್ತಿದೆ. ಈ ಪ್ರದೇಶವು ಪಾಕಿಸ್ತಾನದ ಅತ್ಯಂತ ಭದ್ರತಾ ವ್ಯವಸ್ಥೆ ಹೊಂದಿರುವ ಪ್ರದೇಶಗಳಲ್ಲಿ ಒಂದಾಗಿದೆ.

ಇನ್ನೂ ಕೆಲವು ವರದಿಗಳ ಪ್ರಕಾರ, ಕರಾಚಿಯ ಡಿಫೆನ್ಸ್ ಹೌಸಿಂಗ್ ಏರಿಯಾ (DHA) ಹಾಗೂ ಖಯ್ಯುಮಾಬಾದ್ ಪ್ರದೇಶದಲ್ಲಿಯೂ ದಾವೂದ್ ನಿವಾಸ ಹೊಂದಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದೆ. ಭಾರತೀಯ ಗುಪ್ತಚರ ಸಂಸ್ಥೆಗಳಿಗೂ ಇದೇ ರೀತಿಯ ಮಾಹಿತಿ ಲಭ್ಯವಾಗಿದೆ ಎಂದು ಹೇಳಲಾಗುತ್ತಿದೆ.

‘ಧುರಂಧರ್ 2’ ಸಿನಿಮಾದಲ್ಲಿ ‘ಬಡೇ ಸಾಬ್’ ಎಂಬ ಪಾತ್ರದ ಮೂಲಕ ದಾವೂದ್ ಇಬ್ರಾಹಿಂನಂತೆ ಕಾಣುವ ಪಾತ್ರವನ್ನು ಚಿತ್ರಿಸಲಾಗಿದೆ. ನೈಜ ಘಟನೆಗಳನ್ನು ಆಧರಿಸಿದ ಕಥಾಹಂದರ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದು, ಈ ಪಾತ್ರ ಭಾರೀ ಚರ್ಚೆಗೆ ಕಾರಣವಾಗಿದೆ.

ಆದಾಗ್ಯೂ, ದಾವೂದ್ ಇಬ್ರಾಹಿಂ ನಿಖರವಾಗಿ ಎಲ್ಲಿದ್ದಾನೆ ಎಂಬುದು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ. ಆದರೆ ಸಿನಿಮಾ ಮತ್ತು ಗುಪ್ತಚರ ಮಾಹಿತಿಗಳ ಹಿನ್ನೆಲೆ, ದಾವೂದ್ ಕುರಿತ ಚರ್ಚೆ ಮತ್ತೆ ಜಾಗತಿಕ ಮಟ್ಟದಲ್ಲಿ ತೀವ್ರವಾಗಿದೆ

Continue Reading

ದೇಶ

ಲಾಸ್ ಏಂಜಲೀಸ್‌ನಲ್ಲಿ ‘ರಾಮಾಯಣ’ ಟೀಸರ್ ಸದ್ದು: ರಣಬೀರ್ ಲುಕ್‌ಗೆ ಭಾರೀ ಚಪ್ಪಾಳೆ

Published

on

Continue Reading

Trending