Connect with us

ರಾಜಕೀಯ

ಸಿದ್ದರಾಮಯ್ಯ ಸರ್ಕಾರ ಸೇಫಾ? ದುಬೈನಲ್ಲಿ ನಡೆಯುತ್ತಿದೆಯಾ ಪತನದ ಮಾಸ್ಟರ್‌ ಪ್ಲ್ಯಾನ್!

ಸಿದ್ದರಾಮಯ್ಯ ಸರ್ಕಾರ ಸೇಫಾ? ದುಬೈನಲ್ಲಿ ನಡೆಯುತ್ತಿದೆಯಾ ಪತನದ ಮಾಸ್ಟರ್ ಪ್ಲ್ಯಾನ್!
ಸಿದ್ದರಾಮಯ್ಯ ಸರ್ಕಾರ ಸೇಫಾ? ದುಬೈನಲ್ಲಿ ನಡೆಯುತ್ತಿದೆಯಾ ಪತನದ ಮಾಸ್ಟರ್ ಪ್ಲ್ಯಾನ್!

ಬೆಂಗಳೂರು: ಒಂದು ಕಡೆಯಲ್ಲಿ ಪಕ್ಷದೊಳಗಿನ ಆಂತರಿಕ ಭಿನ್ನಮತ, ಮತ್ತೊಂದು ಕಡೆಯಲ್ಲಿ ರಮೇಶ್ ಜಾರಕಿಹೊಳಿ ಇದರ ಜೊತೆಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹಾಗೂ ಸಿಪಿ ಯೋಗೇಶ್ವರ್ ದುಬೈ ಪ್ರವಾಸ. ಹೌದು, ಈ ಎಲ್ಲಾ ಬೆಳವಣಿಗೆಗಳು ರಾಜ್ಯ ರಾಜಕಾರಣದ ಬಗ್ಗೆ ನಾನಾ ರೀತಿಯ ವ್ಯಾಖ್ಯಾನಗಳು, ಅನುಮಾನಗಳು ಹಾಗೂ ಕುತೂಹಲಗಳಿಗೆ ಕಾರಣವಾಗುತ್ತಿವೆ. ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದರು. ಇದಕ್ಕೆ ಪೂರಕ ಎಂಬಂತೆ ಸರ್ಕಾರ ಪತನಕ್ಕೆ ಸಂಚು ರೂಪಿಸಲಾಗುತ್ತಿದೆ ಎಂದು ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಆರೋಪ ಮಾಡಿದ್ದರು. ಅದನ್ನು ಬೆಂಬಲಿಸಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ರವಿ ಗಣಿಗ ಹಳೆ ಆಪರೇಷನ್ ಕಮಲ ತಂಡ ಸಕ್ರಿಯವಾಗಿದೆ. ನನ್ನನ್ನು ಕೂಡಾ ಸಂಪರ್ಕ ಮಾಡಿದ್ದರು ಎಂದು ಹೇಳಿಕೆ ನೀಡಿದ್ದರು. ಈ ಎಲ್ಲ ಅನುಮಾನಗಳಿಗೆ ಮತ್ತಷ್ಟು ಪುಷ್ಠಿ ಕೊಟ್ಟಿರುವುದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ದುಬೈ ಪ್ರವಾಸ. ಕುಮಾರಸ್ವಾಮಿ ಮಾತ್ರ ಹೋಗಿದ್ದರೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಚರ್ಚೆ ಆಗುತ್ತಿರಲಿಲ್ಲ. ಕಳೆದ ಬಾರಿಯ ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಿಪಿ ಯೋಗೇಶ್ವರ್‌ ಕೂಡಾ ಈ ಪ್ರವಾಸದಲ್ಲಿದ್ದಾರೆ. ಇವರಿಬ್ಬರು ಖಾಸಗಿ ಕಾರ್ಯಕ್ರಮಕ್ಕೆ ದುಬೈ ಪ್ರವಾಸ ಮಾಡಿದರೂ ಈ ಪ್ರವಾಸಕ್ಕೆ ಮಾತ್ರ ಪ್ರತ್ಯೇಕ ಅರ್ಥ ಕಲ್ಪಿಸಲಾಗುತ್ತಿದೆ.

ರಾಮನಗರದಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಈ ಇಬ್ಬರು ನಾಯಕರು ಒಂದಾಗಿದ್ದಾರೆ ಎಂದೇ ಬಿಂಬಿಸಲಾಗುತ್ತಿದೆ. ತಮ್ಮ ರಾಜಕೀಯ ಅಸ್ತಿತ್ವವನ್ನು ನೋಡುತ್ತಿರುವ ಸಿಪಿ ಯೋಗೇಶ್ವರ್ ಡಿಕೆಶಿ ಅಬ್ಬರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕುಮಾರಸ್ವಾಮಿ ಜೊತೆಗೆ ಕೈಜೋಡಿಸಿದ್ದಾರೆ. ದುಬೈ ಖಾಸಗಿ ಕಾರ್ಯಕ್ರಮದ ಸಂದರ್ಭದಲ್ಲಿ ಇವರಿಬ್ಬರು ಭೇಟಿಯಾಗಿ ಈ ಬಗ್ಗೆ ಮಾತನಾಡುವ ಸಾಧ್ಯತೆ ಇದೆ ಎನ್ನುತ್ತಿವೆ ಅವರ ಆಪ್ತ ಮೂಲಗಳು.   ಈ ಎಲ್ಲಾ ಬೆಳವಣಿಗೆಗಳ ನಡುವೆ ರಾಜ್ಯದಲ್ಲಿ ಸರ್ಕಾರ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಆದರೆ ಆಪರೇಷನ್ ಆತಂಕವಂತೂ ಅವರಿಗೆ ಕಾಡುತ್ತಿದೆ. ಹೇಗಾದರೂ ಮಾಡಿ ಲೋಕಸಭೆ ಚುನಾವಣೆಯ ಬಳಿಕ ಸರ್ಕಾರ ಪತನ ಮಾಡಬೇಕು ಎಂಬ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿರುವುದಂತೂ ಸತ್ಯ. ಆದರೆ ಅದೆಷ್ಟರ ಮಟ್ಟಿಗೆ ಸಕ್ಸರ್ ಆಗುತ್ತದೆ ಎಂಬುದುದು ಸದ್ಯದ ಕುತೂಹಲ

ದೇಶ

ಪರಪ್ಪನ ಅಗ್ರಹಾರ ಜೈಲಿಗೆ ಸೇರಿದ ಕಾಂಗ್ರೆಸ್ ಶಾಸಕ ವಿನಯ್!

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದಾಗಿದೆ, ಅದ್ದರಿಂದ ಕೋರ್ಟ್ ಆದೇಶದಂತೆ ಇಂದು ವಿನಯ್ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೋಟ್ ವಿಚಾರಣೆ ಮುಗಿದ ಬಳಿಕ ಶಾಸಕ ವಿನಯ್ ಕುಲಕರ್ಣಿಯವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು, ಇತ್ತೀಚಿಗೆ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿಯ ಜಾಮೀನನ್ನು ರದ್ದುಪಡಿಸಿತು, ಒಂದು ವಾರದೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು,
ಇವರ ಬೆಂಬಲಿಗರು ಸಿಟಿ ಸಿವಿಲ್ ಕೋರ್ಟ್ ಮುಂಭಾಗ ಜಮಾಯಿಸಿದ್ರು, ಪರಪ್ಪನ ಅಗ್ರಹಾರ ಜೈಲಿಗೆ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ಕರೆದೊಯ್ದಿದ್ದಾರೆ, ಈ ವೇಳೆ ತಮ್ಮ ನಾಯಕ ಜೈಲು ಸೇರುತ್ತಿರೋದನ್ನು ಕಂಡು ಕೋರ್ಟ್ ಮುಂಭಾಗ ಬೆಂಬಲಿಗರು ಕಣ್ಣೀರು ಹಾಕಿದ್ದಾರೆ,

