ರಾಜಕೀಯ
ರೈತರ ಕೃಷಿ ಪಂಪ್ ಸೆಟ್ ಗಳಿಗೆ ಪ್ರತಿದಿನ 7 ತಾಸು ವಿದ್ಯುತ್ ಸರಬರಾಜು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ನೀರಾವರಿ ಪಂಪ್ಸೆಟ್ಗಳಿಗೆ 7 ಗಂಟೆಗಳ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಈ ವಿಷಯ ತಿಳಿಸಿದರು.
ರಾಜ್ಯದಲ್ಲಿ ವಿದ್ಯತ್ ಕೊರತೆಯಿದೆ ಎಂದು ನೀರಾವರಿ ಪಂಪ್ಸೆಟ್ಗಳಿಗೆ ಏಳು ಗಂಟೆಗಳ ಕಾಲ ನೀರಾವರಿ ಪಂಪ್ಸೆಟ್ಗಳಿಗೆ ವಿದ್ಯುತ್ ನೀಡಲು ಮೊದಲೇ ಘೋಷಣೆ ಮಾಡಿದ್ದೆವು. ಕೆಲವು ಜನ ಸತತವಾಗಿ ಮೂರು ಫೇಸ್ನಲ್ಲಿ 5 ಗಂಟೆ ವಿದ್ಯುತ್ ನೀಡಿದರೆ ಸಾಕು ಎಂದಿದ್ದರು. ಅದಕ್ಕಾಗಿ 5 ಗಂಟೆಗಳ ಕಾಲ 3 ಫೇಸ್ನಲ್ಲಿ ವಿದ್ಯುತ್ ನೀಡುವಂತೆ ಸೂಚನೆ ನೀಡಲಾಗಿತ್ತು. ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ರೈತರು ಭೇಟಿ ಮಾಡಿ ಭತ್ತ ಬೆಳೆಯುವುದರಿಂದ 5 ಗಂಟೆಗಳ ಕಾಲ ವಿದ್ಯುತ್ ನೀಡುವುದು ಸಾಕಾಗುವುದಿಲ್ಲ, 7 ಗಂಟೆಗಳ ಕಾಲ ನೀಡಬೇಕೆಂದು ಎಂದು ಮನವಿ ಮಾಡಿದರು. ಕಬ್ಬು ಹಾಗೂ ಭತ್ತ ಕಟಾವಿಗೆ ಬಂದಿರುವುದರಿಂದ ಈ ಭಾಗದಲ್ಲಿ 7 ಗಂಟೆಗಳ ಕಾಲ ವಿದ್ಯುತ್ ನೀಡಬೇಕು ಎಂದು ಸೂಚನೆ ನೀಡಲಾಗಿದೆ. ಉಳಿದ ಭಾಗಗಳಿಗೆ ನೀಡುತ್ತಿದ್ದ 5 ಗಂಟೆಗಳ ವಿದ್ಯುತ್ ನ್ನು 7 ಗಂಟೆಗಳ ಕಾಲ ನೀಡಲು ಸಾಧ್ಯವಾಗುತ್ತದೆ ಎಂದು ಇಂದಿನ ಸಭೆಯಲ್ಲಿ ಅಭಿಪ್ರಾಯಕ್ಕೆ ಬರಲಾಗಿದೆ ಎಂದರು.
ವಿದ್ಯುತ್ ಉತ್ಪಾದನೆಯಲ್ಲಿ ಹೆಚ್ಚಳ
ರಾಯಚೂರು, ಬಳ್ಳಾರಿಯಲ್ಲಿ ಥರ್ಮಲ್ ಘಟಕಗಳಿದ್ದು, ರಾಜ್ಯದಲ್ಲಿ ಥರ್ಮಲ್, ಜಲವಿದ್ಯುತ್, ಸೋಲಾರ್ ಮೂಲಕ ವಿದ್ಯುತ್ ಉತ್ಪಾದಿಸುತ್ತಿದ್ದು. ಥರ್ಮಲ್ ಘಟಕವು 1000 ಮೆಗಾ ವ್ಯಾಟ್ ಉತ್ಪಾದಿಸುತ್ತಿದೆ. ಸುಮಾರು 2400 ರಿಂದ 3200 ಮೆ.ವ್ಯಾ, ವಿದ್ಯುತ್ ಉತ್ಪಾದನೆ ಹೆಚ್ಚಾಗಿದೆ. ಕಬ್ಬು ಅರೆಯುವುದು ಪ್ರಾರಮಭವಾಗಿ ಕೋ-ಜನರೇಷನ್ ಆಗಿರುವುದರಿಂದ 450 ಮೆ.ವ್ಯಾಟ್ ಉತ್ಪಾದನೆಯಾಗಿದೆ. ಕೂಡ್ಲಗಿಯಲ್ಲಿ 150 ಮೆ.ವ್ಯಾ ಕರ್ನಾಟಕಕ್ಕೆ ಉಳಿತಾಯವಾಗಲಿದೆ ಹಾಗೂ ಖರೀದಿ ಮಾಡುತ್ತಿರುವುದರಿಂದ ಹೆಚ್ಚು ವಿದ್ಯುತ್ ದೊರೆಯಲಿದೆ. ಹಾಗಾಗಿ ಇಂದಿನಿಂದ 7 ತಾಸು ವಿದ್ಯುತ್ನ್ನು ಪಂಪ್ಸೆಟ್ಗಳಿಗೆ ನೀಡುತ್ತಿದ್ದೇವೆ. ಕೈಗಾರಿಕೆಗಳಿಗೆ, ಗೃಹಬಳಕೆಗೆ ವಿದ್ಯುತ್ ಕಡಿತ ಮಾಡಲಾಗುತ್ತಿಲ್ಲ. ಪಂಪ್ಸೆಟ್ಗಳಿಗೆ ನೀಡುವ ವಿದ್ಯುತ್ ಸಹಾಯಧನವನ್ನು ಸರ್ಕಾರವೇ ನೀಡಿದೆ. 13100 ಕೋಟಿ ರೂ.ಗಳನ್ನು ಬಜೆಟ್ನಲ್ಲಿ ಒದಗಿಸಲಾಗಿದೆ ಎಂದರು.
ಭಾಗ್ಯಜ್ಯೋತಿ, ಕುಟೀರ ಜ್ಯೋತಿಗೆ 18 ಯೂನಿಟ್ಗಳ ಮಿತಿಯಿತ್ತು. ಅದನ್ನು 40 ಯೂನಿಟ್ಗಳಿಗೆ ನಮ್ಮ ಸರ್ಕಾರವೇ ಹಿಂದೆ ಹೆಚ್ಚಳ ಮಾಡಿತ್ತು. ಈ ಗೃಹಜ್ಯೋತಿ ಬಂದ ನಂತರ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿಗಳನ್ನು ಗೃಹಜ್ಯೋತಿ ಯೋಜನೆಯಡಿ ಸೇರಿಸಿ, 58 ಯೂನಿಟ್ವರಗೆ ಉಚಿತವಾಗಿ ವಿದ್ಯುತ್ ನೀಡಲು ತೀರ್ಮಾನಿಸಿದೆ. ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿ ಯೋಜನೆಗಳಡಿ 389.66 ಕೋಟಿ ರೂ.ಗಳು ಬಾಕಿ ಉಳಿದಿದ್ದವು. ಬಾಕಿ ಇರುವುದರಿಂದ ಗೃಹಜ್ಯೋತಿಯಡಿ ಉಚಿತ ಕೊಡುವುದು ಕಷ್ಟವಾಗುತ್ತಿತ್ತು. ಆದ್ದರಿಂದ ಬಾಕಿ ಮೊತ್ತವನ್ನು ಒಂದು ಬಾರಿಗೆ ಮನ್ನಾ ಮಾಡಲಾಗುತ್ತಿದೆ. ಇನ್ನು ಮುಂದೆ ಬಾಕಿ ಕೊಡಬೇಕಾದ ಅಗತ್ಯವಿಲ್ಲ. ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಜೂನಿಯರ್ ಕಾಲೇಜುಗಳಿಗೆ ನವೆಂಬರ್ 1 ರಂದು ಘೋಷಿಸಿದಂತೆ ವಿದ್ಯುತ್ ಹಾಗೂ ನೀರಿನ ವೆಚವನ್ನು ಸರ್ಕಾರವ ಭರಿಸಲಿದೆ ಎಂದು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಮುಂದಿನ ಮುಂಗಾರಿನವರೆಗೆ ಮಳೆ ಬರುವುದಿಲ್ಲ ಎಂದು ಲೆಕ್ಕ ಹಾಕಿಯೇ ಈ ತೀರ್ಮಾನ ಮಾಡಲಾಗಿದೆ. ಜುಲೈ ಅಂತ್ಯದವರೆಗೆ ಲೆಕ್ಕ ಹಾಕಲಾಗಿದೆ ಎಂದರು.