ಏನಿದು ಪ್ರಕರಣ?
9 ವರ್ಷಗಳ ಹಿಂದೆ ಅಂದರೆ 2016 ರ ಜೂನ್ 15 ರಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡನನ್ನು ಅವರದ್ದೇ ಮಾಲೀಕತ್ವದ ಜಿಮ್ ನಲ್ಲಿ ಭೀಕರವಾಗಿ ಹತ್ಯೆಗೈಯ್ಯಲಾಗಿತ್ತು, ಇದರಲ್ಲಿ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಕೈವಾಡ ಇದೆ ಎಂಬ ಆರೋಪವಿದೆ, ಪ್ರಕರಣಕ್ಕೆ ಸಂಬಂಧಿಸಿದಂತೆ 2020 ನವೆಂಬರ್ 5 ರಂದು ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧಿಸಿತ್ತು, ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿ ಆದೇಶಿಸಿತ್ತು,

Continue Reading

ರಾಜಕೀಯ

ನಾಯಕತ್ವದಿಂದ ಸಿದ್ದರಾಮಯ್ಯ ಕಲಿಯಬೇಕು: ಕೇಂದ್ರ ಸಚಿವ ವಿ.ಸೋಮಣ್ಣ

ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಬದಲು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 8 ದಿನಗಳ ಕಾಲ ನವದೆಹಲಿಗೆ ಭೇಟಿ ನೀಡಿ ಪ್ರಧಾನಿಮಂತ್ರಿಗಳ ಆಡಳಿತ ಶೈಲಿಯನ್ನು ವೀಕ್ಷಿಸಿ, ಕರ್ನಾಟಕದಲ್ಲಿ “ಜನಪರ ವಿಧಾನ” ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ 11 ವರ್ಷಗಳ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತಕ್ಕೆ ಸಿದ್ದರಾಮಯ್ಯ ಶೂನ್ಯ ಅಂಕ ನೀಡಿದ್ದರ ಕುರಿತು ತಿರುಗೇಟು ನೀಡಿದರು.

ಸಿದ್ದರಾಮಯ್ಯ ಅವರ ಹೇಳಿಕೆಗಳು ಅಪ್ರಬುದ್ಧವಾಗಿವೆ. ರಾಜ್ಯದ ಜನರು ಸಿಎಂ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಸಿದ್ದರಾಮಯ್ಯ ಅಂತಹ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಿ ಪ್ರಧಾನಿ ಮೋದಿ ಅವರ ನಾಯಕತ್ವ ನೋಡಿ ಕಲಿಯಬೇಕಿದೆ ಎಂದು ಹೇಳಿದರು.

ನಾನು ಕೂಡ ಮೊದಲು ಕಾಂಗ್ರೆಸ್ ಜೊತೆಗಿದ್ದೆ. ಅಂದಿನ ಸಿದ್ದರಾಮಯ್ಯ ಮತ್ತು ಇಂದಿನ ಸಿದ್ದರಾಮಯ್ಯ ನಡುವೆ ಅಗಾಧ ವ್ಯತ್ಯಾಸವಿದೆ. ಕಾಂಗ್ರೆಸ್ ನಾಯಕರಿಗೆ ನೈತಿಕ ಸಮಗ್ರತೆಯ ಕೊರತೆಯಿದೆ. ಮೋದಿಯವರ ಜನಪರ ಆಡಳಿತವನ್ನು ನೋಡಿ, ಅವರು ತಮ್ಮದೇ ಆದ ನ್ಯೂನತೆಗಳ ಬಗ್ಗೆ ಅರಿತುಕೊಳ್ಳುತ್ತಿದ್ದಾರೆ.

ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರುನಾಮಕರಣ ಮಾಡುವ ಬಗ್ಗೆ ನಡೆಯುತ್ತಿರುವ ಚರ್ಚೆ ಕುರಿತು ಮಾತನಾಡಿ, ಇದು ನರಿ ಮತ್ತು ಕುರಿಮರಿಯ ಕಥೆಯಂತೆ ಎಂದು ವ್ಯಂಗ್ಯವಾಡಿದರು.

ಗೃಹ ಸಚಿವ ಡಾ. ಜಿ. ಪರಮೇಶ್ವರ ಈ ವಿಷಯದಲ್ಲಿ ಆತುರದಿಂದ ವರ್ತಿಸುವುದಿಲ್ಲ ಎಂದು ನಾನು ನಂಬುತ್ತೇನೆ. ನಾನು ಇನ್ನೂ ಯಾವುದೇ ನಿಲುವನ್ನು ತೆಗೆದುಕೊಂಡಿಲ್ಲ. ಅದು ಪ್ರಯೋಜನಕಾರಿ ಎಂದು ತೋರಿದರೆ, ನಾನು ಅದನ್ನು ಬೆಂಬಲಿಸುತ್ತೇನೆ

Continue Reading

ರಾಜಕೀಯ

ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ದೂರು ದಾಖಲು!

ಬೆಳಗಾವಿ: ಕಳೆದ ಏಪ್ರಿಲ್ 28 ರಂದು ಕಾಂಗ್ರೆಸ್ ಸಮಾವೇಶದ ವೇಳೆ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಅಧಿಕಾರದ ದರ್ಪ ಹಾಗೂ ವೇದಿಕೆಯಲ್ಲೇ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ,
ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶದ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಅವರನ್ನು ಹೊಡೆಯಲೆಂದು ಕೈ ಎತ್ತಿದ್ದರು, ಈ ಘಟನೆ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು ಇದೀಗ ಈ ಘಟನೆಗೆ ಸಂಬಂಧಪಟ್ಟಂತೆ ಆರ್ ಟಿ ಐ ಕಾರ್ಯಕರ್ತ ಭೀಮಪ್ಪ ಗಡಾ ಅವರು ದೂರ ದಾಖಲಿಸಿದ್ದಾರೆ,
ಸಿಎಂ ಸಿದ್ದರಾಮಯ್ಯ ಅವರು ನಾರಾಯಣ ಭರಮನಿ ಅವರ ಮೇಲೆ ದರ್ಪ ತೋರುವ ಮೂಲಕ ಕರ್ತವ್ಯನಿರತ ಅಧಿಕಾರಿಗೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿ ಭೀಮಪ್ಪ ಗಡಾ ಅವರು ಬೆಳಗಾವಿ ನಗರದ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ,
ಕಾನೂನು ಸಚಿವೆ ಹಾಗೂ ಇನ್ನಿತರ ಸಚಿವರ ಎದುರೇ ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗೆ ಕೀಳು ಪದ ಬಳಸಿ ಹೊಡೆಯಲೆಂದು ಕೈ ಎತ್ತಿದ್ದು ಸದ್ಯ ಸಿಎಂ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023-132 ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ,
ಭಾರತೀಯ ನ್ಯಾಯ ಸಂಹಿತೆ 2023-132 ರ ಕರ್ತವ್ಯದಲ್ಲಿ ನಿರತರಾಗಿದ್ದ ಯಾವುದೇ ಅಧಿಕಾರಿಯ ಮೇಲೆ ಹಲ್ಲೆ ಅಥವಾ ಬಲ ಪ್ರಯೋಗ ಮಾಡುವ ಯಾವುದೇ ವ್ಯಕ್ತಿಗೆ ಎರಡು ವರ್ಷದ ವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನು ವಿಧಿಸಬಹುದಾಗಿದೆ,

Continue Reading

Trending