ದೇಶ
ಕಾಂಗ್ರೆಸ್ನಲ್ಲಿ ಭೂಕಂಪ: ನಜೀರ್ ಅಹ್ಮದ್ಗೆ ಸುರ್ಜೇವಾಲಾ ಅಲ್ಟಿಮೇಟಂ
ಬೆಂಗಳೂರು: ಕಾಂಗ್ರೆಸ್ನಲ್ಲಿ ಒಳಅಸಮಾಧಾನ ತೀವ್ರಗೊಂಡಿರುವ ನಡುವೆಯೇ, ರಾಜ್ಯ ಉಸ್ತುವಾರಿ Randeep Singh Surjewala ಅವರು ಸಿಎಂ ರಾಜಕೀಯ ಕಾರ್ಯದರ್ಶಿ Naseer Ahmed ಅವರಿಗೆ ಕಠಿಣ ಡೆಡ್ಲೈನ್ ನೀಡಿದ್ದಾರೆ.
ಇಂದು (ಏಪ್ರಿಲ್ 13) ಸಂಜೆಯೊಳಗೆ ರಾಜೀನಾಮೆ ಸಲ್ಲಿಸುವಂತೆ ಸೂಚಿಸಿರುವ ಸುರ್ಜೇವಾಲಾ, ಸಮಯಕ್ಕೆ ರಾಜೀನಾಮೆ ನೀಡದಿದ್ದರೆ ಅವರನ್ನು ಸ್ಥಾನದಿಂದ ವಜಾಗೊಳಿಸಲು ಮುಖ್ಯಮಂತ್ರಿ Siddaramaiah ಅವರಿಗೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ, “ನಸೀರ್ ಅಹ್ಮದ್ ಇನ್ನೂ ರಾಜೀನಾಮೆ ನೀಡಿಲ್ಲ. ಮುಂದಿನ ದಿನಗಳಲ್ಲಿ ಕೊಡಬಹುದು. ಕಾಂಗ್ರೆಸ್ ಸೋಲನ್ನು ಒಪ್ಪಿಕೊಂಡಿಲ್ಲ. ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.
ದಾವಣಗೆರೆ ದಕ್ಷಿಣ ಉಪಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಹೆಚ್ಚಾಗಿದ್ದು, ಕೆಲವು ನಾಯಕರ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿವೆ. ನಸೀರ್ ಅಹ್ಮದ್ ಅವರು ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರೆಂದು ಸಿಎಂ ಹೇಳಿದ್ದಾರೆ.
ಇದಕ್ಕೂ ಮೊದಲು ಸುರ್ಜೇವಾಲಾ ಅವರು ಸಚಿವ Zameer Ahmed Khan, Abdul Jabbar ಹಾಗೂ ನಸೀರ್ ಅಹ್ಮದ್ ವಿರುದ್ಧ ವರದಿ ಸಲ್ಲಿಸಿದ್ದರು. ಈಗಾಗಲೇ ಅಬ್ದುಲ್ ಜಬ್ಬಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಅದನ್ನು D. K. Shivakumar ಅಂಗೀಕರಿಸಿದ್ದಾರೆ.
ಈ ಬೆಳವಣಿಗೆ ಕಾಂಗ್ರೆಸ್ ಒಳರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದ್ದು, ಮುಂದಿನ ಕ್ರಮಗಳ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
ದೇಶ
ಸಚಿವ ಸ್ಥಾನ ಕೇಳೋದು ತಪ್ಪಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ
ಬೆಂಗಳೂರು: ಹಿರಿಯ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಗೃಹ ಸಚಿವ G. Parameshwara ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಅದೇನು ಗ್ಯಾಂಬ್ಲಿಂಗ್ ಅಲ್ಲ, ಶಾಸಕರು ತಮ್ಮ ಅರ್ಹತೆಯ ಆಧಾರದಲ್ಲಿ ಕೇಳುತ್ತಿದ್ದಾರೆ” ಎಂದು ಹೇಳಿದ್ದಾರೆ.
ಎರಡು ಮೂರು ಬಾರಿ ಗೆದ್ದಿರುವ ಶಾಸಕರು ಸಚಿವರಾಗಲು ಸಮರ್ಥರು. ಹೀಗಾಗಿ ಸಚಿವ ಸ್ಥಾನಕ್ಕಾಗಿ ಕೇಳುವುದು ಸಹಜ. ಆದರೆ ಅಂತಿಮ ನಿರ್ಧಾರ ಮುಖ್ಯಮಂತ್ರಿ ಮತ್ತು ಹೈಕಮಾಂಡ್ ಕೈಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.
ಪಕ್ಷ ಪುನಾರಚನೆ ಕುರಿತು ಮಾತನಾಡಿದ ಪರಮೇಶ್ವರ್, “ನಾಯಕತ್ವ ವಿಚಾರವಾಗಲಿ, ಸಚಿವ ಸಂಪುಟ ಪುನಾರಚನೆ ಆಗಲಿ, ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಹಿರಂಗವಾಗಿ ಕೇಳುವುದರಲ್ಲಿ ತಪ್ಪೇನಿಲ್ಲ” ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಈಗ ಪುನಾರಚನೆ ಚರ್ಚೆ ನಡೆಯುತ್ತಿದೆ. ಅಧ್ಯಕ್ಷ ಸ್ಥಾನ ವಿಚಾರವನ್ನು ಹೈಕಮಾಂಡ್ಗೆ ಬಿಟ್ಟಿದ್ದೇವೆ” ಎಂದು ಹೇಳಿದರು.
ಇನ್ನೂ ದಾವಣಗೆರೆ ಕ್ಷೇತ್ರದಲ್ಲಿ Abdul Jabbar ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ಅವರು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಉಲ್ಲೇಖಿಸಿದರು. D. K. Shivakumar ಹೊಸ ಸಮಿತಿ ರಚನೆ ಮಾಡಲಿದ್ದಾರೆ ಎಂದು ತಿಳಿಸಿದರು.
ಪುನಾರಚನೆ ನಡೆದರೆ ಹಿರಿಯರು ಸ್ಥಾನ ಬಿಟ್ಟುಕೊಡಬೇಕಾದರೆ ನಾವು ಒಪ್ಪಲೇಬೇಕು. ಹೈಕಮಾಂಡ್ ತೀರ್ಮಾನಕ್ಕೆ ಯಾರೂ ವಿರೋಧಿಸುವ ಪ್ರಶ್ನೆಯೇ ಇಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.
ದೇಶ
ಡಿಕೆ ಶಿವಕುಮಾರ್ ದೊಡ್ಡ ನಿರ್ಧಾರ: ಸಮಿತಿ ಡಿಸ್ಮಿಸ್!
ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾಗಿದ್ದ Abdul Jabbar ಅವರ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ D. K. Shivakumar ಅವರು ಅಧಿಕೃತವಾಗಿ ಅಂಗೀಕರಿಸಿದ್ದಾರೆ.
ಜಬ್ಬಾರ್ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದಲೇ ವಿಸರ್ಜಿಸಲಾಗಿದೆ ಎಂದು ಶಿವಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೊಸ ಸಮಿತಿಯನ್ನು ಶೀಘ್ರದಲ್ಲೇ ರಚಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಬಳಿಕ ಕಾಂಗ್ರೆಸ್ನಲ್ಲಿ ಅಸಮಾಧಾನ ತೀವ್ರಗೊಂಡಿದೆ. ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡದ ಹಿನ್ನೆಲೆ ಆರಂಭವಾದ ಅಸಮಾಧಾನ, ಚುನಾವಣೆಯ ನಂತರವೂ ಮುಂದುವರಿದಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪಕ್ಷದೊಳಗಿನ ಬಂಡಾಯ ಹೆಚ್ಚಾಗಿದ್ದು, ಅಲ್ಪಸಂಖ್ಯಾತ ಘಟಕದ ಮೇಲೂ ಪರಿಣಾಮ ಬೀರಿದೆ.
ಶನಿವಾರವೇ ಅಬ್ದುಲ್ ಜಬ್ಬಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಪಕ್ಷದ ಹೈಕಮಾಂಡ್ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶ ಇನ್ನಷ್ಟೇ ಬಾಕಿ ಇದ್ದರೂ, ಕಾಂಗ್ರೆಸ್ನಲ್ಲಿ ಉಂಟಾದ ಒಳಜಗಳ ಪಕ್ಷಕ್ಕೆ ತಲೆನೋವಾಗುವ ಸಾಧ್ಯತೆ ಇದೆ. ಹೊಸ ಸಮಿತಿಯ ರಚನೆ ಮೂಲಕ ಅಸಮಾಧಾನ ಶಮನಗೊಳಿಸಲು ನಾಯಕತ್ವ ಮುಂದಾಗಿದೆ.
-
ದೇಶ22 hours agoಡಿಕೆ ಶಿವಕುಮಾರ್ ದೊಡ್ಡ ನಿರ್ಧಾರ: ಸಮಿತಿ ಡಿಸ್ಮಿಸ್!
-
ದೇಶ22 hours agoಸೌದಿ ರಕ್ಷಣೆಗೆ ಪಾಕ್ ಸೇನೆ: ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಹೆಚ್ಚಳ
-
ದೇಶ22 hours agoAmarnath Yatra 2026: ಬಾಬಾ ಬರ್ಫಾನಿ ದರ್ಶನಕ್ಕೆ ಸಜ್ಜಾಗಿ: ಅಮರನಾಥ ಯಾತ್ರೆ ಸಂಪೂರ್ಣ ಮಾಹಿತಿ
-
ಚುನಾವಣೆ22 hours agoದಾವಣಗೆರೆ ಟಿಕೆಟ್ ವಿವಾದ: ಮುಸ್ಲಿಂ ಸಮುದಾಯಕ್ಕೆ ಅನ್ಯಾಯವೇ?
-
ದೇಶ5 hours agoಅಲದಾಳ ಸಭೆ: ದಡ್ಡಿ ಗ್ರಾಮದ ಸಮಸ್ಯೆ ಫೋಕಸ್ನಲ್ಲಿ
-
ಚುನಾವಣೆ4 hours agoಸೈಕಲ್ ರೈಡ್ ವೇಳೆ ಶಾಕ್: ಬಾಂಬ್ ಅನ್ನಿಸಿ ಓಡಿದ ದಳಪತಿ ವಿಜಯ್
-
ದೇಶ22 hours ago8 ದಶಕಗಳ ಗಾನಯಾನ ಅಂತ್ಯ: ಆಶಾ ಭೋಸ್ಲೆ ಇನ್ನು ಇಲ್ಲ
-
ದೇಶ5 hours agoಬೆಂಗಳೂರು ಬಿಸಿ ಏರಿಕೆ: 38 ಡಿಗ್ರಿ ತಲುಪುವ ಸಾಧ್ಯತೆ
